ಚಲಿಸುತ್ತಿರುವ ಉಗಿಬಂಡಿಯಿಂದ ಕೆಳಕ್ಕೆ ಧುಮುಕಿ ಗಾಯಗೊಂಡ ಮಹಿಳೆ

(ನ್ಯೂಸ್ ಕಡಬ) newskadaba.com ಉಡುಪಿ, ಜುಲೈ.29.ತಿರುವನಂತಪುರ – ನಿಜಾಮುದ್ದೀನ್‌ ರೈಲಿನಲ್ಲಿ (22655) ಸಂಚರಿಸುತ್ತಿದ್ದ ಮಹಿಳೆ ಚಲಿಸುತ್ತಿರುವ ರೈಲಿನಿಂದ ಕೆಳಕ್ಕೆ ಧುಮುಕಿ ಗಾಯಗೊಂಡ ಘಟನೆ ಶನಿವಾರ ರಾತ್ರಿ ವೇಳೆ ಬೈಂದೂರು ರೈಲು ನಿಲ್ದಾಣದಲ್ಲಿ ವರದಿಯಾಗಿದೆ. ಕೂಡಲೇ ರಿಕ್ಷಾ ಚಾಲಕ ಮಹೇಶ್‌ ಅವರು ಗಾಯಾಳನ್ನು ಬೈಂದೂರಿನ ಅಂಜಲಿ ಆಸ್ಪತ್ರೆಗೆ ದಾಖಲಿಸಿದರು.“ಇವರು ಮಣಿಪಾಲದಲ್ಲಿ ಕೆಲಸ ಮಾಡುತ್ತಿದ್ದು ಉಡುಪಿ ರೈಲು ನಿಲ್ದಾಣದಲ್ಲಿ ಬೈಂದೂರಿಗೆ ಹೋಗಲು ಜನರಲ್‌ ಟಿಕೆಟ್‌ ಪಡೆದಿದ್ದರು. ಅವರು ತಪ್ಪಾಗಿ ತಿಳಿದು ದಿಲ್ಲಿಗೆ ತೆರಳುವ ಈ ರೈಲನ್ನು ಹತ್ತಿದ್ದರು. ಈ ರೈಲಿಗೆ […]

ಚಲಿಸುತ್ತಿರುವ ಉಗಿಬಂಡಿಯಿಂದ ಕೆಳಕ್ಕೆ ಧುಮುಕಿ ಗಾಯಗೊಂಡ ಮಹಿಳೆ Read More »

ಕರ್ನಾಟಕ

ಮುಂಬೈ: ರೆಡ್ ಅಲರ್ಟ್ ಘೋಷಣೆ ➤ಮಹಾರಾಷ್ಟ್ರ ದ ಜನರನ್ನು ಆತಂಕಕ್ಕೆ ನೂಕಿರುವ ವರ್ಷಧಾರೆ

(ನ್ಯೂಸ್ ಕಡಬ) newskadaba.com ಮುಂಬೈ, ಜುಲೈ.29.ಮಹಾರಾಷ್ಟ್ರದಲ್ಲಿ ವರ್ಷಧಾರೆ ಮುಂದುವರಿದಿದ್ದು ಸೋಮವಾರವೂ ಮುಂಬೈನ ಅನೇಕ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರವಿವಾರ ಹಾಗೂ ಸೋಮವಾರಕ್ಕೆ ಮುಂಬೈನ ಬಹುತೇಕ ಪ್ರದೇಶಗಳಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಸೋಮವಾರ ಗುಡುಗು ಸಹಿತ ಧಾರಾಕಾರ ಮಳೆಯಾಗುವುದಾಗಿ ಹವಾಮಾನ ಇಲಾಖೆ  ಮುನ್ಸೂಚನೆ ನೀಡಿರುವ ಕಾರಣ, ಎಲ್ಲರೂ ಅಲರ್ಟ್‌ ಆಗಿರುವಂತೆ ಬೃಹನ್ಮುಂಬೈ ಮಹಾನಗರ ಪಾಲಿಕೆ ಸೂಚಿಸಿದೆ. ರವಿವಾರದ ಮಳೆಯಿಂದ ಮುರ್ಬಾದ್‌ ನಿಂದ ಕಲ್ಯಾಣ್‌ಗೆ ಸಂಪರ್ಕ ಕಲ್ಪಿಸುತ್ತಿದ್ದ ಸೇತುವೆಯು ಭಾಗಶಃ ಕೊಚ್ಚಿ ಹೋಗಿದೆ. ಜನರನ್ನು ಆತಂಕಕ್ಕೆ

