ಕಬಕ: ನಾಡ ಬಾಂಬ್ ಸ್ಫೋಟಿಸಿ ಮನೆ ಧ್ವಂಸಕ್ಕೆ ಯತ್ನ ► ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.27. ಠಾಣಾ ವ್ಯಾಪ್ತಿಯ ಪೋಳ್ಯ ಎಂಬಲ್ಲಿ ತಡ ರಾತ್ರಿ ಮನೆ ಮಂದಿ ಮಲಗಿದ್ದ ವೇಳೆ ಕಚ್ಚಾ ಬಾಂಬ್ ಸ್ಫೋಟಿಸಿ ಮನೆಯನ್ನು ಧ್ವಂಸಗೈಯಲು ಸಂಚು ರೂಪಿಸಿದ್ದ ಆರೋಪಿಯನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಕೇರಳ ರಾಜ್ಯದ ಎರ್ನಾಕುಲಂ ನಿವಾಸಿ ಬಾಬು ಯಾನೆ ಬಾಲನ್ ಎಂದು ಗುರುತಿಸಲಾಗಿದೆ. ಆರೋಪಿಯು ಅಕ್ಟೋಬರ್ 15 ರಂದು ತಡ ರಾತ್ರಿ ಪೋಳ್ಯ ನಿವಾಸಿ ನಾರಾಯಣ ಪ್ರಸಾದ್ ಎಂಬವರ ಮನೆಯನ್ನು ಧ್ವಂಸಗೈಯುವ ಉದ್ದೇಶದಿಂದ ಮೂರು […]

ಕಬಕ: ನಾಡ ಬಾಂಬ್ ಸ್ಫೋಟಿಸಿ ಮನೆ ಧ್ವಂಸಕ್ಕೆ ಯತ್ನ ► ಆರೋಪಿಯ ಬಂಧನ Read More »

ಕರಾವಳಿ

ಕಡಬ: ಅಸಂತಡ್ಕ ಕಾಲೋನಿಗೆ ನೀರಿನ ವ್ಯವಸ್ಥೆ, ರಸ್ತೆ ಕಾಂಕ್ರಿಟೀಕರಣಗೊಳಿಸುವಂತೆ ಶಾಸಕರಿಗೆ ಮನವಿ

(ನ್ಯೂಸ್ ಕಡಬ) newskadaba.com ಕಡಬ, ಅ.27. ಕೋಡಿಂಬಾಳ ಗ್ರಾಮದ ಅಸಂತಡ್ಕ ಪರಿಶಿಷ್ಟ ಕಾಲೋನಿಗೆ ಗಂಗಾ ಕಲ್ಯಾಣ ಯೋಜನೆಯಡಿ ನೀರಿನ ವ್ಯವಸ್ಥೆ ಹಾಗೂ ಅಸಂತಡ್ಕ ಕಾಲೋನಿ ರಸ್ತೆಯನ್ನು ಕಾಂಕ್ರಿಟೀಕರಣಗೊಳಿಸುವಂತೆ ಅಲ್ಲಿನ ನಿವಾಸಿಗಳು ಕಡಬ ಗ್ರಾ.ಪಂ.ಸದಸ್ಯೆ ನೇತ್ರಾ ರವರ ನೇತೃತ್ವದಲ್ಲಿ ಅ.25 ರಂದು ಶಾಸಕರ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಎಸ್.ಅಂಗಾರರಿಗೆ ಮನವಿ ಸಲ್ಲಿಸಿದರು. ಕಡಬದಲ್ಲಿ ನಡೆದ ಶಾಸಕ ಎಸ್.ಅಂಗಾರರ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಅಸಂತಡ್ಕ ಪರಿಶಿಷ್ಟ ಕಾಲೋನಿಯನ್ನು ಹಾಗೂ ಅಲ್ಲಿನ ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಹಾಗೂ ಶ್ರೀ ನಾಗಕನ್ನಿಕೆ, ರಕ್ತೇಶ್ವರಿ ಸನ್ನಿಧಿಯನ್ನು

