ಆರ್.ಟಿ.ಸಿ., ಭೂಮಾಪನ, ಭೂ ಪರಿವರ್ತನೆಯಲ್ಲಿ ಸಮಸ್ಯೆಯೇ..? ► ನ.16 ರಂದು ಜಿಲ್ಲಾ ಮಟ್ಟದ ಕಂದಾಯ ಅದಾಲತ್‍ನಲ್ಲಿ ದೊರೆಯಲಿದೆ ಪರಿಹಾರ

(ನ್ಯೂಸ್ ಕಡಬ) newskadaba.com ಮಂಗಳೂರು, ನ.14. ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಅಹವಾಲು ಮತ್ತು ಕುಂದು ಕೊರತೆಗಳನ್ನು ಆಲಿಸಿ ಪರಿಹರಿಸುವ ನಿಟ್ಟಿನಲ್ಲಿ ನವೆಂಬರ್ 12 ರಂದು ಏರ್ಪಡಿಸಲಾಗಿದ್ದ ‘ಕಂದಾಯ ಅದಾಲತ್’ನ್ನು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಹಾಗೂ ಸಂಸದೀಯ ವ್ಯವಹಾರ ಸಚಿವ ಅನಂತ್‍ ಕುಮಾರ್ ರವರ ನಿಧನದಿಂದಾಗಿ ಮುಂದೂಡಲಾಗಿದ್ದು, ನವೆಂಬರ್ 16 ರಂದು ಪುನರ್ ನಿಗದಿಗೊಳಿಸಲಾಗಿದೆ. ಭೂಪರಿವರ್ತನೆಗೆ ಸಂಬಂಧಿಸಿದಂತೆ ವಿಳಂಬ ಅಥವಾ ಸಮಸ್ಯೆಗಳು ಇದ್ದಲ್ಲಿ, ಇತರೆ ಕಂದಾಯ ವಿಷಯಗಳಾದ ಆರ್.ಟಿ.ಸಿ. ಭೂಮಾಪನ ಮುಂತಾದ ಕಂದಾಯ ವಿಷಯಗಳಿಗೆ ಸಂಬಂಧಪಟ್ಟಂತೆ […]

ಆರ್.ಟಿ.ಸಿ., ಭೂಮಾಪನ, ಭೂ ಪರಿವರ್ತನೆಯಲ್ಲಿ ಸಮಸ್ಯೆಯೇ..? ► ನ.16 ರಂದು ಜಿಲ್ಲಾ ಮಟ್ಟದ ಕಂದಾಯ ಅದಾಲತ್‍ನಲ್ಲಿ ದೊರೆಯಲಿದೆ ಪರಿಹಾರ Read More »

ಕರಾವಳಿ

ಮರ್ಧಾಳ ಜುಮ್ಮಾ ಮಸೀದಿಯ ಪದಾಧಿಕಾರಿಗಳ ಆಯ್ಕೆ ► ಅಧ್ಯಕ್ಷರಾಗಿ ಹಮೀದ್ ತಂಙಳ್, ಕಾರ್ಯದರ್ಶಿಯಾಗಿ ಹನೀಫ್ ಎಂ.ಎಸ್. ಪುನರಾಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ನ.14. ಮರ್ಧಾಳ ತಖ್ವಿಯ್ಯತುಲ್ ಇಸ್ಲಾಂ ಜಮಾಅತ್ ಕಮಿಟಿಯ ಅಧ್ಯಕ್ಷರಾಗಿ ಕೆ.ಎಸ್. ಶಾಹುಲ್ ಹಮೀದ್ ತಂಙಳ್ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಹನೀಫ್ ಎಂ.ಎಸ್. ಪುನರಾಯ್ಕೆಗೊಂಡಿದ್ದಾರೆ‌. ಅಸ್ಸಯ್ಯಿದ್ ಜಮಲುಲ್ಲೈಲಿ ತಂಙಳ್ ಕಾಜೂರುರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಉಪಾಧ್ಯಕ್ಷರಾಗಿ ಮುಹಮ್ಮದ್ ಹಾಜಿ ಬಡಕೋಡಿ, ಕೋಶಾಧಿಕಾರಿಯಾಗಿ ಸಿ.ಎಂ. ಇಬ್ರಾಹಿಮ್ ಮುಸ್ಲಿಯಾರ್, ಜೊತೆ ಕಾರ್ಯದರ್ಶಿಗಳಾಗಿ ಅಬೂಬಕರ್ ಮಿತ್ತೋಡಿ, ಲತೀಫ್ ಖಾನ್ ಆಯ್ಕೆಗೊಂಡರು. ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಮುಹಮ್ಮದ್ ಕೆ., ಸತ್ತಾರ್ ಪನ್ಯ, ಉಮರ್

