ಸುಳ್ಯ : ಕೋಳಿ ಅಂಕದ ಅಡ್ಡೆಗೆ ಪೊಲೀಸ್ ಎಂಟ್ರಿ

(ನ್ಯೂಸ್‌ ಕಡಬ) newskadaba.com,  ಫೆ.11: ಚೆಂಬು ಗ್ರಾಮದಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಮಡಿಕೇರಿ ಗ್ರಾಮಾಂತರ ಠಾಣೆಯ ಪೊಲೀಸರು ದಾಳಿ ನಡೆಸಿದ ಘಟನೆ ಮಂಗಳವಾರ ನಡೆದಿದೆ. ಕೆಡ್ಡಸದ ಹಿನ್ನೆಲೆಯಲ್ಲಿ ಚೆಂಬು ಗ್ರಾಮದಲ್ಲಿ ಕೆಲವರು ಸೇರಿಕೊಂಡು ಗದ್ದೆಯೊಂದರಲ್ಲಿ ಕೋಳಿ ಅಂಕ ಆಯೋಜಿಸಿದ್ದರು. ಕೋಳಿ ಅಂಕ ನಡೆಸಲು ಕಬ್ಬಿಣದ ಬೇಲಿಯನ್ನು ಹಾಕಿದ್ದರು. ಆ ವೇಳೆಗೆ ಸ್ಥಳದಲ್ಲಿದ್ದ ಜನರು ಓಡಿ ತಪ್ಪಿಸಿಕೊಂಡರು. ಕೋಳಿ ಅಂಕ ನಡೆಸಲು ಗದ್ದೆಯಲ್ಲಿ ಇರಿಸಿದ್ದ ಕಬ್ಬಿಣದ ಬೇಲಿಯನ್ನು ಪೊಲೀಸರು ವಶಕ್ಕೆ ಪಡೆದರು.

ಸುಳ್ಯ : ಕೋಳಿ ಅಂಕದ ಅಡ್ಡೆಗೆ ಪೊಲೀಸ್ ಎಂಟ್ರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಸರಗೋಡು : ಕಾರಿನಲ್ಲಿ ಎಂಡಿಎಂಎ ಸಾಗಾಟ – ಒಬ್ಬ ಸೆರೆ

(ನ್ಯೂಸ್‌ ಕಡಬ) newskadaba.com,  ಫೆ.11: ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಎಂಡಿಎಂಎ ಸಹಿತ ಓರ್ವನನ್ನು ಕಾಸರಗೋಡಿನ ವಿದ್ಯಾನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕೊಲ್ಲಂಗಾನ ದ ಮುಹಮ್ಮದ್ ರಫೀಕ್ ಬಿ. (39) ಬಂಧಿತ ಆರೋಪಿ. ವಿದ್ಯಾನಗರ ಸರಕಾರಿ ಕಾಲೇಜು ಪರಿಸರ ದಿಂದ ವಾಹನ ತಪಾಸಣೆ ವೇಳೆ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿದ್ದ ಕಾರನ್ನು ಬೆನ್ನಟ್ಟಿ ತಡೆದು ತಪಾಸಣೆ ನಡೆಸಿದಾಗ ಲಕ್ಷಾಂತರ ರೂ.ಮೌಲ್ಯದ ಎಂಡಿಎಂಎ ಪತ್ತೆಯಾಗಿದೆ. ಈತನ ಬಳಿಯಿಂದ 50 ಗ್ರಾಂ ಎಂ ಡಿ ಎಂ ಎ ಯನ್ನು ವಶಪಡಿಸಿಕೊಳ್ಳಲಾಗಿದೆ

ಕಾಸರಗೋಡು : ಕಾರಿನಲ್ಲಿ ಎಂಡಿಎಂಎ ಸಾಗಾಟ – ಒಬ್ಬ ಸೆರೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ದಿನ ಭವಿಷ್ಯ

