ಕಡಬ: ವಿವಾಹಿತ ಮಹಿಳೆ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ನ.30. ಗ್ರಾಮ ಪಂಚಾಯತ್ ಗೆಂದು ತೆರಳಿದ ಮಹಿಳೆಯೋರ್ವರು ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಠಾಣಾ ವ್ಯಾಪ್ತಿಯ ಕೊಯಿಲದಲ್ಲಿ ಗುರುವಾರದಂದು ನಡೆದಿದೆ. ನಾಪತ್ತೆಯಾದ ಮಹಿಳೆಯನ್ನು ಕೊಯಿಲ ಗ್ರಾಮದ ಪಲ್ಲತ್ತಾರು ಕುದ್ಲೂರು ನಿವಾಸಿ ಹರೀಶ್ ಎಂಬವರ ಪತ್ನಿ ಶ್ರೀಮತಿ ಕುಸುಮ ಎಂದು ಗುರುತಿಸಲಾಗಿದೆ. ಇವರು ಗುರುವಾರದಂದು ಗ್ರಾಮ ಪಂಚಾಯತ್ ಗೆಂದು ತೆರಳಿದವರು ಮನೆಗೆ ಹಿಂತಿರುಗದೆ ನಾಪತ್ತೆಯಾಗಿದ್ದು, ಸಂಬಂಧಿಕರ ಮನೆಯಲ್ಲೆಲ್ಲಾ ಹುಡುಕಾಡಿ ಪತ್ತೆಯಾಗದೆ ಇರುವುದರಿಂದ ಅವರ ಪತಿ ಹರೀಶ್ ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ […]

ಕಡಬ: ವಿವಾಹಿತ ಮಹಿಳೆ ನಾಪತ್ತೆ Read More »

ಕರಾವಳಿ

ಕಡಬ: ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ಬೆಂಕಿ ► ಕ್ಷಣಾರ್ಧದಲ್ಲೇ ಸುಟ್ಟು ಕರಕಲಾದ ಕಾರು

(ನ್ಯೂಸ್ ಕಡಬ) newskadaba.com ಕಡಬ, ನ.28. ಚಲಿಸುತ್ತಿದ್ದ ಮಾರುತಿ ಆಮ್ನಿ ಕಾರೊಂದು ತನ್ನಿಂದ ತಾನೇ ಬೆಂಕಿ ಹತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಬುಧವಾರ ರಾತ್ರಿ ಕುಟ್ರುಪ್ಪಾಡಿ ಗ್ರಾಮದ ತಲೇಕಿ ಬಳಿ ಸಂಭವಿಸಿದೆ. ಇಲ್ಲಿನ ಬೈದ್ರಿಜಾಲು ನಿವಾಸಿ ಸುಂದರ ಗೌಡ ಎಂಬವರು ಬುಧವಾರ ರಾತ್ರಿ ವೇಳೆಗೆ ಕುಟುಂಬಿಕರೊಂದಿಗೆ ತನ್ನ ಮಾರುತಿ ಓಮ್ನಿ ಕಾರಿನಲ್ಲಿ ಕಡಬಕ್ಕೆ ತೆರಳುತ್ತಿದ್ದ ವೇಳೆ ತಲೇಕಿ ಬಳಿ ತಲುಪಿದಾಗ ಕಾರಿನ ಎಂಜಿನ್ ಬಳಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣವೇ ಕಾರು ನಿಲ್ಲಿಸಿ ಪರಿಶೀಲಿಸಿದಾಗ ಎಂಜಿನ್ ಬಳಿ ಸಣ್ಣಗೆ

ಕಡಬ: ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ಬೆಂಕಿ ► ಕ್ಷಣಾರ್ಧದಲ್ಲೇ ಸುಟ್ಟು ಕರಕಲಾದ ಕಾರು Read More »

