ಮಾಲಿಯಲ್ಲಿ ಬಂದೂಕುಧಾರಿಗಳಿಂದ ಐವರು ಭಾರತೀಯರ ಅಪಹರಣ

(ನ್ಯೂಸ್‌ ಕಡಬ) newskadaba.com,  ನ.08: ಪಶ್ಚಿಮ ಮಾಲಿಯ ಕೋಬ್ರಿಯಲ್ಲಿ ಭಾರತೀಯ ಮೂಲದ ಐವರು ಕಾರ್ಮಿಕರನ್ನು ಬಂದೂಕುಧಾರಿಗಳು ಅಪಹರಿಸಿದ್ದಾರೆ. ಹೆಚ್ಚುತ್ತಿರುವ ಅಶಾಂತಿ ಮತ್ತು ಜಿಹಾದಿ ಹಿಂಸಾಚಾರದ ನಡುವೆ ಈ ಅಪಹರಣ ನಡೆದಿದೆ ಎನ್ನಲಾಗಿದೆ. ಗುರುವಾರ ಕಾರ್ಮಿಕರನ್ನು ಬಂದೂಕುಧಾರಿಗಳು ಅಪಹರಿಸಿದ್ದಾರೆ. ಅವರೆಲ್ಲ ವಿದ್ಯುತ್ ಯೋಜನೆಯ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಐವರು ಕಿಡ್ನ್ಯಾಪ್‌ ಆಗಿರುವ ಬಗ್ಗೆ ಕಂಪನಿ ಮತ್ತು ಭದ್ರತಾ ಮೂಲಗಳು ದೃಢಪಡಿಸಿವೆ. ಇಲ್ಲಿಯವರೆಗೆ ಯಾವುದೇ ಗುಂಪು ಅಪಹರಣದ ಹೊಣೆ ಹೊತ್ತುಕೊಂಡಿಲ್ಲ ಎಂದು ವರದಿಯಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ […]

ಮಾಲಿಯಲ್ಲಿ ಬಂದೂಕುಧಾರಿಗಳಿಂದ ಐವರು ಭಾರತೀಯರ ಅಪಹರಣ Read More »

ಅಂತರ್ರಾಷ್ಟ್ರೀಯ ನ್ಯೂಸ್

ಮರ್ಧಾಳ ಅಲ್ ಹಿದಾಯ ಇಂಟರ್ನ್ಯಾಷನಲ್ ಪ್ರವಾಸಿ ಸಂಘಟನೆ ಗೆ ಸರಕಾರದ ರಿಜಿಸ್ಟರ್ ಮಾನ್ಯತೆ

(ನ್ಯೂಸ್‌ ಕಡಬ) newskadaba.com,  ನ.08 ಕಡಬ:- ಮರ್ಧಾಳ ಆಸುಪಾಸಿನ ಗ್ರಾಮಗಳ ನಿವಾಸಿಗಳಾಗಿ ಉದ್ಯೋಗ ನಿಮಿತ್ತ ಹಲವು ಗಲ್ಫ್ ರಾಷ್ಟ್ರೀಗಳು,ಮತ್ತು ಇಂಗ್ಲೆಂಡ್ ಗಳಲ್ಲಿ ಅನಿವಾಸಿ ಭಾರತೀಯರಾಗಿದ್ದು ಕೊಂಡು ತಮ್ಮ ಊರಿನ ಸರ್ವ ತೋಮುಖ  ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಪ್ರವಾಸಿಗರ ಸಂಘಟನೆ ಅಲ್ ಹಿದಾಯ ಇಂಟರ್ನ್ಯಾಷನಲ್ ಚಾರಿಟೇಬಲ್ ಟ್ರಸ್ಟ್ ಮರ್ಧಾಳ(ರಿ). ಕೆಲವು ವರ್ಷ ನುಸ್ರತುಲ್ ಇಸ್ಲಾಂ ಇಂಟೆರ್ ನ್ಯಾಷನಲ್ ಯೂತ್ ಫೆಡರೇಶನ್ ಎಂಬ ಹೆಸರಿನಲ್ಲಿ ಕಾರ್ಯಚರಿಸಿ, ತಮ್ಮ ಸೇವೆಯ ವಿಸ್ತಾರ ಹಾಗೂ ಆಡಳಿತಾತ್ಮಕ ಸಂಯೋಜನೆಗೋಸ್ಕರ ಅಲ್ ಹಿದಾಯ ಇಂಟರ್ನ್ಯಾಷನಲ್ ಚಾರಿಟೇಬಲ್ ಟ್ರಸ್ಟ್

