crime, arrest, suspected

ಮಂಗಳೂರಿನಲ್ಲಿ ಮಾದಕ ವಸ್ತು ಸೇವಿಸಿದ ಆರೋಪ; 8 ಮಂದಿ ಬಂಧನ

(ನ್ಯೂಸ್ ಕಡಬ) newskadaba.com, ನ.05: ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳೂರು ನಗರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿದ ಆರೋಪದಲ್ಲಿ 8 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಅಬ್ದುಲ್ ಸತ್ತಾರ್ (35) , ಮುಹಮ್ಮದ್ ರಫೀಕ್ (42) , ರಜತ್, ( 29 ) ಎಂಬವರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.ಸಿರಾಜ್ (46) ಎಂಬಾತನನ್ನು ಕೊಣಾಜೆ ಪೊಲೀಸರು, ಮರವೂರು ಪೇಟೆಯಲ್ಲಿ ಮಾದಕ ವಸ್ತು ಸೇವಿಸಿದ ಆರೋಪದಲ್ಲಿ ಸಾಹೂದ್ (27 ) ಎಂಬಾತನನ್ನು ಬಜ್ಪೆ ಠಾಣಾ […]

ಮಂಗಳೂರಿನಲ್ಲಿ ಮಾದಕ ವಸ್ತು ಸೇವಿಸಿದ ಆರೋಪ; 8 ಮಂದಿ ಬಂಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

‘ಹರಿಯಾಣದಲ್ಲಿ 25 ಲಕ್ಷ ಮತಗಳು ಕಳ್ಳತನವಾಗಿದೆ’- ರಾಹುಲ್ ಗಾಂಧಿ ಆರೋಪ

(ನ್ಯೂಸ್‌ ಕಡಬ) newskadaba.com,  ನ.05:  2024ರ ವಿಧಾನಸಭಾ ಚುನಾವಣೆ ವೇಳೆ ಹರಿಯಾಣದಲ್ಲಿ ಬರೋಬ್ಬರಿ 25 ಲಕ್ಷ ಮತಗಳು ಕಳ್ಳತನ ಆಗಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ನವದೆಹಲಿಯ ಎಐಸಿಸಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾತನಾಡಿದ ಅವರು, “2024ರ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಭಾರೀ ಪ್ರಮಾಣದ ಅಕ್ರಮ ನಡೆದಿದೆ. ಬಿಜೆಪಿ ಗೆದ್ದಿರೋದು ನಕಲಿ ಮತಗಳಿಂದ ಅನ್ನೋದು ಖಚಿತವಾಗಿದೆ. ಮಹಾದೇವಪುರ, ಆಳಂದ ಆದ್ಮೇಲೆ ಇದು ಕೆಲವು ಕ್ಷೇತ್ರಗಳಿಗಷ್ಟೇ ಸೀಮಿತವಾಗಿಲ್ಲ, ಇಡೀ ರಾಜ್ಯ, ದೇಶವನ್ನೇ ಆವರಿಸಿಕೊಂಡಿದೆ ಅನಿಸಿತು.

‘ಹರಿಯಾಣದಲ್ಲಿ 25 ಲಕ್ಷ ಮತಗಳು ಕಳ್ಳತನವಾಗಿದೆ’- ರಾಹುಲ್ ಗಾಂಧಿ ಆರೋಪ Read More »

