ಭದ್ರಾ ಅಭಯಾರಣ್ಯದಲ್ಲಿ ಬ್ಲ್ಯಾಕ್ ಪ್ಯಾಂಥರ್ ಪ್ರತ್ಯಕ್ಷ..!

(ನ್ಯೂಸ್‌ ಕಡಬ) newskadaba.com,ಡಿ.31: ಭದ್ರಾ ಅಭಯಾರಣ್ಯದಲ್ಲಿ ಅಪರೂಪದ ಕಪ್ಪು ಚಿರತೆ (ಬ್ಲ್ಯಾಕ್ ಪ್ಯಾಂಥರ್‌) ಕಾಣಿಸಿಕೊಂಡಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಸುಮಾರು ಇಪ್ಪತ್ತು ವರ್ಷಗಳ ನಂತರ ಭದ್ರಾ ಅಭಯಾರಣ್ಯದಲ್ಲಿ ಬ್ಲಾಕ್ ಪ್ಯಾಂಥರ್ ಪತ್ತೆಯಾಗಿರುವುದು ವಿಶೇಷ. ಸುಮಾರು 492.2 ಚದರ ಕಿಲೋ ಮೀಟರ್‌ ವ್ಯಾಪ್ತಿಯಲ್ಲಿನ ಭದ್ರಾ ಅಭಯಾರಣ್ಯವು ಲಕ್ಷಾಂತರ ವನ್ಯಜೀವಿಗಳ ಆಶ್ರಯ ತಾಣವಾಗಿದೆ. ಪ್ರವಾಸಿಗರೊಬ್ಬರ ಕ್ಯಾಮೆರಾದಲ್ಲಿ ಬ್ಲಾ ್ಯಕ್‌ ಪ್ಯಾಂಥರ್‌ ಮತ್ತು ಚಿರತೆ ಸೆರೆಯಾಗಿದ್ದು, ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.ಕಪ್ಪು ಚಿರತೆಯನ್ನು ನೋಡಿ […]

ಭದ್ರಾ ಅಭಯಾರಣ್ಯದಲ್ಲಿ ಬ್ಲ್ಯಾಕ್ ಪ್ಯಾಂಥರ್ ಪ್ರತ್ಯಕ್ಷ..! Read More »

ಕರ್ನಾಟಕ

ಬೈಕ್‌ ಓಡಿಸಿದ ಅಪ್ರಾಪ್ತ ಮಗ, ತಂದೆಗೆ ಬಿತ್ತು 25 ಸಾವಿರ ರೂ.ದಂಡ..!

(ನ್ಯೂಸ್‌ ಕಡಬ) newskadaba.com,ಡಿ.31 ಚಿಕ್ಕಮಗಳೂರು:  ಮೂಡಿಗೆರೆ ತಾಲೂಕಿನ ಬಾಳೂರು ಗ್ರಾಮದಲ್ಲಿ ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ಅವಕಾಶ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಾಲಕನ ತಂದೆ ಶಂಕರ ಅವರಿಗೆ ನ್ಯಾಯಾಲಯವು 25 ಸಾವಿರ ರೂ.ದಂಡ ವಿಧಿಸಿದೆ. ಬಾಳೂರು ಪೊಲೀಸ್‌‍ ಠಾಣೆಯ ಪಿಎಸ್‌‍ಐ ದಿಲೀಪ್‌ ಕುಮಾರ್‌ ಅವರು ಈ ಸಂಬಂಧ ಪ್ರಕರಣ ದಾಖಲಿಸಿದ್ದರು. ಪ್ರಕರಣವು ಮೂಡಿಗೆರೆ ಸಿವಿಲ್‌ ನ್ಯಾಯಾಧೀಶರು ಹಾಗೂ ಜೆಎಂಎ್‌‍ಸಿ ನ್ಯಾಯಾಲಯದ ಮುಂದೆ ವಿಚಾರಣೆಗೆ ಬಂದಿದ್ದು, ಅಪ್ರಾಪ್ತನಿಗೆ ಬೈಕ್‌ ನೀಡಿದ್ದಕ್ಕೆ ಹೊಣೆಗಾರರಾಗಿರುವ ತಂದೆ ಶಂಕರ ಅವರ ಹೆಸರಿನಲ್ಲಿ

