ಜಿಲ್ಲಾ ಆಯುಷ್ ಇಲಾಖೆಯ ವತಿಯಿಂದ ➤ ಆಯುಷ್ ಶಿಬಿರ -ಡೆಂಗ್ಯೂ ಜಾಗೃತಿ ಅಭಿಯಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.9.ಜಿಲ್ಲಾ ಆಯುಷ್ ಇಲಾಖೆಯ ವತಿಯಿಂದ ಆಯುಷ್ ಶಿಬಿರ -ಡೆಂಗ್ಯೂ ಜಾಗೃತಿ ಅಭಿಯಾನವನ್ನು ನಡೆಸಲಾಗಿತ್ತು. ಸರ್ಕಾರಿ ಆಯುರ್ವೇದ ಚಿಕಿತ್ಸಾಲಯ ಸಜಿಪಮೂಡ ಇಲ್ಲಿನ ವೈದ್ಯಾಧಿಕಾರಿ ಡಾ. ಕೆ.ಎ. ಮಣಿಕರ್ಣಿಕ ಇವರ ನೇತೃತ್ವದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುಂಪಿನ ಸದಸ್ಯರ ಸಹಯೋಗದೊಂದಿಗೆ ಸಜಿಪಮೂಡದ ಶ್ರೀಗುರು ಕಲ್ಯಾಣ ಮಂಟಪದಲ್ಲಿ ಉಚಿತ ಆಯುಷ್ ಚಿಕಿತ್ಸಾ ಶಿಬಿರ ಹಾಗೂ ಡೆಂಗ್ಯೂ ಜಾಗೃತಿ ಅಭಿಯಾನದಡಿಯಲ್ಲಿ ಡೆಂಗ್ಯೂ ಖಾಯಿಲೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಸಾರ್ವಜನಿಕರಿಗೆ ನೀಡಲಾಯಿತು.ಡಾ. ಮಣಿಕರ್ಣಿಕ ಅವರೊಂದಿಗೆ ವೈದ್ಯಾಧಿಕಾರಿ, ವಾಮದಪದವು […]

ಜಿಲ್ಲಾ ಆಯುಷ್ ಇಲಾಖೆಯ ವತಿಯಿಂದ ➤ ಆಯುಷ್ ಶಿಬಿರ -ಡೆಂಗ್ಯೂ ಜಾಗೃತಿ ಅಭಿಯಾನ Read More »

ಕರಾವಳಿ

ಆ.12 ಪಿಲಿಕುಳ ನಿಸರ್ಗಧಾಮ ಸಾರ್ವಜನಿಕರ ವೀಕ್ಷಣೆಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.9.ಆಗಸ್ಟ್ 12 ರಂದು ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಎಲ್ಲಾ ವಿಭಾಗಗಳು ಸಾರ್ವಜನಿಕರ ವೀಕ್ಷಣೆಗೆ ತೆರೆದಿರುತ್ತದೆ. ಮೃಗಾಲಯ,ಪ್ರಾದೇಶಿಕ ವಿಜ್ಞಾನ ಕೇಂದ್ರ, ತಾರಾಲಯ, ಲೇಕ್ ಗಾರ್ಡನ್ ಮತ್ತು ಸಂಸ್ಕೃತಿ  ಗ್ರಾಮ ಸಾರ್ವಜನಿಕರ ವೀಕ್ಷಣೆಗೆ ಇತರೆ ಎಲ್ಲಾ ದಿನಗಳಂತೆ ತೆರೆದಿರುತ್ತದೆ ಎಂದು ಕಾರ್ಯನಿರ್ವಾಹಕ ನಿರ್ದೇಶಕರು, ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮ, ಇವರ ಪ್ರಕಟಣೆ ತಿಳಿಸಿದೆ.

ಆ.12 ಪಿಲಿಕುಳ ನಿಸರ್ಗಧಾಮ ಸಾರ್ವಜನಿಕರ ವೀಕ್ಷಣೆಗೆ Read More »

ಕರಾವಳಿ

ಯುವತಿ ಕಾಣೆಯಾಗಿದ್ದಾರೆ.