ಮರ್ಧಾಳ ಅಲ್ ಹಿದಾಯ ಇಂಟರ್ನ್ಯಾಷನಲ್ ಪ್ರವಾಸಿ ಸಂಘಟನೆ ಗೆ ಸರಕಾರದ ರಿಜಿಸ್ಟರ್ ಮಾನ್ಯತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬದಲ್ಲಿ ನೂತನ ‘ಕ್ರಿಶ್ಚಿಯನ್ ಲೈಟ್ನಿಂಗ್ ಕ್ಲಬ್’ ಕಛೇರಿ ಉದ್ಘಾಟನೆ

(ನ್ಯೂಸ್‌ ಕಡಬ) newskadaba.com,  ನ.08: ಕಡಬ: ಕಡಬ ತಾಲೂಕು ಕೇಂದ್ರಿತವಾಗಿ ನೂತನವಾಗಿ ಪ್ರಾರಂಭಿಸಲಾದ ಕಡಬ ಕ್ರಿಶ್ಚಿಯನ್ ಲೈಟ್ನಿಂಗ್ ಕ್ಲಬ್‌ನ ಕಛೇರಿಯು ಎ.ಬಿ. ಕಾಂಪ್ಲೆಕ್ಸ್‌ನಲ್ಲಿ ಶುಕ್ರವಾರ (ದಿನಾಂಕ 31-10-2025) ರಂದು ಶುಭಾರಂಭಗೊಂಡಿತು. ​ಕ್ಲಬ್‌ನ ನೂತನ ಕಛೇರಿಗೆ ಧಾರ್ಮಿಕ ವಿಧಿವಿಧಾನಗಳ ಮೂಲಕ ಆಶೀರ್ವಚನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಛೇರಿ ಇರುವ ಎ.ಬಿ. ಕಾಂಪ್ಲೆಕ್ಸ್‌ನ ಮಾಲೀಕರಾದ ಶ್ರೀ. ಮಾಥ್ಯು ಜೋಸೆಫ್ ಮತ್ತು ಅವರ ಧರ್ಮಪತ್ನಿ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ​ನಂತರ, ಸೈಂಟ್ ಮೇರಿಸ್ ಓರ್ಥೋಡಕ್ಸ್ ಚರ್ಚಿನ ಧರ್ಮಗುರುಗಳಾದ

ಕಡಬದಲ್ಲಿ ನೂತನ ‘ಕ್ರಿಶ್ಚಿಯನ್ ಲೈಟ್ನಿಂಗ್ ಕ್ಲಬ್’ ಕಛೇರಿ ಉದ್ಘಾಟನೆ Read More »

ಕರಾವಳಿ

ಹೃದ್ರೋಗ, ಕ್ಯಾನ್ಸರ್‌ನಂತಹ ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿರುವವರಿಗೆ ಇನ್ನು ಅಮೆರಿಕ ವೀಸಾ ಕಷ್ಟ!