ಬೈಕ್‌ ಓಡಿಸಿದ ಅಪ್ರಾಪ್ತ ಮಗ, ತಂದೆಗೆ ಬಿತ್ತು 25 ಸಾವಿರ ರೂ.ದಂಡ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ಶಾಸಕ ಯಶ್ಪಾಲ್ ಸುವರ್ಣ ವಾಟ್ಸಾಪ್ ಹ್ಯಾಕ್

(ನ್ಯೂಸ್‌ ಕಡಬ) newskadaba.com,ಡಿ.31: ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್‌ಪಾಲ್ ಸುವರ್ಣ ಅವರ ವಾಟ್ಸಾಪ್ ಖಾತೆಯನ್ನು ಹ್ಯಾಕ್ ಮಾಡಲಾಗಿದ್ದು, ಸೈಬರ್ ವಂಚಕರು ಶಾಸಕರ ಹೆಸರಿನಲ್ಲಿ ಅವರ ಸಂಪರ್ಕದಲ್ಲಿರುವವರಿಗೆ ಹಣಕ್ಕಾಗಿ ಸಂದೇಶ ಕಳುಹಿಸುತ್ತಿದ್ದಾರೆ. ಕಿಡಿಗೇಡಿಗಳು ಶಾಸಕರ ವಾಟ್ಸಾಪ್ ಖಾತೆ ಹ್ಯಾಕ್ ಮಾಡಿ, ಅವರ ಕಾಂಟ್ಯಾಕ್ಟ್ ಲಿಸ್ಟ್‌ನಲ್ಲಿರುವವರ ಸಂಖ್ಯೆಗೆ ಮೆಸೇಜ್ ಮಾಡಿ ಹಣದ ಬೇಡಿಕೆ ಇಟ್ಟಿದ್ದಾರೆ. ಕೆಲವು ವ್ಯಕ್ತಿಗಳಿಗೆ ಮೆಸೇಜ್ ಮಾಡಿ, ನಿಮ್ಮಿಂದ ನನಗೆ ಒಂದು ಅಗತ್ಯ ಸಹಾಯವಾಗಬೇಕು ಎಂದು ಹೇಳಿ, ಆ ಬಳಿಕ ಹಣದ ಅವಶ್ಯಕತೆಯಿದೆ ಎಂದು ವಂಚಕರು

ಉಡುಪಿ: ಶಾಸಕ ಯಶ್ಪಾಲ್ ಸುವರ್ಣ ವಾಟ್ಸಾಪ್ ಹ್ಯಾಕ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಅಸ್ಸಾಂನಲ್ಲಿ ಸೇವೆ ಸಲ್ಲಿಸುತ್ತಿದ್ದ ಬಂಟ್ವಾಳ ಮೂಲದ ಧರ್ಮಗುರು ಫಾದರ್ ಫೆಲಿಕ್ಸ್ ಲಿಯೋ ಪಿಂಟೊ ನಿಧನ

(ನ್ಯೂಸ್‌ ಕಡಬ) newskadaba.com,ಡಿ.31 ಬಂಟ್ವಾಳ: ಅಸ್ಸಾಂ ರಾಜ್ಯದ ಬೊಂಗ್ಯಗಾಂವ್ ಧರ್ಮಕ್ಷೇತ್ರದಲ್ಲಿ ಧರ್ಮಗುರುಗಳಾಗಿ ಸೇವೆ ಸಲ್ಲಿಸುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಸೂರಿಕುಮೇರು ನಿವಾಸಿ ವಂ. ಫೆಲಿಕ್ಸ್ ಲಿಯೋ ಪಿಂಟೊ (57) ಅವರು ಅನಾರೋಗ್ಯದ ಹಿನ್ನೆಲೆ ಮಂಗಳವಾರ ಮುಂಜಾನೆ ನಿಧನರಾಗಿದ್ದಾರೆ. ಬೊನವೆಂಚರ್ ಪಿಂಟೊ ಮತ್ತು ಆಲಿಸ್ ಪಿಂಟೊ ದಂಪತಿಯ ಪುತ್ರರಾಗಿ ಫೆಬ್ರವರಿ 28, 1968 ರಂದು ಜನಿಸಿದ ಫಾದರ್ ಫೆಲಿಕ್ಸ್ ಅವರು ಬಾಲ್ಯದಿಂದಲೇ ಧಾರ್ಮಿಕತೆ, ಶಿಸ್ತು ಮತ್ತು ಸೇವಾಭಾವವನ್ನು ಬೆಳೆಸಿಕೊಂಡಿದ್ದರು.ಧಾರ್ಮಿಕ ಸೇವೆಯನ್ನು ಆರಿಸಿಕೊಂಡ ಅವರು,

