ಮಂಗಳೂರು: ಬಾಡಿ ಮಸಾಜ್ ನೆಪದಲ್ಲಿ ವೇಶ್ಯಾವಾಟಿಕೆ ದಂಧೆ ► ಆಯುರ್ವೇದಿಕ್ ಥೆರಪಿ ಸೆಂಟರ್ ಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.08. ಬಾಡಿ ಮಸಾಜ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎನ್ನುವ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಮೂವರು ನೊಂದ ಮಹಿಳೆಯರನ್ನು ರಕ್ಷಿಸಿದ್ದಾರೆ. ನಗರದ ಕೆ.ಎಸ್. ರಾವ್ ರಸ್ತೆಯಲ್ಲಿರುವ ಕ್ಲಾಸಿಕ್ ಆರ್ಕೆಡ್ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ದೀಪಂ ಆರ್ಯುವೇದಿಕ್ ಥೆರಫಿ ಸೆಂಟರ್ ಮಸಾಜ್ ಪಾರ್ಲರ್ ನಲ್ಲಿ ಬಾಡಿ ಮಸಾಜ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎನ್ನುವ ದೂರು ಬಂದಿದ್ದು, ಇ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ […]

ಮಂಗಳೂರು: ಬಾಡಿ ಮಸಾಜ್ ನೆಪದಲ್ಲಿ ವೇಶ್ಯಾವಾಟಿಕೆ ದಂಧೆ ► ಆಯುರ್ವೇದಿಕ್ ಥೆರಪಿ ಸೆಂಟರ್ ಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು Read More »

ಕರಾವಳಿ

ಜೇಸಿಐ ಕಡಬ ಕದಂಬ ಘಟಕದ 2019 ನೇ ಸಾಲಿನ ಪದಗ್ರಹಣ ಸಮಾರಂಭ ► ಅಧ್ಯಕ್ಷರಾಗಿ ರವಿಚಂದ್ರ ಪಡುಬೆಟ್ಟು ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಕಡಬ, ಡಿ.07.  ಜೆಸಿಐ ಕಡಬ ಕದಂಬ ಇದರ 2019ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ದ.5ರಂದು ಸಂಜೆ ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಅತಿಥಿಯಾಗಿದ್ದು ಜೆಸಿಐಗೆ ಹೊಸದಾಗಿ ಸೇರ್ಪಡೆಗೊಂಡ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿ ಮಾತನಾಡಿದ ಜೇಸಿಐ ವಲಯ 15ರ ವಲಯಾಧ್ಯಕ್ಷ ಅಶೋಕ್ ಚೂಂತಾರುರವರು, ಜೆಸಿಐಯಲ್ಲಿ ತೊಡಗಿಕೊಂಡಲ್ಲಿ ಸಮಾಜಮುಖಿ ಕೆಲಸ ಮಾಡಲು ಸಾಧ್ಯವಿದೆ. ಇದರಲ್ಲಿ ತೊಡಗಿಕೊಂಡವರು ತಾವು ವಿಕಸನ ಹೊಂದುವುದರೊಂದಿಗೆ ಸಮಾಜದ ಅಭಿವೃದ್ಧಿಗೆ ಶ್ರಮಿಸಲು ಸಾಧ್ಯವಿದೆ ಎಂದರು. ಹೊಸದಾಗಿ

ಜೇಸಿಐ ಕಡಬ ಕದಂಬ ಘಟಕದ 2019 ನೇ ಸಾಲಿನ ಪದಗ್ರಹಣ ಸಮಾರಂಭ ► ಅಧ್ಯಕ್ಷರಾಗಿ ರವಿಚಂದ್ರ ಪಡುಬೆಟ್ಟು ಅಧಿಕಾರ ಸ್ವೀಕಾರ Read More »

ಕರಾವಳಿ

ಸಂಸದರ, ಕೇಂದ್ರ ಸಚಿವರುಗಳ ನಿರ್ಲಕ್ಷ್ಯದಿಂದಾಗಿ ಸಿಪಿಸಿಆರ್‍ಐ ಸ್ಥಳಾಂತರಗೊಳ್ಳುವ ಹಂತದಲ್ಲಿದೆ ► ಯಾವುದೇ ಕಾರಣಕ್ಕೂ ಸ್ಥಳಾಂತರ ಮಾಡಲು ಬಿಡುವುದಿಲ್ಲ – ಮಾಜಿ ಸಚಿವ ರಮನಾಥ ರೈ

