ಸ್ಟೂಡೆಂಟ್ ಪೊಲೀಸ್ ಕೆಡೆಟ್ ಯೋಜನೆ ಉದ್ಘಾಟನೆ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.3.2019-20ನೇ ಸಾಲಿನ ಸ್ಟೂಡೆಂಟ್ ಪೊಲೀಸ್ ಕೆಡೆಟ್ (ಎಸ್‍ಪಿಸಿ) ಯೋಜನೆಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಹತ್ತು ಶಾಲೆಗಳಲ್ಲಿ ಆರಂಭಿಸಲು ನಿರ್ಧರಿಸಲಾಗಿದೆ. ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆಗಸ್ಟ್ 3 ರಂದು ಬೆಳಿಗ್ಗೆ 10 ಗಂಟೆಗೆ ಮಂಗಳೂರಿನ ಕೇಂದ್ರೀಯ ವಿದ್ಯಾಲಯ ನಂ-2 ಎಕ್ಕೂರು ಇಲ್ಲಿ ಉದ್ಘಾಟಿಸಲಿದ್ದಾರೆ. ಈ ಯೋಜನೆಯು ಜಿಲ್ಲೆಯಲ್ಲಿ ಏಕಕಾಲದಲ್ಲಿ ಉದ್ಘಾಟನೆಗೊಳ್ಳಲಿವೆ. ಆ ಶಾಲೆಗಳ ವಿವರ ಇಂತಿವೆ: ಕೇಂದ್ರೀಯ ವಿದ್ಯಾಲಯ ಬೈಕಂಪಾಡಿ ಮಂಗಳೂರು, ಸರಕಾರಿ ಪದವಿಪೂರ್ವ ಕಾಲೇಜು ಕೊಂಬೆಟ್ಟು ಪುತ್ತೂರು ತಾಲೂಕು, ಸರ್ಕಾರಿ […]

ಸ್ಟೂಡೆಂಟ್ ಪೊಲೀಸ್ ಕೆಡೆಟ್ ಯೋಜನೆ ಉದ್ಘಾಟನೆ ಕಾರ್ಯಕ್ರಮ Read More »

ಕರಾವಳಿ

ವಿಶ್ವವಿದ್ಯಾನಿಕಾಲೇಜಿನ ರವೀಂದ್ರ ಕಲಾಭವನ: ಡಾ. ರಿಚರ್ಡ್ ಕ್ಯಾಸ್ಟಲಿನೋ ಕುರಿತ ಸಾಕ್ಷ್ಯಚಿತ್ರಪ್ರದರ್ಶನ➤ಪತ್ರಕರ್ತರು ಆಗಮಿಸಲು ಕೋರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.3.ಇಂದು  ಸಂಜೆ 5 ಗಂಟೆಗೆ ಬೆಳ್ಳಿ ಹೆಜ್ಜೆಯಲ್ಲಿ ಡಾ. ರಿಚರ್ಡ್ ಕ್ಯಾಸ್ಟಲಿನೋ ಅವರನ್ನು ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ನಡೆಸಲಾಗುತ್ತದೆ. ಈ ಕಾರ್ಯಕ್ರಮವನ್ನು ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಪತ್ರಕರ್ತರನ್ನು ಆಗಮಿಸುವಂತೆ ಕೋರಿದೆ.

ವಿಶ್ವವಿದ್ಯಾನಿಕಾಲೇಜಿನ ರವೀಂದ್ರ ಕಲಾಭವನ: ಡಾ. ರಿಚರ್ಡ್ ಕ್ಯಾಸ್ಟಲಿನೋ ಕುರಿತ ಸಾಕ್ಷ್ಯಚಿತ್ರಪ್ರದರ್ಶನ➤ಪತ್ರಕರ್ತರು ಆಗಮಿಸಲು ಕೋರಿಕೆ Read More »

