ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ ಶೂ ಬದಲು ‘ಚಪ್ಪಲಿ’ ವಿತರಿಸಲು ರಾಜ್ಯ ಸರ್ಕಾರದ ಚಿಂತನೆ!

(ನ್ಯೂಸ್‌ ಕಡಬ) newskadaba.com,ಜ.20 ಬೆಂಗಳೂರು: 2026-27ನೇ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಶೂ-ಸಾಕ್ಸ್ ವಿತರಣೆಯಲ್ಲಿ ವಿಳಂಬವಾಗುವುದನ್ನು ತಪ್ಪಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಶಾಲೆಗಳಿಂದ ಮಾಹಿತಿ ಸಂಗ್ರಹಿಸುತ್ತಿದೆ. ಈ ಕುರಿತು ಇಲಾಖೆ ಅಧಿಕೃತ ಸುತ್ತೋಲೆ ಹೊರಡಿಸಿದ್ದು, 1ರಿಂದ 10ನೇ ತರಗತಿವರೆಗೆ ಓದುತ್ತಿರುವ ವಿದ್ಯಾರ್ಥಿಗಳ ಡೇಟಾವನ್ನು ಸಲ್ಲಿಸುವಂತೆ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ (ಡಿಡಿಪಿಐ) ನಿರ್ದೇಶನ ನೀಡಿದೆ. ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರತಿ ವರ್ಷದಂತೆ ತಲಾ ಒಂದು ಜತೆ […]

ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ ಶೂ ಬದಲು ‘ಚಪ್ಪಲಿ’ ವಿತರಿಸಲು ರಾಜ್ಯ ಸರ್ಕಾರದ ಚಿಂತನೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಕಾಳುಮೆಣಸು ಕೀಳುವಾಗ ತೆಂಗಿನ ಮರದಿಂದ ಬಿದ್ದು ನಿವೃತ್ತ ಮುಖ್ಯೋಪಾಧ್ಯಾಯ ಸಾವು

(ನ್ಯೂಸ್‌ ಕಡಬ) newskadaba.com,ಜ.20 ಪುತ್ತೂರು: ಬೆಟ್ಟಂಪಾಡಿ ಗ್ರಾಮದ ಗುಮ್ಮಟ್ಟೆಗದ್ದೆಯಲ್ಲಿ ಸೋಮವಾರ, ಕಾಳುಮೆಣಸು ಕೀಳುವಾಗ ತೆಂಗಿನ ಮರದಿಂದ ಬಿದ್ದು ನಿವೃತ್ತ ಮುಖ್ಯೋಪಾಧ್ಯಾಯರು ಸಾವನ್ನಪ್ಪಿದ್ದಾರೆ. ಮೃತರನ್ನು ಬೆಟ್ಟಂಪಾಡಿ ಗ್ರಾಮದ ಗುಮ್ಮಟ್ಟೆಗದ್ದೆ ನಿವಾಸಿ ನಾರಾಯಣ ನಾಯಕ್ ಪೈಂಟಿಮುಗೇರು ಎಂದು ಗುರುತಿಸಲಾಗಿದೆ. ಮನೆಯ ಮುಂದೆ ತೆಂಗಿನ ಮರದ ಮೇಲೆ ಬೆಳೆದಿದ್ದ ಕಾಳು ಮೆಣಸು ಕೀಳಲು ಅಲ್ಯೂಮಿನಿಯಂ ಏಣಿ ಹತ್ತುತ್ತಿದ್ದಾಗ ಜಾರಿ ಏಣಿಯೊಂದಿಗೆ ಬಿದ್ದಿದ್ದಾರೆ. ಕೆಳಗೆ ಬಿದ್ದಾಗ ನಾರಾಯಣ ನಾಯಕ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಮಾರ್ಗಮಧ್ಯೆ

ಪುತ್ತೂರು: ಕಾಳುಮೆಣಸು ಕೀಳುವಾಗ ತೆಂಗಿನ ಮರದಿಂದ ಬಿದ್ದು ನಿವೃತ್ತ ಮುಖ್ಯೋಪಾಧ್ಯಾಯ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆಯಲ್ಲಿ ಮತ್ತೆ ಸಾರ್ವಕಾಲಿಕ ದಾಖಲೆ

