ಕುಂದಾಪುರ : ದ್ವಿಚಕ್ರ ವಾಹನ ಢಿಕ್ಕಿ – ಕಾಲ್ನಡಿಗೆಯಲ್ಲಿ ಸಾಗುತ್ತಿದ್ದ ಅಯ್ಯಪ್ಪ ಮಾಲೆ ಧರಿಸಿದ ವ್ಯಕ್ತಿ ಸಾವು

(ನ್ಯೂಸ್‌ ಕಡಬ) newskadaba.com,  ಅ.04 ಕುಂದಾಪುರ: ಅಯ್ಯಪ್ಪ ಸ್ವಾಮಿ ಶಿಬಿರದಿಂದ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಅಯ್ಯಪ್ಪ ವೃತಧಾರಿಗಳು ಕಾಲ್ನಡಿಗೆ (ಪಾದಯಾತ್ರೆ)ಯಲ್ಲಿ ಸಾಗುತ್ತಿದ್ದ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ದ್ವಿಚಕ್ರ ವಾಹನವೊಂದು ಢಿಕ್ಕಿಯಾಗಿ ಓರ್ವ ಮಾಲಾಧಾರಿ ಗಂಭೀರ ಗಾಯಗೊಂಡು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದು, ಇನ್ನೋರ್ವ ಮಾಲಾಧಾರಿ ಗಾಯಗೊಂಡ ಘಟನೆ ಕುಂದಾಪುರ ತಾಲೂಕಿನ ತೆಕ್ಕಟ್ಟೆ ಸಮೀಪದ ಕಣ್ಣುಕೆರೆ ಎಂಬಲ್ಲಿ ನಡೆದಿದೆ. ಮೃತರನ್ನು ಕೋಟೇಶ್ವರ ಸಮೀಪದ ಕುಂಬ್ರಿ ನಿವಾಸಿ ಮಾಲಾಧಾರಿಯಾಗಿದ್ದ ಸುರೇಂದ್ರ ಮೊಗವೀರ (35) ಎಂದು ಗುರುತಿಸಲಾಗಿದೆ. ನ.2 ರಂದು […]

ಕುಂದಾಪುರ : ದ್ವಿಚಕ್ರ ವಾಹನ ಢಿಕ್ಕಿ – ಕಾಲ್ನಡಿಗೆಯಲ್ಲಿ ಸಾಗುತ್ತಿದ್ದ ಅಯ್ಯಪ್ಪ ಮಾಲೆ ಧರಿಸಿದ ವ್ಯಕ್ತಿ ಸಾವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

“ಹಸಿರು ನಡಿಗೆ ಸ್ವಚ್ಛತೆಯೆಡೆಗೆ” ಎಂಬ ಧ್ಯೇಯವಾಕ್ಯದೊಂದಿಗೆ ಕಾರವಾರದಿಂದ ಮಂಗಳೂರಿನವರೆಗೆ 300 ಕಿ.ಮೀ ಪಾದಯಾತ್ರೆ ಪೂರ್ಣಗೊಳಿಸಿದ ನಾಗರಾಜ್ ಬಜಾಲ್

(ನ್ಯೂಸ್ ಕಡಬ) newskadaba.com, ಅ.05: “ಹಸಿರು ನಡಿಗೆ – ಪ್ರತಿ ಹೆಜ್ಜೆ ಸ್ವಚ್ಛತೆಯೆಡೆಗೆ” ಎಂಬ ಧ್ಯೇಯವಾಕ್ಯದೊಂದಿಗೆ ತ್ಯಾಜ್ಯ ನಿರ್ವಹಣೆ ಹಾಗೂ ಪರಿಸರ ಸಂರಕ್ಷಣೆಯ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ ಕಾರವಾರದಿಂದ ಮಂಗಳೂರಿನವರೆಗೆ ಏಕಾಂಗಿಯಾಗಿ ಪಾದಯಾತ್ರೆ ನಡೆಸಿದ ಹಸಿರು ದಳದ ಪರಿಸರ ಪ್ರೇಮಿ ನಾಗರಾಜ್ ಬಜಾಲ್ ಇದೀಗ ಮಂಗಳೂರಿಗೆ ತಲುಪಿದ್ದಾರೆ. ಉಳ್ಳಾಲ ನೇತ್ರಾವತಿ ಸೇತುವೆ ಮತ್ತು ಅಡ್ಯಾರ್ ಪ್ರದೇಶದಲ್ಲಿ “ಎಲ್ಲೆಂದರಲ್ಲಿ ಕಸ ಎಸೆಯಬೇಡಿ” ಎಂಬ ಫ್ಲೆಕ್ಸ್ ಕಾರ್ಡ್ ಹಿಡಿದು ಏಕಾಂಗಿಯಾಗಿ ನಿಂತು ಹಿಂದೆ ಗಮನ ಸೆಳೆದಿದ್ದ ನಾಗರಾಜ್ ಬಜಾಲ್,

