ದಿತ್ವಾ ಚಂಡಮಾರುತದ ಅಬ್ಬರ – ಶ್ರೀಲಂಕಾದಲ್ಲಿ ಸಾವಿನ ಸಂಖ್ಯೆ 334ಕ್ಕೆ ಏರಿಕೆ

(ನ್ಯೂಸ್‌ ಕಡಬ) newskadaba.com, ಡಿ.01: ದಿತ್ವಾ ಚಂಡಮಾರುತದಿಂದ ಉಂಟಾದ ಭೂಕುಸಿತ ಮತ್ತು ಪ್ರವಾಹಕ್ಕೆ ಶ್ರೀಲಂಕಾ ತತ್ತರಿಸಿದ್ದು, ಮೃತಪಟ್ಟವರ ಸಂಖ್ಯೆ 334ಕ್ಕೆ ತಲುಪಿದೆ. ಶ್ರೀಲಂಕಾ ವಿಪತ್ತು ನಿರ್ವಹಣಾ ಕೇಂದ್ರದ ಮಾಹಿತಿ ಪ್ರಕಾರ, ಸುಮಾರು 370 ಮಂದಿ ನಾಪತ್ತೆಯಾಗಿದ್ದು, 2,66,114 ಕುಟುಂಬಗಳ 9,68,304 ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಂತ್ರಸ್ತರ ನೆರವಿಗಾಗಿ 919 ಪುನರ್ವಸತಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ‘ಆಪರೇಷನ್ ಸಾಗರ ಬಂಧು’ ಅಡಿಯಲ್ಲಿ ಭಾರತವು ರಕ್ಷಣಾ ಮತ್ತು ಮಾನವೀಯ ನೆರವನ್ನು ಮುಂದುವರಿಸುತ್ತಿದ್ದು, 80 ಸದಸ್ಯರ ವಿಶೇಷ ತಂಡ ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿದೆ. […]

ದಿತ್ವಾ ಚಂಡಮಾರುತದ ಅಬ್ಬರ – ಶ್ರೀಲಂಕಾದಲ್ಲಿ ಸಾವಿನ ಸಂಖ್ಯೆ 334ಕ್ಕೆ ಏರಿಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಂಟ್ವಾಳ : ಮದುವೆ ಮನೆಗಳೇ ಕಳ್ಳರ ಟಾರ್ಗೆಟ್!

(ನ್ಯೂಸ್‌ ಕಡಬ) newskadaba.com, ಡಿ.01: ಮದುವೆ ಮನೆಗಳನ್ನೇ ಟಾರ್ಗೆಟ್ ಮಾಡಿ ಮನೆಯಲ್ಲಿ ಯಾರನ್ನೋ ನಿಲ್ಲಿಸಿ ಹೋದವರನ್ನು ಯಾಮಾರಿಸಿ ಸುಳ್ಳು ಹೇಳಿ ಕಳ್ಳತನ ಮಾಡುವ ಕೃತ್ಯಗಳು ಹೆಚ್ಚಾಗುತ್ತಿದೆ. ರವಿವಾರ ಬಂಟ್ವಾಳದ ಇರಾ ಗ್ರಾಮವೊಂದರ ಮನೆಗೆ ಇದೇ ರೀತಿಯಲ್ಲಿ ನುಗ್ಗಿ ನಗ-ನಗದು ದೋಚಿರುವ ಘಟನೆ ನಡೆದಿದೆ. ಇರಾ ಗ್ರಾಮದ ಕುರಿಯಾಡಿ ಪದ್ಮನಾಭ ಅವರ ಮನೆಯಲ್ಲಿ ಘಟನೆ ನಡೆದಿದ್ದು, ಅವರ ಮಗಳ ಮದುವೆಗಾಗಿ ಮನೆ ಮಂದಿ ಮಂಜೇಶ್ವರ ಪೈವಳಿಕೆಗೆ ಹೋಗಿದ್ದರು. ಹೀಗಾಗಿ ಮನೆಯಲ್ಲಿ ಇಬ್ಬರು ಮಹಿಳೆಯರನ್ನು ನಿಲ್ಲಿಸಿ ಹೋಗಿದ್ದರು. ಮಧ್ಯಾಹ್ನ 1ರ

