ದೆಹಲಿ – ವಾರಾಣಸಿ ಬಸ್ ಬೆಂಕಿಗಾಹುತಿ – ತಪ್ಪಿದ ದೊಡ್ಡ ದುರಂತ

(ನ್ಯೂಸ್‌ ಕಡಬ) newskadaba.com,  ನ.28: ಮೂವತ್ತರಿಂದ ನಲವತ್ತು ಪ್ರಯಾಣಿಕರನ್ನು ಹೊತ್ತು ಹೊರಟಿದ್ದ ದೆಹಲಿ-ವಾರಾಣಸಿ ಸ್ಲೀಪರ್ ಬಸ್ ಬೆಂಕಿಗಾಹುತಿಯಾಗಿರುವ ಘಟನೆ ನಡೆದಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯವಾಗದೆ ಭಾರಿ ದುರಂತವೊಂದು ತಪ್ಪಿದೆ ಎನ್ನಲಾಗಿದೆ. ಬಸ್ ವಾರಾಣಸಿಗೆ ಹೋಗುತ್ತಿತ್ತು, ಮೇಲಿನ ಡೆಕ್​ನಲ್ಲಿ ಇರಿಸಿಲಾಗಿದ್ದ ಸಾಮಾಗ್ರಿಗಳಿಂದ ಹಠಾತ್ ಹೊಗೆ ಬೆಂಕಿಗೆ ಕಾರಣವಾಗಿತ್ತು. ಬಸ್ ಚಾಲಕ ಮತ್ತು ನಿರ್ವಾಹಕ ಕೂಡಲೇ ಎಚ್ಚರಿಕೆ ನೀಡಿದ್ದರು. ಬಸ್ಸನ್ನು ಪಕ್ಕಕ್ಕೆ ನಿಲ್ಲಿಸಲು ಪ್ರಯತ್ನಿಸಿದರು ಅಷ್ಟರಲ್ಲಾಗಲೇ ಬೆಂಕಿ ಹೊತ್ತಿಕೊಳ್ಳಲು ಶುರುವಾಗಿತ್ತು ಎನ್ನಲಾಗಿದೆ. ಬಸ್ಸಿನ ಮೇಲ್ಛಾವಣಿಯಲ್ಲಿದ್ದ ಭಾರವಾದ ಲಗೇಜಿನಲ್ಲಿ ಮೊದಲು ಬೆಂಕಿ […]

ದೆಹಲಿ – ವಾರಾಣಸಿ ಬಸ್ ಬೆಂಕಿಗಾಹುತಿ – ತಪ್ಪಿದ ದೊಡ್ಡ ದುರಂತ Read More »

ಬ್ರೇಕಿಂಗ್ ನ್ಯೂಸ್

ಡಿ. 4ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ ರಷ್ಯಾ ಅಧ್ಯಕ್ಷ ಪುಟಿನ್

(ನ್ಯೂಸ್‌ ಕಡಬ) newskadaba.com,  ನ.28: ಪ್ರಧಾನಿ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಡಿಸೆಂಬರ್ 4 ಮತ್ತು 5ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ. ಭಾರತ ಭೇಟಿಯ ಸಮಯದಲ್ಲಿ ಪುಟಿನ್ ಪ್ರಧಾನಿ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲಿದ್ದಾರೆ. ಡಿಸೆಂಬರ್ 5ರಂದು ನಡೆಯುವ 23 ನೇ ಭಾರತ-ರಷ್ಯಾ ಸಮ್ಮೇಳನದಲ್ಲಿ ಮೋದಿ ಹಾಗೂ ಪುಟಿನ್ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಈ ವೇಳೆ ಎರಡು ದೇಶಗಳ ಸಂಬಂಧಗಳು ಮತ್ತು ಜಾಗತಿಕ

ಡಿ. 4ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ ರಷ್ಯಾ ಅಧ್ಯಕ್ಷ ಪುಟಿನ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಡುಪಿ : ಪ್ರಧಾನಿ ಪಠಿಸಿದ ಭಗವದ್ಗೀತೆ 15ನೇ ಅಧ್ಯಾಯ – ಮಹತ್ವದ ಸಂದೇಶ