(ನ್ಯೂಸ್‌ ಕಡಬ) newskadaba.com,  ಫೆ.11: ಶ್ರೀ ವಿಶ್ವಾವಸು ನಾಮ ಸಂವತ್ಸರ ಉತ್ತರಾಯಣ, ಶಿಶಿರ ಋತು ಮಾಘ ಮಾಸ, ಕೃಷ್ಣ ಪಕ್ಷ ವಾರ: ಬುಧವಾರ, ತಿಥಿ: ನವಮಿ ಉಪರಿ ದಶಮಿ ನಕ್ಷತ್ರ: ಅನುರಾಧ ಉಪರಿ ಜೇಷ್ಠ ರಾಹುಕಾಲ: 12.38 ರಿಂದ 2.06 ಗುಳಿಕಕಾಲ: 11.10 ರಿಂದ 12.38 ಯಮಗಂಡಕಾಲ: 8.14 ರಿಂದ 9.42 ಮೇಷ: ಯತ್ನ ಕಾರ್ಯಗಳಲ್ಲಿ ವಿಳಂಬ, ಅಪರಿಚಿತರಿಂದ ದೂರವಿರಿ, ಋಣಭಾದೆ, ಕೋರ್ಟ್ ವ್ಯಾಜ್ಯಗಳಲ್ಲಿ ಜಯ. ವೃಷಭ: ಈ ದಿನ ಆಧ್ಯಾತ್ಮದಲ್ಲಿ ಒಲವು, ಉದ್ಯೋಗದಲ್ಲಿ ಜವಾಬ್ದಾರಿ, ದ್ರವ್ಯ ನಷ್ಟ, ಆಹಾರ ಸೇವನೆಯಲ್ಲಿ ವ್ಯತ್ಯಾಸ. ಮಿಥುನ: ಈ ದಿನ

ಇಂದಿನ ದಿನ ಭವಿಷ್ಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಫೆ.11: ರಾಜ್ಯದಲ್ಲಿ ಈ ಬಾರಿ ಅವಧಿಗೆ ಮುನ್ನವೇ ಬೇಸಿಗೆಯ ಬೇಗೆ ಆರಂಭವಾಗಲಿದೆ ಎನ್ನುತ್ತಿದ್ದಾರೆ ಹವಾಮಾನ ತಜ್ಞರು. ಕನಿಷ್ಠ ತಾಪಮಾನ ವಾಡಿಕೆಯಷ್ಟೆ ಇದ್ದರೂ ಈಗಾಗಲೇ ಕರಾವಳಿ ಮತ್ತಿತರ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಸುಮಾರು 2-3 ಡಿಗ್ರಿಯಷ್ಟು ಏರಿಕೆಯಾಗಿದೆ. ವಾಡಿಕೆಯಂತೆ ಮಾರ್ಚ್ ಮೊದಲ ವಾರದಿಂದ ಬೇಸಿಗೆ ಆರಂಭವಾಗುತ್ತದೆ. ಆದರೆ, ಈ ಬಾರಿ ಫೆಬ್ರವರಿ ಮೂರನೇ ವಾರದಿಂದಲೇ ಬೇಸಿಗೆ ಆರಂಭವಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಧಾನಸೌಧದಲ್ಲಿ ಸಚಿವರ ಕಚೇರಿಯಲ್ಲೇ 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ರೂಪಾಯಿ ನಗದು ಇದ್ದ ಬ್ಯಾಗ್ ಕಳವು

(ನ್ಯೂಸ್‌ ಕಡಬ) newskadaba.com,  ಫೆ.10 : ಹೆಚ್ಚಿನ ಭದ್ರತೆ ಇರುವ ಸ್ಥಳವಾದ ವಿಧಾನಸೌಧದಲ್ಲೇ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರ ಕಚೇರಿಯಲ್ಲಿ 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ರೂಪಾಯಿ ನಗದು ಇದ್ದ ಕೈಚೀಲ ಕಳವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ ಗ್ರೂಪ್ ನೌಕರನನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ. ನವೀನ್ ಎಂಬವರು ಕೆಲಸದ ನಿಮಿತ್ತ ಸಚಿವ ಭೈರತಿ ಸುರೇಶ್ ಅವರ ಕಚೇರಿಗೆ ಬಂದಿದ್ದ ವೇಳೆ, ಕೈಚೀಲದಲ್ಲಿದ್ದ 300 ಗ್ರಾಂ ಚಿನ್ನಾಭರಣ

ವಿಧಾನಸೌಧದಲ್ಲಿ ಸಚಿವರ ಕಚೇರಿಯಲ್ಲೇ 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ರೂಪಾಯಿ ನಗದು ಇದ್ದ ಬ್ಯಾಗ್ ಕಳವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಸರಗೋಡು: ಸೋಷಿಯಲ್ ಮೀಡಿಯಾ ಇನ್ಫ್ಲುಎನ್ಸರ್ ಚಿನ್ನು ಪಾಪು ಆತ್ಮಹತ್ಯೆ..!!