(ನ್ಯೂಸ್ ಕಡಬ) newskadaba.com ಕಡಬ, ಡಿ.07.  ಕಡಬ ತಾಲೂಕು ಕಿದು ಎಂಬಲ್ಲಿರುವ ಸಿಪಿಸಿಆರ್‍ಐ ಸಂಸ್ಥೆಯು ಸಂಸದರ, ಕೇಂದ್ರ ಸಚಿವರುಗಳ ನಿರ್ಲಕ್ಷದಿಂದ ಸ್ಥಳಾಂತರಗೊಳ್ಳುವ ಹಂತಕ್ಕೆ ಬಂದಿದ್ದು, ಯಾವುದೇ ಕಾರಣಕ್ಕೂ ಸ್ಥಳಾಂತರ ಮಾಡಲು ಬಿಡವುದಿಲ್ಲ. ಸಂಸ್ಥೆಯನ್ನು ಉಳಿಸಿಕೊಳ್ಳಲು ಯಾವುದೇ ಹೋರಾಟಕ್ಕೂ ಕಾಂಗ್ರೆಸ್ ಸಿದ್ದವಾಗಿದೆ ಎಂದು ಮಾಜಿ ಸಚಿವ ರಮನಾಥ ರೈ ಹೇಳಿದರು. ಅವರು ಬಿಳಿನೆಲೆ ಗ್ರಾಮ ಪಂಚಾಯಿತಿ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ, ಜನ್ರತಿನಿಧಿಗಳ ಸಹಕಾರದಲ್ಲಿ ಸಿಪಿಸಿಆರ್‍ಐ ಸಂಸ್ಥೆಯ ಮುಂಭಾಗದಲ್ಲಿ ಶುಕ್ರವಾರ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು. ದೇಶವನ್ನು ಆಳುತ್ತಿರುವ

ಸಂಸದರ, ಕೇಂದ್ರ ಸಚಿವರುಗಳ ನಿರ್ಲಕ್ಷ್ಯದಿಂದಾಗಿ ಸಿಪಿಸಿಆರ್‍ಐ ಸ್ಥಳಾಂತರಗೊಳ್ಳುವ ಹಂತದಲ್ಲಿದೆ ► ಯಾವುದೇ ಕಾರಣಕ್ಕೂ ಸ್ಥಳಾಂತರ ಮಾಡಲು ಬಿಡುವುದಿಲ್ಲ – ಮಾಜಿ ಸಚಿವ ರಮನಾಥ ರೈ Read More »

ರಾಷ್ಟ್ರೀಯ ನ್ಯೂಸ್

ಬಂಟ್ವಾಳ: ಗುಡ್ಡೆ ಕುಸಿದು ಮೂವರು ಕಾರ್ಮಿಕರ ಸಾವು

ಓರ್ವ ಗಂಭೀರ ಬಂಟ್ವಾಳ, ಡಿ.7: ಗುಡ್ಡ ಕುಸಿದು ಬಿದ್ದ ಪರಿಣಾಮ ಮೂವರು ಕಾರ್ಮಿಕರು ಮೃತಪಟ್ಟು ಓರ್ವ ಗಂಭೀರ ಗಾಯಗೊಂಡ ಘಟನೆ ವಿಟ್ಲದ ಕನ್ಯಾನ ಸಮೀಪದ ಒಡಿಯೂರು ಎಂಬಲ್ಲಿ ನಡೆದಿದೆ. ಮೃತರನ್ನು ರಮೇಶ್, ಪ್ರಕಾಶ್, ಬಾಳಪ್ಪ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಪ್ರಭಾಕರ್ ಎಂಬವರು ಗಂಭೀರ ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ರೀ ಕ್ಷೇತ್ರ ಒಡಿಯೂರು ದೇವಸ್ಥಾನಕ್ಕೆ ಸೇರಿದ ಅನ್ನಛತ್ರದ ಕಟ್ಟಡ ಕಾಮಗಾರಿ ನಡೆಯುತ್ತಿತ್ತು. ಕಟ್ಟಡ ಕಾಮಗಾರಿಗಾಗಿ ಜೆಸಿಬಿ ಹಾಗೂ ಕಾರ್ಮಿಕರ ಮೂಲಕ ಕಾಮಗಾರಿ ನಡೆಸಲಾಗುತ್ತಿತ್ತು. ಆ ಸಂದರ್ಭ