ಅಸ್ಸಾಂನಲ್ಲಿ ಸೇವೆ ಸಲ್ಲಿಸುತ್ತಿದ್ದ ಬಂಟ್ವಾಳ ಮೂಲದ ಧರ್ಮಗುರು ಫಾದರ್ ಫೆಲಿಕ್ಸ್ ಲಿಯೋ ಪಿಂಟೊ ನಿಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಲ್ಮಾನ್ ಖಾನ್ ಅಭಿನಯದ ಬ್ಯಾಟಲ್ ಆಫ್ ಗಲ್ವಾನ್ ಟೀಸರ್ಗೆ ಚೀನಾ ವಿರೋಧ

(ನ್ಯೂಸ್‌ ಕಡಬ) newskadaba.com,ಡಿ.31: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮುಂಬರುವ ಯುದ್ಧ ಆಧಾರಿತ ಸಿನಿಮಾ ಬ್ಯಾಟಲ್ ಆಫ್ ಗಲ್ವಾನ್ ಟೀಸರ್‌ಗೆ ಚೀನಾ ತೀವ್ರ ವಿರೋಧ ವ್ಯಕ್ತಪಡಿಸಿದೆ. ಸಿನಿಮಾದಲ್ಲಿ ಚಿತ್ರೀಕರಿಸಿರುವ ದೃಶ್ಯಗಳು ಜೂನ್ 2020 ರ ಘರ್ಷಣೆಯ ಘಟನೆಗಳು ಸತ್ಯಗಳಿಗೆ ಹೊಂದಿಕೆಯಾಗುವುದಿಲ್ಲ. ಗಲ್ವಾನ್ ಕಣಿವೆ ಲೈನ್ ಆಫ್ ಆಕ್ಚುವಲ್ ಕಂಟ್ರೋಲ್‌ನ ಚೀನಾ ಭಾಗದಲ್ಲಿದೆ. ಘರ್ಷಣೆಗೆ ಭಾರತೀಯ ಸೈನಿಕರು ಎಲ್‌ಎಸಿ ದಾಟಿ, ಪ್ರಚೋದಿಸಿದ್ದೇ ಕಾರಣ ಎಂದು ಚೀನಾ ದೂಷಿಸಿದೆ. ಚೀನಾ ಆರೋಪಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಸರ್ಕಾರ, ಅದು ಕಲಾವಿದನ

ಸಲ್ಮಾನ್ ಖಾನ್ ಅಭಿನಯದ ಬ್ಯಾಟಲ್ ಆಫ್ ಗಲ್ವಾನ್ ಟೀಸರ್ಗೆ ಚೀನಾ ವಿರೋಧ Read More »