ಮುಂಬೈ: ರೆಡ್ ಅಲರ್ಟ್ ಘೋಷಣೆ ➤ಮಹಾರಾಷ್ಟ್ರ ದ ಜನರನ್ನು ಆತಂಕಕ್ಕೆ ನೂಕಿರುವ ವರ್ಷಧಾರೆ Read More »

ರಾಷ್ಟ್ರೀಯ ನ್ಯೂಸ್

ಪಂಜ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಅರೆಭಾಷೆ ಅಧ್ಯಕ್ಷರ ಭೇಟಿ ➤ ದೇವಸ್ಥಾನದ ವತಿಯಿಂದ ಗೌರವ ಅರ್ಪಣೆ

(ನ್ಯೂಸ್ ಕಡಬ) newskadaba.com ಕಡಬ, ಜು.29. ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ರಾಜ್ಯ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿಯ ಅಧ್ಯಕ್ಷ ಪಿ.ಸಿ.ಜಯರಾಂ‌ ಭಾನುವಾರದಂದು ಭೇಟಿ ನೀಡಿದರು. ಪಿ.ಸಿ.ಜಯರಾಂ‌ರವರನ್ನು ದೇವಸ್ಥಾನದ ಆಡಳಿತಾಧಿಕಾರಿ ಡಾ.ದೇವಿಪ್ರಸಾದ್ ಕಾನತ್ತೂರು ಗೌರವಿಸಿದರು. ಈ ಸಂದರ್ಭದಲ್ಲಿ ಜೇಸಿಐ ಪಂಜ ಪಂಚಶ್ರೀ ಘಟಕದ ಅಧ್ಯಕ್ಷ ವಾಸುದೇವ ಮೇಲ್ಪಾಡಿ, ಗ್ರಾಮ ಗೌಡ ಸಮಿತಿಯ ದೇವಿಪ್ರಸಾದ್ ಜಾಕೆ ಉಪಸ್ಥಿತರಿದ್ದರು.

ಪಂಜ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಅರೆಭಾಷೆ ಅಧ್ಯಕ್ಷರ ಭೇಟಿ ➤ ದೇವಸ್ಥಾನದ ವತಿಯಿಂದ ಗೌರವ ಅರ್ಪಣೆ Read More »

ಕರಾವಳಿ

ಅಪರಿಚಿತ ಗುಂಪೊದರಿಂದ ನಿವೃತ್ತ ಸೇನಾಧಿಕಾರಿಯ ಹತ್ಯೆ

(ನ್ಯೂಸ್ ಕಡಬ) newskadaba.com ಅಮೇಠಿ, ಜುಲೈ.29.ನಿವೃತ್ತ ಸೇನಾಧಿಕಾರಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮ ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದ ಅಮೇಠಿಯಲ್ಲಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ನಡೆದಾಗ ಮನೆಯಲ್ಲಿ ಯಾರೂ ಇರಲಿಲ್ಲ. ಅಪರಿಚಿತ ವ್ಯಕ್ತಿಗಳ ಗುಂಪೊಂದು ರಾತ್ರಿ ವೇಳೆ ಏಕಾಏಕಿ ಮನೆಯೊಳಗೆ ನುಗ್ಗಿ  ದೊಣ್ಣೆಗಳಿಂದ ಅಮಾನತ್‌ ಉಲ್ಲಾ ಅವರ ಮೇಲೆ ಹಲ್ಲೆ ಮಾಡಿದೆ. ತಮ್ಮ ಮನೆ ಮುಂಭಾಗದಲ್ಲಿರುವ ಅಂಗಡಿಯಲ್ಲಿನ ಸಾಮಾನುಗಳನ್ನು ಕಳವು ಮಾಡಲು ಯತ್ನಿಸುತ್ತಿರುವಾಗ ಪತಿ ಅಮಾನುಲ್ಲಾ ತಡೆದಿದ್ದರು. ನಾನು ಪೊಲೀಸರಿಗೆ ಮಾಹಿತಿ ನೀಡುತ್ತೇನೆ

