ಕೇಂದ್ರ ಸಚಿವ ಅನಂತ ಕುಮಾರ್ ನಿಧನದ ಹಿನ್ನೆಲೆ ► ಇಂದು ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.12. ಕರ್ನಾಟಕ ಬಿಜೆಪಿಯ ಹಿರಿಯ ಮುಖಂಡ, ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಎಚ್.ಎನ್. ಅನಂತಕುಮಾರ್ (59) ಅನಾರೋಗ್ಯದಿಂದ ಸೋಮವಾರ ಬೆಳಗ್ಗಿನ ಜಾವ ನಿಧನರಾದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಸರಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳಿಗೆ ಜೊತೆಗೆ ಸರಕಾರಿ ಕಚೇರಿಗಳಿಗೂ ಒಂದು ದಿನಗಳ ರಜೆಯನ್ನು ಘೋಷಿಸಿದ್ದು ಮೂರು ದಿನಗಳ ಕಾಲ ಶೋಕಾಚರಣೆಯನ್ನು ನಡೆಸಲಿದೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅನಂತಕುಮಾರ್ ಅವರನ್ನು ಕಳೆದ ಎರಡು ದಿನಗಳಿಂದ ವೆಂಟಿಲೇಟರ್‍ನಲ್ಲಿ ಇಡಲಾಗಿತ್ತು. ಸೋಮವಾರ ಬೆಳಗ್ಗಿನ ಜಾವ ಎರಡು ಗಂಟೆ ಸುಮಾರಿಗೆ […]

ಕೇಂದ್ರ ಸಚಿವ ಅನಂತ ಕುಮಾರ್ ನಿಧನದ ಹಿನ್ನೆಲೆ ► ಇಂದು ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ Read More »

ರಾಷ್ಟ್ರೀಯ ನ್ಯೂಸ್

ಬಿಜೆಪಿಯ ಹಿರಿಯ ಮುಖಂಡ, ಕೇಂದ್ರ ಸಚಿವ ಅನಂತ ಕುಮಾರ್ ವಿಧಿವಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.12. ಕರ್ನಾಟಕ ಬಿಜೆಪಿಯ ಹಿರಿಯ ಮುಖಂಡ, ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಎಚ್.ಎನ್. ಅನಂತಕುಮಾರ್ (59) ಅನಾರೋಗ್ಯದಿಂದ ಸೋಮವಾರ ಬೆಳಗ್ಗಿನ ಜಾವ ನಿಧನರಾದರು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅನಂತಕುಮಾರ್ ಅವರನ್ನು ಕಳೆದ ಎರಡು ದಿನಗಳಿಂದ ವೆಂಟಿಲೇಟರ್‍ನಲ್ಲಿ ಇಡಲಾಗಿತ್ತು. ಸೋಮವಾರ ಬೆಳಗ್ಗಿನ ಜಾವ ಎರಡು ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಅನಂತಕುಮಾರ್ ನಿಧನದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಪ್ರಧಾನಿ ಮೋದಿಯವರು ಬೆಂಗಳೂರಿಗೆ ಆಗಮಿಸಿ ಮೃತರ ಅಂತಿಮ ದರ್ಶನ ಪಡೆಯಲಿದ್ದಾರೆ.

ಬಿಜೆಪಿಯ ಹಿರಿಯ ಮುಖಂಡ, ಕೇಂದ್ರ ಸಚಿವ ಅನಂತ ಕುಮಾರ್ ವಿಧಿವಶ Read More »