ಸಿನಿಮಾ

ಬೆಳ್ತಂಗಡಿ: ಕಣ್ಮರೆಯಾಗಿದ್ದ ಯುವಕನ ಮೃತದೇಹ ಪತ್ತೆ

(ನ್ಯೂಸ್‌ ಕಡಬ) newskadaba.com,ಡಿ.31 ಬೆಳ್ತಂಗಡಿ: ನಾಪತ್ತೆಯಾಗಿದ್ದ ಬೆಳಾಲು ಪುರುಷರಬೆಟ್ಟು ನಿವಾಸಿ ರಾಜೇಶ್ ಪಿ. (30) ರವರ ಮೃತದೇಹ ಬೆಳಾಲು ಗ್ರಾಮದ ಬಲಿಪೆ ನೇತ್ರಾವತಿ ನದಿಯಲ್ಲಿ ಮಂಗಳವಾರ ಪತ್ತೆಯಾಗಿದೆ. ಡಿ. 27ರಂದು ಬೆಳಿಗ್ಗೆ ಮನೆಯಿಂದ ಹೊರಟ ರಾಜೇಶ್ ಪಿ, ಹಿಂದಿರುಗದೆ ಕಾಣೆಯಾಗಿದ್ದರು. ಅವರಿಗಾಗಿ ಮನೆಯವರು ಹಾಗೂ ಸ್ಥಳೀಯರು ಹುಡುಕಾಟ ನಡೆಸಿದ್ದರೂ ಪತ್ತೆಯಾಗಿರಲಿಲ್ಲ. ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿ ನಂತರ ತೀವ್ರ ಹುಡುಕಾಟ ನಡೆಸಿದಾಗ ಮಂಗಳವಾರ ಬೆಳಿಗ್ಗೆ ಬಲಿಪೆಯ ನೇತ್ರಾವತಿ ನದಿಯಲ್ಲಿ ಮೃತದೇಹ ಪತ್ತೆಯಾಗಿದೆ.ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ

ಬೆಳ್ತಂಗಡಿ: ಕಣ್ಮರೆಯಾಗಿದ್ದ ಯುವಕನ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಾಂಗ್ಲಾ ಮಾಜಿ ಪ್ರಧಾನಿ ಖಲೀದಾ ಜಿಯಾ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಜೈಶಂಕರ್

(ನ್ಯೂಸ್‌ ಕಡಬ) newskadaba.com,ಡಿ.31: ಬಾಂಗ್ಲಾದೇಶದ ಮಾಜಿ ಪ್ರಧಾನಿ ಮತ್ತು ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷೆ ಖಲೀದಾ ಜಿಯಾ ಅವರ ಅಂತ್ಯಕ್ರಿಯೆಯು ಬಾಂಗ್ಲಾದ ಢಾಕಾದಲ್ಲಿ ಡಿಸೆಂಬರ್ ೩೧ರಂದು ನಡೆಯಲಿದ್ದು, ಭಾರತದ ವಿದೇಶಾಂಗ ಸಚಿವ ಜೈಶಂಕರ್ ಎಸ್. ಜೈಶಂಕರ್ ನಾಳೆ ಭಾಗವಹಿಸಲಿದ್ದಾರೆ. ಖಲೀದಾ ಜಿಯಾ ಅವರ ಅಂತ್ಯಕ್ರಿಯೆ ಬುಧವಾರ ನಡೆಯಲಿದ್ದು, ಅವರ ಪತಿ ಮತ್ತು ಮಾಜಿ ಅಧ್ಯಕ್ಷ ಜಿಯಾವುರ್ ರೆಹಮಾನ್ ಅವರ ಸಮಾಧಿಯ ಪಕ್ಕದಲ್ಲಿಯೇ ಅಂತ್ಯಕ್ರಿಯೆ ನಡೆಯಲಿದೆ. ಖಲೀದಾ ಜಿಯಾ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ (ಬಿಎನ್‌ಪಿ) ದೀರ್ಘಕಾಲದ ನಾಯಕಿ ಮತ್ತು

ಬಾಂಗ್ಲಾ ಮಾಜಿ ಪ್ರಧಾನಿ ಖಲೀದಾ ಜಿಯಾ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಜೈಶಂಕರ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸರಕಾರಿ, ಖಾಸಗಿ ಆಸ್ಪತ್ರೆಯಲ್ಲಿ ಜನನ , ಮರಣ ನೋಂದಣಿ ಪ್ರಮಾಣ ಪತ್ರ 21 ದಿನದೊಳಗೆ ವಿತರಣೆಗೆ ಸೂಚನೆ

