➤➤ Breaking News ಉಪ್ಪಿನಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು ➤ ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ಮಾಣಿ, ಮೇ.25. ನೇತ್ರಾವತಿ ನದಿಗೆ ಇಳಿದಿದ್ದ ಮೂವರ ಪೈಕಿ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟು, ಓರ್ವ ಗಂಭೀರ ಗಾಯಗೊಂಡ ಘಟನೆ ಶನಿವಾರ ಸಂಜೆ ಮಾಣಿ ಸಮೀಪದ ಸೂರಿಕುಮೇರು ಎಂಬಲ್ಲಿ ಸಂಭವಿಸಿದೆ. ಮೖತ ಬಾಲಕರನ್ನು ಕೇರಳ ರಾಜ್ಯದ ಕುಂಬ್ಳೆ ನಿವಾಸಿಗಳಾದ ಮನೀಷ್ ಮತ್ತು ಅಜಿತ್ ಎಂದು ಗುರುತಿಸಲಾಗಿದೆ. ಸೂರಿಕುಮೇರು ಸಮೀಪದ ಬರಿಮಾರು ನಿವಾಸಿ ಸಂಜೀವ ಬೋವಿ ಎಂಬವರ ಮನೆಗೆ ಮದುವೆ ಕಾರ್ಯಕ್ರಮಕ್ಕೆ ಕುಂಬ್ಳೆಯಿಂದ ಬಂದಿದ್ದ ಸಂಬಂಧಿಕರ ಏಳು ಮಂದಿ ಮಕ್ಕಳು ಇಲ್ಲಿನ ನೇತ್ರಾವತಿ ನದಿಗೆ […]

➤➤ Breaking News ಉಪ್ಪಿನಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು ➤ ಓರ್ವ ಗಂಭೀರ Read More »

ಕರಾವಳಿ

ನಾಳೆ (ಮೇ.26) ಕಡಬದಲ್ಲಿ ಸಾರ್ವಜನಿಕ ಬೃಹತ್ ರಕ್ತದಾನ ಶಿಬಿರ

(ನ್ಯೂಸ್ ಕಡಬ) newskadaba.com ಕಡಬ, ಮೇ.25. ಕಡಬ ಸೈಂಟ್ ಜೋಕಿಮ್ಸ್ ಚರ್ಚ್ ನ ಇಂಡಿಯನ್ ಕ್ಯಾಥೊಲಿಕ್ ಯೂತ್ ಮೂವ್ ಮೆಂಟ್ ಘಟಕ ಹಾಗೂ ಐಸಿವೈಎಂ ಪುತ್ತೂರು ಪೂರ್ವ ವಿಭಾಗದ ಆಶ್ರಯದಲ್ಲಿ ಮಂಗಳೂರಿನ ಎ.ಜೆ. ಆಸ್ಪತ್ರೆಯ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರವು ನಾಳೆ (ಮೇ.26) ಕಡಬದಲ್ಲಿ ನಡೆಯಲಿದೆ. ಭಾನುವಾರ ಬೆಳಿಗ್ಗೆ 10 ಗಂಟೆಯಿಂದ ಕಡಬದ ಸೈಂಟ್ ಜೋಕಿಮ್ಸ್ ಚರ್ಚ್‌ನ ಸಭಾಂಗಣದಲ್ಲಿ ಆರಂಭಗೊಂಡು ಮಧ್ಯಾಹ್ನದ ವರೆಗೆ ರಕ್ತದಾನ ಶಿಬಿರ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಕ್ತದಾನ ಮಾಡಬೇಕಾಗಿ ಸಂಸ್ಥೆಯ

ನಾಳೆ (ಮೇ.26) ಕಡಬದಲ್ಲಿ ಸಾರ್ವಜನಿಕ ಬೃಹತ್ ರಕ್ತದಾನ ಶಿಬಿರ Read More »