“ಹಸಿರು ನಡಿಗೆ ಸ್ವಚ್ಛತೆಯೆಡೆಗೆ” ಎಂಬ ಧ್ಯೇಯವಾಕ್ಯದೊಂದಿಗೆ ಕಾರವಾರದಿಂದ ಮಂಗಳೂರಿನವರೆಗೆ 300 ಕಿ.ಮೀ ಪಾದಯಾತ್ರೆ ಪೂರ್ಣಗೊಳಿಸಿದ ನಾಗರಾಜ್ ಬಜಾಲ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬೆಂಗಳೂರಿನ ಪ್ರಸ್ತಾವಿತ ವರ್ತುಲ ರೈಲು ಯೋಜನೆಯನ್ನು ಸದ್ಯಕ್ಕೆ ಸ್ಥಗಿತ – ರಾಜ್ಯ ಸಚಿವ ವಿ. ಸೋಮಣ್ಣ

(ನ್ಯೂಸ್‌ ಕಡಬ) newskadaba.com,  ಅ.04 ಬೆಂಗಳೂರು: ಬೆಂಗಳೂರಿನ ಪ್ರಸ್ತಾವಿತ ವರ್ತುಲ ರೈಲು ಯೋಜನೆಯನ್ನು ಸದ್ಯಕ್ಕೆ ಸ್ಥಗಿತಗೊಳಿಸಲಾಗಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದ್ದಾರೆ, ವೆಚ್ಚವು ಆರಂಭಿಕ ಅಂದಾಜುಗಳನ್ನು ಮೀರಿದ್ದು, 1 ಲಕ್ಷ ಕೋಟಿ ರೂಪಾಯಿ ತಲುಪುವ ನಿರೀಕ್ಷೆಯಿದೆ. ಪೆರಿಫೆರಲ್ ರಿಂಗ್ ರಸ್ತೆ ಮತ್ತು ಬೆಂಗಳೂರು ಉಪನಗರ ರೈಲು ಜಾಲದಂತಹ ಇತರ ಮೂಲಸೌಕರ್ಯ ಯೋಜನೆಗಳೊಂದಿಗೆ ಏಕೀಕರಣದ ಮೂಲಕ ಹಾಗೂ ವೆಚ್ಚವನ್ನು ಕಡಿಮೆ ಮಾಡಲು ಈಗಿರುವ ರೈಲ್ವೆ ಜೋಡಣೆಗಳನ್ನು ಬಳಸುವ ಮೂಲಕ ಈ ಯೋಜನೆಯನ್ನು ಇನ್ನೂ ಕಾರ್ಯಸಾಧ್ಯವಾಗಿಸಬಹುದು

ಬೆಂಗಳೂರಿನ ಪ್ರಸ್ತಾವಿತ ವರ್ತುಲ ರೈಲು ಯೋಜನೆಯನ್ನು ಸದ್ಯಕ್ಕೆ ಸ್ಥಗಿತ – ರಾಜ್ಯ ಸಚಿವ ವಿ. ಸೋಮಣ್ಣ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಜಯಪುರ: ಭಾರೀ ಸ್ಪೋಟದ ಸದ್ದು; 3.1 ತೀವ್ರತೆಯ ಭೂಕಂಪ