ಕರಾವಳಿ

ಕೆಎಸ್ ಆರ್ ಟಿ ಸಿ ➤ಪೂನಾ- ಮಂಗಳೂರು ನೂತನ ಅಂಬಾರಿ ಡ್ರೀಮ್ ಕ್ಲಾಸ್ / ಎ.ಸಿ ಸ್ಲೀಪರ್ ವಾಹನ ಕಾರ್ಯಾಚಣಾ ಸಮಾರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.3.ಕೆಎಸ್‍ಆರ್‍ಟಿಸಿ ವತಿಯಿಂದ ಮಂಗಳೂರು- ಪೂನಾ- ಮಂಗಳೂರು ನೂತನ ಅಂಬಾರಿ ಡ್ರೀಮ್ ಕ್ಲಾಸ್ ವ ಎ.ಸಿ ಸ್ಲೀಪರ್ ವಾಹನಕಾರ್ಯಾಚರಣಾ ಸಮಾರಂಭವನ್ನು ಆಯೋಜಿಸಲಾಗಿದೆ. ಅದ್ದರಿಂದ  ಈ ಕಾರ್ಯಕ್ರಮವನ್ನು ಅಪರಾಹ್ನ 3 ಗಂಟೆಗೆ ಕಾರ್ಯಾಚರಣೆ ಸಮಾರಂಭವನ್ನು ಕೆ.ಎಸ್.ಆರ್.ಟಿ.ಸಿ ಆವರಣದಲ್ಲಿ ನಡೆಸುದಾಗಿ ನಿರ್ಧರಿಸಿದೆ.

ಕೆಎಸ್ ಆರ್ ಟಿ ಸಿ ➤ಪೂನಾ- ಮಂಗಳೂರು ನೂತನ ಅಂಬಾರಿ ಡ್ರೀಮ್ ಕ್ಲಾಸ್ / ಎ.ಸಿ ಸ್ಲೀಪರ್ ವಾಹನ ಕಾರ್ಯಾಚಣಾ ಸಮಾರಂಭ Read More »

ಕರಾವಳಿ

ಮೀನುಗಾರಿಕಾ ಕಾಲೇಜು : “ಸ್ವಚ್ಚತಾ ಪಕ್ವಾಡ” ➤ ಕಾರ್ಯಕ್ರಮಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.3.ನಗರದ ಎಕ್ಕೂರಿನ ಸಮೀಪವಿರುವ ಮತ್ಸ್ಯನಗರ ಕ್ಯಾಂಪಾಸ್‍ನ ಮೀನುಗಾರಿಕಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕವು ಎನ್ನೆಸ್ಸೆಸ್‍ನ 50ನೇ ವರ್ಷದ ಸಮಾರಂಭದ ಹಿನ್ನೆಲೆಯಲ್ಲಿ ಗುರುವಾರ ಸ್ವಚ್ಚತಾ ಪಕ್ವಾಡ ಕಾರ್ಯಕ್ರಮಕ್ಕೆ ಚಾಲನೆ ನೀಡಿತು. ಕೇಂದ್ರ ಸರ್ಕಾರದ ಯುವಜನ ಸೇವೆ ಮತ್ತು ಕ್ರೀಡಾ ಸಚಿವಾಲಯದ ಎನ್ನೆಸ್ಸೆಸ್ ನಿರ್ದೇಶನಾಲಯವು ಬಾರತದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಮಾರ್ಗದರ್ಶನದಂತೆ ಜಾರಿಗೊಳಿಸಿದ ಈ ಕಾರ್ಯಕ್ರಮವನ್ನು ಆಗಸ್ಟ್ 1 ರಿಂದ 15 ರವರೆಗೆ ನಡೆಸಲು ಸಜ್ಜುಗೊಳಿಸಲಾಯಿತು. ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ ಕಾಲೇಜಿನ ಮಾಜಿ

ಮೀನುಗಾರಿಕಾ ಕಾಲೇಜು : “ಸ್ವಚ್ಚತಾ ಪಕ್ವಾಡ” ➤ ಕಾರ್ಯಕ್ರಮಕ್ಕೆ ಚಾಲನೆ Read More »