ಅಪರಿಚಿತ ಗುಂಪೊದರಿಂದ ನಿವೃತ್ತ ಸೇನಾಧಿಕಾರಿಯ ಹತ್ಯೆ Read More »

ರಾಷ್ಟ್ರೀಯ ನ್ಯೂಸ್

ತಡ ರಾತ್ರಿ ಮುಂಬೈನಿಂದ ಬೆಂಗಳೂರಿಗೆ ಅನರ್ಹ ಶಾಸಕರ ಆಗಮನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜುಲೈ.29.ಅನರ್ಹಗೊಂಡ ಶಾಸಕರು  ಸ್ಪೀಕರ್ ರಮೇಶ್ ಕುಮಾರ್ ಅನರ್ಹತೆ ಆದೇಶ ಹೊರಡಿಸಿದ ಬೆನ್ನಲ್ಲೆ ಮುಂಬೈನಿಂದ ತಂಡವಾಗಿ ಬೆಂಗಳೂರಿಗೆ ಆಗಮಿಸಿದೆ. ಮುನಿರತ್ನ ಹಾಗೂ ಶಿವರಾಮ್ ಹೆಬ್ಬಾರ್ ಇಬ್ಬರೂ ಮುಂಬೈನಿಂದ ಒಂದೇ ವಿಮಾನದಲ್ಲಿ ಆಗಮಿಸಿದ್ದಾರೆ. ಅವರ ನಂತರ ಮತ್ತೊಂದು ವಿಮಾನದಲ್ಲಿ ಎಸ್.ಟಿ ಸೋಮಶೇಖರ್, ಬೈರತಿ ಬಸವಾರಾಜ್, ಗೋಪಾಲಯ್ಯ ಹಾಗೂ ಎಂ.ಟಿ.ಬಿ ನಾಗರಾಜ್ ಬೆಂಗಳೂರಿಗೆ ಆಗಮಿಸಿದ್ದಾರೆ.ಭಾನುವಾರ  ತಡ ರಾತ್ರಿ  ಅನರ್ಹಗೊಂಡ ಶಾಸಕರು  ಮುಂಬೈನಿಂದ ತಂಡವಾಗಿ ಬೆಂಗಳೂರಿಗೆ ಆಗಮಿಸಿದ್ದಾರೆ.

ತಡ ರಾತ್ರಿ ಮುಂಬೈನಿಂದ ಬೆಂಗಳೂರಿಗೆ ಅನರ್ಹ ಶಾಸಕರ ಆಗಮನ Read More »

ಕರಾವಳಿ

ಕೋಡಿಂಬಾಳ: ಎಂಸಿವೈಎಂ ವತಿಯಿಂದ ಗ್ರೀನ್ ಸಂಡೇ ಕಾರ್ಯಕ್ರಮ ➤ ಚರ್ಚ್ ಪರಿಸರದಲ್ಲಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಕಡಬ, ಜು.29. ಕೋಡಿಂಬಾಳ ಸಂತ ಜಾರ್ಜ್ ಮಲಂಕರ ಕ್ಯಾಥೊಲಿಕ್‌ ಯೂತ್ ಮೂವ್ ಮೆಂಟ್ (ಎಂ.ಸಿ.ವೈ.ಯಂ) ನ ವತಿಯಿಂದ ಗ್ರೀನ್ ಸಂಡೇ ಆಚರಿಸಲಾಯಿತು. ಭಾನುವಾರದ ದಿವ್ಯ ಬಲಿಪೂಜೆಯ ನಂತರ ಮಂಗಳೂರು ಉಪ ವಲಯ ಅರಣ್ಯಾಧಿಕಾರಿಗಳಾದ ಕೆ.ಸಿ. ಮಾಥ್ಯು ರವರು ಚರ್ಚ್ ಪರಿಸರದಲ್ಲಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪುತ್ತೂರು ಧರ್ಮಪ್ರಾಂತ್ಯದ ಪ್ರೋಕ್ಯುರೇಟರ್, ಕಿಡ್ಸ್ ನಿರ್ದೇಶಕರು ಹಾಗೂ ಕೋಡಿಂಬಾಳ ಚರ್ಚ್ ಧರ್ಮಗುರುಗಳಾದ ವಂದನೀಯ ರೆ| ಫಾ| ಜಾನ್ ಕುನ್ನತ್ತ್ ರವರು ಗಿಡಗಳನ್ನು ವಿತರಿಸಿ