(ನ್ಯೂಸ್‌ ಕಡಬ) newskadaba.com,ಜ.20 ಬೆಂಗಳೂರು:  ನಾಗಾಲೋಟದಲ್ಲಿ ಏರಿಕೆಯಾಗುತ್ತಿರುವ ಬೆಳ್ಳಿ ಸತತ ಎರಡನೇ ದಿನವಾದ ಇಂದೂ ಕೂಡ ಪ್ರತಿ ಕೆಜಿಗೆ 10 ಸಾವಿರ ರೂ. ಹೆಚ್ಚಳವಾಗಿದೆ. ಚಿನ್ನ ಮತ್ತು ಬೆಳ್ಳಿ ದರಗಳು ದುಬಾರಿಯಾಗಿದ್ದು, ಇದುವರೆಗಿನ ದಾಖಲೆಗಳ್ನು ದಾಟಿ ಸಾರ್ವಕಾಲಿಕ ದಾಖಲೆಯನ್ನು ನಿರ್ಮಿಸಿವೆ. ಒಂದು ಕೆಜಿ ಬೆಳ್ಳಿಗೆ 3,15,000 ರೂ. ಮಾರುಕಟ್ಟೆ ದರವಿದೆ. ಅದೇ ರೀತಿ ಹಳದಿ ಲೋಹ ಚಿನ್ನದ ದರವೂ ನಿರಂತರ ಏರಿಕೆಯಾಗಿದ್ದು, 24 ಕ್ಯಾರೆಟ್‌ ಚಿನ್ನ ಇಂದು ಪ್ರತಿ ಗ್ರಾಂಗೆ 104 ರೂ. ಹೆಚ್ಚಳವಾಗಿದೆ.ಒಂದು ಗ್ರಾಂ ಚಿನ್ನದ

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆಯಲ್ಲಿ ಮತ್ತೆ ಸಾರ್ವಕಾಲಿಕ ದಾಖಲೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಾರಿಗೆ ಇಲಾಖೆಯು ಖಾಸಗಿ ಬಸ್‌ಗಳಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಹೊಸ ನಿಯಮ ಜಾರಿ

(ನ್ಯೂಸ್‌ ಕಡಬ) newskadaba.com,ಜ.20 ಬೆಂಗಳೂರು:  ಡಿಸೆಂಬರ್ 25 ರಂದು ತಡರಾತ್ರಿ ಬೆಂಗಳೂರಿನಿಂದ ಗೋಕರ್ಣಕ್ಕೆ ಹೋಗುತ್ತಿದ್ದ ಖಾಸಗಿ ಬಸ್​​ ಬೆಂಕಿಗೆ ಆಹುತಿಯಾಗಿ 8 ಜನ ಪ್ರಾಣ ಕಳೆದುಕೊಂಡಿದ್ದರು.ಈ ಹಿನ್ನೆಲೆ ಎಚ್ಚೆತ್ತುಕೊಂಡಿರುವ ಕರ್ನಾಟಕ ಸಾರಿಗೆ ಇಲಾಖೆ ಖಾಸಗಿ ಬಸ್​ಗಳಿಗೆ ಕೆಲವೊಂದು ನಿಯಮಗಳನ್ನು ಅನುಸರಿಸುವಂತೆ ಖಡಕ್ ಆಗಿ ಸೂಚನೆ ನೀಡಿದೆ. ವಿಮಾನದಲ್ಲಿ ಟೇಕ್ ಆಫ್​ಗೂ ಮುನ್ನ ಗಗನಸಖ-ಸಖಿಯರು ನೀಡುವ ಸಂದೇಶದಂತೆ, ಖಾಸಗಿ ಬಸ್​​ಗಳಲ್ಲೂ ಸಂದೇಶ ನೀಡಬೇಕು ಎಂದು ನಿರ್ದೇಶನ ನೀಡಲಾಗಿದೆ. ವಿಮಾನದಲ್ಲಿ ಟೇಕ್ ಆಫ್ಫ್​ ಆಗುವುದಕ್ಕೂ ಮುನ್ನ ಪ್ರಯಾಣಿಕರಿಗೆ ತುರ್ತು ದ್ವಾರಗಳ

ಸಾರಿಗೆ ಇಲಾಖೆಯು ಖಾಸಗಿ ಬಸ್‌ಗಳಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಹೊಸ ನಿಯಮ ಜಾರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಸಲೀಲೆ ವಿಡಿಯೋ ವೈರಲ್ ಪ್ರಕರಣ; ಡಿಜಿಪಿ ರಾಮಚಂದ್ರರಾವ್ ಅಮಾನತು.