(ನ್ಯೂಸ್‌ ಕಡಬ) newskadaba.com,  ನ.08 ವಾಷಿಂಗ್ಟನ್‌: ವಿದೇಶಿಗರು ಅಮೆರಿಕಕ್ಕೆ ಬರುವುದನ್ನು ತಡೆಯಲು ಹಲವು ನೆಪಗಳನ್ನು ನೀಡಿ ನಿರ್ಬಂಧಗಳನ್ನು ಹೇರುತ್ತಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಸರ್ಕಾರ, ಇದೀಗ ಬೊಜ್ಜು, ಹೃದ್ರೋಗ, ಕ್ಯಾನ್ಸರ್‌ನಂತಹ ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿರುವವರಿಗೆ ವೀಸಾ ನೀಡದಂತೆ ಮಾರ್ಗಸೂಚಿ ಹೊರಡಿಸಿದೆ. ಸರ್ಕಾರದ ವೆಚ್ಚದಲ್ಲಿ ಚಿಕಿತ್ಸೆ ಕೊಡಿಸುವ ವ್ಯವಸ್ಥೆ ಅಮೆರಿಕದಲ್ಲಿ ಗ್ರೀನ್‌ಕಾರ್ಡ್‌ ಹೊಂದಿರುವವರಿಗೆ ಸರ್ಕಾರದ ವೆಚ್ಚದಲ್ಲಿ ಚಿಕಿತ್ಸೆ ಕೊಡಿಸುವ ವ್ಯವಸ್ಥೆಯಿದೆ. ವಲಸಿಗರ ಮೇಲೆ ಇಂತಹ ಖರ್ಚು ಮಾಡುವುದನ್ನು ತಪ್ಪಿಸಲು, ಅನಾರೋಗ್ಯದಿಂದ ಬಳಲುತ್ತಿರುವವರಿಗೆ ವೀಸಾ ಕೊಡದೇ ಇರಲು ಅಧಿಕಾರಿಗಳಿಗೆ

ಹೃದ್ರೋಗ, ಕ್ಯಾನ್ಸರ್‌ನಂತಹ ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿರುವವರಿಗೆ ಇನ್ನು ಅಮೆರಿಕ ವೀಸಾ ಕಷ್ಟ! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿ ಮಲತಂದೆಗೆ ಜಾಮೀನು

(ನ್ಯೂಸ್‌ ಕಡಬ) newskadaba.com,  ನ.08: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧಿತನಾಗಿದ್ದ ಮಲತಂದೆಗೆ ಮಂಗಳೂರಿನ ಎಫ್‌ಟಿಎಸ್‌ಸಿ 2ನೇ ನ್ಯಾಯಾಲಯವು ಶುಕ್ರವಾರ ಜಾಮೀನು ಮಂಜೂರು ಮಾಡಿದೆ. ಉಳ್ಳಾಲ ಠಾಣಾ ವ್ಯಾಪ್ತಿಯ ಕುಂಪಲ ಬೈಪಾಸ್ ಎಂಬಲ್ಲಿನ ಬಾಡಿಗೆ ಮನೆಯಲ್ಲಿ ಬಾಲಕಿಯನ್ನು ಆಕೆಯ ಮಲತಂದೆ ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿತ್ತು. ಅದರಂತೆ ಪೊಲೀಸರು ಆರೋಪಿಯನ್ನು ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿತ್ತು. ಆರೋಪಿಯ ಪರ ಹಿರಿಯ ನ್ಯಾಯವಾದಿ ಎಸ್.ಎಸ್.ಖಾಝಿ ವಾದ

ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿ ಮಲತಂದೆಗೆ ಜಾಮೀನು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಇಂದಿನ ಹವಮಾನ ವರದಿ

(ನ್ಯೂಸ್‌ ಕಡಬ) newskadaba.com,  ನ.08: ರಾಜ್ಯದ ಬಹುತೇಕ ಕಡೆ ಶುಕ್ರವಾರ ಒಣ ಹವೆ ಕಂಡುಬಂದಿತ್ತು. ಇಂದು (ನ.8) ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ಕೊಡಗು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದ್ದು, ಉಳಿದ ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ.