ಕರಾವಳಿ

ಮಂಗಳೂರು: ಯುವತಿಯ ಮೇಲೆ ಗ್ಯಾಂಗ್ ರೇಪ್ ಪ್ರಕರಣ ► ನಾಲ್ವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ನ.28. ನಗರದ ಹೊರವಲಯದ ತೋಟ ಬೆಂಗ್ರೆಯಲ್ಲಿ ವಿಹಾರಕ್ಕೆಂದು ತೆರಳಿದ್ದ ಯುವತಿಯೋರ್ವಳನ್ನು ಏಳು ಮಂದಿ ದುಷ್ಕರ್ಮಿಗಳ ತಂಡವೊಂದು ಅಪಹರಿಸಿ ಹಾಡುಹಗಲೇ ಸಾಮೂಹಿಕ ಅತ್ಯಾಚಾರಗೈದ ಪೈಶಾಚಿಕ ಘಟನೆಗೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಪಣಂಬೂರು ಇನ್ ಪೆಕ್ಟರ್ ರಫೀಕ್ ಕೆ.ಎಂ ಮತ್ತು ಮಂಗಳೂರು ಉತ್ತರ ಉಪ-ವಿಭಾಗದ ರೌಡಿ ನಿಗ್ರಹ ದಳದ ವಿಶೇಷ ತಂಡವು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಂಧಿತ ಆರೋಪಿಗಳನ್ನು ಬೆಂಗ್ರೆ ನಿವಾಸಿಗಳಾದ ಅಮರನಾಥ ಎಂಬವರ ಪುತ್ರ ಪ್ರಜ್ವಲ್ ಸುವರ್ಣ(25), ಸುರೇಂದ್ರ ಶ್ರೀಯಾನ್ ಎಂಬವರ ಪುತ್ರ ಅರುಣ್

ಮಂಗಳೂರು: ಯುವತಿಯ ಮೇಲೆ ಗ್ಯಾಂಗ್ ರೇಪ್ ಪ್ರಕರಣ ► ನಾಲ್ವರು ಆರೋಪಿಗಳ ಬಂಧನ Read More »

ಕರಾವಳಿ

ಮಂಗಳೂರು: ಖಾಸಗಿ ಬಸ್ ಢಿಕ್ಕಿ ► ಪಾದಚಾರಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ನ.28. ಪಾದಚಾರಿಯೋರ್ವರಿಗೆ ಖಾಸಗಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಕೂಳೂರಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಮೃತ ಪಾದಚಾರಿಯನ್ನು ಹಲವಾರು ವರ್ಷಗಳಿಂದ ಇಲೆಕ್ಟ್ರಿಶಿಯನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಕೂಳೂರು ನಿವಾಸಿ ಭೋಜ(45) ಎಂದು ಗುರುತಿಸಲಾಗಿದೆ. ಅವರು ರಾತ್ರಿ ತನ್ನ ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಮಂಗಳೂರಿನಿಂದ ಸುರತ್ಕಲ್ ಮಾರ್ಗವಾಗಿ ತೆರಳುತ್ತಿದ್ದ ಖಾಸಗಿ ಬಸ್ ಭೋಜರವರಿಗೆ ಢಿಕ್ಕಿ ಹೊಡೆದಿದ್ದಲ್ಲದೆ ಅವರ ಮೇಲೆ ಹರಿದು ಈ ದುರ್ಘಟನೆ

ಮಂಗಳೂರು: ಖಾಸಗಿ ಬಸ್ ಢಿಕ್ಕಿ ► ಪಾದಚಾರಿ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಬುದ್ಧಿವಂತರ ಜಿಲ್ಲೆ ಮಂಗಳೂರಿನಲ್ಲಿ ನಡೆಯಿತು ಪೈಶಾಚಿಕ ಕೃತ್ಯ ► ಏಳು ಮಂದಿಯ ತಂಡದಿಂದ ಹಾಡುಹಗಲೇ ಯುವತಿಯ ಗ್ಯಾಂಗ್ ರೇಪ್