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.9.ಮೂಡುಪೆರಾರ ಗ್ರಾಮದ ಮುಂಡರಬೆಟ್ಟು ಎಂಬಲ್ಲಿನ ವಿನಿತಾ(18) ಎಂಬ ಯುವತಿ ತನ್ನ ಅಜ್ಜಿ ಮನೆಯಿಂದ ಹೋದವಳು ವಾಪಾಸು ಮನೆಗೆ ಬಾರದೆ ಕಾಣೆಯಾಗಿರುವ ಬಗ್ಗೆ ಬಜಪೆ ಪೊಲೀಸು ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಕಾಣೆಯಾದವರ ಚಹರೆ ಇಂತಿವೆ: ಹೆಸರು-ವಿನಿತಾ, ಪ್ರಾಯ-18 ವರ್ಷ 1 ತಿಂಗಳು, ಎತ್ತರ-4 ಅಡಿ 10 ಇಂಚು, ದೈಹಿಕ ಚಹರೆ-ಸಾಧಾರಣ ಮೈಕಟ್ಟು, ಕೋಲು ಮುಖ, ಬಲಬದಿ ಮೂಗಿನಲ್ಲಿ ಮೂಗುತಿ ಧರಿಸಿರುತ್ತಾಳೆ, ಬಿಳಿ ಮೈ ಬಣ್ಣ, ಕಪ್ಪು ಮತ್ತು ಕೆಂಪು ಚೆಕ್ಸ್ ಚೂಡಿದಾರ ಧರಿಸಿರುತ್ತಾಳೆ.

ಯುವತಿ ಕಾಣೆಯಾಗಿದ್ದಾರೆ. Read More »

ಕರಾವಳಿ

ಡೊಂಗರಕೇರಿ ➤ ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.9. ಕರ್ನಾಟಕ ಸರ್ಕಾರವು ಎಡಿಬಿ ನೆರವಿನೊಂದಿಗೆ ಮಂಗಳೂರು ನಗರಕ್ಕೆ ಕ್ವಿಮಿಪ್ ಟ್ರಾಂಚ್-2ರಡಿಯಲ್ಲಿ ಒಳಚರಂಡಿ ಹಾಗೂ ನಿರಂತರ ನೀರು ಸರಬರಾಜು ಯೋಜನೆಯನ್ನು ಅನುಷ್ಠಾನ ಗೊಳಿಸಲಾಗುತ್ತಿದೆ. ಆಗಸ್ಟ್ 9 ರಂದು ಬೆಳಿಗ್ಗೆ 11 ಗಂಟೆಗೆ ವಾರ್ಡ್ ನಂ.42 ರಲ್ಲಿ ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆಯನ್ನು ಡೊಂಗರಕೇರಿಯ ಬಿ.ಇ.ಎಮ್ ಅನುದಾನಿತ ಶಾಲೆಯಲ್ಲಿ ಕೆಯುಐಡಿಎಫ್‍ಸಿ ಮತ್ತು ಮಂಗಳೂರು ಮಹಾನಗರ ಪಾಲಿಕೆ ಸಹಯೋಗದಿಂದ ಆಯೋಜಿಸಲಾಗಿದೆ ಮಂಗಳೂರು ಮಹಾನಗರ ಪಾಲಿಕೆ ಪ್ರಕಟಣೆ ತಿಳಿಸಿದೆ.

ಡೊಂಗರಕೇರಿ ➤ ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆ Read More »

ಕರಾವಳಿ

ಭಾರತೀಯ ಅಂಚೆ ಇಲಾಖೆ ➤ಮಕ್ಕಳ ಹಕ್ಕುಗಳು- ‘ಅಂಚೆ ಚೀಟಿ ಡಿಸೈನ್ ಸ್ಪರ್ಧೆ’

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.9.ಭಾರತೀಯ ಅಂಚೆ ಇಲಾಖೆಯು ಅಂಚೆ ಚೀಟಿ ಡಿಸೈನ್ ಸ್ಪರ್ಧೆಯನ್ನು “ಮಕ್ಕಳ ಹಕ್ಕುಗಳು” ಎಂಬ ವಿಷಯದಲ್ಲಿ 1 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದೆ. ಡಿಸೈನ್ ಸ್ವಂತದ್ದಾಗಿದ್ದು, ಸ್ಪೀಡ್ ಪೋಸ್ಟ್ ಮುಖಾಂತರ ಎ4 ಸೈಜ್ ಎನ್ವಲಪ್‍ನಲ್ಲಿ “ಮಕ್ಕಳ ದಿನಾಚರಣೆ 2019- ಸ್ಟಾಂಪ್ ಡಿಸೈನ್ ಸ್ಪರ್ಧೆ” ಎಂದು ನಮೂದಿಸಿರಬೇಕು. ಅಸಿಸ್ಟೆಂಟ್ ಡೈರೆಕ್ಟರ್ ಜನರಲ್, ರೂಮ್ ನಂ 108, ಡಾಕ್ ಭವನ್, ಪಾರ್ಲಿಮೆಂಟ್ ರಸ್ತೆ, ದೆಹಲಿ-110001” ಈ ವಿಳಾಸಕ್ಕೆ ಸಪ್ಟೆಂಬರ್ 20 ರ ಒಳಗಡೆ