ಕರಾವಳಿ

ಮಾಣಿ: ಕೆಎಸ್ಸಾರ್ಟಿಸಿ ಬಸ್ – ಬುಲೆಟ್ ನಡುವೆ ಢಿಕ್ಕಿ ➤ ಬುಲೆಟ್ ಸವಾರ ಕಡಬ ನಿವಾಸಿ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಮೇ.25. ಕೆಎಸ್ಸಾರ್ಟಿಸಿ ಬಸ್ ಹಾಗೂ ಬುಲ್ಲೆಟ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬುಲ್ಲೆಟ್ ಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿಯಲ್ಲಿ ಶನಿವಾರ ಸಂಜೆ ಸಂಭವಿಸಿದೆ. ಗಾಯಗೊಂಡ ಬುಲ್ಲೆಟ್ ಸವಾರ‌ನನ್ನು ಕಡಬ ತಾಲೂಕಿನ ನೆಟ್ಟಣ ನಿವಾಸಿ ಸಂಜಿತ್ ಸದಾನಂದನ್ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಕಡಬ ಕಡೆಗೆ ತೆರಳುತ್ತಿದ್ದ ಬುಲೆಟ್ ಹಾಗೂ ಮಂಗಳೂರು ಕಡೆಗೆ ತೆರಳುತ್ತಿದ್ದ ಬೈಕ್ ನಡುವೆ ಬುಡೋಳಿ ಸಮೀಪದ ಬೊಳ್ಳುಕಳ್ಳು ಎಂಬಲ್ಲಿ ಢಿಕ್ಕಿ ಸಂಭವಿಸಿದೆ.

ಮಾಣಿ: ಕೆಎಸ್ಸಾರ್ಟಿಸಿ ಬಸ್ – ಬುಲೆಟ್ ನಡುವೆ ಢಿಕ್ಕಿ ➤ ಬುಲೆಟ್ ಸವಾರ ಕಡಬ ನಿವಾಸಿ ಗಂಭೀರ Read More »

ಕರಾವಳಿ

ಇಂಡಿಯಾ ಓಪನ್ ಬಾಕ್ಸಿಂಗ್ ➤ ಚಾಂಪಿಯನ್ ಶಿಪ್ ನಲ್ಲಿ ಭಾರತಕ್ಕೆ ತಂದಿತ್ತರು 12 ಬಂಗಾರದ ಪದಕ

(ನ್ಯೂಸ್ ಕಡಬ) newskadaba.com ನವದೆಹಲಿ,25.ಶುಕ್ರವಾರ ಮುಗಿದ ದ್ವಿತೀಯ “ಇಂಡಿಯನ್‌ ಓಪನ್‌ ಬಾಕ್ಸಿಂಗ್‌’ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕೆ ಕೂಟದ ಒಟ್ಟು 18 ಬಂಗಾರದ ಪದಕಗಳಲ್ಲಿ 12 ಪದಕ ಭಾರತದ ಪಾಲಾಯಿತು. ಇದು ಕಳೆದ ವರ್ಷಕ್ಕೆ ಹೋಲಿಸಿದರೆ ಇಮ್ಮಡಿ ಸಾಧನೆಯಾಗಿದೆ. 2018ರಲ್ಲಿ ಭಾರತ 6 ಚಿನ್ನ ಗೆದ್ದಿತ್ತು.ಮೇರಿ ಕೋಮ್‌, ಎಲ್‌. ಸರಿತಾದೇವಿ, ಅಮಿತ್‌ ಪಂಘಲ್‌, ಶಿವ ಥಾಪ ಬಂಗಾರದ ಪದಕ ತಂದಿತ್ತ ಸಾಧಕರು. ಇದೇ ಮೊದಲ ಸಲ 60 ಕೆಜಿ ಸ್ಪರ್ಧೆಗಿಳಿದ ಅವರು ಸಿಮ್ರನ್‌ಜಿತ್‌ ಕೌರ್‌ ವಿರುದ್ಧ 3-2 ಅಂತರದ ಜಯ ಸಾಧಿಸಿದರು.