(ನ್ಯೂಸ್‌ ಕಡಬ) newskadaba.com,  ಅ.05: ಕಳೆದ ಎರಡು ತಿಂಗಳಲ್ಲಿ 13 ಬಾರಿ ಭೂಮಿ ಕಂಪಿಸಿದ್ದರೂ, ಇಂದು 7.45ರ ಸುಮಾರಿಗೆ ಮತ್ತೊಮ್ಮೆ ಭಾರೀ ಸ್ಫೋಟದ ಸದ್ದಿನೊಂದಿಗೆ ವಿಜಯಪುರ ಜಿಲ್ಲೆಯಲ್ಲಿ ಭೂಕಂಪನ ಸಂಭವಿಸಿದ್ದು, ವಿಜಯಪುರ ಸೇರಿ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಆತಂಕ ಮೂಡಿಸಿದೆ. ರಿಕ್ಟರ್ ಸ್ಕೇಲ್‌ನಲ್ಲಿ 3.1 ತೀವ್ರತೆಯ ಈ ಭೂಕಂಪನವು ವಿಜಯಪುರ ನಗರ ಹೊರತಾಗಿ ತಿಕೋಟ, ಕಳ್ಳಕವಟಗಿ, ತೊರವಿ, ಶಿವಗಿರಿ ಮತ್ತು ಹೊನ್ನೂಟಗಿ ಸೇರಿದಂತೆ ವಿಜಯಪುರ ಮತ್ತು ತಿಕೋಟ ತಾಲೂಕುಗಳಲ್ಲಿ ತೀವ್ರವಾಗಿ ಅನುಭವಕ್ಕೆ ಬಂದಿದೆ. ಭೂಮಿ ನಡುಗುತ್ತಿದ್ದಂತೆ ಮನೆಯಿಂದ ಭಯಭೀತರಾಗಿ

ವಿಜಯಪುರ: ಭಾರೀ ಸ್ಪೋಟದ ಸದ್ದು; 3.1 ತೀವ್ರತೆಯ ಭೂಕಂಪ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪರಿಷ್ಕೃತ ವೇತನ ರಚನೆಯು ಜನವರಿ 1, 2025 ರಿಂದ ಜಾರಿ

(ನ್ಯೂಸ್‌ ಕಡಬ) newskadaba.com,  ಅ.04: ವಿವಿಧ ಸರ್ಕಾರಿ ಇಲಾಖೆಗಳು, ಮಂಡಳಿಗಳು, ನಿಗಮಗಳು ಮತ್ತು ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ ಕೆಲಸ ಮಾಡುವ ಅರೆಕಾಲಿಕ ಮತ್ತು ದಿನಗೂಲಿ ನೌಕರರ ವೇತನ ರಚನೆಯನ್ನು ಪರಿಷ್ಕರಿಸಿದೆ. ಪರಿಷ್ಕೃತ ವೇತನ ರಚನೆಯು ಜನವರಿ 1, 2025 ರಿಂದ ಜಾರಿಗೆ ಬರಲಿದೆ. ಈ ಬದಲಾವಣೆಯನ್ನು ಇಂದು ಜಾರಿಗೆ ತರುವುದಾಗಿ ಹೇಳಿಕೊಳ್ಳುತ್ತಿದ್ದರೂ, ಪಾವತಿಗಳನ್ನು ಜನವರಿಯಿಂದ ಮಾತ್ರ ಮಾಡಲಾಗುತ್ತದೆ. ಹರಿಯಾಣದ ಮುಖ್ಯ ಕಾರ್ಯದರ್ಶಿ ಅನುರಾಗ್ ರಸ್ತೋಗಿ ಹೊರಡಿಸಿದ ಅಧಿಸೂಚನೆಯ ಪ್ರಕಾರ, ಈ ಕಾರ್ಮಿಕರ ಸಂಭಾವನೆಯನ್ನು ಹೆಚ್ಚಿಸುವಂತೆ ಕೋರಿ ವಿವಿಧ ಇಲಾಖೆಗಳು ಮತ್ತು

ಪರಿಷ್ಕೃತ ವೇತನ ರಚನೆಯು ಜನವರಿ 1, 2025 ರಿಂದ ಜಾರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರಿನಲ್ಲಿ ಮತಧರ್ಮ ಮರೆತು ಹಸುಗೂಸಿಗೆ ಆಸರೆಯಾದ ಮಹಾತಾಯಿ ಚಂದ್ರಪ್ರಭಾ ಗೌಡ!

