ಗ್ಯಾಸ್ ಗೀಸರ್ ಸೋರಿಕೆಯಿಂದ ತಾಯಿ- ಮಗು ಮೃತ್ಯು

(ನ್ಯೂಸ್‌ ಕಡಬ) newskadaba.com, ಡಿ.09 :ಗ್ಯಾಸ್ ಗೀಸರ್ ಸೋರಿಕೆಯಿಂದ ತಾಯಿ – ಮಗು ಸಾವನ್ನಪ್ಪಿದ ಘಟನೆ ಬೆಂಗಳೂರಿನ ಗೋವಿಂದರಾಜ ನಗರದಲ್ಲಿ ನಡೆದಿದೆ. ಮೃತರನ್ನು ಚಾಂದಿನಿ (26), ಯುವಿ (4) ಎಂದು ಗುರುತಿಸಲಾಗಿದೆ. ಸೋಮವಾರ (ಡಿ.8) ಮಧ್ಯಾಹ್ನ ಸ್ನಾನಕ್ಕೆಂದು ತೆರಳಿದ್ದಾಗ ಗ್ಯಾಸ್ ಸೋರಿಕೆಯಾಗಿ ಅಸ್ವಸ್ಥರಾಗಿದ್ದರು. ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಪ್ರತಿದಿನ ದೊಡ್ಡ ಮಗಳನ್ನು ಶಾಲೆಯಿಂದ 4 ಗಂಟೆಗೆ ಕರೆದುಕೊಂಡು ಬರಲು ಚಾಂದಿನಿ ಹೋಗುತ್ತಿದ್ದರು. ಆದರೆ ಸೋಮವಾರ ಮಗಳನ್ನು ಕರೆದುಕೊಂಡು […]

ಗ್ಯಾಸ್ ಗೀಸರ್ ಸೋರಿಕೆಯಿಂದ ತಾಯಿ- ಮಗು ಮೃತ್ಯು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com, ಡಿ.09 :  ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಮುಂಜಾನೆ ಚಳಿ ಹಾಗೂ ಅಲ್ಲಲ್ಲಿ ಮಂಜಿನ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ…. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಬೆಳಗಾವಿ ಭಾಗಗಳಲ್ಲಿ ಹೆಚ್ಚಿನ ಚಳಿ ಇರುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ

ಇಂದಿನ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಕಂಬಳಕ್ಕೆ ಹೊಸ ನಿಯಮ!

(ನ್ಯೂಸ್‌ ಕಡಬ) newskadaba.com, ಡಿ.08: ತುಳು ನಾಡಿನ ಪರಂಪರೆಯ ಕಂಬಳದಲ್ಲಿ ಈ ವರ್ಷದಿಂದ ಹಲವು ಮಹತ್ವದ ಬದಲಾವಣೆಗಳನ್ನು ಜಾರಿಗೊಳಿಸಲಾಗುತ್ತಿದೆ. ಹಗ್ಗ ಹಿರಿಯ, ಹಗ್ಗ ಕಿರಿಯ, ನೇಗಿಲು ಹಿರಿಯ, ನೇಗಿಲು ಕಿರಿಯ, ಅಡ್ಡ ಹಲಗೆ ಮತ್ತು ಕನೆ ಹಲಗೆ ಎಂಬ ಆರು ವಿಭಾಗಗಳಲ್ಲಿ ನಡೆಯುವ ಕಂಬಳ ಸ್ಪರ್ಧೆಗಳಿಗೆ ಸಮಯ ನಿರ್ವಹಣೆ ಮತ್ತು ಅಂಕ ನಿರ್ಧಾರಕ್ಕೆ ಸಂಬಂಧಿಸಿದಂತೆ ಕಂಬಳ ಸಮಿತಿ ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಕನೆ ಹಲಗೆ ವಿಭಾಗದಲ್ಲಿ ಈಗಾಗಲೇ ಇದ್ದ ಗೊಂದಲದ ನಿರ್ವಹಣೆಗೆ ಈ ಬಾರಿ ಸಮಿತಿ

ಮಂಗಳೂರು: ಕಂಬಳಕ್ಕೆ ಹೊಸ ನಿಯಮ! Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ: ಸೈಂಟ್ ಜೋಕಿಮ್ಸ್ ಪ್ರೌಢಶಾಲೆಯಲ್ಲಿ ‘ಉತ್ಸವ 2K25’ ಆಚರಣೆ

