ಕೆಎಸ್‌ಆರ್‌ಟಿಸಿ ಬಸ್‌ಗೆ ಅಗ್ನಿ- ಪವಾಡ ರೀತಿಯಲ್ಲಿ ಪಾರಾದ ಪ್ರಯಾಣಿಕರು

(ನ್ಯೂಸ್‌ ಕಡಬ) newskadaba.com,ಡಿ.19 ಮೈಸೂರು: ಚಲಿಸುತ್ತಿದ್ದ ವೇಳೆಯಲ್ಲೇ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ರಾಜ್ಯ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ)ಗೆ ಸೇರಿದ ಬಸ್ ಸಂಪೂರ್ಣವಾಗಿ ಹೊತ್ತಿ ಉರಿದ ಘಟನೆ ಮೈಸೂರಿನ ನಂಜನಗೂಡು ತಾಲೂಕಿನ ಹೊಸಳ್ಳಿ ಗೇಟ್ ಬಳಿ ನಡೆದಿದೆ. ಮೈಸೂರಿನಿಂದ ಕೇರಳಕ್ಕೆ ತೆರಳುತ್ತಿದ್ದ ಬಸ್‌ನಲ್ಲಿ ದಿಢೀರನೆ ಬೆಂಕಿ ಕಾಣಿಸಿಕೊಂಡಿದ್ದು, ಪರಿಸ್ಥಿತಿಯನ್ನು ಗಮನಿಸಿದ ಚಾಲಕ ತಕ್ಷಣವೇ ಬಸ್ಸನ್ನು ಹೊಸಳ್ಳಿ ಗೇಟ್ ಬಳಿ ನಿಲ್ಲಿಸಿ, ಬಸ್‌ನಲ್ಲಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ಚಾಲಕನ ಸಮಯಪ್ರಜ್ಞೆಯಿಂದಾಗಿ ಭಾರೀ ಅನಾಹುತ ತಪ್ಪಿದೆ. ಪ್ರಯಾಣಿಕರನ್ನು […]

ಕೆಎಸ್‌ಆರ್‌ಟಿಸಿ ಬಸ್‌ಗೆ ಅಗ್ನಿ- ಪವಾಡ ರೀತಿಯಲ್ಲಿ ಪಾರಾದ ಪ್ರಯಾಣಿಕರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮುಂದಿನ ಶೈಕ್ಷಣಿಕ ವರ್ಷದೊಳಗೆ 11 ಸಾವಿರ ಶಿಕ್ಷಕರ ನೇಮಕಾತಿ ಪೂರ್ಣ: ಸಚಿವ ಮಧು ಬಂಗಾರಪ್ಪ

(ನ್ಯೂಸ್‌ ಕಡಬ) newskadaba.com,ಡಿ.19 ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದೊಳಗೆ ರಾಜ್ಯದಲ್ಲಿ 11,000 ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಎಸ್‌. ಮಧು ಬಂಗಾರಪ್ಪ ತಿಳಿಸಿದ್ದಾರೆ. ಕರ್ನಾಟಕ ವಿಧಾನಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳ ಸ್ಥಿತಿಗತಿಗಳ ಕುರಿತು ವಿವರ ನೀಡಿದರು. “ರಾಜ್ಯದಲ್ಲಿ ಒಟ್ಟು 41,088 ಸರ್ಕಾರಿ ಪ್ರಾಥಮಿಕ ಶಾಲೆಗಳಿದ್ದು, 1,78,935 ಶಿಕ್ಷಕರ ಹುದ್ದೆಗಳು ಮಂಜೂರಾಗಿವೆ. ಈ ಪೈಕಿ 1,33,345 ಹುದ್ದೆಗಳು ಭರ್ತಿಯಾಗಿವೆ, ಇನ್ನೂ 45,590 ಹುದ್ದೆಗಳು ಖಾಲಿ ಇವೆ”