ಬ್ರೇಕಿಂಗ್ ನ್ಯೂಸ್

ವಾಟ್ಸ್ಯಾಪ್ನಲ್ಲಿ ಹೊಸ ವಂಚನೆ, ಆರ್ಟಿಒ ಚಲನ್ ಹೆಸರಿನಲ್ಲಿ ಧೋಖಾ

(ನ್ಯೂಸ್‌ ಕಡಬ) newskadaba.com,  ನ.05:  ವಾಟ್ಸ್ಯಾಪ್‌ ಮೂಲಕ ಹೊಸ ಬಗೆಯ ವಂಚನೆಯೊಂದು (WhatsApp RTO challan scam) ಇದೀಗ ಜೋರಾಗಿ ನಡೆಯುತ್ತಿದ್ದು, ಕೋಟ್ಯಂತರ ರೂಪಾಯಿಗಳನ್ನು ನಾಗರಿಕರಿಗೆ ವಂಚಿಸಲಾಗಿದೆ. ಈ ವಂಚನೆಗೆ ನಕಲಿ ಆರ್‌ಟಿಒ ಚಲನ್‌ಗಳನ್ನು ಬಳಸಲಾಗುತ್ತಿದೆ. ಹಲವಾರು ಜನರು ಅಪರಿಚಿತ ಸಂಖ್ಯೆಗಳಿಂದ ನಕಲಿ RTO ಚಲನ್ ಸಂದೇಶಗಳನ್ನು ಸ್ವೀಕರಿಸುತ್ತಿದ್ದು, ಅವರ ವಾಹನದ ನಂಬರ್‌ಗೆ ಇದನ್ನು ನೀಡಲಾಗುತ್ತಿದೆ. ನಾಗರಿಕರು ಈ ಬಗ್ಗೆ ಎಚ್ಚರ ವಹಿಸುವಂತೆ ಸೂಚಿಸಲಾಗಿದೆ. ಈ ನಕಲಿ ಚಲನ್‌ಗಳು ನಿಮ್ಮ ವಾಟ್ಸ್ಯಾಪ್‌ಗೆ ಬರುತ್ತಿದ್ದು, ನಿಮ್ಮ ವಾಹನದ ನಂಬರ್‌ ಮೇಲೆ ಟ್ರಾಫಿಕ್‌

ವಾಟ್ಸ್ಯಾಪ್ನಲ್ಲಿ ಹೊಸ ವಂಚನೆ, ಆರ್ಟಿಒ ಚಲನ್ ಹೆಸರಿನಲ್ಲಿ ಧೋಖಾ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳಗಾವಿ: ವಿದ್ಯುತ್ ತಂತಿ ತಗುಲಿ ಆನೆ ಸಾವು; ರೈತರ ವಿರುದ್ಧ ಅರಣ್ಯ ಇಲಾಖೆ ಕೇಸ್

(ನ್ಯೂಸ್‌ ಕಡಬ) newskadaba.com,  ನ.05:  ಖಾನಾಪುರ ತಾಲ್ಲೂಕಿನ ಸುಳೇಗಾಳಿ ಅರಣ್ಯದ ಬಳಿ ಭಾನುವಾರ ಎರಡು ಆನೆಗಳು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅರಣ್ಯ ಇಲಾಖೆಯಿಂದ ವರದಿ ಕೇಳಿದ ಎರಡು ದಿನಗಳ ನಂತರ, ಆನೆಗಳ ವಿದ್ಯುತ್ ಸ್ಪರ್ಶಕ್ಕೆ ಕಾರಣರಾದ ಇಬ್ಬರು ರೈತರ ವಿರುದ್ಧ ಇಲಾಖೆ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ನಗರಗಲಿ ವಲಯ ಅರಣ್ಯ ಕಚೇರಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹೆಚ್ಚುವರಿಯಾಗಿ, ಅಲ್ಲಿನ ಕೃಷಿ ಭೂಮಿಯಲ್ಲಿ ವಿದ್ಯುತ್ ತಂತಿಗಳು ಬಿದ್ದಿರುವ ವರದಿಗಳ ನಂತರ

ಬೆಳಗಾವಿ: ವಿದ್ಯುತ್ ತಂತಿ ತಗುಲಿ ಆನೆ ಸಾವು; ರೈತರ ವಿರುದ್ಧ ಅರಣ್ಯ ಇಲಾಖೆ ಕೇಸ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಂದಿನ ತುಪ್ಪದ ಏಕಾಏಕಿ 90 ರೂ. ಏರಿಕೆ..!

(ನ್ಯೂಸ್‌ ಕಡಬ) newskadaba.com,  ನ.05:  ಒಂದು ಕಡೆ ದಿನನಿತ್ಯದ ವಸ್ತುಗಳ ಬೆಲೆಏರಿಕೆಯಿಂದ ಜನರು ಏದುಸಿರು ಬೀಡುತ್ತೀರುವ ಸಂದರ್ಭದಲ್ಲೇ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿಯೂ ನಂದಿನ ತುಪ್ಪದ ಏಕಾಏಕಿ 90 ರೂ. ಏರಿಕೆ ಮಾಡಿದೆ. ನಂದಿನಿ ತುಪ್ಪದ ದರ ಪ್ರತಿ ಕೆಜಿಗೆ 90 ರೂ. ಏರಿಕೆ ಮಾಡಿ ಆದೇಶ ಹೊರಡಿಸಿದ್ದು, ಇಂದಿನಿಂದಲೇ ನೂತನ ದರ ಜಾರಿಗೆ ಬರಲಿದೆ ಎಂದು ತಿಳಿಸಿದೆ.ಈ ಹಿಂದೆ 1 ಕೆಜಿ ತುಪ್ಪಕ್ಕೆ 610 ರೂ. ಇತ್ತು, ಸದ್ಯ 90 ರೂ. ಏರಿಕೆಯಿಂದ 700