(ನ್ಯೂಸ್‌ ಕಡಬ) newskadaba.com,  ಅ.04 ಪುತ್ತೂರು: ನಗರದಲ್ಲೊಂದು ಭೀಕರ ಅಪಘಾತ, ನಜ್ಜುಗುಜ್ಜಾದ ಆಟೋ ರಿಕ್ಷಾ, ಗಂಭೀರ ಗಾಯಗೊಂಡ ಆರು ಜನ. ಒಂದು ಮಗು ಸ್ಥಳದಲ್ಲೇ ಪ್ರಾಣ ಕಳೆದುಕೊಂಡ್ರೆ, ಮತ್ತೊಂದು ಜೀವ ಆಸ್ಪತ್ರೆಯಲ್ಲಿ ನರಳಾಡಿ ಜೀವ ಬಿಟ್ಟಿತ್ತು. ಕಾರಿನ ದಾಳಿಗೆ ಸಿಲುಕಿದ ರಿಕ್ಷಾ ನಜ್ಜುಗುಜ್ಜಾಗಿ ಒಳಗಿದ್ದ ಕೆಲವರು ಗಾಯಗೊಂಡು ಸಾವು ಬದುಕಿನೊಂದಿಗೆ ಹೋರಾಡುತ್ತಿದ್ದಾರೆ. ಇವೆಲ್ಲದರ ನಡುವೆ, ಮಾತೃಹೃದಯದ ಮಹಾತ್ಕಾರ್ಯಕ್ಕೆ ಜನರು ಶಾಭಾಶ್‌ ಎನ್ನುತ್ತಿದ್ದಾರೆ.. ಘಟನೆ : ಅ.31ರಂದು ಶುಕ್ರವಾರ ಸಂಜೆ 4.30ಕ್ಕೆ ಪುತ್ತೂರು ಹೊರವಲಯದ ಪರ್ಪುಂಜ ಬಳಿ ರಿಕ್ಷಾ-

ಪುತ್ತೂರಿನಲ್ಲಿ ಮತಧರ್ಮ ಮರೆತು ಹಸುಗೂಸಿಗೆ ಆಸರೆಯಾದ ಮಹಾತಾಯಿ ಚಂದ್ರಪ್ರಭಾ ಗೌಡ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನವೆಂಬರ್.05 ರಂದು ಬೆಂಗಳೂರು ಸೇರಿ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ

(ನ್ಯೂಸ್‌ ಕಡಬ) newskadaba.com,  ಅ.04 ಬೆಂಗಳೂರು: ನಾಳೆಯಿಂದ ಬೆಂಗಳೂರು ಸೇರಿದಂತೆ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆ ಹಿನ್ನೆಲೆ ಜನರು ಮತ್ತು ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ದೀಪಾವಳಿ ಹಬ್ಬದ ಬಳಿಕ ಕೆಲ ಜಿಲ್ಲೆಗಳಲ್ಲಿ ಬಿಸಿಲಿನ ಝಳ ಹೆಚ್ಚಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಬಿಸಿಲು ಹೆಚ್ಚಾಗುತ್ತಿದೆ. ಆದರೆ ನವೆಂಬರ್ 5ರಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ…. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಎಲ್ಲಾ

ನವೆಂಬರ್.05 ರಂದು ಬೆಂಗಳೂರು ಸೇರಿ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಟಿ20 ತಂಡದಿಂದ ಕುಲ್ದೀಪ್ ಯಾದವ್ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ನ.03: ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ಭಾರತ ಎ ಮತ್ತು ದಕ್ಷಿಣ ಆಫ್ರಿಕಾ ಎ ನಡುವಿನ ಎರಡನೇ, ನಾಲ್ಕು ದಿನಗಳ ಟೆಸ್ಟ್‌ ಪಂದ್ಯದಲ್ಲಿ ಭಾಗವಹಿಸುವ ಉದ್ದೇಶದಿಂದ ಕುಲ್ದೀಪ್ ಯಾದವ್ ಅವರನ್ನು ಉಳಿದ ಆಸ್ಟ್ರೇಲಿಯಾ ಸರಣಿಯ ಭಾರತ(AUS vs IND) ತಂಡದಿಂದ ಬಿಡುಗಡೆ ಮಾಡಲಾಗಿದೆ. ದಕ್ಷಿಣ ಆಫ್ರಿಕಾ ಎ ವಿರುದ್ಧದ ಎರಡನೇ ನಾಲ್ಕು ದಿನಗಳ ಪಂದ್ಯ ಗುರುವಾರ, ನವೆಂಬರ್ 6 ರಂದು ಆರಂಭವಾಗಲಿದೆ. ತನುಷ್ ಕೋಟ್ಯಾನ್ ಅವರ ಎಂಟು ವಿಕೆಟ್ ಗೊಂಚಲಿನ ನೆರವಿನಿಂದ