ಮುಂದಿನ ಶೈಕ್ಷಣಿಕ ವರ್ಷದೊಳಗೆ 11 ಸಾವಿರ ಶಿಕ್ಷಕರ ನೇಮಕಾತಿ ಪೂರ್ಣ: ಸಚಿವ ಮಧು ಬಂಗಾರಪ್ಪ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಿಕ್ಷಕರಿಗೆ ಮೊಟ್ಟೆ, ಬಾಳೆಹಣ್ಣು ವಿತರಣೆ ಜವಾಬ್ದಾರಿಯಿಂದ ಮುಕ್ತಿ

(ನ್ಯೂಸ್‌ ಕಡಬ) newskadaba.com,ಡಿ.19 ಬೆಂಗಳೂರು: ಸರ್ಕಾರಿ ಶಾಲಾ ಶಿಕ್ಷಕರ ಮೇಲಿರುವ ಬೋಧನೇತರ ಹೊರೆ ತಗ್ಗಿಸಲು ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಮಕ್ಕಳಿಗೆ ಮೊಟ್ಟೆ ಹಾಗೂ ಬಾಳೆಹಣ್ಣು ವಿತರಿಸುವ ಜವಾಬ್ದಾರಿಯಿಂದ ಶಿಕ್ಷಕರನ್ನು ಮುಕ್ತಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನ ಪರಿಷತ್ತಿನಲ್ಲಿ ನಡೆದ ಚರ್ಚೆಯಲ್ಲಿ ಮಾತನಾಡಿದ ಅವರು, ಈ ಕೆಳಗಿನ ಪ್ರಮುಖ ಅಂಶಗಳನ್ನು ಹಂಚಿಕೊಂಡಿದ್ದಾರೆ: ಬೋಧನೆಗೆ ಆದ್ಯತೆ: ಶಿಕ್ಷಕರು ಬಿಸಿಯೂಟದ ಸಿದ್ಧತೆಯಲ್ಲೇ ಹೆಚ್ಚು ಸಮಯ ಕಳೆಯುತ್ತಿರುವುದರಿಂದ

ಶಿಕ್ಷಕರಿಗೆ ಮೊಟ್ಟೆ, ಬಾಳೆಹಣ್ಣು ವಿತರಣೆ ಜವಾಬ್ದಾರಿಯಿಂದ ಮುಕ್ತಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾರವಾರ: ಐಎನ್ಎಸ್ ಕದಂಬ ನೌಕಾ ನೆಲೆ ಬಳಿ ಚೀನಾ ಟ್ರ್ಯಾಕರ್ ಇರುವ ಹಕ್ಕಿ ಪತ್ತೆ

(ನ್ಯೂಸ್‌ ಕಡಬ) newskadaba.com,ಡಿ.19 ಕಾರವಾರ: ಇಲ್ಲಿನ ಪ್ರಸಿದ್ಧ ಐಎನ್ಎಸ್ ಕದಂಬ ನೌಕಾ ನೆಲೆಯ ಸಮೀಪವಿರುವ ಕರಾವಳಿ ತೀರದಲ್ಲಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನ ಹೊಂದಿರುವ ವಲಸೆ ಹಕ್ಕಿಯೊಂದು (ಸೀಗಲ್) ಪತ್ತೆಯಾಗಿದ್ದು, ಸ್ಥಳೀಯರಲ್ಲಿ ತೀವ್ರ ಕುತೂಹಲ ಹಾಗೂ ಸಂಶೋಧನಾ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರದ ತಿಮ್ಮಕ್ಕ ಉದ್ಯಾನದ ಬಳಿ ವಲಸೆ ಬಂದಿದ್ದ ಸೀಗಲ್ ಹಕ್ಕಿಯ ಬೆನ್ನಿನ ಮೇಲೆ ಅಸಾಮಾನ್ಯವಾದ ಸಾಧನವೊಂದು ಜೋಡಿಸಲ್ಪಟ್ಟಿರುವುದನ್ನು ಸ್ಥಳೀಯರು ಗಮನಿಸಿದರು. ತಕ್ಷಣವೇ ಈ ಕುರಿತು ಅರಣ್ಯ ಇಲಾಖೆಯ ಸಾಗರ