ಮರ್ಧಾಳ ಜುಮ್ಮಾ ಮಸೀದಿಯ ಪದಾಧಿಕಾರಿಗಳ ಆಯ್ಕೆ ► ಅಧ್ಯಕ್ಷರಾಗಿ ಹಮೀದ್ ತಂಙಳ್, ಕಾರ್ಯದರ್ಶಿಯಾಗಿ ಹನೀಫ್ ಎಂ.ಎಸ್. ಪುನರಾಯ್ಕೆ Read More »

ಕರಾವಳಿ

ಮಂಗಳೂರು: ಚಿನ್ನದ ವ್ಯಾಪಾರಿಯ ದರೋಡೆಗೆ ಸಂಚು ► ಹನ್ನೊಂದು ಮಂದಿ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ನ.14. ನಗರದ ಜುವೆಲ್ಲರಿ ಮಾಲಕನ ದರೋಡೆಗೆ ಸಂಚು ರೂಪಿಸಿದ ಹಿನ್ನೆಲೆಯಲ್ಲಿ 11 ಮಂದಿ ಆರೋಪಿಗಳನ್ನು ಮಂಗಳೂರು ದಕ್ಷಿಣ ಉಪ ವಿಭಾಗದ ರೌಡಿ ನಿಗ್ರಹ ದಳದ ಪೊಲೀಸರು ಬಂಧಿಸಿದ್ದಾರೆ. ಬಂಧಿತರೆಲ್ಲರೂ ಮಂಗಳೂರು ಪರಿಸರದವರಾಗಿದ್ದು, ಬಂಧಿತರನ್ನು ಶೇಖ್ ಮಹಮ್ಮದ್ ಅನ್ಸಾರ್ ಯಾನೆ ಅನ್ಸಾರ್ (34), (21), ಮುಹಮ್ಮದ್ ತೌಸೀಫ್ ಯಾನೆ ತಚ್ಚು (24), ಉಬೈದುಲ್ಲಾ (25), ಮುಹಮ್ಮದ್ ತೌಸೀಫ್ ಯಾನೆ ತೌಸೀಫ್ (25), ಮುಹಮ್ಮದ್ ಅಲಿ (25), ಅಂತಾರಾಜ್ಯ ಆರೋಪಿಗಳಾದ ಅಹ್ಮದ್ ಕಬೀರ್ (30),

ಮಂಗಳೂರು: ಚಿನ್ನದ ವ್ಯಾಪಾರಿಯ ದರೋಡೆಗೆ ಸಂಚು ► ಹನ್ನೊಂದು ಮಂದಿ ಆರೋಪಿಗಳ ಬಂಧನ Read More »

ಕರಾವಳಿ

ಕಬಕ: ಗೂಡ್ಸ್ ರಿಕ್ಷಾ ಢಿಕ್ಕಿ ► ಪಾದಚಾರಿ ಗಂಭೀರ

(ನ್ಯೂಸ್ ಕಡಬ) newskadaba.com ಪುತ್ತೂರು, ನ.13. ಗೂಡ್ಸ್ ರಿಕ್ಷಾವೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೋರ್ವರು ಗಂಭೀರ ಗಾಯಗೊಂಡ ಘಟನೆ ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ಕಬಕದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಮಂಗಳವಾರ ರಾತ್ರಿ ಕಬಕ ಮಸೀದಿಯ ಬಳಿಯಿಂದ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಗೂಡ್ಸ್ ರಿಕ್ಷಾವು ಢಿಕ್ಕಿ ಹೊಡೆದಿದ್ದು, ಪಾದಚಾರಿಯು ಗಂಭೀರವಾಗಿ ಗಾಯಗೊಂಡಿದ್ದಾರೆ. ಢಿಕ್ಕಿ ಹೊಡೆದ ರಭಸಕ್ಕೆ ರಿಕ್ಷಾ ರಸ್ತೆಗೆ ಮಗುಚಿ ಬಿದ್ದಿದೆ. ಗಂಭೀರ ಗಾಯಗೊಂಡ ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು

ಕಬಕ: ಗೂಡ್ಸ್ ರಿಕ್ಷಾ ಢಿಕ್ಕಿ ► ಪಾದಚಾರಿ ಗಂಭೀರ Read More »

ಕರಾವಳಿ

ಸುಬ್ರಹ್ಮಣ್ಯ: ದೇವಸ್ಥಾನಕ್ಕೆ ಹೋಗಿ ಹೊರ ಬಂದವರಿಗೆ ಕಾದಿತ್ತು ಶಾಕ್..!! ► ಪರದಾಡಿದ ಮಡಿಕೇರಿ ಮೂಲದ ಕುಟುಂಬ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ನ.13. ದೇವಸ್ಥಾನಕ್ಕೆಂದು ಆಗಮಿಸಿದ್ದ ಯಾತ್ರಾರ್ಥಿಯೋರ್ವರು ನಿಲ್ಲಿಸಿದ್ದ ಮಹೀಂದ್ರಾ ಬೊಲೆರೋ ವಾಹನವನ್ನು ಕಳವುಗೈದಿರುವ ಘಟನೆ ಸೋಮವಾರದಂದು ಸುಬ್ರಹ್ಮಣ್ಯದಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ನರಿಯಂದಡ ಗ್ರಾಮದ ಚೆಯ್ಯಂಡಾಣೆ ನಿವಾಸಿ ಬಿ‌.ಎಸ್‌. ಅಪ್ಪಚ್ಚ ಎಂಬವರ ಪುತ್ರ ಚಂದ್ರಶೇಖರ್ ಎಂಬವರು ಸೋಮವಾರದಂದು ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನಕ್ಕೆಂದು ಆಗಮಿಸಿ ಬೊಲೆರೋ (KA.04.MJ.9270) ವಾಹನವನ್ನು ಸುಬ್ರಹ್ಮಣ್ಯದ ಸವಾರಿ ಮಂಟಪದ ಬಳಿ ನಿಲ್ಲಿಸಿ ದೇವಸ್ಥಾನಕ್ಕೆ ತೆರಳಿದ್ದಾರೆ. ಮಧ್ಯಾಹ್ನ ಬಂದು ನೋಡಿದಾಗ ಇವರು ನಿಲ್ಲಿಸಿದ್ದ ಬೊಲೆರೋವನ್ನು ಯಾರೋ ಕದ್ದೊಯ್ದಿರುವುದು ಗಮನಕ್ಕೆ ಬಂದಿದೆ. ಪರಿಸರದಲ್ಲೆಲ್ಲಾ

ಸುಬ್ರಹ್ಮಣ್ಯ: ದೇವಸ್ಥಾನಕ್ಕೆ ಹೋಗಿ ಹೊರ ಬಂದವರಿಗೆ ಕಾದಿತ್ತು ಶಾಕ್..!! ► ಪರದಾಡಿದ ಮಡಿಕೇರಿ ಮೂಲದ ಕುಟುಂಬ Read More »

ಕರ್ನಾಟಕ

ನೆಲ್ಯಾಡಿ: ಅಕ್ರಮ ಮರಳು ಸಾಗಾಟ ► ಹಲವು ವಾಹನಗಳು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ.13. ಪುತ್ತೂರು ಡಿವೈಎಸ್ಪಿ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ಅಕ್ರಮ ಮರಳು ಸಾಗಾಟದ ಪಿಕಪ್ ವಾಹನಗಳನ್ನು ವಶಪಡಿಸಿಕೊಂಡ ಘಟನೆ ನೆಲ್ಯಾಡಿಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಉದನೆಯಿಂದ ಗುಂಡ್ಯದವರೆಗೆ ಅಲ್ಲಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಆಧಾರದಲ್ಲಿ ಡಿವೈಎಸ್ಪಿ ನೇತೃತ್ವದಲ್ಲಿ ದಾಳಿ ನಡೆಸಿದ ಉಪ್ಪಿನಂಗಡಿ ಪೊಲೀಸರು ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಪಿಕಪ್ ಗಳನ್ನು ವಶಕ್ಕೆ ಪಡೆದುಕೊಂಡು ನೆಲ್ಯಾಡಿ ಹೊರಠಾಣೆಯಲ್ಲಿ ಇರಿಸಿದ್ದಾರೆ.