ಭಾರತೀಯ ಅಂಚೆ ಇಲಾಖೆ ➤ಮಕ್ಕಳ ಹಕ್ಕುಗಳು- ‘ಅಂಚೆ ಚೀಟಿ ಡಿಸೈನ್ ಸ್ಪರ್ಧೆ’ Read More »

ಕರಾವಳಿ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ➤ಆರೋಗ್ಯ ಜಾಗೃತಿ:ವಸ್ತು ಪ್ರದರ್ಶನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.9. ವಿವಿಧ ಸಾಂಕ್ರಾಮಿಕ ರೋಗಗಳ ಹಾಗೂ ಆರೋಗ್ಯ ಜಾಗೃತಿ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲು, ಮಾಹಿತಿ ಪ್ರದರ್ಶನ ನಗರದ ಲಾಲ್‍ಬಾಗ್ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಗಸ್ಟ್ 8 ರಂದು ಚಾಲನೆ  ನೀಡಲಾಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ ರಾವ್ ಅವರು ಪ್ರದರ್ಶನ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಸಾಂಕ್ರಾಮಿಕ ರೋಗಗಳ ನಿಯಂತ್ರಣ ನಮ್ಮಿಂದಲೇ ಸಾಧ್ಯ. ವೈದ್ಯಕೀಯ ಚಿಕಿತ್ಸೆಗಳ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ➤ಆರೋಗ್ಯ ಜಾಗೃತಿ:ವಸ್ತು ಪ್ರದರ್ಶನ Read More »

ಕರಾವಳಿ

ಕೊಕ್ಕಡ: ಪ್ರವಾಹದ ನೀರಿನ ಸೆಳೆತಕ್ಕೊಳಗಾಗಿ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ.09. ಕಪಿಲಾ ನದಿಯಲ್ಲಿ ಮುಳುಗಿ ಯುವಕನೋರ್ವ ಮೃತಪಟ್ಟ ಘಟನೆ ನೆಲ್ಯಾಡಿ ಸಮೀಪದ ಕೊಕ್ಕಡದಲ್ಲಿ ಗುರುವಾರದಂದು ನಡೆದಿದೆ. ಮೃತ ಯುವಕನನ್ನು ಕೊಕ್ಕಡ ನಿವಾಸಿ ವಿಶ್ವನಾಥ ಎಂಬವರ ಪುತ್ರ ಭವಿತ್(23) ಎಂದು ಗುರುತಿಸಲಾಗಿದೆ. ಕೊಕ್ಕಡ ಸಮೀಪದ ಸುದೆಗಂಡಿ ಎಂಬಲ್ಲಿ ಕಪಿಲಾ ನದಿಯಲ್ಲಿ ಇಳಿದ ಸಂದರ್ಭದಲ್ಲಿ ಪ್ರವಾಹದ ನೀರಿನ ಸೆಳೆತಕ್ಕೊಳಗಾಗಿ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ನದಿಯಲ್ಲಿ ನೆರೆ ನೀರಿನ ಪ್ರವಾಹ ಅಧಿಕವಾಗಿರುವ ಹಿನ್ನೆಲೆಯಲ್ಲಿ ಯಾರೂ ನೀರಿಗೆ ಇಳಿಯುವ ಸಾಹಸಕ್ಕೆ ಕೈ ಹಾಕಬಾರದೆಂದು ಅಧಿಕಾರಿಗಳು ಎಚ್ಚರಿಕೆ

ಕೊಕ್ಕಡ: ಪ್ರವಾಹದ ನೀರಿನ ಸೆಳೆತಕ್ಕೊಳಗಾಗಿ ಯುವಕ ಮೃತ್ಯು Read More »

ಕರಾವಳಿ

ಬೆಳ್ಳಾರೆ: ಎರಡಂತಸ್ತಿನ ಕಟ್ಟಡದಿಂದ ಆಯತಪ್ಪಿ ಕೆಳಕ್ಕೆ ಬಿದ್ದ ಗುತ್ತಿಗೆದಾರ ➤ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಆ.08. ಎರಡಂತಸ್ತಿನ ಮನೆಯಿಂದ ಆಯತಪ್ಪಿ ಕೆಳಕ್ಕೆ ಬಿದ್ದು ಗುತ್ತಿಗೆ ಕಾರ್ಮಿಕರೋರ್ವರು ಮೃತಪಟ್ಟ ಘಟನೆ ಗುರುವಾರದಂದು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಮೂಲತಃ ಹಾಸನದ ಪ್ರಸ್ತುತ ಪಳ್ಳಿಮಜಲು ಎಂಬಲ್ಲಿ ವಾಸವಿದ್ದ ಮೇಸ್ತ್ರಿ ಕೆಲಸದ ಗುತ್ತಿಗೆ ನಿರ್ವಹಿಸುತ್ತಿದ್ದ ಅಲಿ ಎಂದು ಗುರುತಿಸಲಾಗಿದೆ. ಬೆಳ್ಳಾರೆಯ ತಡಗಜೆ ಎಂಬಲ್ಲಿ ಎರಡಂತಸ್ತಿನ ಮನೆ ನಿರ್ಮಾಣದ ನೇತೃತ್ವ ವಹಿಸಿಕೊಂಡಿದ್ದು, ಕೆಲಸ ಪೂರ್ತಿಯಾದ ಹಿನ್ನೆಲೆಯಲ್ಲಿ ಗುರುವಾರದಂದು ಅಳತೆಗಾಗಿ ಎರಡನೇ ಮಹಡಿಯ ಮೇಲೆ ತೆರಳಿದ್ದ ವೇಳೆ ಆಯ ತಪ್ಪಿ ಕೆಳಗೆ