ಇಂದಿನ ಹವಮಾನ ವರದಿ Read More »

ಕರ್ನಾಟಕ

ಆರ್ಸಿಬಿ ಖರೀದಿಗೆ ಬಿಲಿಯನೇರ್ಗಳ ಪೈಪೋಟಿ

(ನ್ಯೂಸ್‌ ಕಡಬ) newskadaba.com,  ನ.06: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಸೀಸನ್–19 ಆರಂಭಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿಯ ಹೊಸ ಮಾಲೀಕರು ಯಾರು ಎಂಬ ಕುತೂಹಲ ತೀವ್ರಗೊಂಡಿದೆ. ಈ ಫ್ರಾಂಚೈಸಿಯ ಖರೀದಿಗೆ ಈಗಾಗಲೇ ಹಲವು ಪ್ರಮುಖ ಉದ್ಯಮಿಗಳು ಆಸಕ್ತಿ ತೋರಿದ್ದಾರೆ. ದಿನ ಕಳೆದಂತೆ ಆಸಕ್ತಿದಾರರ ಪಟ್ಟಿ ಉದ್ದವಾಗುತ್ತಿದ್ದು, ಬಿಲಿಯನೇರ್‌ಗಳ ನಡುವೆ ಭರ್ಜರಿ ಪೈಪೋಟಿ ನಡೆಯುವ ಸಾಧ್ಯತೆ ಕಂಡು ಬರುತ್ತಿದೆ. ಕರ್ನಾಟಕದ ಉದ್ಯಮಿಗಳಾದ ಝೆರೋಧಾ ಕಂಪೆನಿಯ ಸಹ–ಸಂಸ್ಥಾಪಕ ನಿಖಿಲ್ ಕಾಮತ್ ಮತ್ತು ಮಣಿಪಾಲ್ ಎಜುಕೇಶನ್ ಅಂಡ್

ಆರ್ಸಿಬಿ ಖರೀದಿಗೆ ಬಿಲಿಯನೇರ್ಗಳ ಪೈಪೋಟಿ Read More »

ಕ್ರೀಡಾ ನ್ಯೂಸ್

ರಾಜ್ಯ ಕಾಂಗ್ರೆಸ್ ಸರ್ಕಾರವು ಪಂಚ ಗ್ಯಾರಂಟಿ ನೆಪದಲ್ಲಿ ಕಾಂಗ್ರೆಸ್‌ ತೆರಿಗೆ ಭಯೋತ್ಪಾದನೆ ; ಜೆಡಿಎಸ್ ಆರೋಪ

(ನ್ಯೂಸ್‌ ಕಡಬ) newskadaba.com,  ನ.08 ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರವು ಪಂಚ ಗ್ಯಾರಂಟಿಗಳನ್ನು ನೀಡಿದ ನೆಪದಲ್ಲಿ ರಾಜ್ಯದಲ್ಲಿ ತೆರಿಗೆ ಭಯೋತ್ಪಾದನೆ ಸೃಷ್ಟಿ ಮಾಡುತ್ತಿದೆ ಎಂದು ಆರೋಪಿಸಿ ಜೆಡಿಎಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಶುಕ್ರವಾರ(ನ.07) ನಡೆದ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು ರಾಜ್ಯ ಕಾಂಗ್ರೆಸ್‌ ಸರ್ಕಾರವನ್ನು ತೆರಿಗೆ ಭಯೋತ್ಪಾದಕ ಸರ್ಕಾರ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ರಾಜ್ಯ ಸರ್ಕಾರದ ಭೂತದಹಿಸಿ ಕಿಡಿಕಾರಿದರು. ಗ್ಯಾರಂಟಿಗಳಿಗೆ ವಾರ್ಷಿಕ ಕೇವಲ 52 ಸಾವಿರ ಕೋಟಿ ರು. ಅನುದಾನ

ರಾಜ್ಯ ಕಾಂಗ್ರೆಸ್ ಸರ್ಕಾರವು ಪಂಚ ಗ್ಯಾರಂಟಿ ನೆಪದಲ್ಲಿ ಕಾಂಗ್ರೆಸ್‌ ತೆರಿಗೆ ಭಯೋತ್ಪಾದನೆ ; ಜೆಡಿಎಸ್ ಆರೋಪ Read More »