(ನ್ಯೂಸ್‌ ಕಡಬ) newskadaba.com,ಡಿ.31 ಬೆಂಗಳೂರು ಗ್ರಾಮಾಂತರ : ಸರಕಾರಿ, ಖಾಸಗಿ ಆಸ್ಪತ್ರೆಗಳಲ್ಲಿನ ಜನನ ಹಾಗೂ ಮರಣಕ್ಕೆ ಸಂಬಂಧಿಸಿದಂತೆ 21 ದಿನದೊಳಗೆ ಕಡ್ಡಾಯವಾಗಿ ನೋಂದಣಿ ಮಾಡಿ, ಸಂಬಂಧಿಸಿದವರಿಗೆ ಪ್ರಮಾಣ ಪತ್ರವನ್ನು ನೀಡಲು ಆರೋಗ್ಯ ಇಲಾಖೆ ಕ್ರಮವಹಿಸಿದೆ. ರಾಜ್ಯದಲ್ಲಿ 2025 ರಲ್ಲಿ ಒಟ್ಟು 9,22,992 ಜನನ ಹಾಗೂ 5,07,650 ಮರಣಕ್ಕೆ ಸಂಬಂಧಿಸಿದಂತೆ ನೋಂದಣಿಯಾಗಿದೆ. ಇದರಲ್ಲಿ 21 ದಿನಗಳಲ್ಲಿ ಶೇ.79 ರಷ್ಟು ಮಾತ್ರ ಆಸ್ಪತ್ರೆಗಳಲ್ಲಿ ನೋಂದಣಿಯಾಗಿದೆ. ಉಳಿದಂತೆ ಕೆಲವು ಪ್ರಕರಣಗಳಲ್ಲಿ 30 ದಿನ , ಇನ್ನೂ ಕೆಲವು 31 ದಿನದಿಂದ 365 ದಿನಗಳಲ್ಲಿ,

ಸರಕಾರಿ, ಖಾಸಗಿ ಆಸ್ಪತ್ರೆಯಲ್ಲಿ ಜನನ , ಮರಣ ನೋಂದಣಿ ಪ್ರಮಾಣ ಪತ್ರ 21 ದಿನದೊಳಗೆ ವಿತರಣೆಗೆ ಸೂಚನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹೊಸ ವರ್ಷಾಚರಣೆ–2026: ನಿಯಮ ಉಲ್ಲಂಘನೆಗೆ ಕಠಿಣ ಕ್ರಮ – ಪೊಲೀಸ್ ಇಲಾಖೆ ಎಚ್ಚರಿಕೆ

(ನ್ಯೂಸ್‌ ಕಡಬ) newskadaba.com,ಡಿ.31 ಮಂಗಳೂರು: 2026ರ ಹೊಸ ವರ್ಷಾಚರಣೆಗೆ ಸಂಬಂಧಿಸಿ ಪೊಲೀಸ್ ಇಲಾಖೆಯ ವತಿಯಿಂದ ಈಗಾಗಲೇ ಮಾರ್ಗಸೂಚಿಗಳನ್ನು ಹೊರಡಿಸಲಾಗಿದ್ದು, ಎಲ್ಲಾ ಕಾರ್ಯಕ್ರಮ ಆಯೋಜಕರು ಹಾಗೂ ಸಾರ್ವಜನಿಕರು ನೀಡಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ. ಅನುಮತಿ ಪಡೆಯದೆ ಸಾರ್ವಜನಿಕವಾಗಿ ಯಾವುದೇ ರೀತಿಯ ಆಚರಣೆಗಳಿಗೆ ಅವಕಾಶ ಇರುವುದಿಲ್ಲ. ಸಾರ್ವಜನಿಕರಿಗೆ ಯಾವುದೇ ತೊಂದರೆ ಅಥವಾ ಕಿರುಕುಳ ಉಂಟಾಗದಂತೆ ಜವಾಬ್ದಾರಿಯುತವಾಗಿ ಸಂಭ್ರಮಾಚರಣೆ ನಡೆಸುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಸಂಭ್ರಮಾಚರಣೆ ಹೆಸರಿನಲ್ಲಿ ಅತೀವೇಗದ ವಾಹನ ಚಾಲನೆ, ವೀಲಿಂಗ್,

ಹೊಸ ವರ್ಷಾಚರಣೆ–2026: ನಿಯಮ ಉಲ್ಲಂಘನೆಗೆ ಕಠಿಣ ಕ್ರಮ – ಪೊಲೀಸ್ ಇಲಾಖೆ ಎಚ್ಚರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಡಿ.31: ರಾಜ್ಯದಲ್ಲಿ ಒಣಹವೆ ಮುಂದುವರಿದಿದ್ದು, ಮುಂದಿನ ದಿನಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಜ.3ರವರೆಗೂ ಚಳಿಯ ವಾತಾವರಣ ಮುಂದುವರಿಯಲಿದೆ.   ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top