ನೆಲ್ಯಾಡಿ: ಅಕ್ರಮ ಮರಳು ಸಾಗಾಟ ► ಹಲವು ವಾಹನಗಳು ಪೊಲೀಸ್ ವಶಕ್ಕೆ Read More »

ಕರಾವಳಿ

ಅನಂತಕುಮಾರ್ ನಿಧನಕ್ಕೆ ವಿಕೃತಿ ಮೆರೆದ ‘ಮಂಗಳೂರು ಮುಸ್ಲಿಮ್ಸ್’ ಫೇಸ್‌ಬುಕ್‌ ಪೇಜ್ ► ಪಾಂಡೇಶ್ವರ ಪೊಲೀಸರಿಂದ ಸ್ವಯಂ ಪ್ರೇರಿತ ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ನ.13. ಕೇಂದ್ರ ಸಚಿವ ಅನಂತ್ ಕುಮಾರ್ ನಿಧನಕ್ಕೆ ಸಂಬಂಧಿಸಿ ವಿಕೃತಿ ಮೆರೆದು ವಿವಾದಾತ್ಮಕ ಪೋಸ್ಟ್ ಪ್ರಕಟಿಸಿದ ‘ಮಂಗಳೂರು ಮುಸ್ಲಿಮ್ಸ್’ ಫೇಸ್‌ಬುಕ್‌ ಪೇಜ್ ವಿರುದ್ಧ ಪಾಂಡೇಶ್ವರ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಕೇಂದ್ರ ಸಚಿವ ಅನಂತ್ ಕುಮಾರ್ ನಿಧನ ಹಿನ್ನೆಲೆಯಲ್ಲಿ ‘ಮಂಗಳೂರು ಮುಸ್ಲಿಮ್ಸ್’ ಫೇಸ್‌ಬುಕ್‌ ಪೇಜ್ ನಲ್ಲಿ ಕೋಮು ಪ್ರಚೋದಿಸುವಂತಹ ವಿವಾದಾತ್ಮಕ ಪೋಸ್ಟ್ ವೊಂದನ್ನು ಪ್ರಕಟಿಸಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಸಾವಿನಲ್ಲೂ ವಿಕೃತಿ ಮೆರೆದು ಕೀಳು ಮಟ್ಟದ ಪೋಸ್ಟ್

ಅನಂತಕುಮಾರ್ ನಿಧನಕ್ಕೆ ವಿಕೃತಿ ಮೆರೆದ ‘ಮಂಗಳೂರು ಮುಸ್ಲಿಮ್ಸ್’ ಫೇಸ್‌ಬುಕ್‌ ಪೇಜ್ ► ಪಾಂಡೇಶ್ವರ ಪೊಲೀಸರಿಂದ ಸ್ವಯಂ ಪ್ರೇರಿತ ದೂರು ದಾಖಲು Read More »

ಕರ್ನಾಟಕ

ಶಿರಾಡಿ ಘಾಟ್ ರಸ್ತೆ ಲಾರಿಗಳ ಸಂಚಾರಕ್ಕೆ ಮುಕ್ತವಾಗಿದೆ ಎಂಬ ವದಂತಿ ► ನಂಬಿ ಬಂದು ಪರದಾಡುತ್ತಿರುವ ನೂರಾರು ಲಾರಿಗಳ ಚಾಲಕರು..!!