ಕಡಬ: ಅಸಂತಡ್ಕ ಕಾಲೋನಿಗೆ ನೀರಿನ ವ್ಯವಸ್ಥೆ, ರಸ್ತೆ ಕಾಂಕ್ರಿಟೀಕರಣಗೊಳಿಸುವಂತೆ ಶಾಸಕರಿಗೆ ಮನವಿ Read More »

ಕರಾವಳಿ

ಫೈನಾನ್ಸಿಯಲ್ ಬಿಡ್ ತೆರೆಯಲು ಲಂಚ ಸ್ವೀಕಾರ ► ಇಬ್ಬರು ಅಧಿಕಾರಿಗಳು ಎಸಿಬಿ ಬಲೆಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.27. ಶೌಚಾಲಯ ನಿರ್ಮಾಣ ಕಾಮಗಾರಿಯ ಫೈನಾನ್ಸಿಯಲ್ ಬಿಡ್ ತೆರೆಯಲು ಟೆಂಡರ್ ಮೊತ್ತದಲ್ಲಿ 25 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿಗಳು ಎಸಿಬಿ ಬಲೆಗೆ ಬಿದ್ದ ಘಟನೆ ಮಂಗಳೂರಿನ ಸೂಪರಿಂಟೆಂಡಿಂಗ್ ಇಂಜಿನಿಯರಿಂಗ್ ಕಚೇರಿಯಲ್ಲಿ ಶುಕ್ರವಾರದಂದು ನಡೆದಿದೆ. ಬಂಧಿತ ಅಧಿಕಾರಿಗಳನ್ನು ಸಹಾಯಕ ಇಂಜಿನಿಯರ್ ಸೂರ್ಯ ನಾರಾಯಣ್ ಭಟ್ ಮತ್ತು ಅಸಿಸ್ಟೆಂಟ್ ಇಂಜಿನಿಯರ್ ಸುಧೀನ್ ಎಂದು ಗುರುತಿಸಲಾಗಿದೆ. ಆರೋಪಿಗಳು ಚಿಕ್ಕಮಗಳೂರಿನ ಕಳಸ ಎಂಬಲ್ಲಿ ಕಟ್ಟಡ ಕಾಮಗಾರಿಯ ಟೆಂಡರ್‌ಗೆ (52.58 ಲಕ್ಷ) ಫೈನಾನ್ಸಿಯಲ್ ಬಿಡ್ ತೆರೆಯಲು ಮೂಡಿಗೆರೆ

ಫೈನಾನ್ಸಿಯಲ್ ಬಿಡ್ ತೆರೆಯಲು ಲಂಚ ಸ್ವೀಕಾರ ► ಇಬ್ಬರು ಅಧಿಕಾರಿಗಳು ಎಸಿಬಿ ಬಲೆಗೆ Read More »

ಕರ್ನಾಟಕ

ಉಡುಪಿ: ಬೆಳ್ಳಂಬೆಳಗ್ಗೆ ಭೀಕರ ಅಪಘಾತ ► ಆಂಬ್ಯುಲೆನ್ಸ್ – ಲಾರಿ ಢಿಕ್ಕಿ: ಮೂವರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಉಡುಪಿ, ಅ.27. ಲಾರಿ ಮತ್ತು ಆಂಬ್ಯುಲೆನ್ಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಮೂವರು ಮೃತಪಟ್ಟು, ಮಹಿಳೆಯೋರ್ವರು ಗಂಭೀರ ಗಾಯಗೊಂಡಿರುವ ಘಟನೆ ಶನಿವಾರ ಬೆಳಗ್ಗಿನ ಜಾವ ಉಡುಪಿ ಜಿಲ್ಲೆಯ ಕೋಟದಲ್ಲಿ ಸಂಭವಿಸಿದೆ. ಉತ್ತರ ಕನ್ನಡ ಜಿಲ್ಲೆಯಿಂದ ರೋಗಿಯೋರ್ವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಉಡುಪಿ ಜಿಲ್ಲೆಯ ಕೋಟ ಸಮೀಪದ ಮಣೂರು ಎಂಬಲ್ಲಿ ಲಾರಿ ನಡುವೆ ಢಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಆಂಬ್ಯಲೆನ್ಸ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೃತರೆಲ್ಲರೂ ಉತ್ತರಕನ್ನಡ

