ನಟ ಸಲ್ಮಾನ್ ಖಾನ್ಗೆ ‘ಭಯೋತ್ಪಾದಕ’ ಎಂಬ ಹಣೆಪಟ್ಟಿ ಕಟ್ಟಿದ ಪಾಕ್

(ನ್ಯೂಸ್‌ ಕಡಬ) newskadaba.com,  ಅ..24:  ಬಲೂಚಿಸ್ತಾನ್ ಪರ ಮಾತನಾಡಿದ್ದಕ್ಕೆ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಪಾಕಿಸ್ತಾನವು ‘ಭಯೋತ್ಪಾದಕ’ ಎಂಬ ಹಣೆಪಟ್ಟಿ ಕಟ್ಟಿದೆ. ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಇತ್ತೀಚೆಗೆ ರಿಯಾದ್‌ನಲ್ಲಿ ನಡೆದ ಜಾಯ್ ಫೋರಮ್ 2025 ರಲ್ಲಿ ಭಾರತೀಯ ಸಿನಿಮಾದ ಜಾಗತಿಕ ವ್ಯಾಪ್ತಿಯ ಬಗ್ಗೆ ಮಾತನಾಡುವಾಗ, ಬಲೂಚಿಸ್ತಾನ್ ಮತ್ತು ಪಾಕಿಸ್ತಾನವನ್ನು ಪ್ರತ್ಯೇಕವಾಗಿ ಉಲ್ಲೇಖಿಸಿದ್ದರು. ಹೀಗಾಗಿ, ಪಾಕಿಸ್ತಾನ ಸರ್ಕಾರ ಅವರನ್ನು ‘ಭಯೋತ್ಪಾದಕ’ ಎಂದು ಘೋಷಣೆ ಮಾಡಿದೆ. ಸಲ್ಮಾನ್ ಅವರನ್ನು ಪಾಕಿಸ್ತಾನದ 1997 ರ ಭಯೋತ್ಪಾದನಾ ನಿಗ್ರಹ ಕಾಯ್ದೆಯ […]

ನಟ ಸಲ್ಮಾನ್ ಖಾನ್ಗೆ ‘ಭಯೋತ್ಪಾದಕ’ ಎಂಬ ಹಣೆಪಟ್ಟಿ ಕಟ್ಟಿದ ಪಾಕ್ Read More »

ಬ್ರೇಕಿಂಗ್ ನ್ಯೂಸ್

ವಿಮಾನ ನಿಲ್ದಾಣದಲ್ಲಿ 4.15 ಕೋಟಿ ರೂ. ಮೌಲ್ಯದ ಗಾಂಜಾ ವಶ – ಪ್ರಯಾಣಿಕನ ಬಂಧನ

(ನ್ಯೂಸ್ ಕಡಬ) newskadaba.com, ಅ..24: ಶಂಶಾಬಾದ್ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡಿಆರ್ಐ ಅಧಿಕಾರಿಗಳು ಭಾರಿ ಮೌಲ್ಯದ ಮಾದಕ ವಸ್ತುಗಳನ್ನು ಪತ್ತೆಹಚ್ಚಿದ್ದಾರೆ. ಬ್ಯಾಂಕಾಕ್ನಿಂದ ಹೈದರಾಬಾದ್ಗೆ ಆಗಮಿಸುತ್ತಿದ್ದ ಪ್ರಯಾಣಿಕನಿಂದ ಸುಮಾರು ರೂ. 4.15 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಮಾಹಿತಿಯ ಪ್ರಕಾರ, ಆ ಪ್ರಯಾಣಿಕನು ತನ್ನ ಸೂಟ್ಕೇಸ್ನ ತಳಭಾಗದಲ್ಲಿ ವಿಶೇಷ ರೀತಿಯಲ್ಲಿ ಗಾಂಜಾವನ್ನು ಅಡಗಿಸಿ ತರಲು ಪ್ರಯತ್ನಿಸಿದ್ದಾನೆ. ವಿಮಾನ ನಿಲ್ದಾಣದಲ್ಲಿ ಅನುಮಾನಾಸ್ಪದ ಚಲನವಲನ ಗಮನಿಸಿದ ಅಧಿಕಾರಿಗಳು ಸೂಟ್ಕೇಸ್ ಪರಿಶೀಲಿಸಿದ ವೇಳೆ, ಪ್ಲಾಸ್ಟಿಕ್ ಪ್ಯಾಕೆಟ್ಗಳಲ್ಲಿ ಸೀಲ್ ಮಾಡಲಾಗಿದ್ದ

