ಸಾರ್ವಜನಿಕರಿಗೆ ಭರ್ಜರಿ ಶುಭಸುದ್ದಿ; ತೈಲ ಖರೀದಿ ಹೆಚ್ಚಿಸಿದ ಕೇಂದ್ರ ಸರ್ಕಾರ! ಅಡುಗೆ ಎಣ್ಣೆ ಬೆಲೆಯಲ್ಲಿ ಇಳಿಕೆ

(ನ್ಯೂಸ್‌ ಕಡಬ) newskadaba.com,  ನ.15 : ಕೇಂದ್ರ ಸರ್ಕಾರ ತೈಲ ಖರೀದಿಯನ್ನು ಹೆಚ್ಚಿಸಿದ ಹಿನ್ನೆಲೆಯಲ್ಲಿ ಅಡುಗೆ ಎಣ್ಣೆ ಬೆಲೆಯಲ್ಲಿ ದೇಶಾದ್ಯಂತ ಭಾರೀ ಇಳಿಕೆ ದಾಖಲಾಗಿದೆ. ಕಳೆದ ಕೆಲವು ವಾರಗಳಿಂದ ಏರಿಳಿತ ಕಂಡಿದ್ದ ಎಣ್ಣೆ ದರಗಳು ಈಗ ಸಾಮಾನ್ಯ ಜನರಿಗೆ ಸಿಹಿಸುದ್ದಿ ತಂದಿವೆ. ಅಂತರರಾಷ್ಟ್ರೀಯ ಮಾರುಕಟ್ಟೆಯ ಕುಸಿತವೂ ದೇಶೀಯ ಬೆಲೆಗಳ ಮೇಲೆ ನೇರ ಪರಿಣಾಮ ಬೀರಿದೆ. ಭಾರತವು 2024-25ರಲ್ಲಿ ಒಟ್ಟು 16 ಮಿಲಿಯನ್ ಟನ್ ಅಡುಗೆ ಎಣ್ಣೆಯನ್ನು ಆಮದು ಮಾಡಿಕೊಂಡಿದ್ದು, ಇದು ಹಿಂದಿನ ವರ್ಷದ 15.96 ಮಿಲಿಯನ್ ಟನ್‌ಗಿಂತ […]

ಸಾರ್ವಜನಿಕರಿಗೆ ಭರ್ಜರಿ ಶುಭಸುದ್ದಿ; ತೈಲ ಖರೀದಿ ಹೆಚ್ಚಿಸಿದ ಕೇಂದ್ರ ಸರ್ಕಾರ! ಅಡುಗೆ ಎಣ್ಣೆ ಬೆಲೆಯಲ್ಲಿ ಇಳಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಬಿ.ಸಿ.ರೋಡ್ ನಲ್ಲಿ ಭೀಕರ ಅಪಘಾತ; ಮೂವರು ಸಾವು, 6 ಮಂದಿಗೆ ಗಂಭೀರ ಗಾಯ

(ನ್ಯೂಸ್‌ ಕಡಬ) newskadaba.com,  ನ.15: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರು ನಿವಾಸಿಗಳಾದ ರವಿ (64), ನಂಜಮ್ಮ (75) ಹಾಗೂ ರಮ್ಯಾ (23) ದಾರುಣವಾಗಿ ಮೃತಪಟ್ಟವರು. ಗಾಯಾಳುಗಳನ್ನು ಸುಶೀಲ, ಕೀರ್ತಿ ಕುಮಾರ್, ಕಿರಣ್, ಬಿಂದು, ಪ್ರಶಾಂತ್ ಹಾಗೂ ಚಾಲಕ ಸುಬ್ರಹ್ಮಣ್ಯ ಎಂದು ಗುರುತಿಸಲಾಗಿದ್ದು, ಚಿಂತಾಜಕನಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಶನಿವಾರ ಮುಂಜಾನೆ ಸುಮಾರು 5 ಗಂಟೆ ವೇಳೆಗೆ,

ಬಂಟ್ವಾಳ: ಬಿ.ಸಿ.ರೋಡ್ ನಲ್ಲಿ ಭೀಕರ ಅಪಘಾತ; ಮೂವರು ಸಾವು, 6 ಮಂದಿಗೆ ಗಂಭೀರ ಗಾಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರಿನಲ್ಲಿ ಬೀದಿ ನಾಯಿಗಳ ದಾಳಿಗೆ ವ್ಯಕ್ತಿ ಬಲಿ, ಕಣ್ಣುಗುಡ್ಡೆಯನ್ನೇ ಕಿತ್ತು ಹಾಕಿದ್ದ ನಾಯಿ…!