ಕರಾವಳಿ

ನೇಲ್ಯಡ್ಕ ಶಾಲೆಗೆ ಶಿಕ್ಷಕರಿಗಾಗಿ ಮೌನ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಆಗಸ್ಟ್.2.ಐತೂರು ಗ್ರಾಮದ ನೇಲ್ಯಡ್ಕ ಹಿ.ಪ್ರಾ. ಶಾಲೆಗೆ ಶಿಕ್ಷಕರನ್ನು ನೀಡುವಂತೆ ಆಗ್ರಹಿಸಿ ಶಾಲಾಭಿವೃಧ್ದಿ ಸಮಿತಿ, ಹಿರಿಯ ವಿದ್ಯಾರ್ಥಿ ಸಂಘ, ಪೋಷಕರು ಸೇರಿ ಐತೂರು ಗ್ರಾ.ಪಂ. ನೇತೃತ್ವದಲ್ಲಿ ಆ.2 ರಂದು ಶಾಲಾ ವಠಾರದಲ್ಲಿ ಮೌನ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷೆ ಲಲಿತರವರು, ನಾವು ಶಾಲೆಯಲ್ಲಿ ಶಿಕ್ಷಕರ ಕೊರತೆಯಿಂದ ವಿದ್ಯಾರ್ಥಿಗಳಿಗೆ ಸರಿಯಾಗಿ ಪಾಠ ಸಿಗುತ್ತಿಲ್ಲ, ಶಾಲೆಗೆ ಶಿಕ್ಷಕರನ್ನು ಕೊಡುವಂತೆ ಇಲ್ಲಿಯ ಗ್ರಾ.ಪಂ. ಅಧ್ಯಕ್ಷರ ನೇತ್ರತ್ವದಲ್ಲಿ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ

ನೇಲ್ಯಡ್ಕ ಶಾಲೆಗೆ ಶಿಕ್ಷಕರಿಗಾಗಿ ಮೌನ ಪ್ರತಿಭಟನೆ Read More »

ಕರಾವಳಿ

ನೇತ್ರಾವತಿ ಸೇತುವೆಗೆ ಸಿಸಿಟಿವಿ ಅಳವಡಿಸುವಂತೆ ಮನವಿ ➤ ಶಾಸಕ ವೇದವ್ಯಾಸ ಕಾಮತ್

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.2.ಶುಕ್ರವಾರ ಬೆಳಿಗ್ಗೆ ಫೇಸ್‌ ಬುಕ್‌ ಪೋಸ್ಟ್‌ ಮಾಡಿರುವ ಶಾಸಕ ವೇದವ್ಯಾಸ ಕಾಮತ್‌ ರವರು, ಮಾಜಿ ಮುಖ್ಯಮಂತ್ರಿ ಎಸ್‌ ಎಂ ಕೃಷ್ಣ ಅಳಿಯ, ಕೆಫೆ ಕಾಫಿ ಡೇ ಸ್ಥಾಪಕ ಸಿದ್ದಾರ್ಥ ವಿ.ಜಿ ಅವರು ಇತ್ತೀಚೆಗೆ ಉಳ್ಳಾಲದ ನೇತ್ರಾವತಿ ಸೇತುವೆಯ ಬಳಿ ಸಾವನ್ನಪ್ಪಿದ ಬಳಿಕ ಮುಂದಿನ ದಿನಗಳಲ್ಲಿ ಇಂತಹ ಅನಾಹುತಗಳನ್ನು ತಪ್ಪಿಸುವ ಸಲುವಾಗಿ ಸೇತುವೆಗೆ ಸಿಸಿಟಿವಿ ಅಳವಡಿಸುವ ಒಂದು ಚಿಂತನೆ ನಡೆಸಿದ್ದಾರೆ. ಉಳ್ಳಾಲ ಸೇತುವೆಗೆ ಸಿಸಿಟಿವಿ ಅಳವಡಿಕೆಗೆ ಬಗ್ಗೆ ಜಿಲ್ಲಾಧಿಕಾರಿಯವರೊಂದಿಗೆ ಸಮಾಲೋಚನೆ ನಡೆಸುತ್ತೇನೆ ಎಂದು

ನೇತ್ರಾವತಿ ಸೇತುವೆಗೆ ಸಿಸಿಟಿವಿ ಅಳವಡಿಸುವಂತೆ ಮನವಿ ➤ ಶಾಸಕ ವೇದವ್ಯಾಸ ಕಾಮತ್ Read More »