ನಂದಿನ ತುಪ್ಪದ ಏಕಾಏಕಿ 90 ರೂ. ಏರಿಕೆ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಶ್ವಕಪ್ ಗೆದ್ದ ಟೀಂ ಇಂಡಿಯಾ ವನಿತೆಯರನ್ನ ಭೇಟಿ ಮಾಡಲಿರುವ ಪ್ರಧಾನಿ ಮೋದಿ

(ನ್ಯೂಸ್‌ ಕಡಬ) newskadaba.com,  ನ.05:  ವಿಶ್ವಕಪ್ ಗೆದ್ದ ಟೀಂ ಇಂಡಿಯಾ ವನಿತೆಯರ ಕ್ರಿಕೆಟ್ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಇಂದು (ನ.5) ಭೇಟಿಯಾಗಿ ಅಭಿನಂದಿಸಲಿದ್ದಾರೆ. ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಭರ್ಜರಿ ಗೆಲುವು ಸಾಧಿಸಿದ ಭಾರತ ತಂಡವು ಬುಧವಾರ (ನ.5) ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ತಂಡವನ್ನು ಅಭಿನಂದಿಸಿ, ಸನ್ಮಾನಿಸಲಿದ್ದಾರೆ. ನ.3ರಂದು ಪಿಎಂ ಕಚೇರಿಯಿಂದ ಆಹ್ವಾನ ಬಂದಿದ್ದು, ಮಂಗಳವಾರ (ನ.4) ಹರ್ಮನ್‌ ಪ್ರೀತ್‌ ಕೌರ್‌ ಪಡೆಯು ಮುಂಬೈನಿಂದ ನವದೆಹಲಿಗೆ ಆಗಮಿಸಿದೆ. 2025ರ

ವಿಶ್ವಕಪ್ ಗೆದ್ದ ಟೀಂ ಇಂಡಿಯಾ ವನಿತೆಯರನ್ನ ಭೇಟಿ ಮಾಡಲಿರುವ ಪ್ರಧಾನಿ ಮೋದಿ Read More »

ಕರಾವಳಿ

ಸುಳ್ಯ: ಎರಡು ಕಾರುಗಳ ನಡುವೆ ಡಿಕ್ಕಿ-ಮೂವರಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ನ.05:  ಸುಳ್ಯ ಕಡೆಯಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಎರಡು ಕಾರುಗಳಿಗೆ ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಕಾರು ಡಿಕ್ಕಿ ಹೊಡೆದ ಘಟನೆ ಸುಳ್ಯದ ಅರಂತೋಡು ಮಸೀದಿ ಬಳಿ ನಡೆದಿದೆ. ಅಪಘಾತವಾದ ಕಾರುಗಳಲ್ಲಿಇದ್ದವರಲ್ಲಿ ಇಬ್ಬರು ಪುರುಷರು ಹಾಗೂ ಓರ್ವ ಮಹಿಳೆಗೆ ಗಾಯಗಳಾಗಿದ್ದು, ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜು ಬಿಟ್ಟು ಮನೆಗೆ ಹೋಗುತ್ತಿದ್ದ ಮಕ್ಕಳು ಕಾರಿನ ಅಪಘಾತದಿಂದ ಅಲ್ಪ ಅಂತರದಿಂದ ಪಾರಾಗಿದ್ದಾರೆ.

ಸುಳ್ಯ: ಎರಡು ಕಾರುಗಳ ನಡುವೆ ಡಿಕ್ಕಿ-ಮೂವರಿಗೆ ಗಾಯ Read More »

ಕರಾವಳಿ

ವಿಜಯಪುರ: ಬೆಳಗ್ಗೆ 9:12ಕ್ಕೆ ಮತ್ತೆ ಕಂಪಿಸಿದ ಭೂಮಿ, ನಿಗೂಢ ಸದ್ದು, ಎರಡು ತಿಂಗಳಲ್ಲಿ 14ನೇ ಭಾರಿ!