(ನ್ಯೂಸ್‌ ಕಡಬ) newskadaba.com,  ನ.15 ಮಂಗಳೂರು: ಮಂಗಳೂರಿನಲ್ಲಿ ಬೀದಿನಾಯಿ ದಾಳಿಗೆ ವ್ಯಕ್ತಿಯೊಬ್ಬರು ಸಾವಿಗೀಡಾದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.ಕುಂಪಲ ಗ್ರಾಮದ ನಿವಾಸಿ ದಯಾನಂದ (60) ಮೃತ ವ್ಯಕ್ತಿ. ಜನ ವಸತಿ ಪ್ರದೇಶದಲ್ಲಿ ರಕ್ತಸಿಕ್ತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಇದನ್ನು ಕಂಡ ಸ್ಥಳೀಯರು ಕೊಲೆ ಎಂದು ಆತಂಕಕ್ಕೊಳಗಾಗಿದ್ದಾರೆ. ಮೃತ ದಯಾನಂದ ಅವರ ದೇಹದ ಮೇಲೆ ರಕ್ತದ ಕಲೆಗಳು ಕಂಡು ಬಂದಿದ್ದು, ದೇಹದ ಮೇಲೆ ಆಳವಾದ ಗಾಯಗಳು, ಹಾಗೂ ಕಣ್ಣಿನ ಗುಡ್ಡೆ ಕಿತ್ತಿರುವುದು ಪತ್ತೆಯಾಗಿದೆ.ಬೆಳಗಿನ ಜಾವ 3 ಗಂಟೆ ಸುಮಾರಿಗೆ

ಮಂಗಳೂರಿನಲ್ಲಿ ಬೀದಿ ನಾಯಿಗಳ ದಾಳಿಗೆ ವ್ಯಕ್ತಿ ಬಲಿ, ಕಣ್ಣುಗುಡ್ಡೆಯನ್ನೇ ಕಿತ್ತು ಹಾಕಿದ್ದ ನಾಯಿ…! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನ ಪ್ರಿಯರಿಗಾಗಿ ಮತ್ತೆ ಶುಭಸುದ್ಧಿ

(ನ್ಯೂಸ್‌ ಕಡಬ) newskadaba.com,  ನ.15 : ಚಿನ್ನ ಪ್ರಿಯರಿಗೆ ಇಂದು ದೊಡ್ಡ ಸಿಹಿಸುದ್ದಿ. ಹಿಂದಿನ ದಿನಕ್ಕಿಂತ ಚಿನ್ನದ ಬೆಲೆ ಹಲವು ಸಾವಿರ ರೂಪಾಯಿಗಳಷ್ಟು ಕುಸಿದಿದ್ದು, ಮಾರುಕಟ್ಟೆಯಲ್ಲಿ ಹೊಸ ಚಲನವಲನಕ್ಕೆ ಕಾರಣವಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕಂಡುಬಂದ ಭಾರೀ ಇಳಿಕೆ ದೇಶೀಯ ಚಿನ್ನದ ದರಗಳ ಮೇಲೂ ನೇರ ಪರಿಣಾಮ ಬೀರಿದೆ. ಇಂದು ಬೆಳಿಗ್ಗೆ 10 ಗಂಟೆಯ ನಂತರ ದರ ಇನ್ನೂ ಇಳಿಯುವ ಸಾಧ್ಯತೆ ಇದೆ… ಅಮೆರಿಕದಲ್ಲಿ 43 ದಿನಗಳ ಕಾಲ ಮುಂದುವರಿದ ಸರ್ಕಾರದ ಸ್ಥಗಿತವನ್ನು ಟ್ರಂಪ್ ಸರ್ಕಾರ ಕೊನೆಗೊಳಿಸಿರುವುದು ಮಾರುಕಟ್ಟೆಗಳಲ್ಲಿ

ಚಿನ್ನ ಪ್ರಿಯರಿಗಾಗಿ ಮತ್ತೆ ಶುಭಸುದ್ಧಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ನ.15 ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನವೆಂಬರ್ 17ರಿಂದ ಎರಡು ದಿನಗಳ ಕಾಲ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಸಾಧಾರಣ ಮಳೆಯಾಗಲಿದೆ ಎನ್ನುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು,

ಇಂದಿನ ಹವಾಮಾನ ವರದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸರ್ಕಾರಿ ಗೌರವದೊಂದಿಗೆ ಸಾಲುಮರದ ತಿಮ್ಮಕ್ಕ ಅಂತ್ಯಕ್ರಿಯೆ: ಸಿಎಂ ಸಿದ್ದರಾಮಯ್ಯ