ಬಂಟ್ವಾಳ: ಗುಡ್ಡೆ ಕುಸಿದು ಮೂವರು ಕಾರ್ಮಿಕರ ಸಾವು Read More »

ಕರಾವಳಿ

ಕಡಬ: ಮೃತ ಚಾಲಕ ಹರೀಶ್ ಕುಟುಂಬಕ್ಕೆ ಧನಸಹಾಯ

(ನ್ಯೂಸ್ ಕಡಬ) newskadaba.com ಕಡಬ, ಡಿ.07. ಇತ್ತೀಚೆಗೆ ಹೃದಯಾಘಾತದಿಂದ ನಿಧನರಾದ ಕಡಬ ಅಂಗಡಿಮನೆ ನಿವಾಸಿ, ಚಾಲಕ ಹರೀಶ್‍ರವರ ಕುಟುಂಬಕ್ಕೆ ಕಡಬ ಮಧುರ ಟೂರಿಸ್ಟ್ ವಾಹನ ಚಾಲಕ – ಮಾಲಕರ ವತಿಯಿಂದ 25 ಸಾವಿರ ರೂ. ಧನ ಸಹಾಯ ನೀಡಲಾಯಿತು. ಕಡಬ ಮಧುರ ಟೂರಿಸ್ಟ್ ವಾಹನ ಚಾಲಕ – ಮಾಲಕರ ಸಂಘದ ಅಧ್ಯಕ್ಷ ಲೋಕೇಶ್‍ರವರು 25 ಸಾವಿರ ರೂಪಾಯಿಯನ್ನು ಮೃತ ಹರೀಶ್‍ರವರ ಪತ್ನಿ ಶಂಕರಿಯವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಘದ ಸದಸ್ಯರುಗಳಾದ ನಿತ್ಯಾನಂದ ಪಡಿಯಾರ್, ಮುನೀರ್ ತಿಮರಡ್ಡ, ಕೃಷ್ಣಪ್ಪ

ಕಡಬ: ಮೃತ ಚಾಲಕ ಹರೀಶ್ ಕುಟುಂಬಕ್ಕೆ ಧನಸಹಾಯ Read More »

ಕರಾವಳಿ

ನೀವು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಬೇಕೇ..? ► ಪ್ರವರ್ಗ ‘ಬಿ’ & ‘ಸಿ’ ದೇವಸ್ಥಾನದ ಸಮಿತಿಗೆ ಅರ್ಹರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.07. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ ಅಧಿನಿಯಮ 1997 ರ ಕಲಂ 25ರ ಅನ್ವಯ ದಕ್ಷಿಣ ಕನ್ನಡ ಜಿಲ್ಲೆಯ ಪ್ರವರ್ಗ ‘ಬಿ‘ ಮತ್ತು ‘ಸಿ’ ಗೆ ಸೇರಿದ ದೇವಸ್ಥಾನಗಳಿಗೆ  ವ್ಯವಸ್ಥಾಪನಾ ಸಮಿತಿಯ ಸದಸ್ಯತ್ವಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪ್ರವರ್ಗ ‘ಬಿ‘ ಮತ್ತು ‘ಸಿ’ ಗೆ ಸೇರಿದ ದೇವಸ್ಥಾನಗಳಿಗೆ ಮೂರು  ವರ್ಷಗಳ ಅವಧಿಗಾಗಿ 9 ಜನ ಸದಸ್ಯರನ್ನು ಒಳಗೊಂಡು ವ್ಯವಸ್ಥಾಪನಾ ಸಮಿತಿಯನ್ನು ರಚಿಸುವುದಕ್ಕಾಗಿ ಆಸಕ್ತಿಯುಳ್ಳ ಭಕ್ತಾಧಿಗಳಿಂದ ನಿಗದಿತ