ವಿಮಾನ ನಿಲ್ದಾಣದಲ್ಲಿ 4.15 ಕೋಟಿ ರೂ. ಮೌಲ್ಯದ ಗಾಂಜಾ ವಶ – ಪ್ರಯಾಣಿಕನ ಬಂಧನ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಚಾರ್ಮಾಡಿ ಘಾಟಿನಲ್ಲಿ ಅಡ್ಡಲಾಗಿ ನಿಂತ ಟ್ಯಾಂಕರ್, ಸಂಚಾರಕ್ಕೆ ಅಡಚಣೆ

(ನ್ಯೂಸ್‌ ಕಡಬ) newskadaba.com,  ಅ..24:  ಮೂಡಿಗೆರೆ ತಾಲ್ಲೂಕಿನ ಚಾರ್ಮಾಡಿ ಘಾಟಿಯಲ್ಲಿ ಹತ್ತು ಚಕ್ರದ ಟ್ಯಾಂಕರ್‌ ರಸ್ತೆ ಮಧ್ಯೆ ಅಡ್ಡಲಾಗಿ ನಿಂತ ಪರಿಣಾಮ ಕೆಲ ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್‌ ವಾಹನ ಚಾರ್ಮಾಡಿ ತಿರುವಿನಲ್ಲಿ ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡಲಾಗಿ ನಿಂತಿತ್ತು. ಇದರಿಂದ ಎರಡು ಗಂಟೆಗೂ ಹೆಚ್ಚು ಕಾಲ ಘಾಟಿಯಲ್ಲಿ ಸಂಚಾರ ಸಂಪೂರ್ಣ ಸ್ಥಗಿತವಾಗಿತ್ತು.

ಚಾರ್ಮಾಡಿ ಘಾಟಿನಲ್ಲಿ ಅಡ್ಡಲಾಗಿ ನಿಂತ ಟ್ಯಾಂಕರ್, ಸಂಚಾರಕ್ಕೆ ಅಡಚಣೆ Read More »

ಕರ್ನಾಟಕ

ನಾಳೆಯಿಂದ ಮೊಂತಾ ಚಂಡ ಮಾರುತ ಆರ್ಭಟ ಸಾಧ್ಯತೆ

(ನ್ಯೂಸ್‌ ಕಡಬ) newskadaba.com,  ಅ..24:  ನಾಳೆ ಬೆಳಿಗ್ಗೆ ವೇಳೆಗೆ ಮೊಂತಾ ಚಂಡಮಾರುತ ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.ನೈಋತ್ಯ ಮತ್ತು ಪಕ್ಕದ ಆಗ್ನೇಯ ಬಂಗಾಳ ಕೊಲ್ಲಿಯ ಮೇಲಿನ ಹವಾಮಾನ ವ್ಯವಸ್ಥೆಯು ಕಳೆದ ಆರು ಗಂಟೆಗಳಲ್ಲಿ ಗಂಟೆಗೆ 15 ಕಿಮೀ ವೇಗದಲ್ಲಿ ವಾಯುವ್ಯ ದಿಕ್ಕಿಗೆ ಚಲಿಸಿತು ಮತ್ತು ಇಂದು ಬೆಳಿಗ್ಗೆ 5.30 ಕ್ಕೆ ಪಶ್ಚಿಮ ಮಧ್ಯ ಮತ್ತು ಆಗ್ನೇಯ ಬಂಗಾಳ ಕೊಲ್ಲಿಯ ನೈಋತ್ಯ ಮತ್ತು ಪಕ್ಕದ ಪ್ರದೇಶಗಳ ಮೇಲೆ ಕೇಂದ್ರೀಕೃತವಾಗಿತ್ತು. ಇದು ಮುಂದಿನ 12