(ನ್ಯೂಸ್‌ ಕಡಬ) newskadaba.com,  ನ.28: ಉಡುಪಿ ನಗರ ಇಂದು ಕೇಸರಿಮಯವಾಗಿದ್ದು, ಮಂತ್ರ ಗೀತಾಕಂಠಗಳ ಉದ್ಘಾರ ಬಹುವಾಗಿ ಕೇಳಿಬರುತ್ತಿತ್ತು. ವಿಶ್ವಗೀತಾ ಪಾರಾಯಣ ವೇದಿಕೆ ಬಳಿ ಭರ್ಜರಿ ಲಕ್ಷಕಂಠ ಭಗವದ್ಗೀತೆ ಪಠಣ ನಡೆಯಿತು, ಸಾವಿರಾರು ಭಕ್ತರು ಭಗವದ್ಗೀತೆ ಶ್ಲೋಕಗಳನ್ನು ಪಠಿಸಿದರು. ಪ್ರಧಾನಿಯವರೊಂದಿಗೆ ಸ್ಥಳೀಯ ಬಿಜೆಪಿ ನಾಯಕರು ಕೂಡ ಭಾಗವಹಿಸಿದ್ದರು. ರೋಡ್ ಶೋ ಮುಗಿಸಿ ಶ್ರೀಕೃಷ್ಣದ ದರ್ಶನ ಪಡೆದ ಪ್ರಧಾನಿ ನರೇಂದ್ರ ಮೋದಿ ಮಧ್ಯಾಹ್ನ 12.15ಕ್ಕೆ ವೇದಿಕೆಯ ಬಳಿ ಬಂದು ʻಪುರುಷೋತ್ತಮ ಯೋಗʼ ಎನ್ನುವ 15ನೇ ಅಧ್ಯಾಯದ ಶ್ಲೋಕ ಪಠಿಸಿದರು. ಈ

ಉಡುಪಿ : ಪ್ರಧಾನಿ ಪಠಿಸಿದ ಭಗವದ್ಗೀತೆ 15ನೇ ಅಧ್ಯಾಯ – ಮಹತ್ವದ ಸಂದೇಶ Read More »

ಕರಾವಳಿ

ದೇಶದ ಮೊದಲ ಖಾಸಗಿ ವಾಣಿಜ್ಯ ರಾಕೆಟ್ ವಿಕ್ರಂ–1 ಅನಾವರಣ

(ನ್ಯೂಸ್‌ ಕಡಬ) newskadaba.com,  ನ.28: ಹೈದರಾಬಾದ್ ಮೂಲದ ಸ್ಟಾರ್ಟ್‌ಅಪ್ ‘ಸ್ಕೈರೂಟ್ ಏರೋಸ್ಪೇಸ್’ ನಿರ್ಮಿಸಿರುವ ಭಾರತದ ಮೊದಲ ಖಾಸಗಿ ವಾಣಿಜ್ಯ ರಾಕೆಟ್‌ ವಿಕ್ರಂ–1 ಅನ್ನು ಪ್ರಧಾನಿ ನರೇಂದ್ರ ಮೋದಿ ಗುರುವಾರ ವರ್ಚುವಲ್ ರೀತಿಯಲ್ಲಿ ಅನಾವರಣಗೊಳಿಸಿದರು. ಜೊತೆಗೆ, ಸಂಸ್ಥೆಯ ನೂತನ ಮತ್ತು ಬೃಹತ್‌ ಕ್ಯಾಂಪಸ್‌ವನ್ನೂ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪ್ರಧಾನಿ ಮೊದಲ ಬಾರಿಗೆ ‘ಜೆನ್–ಝೀ’ ಎಂಬ ಪದವನ್ನು ಬಳಸುತ್ತಾ, ರಾಕೆಟ್ ನಿರ್ಮಾಣದಲ್ಲಿ ತೊಡಗಿದ್ದ ಯುವ ಇಂಜಿನಿಯರ್‌ಗಳು, ವಿನ್ಯಾಸಕರು ಮತ್ತು ವಿಜ್ಞಾನಿಗಳ ಸೃಜನಶೀಲತೆಯನ್ನು ಮೆಚ್ಚಿಕೊಂಡರು. “ಭಾರತದ ಜೆನ್–ಝೀ ಪೀಳಿಗೆಯವರು ಹೊಸತನಕ್ಕೆ ದಾರಿ