ನೀವು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಬೇಕೇ..? ► ಪ್ರವರ್ಗ ‘ಬಿ’ & ‘ಸಿ’ ದೇವಸ್ಥಾನದ ಸಮಿತಿಗೆ ಅರ್ಹರಿಂದ ಅರ್ಜಿ ಆಹ್ವಾನ Read More »

ಕರಾವಳಿ

ಸುಬ್ರಹ್ಮಣ್ಯ ಶ್ರೀ ಸಂಪುಟ ಮಠದ ವಿರುದ್ಧದದ ಆಪಾದನೆ ಸತ್ಯಕ್ಕೆ ದೂರ ► ಸಂಪುಟ ನರಸಿಂಹ ಸ್ವಾಮಿ ಮಠದ ಆಡಳಿತಾಧಿಕಾರಿ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ ಡಿ.07. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪಹಣಿ ಪತ್ರದಲ್ಲಿ ಶ್ರೀ ಸಂಪುಟ ನರಸಿಂಹ ಮಠದ ಕಡೆಯಿಂದ ತಿದ್ದುಪಡಿ ಮಾಡಿದ ಆರೋಪ ಸತ್ಯಕ್ಕೆ ದೂರವಾದುದು ಎಂದು ಶ್ರೀ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದ ಆಡಳಿತಾಧಿಕಾರಿ ಸ್ಪಷ್ಠೀಕರಣ ನೀಡಿದ್ದಾರೆ. ಪತ್ರಿಕಾ ಪ್ರಕಟಣೆಯಲ್ಲಿ ಸ್ಪಷ್ಟನೆ ನೀಡಿರುವ ಮಠದ ಆಡಳಿತಾಧಿಕಾರಿ ಸುದರ್ಶನ ಜೋಯಿಷ ಅವರು, ಸುಬ್ರಹ್ಮಣ್ಯ ಗ್ರಾಮದ ಸ.ನಂ 82/1ರ ಕೈ ಬರಹದ ಪಹಣಿಯಲ್ಲಿ ಸುಬ್ರಾಯ ದೇವಸ್ಥಾನ, ನರಸಿಂಹ ಮಠದ ಹೆಸರು ಅನಾದಿಕಾಲದಿಂದ ಕಲಂ ನಂ.11ರಲ್ಲಿ

ಸುಬ್ರಹ್ಮಣ್ಯ ಶ್ರೀ ಸಂಪುಟ ಮಠದ ವಿರುದ್ಧದದ ಆಪಾದನೆ ಸತ್ಯಕ್ಕೆ ದೂರ ► ಸಂಪುಟ ನರಸಿಂಹ ಸ್ವಾಮಿ ಮಠದ ಆಡಳಿತಾಧಿಕಾರಿ ಸ್ಪಷ್ಟನೆ Read More »

ಕರ್ನಾಟಕ

ಸೌದಿ ಅರೇಬಿಯಾದಲ್ಲಿ ರಸ್ತೆ ಅಪಘಾತ ► ಮಂಗಳೂರು ಮೂಲದ ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ದಮಾಮ್, ಡಿ.06. ಉಮ್ರಾ ಯಾತ್ರೆಗೆ ತೆರಳಿ ಹಿಂತಿರುಗುತ್ತಿದ್ದಾಗ ಉಂಟಾದ ವಾಹನ ಅಪಘಾತದಲ್ಲಿ ಮಂಗಳೂರು ಮೂಲದ ಇಬ್ಬರು ಮೃತಪಟ್ಟ ಘಟನೆ ಸೌದಿ ಅರೇಬಿಯಾದ ದಮಾಮ್ ನಲ್ಲಿ ಗುರುವಾರದಂದು ಸಂಭವಿಸಿದೆ. ಮೃತರನ್ನು ಎಮಿರೇಟ್ಸ್ ಖಾದರ್ ಎಂದೇ ಚಿರಪರಿಚಿತರಾಗಿದ್ದ ಉಡುಪಿ ಸಮೀಪದ ಪರ್ಕಳ ನಿವಾಸಿ ಕೆ. ಅಬ್ದುಲ್ ಖಾದರ್(58) ಹಾಗೂ ಪತ್ನಿಯ ತಂದೆ ಎಂ.ಕೆ. ಅಬ್ದುಲ್ ಖಾದರ್ ಬಾವಾ(79) ಎಂದು ಗುರುತಿಸಲಾಗಿದೆ. ಉಮ್ರಾ ನಿರ್ವಹಿಸಿ ಕುಟುಂಬ ಸಮೇತ ಕಾರಿನಲ್ಲಿ ಜುಬೈಲ್ ಗೆ ಮರಳುತ್ತಿದ್ದಾಗ ಉಂಟಾದ ಅಪಘಾತದಲ್ಲಿ ಈ