ನಾಳೆಯಿಂದ ಮೊಂತಾ ಚಂಡ ಮಾರುತ ಆರ್ಭಟ ಸಾಧ್ಯತೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಇಂದು ಕರಾವಳಿಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ

(ನ್ಯೂಸ್‌ ಕಡಬ) newskadaba.com,  ಅ..24:  ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನು ಬಿಟ್ಟು ಉಳಿದೆಡೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಈ ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಇದೆ . ಅಕ್ಟೋಬರ್‌ 27ರಂದು ಕರಾವಳಿ ಮತ್ತು ಉತ್ತರ ಒಳನಾಡಿನ ಹಲವೆಡೆ ಭಾರಿ ಮಳೆ/ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆ ಇದ್ದು, ಈ ಭಾಗದ ಜನರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ

ಇಂದು ಕರಾವಳಿಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ Read More »

ಕರ್ನಾಟಕ

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಆಯ್ಕೆಯಾದ ನ್ಯಾ. ಸೂರ್ಯಕಾಂತ್

(ನ್ಯೂಸ್‌ ಕಡಬ) newskadaba.com,  ಅ..24:  ನ್ಯಾಯಮೂರ್ತಿ ಸೂರ್ಯಕಾಂತ್  ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ, ಸಿಜೆಐ ಬಿಆರ್ ಗವಾಯಿ, ಸೂರ್ಯಕಾಂತ್ ಅವರ ಹೆಸರನ್ನು ಕೇಂದ್ರದ ಅನುಮೋದನೆಗಾಗಿ ಔಪಚಾರಿಕವಾಗಿ ಕಳುಹಿಸಿದ್ದಾರೆ. ಪ್ರಸ್ತುತ ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿರುವ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಸಿಜೆಐ ಗವಾಯಿ ಅವರ ನಿವೃತ್ತಿಯ ನಂತರ ಉನ್ನತ ನ್ಯಾಯಾಂಗ ಹುದ್ದೆಯನ್ನು ವಹಿಸಿಕೊಳ್ಳಲಿದ್ದಾರೆ. ಗವಾಯಿ ಅವರು ನವೆಂಬರ್ 23 ರಂದು ನಿವೃತ್ತರಾಗಲಿರುವ ಕಾರಣ, ಸರ್ಕಾರವು ಅಕ್ಟೋಬರ್ 23 ರಂದು ಭಾರತದ ಮುಂದಿನ ಮುಖ್ಯ

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಆಯ್ಕೆಯಾದ ನ್ಯಾ. ಸೂರ್ಯಕಾಂತ್ Read More »

ಕರ್ನಾಟಕ

ಇಳಿಕೆ ಕಂಡ ಚಿನ್ನದ ದರ

(ನ್ಯೂಸ್‌ ಕಡಬ) newskadaba.com,  ಅ..24:  ಚಿನ್ನದ ಬೆಲೆ ಮತ್ತು ಬೆಳ್ಳಿ ದರ ಚಿನ್ನ ಖರೀದಿಗೂ ಮುನ್ನ ಬೆಲೆ ಎಷ್ಟಿದೆ ಎಂದು ತಿಳಿದುಕೊಳ್ಳಿ. 18, 22 ಮತ್ತು 24 ಕ್ಯಾರಟ್ ಚಿನ್ನದ ಬೆಲೆಯಲ್ಲಿ ವ್ಯತ್ಯಾಸವಿರುತ್ತದೆ. ದೇಶದಲ್ಲಿಂದು 22 ಕ್ಯಾರೆಟ್ ಚಿನ್ನದ ಬೆಲೆ 1 ಗ್ರಾಂ: 11,410 ರೂಪಾಯಿ 8 ಗ್ರಾಂ: 91,280 ರೂಪಾಯಿ 10 ಗ್ರಾಂ: 1,14,100 ರೂಪಾಯಿ 100 ಗ್ರಾಂ: 11,41,000 ರೂಪಾಯಿ