(ನ್ಯೂಸ್‌ ಕಡಬ) newskadaba.com,  ಫೆ.10 ಕರ್ನಾಟಕ- ಕೇರಳ ಗಡಿಭಾಗವಾದ ಅಡೂರಿನಲ್ಲಿ (ವಾಸಿಸಿದ್ದ, ತುಳು ಹಾಗೂ ಮಲಯಾಳಂ ಭಾಷೆ ಮಾತನಾಡುತ್ತಿದ್ದ ಕಾಸರಗೋಡಿನ ಪ್ರಖ್ಯಾತ ಸೋಶಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ರೇಶ್ಮಾ ಆತ್ಮಹತ್ಯೆ ಮಾಡಿಕೊಡಿದ್ದಾರೆ. ಅಡೂರು ಮೂಲದ ಅವರನ್ನು ʼಚಿನ್ನು ಪಪ್ಪುʼ ಎಂದು ಕರೆಯಲಾಗುತ್ತಿತ್ತು. ಅವರಿಗೆ 24 ವರ್ಷ ವಯಸ್ಸಾಗಿತ್ತು. ಸೋಶಿಯಲ್‌ ಮೀಡಿಯಾದಲ್ಲಿ ಅವರು ಎರಡು ಲಕ್ಷಕ್ಕೂ ಅಧಿಕ ಫಾಲೋಯರ್ಸ್ ಹೊಂದಿದ್ದರು. ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ. ನಿನ್ನೆ ಮಧ್ಯಾಹ್ನ ಈ ಘಟನೆ ನಡೆದಿದೆ. ಮೃತ ಮಹಿಳೆಯ

ಕಾಸರಗೋಡು: ಸೋಷಿಯಲ್ ಮೀಡಿಯಾ ಇನ್ಫ್ಲುಎನ್ಸರ್ ಚಿನ್ನು ಪಾಪು ಆತ್ಮಹತ್ಯೆ..!! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿನಿಯ ಅಪಹರಣ, ಚೂರಿ ಇರಿತ ಪ್ರಕರಣ : ಸುಳ್ಳು ಹೇಳಿಕೆ ನೀಡಿದ ಬಾಲಕಿ.

(ನ್ಯೂಸ್‌ ಕಡಬ) newskadaba.com,  ಫೆ.10 ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ವಿದ್ಯಾರ್ಥಿನಿ ಅಪಹರಣ ಯತ್ನ ಕೇಸ್​​ಗೆ ಬಿಗ್​​ ಟ್ವಿಸ್ಟ್​​ ಸಿಕ್ಕಿದೆ.ನಗರದಲ್ಲಿ ಕಾಲೇಜಿಗೆ ಸೇರುವ ಆಸೆ ಹಿನ್ನೆಲೆ ಆಕೆಯೇ ಸಿನಿಮೀಯ ಮಾದರಿ ಕತೆ ಕಟ್ಟಿರೋದು ಪೊಲೀಸ್​​ ತನಿಖೆಯಿಂದ ಬಯಲಾಗಿದೆ. ಸ್ಕೂಟಿಯಲ್ಲಿ ಕಾಲೇಜಿಗೆ ಹೋಗುತ್ತಿದ್ದ ವೇಳೆ ತನ್ನನ್ನು ಅಪಹರಿಸಲು ದುಷ್ಕರ್ಮಿಗಳು ಯತ್ನಿಸಿದ್ದಾರೆ ಎಂದು 16 ವರ್ಷದ  ಪಿಯುಸಿ ವಿದ್ಯಾರ್ಥಿನಿ ಆರೋಪಿಸಿದ್ದಳು. ಕಾರಿನಲ್ಲಿ ಬಂದ 3 ಮಾಸ್ಕ್​​ಧಾರಿಗಳು ಚೂರಿ ತೋರಿಸಿ ಬಲವಂತವಾಗಿ ಎಳೆದು ಕಾರಲ್ಲಿ ಕೂರಿಸಲು

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿನಿಯ ಅಪಹರಣ, ಚೂರಿ ಇರಿತ ಪ್ರಕರಣ : ಸುಳ್ಳು ಹೇಳಿಕೆ ನೀಡಿದ ಬಾಲಕಿ. Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಅಗ್ನಿ – ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com, ಫೆ.10 :ಮಂಗಳೂರಿನಿಂದ ಶಿರ್ವಕ್ಕೆ ತೆರಳುತ್ತಿದ್ದ ಕಾರೊಂದು ಸೋಮವಾರ ಮಧ್ಯರಾತ್ರಿ ಇಲ್ಲಿನ ನ್ಯಾರ್ಮ್ ಶ್ರೀ ಜಾರಂದಾಯ ದೈವಸ್ಥಾನದ ಬಳಿ ರಸ್ತೆ ಮಧ್ಯದಲ್ಲಿ ಇದ್ದಕ್ಕಿದ್ದಂತೆ ಬೆಂಕಿಗೆ ಆಹುತಿಯಾದ ಘಟನೆ ಬೆಳಕಿಗೆ ಬಂದಿದೆ.ಚಾಲಕನ ಸಮಯಪ್ರಜ್ಞೆಯಿಂದ ಕಾರಿನಲ್ಲಿದ್ದ 5 ಮಂದಿ ಪ್ರಯಾಣಿಕರು ಅಪಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಸೋಮವಾರ ತಡರಾತ್ರಿ, ಕಾರು ಮಂಗಳೂರಿನಿಂದ ಶಿರ್ವ ಕಡೆಗೆ ಹೋಗುತ್ತಿದ್ದಾಗ ನ್ಯಾರ್ಮ್ ಪ್ರದೇಶವನ್ನು ತಲುಪಿದಾಗ, ಎಂಜಿನ್ ವಿಭಾಗದಿಂದ ಹೊಗೆ ಹೊರಹೊಮ್ಮಲು ಪ್ರಾರಂಭಿಸಿತು. ಇದರಿಂದ ಎಚ್ಚೆತ್ತ ಚಾಲಕ ತಕ್ಷಣವೇ ವಾಹನವನ್ನು ರಸ್ತೆಯ ಬದಿಗೆ