ರಾಷ್ಟ್ರೀಯ ನ್ಯೂಸ್

ಉಜಿರೆ: ಮುಖಕ್ಕೆ ಟೇಪ್ ಸುತ್ತಿದ ಸ್ಥಿತಿಯಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ.11. ಕುತ್ತಿಗೆಗೆ ಹಗ್ಗ ಬಿಗಿದು ಕೊಲೆಗೈದ ಸ್ಥಿತಿಯಲ್ಲಿ ಯುವಕನೋರ್ವನ ಮೃತದೇಹವು ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಭಾನುವಾರದಂದು ಕಂಡುಬಂದಿದೆ. ಅಂದಾಜು 30 ವರ್ಷ ವಯಸ್ಸಿನ ಯುವಕನ ಮುಖಕ್ಕೆ ಟೇಪ್ ಹಾಕಿ, ಕಾಲು ಕಟ್ಟಿದ್ದಲ್ಲದೆ ಕುತ್ತಿಗೆಗೆ ಹಗ್ಗ ಬಿಗಿದು ಕೊಲೆ ಮಾಡಿದ ಸ್ಥಿತಿಯಲ್ಲಿ ಉಜಿರೆಯ ಗುರಿಪಳ್ಳ ಕ್ರಾಸ್ ನ ಅಳಕೆ ರಸ್ತೆಯ ಸಮೀಪ ಮೃತದೇಹ ಪತ್ತೆಯಾಗಿದ್ದು, ಬೇರೆ ಕಡೆ ಕೊಲೆ‌ ಮಾಡಿ ಇಲ್ಲಿ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಠಾಣಾ ಪೊಲೀಸರು

ಉಜಿರೆ: ಮುಖಕ್ಕೆ ಟೇಪ್ ಸುತ್ತಿದ ಸ್ಥಿತಿಯಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆ Read More »

ಕರಾವಳಿ

ನಿರ್ಗತಿಕ ವ್ಯಕ್ತಿಯ ಚಿತೆಗೆ ಅಗ್ನಿ ಸ್ಪರ್ಶ ಮಾಡಿದ ಉಪ್ಪಿನಂಗಡಿ ಠಾಣಾ ಸಬ್ ಇನ್ಸ್‌ಪೆಕ್ಟರ್ ► ಅನಾಥನ ಬಂಧುವಾಗಿ ಅಂತ್ಯ ಸಂಸ್ಕಾರಕ್ಕೆ ನೇತೃತ್ವ ನೀಡಿದ ನಂದಕುಮಾರ್

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ.10. ನಿರ್ಗತಿಕನಾಗಿ ಜೀವನ ಸಾಗಿಸುತ್ತಿದ್ದ ವ್ಯಕ್ತಿಯೋರ್ವರು ಮೃತಪಟ್ಟಿದ್ದು, ಅಂತ್ಯಸಂಸ್ಕಾರ ನಡೆಸಲು ಬಂಧು ಮಿತ್ರರು ಯಾರೂ ಇಲ್ಲದಿರುವುದನ್ನು ಮನಗಂಡ ಸಬ್ ಇನ್ಸ್‌ಪೆಕ್ಟರ್ ಓರ್ವರು ಸಾಮಾಜಿಕ ಕಾರ್ಯಕರ್ತರ ಸಹಕಾರದೊಂದಿಗೆ ಮೃತನ‌ ಅಂತ್ಯಸಂಸ್ಕಾರ ನಡೆಸಿದ ಮಾನವೀಯ ಕಾರ್ಯ ಉಪ್ಪಿನಂಗಡಿಯಲ್ಲಿ ನಡೆದಿದೆ. ಉಪ್ಪಿನಂಗಡಿಯಲ್ಲಿ ನಿರ್ಗತಿಕನಾಗಿ ಜೀವನ ಸಾಗಿಸುತ್ತಿದ್ದ ಪ್ರಸನ್ನ ಎಂಬವರು ಮೃತಪಟ್ಟಿದ್ದು, ಉಪ್ಪಿನಂಗಡಿ ಪೊಲೀಸ್ ಠಾಣಾ ಸಬ್ ಇನ್ಸ್‌ಪೆಕ್ಟರ್ ನಂದಕುಮಾರ್ ಚಿತೆಗೆ ಮೊದಲ ಕಟ್ಟಿಗೆಯನ್ನು ತಾನಿಟ್ಟು, ಅಗ್ನಿ ಸ್ಪರ್ಶ ಮಾಡುವ ಮೂಲಕ ಅನಾಥನ ಬಂಧುವಾಗಿ ಕಾರ್ಯ ನಿರ್ವಹಿಸಿದ್ದಾರೆ.