ಇಂಡಿಯಾ ಓಪನ್ ಬಾಕ್ಸಿಂಗ್ ➤ ಚಾಂಪಿಯನ್ ಶಿಪ್ ನಲ್ಲಿ ಭಾರತಕ್ಕೆ ತಂದಿತ್ತರು 12 ಬಂಗಾರದ ಪದಕ Read More »

ಕ್ರೀಡಾ ನ್ಯೂಸ್

ಕಡಬ: ವಿವಾಹಿತ ಮಹಿಳೆ ನೇಣುಬಿಗಿದು ಆತ್ಮಹತ್ಯೆ ➤ 24 ಗಂಟೆಯೊಳಗೆ ಕಡಬ ವ್ಯಾಪ್ತಿಯಲ್ಲಿ ಮೂವರಿಂದ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಮೇ.25. ವಿವಾಹಿತ ಮಹಿಳೆಯೋರ್ವರು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಠಾಣಾ ವ್ಯಾಪ್ತಿಯ ಅರ್ಪಾಜೆ ಎಂಬಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಕಡಬ ತಾಲೂಕು ಕೋಡಿಂಬಾಳ ಗ್ರಾಮದ ಅರ್ಪಾಜೆ ನಿವಾಸಿ ಶ್ರೀಮತಿ ವೇದಾವತಿ ಎಂದು ಗುರುತಿಸಲಾಗಿದೆ. ವೇದಾವತಿಯವರ ಗಂಡ ಸುಮಾರು 5 ತಿಂಗಳ ಹಿಂದೆ ಖಾಯಿಲೆಯಿಂದ ಮೃತಪಟ್ಟಿದ್ದು, ಇದರಿಂದಾಗಿ ಮನನೊಂದ ವೇದಾವತಿಯವರು ಶುಕ್ರವಾರ ಅಪರಾಹ್ನದಿಂದ ರಾತ್ರಿಯ ನಡುವೆ ಮನೆಯಲ್ಲಿ ಯಾರೂ ಇಲ್ಲದ ವೇಳೆ

ಕಡಬ: ವಿವಾಹಿತ ಮಹಿಳೆ ನೇಣುಬಿಗಿದು ಆತ್ಮಹತ್ಯೆ ➤ 24 ಗಂಟೆಯೊಳಗೆ ಕಡಬ ವ್ಯಾಪ್ತಿಯಲ್ಲಿ ಮೂವರಿಂದ ಆತ್ಮಹತ್ಯೆ Read More »

ಕರಾವಳಿ

ಮತ್ತೆ ಪ್ರಧಾನಿ ಪಟ್ಟ ಏರಿದ ನರೇಂದ್ರ ಮೋದಿ ➤ ಕುಖ್ಯಾತ ಭೂಗತ ಪಾತಕಿ ಕಾಡತೊಡಗಿದೆ ಜೀವಭಯ!

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಮೇ.25.ನರೇಂದ್ರ ಮೋದಿ ಅವರು ಎರಡನೇ ಬಾರಿ ಬಹುಮತದಿಂದ ಪ್ರಧಾನಿ ಪಟ್ಟಕ್ಕೆ ಏರಿದ್ದಾರೆ.2014ರಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದಾಗ ಕುಖ್ಯಾತ ಭೂಗತ ಪಾತಕಿ ದಾವೂದ್ ಹಾಗೂ ಸಹಚರರ ವಿರುದ್ಧ ಕೆಲವು ಕ್ರಮಗಳನ್ನು ಕೈಗೊಂಡಿತ್ತು. ಮುಂಬೈ ಸರಣಿ ಬಾಂಬ್ ಸ್ಫೋಟದ ರೂವಾರಿ ದಾವೂದ್ ಇಬ್ರಾಹಿಂ ಎಂದು ಗುಪ್ತಚರ ಇಲಾಖೆ ಮೂಲಗಳು ತಿಳಿಸಿರುವುದಾಗಿ ಆಂಗ್ಲ ಮಾಧ್ಯಮ ವೆಬ್ ಸೈಟ್ ವೊಂದು ತಿಳಿಸಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲುವ ಮೂಲಕ ತಾವು ಸುರಕ್ಷಿತವಾಗಿರಬಹುದು ಎಂದು ಅಂಧ

ಮತ್ತೆ ಪ್ರಧಾನಿ ಪಟ್ಟ ಏರಿದ ನರೇಂದ್ರ ಮೋದಿ ➤ ಕುಖ್ಯಾತ ಭೂಗತ ಪಾತಕಿ ಕಾಡತೊಡಗಿದೆ ಜೀವಭಯ! Read More »