ಬಂಟ್ವಾಳ : ಮದುವೆ ಮನೆಗಳೇ ಕಳ್ಳರ ಟಾರ್ಗೆಟ್! Read More »

ಕರಾವಳಿ

ಮಾನಸಿಕ ಖಿನ್ನತೆಯಿಂದ ಇಬ್ಬರು ಮಕ್ಕಳನ್ನ ಅನಾಥ ಮಾಡಿ ತಾಯಿ ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com,  ಡಿ.01  ಬೆಂಗಳೂರು: ಮಾನಸಿಕ ಖಿನ್ನತೆಯಿಂದ ಇಬ್ಬರು ಮಕ್ಕಳನ್ನ ಅನಾಥರನ್ನಾಗಿ ಮಾಡಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದ ಗುಡ್ಡದಹಳ್ಳಿಯಲ್ಲಿ ನಡೆದಿದೆ. ಸೌಭಾಗ್ಯ (31) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ತಾಯಿ. ಈಕೆ ತನ್ನ ಇಬ್ಬರು ಮಕ್ಕಳ ಜೊತೆಗೆ ಬೆಂಗಳೂರು ಉತ್ತರ ತಾಲೂಕಿನ ತೋಟದ ಗುಡ್ಡದಹಳ್ಳಿಯಲ್ಲಿ ವಾಸವಾಗಿದ್ದರು. ಸೌಭಾಗ್ಯ ಎರಡು ವರ್ಷದ ಹಿಂದೆ ಗಂಡನನ್ನ ಕಳೆದುಕೊಂಡಿದ್ದರು. ಮೂಲತಃ ಕೈವಾರದ ಮೂಲ ನಿವಾಸಿಯಾಗಿರುವ ಸೌಭಾಗ್ಯ ಬೆಂಗಳೂರಿನ ತೋಟದಗುಡ್ಡದಹಳ್ಳಿಯ ಸಾಯಿ ರಾಮ ಲೇಔಟ್‌ನಲ್ಲಿ

ಮಾನಸಿಕ ಖಿನ್ನತೆಯಿಂದ ಇಬ್ಬರು ಮಕ್ಕಳನ್ನ ಅನಾಥ ಮಾಡಿ ತಾಯಿ ಆತ್ಮಹತ್ಯೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ ಜೆ ಎಂ ಜೆ ಆಸ್ಪತ್ರೆಯಲ್ಲಿ ವಿಶ್ವ ಏಡ್ಸ್ ದಿನಾಚರಣೆ

(ನ್ಯೂಸ್‌ ಕಡಬ) newskadaba.com,  ಡಿ.01 : ಕಡಬ ಜೆ ಎಂ ಆಸ್ಪತ್ರೆಯಲ್ಲಿ ವಿಶ್ವ ಏಡ್ಸ್ ದಿನದ ಸಂದರ್ಭದಲ್ಲಿ ಜಾಗೃತಿ – ಜವಾಬ್ದಾರಿ – ಪ್ರಾರ್ಥನೆ ಎಂಬ ತತ್ತ್ವದೊಂದಿಗೆ ಮುಂಜಾಗ್ರತಾ ಕಾರ್ಯಕ್ರಮ ಹಾಗೂ ಸರ್ವಧರ್ಮ ಪ್ರಾರ್ಥನೆ ನಡೆಸಲಾಯಿತು. ಎಚ್‌ಐವಿ/ಎಯ್ಡ್ಸ್ ವಿರುದ್ಧದ ಹೋರಾಟದಲ್ಲಿ ಭಯಕ್ಕಿಂತ ಮಾಹಿತಿ,ತಪ್ಪು ಕಲ್ಪನೆಗಿಂತ ಸತ್ಯ,ವೈಷಮ್ಯಕ್ಕಿಂತ ಸ್ನೇಹ ಮತ್ತು  ಬೆಂಬಲ ಎಂದಿಗೂ ದೊಡ್ಡ ಶಸ್ತ್ರಗಳಾಗಿವೆ ಎಂದು ಸಿಬ್ಬಂದಿಯೊಬ್ಬರು ತಿಳಿಸಿದರು…“ನಾವು ತಿಳಿದುಕೊಂಡಾಗ ಬದುಕು ಬದಲಾಗುತ್ತದೆ, ನಾವು ಜಾಗೃತಿಯಾದಾಗ ಸಮಾಜ ಬಲವಾಗುತ್ತದೆ.” …. “ರೋಗಕ್ಕಿಂತ ದೊಡ್ಡದು ಮಾನವೀಯತೆ,ನೋವಿಗಿಂತ ದೊಡ್ಡದು ನಮ್ಮ