ನಿರ್ಗತಿಕ ವ್ಯಕ್ತಿಯ ಚಿತೆಗೆ ಅಗ್ನಿ ಸ್ಪರ್ಶ ಮಾಡಿದ ಉಪ್ಪಿನಂಗಡಿ ಠಾಣಾ ಸಬ್ ಇನ್ಸ್‌ಪೆಕ್ಟರ್ ► ಅನಾಥನ ಬಂಧುವಾಗಿ ಅಂತ್ಯ ಸಂಸ್ಕಾರಕ್ಕೆ ನೇತೃತ್ವ ನೀಡಿದ ನಂದಕುಮಾರ್ Read More »

ಕರ್ನಾಟಕ

ಟಿಪ್ಪು ಜಯಂತಿ ಆಚರಣೆಯ ಹಿನ್ನೆಲೆ ► ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಳೆಯವರೆಗೆ 144 ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ನ.10. ಹಜರತ್ ಟಿಪ್ಪು ಸುಲ್ತಾನ್ ಜಯಂತಿಯನ್ನು ಸರ್ಕಾರದ ಕಾರ್ಯಕ್ರಮವಾಗಿ ಆಚರಿಸಲಾಗುತ್ತಿದ್ದು, ಕಾರ್ಯಕ್ರಮ ಸುಸೂತ್ರವಾಗಿ ನಡೆಯಲು ಹಾಗೂ ಕಾನೂನು ಸುವ್ಯವಸ್ಥೆಗೆ ಭಂಗ ಬಾರದ ರೀತಿಯಲ್ಲಿ ಜಿಲ್ಲೆಯಾದ್ಯಂತ ಅಕ್ಟೋಬರ್ 09 ಸಂಜೆ 6 ಗಂಟೆಯಿಂದ ದಿನಾಂಕ ಅಕ್ಟೋಬರ್ 11 ಮಧ್ಯರಾತ್ರಿ 12 ಗಂಟೆಯವರೆಗೆ ಯಾವುದೇ ಸಾರ್ವಜನಿಕ ರಾಜಕೀಯ ಮುಂತಾದ ಬಹಿರಂಗ ಸಭೆ ಸಮಾರಂಭ, ಜಾಥಾ ಮತ್ತು ಮೆರವಣಿಗೆಗಳನ್ನು ನಿರ್ಬಂಧಿಸಿ ದಂಡ ಪ್ರಕ್ರಿಯೆ ಸಂಹಿತೆ 144 ರನ್ವಯ ನಿಷೇಧಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ

ಟಿಪ್ಪು ಜಯಂತಿ ಆಚರಣೆಯ ಹಿನ್ನೆಲೆ ► ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಳೆಯವರೆಗೆ 144 ನಿಷೇಧಾಜ್ಞೆ ಜಾರಿ Read More »

ಕರಾವಳಿ

ಕುಂತೂರು: ಸರಣಿ ಅಪಘಾತ ► ಬೈಕ್ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ನ.09. ಮಾರುತಿ ರಿಟ್ಝ್ ಕಾರು, ಯಮಹಾ ಎಫ್ ಝಡ್ ಬೈಕ್ ಹಾಗೂ ದ್ವಿಚಕ್ರ ವಾಹನದ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕುಂತೂರು ಎಂಬಲ್ಲಿ ಶುಕ್ರವಾರದಂದು ನಡೆದಿದೆ. ಉಪ್ಪಿನಂಗಡಿಯಿಂದ ಕಡಬ ಕಡೆಗೆ ತೆರಳುತ್ತಿದ್ದ ರಿಟ್ಝ್ ಕಾರು ವಿರುದ್ಧ ದಿಕ್ಕಿನಿಂದ ಆಗಮಿಸುತ್ತಿದ್ದ ಎಫ್ ಝಡ್ ಬೈಕ್ ಮತ್ತು ಸ್ಕೂಟಿಯೊಂದರ‌ ನಡುವೆ ಕುಂತೂರು ಕೋಚಕಟ್ಟೆ ಮಧ್ಯದ ಸೇತುವೆಯ ಮೇಲೆ ಅಪಘಾತ ಉಂಟಾಗಿ

ಕುಂತೂರು: ಸರಣಿ ಅಪಘಾತ ► ಬೈಕ್ ಸವಾರನಿಗೆ ಗಾಯ Read More »

ಕರಾವಳಿ

ಮೈತ್ರಿ ಸರಕಾರ ಭದ್ರವಾಗಿದೆ – ಶೀಘ್ರದಲ್ಲೇ ಕಡಬ ತಾಲೂಕು ಉದ್ಘಾಟನೆಗೆ ಕ್ರಮ ► ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ

(ನ್ಯೂಸ್ ಕಡಬ) newskadaba.com ಕಡಬ, ನ.09. ರಾಜ್ಯದಲ್ಲಿ ನಡೆದ ಉಪ ಚುನಾವಣೆಗಳಲ್ಲಿ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಪಕ್ಷ ಜಯ ಗಳಿಸಿರುವುದರಿಂದ ಮೈತ್ರಿ ಸರಕಾರವನ್ನು ಜನ ಮೆಚ್ಚಿದ್ದಾರೆ ಎಂಬುದಕ್ಕೆ ಇದು ಉದಾಹರಣೆಯಾಗಿದೆ. ಕರ್ನಾಟಕದಲ್ಲಿ ಮೈತ್ರಿ ಸರಕಾರ ಭದ್ರವಾಗಿದ್ದು, ಬಿಜೆಪಿಯ ಕೌಂಟ್‌ಡೌನ್ ಶುರುವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಕರ್ನಾಟಕ ರಾಜ್ಯ ಸರಕಾರದ ಸಚೇತಕ ಐವನ್ ಡಿ ಸೋಜ ಹೇಳಿದರು. ಗುರುವಾರದಂದು ಕಡಬ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಮಾತನಾಡಿದ ಅವರು, ಬಿಜೆಪಿಯು ಕಾಂಗ್ರೆಸ್, ಜೆಡಿಎಸ್ ಮೈತ್ರಿಯನ್ನು ಅಪವಿತ್ರ ಎಂದು

ಮೈತ್ರಿ ಸರಕಾರ ಭದ್ರವಾಗಿದೆ – ಶೀಘ್ರದಲ್ಲೇ ಕಡಬ ತಾಲೂಕು ಉದ್ಘಾಟನೆಗೆ ಕ್ರಮ ► ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ Read More »

ಕರ್ನಾಟಕ

ಕಡಬ: ಕ್ಯಾಥೊಲಿಕ್ ಸಮಾಜದ 9ನೇ ಜಿಲ್ಲಾ ಯುವ ಸಮಿತಿ ಸಮ್ಮೇಳನದ ಸಮಾರೋಪ

(ನ್ಯೂಸ್ ಕಡಬ) newskadaba.com ಕಡಬ, ನ.08. ಭಾರತೀಯ ಕಥೋಲಿಕ್ ಯುವ ಸಂಚಾಲನ (ಐಸಿವೈಎಮ್)ದ ಮಂಗಳೂರು ಧರ್ಮಪ್ರಾಂತದ ಕೇಂದ್ರಿಯ ಸಮಿತಿಯ ನಿರ್ದೆಶನದಲ್ಲಿ ಪುತ್ತೂರು ವಲಯ ಮತ್ತು ಕಡಬ ಸೈಂಟ್ ಜೋಕಿಮ್ಸ್ ಚರ್ಚ್ ಘಟಕದ ಆಶ್ರಯದಲ್ಲಿ ನಡೆದ 9ನೇ ಜಿಲ್ಲಾ ವಸತಿ ಸಮಾವೇಶದ ಸಮಾರೋಪ ಸಮಾರಂಭವು ಗುರುವಾರದಂದು ನಡೆಯಿತು. ನ. 5 ನೇ ಸೋಮವಾರದಂದು ಆರಂಭಗೊಂಡ ಯುವ ವಸತಿ ಸಮಾವೇಶದಲ್ಲಿ ದ.ಕ. ಮತ್ತು ಕಾಸರಗೋಡ್ ಜಿಲ್ಲಾ ವ್ಯಾಪ್ತಿಯ ಸುಮಾರು 124 ಚರ್ಚ್ ಘಟಕಗಳಿಂದ ಸುಮಾರು 400 ಯುವಕ/ಯುವತಿಯರು ಆಗಮಿಸಿದ್ದರು. 4

ಕಡಬ: ಕ್ಯಾಥೊಲಿಕ್ ಸಮಾಜದ 9ನೇ ಜಿಲ್ಲಾ ಯುವ ಸಮಿತಿ ಸಮ್ಮೇಳನದ ಸಮಾರೋಪ Read More »