(ನ್ಯೂಸ್‌ ಕಡಬ) newskadaba.com, ಡಿ.08: ಸೈಂಟ್ ಜೋಕಿಮ್ಸ್ ಪ್ರೌಢಶಾಲೆಯ ವಾರ್ಷಿಕ ದಿನಾಚರಣೆ ‘ಉತ್ಸವ್ 2K25’ ಸಂಸ್ಥೆಯ ಸಭಾಂಗಣದಲ್ಲಿ ನೆರವೇರಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ಸಂಸ್ಥೆಯ ಹಳೆ ವಿದ್ಯಾರ್ಥಿನಿ  ನಿಶ್ಚಿತಾ ಚೇತನ್ ಕಾರ್ಯಕ್ರಮಕ್ಕೆ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳನ್ನು ಇಂದಿನ ಆಧುನಿಕ ಯುಗದಲ್ಲಿ ಸಮಾನವಾಗಿ ಕಾಣುವ ಸನ್ನಿವೇಶ ನಮ್ಮ ಮುಂದಿದೆ. ಕೌಶಲ್ಯಗಳನ್ನು ರೂಢಿಸಿಕೊಳ್ಳಲು ಹೊಸ ಹೊಸ ಪರಿಕಲ್ಪನೆಯ ಇಂತಹ ರಚನಾತ್ಮಕ ಕಾರ್ಯಕ್ರಮಗಳು ಅಗತ್ಯ ಎಂದು ಅತಿಥಿ ಭಾಷಣದಲ್ಲಿ ಅವರು ಹೇಳಿದರು.

ಕಡಬ: ಸೈಂಟ್ ಜೋಕಿಮ್ಸ್ ಪ್ರೌಢಶಾಲೆಯಲ್ಲಿ ‘ಉತ್ಸವ 2K25’ ಆಚರಣೆ Read More »

ಕರಾವಳಿ

ಉಡುಪಿ: ಪೊಲೀಸ್ ಇಲಾಖೆಯಿಂದ ‘ಪೀಕ್ ಕ್ಯಾಪ್’ ಹಸ್ತಾಂತರ

(ನ್ಯೂಸ್‌ ಕಡಬ) newskadaba.com, ಡಿ.08: ರಾಜ್ಯ ಸರ್ಕಾರದ ಆದೇಶದಂತೆ, ಎಲ್ಲಾ ಪೊಲೀಸ್ ಸಿಬ್ಬಂದಿಗೆ ‘ಪೀಕ್ ಕ್ಯಾಪ್’ ವಿತರಿಸುವ ಪ್ರಕ್ರಿಯೆ ಪ್ರಾರಂಭವಾಗಿದ್ದು, ಉಡುಪಿ ಜಿಲ್ಲೆಯಲ್ಲಿಯೂ ಇದನ್ನು ಜಾರಿಗೆ ತರಲಾಗಿದೆ. ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಅವರು ಸಾಂಕೇತಿಕವಾಗಿ ಕ್ಯಾಪ್‌ಗಳನ್ನು ವಿತರಿಸಿದರು. ಜಿಲ್ಲೆಯಲ್ಲಿ 1,400 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳಿದ್ದಾರೆ. ಇವರಲ್ಲಿ ಸುಮಾರು 200 ಪೀಕ್ ಕ್ಯಾಪ್‌ಗಳು ಈಗಾಗಲೇ ಬಂದಿದ್ದು, ವಿತರಣಾ ಪ್ರಕ್ರಿಯೆ ನಡೆಯುತ್ತಿದೆ. ಪೊಲೀಸ್ ಇಲಾಖೆಯ ಮೂಲಗಳ ಪ್ರಕಾರ, ಉಳಿದ ಕ್ಯಾಪ್‌ಗಳು ಹಂತ ಹಂತವಾಗಿ ಬರಲಿವೆ.

ಉಡುಪಿ: ಪೊಲೀಸ್ ಇಲಾಖೆಯಿಂದ ‘ಪೀಕ್ ಕ್ಯಾಪ್’ ಹಸ್ತಾಂತರ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ಗೆ ಕಠಿಣ ನಿಯಮ: ಸಹ ಕೈದಿಗಳಿಗೆ ಕಿರುಕುಳ ಆರೋಪ