ಉಡುಪಿ: ಬೆಳ್ಳಂಬೆಳಗ್ಗೆ ಭೀಕರ ಅಪಘಾತ ► ಆಂಬ್ಯುಲೆನ್ಸ್ – ಲಾರಿ ಢಿಕ್ಕಿ: ಮೂವರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ

ಧರ್ಮಸ್ಥಳ ಕಾಡಿನಿಂದ ಬೆಲೆಬಾಳುವ ಮರಗಳ ಕದ್ದು ಸಾಗಾಟ ► ಓಮ್ನಿ ಸಹಿತ ಓರ್ವನ ಬಂಧನ, ಮೂವರು ಪರಾರಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ.27. ಧರ್ಮಸ್ಥಳ ಸಮೀಪದ ಪುದುವೆಟ್ಟು ಕಾಡಿನಿಂದ ಬೀಟಿ, ಸಾಗುವಾನಿ ಸೇರಿದಂತೆ ಬೆಲೆಬಾಳುವ ಮರಗಳನ್ನು ಕಡಿದು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿರುವ ಅರಣ್ಯ ಇಲಾಖೆಯ ಅಧಿಕಾರಿಗಳು ಮಾರುತಿ ಓಮ್ನಿಯಲ್ಲಿ ತುಂಬಿಸಿಟ್ಟಿದ್ದ ಮರದ ದಿಮ್ಮಿಗಳನ್ನು ವಶಪಡಿಸಿಕೊಂಡು ಓರ್ವನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮಂಗಳೂರು ತಾಲೂಕಿನ ಕೋಟೆಕಾರು ಅಜ್ಜಿನಡ್ಕ ನಿವಾಸಿ ಮಹಮ್ಮದ್ ಎಂಬವರ ಪುತ್ರ ಅಬ್ಬಾಸ್ ಎಂದು ಗುರುತಿಸಲಾಗಿದೆ. ನೆಲ್ಯಾಡಿಯ ಹೊಸಮಜಲು ನಿವಾಸಿಗಳಾದ ಅಬ್ದುಲ್ಲಾ ಎಂಬವರ ಪುತ್ರ ಮಹಮ್ಮದ್ ಬಾವಾ, ಅಬ್ದುಲ್ಲಾ ಎಂಬವರ

ಧರ್ಮಸ್ಥಳ ಕಾಡಿನಿಂದ ಬೆಲೆಬಾಳುವ ಮರಗಳ ಕದ್ದು ಸಾಗಾಟ ► ಓಮ್ನಿ ಸಹಿತ ಓರ್ವನ ಬಂಧನ, ಮೂವರು ಪರಾರಿ Read More »

ಕರಾವಳಿ

ಬೆಳ್ತಂಗಡಿ: ಮನೆ ಮಂದಿ ಮಲಗಿದ್ದ ವೇಳೆ ಪ್ರಜ್ಞೆ ತಪ್ಪಿಸಿದ ಕಳ್ಳರು ► ಲಕ್ಷಾಂತರ ರೂ. ಮೌಲ್ಯದ ನಗ,‌ ನಗದು ಕಳ್ಳರ ಪಾಲು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ.27. ಮನೆಮಂದಿ ರಾತ್ರಿ ಮಲಗಿದ್ದ ವೇಳೆ ಮುಖಕ್ಕೆ ಯಾವುದೋ ಅರಿವಳಿಕೆಯನ್ನು ಸಿಂಪಡಿಸಿ ಲಕ್ಷಾಂತರ ರೂ. ಮೌಲ್ಯದ ನಗ, ನಗದನ್ನು ದೋಚಿರುವ ಘಟನೆ ವೇಣೂರು ಠಾಣಾ ವ್ಯಾಪ್ತಿಯ ಹೊಸಂಗಡಿಯಲ್ಲಿ ನಡೆದಿದೆ. ಹೊಸಂಗಡಿ ಗ್ರಾಮದ ಮಸ್ಕಲ ನಿವಾಸಿ ಕರುಣಾಕರ ಕೋಟ್ಯಾನ್ ಹಾಗೂ ಲೀಲಾ ದಂಪತಿ ರಾತ್ರಿ ಊಟ ಮಾಡಿ ಮಲಗಿದ್ದು, ಬೆಳಗ್ಗೆ ಎದ್ದು ನೋಡುವಾಗ ಮನೆಯ ಹಿಂದಿನ ಬಾಗಿಲಿನ ಚಿಲಕವನ್ನು ಮುರಿದು ಕಳ್ಳತನ ನಡೆಸಿರುವುದು ಬೆಳಕಿಗೆ ಬಂದಿದೆ. ಕಪಾಟಿನಲ್ಲಿಟ್ಟಿದ್ದ ಚಿನ್ನದ ಸರ, ನೆಕ್ಲೆಸ್, ಬಳೆ,