ಇಳಿಕೆ ಕಂಡ ಚಿನ್ನದ ದರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪ್ರೊ ಕಬಡ್ಡಿ: ಮಿನಿ ಕ್ವಾಲಿಫೈರ್ನಲ್ಲಿ ಬೆಂಗ್ಳೂರಿಗೆ ರೋಚಕ ಸೋಲು, ಬುಲ್ಸ್ಗಿಂದು ಮಾಡು ಇಲ್ಲವೇ ಮಡಿ ಪಂದ್ಯ!

(ನ್ಯೂಸ್‌ ಕಡಬ) newskadaba.com,  ಅ..24:  ಅಂತಿಮ ಕ್ಷಣದ ಒತ್ತಡವನ್ನು ನಿಭಾಯಿಸುವಲ್ಲಿ ವಿಫಲಗೊಂಡ ಬೆಂಗಳೂರು ಬುಲ್ಸ್‌ ತಂಡ ಪ್ರೊ ಕಬಡ್ಡಿ ಲೀಗ್‌ 12ನೇ ಆವೃತ್ತಿಯ ತನ್ನ ಮಿನಿ ಕ್ವಾಲಿಫೈಯರ್‌ ಪಂದ್ಯದಲ್ಲಿ ತೆಲುಗು ಟೈಟನ್ಸ್‌ ವಿರುದ್ಧ 5 ಅಂಕಗಳ ವೀರೋಚಿತ ಸೋಲನುಭವಿಸಿತು. ತ್ಯಾಗರಾಜ ಒಳಾಂಗಣ ಕ್ರೀಡಾಂಗಣದಲ್ಲಿಭಾನುವಾರ ನಡೆದ ದ್ವಿತೀಯ ಪಂದ್ಯದಲ್ಲಿ ಬುಲ್ಸ್‌ ತಂಡ 32-37 ಅಂಕಗಳಿಂದ ಟೈಟನ್ಸ್‌ ಎದುರು ಪರಾಭವಗೊಂಡಿತು. ಹೀಗಾಗಿ ನೇರವಾಗಿ ಎಲಿಮಿನೇಟರ್‌ 3ಕ್ಕೆ ಅರ್ಹತೆ ಗಳಿಸುವ ಅವಕಾಶವನ್ನು ಬುಲ್ಸ್‌ ತಂಡ ಕೈಚೆಲ್ಲಿತು. ಈ ಸೋಲಿನಿಂದಾಗಿ ಬುಲ್ಸ್‌ ತಂಡವು

ಪ್ರೊ ಕಬಡ್ಡಿ: ಮಿನಿ ಕ್ವಾಲಿಫೈರ್ನಲ್ಲಿ ಬೆಂಗ್ಳೂರಿಗೆ ರೋಚಕ ಸೋಲು, ಬುಲ್ಸ್ಗಿಂದು ಮಾಡು ಇಲ್ಲವೇ ಮಡಿ ಪಂದ್ಯ! Read More »