ಕೋಡಿಂಬಾಳ: ಎಂಸಿವೈಎಂ ವತಿಯಿಂದ ಗ್ರೀನ್ ಸಂಡೇ ಕಾರ್ಯಕ್ರಮ ➤ ಚರ್ಚ್ ಪರಿಸರದಲ್ಲಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ Read More »

ಕರಾವಳಿ

ಶ್ರೀಲಂಕಾ ಪ್ರಧಾನಿ ರಣಿಲ್ ವಿಕ್ರಮ ಸಿಂಘೆ ಕೇರಳ ಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com ಬದಿಯಡ್ಕ, ಜುಲೈ.27.ಇಂದು ಕೇರಳಕ್ಕೆ ಭೇಟಿ ನೀಡಿದ ಶ್ರೀಲಂಕಾ ಪ್ರಧಾನಿ ರಣಿಲ್‌ ವಿಕ್ರಮ ಸಿಂಘೆ ಶುಕ್ರವಾರ ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡಿದ್ದರು.ಇಂದು ಕುಂಬಳೆ ನೀರ್ಚಾಲು ಬಳಿಯ ಬೇಳ ಕುಮಾರ ಮಂಗಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಖಾಸಗಿ ಕಾರ್ಯಕ್ರಮವಾದ ಕಾರಣ ಪತ್ರಕರ್ತರಿಗೆ    ಪ್ರವೇಶನಿಷೇಧಿಸಲಾಗಿತ್ತು.ಕಾಸರಗೋಡು ಬೇಕಲದ ಲಲಿತ್‌ ರೆಸಾರ್ಟ್‌ ಹೆಲಿಪ್ಯಾಡ್‌ ನಿಂದ ಮಂಗಳೂರಿಗೆ ಹೊರಟ ರಣಿಲ್‌ ವಿಕ್ರಮ್‌ ಸಿಂಘೆ ಅವರನ್ನು ಕಾಸರಗೋಡು ಜಿಲ್ಲಾಧಿಕಾರಿ ಸಜಿತ್‌ ಬಾಬು ಬೀಳ್ಕೊಟ್ಟರು.

ಶ್ರೀಲಂಕಾ ಪ್ರಧಾನಿ ರಣಿಲ್ ವಿಕ್ರಮ ಸಿಂಘೆ ಕೇರಳ ಕ್ಕೆ ಭೇಟಿ Read More »