ಬೆಳ್ತಂಗಡಿ: ಮನೆ ಮಂದಿ ಮಲಗಿದ್ದ ವೇಳೆ ಪ್ರಜ್ಞೆ ತಪ್ಪಿಸಿದ ಕಳ್ಳರು ► ಲಕ್ಷಾಂತರ ರೂ. ಮೌಲ್ಯದ ನಗ,‌ ನಗದು ಕಳ್ಳರ ಪಾಲು Read More »

ಕರಾವಳಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ► ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.27. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಾಯೋಜಿತ ಪ್ರಜ್ಞಾ ಸ್ವಾಧಾರ ಗೃಹ ಮಹಾಲಕ್ಷ್ಮಿ ಕಾಂಪ್ಲೆಕ್ಸ್, ಜಪ್ಪಿನಮೊಗರು, ಮಂಗಳೂರು ಇಲ್ಲಿ ತೆರವಾಗಿರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಾಸಿಕ ನಿಗದಿತ ಗೌರವಧನ ರೂ. 12,000/-ರ ಆಧಾರದಲ್ಲಿ ಅಧೀಕ್ಷಕರ ಹುದ್ದೆಗೆ, ರೂ. 10,000/-ರ ಆಧಾರದಲ್ಲಿ ಸಮಾಲೋಚಕರ ಹುದ್ದೆಗೆ ಎಂ.ಎಸ್.ಡಬ್ಲ್ಯೂ (ಮೆಡಿಕಲ್ ಸೈಕ್ಯಾಟ್ರಿಕ್), ರೂ. 8,000/- ರ ಆಧಾರದಲ್ಲಿ ಲೆಕ್ಕಿಗರು ಹುದ್ದೆಗೆ ವಾಣಿಜ್ಯ ವಿಭಾಗದಲ್ಲಿ ಪದವಿ ಮತ್ತು ಕಂಪ್ಯೂಟರ್ ಜ್ಞಾನ ಪಡೆದಿರುವಂತಹ ಹಾಗೂ ರೂ. 5,000/-

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ► ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಉದ್ಯೋಗ

ಮಿತ್ತಕೋಡಿ: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ ► ಮದುವೆಗೆಂದು ಶಾಪಿಂಗ್ ಮುಗಿಸಿ ಪತಿಯೊಂದಿಗೆ ಬರುತ್ತಿದ್ದ ಪತ್ನಿ ಮೃತ್ಯು, ಪತಿ ಗಂಭೀರ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.26. ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟು, ಆಕೆಯ ಪತಿ ಗಂಭೀರ ಗಾಯಗೊಂಡ ಘಟನೆ ಮುಡಿಪು ಸಮೀಪದ ಮಿತ್ತಕೋಡಿ ಎಂಬಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ. ಮೃತ ಮಹಿಳೆಯನ್ನು ಬಂಟ್ವಾಳ ತಾಲೂಕಿನ ಪಾನೇಲ ನಿವಾಸಿ ಇಸ್ಮಾಯಿಲ್ ಎಂಬವರ ಪತ್ನಿ ಝುಬೈದಾ(35) ಮೃತರು ಎಂದು ಗುರುತಿಸಲಾಗಿದೆ. ಮೃತರು ಮುಂದಿನ ಭಾನುವಾರದಂದು ತನ್ನ ಮನೆಯಲ್ಲಿ ಮದುವೆ ಕಾರ್ಯ ನಡೆಯಲಿದ್ದ ಕಾರಣ ಬಟ್ಟೆ ಬರೆಗಳನ್ನು ಖರೀದಿಸಿ ತನ್ನ ಪತಿಯ