ರಾಷ್ಟ್ರೀಯ ನ್ಯೂಸ್

ಗಡಿಯಾರ: ನಿಂತಿದ್ದ ರಿಕ್ಷಾಕ್ಕೆ ಹಿಂದಿನಿಂದ ಕಾರು ಢಿಕ್ಕಿ ➤ ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಮಾಣಿ, ಮೇ.25. ನಿಲ್ಲಿಸಿದ್ದ ರಿಕ್ಷಾಕ್ಕೆ ಹಿಂದಿನಿಂದ ಕಾರು ಢಿಕ್ಕಿ ಹೊಡೆದ ಪರಿಣಾಮ ಓರ್ವ ಗಂಭೀರ ಗಾಯಗೊಂಡು, ಇಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ಶನಿವಾರದಂದು ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗಡಿಯಾರದಲ್ಲಿ ಸಂಭವಿಸಿದೆ. ಉಪ್ಪಿನಂಗಡಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಟೊಯೋಟಾ ಎಟಿಯೋಸ್ ಕಾರು ರಸ್ತೆಯಲ್ಲಿ ನಿಲ್ಲಿಸಿದ್ದ ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ರಿಕ್ಷಾ ಚಾಲಕ ಆಪತ್ಬಾಂಧವ ಗಡಿಯಾರ ಪುತ್ತಾಕ, ಗಡಿಯಾರ ನಿವಾಸಿಗಳಾದ ಪದ್ಮಾವತಿ ಹಾಗೂ ಕಾವ್ಯ ಗಾಯಗೊಂಡಿದ್ದು, ತುಂಬೆ

ಗಡಿಯಾರ: ನಿಂತಿದ್ದ ರಿಕ್ಷಾಕ್ಕೆ ಹಿಂದಿನಿಂದ ಕಾರು ಢಿಕ್ಕಿ ➤ ಮೂವರಿಗೆ ಗಾಯ Read More »

ಕರಾವಳಿ

ನೂಜಿಬಾಳ್ತಿಲ ಗ್ರಾ.ಪಂ. ಉದ್ಯೋಗಿ ವಿಕ್ರಮ್ ರೈ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಮೇ.25. ಅನಾರೋಗ್ಯದಿಂದ ಬಳಲುತ್ತಿದ್ದ ಪಂಚಾಯತ್ ಸಿಬ್ಬಂದಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ನೂಜಿಬಾಳ್ತಿಲ ಗ್ರಾಮ ಪಂಚಾಯತ್ ಉದ್ಯೋಗಿ ವಿಕ್ರಮ್ ರೈ(39) ಎಂದು ಗುರುತಿಸಲಾಗಿದೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಶನಿವಾರದಂದು ಬೆಳಿಗ್ಗೆ ತನ್ನ ಮನೆಯ ಪಕ್ಕದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನೂಜಿಬಾಳ್ತಿಲ ಗ್ರಾ.ಪಂ. ಉದ್ಯೋಗಿ ವಿಕ್ರಮ್ ರೈ ಆತ್ಮಹತ್ಯೆ Read More »