ಕಡಬ ಜೆ ಎಂ ಜೆ ಆಸ್ಪತ್ರೆಯಲ್ಲಿ ವಿಶ್ವ ಏಡ್ಸ್ ದಿನಾಚರಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದ ಎಲ್ಲಾ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಮುಂಬರುವ ಶೈಕ್ಷಣಿಕ ಸಾಲಿನಿಂದ ಪಠ್ಯ-ಪುಸ್ತಕಗಳ ಜೊತೆಗೆ ನೋಟ್‌ಬುಕ್‌ಗಳನ್ನೂ ಉಚಿತ

(ನ್ಯೂಸ್‌ ಕಡಬ) newskadaba.com,  ಡಿ.01 : ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಶೂ, ಸಾಕ್ಸ್‌, ರಾಗಿ ಮಾಲ್ಟ್‌ ಮಿಶ್ರಿತ ಹಾಲು, ಮಧ್ಯಾಹ್ನದ ಬಿಸಿಯೂಟ ನೀಡಲಾಗುತ್ತಿದೆ. ಆದರೂ, ಮಕ್ಕಳ ದಾಖಲಾತಿ ಮಾತ್ರ ವರ್ಷದಿಂದ ವರ್ಷಕ್ಕೆ ಇಳಿಕೆಯಾಗುತ್ತಲೇ ಇದೆ. ಆದ್ದರಿಂದ ರಾಜ್ಯದ ಎಲ್ಲಾ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಮುಂಬರುವ ಶೈಕ್ಷಣಿಕ ಸಾಲಿನಿಂದ ಪಠ್ಯ-ಪುಸ್ತಕಗಳ ಜೊತೆಗೆ ನೋಟ್‌ಬುಕ್‌ಗಳನ್ನೂ ಉಚಿತವಾಗಿ ವಿತರಿಸುವುದಾಗಿ  ಮುಖ್ಯಮಂತ್ರಿ ಅವರು ಘೋಷಿಸಿರುವ ಹಿನ್ನೆಲೆಯಲ್ಲಿ ಇದರ ಅನುಷ್ಠಾನಕ್ಕೆ ಶಿಕ್ಷಣ ಇಲಾಖೆ ಈಗಿನಿಂದಲೇ ಸಿದ್ಧತೆ ಆರಂಭಿಸಿದೆ. 46 ಸಾವಿರ ಸರ್ಕಾರಿ

ರಾಜ್ಯದ ಎಲ್ಲಾ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಮುಂಬರುವ ಶೈಕ್ಷಣಿಕ ಸಾಲಿನಿಂದ ಪಠ್ಯ-ಪುಸ್ತಕಗಳ ಜೊತೆಗೆ ನೋಟ್‌ಬುಕ್‌ಗಳನ್ನೂ ಉಚಿತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಂಚಿಯಲ್ಲಿ ಮೊದಲ ಏಕದಿನ ಪಂದ್ಯ

(ನ್ಯೂಸ್‌ ಕಡಬ) newskadaba.com, ಡಿ.01: ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಭಾರತ 17 ರನ್ ಗಳಿಂದ ರೋಚಕ ಜಯ ಸಾಧಿಸಿದೆ. ದಕ್ಷಿಣ ಆಫ್ರಿಕಾ ಅಬ್ಬರದ ಬ್ಯಾಟಿಂಗ್ ಮಾಡಿದ್ದು ಗೆಲುವಿನ ಸೂಚನೆ ನೀಡಿತ್ತು. ಆದರೆ ಭಾರತೀಯ ಬೌಲರ್ ಆಫ್ರಿಕಾ ಬ್ಯಾಟರ್ ಗಳನ್ನು ಕಟ್ಟಿಹಾಕಿದರು. ರಾಂಚಿಯ ಜೆಎಸ್ ಸಿಎ ಕ್ರೀಡಾಂಗಣದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ದಕ್ಷಿಣ ಆಫ್ರಿಕಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಹೀಗಾಗಿ ಭಾರತ ಮೊದಲು ಬ್ಯಾಟಿಂಗ್ ಮಾಡಿದ್ದು 349 ರನ್