(ನ್ಯೂಸ್‌ ಕಡಬ) newskadaba.com, ಡಿ.06 : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿದೆ. ಅವರು ತಮ್ಮ ಸಹ ಕೈದಿಗಳಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ವರದಿಯಾಗಿದೆ. ಈ ಬಾರಿ ದರ್ಶನ್ ಜೈಲು ಸೇರಿದಾಗಿನಿಂದ ಜೈಲಿನಲ್ಲಿ ಕಠಿಣ ನಿಯಮಗಳು ಜಾರಿಯಲ್ಲಿದ್ದು, ಇತ್ತೀಚೆಗೆ ಜೈಲಿನ ಪಾರ್ಟಿ ವಿಡಿಯೋ ವೈರಲ್ ಆದ ನಂತರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ಜೈಲಿನ ಮುಖ್ಯ ಸೂಪರಿಂಟೆಂಡೆಂಟ್ ಆಗಿ ಐಪಿಎಸ್ ಅಧಿಕಾರಿ ಅಂಶು ಕುಮಾರ್

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ಗೆ ಕಠಿಣ ನಿಯಮ: ಸಹ ಕೈದಿಗಳಿಗೆ ಕಿರುಕುಳ ಆರೋಪ Read More »

ಬ್ರೇಕಿಂಗ್ ನ್ಯೂಸ್

ಇಂಡಿಗೋ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ: ಲಕ್ಷಾಂತರ ಪ್ರಯಾಣಿಕರೊಂದಿಗೆ ರೋಗಿಗಳಿಗೂ ತೊಂದರೆ

(ನ್ಯೂಸ್‌ ಕಡಬ) newskadaba.com, ಡಿ.06 : ಕಳೆದ ಐದಾರು ದಿನಗಳಿಂದ ಇಂಡಿಗೋ (IndiGo) ವಿಮಾನಗಳ ಹಾರಾಟದಲ್ಲಿ ಉಂಟಾಗಿರುವ ಗಣನೀಯ ವ್ಯತ್ಯಯದಿಂದಾಗಿ ಲಕ್ಷಾಂತರ ಸಾಮಾನ್ಯ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಹಾರಾಟದ ಅನಿಶ್ಚಿತತೆಯು ಹೊರ ರಾಜ್ಯಗಳು ಮತ್ತು ಹೊರ ರಾಷ್ಟ್ರಗಳಲ್ಲಿ ತುರ್ತು ಚಿಕಿತ್ಸೆಗಾಗಿ ತೆರಳಬೇಕಾದ ರೋಗಿಗಳ ಪಾಲಿಗೆ ಮತ್ತಷ್ಟು ಸಂಕಷ್ಟ ತಂದೊಡ್ಡಿದೆ. ವಿಮಾನಗಳು ಸಿಗದೆ ರೋಗಿಗಳು ಮತ್ತು ಅವರ ಕುಟುಂಬಗಳು ಪರದಾಡುವಂತಾಗಿದೆ. ಈ ಬಿಕ್ಕಟ್ಟು ವೈದ್ಯಕೀಯ ಅಗತ್ಯಗಳಿರುವವರಿಗೆ ಸರಿಯಾದ ಸಮಯಕ್ಕೆ ಚಿಕಿತ್ಸೆ ಲಭ್ಯವಾಗುವುದನ್ನು ಕಠಿಣಗೊಳಿಸಿದೆ. ಇಂಡಿಗೋ ಹಾರಾಟದ

ಇಂಡಿಗೋ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ: ಲಕ್ಷಾಂತರ ಪ್ರಯಾಣಿಕರೊಂದಿಗೆ ರೋಗಿಗಳಿಗೂ ತೊಂದರೆ Read More »

ಬ್ರೇಕಿಂಗ್ ನ್ಯೂಸ್

ಸೈಬರ್ ಅಪರಾಧ ತಡೆಗೆ ಸರ್ಕಾರದಿಂದ ಮಹತ್ವದ ಹೆಜ್ಜೆ: ಇನ್ನು ಸಿಮ್ ಇದ್ದರೆ ಮಾತ್ರ ವಾಟ್ಸಾಪ್ ಕಾರ್ಯನಿರ್ವಹಿಸಲಿದೆ

