MNREGA ಉದ್ಯೋಗ ಖಾತರಿ ಯೋಜನೆ ಹೆಸರು ಬದಲಾವಣೆ- ‘ಪೂಜ್ಯ ಬಾಪು ಗ್ರಾಮೀಣ ರೋಜ್ಗಾರ್ ಯೋಜನೆ’

(ನ್ಯೂಸ್‌ ಕಡಬ) newskadaba.com,  ಡಿ.15: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಹೆಸರನ್ನು ಬದಲಾಯಿಸುವ ಹೊಸ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಯೋಜನೆ ಮುಂದಿನಿಂದ ‘ಪೂಜ್ಯ ಬಾಪು ಗ್ರಾಮೀಣ ರೋಜ್‌ಗಾರ್ ಯೋಜನೆ’ ಎಂಬ ಹೆಸರಿನಲ್ಲಿ ಪರಿಚಿತವಾಗಲಿದೆ. ಹೊಸ ಮಸೂದೆಯಂತೆ, ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನೀಡಲಾಗುವ ಕೆಲಸದ ದಿನಗಳ ಸಂಖ್ಯೆಯನ್ನು ಪ್ರಸ್ತುತ ಇರುವ 100 ದಿನಗಳಿಂದ 125 ದಿನಗಳಿಗೆ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಜೊತೆಗೆ, ಕನಿಷ್ಠ ದಿನಗೂಲಿಯನ್ನು ರೂ. 240ಕ್ಕೆ […]

MNREGA ಉದ್ಯೋಗ ಖಾತರಿ ಯೋಜನೆ ಹೆಸರು ಬದಲಾವಣೆ- ‘ಪೂಜ್ಯ ಬಾಪು ಗ್ರಾಮೀಣ ರೋಜ್ಗಾರ್ ಯೋಜನೆ’ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್ ನಲ್ಲಿ ಅನ್ಯ ಧರ್ಮದ ಬಗ್ಗೆ ಅವಹೇಳನಕಾರಿ ಮತ್ತು ಪ್ರಚೋದನಕಾರಿ ಪೋಸ್ಟ್ –ಆರೋಪಿ ಬಂಧನ

(ನ್ಯೂಸ್‌ ಕಡಬ) newskadaba.com,  ಡಿ.15 ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ-ಪ್ರಚೋದನಕಾರಿ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಬಜಪೆ ಠಾಣಾ ಪೊಲೀಸರು ಭಾನುವಾರ ವಶಕ್ಕೆ ಪಡೆದಿದ್ದಾರೆ.ಮಂಗಳೂರು, ಉಳಾಯಿಬೆಟ್ಟು, ಕೊಟ್ಟಾನ ಹೌಸ್ ನ ಪ್ರಸ್ತುತ ಬಂಟ್ವಾಳ ತಾಲೂಕಿನ ಪಾಣೆ ಮಂಗಳೂರು, ಸಜಿಪಮುನ್ನೂರು ಗ್ರಾಮದ ಸೌದಿ ಅರೆಬಿಯಾದಲ್ಲಿರುವ ಅಬ್ದುಲ್ ಖಾದರ್ ನೇಹಾದ್ (27) ಆರೋಪಿಯಾಗಿರುತ್ತಾನೆ. ಇದೇ ಅಕ್ಟೋಬರ್ 11ರಂದು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್ ನಲ್ಲಿ  _sdpi_2025_ID ಎಂಬ ಖಾತೆಯಲ್ಲಿ ಅನ್ಯ ಧರ್ಮದ ಬಗ್ಗೆ ಅವಹೇಳನಕಾರಿ ಮತ್ತು ಪ್ರಚೋದನಕಾರಿ ಪೋಸ್ಟ್ ಹಾಕಿದ ಬಗ್ಗೆ ಬಜಪೆ ಪೊಲೀಸ್

ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್ ನಲ್ಲಿ ಅನ್ಯ ಧರ್ಮದ ಬಗ್ಗೆ ಅವಹೇಳನಕಾರಿ ಮತ್ತು ಪ್ರಚೋದನಕಾರಿ ಪೋಸ್ಟ್ –ಆರೋಪಿ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಂಗ್ರೆಸ್ ಶಾಸಕ ಹಿರಿಯ ನಾಯಕಶಾಮನೂರು ಶಿವಶಂಕರಪ್ಪ ನಿಧನ