ರಾಷ್ಟ್ರೀಯ ನ್ಯೂಸ್

ಮೂಡುಬಿದರೆ: ಯಕ್ಷಸಂಗಮ ➤ 20ನೇ ವರ್ಷದ ತಾಳಮದ್ದಳೆ ಕೂಟ ಹಾಗೂ ಸನ್ಮಾನ ಸಮಾರಂಭ

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಜುಲೈ.27.ದ.ಕ ಜಿಲ್ಲೆಯ ಜಾನಪದ ಕಲೆ ಯಕ್ಷಗಾನ.ಯಕ್ಷಸಂಗಮದ 20ನೇ ವರ್ಷದ ಯಕ್ಷಸಂಗಮ ಕಾರ್ಯಕ್ರಮ ಇಂದು  ಸಮಾಜಮಂದಿರ ಮೂಡಬಿದರೆ ಇಲ್ಲಿ ರಾತ್ರಿ 9.00ಗಂಟೆಗೆ ಜರಗಲಿದೆ. ಈ ಕಾರ್ಯಕ್ರಮದಲ್ಲಿ ಮೂಲತಃ ಮಿಜಾರಿನ ಪ್ರಮುಖ  ಕಟೀಲು ಮೇಳದ ಪ್ರಸಿದ್ಧ ಮದ್ದಲೆವಾದಕ ಮೋಹನ್‌ ಶೆಟ್ಟಿಗಾರ್ ಇವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.ಇವರ ಸಾಧನೆ ಅಪಾರ, 15ನೇ ಪ್ರಾಯದಲ್ಲೇ ಗುರುಪುರ ಅಣ್ಣಿಭಟ್‌ ರವರಲ್ಲಿ ಚೆಂಡೆ – ಮದ್ದಲೆ ವಾದನ ಕಲಿತುಕೊಂಡು ಪರಿಣತರಾದರು.ಕುಲಕಸುಬಾದ ಕೈಮಗ್ಗದಲ್ಲೇ ಮುಂದುವರಿದರೂ ಹಲವಾರು ಮೇಳಗಳಿಗೆ ಹಿಮ್ಮೇಳವಾದಕರಾಗಿ ಭಾಗವಹಿಸುತ್ತಿದ್ದರು.1982ರಲ್ಲಿ ಕಟೀಲಿನ

ಮೂಡುಬಿದರೆ: ಯಕ್ಷಸಂಗಮ ➤ 20ನೇ ವರ್ಷದ ತಾಳಮದ್ದಳೆ ಕೂಟ ಹಾಗೂ ಸನ್ಮಾನ ಸಮಾರಂಭ Read More »

ಕರಾವಳಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ➤ ಗ್ರೂಫ್ ‘ಡಿ’ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಟೆಂಡರ್ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.27.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಬಾಲಕರ ಬಾಲಮಂದಿರ, ಮಂಗಳೂರು ಸಂಸ್ಥೆಗೆ ಗ್ರೂಫ್ ‘ಡಿ’ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಮಾನವ ಸಂಪನ್ಮೂಲ ಸೇವೆಯನ್ನು ಒಂದು ವರ್ಷದ ಅವಧಿಗೆ ಸೂಕ್ತ ದರ್ಜೆಯ ನೊಂದಾಯಿತ ಸಂಸ್ಥೆಗಳಿಂದ  ಟೆಂಡರ್ ಆಹ್ವಾನಿಸಲಾಗಿದೆ. ಟೆಂಡರ್ ಪತ್ರಗಳನ್ನು ಕರ್ನಾಟಕ ಸರಕಾರದ ಇ-ಪ್ರೂಕ್ಯೂರ್‍ಮೆಂಟ್ ಪೋರ್ಟಲ್‍ನಿಂದ ಜುಲೈ 15 ರಿಂದ ಡೌನ್‍ಲೋಡ್ ಮಾಡಬಹುದಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 16 ಕೊನೆಯ ದಿನ. ಆಗಸ್ಟ್ 17 ಸಂಜೆ 4.30 ಗಂಟೆಗೆ ಅಧೀಕ್ಷಕರು, ಸರ್ಕಾರಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ➤ ಗ್ರೂಫ್ ‘ಡಿ’ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಟೆಂಡರ್ ಆಹ್ವಾನ Read More »

ಕರಾವಳಿ

ಬಂಟ್ವಾಳ ತಾಲೂಕು ಪಂಚಾಯತ್ ➤ ಕೆ.ಡಿ.ಪಿ ಸಭೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.27.ಬಂಟ್ವಾಳ ತಾಲೂಕು ಪಂಚಾಯತ್‍ನ 2019-20ನೇ ಸಾಲಿನ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಸಮೀಕ್ಷೆ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ. ಎಂದು ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯತ್ ಬಂಟ್ವಾಳ ಇವರ ಪ್ರಕಟಣೆ ತಿಳಿಸಿದೆ.

ಬಂಟ್ವಾಳ ತಾಲೂಕು ಪಂಚಾಯತ್ ➤ ಕೆ.ಡಿ.ಪಿ ಸಭೆ ಮುಂದೂಡಿಕೆ Read More »

ಕರಾವಳಿ
Scroll to Top