(ನ್ಯೂಸ್‌ ಕಡಬ) newskadaba.com, ಡಿ.06 : ಕೇಂದ್ರ ಸರ್ಕಾರದ ದೂರಸಂಪರ್ಕ ಇಲಾಖೆ (DoT) ಯಿಂದ ಮಹತ್ವದ ನಿರ್ದೇಶನವೊಂದು ಹೊರಬಿದ್ದಿದೆ. ಸೈಬರ್ ಅಪರಾಧ ಕೃತ್ಯಗಳನ್ನು ತಡೆಯುವ ಉದ್ದೇಶದಿಂದ, ಇನ್ನು ಮುಂದೆ ಬಳಕೆದಾರರ ಮೊಬೈಲ್‌ನಲ್ಲಿ ಸಕ್ರಿಯ ಸಿಮ್ ಕಾರ್ಡ್ ಇದ್ದರೆ ಮಾತ್ರ ವಾಟ್ಸಾಪ್, ಟೆಲಿಗ್ರಾಂ, ಸಿಗ್ನಲ್, ಸ್ನಾಪ್‌ಚಾಟ್, ಶೇರ್‌ಚಾಟ್, ಮತ್ತು ಜೋಶ್‌ನಂತಹ ಪ್ರಮುಖ ಆಪ್-ಆಧಾರಿತ ಸಂವಹನ ಸೇವೆಗಳು ಕಾರ್ಯನಿರ್ವಹಿಸಬೇಕು ಎಂದು ಸೂಚಿಸಲಾಗಿದೆ. ಪ್ರಸ್ತುತ, ಒಮ್ಮೆ ಒಟಿಪಿ ಮೂಲಕ ಲಾಗಿನ್ ಆದರೆ, ಸಿಮ್ ತೆಗೆದರೂ ಅಥವಾ ನಿಷ್ಕ್ರಿಯಗೊಂಡರೂ ಈ ಆಪ್‌ಗಳು ವೈಫೈ

ಸೈಬರ್ ಅಪರಾಧ ತಡೆಗೆ ಸರ್ಕಾರದಿಂದ ಮಹತ್ವದ ಹೆಜ್ಜೆ: ಇನ್ನು ಸಿಮ್ ಇದ್ದರೆ ಮಾತ್ರ ವಾಟ್ಸಾಪ್ ಕಾರ್ಯನಿರ್ವಹಿಸಲಿದೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಧಾನಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭ

(ನ್ಯೂಸ್‌ ಕಡಬ) newskadaba.com, ಡಿ.06 : ಸುವರ್ಣ ವಿಧಾನಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಅಧಿವೇಶನಕ್ಕೆ ಬೆಳಗಾವಿ ಸಜ್ಜಾಗಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಗರದಲ್ಲಿ ಹೆಚ್ಚುವರಿ ಭದ್ರತೆ ನಿಯೋಜಿಸಲಾಗಿದೆ. ಡಿಸೆಂಬರ್ 19 ವರೆಗೆ 10 ದಿನಗಳ ಕಾಲ ಚಳಿಗಾಲದ ಅಧಿವೇಶನ ನಡೆಯಲಿದೆ. ಈ ಅಧಿವೇಶನದಲ್ಲಿ 21ಕ್ಕೂ ಹೆಚ್ಚು ವಿಧೇಯಕಗಳ ಮಂಡನೆ ಸಾಧ್ಯತೆ ಇದೆ. ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿರೋಧ ಪಕ್ಷಗಳು ಸಜ್ಜಾಗಿವೆ. ವಿಪಕ್ಷಗಳ ಅಸ್ತ್ರಗಳನ್ನು ಎದುರಿಸಲು ಸರ್ಕಾರ ಕೂಡ ತಯಾರಾಗಿದೆ. ಅಧಿವೇಶನದ ಮೊದಲ ದಿನದ ಕಲಾಪ

ವಿಧಾನಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಲ್ಪ ಇಳಿಕೆ ಇಂದಿನ ಚಿನ್ನದ ದರ

(ನ್ಯೂಸ್‌ ಕಡಬ) newskadaba.com, ಡಿ.06  ಚಿನ್ನದ ದರದಲ್ಲಿ ಇಂದು ಭಾರೀ ಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 50 ರೂ. ಇಳಿಕೆ ಕಂಡು ಬಂದಿದ್ದು 11,930 ರೂ ಇದೆ. 24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನ 54 ರೂ. ಇಳಿಕೆ ಕಂಡು ಬಂದಿದ್ದು, 13,015 ರೂ. ಇದೆ. 22 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ 95,440 ರೂ. ಇದ್ದರೆ, 10 ಗ್ರಾಂಗೆ ನೀವು 1,19,300 ರೂ. ಮತ್ತು 100

ಅಲ್ಪ ಇಳಿಕೆ ಇಂದಿನ ಚಿನ್ನದ ದರ Read More »

ಕರಾವಳಿ, ಕರ್ನಾಟಕ
Scroll to Top