(ನ್ಯೂಸ್‌ ಕಡಬ) newskadaba.com,  ಡಿ.15 ಬೆಂಗಳೂರು : ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ವಿಧಿವಶರಾಗಿದ್ದಾರೆ. ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಶಾಮನೂರು ಶಿವಶಂಕರಪ್ಪ ಅವರಿಗೆ 94 ವರ್ಷ ವಯಸ್ಸಾಗಿತ್ತು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ ಕೊನೆಯುಸಿರೆಳೆದಿದ್ದಾರೆ. ಭಾರತದಲ್ಲೇ ಹಿರಿಯ ಶಾಸಕ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಆದರೆ ವಯೋಸಹಜ ಅನಾರೋಗ್ಯದ ಹಿನ್ನೆಲೆ ಕಳೆ ದಿನಗಳಿಂದ ಬೆಂಗಳೂರಿನ ಸ್ಪರ್ಶ ಆಸ್ಪತ್ರೆಗೆ

ಕಾಂಗ್ರೆಸ್ ಶಾಸಕ ಹಿರಿಯ ನಾಯಕಶಾಮನೂರು ಶಿವಶಂಕರಪ್ಪ ನಿಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ ; ಆರೆಂಜ್ ಅಲರ್ಟ್

(ನ್ಯೂಸ್‌ ಕಡಬ) newskadaba.com,  ಡಿ.15 ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಮೈಕೊರೆಯುವ ಚಳಿ ಜನರನ್ನು ಕಂಗಾಲಾಗಿಸಿದೆ. ಕಳೆದ ಎರಡು ದಿನಗಳಿಂದ ನಗರದಲ್ಲಿ ಕನಿಷ್ಠ ತಾಪಮಾನ 14–15 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಹೆಚ್‌ಎಎಲ್ ವ್ಯಾಪ್ತಿಯಲ್ಲಿ 13 ಡಿಗ್ರಿ ಸೆಲ್ಸಿಯಸ್ ತನಕ ತಾಪಮಾನ ಇಳಿಕೆಯಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 2 ದಿನಗಳಲ್ಲಿ ಶೀತದ ಅಲೆಗಳು ಉಂಟಾಗುವ ಸಾಧ್ಯತೆಯಿದ್ದು, ಬಾಗಲಕೋಟೆಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಗದಗ, ಚಿಕ್ಕಮಗಳೂರು ಹಾಗೂ ಮೈಸೂರಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಲಾಲ್​ಬಾಗ್​ಗೆ ವಾಕಿಂಗ್​ ಬರುವವರ ಸಂಖ್ಯೆ ಶೇ.50

ಇಂದಿನ ಹವಾಮಾನ ವರದಿ ; ಆರೆಂಜ್ ಅಲರ್ಟ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೇರಳ ರಾಜಧಾನಿಯಲ್ಲಿ ಬಿಜೆಪಿ ಗೆಲುವು

(ನ್ಯೂಸ್‌ ಕಡಬ) newskadaba.com,  ಡಿ.13: ಕೇರಳ ರಾಜಕೀಯದಲ್ಲಿ ಮಹತ್ವದ ತಿರುವು ಕಂಡುಬಂದಿದ್ದು, ರಾಜಧಾನಿ ತಿರುವನಂತಪುರಂ ಕಾರ್ಪೋರೇಶನ್‌ನಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಅಧಿಕಾರಕ್ಕೇರಿದೆ. ಸುಮಾರು 45 ವರ್ಷಗಳಿಂದ ಎಲ್‌ಡಿಎಫ್ (ಕಮ್ಯೂನಿಸ್ಟ್) ಹಿಡಿತದಲ್ಲಿದ್ದ ಕಾರ್ಪೋರೇಶನ್‌ನ್ನು ಗೆಲ್ಲುವ ಮೂಲಕ ಬಿಜೆಪಿ ಹೊಸ ಇತಿಹಾಸ ನಿರ್ಮಿಸಿದೆ. ತಿರುವನಂತಪುರಂ ಕಾರ್ಪೋರೇಶನ್‌ನ 101 ಸ್ಥಾನಗಳ ಪೈಕಿ 100 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಒಂದು ಸ್ಥಾನದಲ್ಲಿ ಅಭ್ಯರ್ಥಿ ನಿಧನರಾದ ಹಿನ್ನೆಲೆಯಲ್ಲಿ ಮತದಾನ ಮುಂದೂಡಲಾಗಿತ್ತು. ಫಲಿತಾಂಶದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ 50 ಸ್ಥಾನಗಳನ್ನು

ಕೇರಳ ರಾಜಧಾನಿಯಲ್ಲಿ ಬಿಜೆಪಿ ಗೆಲುವು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ರಾಜ್ಯದ ತೆಂಗು ಬೆಳೆಗಾರರಿಗೆ ಸಿಹಿ ಸುದ್ದಿ