ಬೆಳ್ಳಾರೆ: ಎರಡಂತಸ್ತಿನ ಕಟ್ಟಡದಿಂದ ಆಯತಪ್ಪಿ ಕೆಳಕ್ಕೆ ಬಿದ್ದ ಗುತ್ತಿಗೆದಾರ ➤ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತ್ಯು Read More »

ಕರಾವಳಿ

ಕರಾವಳಿಯಲ್ಲಿ ನಿಲ್ಲದ ವರ್ಷಧಾರೆ ➤ ನಾಳೆ (ಶುಕ್ರವಾರ) ದಕ್ಷಿಣ ಕನ್ನಡದ ಎಲ್ಲಾ ಶಾಲಾ ಕಾಲೇಜುಗಳಿಗೆ ಮತ್ತೆ ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.08. ಕರಾವಳಿಯಲ್ಲಿ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ (ಪದವಿ ತರಗತಿವರೆಗೆ) ಶುಕ್ರವಾರದಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ. ಕರಾವಳಿ ಸೇರಿದಂತೆ ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಪುತ್ತೂರು, ಕಡಬ ತಾಲೂಕುಗಳಲ್ಲಿ ಕಳೆದ 24 ಗಂಟೆಗಳಲ್ಲಿ ಅತಿ ಹೆಚ್ಚಿನ ಮಳೆ ದಾಖಲಾಗಿದೆ. ಜಿಲ್ಲೆಯ ಹೆಚ್ಚಿನ ನದಿಗಳು ತುಂಬಿ

ಕರಾವಳಿಯಲ್ಲಿ ನಿಲ್ಲದ ವರ್ಷಧಾರೆ ➤ ನಾಳೆ (ಶುಕ್ರವಾರ) ದಕ್ಷಿಣ ಕನ್ನಡದ ಎಲ್ಲಾ ಶಾಲಾ ಕಾಲೇಜುಗಳಿಗೆ ಮತ್ತೆ ರಜೆ Read More »

ಕರಾವಳಿ

ಹೊಸ್ಮಠ :ಹಳೆ ಸೇತುವೆ ಇಡೀ ದಿನ ಮುಳುಗಡೆ

(ನ್ಯೂಸ್ ಕಡಬ) newskadaba.com ಹೊಸ್ಮಠ, ಆಗಸ್ಟ್.8.ಗುಂಡ್ಯ ಹೊಳೆಗೆ ಅಡ್ಡಲಾಗಿರುವ ಕಡಬ ಸಮೀಪದ ಹೊಸ್ಮಠ ಹಳೆ ಸೇತುವೆ ಕಳೆದ ಬುದವಾರ ರಾತ್ರಿಯಿಂದ  ಮುಳುಗಡೆಯಾಗಿದೆ. ಈ ಸೇತುವೆಯ ಪಕ್ಕದಲ್ಲಿರು ನೂತನ ಸರ್ವಋತು ಸೇತುವೆಯಲ್ಲಿ ಪ್ರಯಾಣಿಸುವ ಹಲವಾರು ಮಂದಿ ತಮ್ಮ ವಾಹನವನ್ನು ಸೇತುವೆಯಲ್ಲಿ ನಿಲ್ಲಿಸಿ ನೀರನನು ವೀಕ್ಷಿಸುತ್ತಿದ್ದರು, ಸೇತುವೆ ಮೇಲೆ ನಿಂತು ಅಪಾಯದ ಭಂಗಿಯಲ್ಲಿಕೆಲವರು ಸೆಲ್ಪಿಗೆ ಮೊರೆಹೋಗುತ್ತಿದ್ದರು.  

ಹೊಸ್ಮಠ :ಹಳೆ ಸೇತುವೆ ಇಡೀ ದಿನ ಮುಳುಗಡೆ Read More »

ಕರಾವಳಿ
Scroll to Top