ಟಿ20 ತಂಡದಿಂದ ಕುಲ್ದೀಪ್ ಯಾದವ್ ಬಿಡುಗಡೆ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮುಲ್ಕಿ ಬಳಿ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ಸವಾರ ಸಾವು

(ನ್ಯೂಸ್‌ ಕಡಬ) newskadaba.com,  ನ.03: ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ಸವಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಘಟನೆ ಕಿನ್ನಿಗೋಳಿ-ಎಸ್.ಕೋಡಿ ಬಳಿಯ ರೋಹನ್ ಎಸ್ಟೇಟ್ ಮುಂಭಾಗ ನಡೆದಿದೆ. ಘಟನೆಯಿಂದ ಮುಲ್ಕಿ ಪುನರೂರು ಮೊಗೇರ ದೈವಸ್ಥಾನ ಬಳಿಯ ನಿವಾಸಿಗಳಾದ ಸುರೇಂದ್ರ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದರು. ರವಿವಾರ ಸಂಜೆ ಸಾವನ್ನಪ್ಪಿದ್ದು ಹಿಂಬದಿ ಸವಾರ ಸಂದೀಪ್ ಯಾನೆ ಲೋಲಾಕ್ಷ ಎಂಬವರಿಗೆ ಅಲ್ಪಪ್ರಮಾಣದ ಗಾಯಗಳಾಗಿವೆ. ಗಾಯಾಳುಗಳು ಎಸ್. ಕೋಡಿಯಾಗಿ ಹಳೆಯಂಗಡಿ ಕಡೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ವಿರುದ್ಧ

ಮುಲ್ಕಿ ಬಳಿ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ಸವಾರ ಸಾವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ಕಾಪು ಮಾರಿಗುಡಿಗೆ ಸೂರ್ಯಕುಮಾರ್ ಯಾದವ್ ಪತ್ನಿ ಭೇಟಿ

(ನ್ಯೂಸ್‌ ಕಡಬ) newskadaba.com,  ನ.03: ಟೀಮ್ ಇಂಡಿಯಾದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಅವರ ಪತ್ನಿ ದೇವಿಶಾ ಶೆಟ್ಟಿ (Devisha Shetty) ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ ನೀಡಿದ್ದಾರೆ. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿಗಳು ಅಮ್ಮನ ಅನುಗ್ರಹ ಪ್ರಸಾದ ನೀಡಿದರು. ವ್ಯವಸ್ಥಾಪನಾ ಸಮಿತಿ ಮತ್ತುಅಭಿವೃದ್ಧಿ ಸಮಿತಿ ವತಿಯಿಂದ ಈ ಸಂದರ್ಭದಲ್ಲಿ ಗೌರವಿಸಲಾಯಿತು. ದೇವಸ್ಥಾನದ ಪ್ರಾಂಗಣದ ಮುಂದಿರುವ ಬೃಹತ್ ಕಲ್ಲಿನ ಕಂಬವನ್ನು ಸೇವೆ ರೂಪದಲ್ಲಿ ಸೂರ್ಯಕುಮಾರ್ ದಂಪತಿ ಕೊಟ್ಟಿದ್ದರು. ಆ ಕಂಬದ ಮುಂದೆ ದೇವಿಶಾ

ಉಡುಪಿ: ಕಾಪು ಮಾರಿಗುಡಿಗೆ ಸೂರ್ಯಕುಮಾರ್ ಯಾದವ್ ಪತ್ನಿ ಭೇಟಿ Read More »

ಕರಾವಳಿ, ಕರ್ನಾಟಕ
Scroll to Top