ಕರ್ನಾಟಕ

ಕೊಯಿಲ: ಪಶು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಸಾಮಾಗ್ರಿಗಳ ಕಳ್ಳತನ

(ನ್ಯೂಸ್ ಕಡಬ) newskadaba.com ಕಡಬ, ನ.08. ಕೊಯಿಲ ಸರಕಾರಿ ಪಶು ವೈದ್ಯಕೀಯ ಕಾಲೇಜು ಕಟ್ಟಡದ ನಿರ್ಮಾಣಕ್ಕೆಂದು ದಾಸ್ತಾನು ಇರಿಸಲಾಗಿದ್ದ ಸೆಂಟ್ರಿಂಗ್ ಸಾಮಗ್ರಿಗಳನ್ನು ಕಳವುಗೈದಿರುವ ಬಗ್ಗೆ ಕಡಬ ಠಾಣೆಗೆ ದೂರು ನೀಡಲಾಗಿದೆ. ಕೊಯಿಲ ಗ್ರಾಮದ ಕೊಯಿಲ ಪಶುಸಂಗೋಪನಾ (K.C. ಫಾರಂ.) ಇಲಾಖೆಯ ಜಮೀನಿನಲ್ಲಿ ಕರ್ನಾಟಕ ಸರಕಾರದ ಪಶು ವೈದ್ಯಕೀಯ ಕಾಲೇಜು ಕಟ್ಟಡವನ್ನು ಬೆಂಗಳೂರಿನ ಸ್ಟಾರ್ ಬಿಲ್ಡರ್ರ್ಸ್ ಸಂಸ್ಥೆಯು ಗುತ್ತಿಗೆಯ ಆಧಾರದಲ್ಲಿ 2 ವರ್ಷಗಳಿಂದ ಕಟ್ಟಡ ಕಾಮಗಾರಿ ಕೆಲಸವನ್ನು  ಮಾಡುತ್ತಿದ್ದು, ಕಟ್ಟಡ ಕಾಮಗಾರಿಗಾಗಿ ದಾಸ್ತಾನು  ಇರಿಸಿದ್ದ 500 ಕಬ್ಬಿಣದ ಜಾಕ್ ಪೈಪ್, 700 ಕಬ್ಬಿಣದ ಸೆಂಟ್ರಿಂಗ್ ಪ್ಲೇಟ್

ಕೊಯಿಲ: ಪಶು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಸಾಮಾಗ್ರಿಗಳ ಕಳ್ಳತನ Read More »

ಕರಾವಳಿ

ರಾಷ್ಟ್ರೀಯ ಮತದಾರರ ದಿನಾಚರಣೆ ಹಿನ್ನೆಲೆ ► ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ಪ್ರಬಂಧ, ಕ್ವಿಝ್ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ.08. ಪ್ರತಿ ವರ್ಷ ಜನವರಿ 25 ರಂದು ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ 9ನೇ ತರಗತಿಯ ಮೇಲ್ಪಟ್ಟ ಮಕ್ಕಳಿಗೆ ಜಿಲ್ಲಾ ಮಟ್ಟದಲ್ಲಿ ಸ್ಪರ್ಧಾತ್ಮಕ ಚಟುವಟಿಕೆಗಳು ನಡೆಯಲಿವೆ. 9 ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಎಸ್ಸೆ ರೈಟಿಂಗ್(ಪ್ರಬಂಧ), ಪದವಿ ಪೂರ್ವ ಕಾಲೇಜು/ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಎಸ್ಸೆ ರೈಟಿಂಗ್(ಪ್ರಬಂಧ), ಕಾಲೇಜು/ವಿಶ್ವವಿದ್ಯಾಲಯ/ತಾಂತ್ರಿಕ ಸಂರ್ಸತೆಯ ವಿದ್ಯಾರ್ಥಿಗಳಿಗೆ ಎಸ್ಸೆ ರೈಟಿಂಗ್(ಪ್ರಬಂಧ), ಆರ್ಟ್ಸ್ ಮತ್ತು ಡ್ರಾಯಿಂಗ್ ಶಾಲೆಯ ಮಕ್ಕಳಿಗೆ ಪೋಸ್ಟರ್ ರಚನೆ, ಆರ್ಟ್ಸ್ ಮತ್ತು ಡ್ರಾಯಿಂಗ್ ಶಾಲೆಯ

ರಾಷ್ಟ್ರೀಯ ಮತದಾರರ ದಿನಾಚರಣೆ ಹಿನ್ನೆಲೆ ► ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ಪ್ರಬಂಧ, ಕ್ವಿಝ್ ಸ್ಪರ್ಧೆ Read More »

ಕರಾವಳಿ
Scroll to Top