ಕಾರವಾರ: ಐಎನ್ಎಸ್ ಕದಂಬ ನೌಕಾ ನೆಲೆ ಬಳಿ ಚೀನಾ ಟ್ರ್ಯಾಕರ್ ಇರುವ ಹಕ್ಕಿ ಪತ್ತೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮುಂದಿನ ಎರಡು ದಿನ ದಲ್ಲಿ ರಾಜ್ಯಾದ್ಯಂತ ಮುಂದುವರಿಯಲಿದೆ ಚಳಿ-ಬಿಸಿಲು

(ನ್ಯೂಸ್‌ ಕಡಬ) newskadaba.com,ಬೆಂಗಳೂರು, ಡಿ. 19: ರಾಜ್ಯದಲ್ಲಿ ಚಳಿಯ ತೀವ್ರತೆ ಮುಂದುವರಿದಿದ್ದು, ಮುಂದಿನ ಎರಡು ದಿನ ಕನಿಷ್ಠ ಉಷ್ಣಾಂಶದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಶುಭ್ರ ಆಕಾಶ ಇರಲಿದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವ ದಟ್ಟ ಮಂಜು ಕವಿಯುವ ಸಾಧ್ಯತೆ ಇದೆ. ಕನಿಷ್ಠ ಮತ್ತು ಗರಿಷ್ಠ 14°C ಹಾಗೂ 28°C ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಶುಕ್ರವಾರ ಮಳೆ ಸುರಿಯುವ ಸಾಧ್ಯತೆ ಇಲ್ಲ. ಮುಂದಿನ 5

ಮುಂದಿನ ಎರಡು ದಿನ ದಲ್ಲಿ ರಾಜ್ಯಾದ್ಯಂತ ಮುಂದುವರಿಯಲಿದೆ ಚಳಿ-ಬಿಸಿಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಡಿ. 18:  ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಹಲವು ಭಾಗಗಳಲ್ಲಿ ಚಳಿಯ ಅಬ್ಬರ ಹೆಚ್ಚಾಗಿದೆ. ಶೀತ ಗಾಳಿಯ ಪ್ರಭಾವದಿಂದ ಜನಜೀವನದಲ್ಲಿ ಬದಲಾವಣೆ ಕಂಡುಬಂದಿದ್ದು, ವಿಜಯಪುರದಲ್ಲಿ 20 ವರ್ಷಗಳಲ್ಲಿ ಮೂರನೇ ಬಾರಿ ಅತ್ಯಂತ ಕಡಿಮೆ ತಾಪಮಾನ ದಾಖಲಾಗಿದೆ. ವಿಜಯಪುರ, ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಚಳಿಯ ಪ್ರಮಾಣ ಹೆಚ್ಚಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತಾಪಮಾನ ಭಾರೀ ಪ್ರಮಾಣದಲ್ಲಿ ಇಳಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ವೈದ್ಯರು ಜನರಿಗೆ ಬೆಚ್ಚಗಿನ ಉಡುಪು ಧರಿಸುವುದು,

ಇಂದಿನ ಹವಾಮಾನ ವರದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು-ಬೆಂಗಳೂರು ರೈಲು ಮಾರ್ಗ ವಿದ್ಯುದೀಕರಣ ಶೀಘ್ರ ಪೂರ್ಣ: ಹಗಲು ರೈಲು ಸಂಚಾರ ಪುನರಾರಂಭ