ಕರಾವಳಿ

ಪಾಕ್ ಜೊತೆಮಾತುಕತೆ ನಡೆಸುವುದಿಲ್ಲ ➤ ಭಾರತದ ರಾಯಭಾರಿ ಹರ್ಷವರ್ಧನ್ ಶ್ರಿಂಗ್ಲಾ

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ಮೇ.25.ಪುಲ್ವಾಮಾ ದಾಳಿ ನಂತರದಲ್ಲಿ  ಭಾರತ ಮತ್ತು ಉಭಯ ದೇಶಗಳೊಂದಿಗಿನ ಸಂಬಂಧ ಇನ್ನಷ್ಟು ಕುಸಿದಿತ್ತು. ಅಷ್ಟೇ ಅಲ್ಲ, ಬಾಲಕೋಟ್‌ನಲ್ಲಿ ಭಾರತ ಪ್ರತಿದಾಳಿ ನಡೆಸಿ ಉಗ್ರರನ್ನು ಮಟ್ಟಹಾಕಿದ ಮೇಲಂತೂ ಇನ್ನಷ್ಟು ಬಿಗಡಾಯಿಸಿತ್ತು. ಭಾರತದ ಪ್ರತಿಯೊಬ್ಬ ಭಾರತೀಯನೂ ಪಾಕಿಸ್ತಾನದೊಂದಿಗೆ ಉತ್ತಮ ಸಂಬಂಧ ಸಾಧಿಸಬೇಕು ಎಂದೇ ಬಯಸುತ್ತಾನೆ. ಬಾಂಗ್ಲಾದೇಶ, ನೇಪಾಳ, ಭೂತಾನ್‌, ಶ್ರೀಲಂಕಾ, ಮಾಲ್ಡೀವ್ಸ್‌, ಅಫ್ಘಾನಿಸ್ತಾನದ ಜೊತೆಗೆ ನಮ್ಮ ಸಂಬಂಧ ಉತ್ತಮವಾಗಿದೆ. ಪಾಕಿಸ್ತಾನವು ಉಗ್ರ ಸಂಘಟನೆಗಳನ್ನು ಬೆಂಬಲಿಸುತ್ತಿರುವವರೆಗೂ ಭಾರತ ಮಾತುಕತೆ ನಡೆಸುವುದಿಲ್ಲ ಎಂದು ಅಮೆರಿಕಕ್ಕೆ ಭಾರತದ ರಾಯಭಾರಿ

ಪಾಕ್ ಜೊತೆಮಾತುಕತೆ ನಡೆಸುವುದಿಲ್ಲ ➤ ಭಾರತದ ರಾಯಭಾರಿ ಹರ್ಷವರ್ಧನ್ ಶ್ರಿಂಗ್ಲಾ Read More »

ಅಂತರ್ರಾಷ್ಟ್ರೀಯ ನ್ಯೂಸ್

ಪ್ರಧಾನಿ ನರೇಂದ್ರ ಮೋದಿ ಪ್ರಚಂಡ ಚುನಾವಣಾ ವಿಜಯಕ್ಕೆ ಫ್ರಾನ್ಸ್ ಅಧ್ಯಕ್ಷರಿಂದ ಅಭಿನಂದನೆ

(ನ್ಯೂಸ್ ಕಡಬ) newskadaba.com ಫ್ರಾನ್ಸ್, ಮೇ.25.ಪ್ರಧಾನಿ ನರೇಂದ್ರ ಮೋದಿ ಪ್ರಚಂಡ ಚುನಾವಣಾ ವಿಜಯಕ್ಕೆ ಫ್ರಾನ್ಸ್‌ಅಧ್ಯಕ್ಷಇಮ್ಯಾನುವೆಲ್‌ಮ್ಯಾಕ್ರೋನ್‌ಅವರು ಅಭಿನಂದಿಸಿದ್ದಾರೆ. ಅತೀ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಭಾಗವಹಿಸಿರುವ ಕಾರಣ ವಿಶ್ವದ ಅತೀ ದೊಡ್ಡ ಭಾರತೀಯ ಪ್ರಜಾಸತ್ತೆಯು ಸಂವೇದನಾಶೀಲವಾಗಿದೆ ಎಂದು ಮ್ಯಾಕೋನ್‌ ಹೇಳಿದ್ದಾರೆ. ಉಭಯ ದೇಶಗಳ ಮತ್ತು ವಿಶ್ವದ ಭದ್ರತೆಗಾಗಿ ಹಾಗೂ ದೀರ್ಘ‌ಕಾಲೀನ ಅಭಿವೃದ್ಧಿಗಾಗಿ ಜತೆಗೂಡಿ ಶ್ರಮಿಸುವುದನ್ನು ಮುಂದುವರಿಸೋಣ ಎಂದು ಮ್ಯಾಕ್ರೋನ್‌ ತಮ್ಮ ಅಭಿನಂದನಾ ಸಂದೇಶದಲ್ಲಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಪ್ರಚಂಡ ಚುನಾವಣಾ ವಿಜಯಕ್ಕೆ ಫ್ರಾನ್ಸ್ ಅಧ್ಯಕ್ಷರಿಂದ ಅಭಿನಂದನೆ Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top