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ.12. ಶಿರಾಡಿ ಘಾಟ್ ರಸ್ತೆಯಲ್ಲಿ ಲಾರಿಗಳ ಸಂಚಾರಕ್ಕೆ ನವೆಂಬರ್ 12 ಸೋಮವಾರದಿಂದ ಅನುವು ಮಾಡಿ ಕೊಡಲಾಗುತ್ತದೆ ಎಂದು ನವೆಂಬರ್ 08 ರಂದು ಜಿಲ್ಲಾಡಳಿತವು ಘೋಷಿಸಿದ್ದನ್ನು ನಂಬಿ ಬಂದ ನೂರಾರು ಲಾರಿಗಳ ಚಾಲಕರು ಪರದಾಡಿದ ಘಟನೆ ಸೋಮವಾರದಂದು ಗುಂಡ್ಯದಲ್ಲಿ ನಡೆದಿದೆ. ಶಿರಾಡಿ ಘಾಟಿ ರಸ್ತೆ ಘನ ವಾಹನಗಳಾದ ಲಾರಿಗಳ‌ ಸಂಚಾರಕ್ಕೆ ಇಂದು ಮುಕ್ತವಾಗುತ್ತದೆ ಅನ್ನುವ ಸುದ್ದಿಯನ್ನು ನಂಬಿ ಅನೇಕ ಲಾರಿಗಳು ಗುಂಡ್ಯಕ್ಕೆ ಆಗಮಿಸಿವೆ. ಸಕಲೇಶಪುರ ಕಡೆಗಳಿಂದಲೂ ಟನ್ ಗಟ್ಟಲೆ ಲೋಡು ತುಂಬಿದ ಲಾರಿಗಳು

ಶಿರಾಡಿ ಘಾಟ್ ರಸ್ತೆ ಲಾರಿಗಳ ಸಂಚಾರಕ್ಕೆ ಮುಕ್ತವಾಗಿದೆ ಎಂಬ ವದಂತಿ ► ನಂಬಿ ಬಂದು ಪರದಾಡುತ್ತಿರುವ ನೂರಾರು ಲಾರಿಗಳ ಚಾಲಕರು..!! Read More »

ಕರ್ನಾಟಕ

ಪೆರ್ನೆ: ಬೈಕ್ – ರಿಕ್ಷಾ ಢಿಕ್ಕಿ ► ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ವಿಟ್ಲ, ನ.12. ಬೈಕ್ ಮತ್ತು ಗೂಡ್ಸ್ ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆಯಲ್ಲಿ ನಡೆದಿದೆ. ಉಪ್ಪಿನಂಗಡಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಬೈಕ್ ಮತ್ತು ಪೆರ್ನೆಯಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಗೂಡ್ಸ್ ರಿಕ್ಷಾ ನಡುವೆ ಪೆರ್ನೆ ಸಮೀಪದ ದೋರ್ಮೆ ಎಂಬಲ್ಲಿ ಮುಖಾಮುಖಿ ಢಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಬೈಕ್ ಸವಾರ ಬುಡೋಳಿ ಸಮೀಪ್ ಶೇರಾ ನಿವಾಸಿ

ಪೆರ್ನೆ: ಬೈಕ್ – ರಿಕ್ಷಾ ಢಿಕ್ಕಿ ► ಬೈಕ್ ಸವಾರ ಮೃತ್ಯು Read More »

ಕರಾವಳಿ

ಶಿರಾಡಿ: 80 ಅಡಿ ಆಳಕ್ಕೆ ಉರುಳಿದ ಕಾರು ► ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ.12. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಸುಮಾರು 80 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬರ್ಚಿನಹಳ್ಳ ಸಮೀಪ ನಡೆದಿದೆ. ಮೃತ ಚಾಲಕನನ್ನು ತಮಿಳುನಾಡಿನ ಹೊಸೂರು ತಾಲೂಕಿನ ಮುತ್ತಪ್ಪ ಎಂಬವರ ಪುತ್ರ ವೆಂಕಟರಾಜು ಎಂದು ಗುರುತಿಸಲಾಗಿದೆ. ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದ ಅವರು ಶನಿವಾರದಂದು ಪೂಜೆ ಮುಗಿಸಿ ವಾಪಸ್ ಊರಿಗೆ ಹಿಂತಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ಭಾನುವಾರದಂದು ಬೆಳಕಿಗೆ ಬಂದಿದೆ.

ಶಿರಾಡಿ: 80 ಅಡಿ ಆಳಕ್ಕೆ ಉರುಳಿದ ಕಾರು ► ಚಾಲಕ ಮೃತ್ಯು Read More »

ಕರಾವಳಿ
Scroll to Top