ದೇಶದ ಮೊದಲ ಖಾಸಗಿ ವಾಣಿಜ್ಯ ರಾಕೆಟ್ ವಿಕ್ರಂ–1 ಅನಾವರಣ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಡುಪಿ : ಸ್ವರ್ಣಕವಚದ ಕನಕನಕಿಂಡಿಯಿಂದ ಪೊಡವಿಗೊಡೆಯನ ಕಣ್ತುಂಬಿಕೊಂಡ ಪ್ರಧಾನಿ ಮೋದಿ

(ನ್ಯೂಸ್‌ ಕಡಬ) newskadaba.com,  ನ.28: ಪ್ರಧಾನಿ ನರೇಂದ್ರ ಮೋದಿ ಉಡುಪಿಯ ಪ್ರಸಿದ್ಧ ಕೃಷ್ಣ ಮಠಕ್ಕೆ ಭೇಟಿ ನೀಡಿದರು. ಈ ವೇಳೆ ಅವರು ಕನಕನ ಕಿಂಡಿಯ ಮೂಲಕ ಶ್ರೀ ಕೃಷ್ಣನ ದರ್ಶನ ಪಡೆದಿದ್ದಾರೆ. ಪ್ರಧಾನಿಯವರು ಮಠದ ಪ್ರಮುಖ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದು, ವಿಶೇಷವಾಗಿ ಸ್ವರ್ಣ ಲೇಪಿತ ಮಂಟಪದ ಉದ್ಘಾಟನೆ ಕೂಡ ನೆರವೇರಿಸಿದರು. ಉದ್ಘಾಟನೆಯ ಸಂದರ್ಭದಲ್ಲಿ ಮಠಾಧೀಶರು ಹಾಗೂ ಗಣ್ಯರು ಉಪಸ್ಥಿತರಿದ್ದರು. ಮೋದಿಯವರು ನಂತರ ಮುಖ್ಯಪ್ರಾಣ ದೇವರ ಗರುಡ ದರ್ಶನ ಮತ್ತು ಮಠದ ವಿವಿಧ ಗುಡಿಗಳ ದರ್ಶನ ಪಡೆದರು. ಈ ಸಂದರ್ಭದಲ್ಲಿ

ಉಡುಪಿ : ಸ್ವರ್ಣಕವಚದ ಕನಕನಕಿಂಡಿಯಿಂದ ಪೊಡವಿಗೊಡೆಯನ ಕಣ್ತುಂಬಿಕೊಂಡ ಪ್ರಧಾನಿ ಮೋದಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಶೇಖ್ ಹಸೀನಾಗೆ 21 ವರ್ಷ ಜೈಲು ಶಿಕ್ಷೆ ವಿಧಿಸಿದ ಢಾಕಾ ಕೋರ್ಟ್

(ನ್ಯೂಸ್‌ ಕಡಬ) newskadaba.com,  ನ.28: ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ವಿರುದ್ಧ ದಾಖಲಾದ ಮೂರು ಭ್ರಷ್ಟಾಚಾರ ಪ್ರಕರಣಗಳಲ್ಲಿ ಢಾಕಾ ಕೋರ್ಟ್ 21 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಸಂಚು, ವಂಚನೆಯ ಮೂರು ಪ್ರಕರಣಗಳನ್ನು ವಿಚಾರಣೆ ನಡೆಸಿದ ಕೋರ್ಟ್ ತಲಾ 7 ವರ್ಷಗಳಂತೆ 21 ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಶೇಖ್ ಹಸೀನಾ ಪುತ್ರ, ಪುತ್ರಿಗೂ 5 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಢಾಕಾದ ಪುರ್ಬಾಚಲ್ ಪ್ರದೇಶದಲ್ಲಿ ಸರ್ಕಾರಿ ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿದ

ಶೇಖ್ ಹಸೀನಾಗೆ 21 ವರ್ಷ ಜೈಲು ಶಿಕ್ಷೆ ವಿಧಿಸಿದ ಢಾಕಾ ಕೋರ್ಟ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಳ್ಳಾರಿ: ಅಪರೂಪದ ಸೂರ್ಯ- ಬ್ರಹ್ಮ ವಿಗ್ರಹ ಪತ್ತೆ!