(ನ್ಯೂಸ್‌ ಕಡಬ) newskadaba.com,  ಡಿ.13: ಪ್ರಧಾನಿ ನರೇಂದ್ರಮೋದಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟವು 2026ರ ಹಂಗಾಮಿನ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಲು ಅನುಮೋದನೆ ನೀಡಿದ್ದು, ರಾಜ್ಯದ ರೈತರಿಗೆ ಮತ್ತೊಮೆ ಸಿಹಿ ಸುದ್ದಿ ನೀಡಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ತಿಳಿಸಿದ್ದಾರೆ. ಕರ್ನಾಟಕದ ತೆಂಗು ಬೆಳೆಗಾರರಿಗೆ ಮೋದಿ ಸರ್ಕಾರವು ಹೊಸವರ್ಷದ ಕೊಡುಗೆಯಾಗಿ ಕೊಬ್ಬರಿ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ ಮಾಡಿದೆ ಎಂದು ಹೇಳಿದ್ದಾರೆ. ಕೇಂದ್ರದ ಈ ನಿರ್ಧಾರದಿಂದಾಗಿ ರಾಜ್ಯದ ತೆಂಗು ಬೆಳೆಗಾರರಿಗೆ ಹೆಚ್ಚಿನ

ರಾಜ್ಯದ ತೆಂಗು ಬೆಳೆಗಾರರಿಗೆ ಸಿಹಿ ಸುದ್ದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಜ.6ಕ್ಕೆ ಡಿಕೆಶಿಗೆ ಪಟ್ಟಾಭಿಷೇಕ’- ಇಕ್ಬಾಲ್ ಹುಸೇನ್

(ನ್ಯೂಸ್‌ ಕಡಬ) newskadaba.com,  ಡಿ.13: ರಾಜ್ಯದಲ್ಲಿ ನಡೆಯುತ್ತಿರುವ ಕುರ್ಚಿ ಕಿತ್ತಾಟ ಹೊಸ ಹೊಸ ತಿರುವು ಪಡೆಯುತ್ತಿದೆ. ಜನವರಿ 6ಕ್ಕೆ ಡಿಕೆ ಶಿವಕುಮಾರ್ ಅವರಿಗೆ ಪಟ್ಟಾಭಿಷೇಕವಾಗಲಿದೆ ಎಂದು ಡಿಸಿಎಂ ಆಪ್ತ ಇಕ್ಬಾಲ್‌ ಹುಸೇನ್‌ ಹೇಳಿಕೆ ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು, ಅವರಿಗೆ ಅವಕಾಶ ಸಿಗಬೇಕು.ಇದಕ್ಕೆ ಹೈಕಮಾಂಡ್ ಸ್ಪಂದಿಸುತ್ತಿದೆ. ಬಹುಶ: ಜ.6ರಂದು ಸ್ಥಾನ ಸಿಗುವ ಸ್ಥಾನ ಸಿಗುವ ಸಾಧ್ಯತೆಯಿದ್ದು ನನಗೆ ಶೇ.99ರಷ್ಟು ವಿಶ್ವಾಸ ಇದೆ ಎಂದು ಹೇಳಿದರು. ಡಿಕೆ ಶಿವಕುಮಾರ್‌

‘ಜ.6ಕ್ಕೆ ಡಿಕೆಶಿಗೆ ಪಟ್ಟಾಭಿಷೇಕ’- ಇಕ್ಬಾಲ್ ಹುಸೇನ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಪ್ಪಿನಂಗಡಿ: ಮದುವೆಯಾಗುವಂತೆ ಒತ್ತಾಯಿಸುತ್ತಿದ್ದ ಶೇಷಗಿರಿ ಭಟ್ ನ ಬಂಧನ, ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ಡಿ.13 ಉಪ್ಪಿನಂಗಡಿ: ಜಾತಕ ತೋರಿಸಲು ಬಂದ ಯುವತಿಯೋರ್ವಳ ಹಿಂದೆ ಬಿದ್ದ ಜ್ಯೋತಿಷಿಯೊಬ್ಬ ಮದುವೆಯಾಗುವಂತೆ ನಿರಂತರ ಕಿರುಕುಳ ನೀಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರಿನಲ್ಲಿ ನಡೆದಿದೆ.ಮೂಲತಃ ಶಿರಸಿ ಮೂಲದವನಾದ, ಸ್ಥಳೀಯ ದೇವಸ್ಥಾನದಲ್ಲಿ ಕೆಲಸ ಮಾಡಿಕೊಂಡಿದ್ದ ಶೇಷಗಿರಿ ಭಟ್ ಆರೋಪಿ ಜ್ಯೋತಿಷಿ. ಸಂತ್ರಸ್ತ ಯುವತಿಯ ಮನೆಯವರು ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಈತನನ್ನು ಬಂಧಿಸಿದ್ದು, ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾನೆ. ತೆಕ್ಕಾರಿನ ಯುವತಿಯೊಬ್ಬಳ ಜಾತಕ ಪರಿಶೀಲಿಸಲು ಆಕೆಯ ಮನೆಯವರು ಶೇಷಗಿರಿ ಭಟ್ ಬಳಿಗೆ ಕರೆದುಕೊಂಡು ಹೋಗಿದ್ದರು. ಈ ವಿಚಾರವಾಗಿ