ಕರಾವಳಿ

SSLC, PUC ತೇರ್ಗಡೆ ಅಂಕ ಇಳಿಕೆ ಅವೈಜ್ಞಾನಿಕ ಮತ್ತು ಕನ್ನಡ ಭಾಷಾ ಕಲಿಕೆಗೆ ಮಾರಕ: ಪುರುಷೋತ್ತಮ ಬಿಳಿಮಲೆ

(ನ್ಯೂಸ್‌ ಕಡಬ) newskadaba.com,  ನ.08 ಬೆಂಗಳೂರು: ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಕನಿಷ್ಠ ಉತ್ತೀರ್ಣ ಅಂಕಗಳನ್ನು ಶೇ. 33 ಕ್ಕೆ ಇಳಿಸುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಈ ಕ್ರಮವನ್ನು ಅವರು “ಅತ್ಯಂತ ಅವೈಜ್ಞಾನಿಕ” ಮತ್ತು “ಕನ್ನಡ ಭಾಷಾ ಕಲಿಕೆಗೆ ಮಾರಕ” ಎಂದು ಕರೆದಿದ್ದಾರೆ. ಬೆಂಗಳೂರಿನಲ್ಲಿ ನಡೆದ ಕನ್ನಡ ಜಾಗೃತಿ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಬಿಳಿಮಲೆ, ಪ್ರಾಥಮಿಕವಾಗಿ ಕೇಂದ್ರ ಪಠ್ಯಕ್ರಮ ಶಾಲೆಗಳೊಂದಿಗೆ ಸಮಾನತೆಯನ್ನು ಸಾಧಿಸುವ

SSLC, PUC ತೇರ್ಗಡೆ ಅಂಕ ಇಳಿಕೆ ಅವೈಜ್ಞಾನಿಕ ಮತ್ತು ಕನ್ನಡ ಭಾಷಾ ಕಲಿಕೆಗೆ ಮಾರಕ: ಪುರುಷೋತ್ತಮ ಬಿಳಿಮಲೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮತ್ತೊಬ್ಬ ವ್ಯಕ್ತಿಗೆ ಜಾಮೀನು ನೀಡಲು ನಕಲಿ ದಾಖಲೆಗಳನ್ನು ನ್ಯಾಯಾಲಯಕ್ಕೆ ನೀಡಿ ವಂಚನೆ-ಆರೋಪಿಯ ಆರೆಸ್ಟ್

(ನ್ಯೂಸ್‌ ಕಡಬ) newskadaba.com,  ನ.08 ಪುತ್ತೂರು: ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿದ ಆರೋಪದ ಮೇಲೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಪುತ್ತೂರು ತಾಲೂಕಿನ ಪಡುವನ್ನೂರು ನಿವಾಸಿ ಅಬ್ದುಲ್ ಹಾಶೀಮ್ (34) ಬಂಧಿತ ಆರೋಪಿ. ವರದಿಗಳ ಪ್ರಕಾರ, ಆರೋಪಿಯು ಪುತ್ತೂರು ನಿವಾಸಿಯೊಬ್ಬರಿಗೆ ಸೇರಿದ ಆರ್‌ಟಿಸಿ ದಾಖಲೆಯನ್ನು ತನ್ನದೇ ಎಂದು ನಂಬಿಸಿ, ಮತ್ತೊಬ್ಬ ಆರೋಪಿಗೆ ಜಾಮೀನು  ನೀಡಲು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ದ.ಕ ಜಿಲ್ಲೆ ಮಂಗಳೂರು ನ್ಯಾಯಾಲಯಕ್ಕೆ ನೀಡಿ ಆರೋಪಿಗೆ ಜಾಮೀನು ನೀಡುವಂತೆ ಮಾಡಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ

ಮತ್ತೊಬ್ಬ ವ್ಯಕ್ತಿಗೆ ಜಾಮೀನು ನೀಡಲು ನಕಲಿ ದಾಖಲೆಗಳನ್ನು ನ್ಯಾಯಾಲಯಕ್ಕೆ ನೀಡಿ ವಂಚನೆ-ಆರೋಪಿಯ ಆರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top