ಕ್ರೀಡಾ ನ್ಯೂಸ್

ದೆಹಲಿಗೆ ದೌಡಾಯಿಸಿದ ಡಿಸಿಎಂ ಡಿಕೆಶಿ

(ನ್ಯೂಸ್‌ ಕಡಬ) newskadaba.com,  ಅ..24:  ಕರ್ನಾಟಕ ಕಾಂಗ್ರೆಸ್‌ನಲ್ಲಿ ನವೆಂಬರ್ ಕ್ರಾಂತಿ ಚರ್ಚೆ ಜೋರಾಗುತ್ತಿರುವ ಸಮಯದಲ್ಲೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಭಾನುವಾರ ದೆಹಲಿಗೆ ತೆರಳಿದ್ದಾರೆ. ಹೈಕಮಾಂಡ್ ನಾಯಕರನ್ನು ಅವರು ಅಲ್ಲಿ ಭೇಟಿಯಾಗಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಡಿಕೆ ಶಿವಕುಮಾರ್ ಅವರು ನವೆಂಬರ್ 11ರಂದು ಮತ್ತೆ ದೆಹಲಿಗೆ ತೆರಳಲಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಪ್ರತ್ಯೇಕ ಮಾತುಕತೆಗೆ ಸಮಯ ಕೇಳಿದ್ದಾರೆ ಎಂಬ ಮಾಹಿತಿ ಹೊರಬಂದಿದೆ. ಆ ಭೇಟಿಯ ವೇಳೆ ಅಧಿಕಾರ ಹಂಚಿಕೆ, ರಾಜ್ಯದ ರಾಜಕೀಯ ಭವಿಷ್ಯ ಮತ್ತು

ದೆಹಲಿಗೆ ದೌಡಾಯಿಸಿದ ಡಿಸಿಎಂ ಡಿಕೆಶಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವರ್ಕ್ ಫ್ರಂ ಹೋಮ್ ಹೆಸರಿನಲ್ಲಿ 8,000 ಕ್ಕೂ ಹೆಚ್ಚು ಮಹಿಳೆಯರಿಗೆ ಕೋಟ್ಯಾಂತರ ರೂ. ವಂಚನೆ

(ನ್ಯೂಸ್‌ ಕಡಬ) newskadaba.com,  ಅ..24: ಮಹಿಳೆಯರಿಗೆ ವರ್ಕ್​ ಫ್ರಂ ಹೋಮ್ ಕೆಲಸ ನೀಡುವ ಹೆಸರಿನಲ್ಲಿ ಮಹಾರಾಷ್ಟ್ರದ ವ್ಯಕ್ತಿಯೊಬ್ಬರು ಬೆಳಗಾವಿಯಲ್ಲಿ ಸಾವಿರಾರು ಮಹಿಳೆಯರನ್ನು ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಸುಮಾರು 8000 ಮಹಿಳೆಯರಿಂದ 12 ಕೋಟಿ ರೂ. ಹಣ ಪಡೆದ ವಂಚಕ ಸದ್ದಿಲ್ಲದೆ ಪರಾರಿಯಾಗಿದ್ದಾನೆ. ಈ ಕುರಿತು ವಂಚಿತ ಮಹಿಳೆಯರು ಪೊಲೀಸರಿಗೆ ದೂರು ನೀಡಿದ್ದು, ಆರೋಪಿಯನ್ನು ಬಂಧಿಸಿ ತಮ್ಮ ಹಣವನ್ನು ಹಿಂತಿರುಗಿಸಲು ಒತ್ತಾಯಿಸಿದ್ದಾರೆ. ಆಘಾತಕಾರಿ ಸಂಗತಿಯೆಂದರೆ, ಕೆಲವು ಪ್ರಭಾವಿ ಮಹಿಳೆಯರು ಸಹ ಈ ವಂಚನೆಯ ಯೋಜನೆಯಲ್ಲಿ ಲಕ್ಷಗಟ್ಟಲೆ ಹೂಡಿಕೆ

ವರ್ಕ್ ಫ್ರಂ ಹೋಮ್ ಹೆಸರಿನಲ್ಲಿ 8,000 ಕ್ಕೂ ಹೆಚ್ಚು ಮಹಿಳೆಯರಿಗೆ ಕೋಟ್ಯಾಂತರ ರೂ. ವಂಚನೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top