(ನ್ಯೂಸ್‌ ಕಡಬ) newskadaba.com,  ನ.15 ಬೆಂಗಳೂರು :ಪದ್ಮಶ್ರೀ ಪುರಸ್ಕೃತ ಸಾಲು ಮರದ ತಿಮ್ಮಕ್ಕ ಅವರ ಮರಣದಿಂದ ತೀವ್ರ ದುಃಖ ಉಂಟಾಗಿದೆ. ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ತಿಮ್ಮಕ್ಕ ಅವರ ಕೊನೇ ಆಸೆಯ ಪತ್ರ ಕೊಟ್ಟಿದ್ದಾರೆ. ಬೇಲೂರಿನಲ್ಲಿ ತಿಮ್ಮಕ್ಕ ವಸ್ತು ಸಂಗ್ರಹಾಲಯ ಮಾಡಬೇಕು ಎಂದು ಆ ಪತ್ರದಲ್ಲಿದೆ. ಈ ಕುರಿತು ಸರ್ಕಾರ ಪರಿಶೀಲಿಸಿ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರ ಆತ್ಮಕ್ಕೆ ಶಾಂತಿ ದೊರಕಲಿ,

ಸರ್ಕಾರಿ ಗೌರವದೊಂದಿಗೆ ಸಾಲುಮರದ ತಿಮ್ಮಕ್ಕ ಅಂತ್ಯಕ್ರಿಯೆ: ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮುಂದಿನ ಶೈಕ್ಷಣಿಕ ವರ್ಷದಿಂದ, ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್‌ ಶಾಲೆಯ ಪಿಯುಸಿ ವಿದ್ಯಾರ್ಥಿಗಳಿಗೂ ಬಿಸಿಯೂಟ ಯೋಜನೆ ವಿಸ್ತರಣೆ..

(ನ್ಯೂಸ್‌ ಕಡಬ) newskadaba.com,  ನ.15 ಬೆಂಗಳೂರು: ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು puc ವಿದ್ಯಾರ್ಥಿಗಳಿಗೂ ವಿಸ್ತರಿಸುವುದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶುಕ್ರವಾರ ಭರವಸೆ ನೀಡಿದ್ದಾರೆ. ವಿಧಾನಸೌಧದಲ್ಲಿ ಶುಕ್ರವಾರ ಆಯೋಜಿಸಿದ್ದ ರಾಜ್ಯಮಟ್ಟದ ಮಕ್ಕಳ ದಿನಾಚರಣೆ ಹಾಗೂ ಪೋಷಕ–ಶಿಕ್ಷಕರ ಸಭೆಯಲ್ಲಿ ನಡೆದ ಸಂವಾದದಲ್ಲಿ ಬೆಳಗಾವಿ ಜಿಲ್ಲೆ ಬೈಲಹೊಂಗಲದ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿ ರಾಕೇಶ್‌ ಪ್ರಶ್ನೆಗೆ ಉತ್ತರಿಸಿದ ಅವರು, ಪಿಯು ಕಾಲೇಜುಗಳಿಗೂ ಮಧ್ಯಾಹ್ನದ ಬಿಸಿಯೂಟ ಒದಗಿಸಬೇಕಿದ್ದರೆ ಬಜೆಟ್‌ನಲ್ಲೇ ಘೊಷಣೆ ಮಾಡಬೇಕು. ಮುಂದಿನ ಶೈಕ್ಷಣಿಕ ವರ್ಷದಿಂದ, ರಾಜ್ಯಾದ್ಯಂತ ಕರ್ನಾಟಕ

ಮುಂದಿನ ಶೈಕ್ಷಣಿಕ ವರ್ಷದಿಂದ, ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್‌ ಶಾಲೆಯ ಪಿಯುಸಿ ವಿದ್ಯಾರ್ಥಿಗಳಿಗೂ ಬಿಸಿಯೂಟ ಯೋಜನೆ ವಿಸ್ತರಣೆ.. Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ ಠಾಣಾ ಸಬ್ ಇನ್ಸ್‌ಪೆಕ್ಟರ್ ಅಭಿನಂದನ್ ಎಂ.ಎಸ್. ವರ್ಗಾವಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ.14. ಪಶ್ಚಿಮ ವಲಯದಲ್ಲಿ ಕಳೆದ ಕೆಲವು ಸಮಯಗಳಿಂದ ಕರ್ತವ್ಯದಲ್ಲಿದ್ದ ಮೂವರು ಉಪ ನಿರೀಕ್ಷಕರನ್ನು ವರ್ಗಾವಣೆಗೊಳಿಸಿ ಪಶ್ಚಿಮ ವಲಯ ಐಜಿಪಿಯವರು ಆದೇಶಿಸಿದ್ದಾರೆ. ಕಡಬ ಠಾಣಾ ಸಬ್ ಇನ್ಸ್‌ಪೆಕ್ಟರ್ ಆಗಿ ಕರ್ತವ್ಯದಲ್ಲಿದ್ದ ಅಭಿನಂದನ್ ಎಂ.ಎಸ್. ರವರನ್ನು ವರ್ಗಾವಣೆಗೊಳಿಸಲಾಗಿದ್ದು, ಕಡಬ ಠಾಣೆಯ ನೂತನ ಎಸ್ಐ ಆಗಿ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಜಂಬೂರಾಜ್ ಮಹಾಜನ್ ರನ್ನು ನಿಯೋಜಿಸಲಾಗಿದೆ. ಬಂಟ್ವಾಳ ಠಾಣೆಯ ಗುಣಪಾಲ ಜೆ. ಯವರನ್ನು ಪುತ್ತೂರು ಗ್ರಾಮಾಂತರ ಠಾಣಾ ಎಸ್ಐ ಆಗಿ ವರ್ಗಾಯಿಸಲಾಗಿದೆ.