(ನ್ಯೂಸ್ ಕಡಬ) newskadaba.com ಮಂಗಳೂರು, ನ.27. ನಗರದ ಹೊರವಲಯದ ತೋಟ ಬೆಂಗ್ರೆಯಲ್ಲಿ ವಿಹಾರಕ್ಕೆಂದು ತೆರಳಿದ್ದ ಯುವತಿಯೋರ್ವಳನ್ನು ಏಳು ಮಂದಿ ದುಷ್ಕರ್ಮಿಗಳ ತಂಡವೊಂದು ಅಪಹರಿಸಿ ಹಾಡುಹಗಲೇ ಸಾಮೂಹಿಕ ಅತ್ಯಾಚಾರಗೈದ ಪೈಶಾಚಿಕ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಗರದ ಕಾರ್ಖಾನೆಯೊಂದರಲ್ಲಿ ಉದ್ಯೋಗದಲ್ಲಿದ್ದ ಯುವತಿಯೋರ್ವಳು ನವೆಂಬರ್ 18 ರಂದು ಮಧ್ಯಾಹ್ನದ ವೇಳೆಗೆ ವಿಹಾರಕ್ಕೆಂದು ತನ್ನ ಸ್ನೇಹಿತನೊಂದಿಗೆ ತೋಟ ಬೆಂಗರೆಯ ಅಳಿವೆ ಬಾಗಿಲು ಬೀಚ್‌ಗೆ ತೆರಳಿದ್ದಳೆನ್ನಲಾಗಿದ್ದು, ಈ ವೇಳೆ ಏಳು ಮಂದಿ ದುಷ್ಕರ್ಮಿಗಳ ತಂಡವೊಂದು ಅವರಿಬ್ಬರನ್ನು ಬೆದರಿಸಿದ್ದಲ್ಲದೆ ಯುವಕನ ಮೇಲೆ ಹಲ್ಲೆ ನಡೆಸಿ

ಬುದ್ಧಿವಂತರ ಜಿಲ್ಲೆ ಮಂಗಳೂರಿನಲ್ಲಿ ನಡೆಯಿತು ಪೈಶಾಚಿಕ ಕೃತ್ಯ ► ಏಳು ಮಂದಿಯ ತಂಡದಿಂದ ಹಾಡುಹಗಲೇ ಯುವತಿಯ ಗ್ಯಾಂಗ್ ರೇಪ್ Read More »

ಕರಾವಳಿ

ಕದ್ರಿ ಪಾರ್ಕ್‌ಗೆ ಸುತ್ತಾಡಲೆಂದು ಬಂದಿದ್ದ ಪ್ರೇಮಿಗಳಿಂದ ವಿಷ ಸೇವಿಸಿ ಆತ್ಮಹತ್ಯೆ ಯತ್ನ

(ನ್ಯೂಸ್ ಕಡಬ) newskadaba.com ಮಂಗಳೂರು, ನ.26. ಸುತ್ತಾಡಲೆಂದು ಪಾರ್ಕ್‌ಗೆ ಬಂದಿದ್ದ ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳೂರಿನ ಕದ್ರಿ ಪಾರ್ಕ್‌ನಲ್ಲಿ ಸೋಮವಾರ ಸಂಜೆ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದವರನ್ನು ಪ್ರೇಮಿಗಳನ್ನು ಕಾಸರಗೋಡು ನಿವಾಸಿ ಹರ್ಷಿತ್ ಕುಮಾರ್ ಮತ್ತು ಆತನ ಪ್ರಿಯತಮೆ ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ ವೇಳೆ ಕದ್ರಿ ಪಾರ್ಕಿಗೆ ಬಂದಿದ್ದ ಪ್ರೇಮಿಗಳು ಕೆಲಕಾಲ ಪಾರ್ಕ್‌ನಲ್ಲಿ ಸುತ್ತಾಡಿದ್ದು, ಆ ಬಳಿಕ ವಿಷ ಸೇವಿಸಿದ್ದಾರೆ. ತೀವ್ರ ಅಸ್ವಸ್ಥಗೊಂಡಿದ್ದ ಇವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿತಿ

ಕದ್ರಿ ಪಾರ್ಕ್‌ಗೆ ಸುತ್ತಾಡಲೆಂದು ಬಂದಿದ್ದ ಪ್ರೇಮಿಗಳಿಂದ ವಿಷ ಸೇವಿಸಿ ಆತ್ಮಹತ್ಯೆ ಯತ್ನ Read More »