(ನ್ಯೂಸ್‌ ಕಡಬ) newskadaba.com,  ನ.05:  ವಿಜಯಪುರ ಜಿಲ್ಲೆಯಲ್ಲಿ ಮತ್ತೊಮ್ಮೆ ಭಾರೀ ಸ್ಫೋಟದ ಸದ್ದಿನೊಂದಿಗೆ ಭೂಮಿ ಕಂಪಿಸಿದ ಅನುಭವವಾಗಿದ್ದು ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ನಿನ್ನೆಯಷ್ಟೇ ಭೂಮಿ ಕಂಪಿಸಿತ್ತು, ಇದೀಗ ಮತ್ತೆ ಇಂದು ಬೆಳಿಗ್ಗೆ 9:12 ಗಂಟೆಗೆ ಭೂಮಿ ನಡುಗಿದ ಅನುಭವವಾಗಿ ಜನರು ಭಯಭೀತರಾಗಿ ಹೊರಗೆ ಓಡಿಬಂದ ಘಟನೆ ನಡೆದಿದೆ. ವಿಜಯಪುರ ನಗರ, ಶಿವಗಿರಿ, ಪಾನಿ ನಗರ, ತೊರವಿ, ಕನಕದಾಸ ಬಡಾವಣೆ ಮತ್ತು ಗೋಳಗುಮ್ಮಟ ಏರಿಯಾ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭೂಮಿ ಕಂಪಿಸಿದೆ. ವಿಶೇಷವಾಗಿ ನಗರದ ಕೇಂದ್ರ ಭಾಗಗಳಲ್ಲಿ ಜನರಿಗೆ

ವಿಜಯಪುರ: ಬೆಳಗ್ಗೆ 9:12ಕ್ಕೆ ಮತ್ತೆ ಕಂಪಿಸಿದ ಭೂಮಿ, ನಿಗೂಢ ಸದ್ದು, ಎರಡು ತಿಂಗಳಲ್ಲಿ 14ನೇ ಭಾರಿ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರತ ಮೂಲದ ಜೊಹ್ರಾನ್ ಮಮ್ದಾನಿ ನ್ಯೂಯಾರ್ಕ್ನ ನೂತನ ಮೇಯರ್

(ನ್ಯೂಸ್‌ ಕಡಬ) newskadaba.com,  ನ.05:  ಅಮೆರಿಕದ ನ್ಯೂಯಾರ್ಕ್ ನಗರವು ಐತಿಹಾಸಿಕ ರಾಜಕೀಯ ಬದಲಾವಣೆಗೆ ಸಾಕ್ಷಿಯಾಗಿದೆ. ಭಾರತೀಯ ಮೂಲದ ಡೆಮಾಕ್ರಟಿಕ್ ಅಭ್ಯರ್ಥಿ ಜೋಹ್ರಾನ್ ಮಮ್ದಾನಿ ನ್ಯೂಯಾರ್ಕ್ ನಗರದ ಮೇಯರ್ ಚುನಾವಣೆಯಲ್ಲಿ ಗೆಲುವು ಪಡೆದಿದ್ದಾರೆ. ಅವರು ನ್ಯೂಯಾರ್ಕ್‌ನ ಮೊದಲ ಮುಸ್ಲಿಂ ಮೇಯರ್. ಮಮ್ದಾನಿಯವರ ಗೆಲುವು ಮಮ್ದಾನಿಯನ್ನು ನಿರಂತರವಾಗಿ ವಿರೋಧಿಸುತ್ತಿದ್ದ ಡೊನಾಲ್ಡ್ ಟ್ರಂಪ್‌ಗೆ ದೊಡ್ಡ ಹೊಡೆತವಾಗಿದೆ. ಮಮ್ದಾನಿ ಗೆದ್ದರೆ ನ್ಯೂಯಾರ್ಕ್‌ಗೆ ಹಣಕಾಸು ಒದಗಿಸುವುದನ್ನು ನಿಲ್ಲಿಸುವುದಾಗಿ ಅವರು ಬೆದರಿಕೆ ಹಾಕಿದ್ದರು. ಇಂದು ಪ್ರಕಟವಾದ ಫಲಿತಾಂಶಗಳಲ್ಲಿ, ಮಮ್ದಾನಿ ತಮ್ಮ ಎರಡೂ ಪ್ರತಿಸ್ಪರ್ಧಿಗಳನ್ನು ಮೀರಿಸಿ ದೊಡ್ಡ

ಭಾರತ ಮೂಲದ ಜೊಹ್ರಾನ್ ಮಮ್ದಾನಿ ನ್ಯೂಯಾರ್ಕ್ನ ನೂತನ ಮೇಯರ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಇಂದಿನ ಹವಮಾನ ವರದಿ

(ನ್ಯೂಸ್‌ ಕಡಬ) newskadaba.com,  ನ.05:  ರಾಜ್ಯದಲ್ಲಿ ಕಳೆದೊಂದು ವಾರದಿಂದ ವರುಣನ ಆರ್ಭಟ ಕಡಿಮೆಯಾಗಿದ್ದು, ಆದರೆ ಮುಂದಿನ 3 ದಿನಗಳವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ  ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ಇದೆ. ಇಂದು (ನ. 5) ಕರಾವಳಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದ್ದು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಬಾಗಲಕೋಟೆ, ರಾಯಚೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ,

ಇಂದಿನ ಹವಮಾನ ವರದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top