(ನ್ಯೂಸ್‌ ಕಡಬ) newskadaba.com,ಜ.20 ಬೆಂಗಳೂರು : ರಾಸಲೀಲೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ಕಠಿಣ ಕ್ರಮಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ ಅವರನ್ನ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.ನಿನ್ನೆ 10 ದಿನಗಳ ಕಡ್ಡಾಯ ರಜೆ ಮೇಲೆ ತೆರಳಿದ್ದ ರಾಜಚಂದ್ರ ರಾವ್‌ ಅವರನ್ನ ರಾತ್ರಿ ಹೊತ್ತಿಗೆ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ವಿಚಾರಣೆ ಇನ್ನೂ ಬಾಕಿಯಿರುವ ಕಾರಣ ಅಮಾನತುಗೊಳಿಸುರುವುದಾಗಿ ಆದೇಶದಲ್ಲಿ ತಿಳಿಸಿದೆ. ಕಚೇರಿಯಲ್ಲಿ ಕುಳಿತು ಪೊಲೀಸ್ ಸಮವಸ್ತ್ರದಲ್ಲೇ ರಾಮಚಂದ್ರರಾವ್​​ ಮಹಿಳೆಯರೊಂದಿಗೆ ಅಸಭ್ಯವಾಗಿ

ರಾಸಲೀಲೆ ವಿಡಿಯೋ ವೈರಲ್ ಪ್ರಕರಣ; ಡಿಜಿಪಿ ರಾಮಚಂದ್ರರಾವ್ ಅಮಾನತು. Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ 2025-26 ವೇಳಾಪಟ್ಟಿ ಫೆ.10 ರಿಂದ ಫೆ.25ರ ವರೆಗೆ ವೇಳಾಪಟ್ಟಿ ಸಿದ್ದಪಡಿಸಲು ಸೂಚನೆ

(ನ್ಯೂಸ್‌ ಕಡಬ) newskadaba.com,ಜ.20 ಬೆಂಗಳೂರು: ಶಾಲೆ, ಕಾಲೇಜುಗಳು ವಾರ್ಷಿಕ ಪರೀಕ್ಷೆ ತಯಾರಿಗಳು ಆರಂಭಗೊಂಡಿದೆ. ಇದೀಗ ಶಿಕ್ಷಣ ಇಲಾಖೆ 2025-26ನೇ ಸಾಲಿನ ಪ್ರಥಮ ಪಿಯುಸಿ ತರಗತಿಗಳ ವಾರ್ಷಿಕ ಪರೀಕ್ಷೆ ಕುರಿತು ಮಹತ್ವದ ಸುತ್ತೋಲೆ ಹೊರಡಿಸಿದೆ. ಫೆ.10ರಿಂದ ಫೆ.25ರವರೆಗಿನ ಪ್ರತಿ ಕಾಲೇಜಿಗೆ ಅನ್ವಯವಾಗುವಂತೆ ವೇಳಾಪಟ್ಟಿಯನ್ನು ಸಿದ್ದಪಡಿಸಲು ಸೂಚನೆ ನೀಡಿದೆ. ಇದೇ ವೇಳೆ ಯಾವುದೇ ಕಾರಣಕ್ಕೂ ಪರೀಕ್ಷೆ ಸಂಬಂಧ ಹಣ ಸಂಗ್ರಹಿಸದಂತೆ ತಾಕೀತು ಮಾಡಿದೆ. ಪರೀಕ್ಷಾ ನಿಯಾಮಾವಳಿಗಳನ್ನು ಪಾಲಿಸುವ ಮೂಲಕ ಪರೀಕ್ಷೆ ನಡೆಸಲು ಸುತ್ತೋಲೆಯಲ್ಲಿ ಸೂಚಿಸಿದೆ. ಪ್ರಥಮ ಪಿಯುಸಿ ಫಲಿತಾಂಶ ದಿನಾಂಕ

ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ 2025-26 ವೇಳಾಪಟ್ಟಿ ಫೆ.10 ರಿಂದ ಫೆ.25ರ ವರೆಗೆ ವೇಳಾಪಟ್ಟಿ ಸಿದ್ದಪಡಿಸಲು ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಜ.20: ರಾಜ್ಯದ ಬಹುತೇಕ ಭಾಗಗಳಲ್ಲಿ ಚಳಿ ಮುಂದುವರಿದಿದೆ. ಇಂದು ಸಹ ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಚಳಿಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.   ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಚಿಕ್ಕಬಳ್ಳಾಪುರದಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 13 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ: ಅನಧಿಕೃತ ಅಂಗಡಿಗಳಿಗೆ ಬೀಳಲಿದೆ ಬ್ರೇಕ್ ತೆರವುಗೊಳಿಸಲು ಕಟ್ಟುನಿಟ್ಟಿನ ನೋಟಿಸ್ ನೀಡಿದ ಪಿಡಿಒ..!

(ನ್ಯೂಸ್‌ ಕಡಬ) newskadaba.com,ಜ.19  ಸುಳ್ಯ: ಸರ್ವೆ ನಂಬರ್ 85 /2ರ ಸ್ವಾಧೀನದ ಜಾಗದಲ್ಲಿ ಭೂ ಪರಿವರ್ತನೆ ಗೊಳ್ಳದೆ ಹಾಗೂ ಈ- ಖಾತೆ ಪಡೆಯದೆ , ವಾಣಿಜ್ಯ ಉದ್ದೇಶದ ಕಟ್ಟಡಗಳು ಕಾರ್ಯನಿರ್ವಹಿಸುತ್ತಿರುವ ಆರೋಪ ಹಾಗೂ ದೂರು ಕೇಳಿಬಂದಿರುವ ಹಿನ್ನೆಲೆಯಲ್ಲಿ ಇದೀಗ ಅನಧಿಕೃತ ಕಟ್ಟಡಗಳಲ್ಲಿ ಯಾವುದೇ ವ್ಯಾಪಾರ ವಹಿ ವಹಿವಾಟನ್ನು ನಡೆಸದಂತೆ ನೋಟಿಸ್ ನೀಡಲಾಗಿದೆ. ಕುಕ್ಕೆ ಸುಬ್ರಹ್ಮಣ್ಯ ಗ್ರಾಮದ ಆದಿ ಸುಬ್ರಮಣ್ಯ ಎಂಬಲ್ಲಿ ಸರ್ವೆ ನಂಬರ್ 85 /2ರ ಸ್ವಾಧೀನದ ಜಾಗದಲ್ಲಿ ಅನಧಿಕೃತ ಅಂಗಡಿಗಳು ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಸುಬ್ರಹ್ಮಣ್ಯ ಗ್ರಾಮ

ಸುಳ್ಯ: ಅನಧಿಕೃತ ಅಂಗಡಿಗಳಿಗೆ ಬೀಳಲಿದೆ ಬ್ರೇಕ್ ತೆರವುಗೊಳಿಸಲು ಕಟ್ಟುನಿಟ್ಟಿನ ನೋಟಿಸ್ ನೀಡಿದ ಪಿಡಿಒ..! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜಗತ್ತಿನ ಅತಿ ದೊಡ್ಡ ಶಿವಲಿಂಗಕ್ಕೆ ಭಾರತ ವೇದಿಕೆ ಬಿಹಾರದಲ್ಲಿ ಸ್ಥಾಪನೆಯಾಯ್ತು 210 ಟನ್ ತೂಕದ ಬೃಹತ್ ಏಕಶಿಲಾ ಶಿವಲಿಂಗ!