(ನ್ಯೂಸ್‌ ಕಡಬ) newskadaba.com,  ನ.28: ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ಮುದ್ದೇನೂರು ಗ್ರಾಮದ ಬಳಿ ವಿಜಯನಗರ ಪರಂಪರೆ ಪರಿಶೋಧನಾ ಗುಂಪಿನ ಸಂಶೋಧನಾ ತಂಡವು ಸೂರ್ಯ (ಸೂರ್ಯ ದೇವರು) ನ ಕಪ್ಪು ಶಿಲೆಯ ಶಿಲ್ಪ ಮತ್ತು ಬ್ರಹ್ಮನ ಅಪರೂಪದ ವಿಗ್ರಹವನ್ನು ಪತ್ತೆ ಹಚ್ಚಿದೆ. ಗ್ರಾಮಕ್ಕೆ ಹೋಗುವ ರಸ್ತೆಯ ಉದ್ದಕ್ಕೂ ಇರುವ ಮೌನೇಶ್ ಎಂಬುವವರಿಗೆ ಸೇರಿದ ಹೊಲದ ಅಂಚಿನಲ್ಲಿ ಈ ವಿಗ್ರಹಗಳು ಕಂಡುಬಂದಿವೆ. ಕಪ್ಪು ಕಲ್ಲಿನಿಂದ ಕೆತ್ತಿದ ಈ ಶಿಲ್ಪಗಳನ್ನು ಸ್ಥಳೀಯ ನಿವಾಸಿಗಳಾದ ಹನುಮಂತಪ್ಪ, ಜಡೇಶ್ ಮತ್ತು ಬಲ್ಕುಂಡಿ ಗ್ರಾಮದ

ಬಳ್ಳಾರಿ: ಅಪರೂಪದ ಸೂರ್ಯ- ಬ್ರಹ್ಮ ವಿಗ್ರಹ ಪತ್ತೆ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಪಣಂಬೂರು ಬೀಚ್ನಲ್ಲಿ ಕದ್ದಿದ್ದ 3.33 ಲಕ್ಷ ರೂ. ಮೌಲ್ಯದ ವಸ್ತುಗಳು ಪೊಲೀಸ್ ವಶಕ್ಕೆ

(ನ್ಯೂಸ್‌ ಕಡಬ) newskadaba.com,  ನ.28: ಪಣಂಬೂರು ಬೀಚ್‌ನಲ್ಲಿ ವರದಿಯಾಗಿದ್ದ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ನವೆಂಬರ್ 24 ರಂದು ಕಳುವಾಗಿದ್ದ 3.33 ಲಕ್ಷ ರೂ. ಮೌಲ್ಯದ ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪಣಂಬೂರು ಪೊಲೀಸ್ ಠಾಣೆ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯ ಪ್ರಕಾರ, ನವೆಂಬರ್ 24 ರಂದು, ಸ್ವಾತಿ ನಂದಿಪಲ್ಲಿ (24) ತನ್ನ ಸ್ನೇಹಿತ ರೋಹಿತ್ ವೆಮ್ಮಲೆಟ್ಟಿ ಜೊತೆ ಪಣಂಬೂರು ಬೀಚ್‌ಗೆ ಭೇಟಿ ನೀಡಿದ್ದರು. ಈಜಲು ಸಮುದ್ರಕ್ಕೆ ಇಳಿಯುವ ಮೊದಲು, ಅವರು ತಮ್ಮ ವಸ್ತುಗಳನ್ನು ಕಪ್ಪು

ಮಂಗಳೂರು: ಪಣಂಬೂರು ಬೀಚ್ನಲ್ಲಿ ಕದ್ದಿದ್ದ 3.33 ಲಕ್ಷ ರೂ. ಮೌಲ್ಯದ ವಸ್ತುಗಳು ಪೊಲೀಸ್ ವಶಕ್ಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬೀದಿ ನಾಯಿಗಳ ಹಾವಳಿ: ಸುಪ್ರೀಂಕೋರ್ಟ್ ಆದೇಶ ಬೆನ್ನಲ್ಲೇ ಎಚ್ಚೆತ್ತ GBA, ಸರ್ಕಾರಿ ಸಂಸ್ಥೆಗಳಿಗೆ ಸಂಸ್ಥೆಗಳಿಗೆ ನೋಟಿಸ್..!