(ನ್ಯೂಸ್‌ ಕಡಬ) newskadaba.com,ಡಿ. 19 ಮಂಗಳೂರು: ಕರಾವಳಿ ಮತ್ತು ರಾಜಧಾನಿ ಬೆಂಗಳೂರನ್ನು ಸಂಪರ್ಕಿಸುವ ರೈಲ್ವೇ ಮಾರ್ಗದಲ್ಲಿ ಶೀಘ್ರದಲ್ಲೇ ಸಂಪೂರ್ಣ ವಿದ್ಯುತ್ ಚಾಲಿತ ರೈಲುಗಳು ಸಂಚರಿಸಲಿವೆ. ಬಹುದಿನಗಳ ಬೇಡಿಕೆಯಾಗಿದ್ದ ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರೋಡ್ ನಡುವಿನ 55 ಕಿ.ಮೀ. ಉದ್ದದ ದುರ್ಗಮ ಘಾಟಿ ವಿಭಾಗದ ವಿದ್ಯುದೀಕರಣ ಕಾಮಗಾರಿ ಅಂತಿಮ ಹಂತ ತಲುಪಿದೆ. ಈ ಕಾಮಗಾರಿ ಪೂರ್ಣಗೊಂಡರೆ ಮಂಗಳೂರು-ಬೆಂಗಳೂರು ಮತ್ತು ಕಾರವಾರ ನಡುವಿನ ರೈಲುಗಳು ಎಂಜಿನ್ ಬದಲಾವಣೆಯ ಕಿರಿಕಿರಿ ಇಲ್ಲದೆ ವೇಗವಾಗಿ ಸಂಚರಿಸಲಿವೆ. ಅಲ್ಲದೆ, ಈ ಮಾರ್ಗದಲ್ಲಿ ‘ವಂದೇ ಭಾರತ್’

ಮಂಗಳೂರು-ಬೆಂಗಳೂರು ರೈಲು ಮಾರ್ಗ ವಿದ್ಯುದೀಕರಣ ಶೀಘ್ರ ಪೂರ್ಣ: ಹಗಲು ರೈಲು ಸಂಚಾರ ಪುನರಾರಂಭ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಿಲ್ಪಾಶೆಟ್ಟಿ ವಿರುದ್ಧ 60 ಕೋಟಿ ರೂ. ವಂಚನೆ ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com,ಡಿ.17: ಖ್ಯಾತ ಬಾಲಿವುಡ್‌ ನಟಿ ಹಾಗೂ ಕರಾವಳಿ ಬೆಡಗಿ ಶಿಲ್ಪಾ ಶೆಟ್ಟಿ ಹಾಗೂ ಅವರ ಪತಿ ರಾಜ್‌ ಕುಂದ್ರಾ ಅವರ ವಿರುದ್ದ 60 ಕೋಟಿ ರೂ.ಗಳ ವಂಚನೆ ಪ್ರಕರಣ ದಾಖಲಾಗಿದೆ. ಸಾಲ ಮತ್ತು ಹೂಡಿಕೆ ಒಪ್ಪಂದದಲ್ಲಿ ದಂಪತಿಗಳಿಂದ ವಂಚಿತನಾಗಿದ್ದೇನೆ ಎಂದು ಉದ್ಯಮಿ ದೀಪಕ್‌ ಕೊಠಾರಿ ನೀಡಿದ ದೂರಿನ ಆಧಾರದ ಮೇಲೆ ಮುಂಬೈ ಪೊಲೀಸರ ಆರ್ಥಿಕ ಅಪರಾಧ ವಿಭಾಗ (ಇಒಡಬ್ಲ್ಯೂ) ಪ್ರಥಮ ಮಾಹಿತಿ ವರದಿ (ಎಫ್‌ಐಆರ್‌) ದಾಖಲಿಸಿದೆ. ದೂರುದಾರರ ವಕೀಲರು ನೀಡಿದ ಹೇಳಿಕೆಯ ಪ್ರಕಾರ, ಇಒಡಬ್ಲ್ಯೂ

ಶಿಲ್ಪಾಶೆಟ್ಟಿ ವಿರುದ್ಧ 60 ಕೋಟಿ ರೂ. ವಂಚನೆ ಪ್ರಕರಣ ದಾಖಲು Read More »

ಸಿನಿಮಾ

ಶಾಲಾ ಆರಂಭದ ಸಮಯ ಬದಲಾವಣೆಗೆ ಪತ್ರ ಬರೆದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ!