ಕರಾವಳಿ

ಕಡಬ ಠಾಣಾ ಸಿಬ್ಬಂದಿ ಅಂಜನಪ್ಪ ಹುಟ್ಟೂರಿಗೆ ವರ್ಗಾವಣೆ ► ಠಾಣೆಯಲ್ಲಿ ಬೀಳ್ಕೊಡುಗೆ

(ನ್ಯೂಸ್ ಕಡಬ) newskadaba.com ಕಡಬ, ನ.26. ಕಡಬ ಠಾಣೆಯಲ್ಲಿ ಕಳೆದ ಆರು ವರ್ಷಗಳಿಂದ ಕರ್ತವ್ಯ ನಿರ್ವಹಿಸಿ ಇದೀಗ ದಾವಣಗೆರೆ ಜಿಲ್ಲೆಗೆ ವರ್ಗಾವಣೆಗೊಂಡ ಪೊಲೀಸ್ ಸಿಬ್ಬಂದಿಯನ್ನು ಬೀಳ್ಕೊಡಲಾಯಿತು. ಮೂಲತಃ ದಾವಣಗೆರೆಯವರಾದ ಪೊಲೀಸ್ ಸಿಬ್ಬಂದಿ ಅಂಜನಪ್ಪ ಹಾಗೂ ಅವರ ಪತ್ನಿಯನ್ನು ಕಡಬ ಠಾಣಾ ಉಪ ನಿರೀಕ್ಷಕ ಪ್ರಕಾಶ್ ದೇವಾಡಿಗ ಶಾಲು ಹೊದಿಸಿ, ಫಲ ಪುಷ್ಪ ನೀಡುವ ಮೂಲಕ ಬೀಳ್ಕೊಟ್ಟರು. ಈ ಸಂದರ್ಭದಲ್ಲಿ ಕಡಬ ಠಾಣಾ ಸಿಬ್ಬಂದಿಗಳು ಹಾಗೂ ಗೃಹರಕ್ಷಕ ದಳದ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕಡಬ ಠಾಣಾ ಸಿಬ್ಬಂದಿ ಅಂಜನಪ್ಪ ಹುಟ್ಟೂರಿಗೆ ವರ್ಗಾವಣೆ ► ಠಾಣೆಯಲ್ಲಿ ಬೀಳ್ಕೊಡುಗೆ Read More »

ಕರಾವಳಿ

ಕಡಬ ತಾಲೂಕು ಉದ್ಘಾಟನೆ ಮುಂದೂಡಿರುವುದು ನೋವು ತಂದಿದೆ ► ಕೂಡಲೇ ತಾಲೂಕು ಅನುಷ್ಠಾನಕ್ಕೆ ಸರಕಾರ ಮುಂದಾಗಬೇಕು: ಕೃಷ್ಣ ಶೆಟ್ಟಿ

(ನ್ಯೂಸ್ ಕಡಬ) newskadaba.com ಕಡಬ, ನ.26. ಆರು ದಶಕಗಳ ಕಡಬ ತಾಲೂಕು ಬೇಡಿಕೆ ಕೊನೆಗೂ ಈಡೇರುತ್ತದೆ ಎನ್ನುವ ಸಂದರ್ಭ ಒದಗಿ ಬಂದಾಗ ಹಠಾತ್ತನೆ ಉದ್ಘಾಟನಾ ಸಮಾರಂಭ ರದ್ದಾಗಿರುವುದು ನೋವು ತಂದಿದ್ದು, ಆದಷ್ಟು ಬೇಗ ಕಡಬ ತಾಲೂಕನ್ನು ಉದ್ಘಾಟಿಸಬೇಕೆಂದು ಕಡಬ ತಾಲೂಕು ಹೋರಾಟ ಸಮಿತಿಯ ಸಂಚಾಲಕರಾದ ಕೃಷ್ಣ ಶೆಟ್ಟಿ ಕಡಬ ತಿಳಿಸಿದ್ದಾರೆ. ಕನ್ನಡ ಚಿತ್ರರಂಗದ ಹಿರಿಯ ನಟ ಅಂಬರೀಶ್ ನಿಧನದ ಹಿನ್ನೆಲೆಯಲ್ಲಿ ಭಾನುವಾರದಂದು ನಡೆಯಬೇಕಿದ್ದ ಕಡಬ ತಾಲೂಕು ಉದ್ಘಾಟನೆಯನ್ನು ಮುಂದೂಡಲಾಗಿದ್ದು, ಆರು ವರ್ಷಗಳ ಹಿಂದೆ ಒಮ್ಮೆ ಘೋಷಣೆಯಾದ ಕಡಬ ತಾಲೂಕನ್ನು

ಕಡಬ ತಾಲೂಕು ಉದ್ಘಾಟನೆ ಮುಂದೂಡಿರುವುದು ನೋವು ತಂದಿದೆ ► ಕೂಡಲೇ ತಾಲೂಕು ಅನುಷ್ಠಾನಕ್ಕೆ ಸರಕಾರ ಮುಂದಾಗಬೇಕು: ಕೃಷ್ಣ ಶೆಟ್ಟಿ Read More »