ಉಪ್ಪಿನಂಗಡಿ: ಮದುವೆಯಾಗುವಂತೆ ಒತ್ತಾಯಿಸುತ್ತಿದ್ದ ಶೇಷಗಿರಿ ಭಟ್ ನ ಬಂಧನ, ಬಿಡುಗಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಟ್ರಂಪ್ ವಿಧಿಸಿದ ಶೇ. 50ರ ಸುಂಕ ಕೊನೆಗೊಳಿಸುವ ನಿರ್ಣಯ ಮಂಡಿಸಿದ ಅಮೆರಿಕ ಸಂಸದರು

(ನ್ಯೂಸ್‌ ಕಡಬ) newskadaba.com,  ಡಿ.13: ಭಾರತದ ಸರಕುಗಳ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದ ಶೇ 50ರಷ್ಟು ಸುಂಕವನ್ನು ಕೊನೆಗೊಳಿಸುವ ನಿರ್ಣಯವನ್ನು ಅಮೆರಿಕದ ಪ್ರತಿನಿಧಿ ಸಭೆಯ ಮೂವರು ಸದಸ್ಯರು ಸದನದಲ್ಲಿ ಮಂಡಿಸಿದ್ದಾರೆ. ರಾಷ್ಟ್ರೀಯ ತುರ್ತು ಸ್ಥಿತಿಯ ನೆಪದಲ್ಲಿ ಟ್ರಂಪ್ ಭಾರತದಿಂದ ಆಮದಾಗುವ ಸರಕು ಮತ್ತು ಸೇವೆಗಳ ಮೇಲೆ ಶೇ.50ರ ಸುಂಕ ವಿಧಿಸಿದ್ದರು.ಟ್ರಂಪ್ ಘೋಷಿಸಿದ ಈ ಕ್ರಮಗಳು ಕಾನೂನುಬಾಹಿರ ಮತ್ತು ಅಮೆರಿಕದ ಉದ್ಯೋಗಿಗಳು, ಗ್ರಾಹಕರು ಮತ್ತು ದ್ವಿಪಕ್ಷೀಯ ಸಂಬಂದಕ್ಕೆ ಮಾರಕ ಎಂದು ನಿರ್ಣಯ ಮಂಡಿಸಿದ ಸಂಸದರು ಅಭಿಪ್ರಾಯಪಟ್ಟಿದ್ದಾರೆ.

ಟ್ರಂಪ್ ವಿಧಿಸಿದ ಶೇ. 50ರ ಸುಂಕ ಕೊನೆಗೊಳಿಸುವ ನಿರ್ಣಯ ಮಂಡಿಸಿದ ಅಮೆರಿಕ ಸಂಸದರು Read More »

ಅಂತರ್ರಾಷ್ಟ್ರೀಯ ನ್ಯೂಸ್

ಕೊಂಚ ಇಳಿಕೆ ಕಂಡ ಚಿನ್ನದ ದರ

(ನ್ಯೂಸ್‌ ಕಡಬ) newskadaba.com, ಡಿ.13 ನವದೆಹಲಿ: ಚಿನ್ನದ ದರದಲ್ಲಿ ಕೆಲ ದಿನಗಳಿಂದ ಏರಿಳಿತ ಕಂಡು ಬರುತ್ತಿದ್ದು, ಇಂದು ಕೊಂಚ ಇಳಿಕೆಯಾಗಿದೆ. 22 ಕ್ಯಾರಟ್‌ ಚಿನ್ನದ ದರದಲ್ಲಿ ಇಳಿಕೆ 25 ರೂ. ಕಂಡು ಬಂದಿದ್ದು, 12,275 ರೂ. ಇದೆ. 24 ಕ್ಯಾರೆಟ್‌ ಚಿನ್ನದ ದರದಲ್ಲಿ 27 ರೂ. ಇಳಿಕೆ ಕಂಡು ಬಂದಿದ್ದು, 13,391 ರೂ. ಇದೆ. 22 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ 98,200 ರೂ. ಇದ್ದರೆ, 10 ಗ್ರಾಂಗೆ ನೀವು 1,22,750 ರೂ. ಇದೆ. ಹಾಗೂ

ಕೊಂಚ ಇಳಿಕೆ ಕಂಡ ಚಿನ್ನದ ದರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top