‘ನಮ್ಮ ಸುಬ್ರಹ್ಮಣ್ಯ’ ತಂಡದಿಂದ ಶ್ರಮದಾನ ➤ ಯಾತ್ರಾರ್ಥಿಗಳು ರಸ್ತೆ ಬದಿಯಲ್ಲಿ ಬಿಸಾಡಿದ್ದ ತ್ಯಾಜ್ಯ ಸಂಗ್ರಹ
(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಮೇ.20. ದಕ್ಷಿಣ ಭಾರತದ ಪ್ರಮುಖ ಧಾರ್ಮಿಕ ಕ್ಷೇತ್ರವಾದ ಕುಕ್ಕೇ ಸುಬ್ರಹ್ಮಣ್ಯದ ರಸ್ತೆ ಬದಿಯಲ್ಲಿ ಯಾತ್ರಾರ್ಥಿಗಳು ಬಿಸಾಡಿದ್ದ ತ್ಯಾಜ್ಯವನ್ನು ‘ನಮ್ಮ ಸುಬ್ರಹ್ಮಣ್ಯ’ ತಂಡದ ಯುವಕರು ಶ್ರಮದಾನದ ಮೂಲಕ ಸ್ವಚ್ಛ ಮಾಡಿದರು. ಶನಿವಾರ ಬೆಳಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ತಂಡದ 15 ಕ್ಕೂ ಹೆಚ್ಚು ಕಾರ್ಯಕರ್ತರು ಕುಕ್ಕೇ ಸುಬ್ರಹ್ಮಣ್ಯದ ದೇವರಗದ್ದೆ ರಸ್ತೆಯ ಎರಡೂ ಬದಿಗಳಲ್ಲಿ 2 ಕಿಮೀ ವ್ಯಾಪ್ತಿಯಲ್ಲಿ ಸ್ವಚ್ಛ ಮಾಡಿ ಸುಮಾರು 3 ಪಿಕಪ್ ನಷ್ಟು ಪ್ಲಾಸ್ಟಿಕ್, ಬಿಯರ್ ಬಾಟಲಿ ಹಾಗೂ […]