(ನ್ಯೂಸ್‌ ಕಡಬ) newskadaba.com,ಜ.19 : ಭಾರತ ಮತ್ತೊಮ್ಮೆ ವಿಶ್ವದ ಗಮನ ಸೆಳೆದಿದೆ. ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ ಮೋತಿಹರಿಯ ಕೈಟ್ವಾಲಿಯಾ ಗ್ರಾಮದಲ್ಲಿ ವಿಶ್ವದ ಅತಿದೊಡ್ಡ ಏಕ ಶಿವಲಿಂಗವನ್ನು ಅಧಿಕೃತವಾಗಿ ಪ್ರತಿಷ್ಠಾಪಿಸುವ ಮೂಲಕ ದೇಶವು ಐತಿಹಾಸಿಕ ದಾಖಲೆಗೆ ನಾಂದಿ ಹಾಡಿದೆ. ​ ವಿರಾಟ್ ರಾಮಾಯಣ ದೇವಾಲಯ ಆವರಣದಲ್ಲಿ ನಡೆದ ಈ ಭವ್ಯ ಶಿವಲಿಂಗ ಪ್ರತಿಷ್ಠಾಪನಾ ಸಮಾರಂಭವು ಅಪಾರ ಧಾರ್ಮಿಕ ವೈಭವಕ್ಕೆ ಸಾಕ್ಷಿಯಾಯಿತು. ವಾರಣಾಸಿ ಹಾಗೂ ಅಯೋಧ್ಯೆಯಿಂದ ಆಗಮಿಸಿದ ಪಂಡಿತರು ವೇದಮಂತ್ರಗಳ ಪಠಣದೊಂದಿಗೆ ಶಿವಲಿಂಗದ ಪ್ರಾಣ ಪ್ರತಿಷ್ಠೆ ನೆರವೇರಿಸಿದರು. ವಿಶೇಷ

ಜಗತ್ತಿನ ಅತಿ ದೊಡ್ಡ ಶಿವಲಿಂಗಕ್ಕೆ ಭಾರತ ವೇದಿಕೆ ಬಿಹಾರದಲ್ಲಿ ಸ್ಥಾಪನೆಯಾಯ್ತು 210 ಟನ್ ತೂಕದ ಬೃಹತ್ ಏಕಶಿಲಾ ಶಿವಲಿಂಗ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಾರ್ಮಡಿ ಘಾಟ್‌ ಅರಣ್ಯಕ್ಕೆ ಬೆಂಕಿ ನೂರಾರು ಎಕರೆ ಅರಣ್ಯ ಸಂಪತ್ತು ಸುಟ್ಟು ಭಸ್ಮ

(ನ್ಯೂಸ್‌ ಕಡಬ) newskadaba.com,ಜ.19 : ಆಕಸ್ಮಿಕ ಬೆಂಕಿ ಬಿದ್ದು ಹತ್ತಾರು ಎಕರೆ ಅರಣ್ಯ ಪ್ರದೇಶ ಹೊತ್ತಿ ಉರಿದಿರುವ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆ ಹಾರ ಸಮೀಪದ ಮಲಯ ಮಾರುತ ಬಳಿ ನಡೆದಿದೆ.ನಿರಂತರ ಗಾಳಿಯಿಂದ ಬೆಂಕಿಯ ಕೆನ್ನಾಲಿಗೆ ಹೆಚ್ಚಾಗುತ್ತಿದೆ. ಕಾಡ್ಗಿಚ್ಚಿಗೆ ಹತ್ತಾರು ಎಕರೆ ಅರಣ್ಯ ಪ್ರದೇಶ ಹೊತ್ತಿ ಉರಿಯುತ್ತಿದ್ದು, ಆತಂಕ ಉಂಟುಮಾಡಿದೆ. ಸ್ಥಳೀಯರ ಸಹಾಯದಿಂದ ಬೆಂಕಿ ನಂದಿಸಲು ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ. ಕೆನ್ನಾಲಿಗೆ ಹಬ್ಬುತ್ತಲೇ ಇದೆ. ಗುಡ್ಡದಲ್ಲಿ ಬೀಸುತ್ತಿರುವ ಭಾರೀ ಗಾಳಿಯಿಂದ ಬೆಂಕಿ

ಚಾರ್ಮಡಿ ಘಾಟ್‌ ಅರಣ್ಯಕ್ಕೆ ಬೆಂಕಿ ನೂರಾರು ಎಕರೆ ಅರಣ್ಯ ಸಂಪತ್ತು ಸುಟ್ಟು ಭಸ್ಮ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top