ಕರಾವಳಿ

ನೆಲ್ಯಾಡಿ: ಟ್ಯಾಂಕರ್ ಪಲ್ಟಿ – ಗ್ಯಾಸ್ ಸೋರಿಕೆ ➤ ಉಪ್ಪಿನಂಗಡಿ – ನೆಲ್ಯಾಡಿ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ.02. ಚಾಲಕನ ನಿಯಂತ್ರಣ ತಪ್ಪಿದ ಗ್ಯಾಸ್ ಟ್ಯಾಂಕರೊಂದು ಪಲ್ಟಿಯಾದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ನೆಲ್ಯಾಡಿ ಸಮೀಪದ ಲಾವತ್ತಡ್ಕ ರೆಖ್ಯ ಎಂಬಲ್ಲಿ ಶುಕ್ರವಾರದಂದು ಸಂಭವಿಸಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ಗ್ಯಾಸ್ ತುಂಬಿಸಿಕೊಂಡು ತೆರಳುತ್ತಿದ್ದ ಟ್ಯಾಂಕರ್ ರೆಖ್ಯ ಸಮೀಪದ ತಿರುವಿನಲ್ಲಿ ರಸ್ತೆಗಡ್ಡವಾಗಿ ಮಗುಚಿ ಬಿದ್ದಿದೆ. ಪರಿಣಾಮ ಟ್ಯಾಂಕರ್ ನಿಂದ ಗ್ಯಾಸ್ ಸೋರಿಕೆಯಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದಾರೆ. ವಾಹನ ಸಂಚಾರಕ್ಕೆ ನಿರ್ಬಂಧ

ನೆಲ್ಯಾಡಿ: ಟ್ಯಾಂಕರ್ ಪಲ್ಟಿ – ಗ್ಯಾಸ್ ಸೋರಿಕೆ ➤ ಉಪ್ಪಿನಂಗಡಿ – ನೆಲ್ಯಾಡಿ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತ Read More »

ರಾಷ್ಟ್ರೀಯ ನ್ಯೂಸ್

ಕರ್ನಾಟಕ ಚಲನಚಿತ್ರ ಅಕಾಡೆಮಿ ➤ ಪತ್ರಕರ್ತರಿಗೆ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.2.ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರಾದ  ಶ್ರೀ ನಾಗತಿಹಳ್ಳಿ ಚಂದ್ರಶೇಖರ್ ಅವರು ಇಂದು ಸಂಜೆ 4 ಗಂಟೆಗೆ  ಸರಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಸಭೆಯನ್ನು ಆಯೋಜಿಸಿದ್ದಾರೆ. ಅವರು(ಮಿನಿ ವಿಧಾನ ಸೌಧ ಆವರಣ)ಪತ್ರಿಕಾಗೋಷ್ಠಿ ನಡೆಸಲು ಉದ್ದೇಶಿಸಿರುತ್ತಾರೆ.ಪತ್ರಕರ್ತರು ಆಗಮಿಸಲು ಕೋರಿದೆ.

ಕರ್ನಾಟಕ ಚಲನಚಿತ್ರ ಅಕಾಡೆಮಿ ➤ ಪತ್ರಕರ್ತರಿಗೆ ಆಹ್ವಾನ Read More »