ಕಡಬ ಠಾಣಾ ಸಬ್ ಇನ್ಸ್‌ಪೆಕ್ಟರ್ ಅಭಿನಂದನ್ ಎಂ.ಎಸ್. ವರ್ಗಾವಣೆ Read More »

ಕರ್ನಾಟಕ

ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶ: ಬಿಜೆಪಿ ಸಂಭ್ರಮಾಚರಣೆ

(ನ್ಯೂಸ್‌ ಕಡಬ) newskadaba.com,  ನ.14:   ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದ ಬಳಿ ಇಂದು ಮಧ್ಯಾಹ್ನ ಬಿಹಾರ ವಿಧಾನಸಭಾ ಚುನಾವಣೆಯ ಅದ್ಭುತ ಗೆಲುವಿನ ಸಂಭ್ರಮಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ರಾಜ್ಯಸಭಾ ಸದಸ್ಯ ಲೇಹರ್ ಸಿಂಗ್ ಸಿರೋಯಾ, ಶಾಸಕ ಡಾ. ಚಂದ್ರು ಲಮಾಣಿ, ಸಿಮೆಂಟ್ ಮಂಜುನಾಥ್, ಮಾಜಿ ಶಾಸಕ ಎಂ.ಡಿ. ಲಕ್ಷ್ಮೀನಾರಾಯಣ್,

ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶ: ಬಿಜೆಪಿ ಸಂಭ್ರಮಾಚರಣೆ Read More »

ರಾಷ್ಟ್ರೀಯ ನ್ಯೂಸ್

ತಮಿಳುನಾಡು: ಭಾರತೀಯ ವಾಯುಪಡೆಯ ವಿಮಾನ ಪತನ

(ನ್ಯೂಸ್‌ ಕಡಬ) newskadaba.com,  ನ.14:   ಭಾರತೀಯ ವಾಯುಪಡೆಗೆ ಸೇರಿದ Pilatus PC-7 ವಿಮಾನ ತಮಿಳುನಾಡಿನಲ್ಲಿ ಪತನವಾಗಿದೆ. ಚೆಂಗಳಪಟ್ಟು ಜಿಲ್ಲೆಯ ತಾಂಬರಂನಲ್ಲಿ ವಿಮಾನ ಪತನವಾಗಿದ್ದು, ಯಾವುದೇ ಅಪಾಯವಿಲ್ಲದೆ ಪೈಲಟ್‌ ಪಾರಾಗಿದ್ದಾರೆ. ದೈನಂದಿನ ತರಬೇತಿ ವೇಳೆ ಈ ಅವಘಡ ಸಂಭವಿಸಿದೆ. ವಿಮಾನ ಪತನವಾದ ಸ್ಥಳದಲ್ಲಿ ಸಾರ್ವಜನಿಕರು ಗುಂಪುಗೂಡಿರುವ ವಿಡಿಯೊ ವೈರಲ್‌ ಆಗಿದೆ. ಅಪಘಾತಕ್ಕೀಡಾದ ವಿಮಾನವು ಪಿಸಿ-7 ಪಿಲಾಟಸ್ ಆಗಿದ್ದು, ಇದು ವಾಯುಪಡೆಯ ಕೆಡೆಟ್‌ಗಳಿಗೆ ಆರಂಭಿಕ ಹಾರಾಟ ತರಬೇತಿ ನೀಡುತ್ತದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯ ಅಧಿಕಾರಿಗಳು ಮತ್ತು ವಾಯು ಪಡೆಯ

ತಮಿಳುನಾಡು: ಭಾರತೀಯ ವಾಯುಪಡೆಯ ವಿಮಾನ ಪತನ Read More »

ಬ್ರೇಕಿಂಗ್ ನ್ಯೂಸ್
Scroll to Top