(ನ್ಯೂಸ್‌ ಕಡಬ) newskadaba.com,ಡಿ.17: ರಾಜ್ಯದಲ್ಲಿ ಚಳಿಗಾಳಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಗೆ ಆದ್ಯತೆ ನೀಡಬೇಕು ಎಂಬ ಕೂಗು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಶಾಲಾ ಆರಂಭದ ಸಮಯದಲ್ಲಿ ಬದಲಾವಣೆ ಮಾಡುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಮನವಿ ಮಾಡಿದೆ. ಎಲ್‌ಕೆಜಿ ಮತ್ತು ಯುಕೆಜಿಯಿಂದ ಪಿಯುಸಿ ವರೆಗಿನ ಎಲ್ಲಾ ಶಾಲೆಗಳು ಚಳಿಗಾಳಿ ಮುಗಿಯುವವರೆಗೆ ಬೆಳಗ್ಗೆ 9.30ಕ್ಕೆ ಆರಂಭವಾಗುವಂತೆ ನಿರ್ದೇಶನ ನೀಡಬೇಕು ಎಂದು ಆಯೋಗ ಒತ್ತಾಯಿಸಿದೆ. ಮಕ್ಕಳ ಹಕ್ಕುಗಳ

ಶಾಲಾ ಆರಂಭದ ಸಮಯ ಬದಲಾವಣೆಗೆ ಪತ್ರ ಬರೆದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೆಹಲಿ ವಾಯುಮಾಲಿನ್ಯ ಬಿಕ್ಕಟ್ಟು: ಸರ್ಕಾರಿ, ಖಾಸಗಿ ಸಂಸ್ಥೆಗಳ ಶೇ.50 ರಷ್ಟು ನೌಕರರಿಗೆ ವರ್ಕ್ ಫ್ರಂ ಹೋಂ

(ನ್ಯೂಸ್‌ ಕಡಬ) newskadaba.com,ಡಿ.17: ದೆಹಲಿಯಲ್ಲಿ ವಾಯು ಗುಣಮಟ್ಟ ಸೂಚ್ಯಂಕ ತೀವ್ರ ಮಟ್ಟಕ್ಕೆ ತಲುಪಿದ ಹಿನ್ನೆಲೆ ಪರಿಸ್ಥಿತಿ ನಿಭಾಯಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಎಲ್ಲಾ ಸರ್ಕಾರಿ ಮತ್ತು ಖಾಸಗಿ ಕಂಪನಿಗಳ ಶೇ.50 ರಷ್ಟು ನೌಕರರಿಗೆ ವರ್ಕ್‌ ಫ್ರಂ ಹೋಮ್‌ ಕಡ್ಡಾಯಗೊಳಿಸಿ, ಆದೇಶ ಹೊರಡಿಸಿದೆ. ಜೊತೆಗೆ ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲ್ಯಾನ್‌ (GRAP) ಅಡಿಯಲ್ಲಿ ಯಾವುದೇ ನಿರ್ಮಾಣ ಚಟುವಟಿಕೆಗಳನ್ನ ದೀರ್ಘಕಾಲ ಕೈಗೊಳ್ಳದಂತೆ ಕಾರ್ಮಿಕರಿಗೆ ಸೂಚನೆ ನೀಡಿದೆ. ನಿಯಮ ಉಲ್ಲಂಘಿಸಿದರೆ ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಿದೆ. ಇನ್ನೂ ನಿರ್ಮಾಣ ಕಾಮಗಾರಿ ನಿಷೇಧಿಸಿರುವುದರಿಂದ,

ದೆಹಲಿ ವಾಯುಮಾಲಿನ್ಯ ಬಿಕ್ಕಟ್ಟು: ಸರ್ಕಾರಿ, ಖಾಸಗಿ ಸಂಸ್ಥೆಗಳ ಶೇ.50 ರಷ್ಟು ನೌಕರರಿಗೆ ವರ್ಕ್ ಫ್ರಂ ಹೋಂ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top