ಕರಾವಳಿ

ಉಪ್ಪಿನಂಗಡಿ: ಬೈಕಿನ ಹಿಂಬದಿ ಚಕ್ರಕ್ಕೆ ಬಟ್ಟೆ ಸಿಲುಕಿ ರಸ್ತೆಗೆಸೆಯಲ್ಪಟ್ಟ ಮಹಿಳೆ ➤ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ.02. ತಾನು ಧರಿಸಿದ್ದ ಬಟ್ಟೆ ಬೈಕಿನ ಹಿಂಬದಿ ಚಕ್ರಕ್ಕೆ ಸಿಲುಕಿದ ಪರಿಣಾಮ ರಸ್ತೆಗೆಸೆಯಲ್ಪಟ್ಟು ಮಹಿಳೆಯೋರ್ವರು ಮೃತಪಟ್ಟ ಘಟನೆ ಗುರುವಾರ ಸಂಜೆ ಬೆಳ್ತಂಗಡಿಯಲ್ಲಿ ಸಂಭವಿಸಿದೆ. ಮೃತ ಮಹಿಳೆಯನ್ನು ಬೆಳ್ತಂಗಡಿ ಕಣಿಯೂರು ಸಮೀಪದ ನಿವಾಸಿ ಫಾತಿಮಾ ಎಂದು ಗುರುತಿಸಲಾಗಿದೆ. ಮೃತ ಮಹಿಳೆಯು ರಾಝಿಕ್ ಎಂಬವರೊಂದಿಗೆ ಗುರುವಾರ ಸಂಜೆ ಬೈಕಿನಲ್ಲಿ ಸಹ ಸವಾರೆಯಾಗಿ ಸಂಚರಿಸುತ್ತಿದ್ದ ವೇಳೆ ಉಪ್ಪಿನಂಗಡಿ – ಗುರುವಾಯನಕೆರೆ ರಸ್ತೆಯ ಗೋವಿಂದೂರು ಬಸ್ಸು ನಿಲ್ದಾಣದ ಬಳಿ ಫಾತಿಮಾ ಧರಿಸಿದ್ದ ಬಟ್ಟೆ ಬೈಕ್ ನ ಹಿಂಬದಿ

ಉಪ್ಪಿನಂಗಡಿ: ಬೈಕಿನ ಹಿಂಬದಿ ಚಕ್ರಕ್ಕೆ ಬಟ್ಟೆ ಸಿಲುಕಿ ರಸ್ತೆಗೆಸೆಯಲ್ಪಟ್ಟ ಮಹಿಳೆ ➤ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತ್ಯು Read More »

ಕರಾವಳಿ

ಕೇಂದ್ರ ಆರೋಗ್ಯ & ಕುಟುಂಬ ಕಲ್ಯಾಣ ಸಚಿವ ಡಾ.ಹರ್ಷವರ್ಧನ್ ಭೇಟಿಯಾದ ➤ಸಂಸದ ನಳಿನ್ ಕುಮಾರ್ ಕಟೀಲ್

(ನ್ಯೂಸ್ ಕಡಬ) newskadaba.com ನವದೆಹಲಿ, ಆಗಸ್ಟ್.2.ಸಂಸದ ಶ್ರೀ.ನಳಿನ್ ಕುಮಾರ್ ಕಟೀಲ್ ಇವರು ಇಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಡಾ.ಹರ್ಷವರ್ಧನ್ ಇವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಪ್ರಧಾನ ಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆಯಡಿ ಮಂಗಳೂರಿಗೆ ಒಂದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮಂಜೂರು ಮಾಡುವಂತೆ ಸಚಿವರಿಗೆ ಮನವಿ ಮಾಡಿದರು. ಮಂಗಳೂರಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸುವುದರಿಂದ ಕರಾವಳಿ ಕರ್ನಾಟಕದಲ್ಲಿ ಆರೋಗ್ಯ ಕ್ಷೇತ್ರಕ್ಕೆ ಉತ್ತೇಜನ ಸಿಗುತ್ತದೆ ಅಲ್ಲದೇ ರಾಜ್ಯದ ಕರಾವಳಿ ಜಿಲ್ಲೆಗಳ ಜನಸಾಮಾನ್ಯರಿಗೆ ಇಂತಹ ಆಸ್ಪತ್ರೆಯಿಂದ ಕೈಗೆಟುಕುವ ಶುಲ್ಕದಲ್ಲಿ

ಕೇಂದ್ರ ಆರೋಗ್ಯ & ಕುಟುಂಬ ಕಲ್ಯಾಣ ಸಚಿವ ಡಾ.ಹರ್ಷವರ್ಧನ್ ಭೇಟಿಯಾದ ➤ಸಂಸದ ನಳಿನ್ ಕುಮಾರ್ ಕಟೀಲ್ Read More »

ಕರಾವಳಿ
Scroll to Top