ರಾಂಚಿಯಲ್ಲಿ ಮೊದಲ ಏಕದಿನ ಪಂದ್ಯ Read More »

ಕ್ರೀಡಾ ನ್ಯೂಸ್

ಹೊಸ ಜೀವನಕ್ಕೆ ಕಾಲಿಟ್ಟ ʻ777 ಚಾರ್ಲಿʼ ನಿರ್ದೇಶಕ ಕಿರಣ್‌ ರಾಜ್‌!

(ನ್ಯೂಸ್‌ ಕಡಬ) newskadaba.com,  ಡಿ.01 : ʻ777 ಚಾರ್ಲಿʼನಂತಹ ಹಿಟ್‌ ಸಿನಿಮಾ ನೀಡಿದ ಡೈರೆಕ್ಟರ್‌ ಕಿರಣ್‌ ರಾಜ್‌ ದಾಂಪತ್ಯ ಬದುಕಿಗೆ ಕಾಲಿರಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಪ್ರೀ-ವೆಡ್ಡಿಂಗ್‌ ಸೆಲೆಬ್ರೇಷನ್‌, ಹಳದಿ ಶಾಸ್ತ್ರ, ಮೆಹಂದಿ ಶಾಸ್ತ್ರ, ಸಂಗೀತ ಕಾರ್ಯಕ್ರಮ ಸೇರಿದಂತೆ ಎಲ್ಲ ಕಾರ್ಯಮಗಳೂ ಅದ್ದೂರಿಯಾಗಿ ನೆರವೇರಿದ್ದು, ನವೆಂಬರ್‌ 30ರಂದು ಈ ಜೋಡಿ ಹೊಸ ಜೀವನಕ್ಕೆ ಕಾಲಿರಿಸಿದೆ. ಕಿರಣ್‌ ರಾಜ್‌ ಅವರ ಪತ್ನಿ ಅನಯಾ ವಸುಧಾ ಭರತನಾಟ್ಯ ಕಲಾವಿದೆಯಾಗಿದ್ದು, ಬಹು ಕಾಲದ ಪ್ರೀತಿಗೆ ಈ ಜೋಡಿ ಮದುವೆ ಮುದ್ರೆ ಒತ್ತಿದ್ದಾರೆ.

ಹೊಸ ಜೀವನಕ್ಕೆ ಕಾಲಿಟ್ಟ ʻ777 ಚಾರ್ಲಿʼ ನಿರ್ದೇಶಕ ಕಿರಣ್‌ ರಾಜ್‌! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಸಂಸತ್ ಚಳಿಗಾಲದ ಅಧಿವೇಶನ ಆರಂಭ

(ನ್ಯೂಸ್‌ ಕಡಬ) newskadaba.com, ಡಿ.01: ಸಂಸತ್‌ನ ಚಳಿಗಾಲದ ಅಧಿವೇಶನ ಇಂದು (ಡಿಸೆಂಬರ್ 1) ಆರಂಭಗೊಳ್ಳಲಿದ್ದು, ಡಿಸೆಂಬರ್ 19ರಂದು ಸಂಪನ್ನಗೊಳ್ಳಲಿದೆ. 19 ದಿನಗಳ ಅವಧಿಯಲ್ಲಿ ಒಟ್ಟು 15 ಕಲಾಪಗಳು ನಡೆಯಲಿದ್ದು, ಕೇಂದ್ರ ಮತ್ತು ವಿಪಕ್ಷಗಳ ನಡುವಿನ ರಾಜಕೀಯ ತೀವ್ರತೆ ಈ ಬಾರಿಯ ಅಧಿವೇಶನಕ್ಕೆ ವಿಶೇಷ ಬಣ್ಣ ನೀಡಲಿದೆ. ತೃಣಮೂಲ ಕಾಂಗ್ರೆಸ್, ಡಿಎಂಕೆ ಮತ್ತು ಸಮಾಜವಾದಿ ಪಕ್ಷಗಳು, ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆಗೆ ತೀವ್ರ ವಿರೋಧ ವ್ಯಕ್ತಪಡಿಸಲು ನಿರ್ಧರಿಸಿವೆ. ಜೊತೆಗೆ ಚುನಾವಣಾ ಆಯೋಗ ನಡೆಸುತ್ತಿರುವ ಈ ಪ್ರಕ್ರಿಯೆಯಲ್ಲಿ ಕೇಂದ್ರ