ಉಡುಪಿ: ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಅಗ್ನಿ – ಪ್ರಯಾಣಿಕರು ಅಪಾಯದಿಂದ ಪಾರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗಗನದಿಂದ ಭೂಮಿಗೆ ಇಳಿದ ಚಿನ್ನದ ದರ ಇಂದಿನ ಚಿನ್ನದ ಬೆಲೆ

(ನ್ಯೂಸ್‌ ಕಡಬ) newskadaba.com,  ಫೆ.10 ಬಂಗಾರ ಖರೀದಿ ಮಾಡಬೇಕು, ಇಂದು ರೇಟ್‌ ಕಡಿಮೆ ಆಗಿರಬಹುದಾ ಎಂದು ಜನಸಾಮಾನ್ಯರು ಯೋಚನೆ ಮಾಡುತ್ತಿದ್ದರೆ, ಹೂಡಿಕೆದಾರರು ದರ ಹೆಚ್ಚಿದ್ದರೆ ಲಾಭ ಎಂದು ಯೋಚನೆ ಮಾಡುತ್ತದ್ದಾರೆ. 18k ಬಂಗಾರದ ದರ ಇಂದು 1 ಗ್ರಾಂಗೆ 11, 582 ರೂಪಾಯಿ ಇದೆ, ನಿನ್ನೆ 12040 ರೂಪಾಯಿ ಇತ್ತು. ಅಂದಹಾಗೆ ಹತ್ತು ಗ್ರಾಂಗೆ 1,15,820 ರೂಪಾಯಿ ಇದ್ದರೆ, ನಿನ್ನೆ 120400 ರೂಪಾಯಿ ಇತ್ತು. 22k ಬಂಗಾರದ ದರ 1 ಗ್ರಾಂಗೆ 14,155 ರೂಪಾಯಿ ಇದ್ದರೆ, ನಿನ್ನೆ

ಗಗನದಿಂದ ಭೂಮಿಗೆ ಇಳಿದ ಚಿನ್ನದ ದರ ಇಂದಿನ ಚಿನ್ನದ ಬೆಲೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು ನಗರದಲ್ಲೂ ಇನ್ನು ಮುಂದೆ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ

(ನ್ಯೂಸ್‌ ಕಡಬ) newskadaba.com,  ಫೆ.10 ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಂಸ್ಥೆಯ ಬಸ್ಸುಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿ ಅಧಿಸೂಚನೆಯಿಂದ ವಿನಾಯಿತಿ ನೀಡಲಾಗಿದ್ದು, ಇನ್ನು ಮುಂದೆ ನಗರದ ಕೇಂದ್ರ ಭಾಗದಲ್ಲೂ ಸಂಚರಿಸಬಹುದಾಗಿದೆ. ಈ ಹಿಂದೆ ಜಿಲ್ಲಾಧಿಕಾರಿ ಕಚೇರಿಯ ದಿನಾಂಕ 5-1-1991 ಹಾಗೂ 9-4-1993ರ ಅಧಿಸೂಚನೆ ಕೆ.ಎಸ್‌ಆರ್‌ಟಿಸಿ ಬಸ್ಸುಗಳ ಸಂಚಾರವನ್ನು ನಿರ್ಬಂಧಿಸಿತ್ತು. ಈಗ ಅದಕ್ಕೆ ವಿನಾಯಿಯತಿ ನೀಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಸಾರ್ವಜನಿಕರು, ವಿದ್ಯಾರ್ಥಿಗಳು ಮತ್ತು ಮಹಿಳೆಯರು ಶಕ್ತಿ ಯೋಜನೆ ಅನುಕೂಲವಾಗುವಂತೆ ಮತ್ತು ಸಾರ್ವಜನಿಕ ಆಸ್ಪತ್ರೆಗಳಿಗೆ ಭೇಟಿ

ಮಂಗಳೂರು ನಗರದಲ್ಲೂ ಇನ್ನು ಮುಂದೆ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top