(ನ್ಯೂಸ್‌ ಕಡಬ) newskadaba.com,  ನ.28: ಬೆಂಗಳೂರು: ಬೀದಿ ನಾಯಿಗಳ ಹಾವಳಿ ಕುರಿತು ಸುಪ್ರೀಂಕೋರ್ಟ್ ಆದೇಶ ನೀಡಿರುವ ಬೆನ್ನಲ್ಲೇ ಎಚ್ಚೆತ್ತ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಬೀದಿ ನಾಯಿಗಳ ಮಾಹಿತಿಗಳನ್ನು ಸಂಗ್ರಹಿಸಲು ಐದೂ ನಗರ ಪಾಲಿಕೆಗಳು ವಿವಿಧ ಇಲಾಖೆಗಳು ಹಾಗೂ ಸರ್ಕಾರಿ ಸಂಸ್ಥೆಗಳಿಗೆ ನೋಟಿಸ್‌ ಜಾರಿ ಮಾಡಿವೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರ ರಾವ್ ಅವರು ಮಾತನಾಡಿ, ರಾಜ್ಯ ಸರ್ಕಾರಿ ಕಚೇರಿ ಆವರಣದಲ್ಲಿರುವ ಬೀದಿ ನಾಯಿಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸುವುದಾಗಿ ಹೇಳಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದಂತೆ ಗ್ರೇಟರ್

ಬೀದಿ ನಾಯಿಗಳ ಹಾವಳಿ: ಸುಪ್ರೀಂಕೋರ್ಟ್ ಆದೇಶ ಬೆನ್ನಲ್ಲೇ ಎಚ್ಚೆತ್ತ GBA, ಸರ್ಕಾರಿ ಸಂಸ್ಥೆಗಳಿಗೆ ಸಂಸ್ಥೆಗಳಿಗೆ ನೋಟಿಸ್..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶ್ರೀಲಂಕಾ: ಭಾರೀ ಮಳೆ, ಪ್ರವಾಹ, ಭೂಕುಸಿತಕ್ಕೆ 50 ಕ್ಕೂ ಹೆಚ್ಚು ಮಂದಿ ಸಾವು

(ನ್ಯೂಸ್‌ ಕಡಬ) newskadaba.com,  ನ.28: ಶ್ರೀಲಂಕಾದಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದ ಪರಿಸ್ಥಿತಿ ತೀರಾ ಹದಗೆಟ್ಟಿದ್ದು, ಪ್ರವಾಹ ಮತ್ತು ಭೂಕುಸಿತಗಳಿಂದ ಇಲ್ಲಿವರೆಗೆ 50ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಳೆಯಿಂದ 600 ಕ್ಕೂ ಹೆಚ್ಚು ಮನೆಗಳು ಹಾನಿಗೊಳಗಾಗಿವೆ, ಹೆಚ್ಚುತ್ತಿರುವ ವಿಪತ್ತು ಹಿನ್ನೆಲೆಯಲ್ಲಿ, ಶ್ರೀಲಂಕಾ ಸರ್ಕಾರ ಶುಕ್ರವಾರ ಎಲ್ಲಾ ಸರ್ಕಾರಿ ಕಚೇರಿಗಳು ಮತ್ತು ಶಾಲೆಗಳಿಗೆ ರಜೆ ಘೋಷಣೆ ಮಾಡಿದೆ. ಕಳೆದ ವಾರದಿಂದಲೇ ಹವಾಮಾನ ವೈಪರೀತ್ಯಗೊಂಡಿದ್ದು, ಗುರುವಾರದಿಂದ ಮಳೆ ಪ್ರಮಾಣ ತೀವ್ರವಾಗಿ

ಶ್ರೀಲಂಕಾ: ಭಾರೀ ಮಳೆ, ಪ್ರವಾಹ, ಭೂಕುಸಿತಕ್ಕೆ 50 ಕ್ಕೂ ಹೆಚ್ಚು ಮಂದಿ ಸಾವು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top