ಸೌದಿ ಅರೇಬಿಯಾದಲ್ಲಿ ರಸ್ತೆ ಅಪಘಾತ ► ಮಂಗಳೂರು ಮೂಲದ ಇಬ್ಬರು ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್

ಕಡಬ: 108 ಆಂಬ್ಯಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಏಳು ತಿಂಗಳ ಗರ್ಭಿಣಿ

(ನ್ಯೂಸ್ ಕಡಬ) newskadaba.com ಕಡಬ, ಡಿ.06. ಏಳು ತಿಂಗಳ ಗರ್ಭಿಣಿಯೋರ್ವರು 108 ಆಂಬ್ಯುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಗುರುವಾರ ರಾತ್ರಿ ಸವಣೂರು ಬಳಿ ಸಂಭವಿಸಿದೆ. 102 ನೆಕ್ಕಿಲಾಡಿ ಗ್ರಾಮದ ಗುರಿಯಡ್ಕ ನಿವಾಸಿ ಹೇಮಲತಾ(32) ಎಂಬಾಕೆ ಏಳು ತಿಂಗಳ ಗರ್ಭಿಣಿಯಾಗಿದ್ದು, ಹೊಟ್ಟೆ ನೋವು ಕಂಡುಬಂದ ಹಿನ್ನೆಲೆಯಲ್ಲಿ ಕಡಬ ಸಮುದಾಯ ಆಸ್ಪತ್ರೆಗೆ ಆಗಮಿಸಿದ್ದರು. ಗರ್ಭಿಣಿಯನ್ನು ಪರೀಕ್ಷಿಸಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ತೆರಳುವಂತೆ ಸೂಚಿಸಿದ ಕಾರಣ ಕಡಬದ 108 ಆಂಬ್ಯುಲೆನ್ಸ್ ಮೂಲಕ ಪುತ್ತೂರಿಗೆ ತೆರಳುತ್ತಿದ್ದಾಗ ಸವಣೂರು

ಕಡಬ: 108 ಆಂಬ್ಯಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಏಳು ತಿಂಗಳ ಗರ್ಭಿಣಿ Read More »

ಕರಾವಳಿ

ಕಡಬದ ಯುವಕ ಬೆಂಗಳೂರಿನಲ್ಲಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಡಿ.06. ಕಡಬದ ಯುವಕನೋರ್ವ ಬೆಂಗಳೂರಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಬಿಳಿನೆಲೆ ಗ್ರಾಮದ ಬೈಲು ಆನಂದ ಗೌಡ ಎಂಬವರ ಪುತ್ರ ರಾಜೇಶ್(24) ಎಂದು ಗುರುತಿಸಲಾಗಿದೆ. ಕಳೆದ ಕೆಲವು ಸಮಯಗಳಿಂದ ಊರಿನಲ್ಲಿದ್ದ ಈತ ತನ್ನ ಅಕ್ಕನ ಜೊತೆಗೆ ಬೆಂಗಳೂರಿಗೆ ತೆರಳಿದ್ದು, ಗುರುವಾರ ಸಂಜೆ ಡೆತ್ ನೋಟ್ ಬರೆದಿಟ್ಟು ಇಲಿ ಪಾಷಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕಡಬದ ಯುವಕ ಬೆಂಗಳೂರಿನಲ್ಲಿ ಆತ್ಮಹತ್ಯೆ Read More »

ಕರ್ನಾಟಕ
Scroll to Top