ಕರಾವಳಿ

ಖ್ಯಾತ ನಟ ಅಂಬರೀಶ್ ನಿಧನದ ಬೆನ್ನಲ್ಲೇ ಕಾಂಗ್ರೆಸ್ ಗೆ ಮತ್ತೊಂದು ಆಘಾತ ► ಹಿರಿಯ ರಾಜಕಾರಣಿ ಜಾಫರ್ ಶರೀಫ್ ವಿಧಿವಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.25. ರೆಬೆಲ್ ಸ್ಟಾರ್ ಅಂಬರೀಶ್ ನಿಧನದ ಬೆನ್ನಲ್ಲೇ ಕಾಂಗ್ರೆಸ್ ಗೆ ಮತ್ತೊಂದು ಆಘಾತವಾಗಿದ್ದು, ಹಿರಿಯ ರಾಜಕಾರಣಿ, ಕೇಂದ್ರದ ಮಾಜಿ ಸಚಿವ ಸಿ.ಕೆ.ಜಾಫರ್ ಶರೀಫ್ (85) ಭಾನುವಾರದಂದು ನಿಧನರಾಗಿದ್ದಾರೆ. ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರ ಆಪ್ತರಾಗಿ ಗುರುತಿಸಿಕೊಂಡಿದ್ದ ಜಾಫರ್ ಶರೀಫ್ ರವರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದರಿಂದ ಶುಕ್ರವಾರದಂದು ಪೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಭಾನುವಾರದಂದು ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

ಖ್ಯಾತ ನಟ ಅಂಬರೀಶ್ ನಿಧನದ ಬೆನ್ನಲ್ಲೇ ಕಾಂಗ್ರೆಸ್ ಗೆ ಮತ್ತೊಂದು ಆಘಾತ ► ಹಿರಿಯ ರಾಜಕಾರಣಿ ಜಾಫರ್ ಶರೀಫ್ ವಿಧಿವಶ Read More »

ಕರ್ನಾಟಕ

ಖ್ಯಾತ ನಟ ಅಂಬರೀಶ್ ನಿಧನದ ಹಿನ್ನೆಲೆ ► ಕಡಬ ತಾಲೂಕು ಉದ್ಘಾಟನೆ ರದ್ದು

(ನ್ಯೂಸ್ ಕಡಬ) newskadaba.com ಕಡಬ, ನ.25. ಪರಿಸರದ ಜನತೆಯ ಬಹು ದಶಕಗಳ ಬೇಡಿಕೆಯಾದ ‘ನೂತನ ಕಡಬ ತಾಲೂಕು ಉದ್ಘಾಟನೆ’ ನೆರವೇರಲು ಕೆಲವೇ ತಾಸುಗಳು ಬಾಕಿ ಉಳಿದಿರುವಾಗ ತಾಲೂಕು ಉದ್ಘಾಟನೆಗೆ ಮತ್ತೊಂದು ವಿಘ್ನ ಎದುರಾಗಿದ್ದು, ಉದ್ಘಾಟನಾ ಸಮಾರಂಭವನ್ನು ಕೊನೆಯ ಕ್ಷಣದಲ್ಲಿ ರದ್ದಾಗಿದೆ. ಕನ್ನಡ ಚಿತ್ರರಂಗದ ಹಿರಿಯ ನಟ, ಮಾಜಿ ಸಚಿವ ಅಂಜದ ಗಂಡು ರೆಬೆಲ್ ಸ್ಟಾರ್ ಅಂಬರೀಶ್ ನಿಧನದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶೋಕಾಚರಣೆ ನಡೆಯುತ್ತಿರುವುದರಿಂದ ಭಾನುವಾರದಂದು ನಡೆಯಬೇಕಾಗಿದ್ದ ಕಡಬ ಹಾಗೂ ಮೂಡಬಿದಿರೆ ತಾಲೂಕು ಉದ್ಘಾಟನಾ ಕಾರ್ಯವನ್ನು ಮುಂದೂಡಲಾಗಿದೆ. ಅಂತೂ

ಖ್ಯಾತ ನಟ ಅಂಬರೀಶ್ ನಿಧನದ ಹಿನ್ನೆಲೆ ► ಕಡಬ ತಾಲೂಕು ಉದ್ಘಾಟನೆ ರದ್ದು Read More »

ಕರಾವಳಿ
Scroll to Top