ಸಂಸತ್ ಚಳಿಗಾಲದ ಅಧಿವೇಶನ ಆರಂಭ Read More »

ಕರ್ನಾಟಕ

ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ೧೬ ಜೋಡಿಗೆ ‘ಮಾಂಗಲ್ಯಭಾಗ್ಯ

(ನ್ಯೂಸ್‌ ಕಡಬ) newskadaba.com, ಡಿ.01: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಜಂಟಿ ಆಯೋಜನೆಯಲ್ಲಿ ಪುತ್ತೂರು ಮಹಾಲಿಂಗೇಶ್ವರ ದೇವಳದ ದೇವರಮಾರು ಗದ್ದೆಯಲ್ಲಿ ಭಾನುವಾರ ಮೊತ್ತಮೊದಲ ಬಾರಿಗೆ ನಡೆದ ಉಚಿತ ಸಾಮೂಹಿಕ ವಿವಾಹದಲ್ಲಿ ೧೬ ಜೋಡಿಗಳು ಸತಿಪತಿಗಳಾದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಜನ್ಮಶತಾಬ್ಧಿ ಹಿನ್ನಲೆಯಲ್ಲಿ ೩ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವದ ಜತೆಗೆ ಈ ಉಚಿತ ಸಾಮೂಹಿಕ ವಿವಾಹ ವ್ಯವಸ್ಥೆ ಮಾಡಲಾಗಿತ್ತು. ವೈದಿಕ ರೀತಿಯಲ್ಲಿ ನಡೆದ ಈ ವಿವಾಹ ಕಾರ್ಯಕ್ರಮದಲ್ಲಿ ಪುರೋಹಿತರುಗಳು ಧಾರ್ಮಿಕ ವಿಧಿವಿದಾನಗಳನ್ನು ನೆರವೇರಿಸಿದರು.

ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ೧೬ ಜೋಡಿಗೆ ‘ಮಾಂಗಲ್ಯಭಾಗ್ಯ Read More »

ಕರ್ನಾಟಕ

ರಬ್ಬರ್ ಮಂಡಳಿಯಿಂದ ವಿವಿಧ ಹುದ್ದೆ: ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,  ಡಿ.01 ಮಂಗಳೂರು: ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ರಬ್ಬರ್ ಮಂಡಳಿಯು ವಿವಿಧ ಹುದ್ದೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ: ಸೈಂಟಿಸ್ಟ್ ಸಿ ಎಗ್ರೋನಮಿ / ಸಾಯ್ಲ್ (1), ಸೈಂಟಿಸ್ಟ್ ಸಿ ಕ್ರಾಪ್ ಮ್ಯಾನೇಜ್ಮೆಂಟ್ (1), ಸೈಂಟಿಸ್ಟ್ ಸಿ ಕ್ರಾಪ್ ಫಿಜಿಯೋಲಜಿ (1), ಸೈಂಟಿಸ್ಟ್ ಸಿ ಜಿನೋಮ್ (1), ಸೈಂಟಿಸ್ಟ್ ಸಿ ರಬ್ಬರ್ ಪೆÇ್ರಸೆಸಿಂಗ್/ ಟೆಕ್ನಾಲಜಿ (1), ಸೈಂಟಿಸ್ಟ್ ಬಿ ಸಾಯಿಲ್ಸ್ (2), ಸೈಂಟಿಸ್ಟ್ ಬಿ ಎಗ್ರೋನಮಿ( 3), ಸೈಂಟಿಸ್ಟ್ ಬಿ ಕ್ರಾಪ್

ರಬ್ಬರ್ ಮಂಡಳಿಯಿಂದ ವಿವಿಧ ಹುದ್ದೆ: ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top