ಮಿತ್ತಕೋಡಿ: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ ► ಮದುವೆಗೆಂದು ಶಾಪಿಂಗ್ ಮುಗಿಸಿ ಪತಿಯೊಂದಿಗೆ ಬರುತ್ತಿದ್ದ ಪತ್ನಿ ಮೃತ್ಯು, ಪತಿ ಗಂಭೀರ Read More »

ಕರಾವಳಿ

ತೀವ್ರ ಅನಾರೋಗ್ಯದ ಹಿನ್ನೆಲೆ ► ಜೈಲಿನಲ್ಲಿದ್ದ ಚೈತ್ರಾ ಕುಂದಾಪುರ ಆಸ್ಪತ್ರೆಗೆ..!!

(ನ್ಯೂಸ್ ಕಡಬ) newskadaba.com ಮಂಗಳೂರು, ಅ.26. ದಕ್ಷಿಣ ಭಾರತದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕುಕ್ಕೇ ಸುಬ್ರಹ್ಮಣ್ಯದಲ್ಲಿ ಎರಡು ದಿನಗಳ ಹಿಂದೆ ಜಗಳ ಮಾಡಿ ಜೈಲಿನಲ್ಲಿದ್ದ ಚೈತ್ರಾ ಕುಂದಾಪುರ ಅವರನ್ನು ತೀವ್ರ ಜ್ವರದ ಹಿನ್ನೆಲೆಯಲ್ಲಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಳ್ಯ ತಾಲೂಕು ಹಿಂದೂ ಜಾಗರಣ ವೇದಿಕೆಯ ಕಾರ್ಯದರ್ಶಿ ಗುರುಪ್ರಸಾದ್ ಪಂಜರವರ ಮೇಲೆ ಸರ್ಪ ಸಂಸ್ಕಾರದ ವಿಚಾರದಲ್ಲಿ ಚೈತ್ರಾ ಕುಂದಾಪುರ ಹಾಗೂ ಸಹಚರರು ಹಲ್ಲೆ ನಡೆಸಿದ್ದರು. ಗುರುಪ್ರಸಾದ್ ಪಂಜ ನೀಡಿದ ದೂರಿನಂತೆ ಸುಬ್ರಹ್ಮಣ್ಯ ಪೊಲೀಸರು ಚೈತ್ರ ಕುಂದಾಪುರ ಸೇರಿದಂತೆ

ತೀವ್ರ ಅನಾರೋಗ್ಯದ ಹಿನ್ನೆಲೆ ► ಜೈಲಿನಲ್ಲಿದ್ದ ಚೈತ್ರಾ ಕುಂದಾಪುರ ಆಸ್ಪತ್ರೆಗೆ..!! Read More »

ಕರಾವಳಿ

ಉಪ್ಪಿನಂಗಡಿ: ಐದು ವಾಹನಗಳ ನಡುವೆ ಸರಣಿ ಅಪಘಾತ ► ವಿದ್ಯಾರ್ಥಿಗಳು ಸೇರಿದಂತೆ ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ.26. ಕಾರು, ಆಟೋರಿಕ್ಷಾ, ಪಿಕಪ್ ಹಾಗೂ ಬಸ್ಸುಗಳೆರಡರ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ವಿದ್ಯಾರ್ಥಿಗಳು ಸೇರಿದಂತೆ ಹಲವರು‌ ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ ಇಳಂತಿಲ ಕ್ರಾಸ್ ಬಳಿ ಶುಕ್ರವಾರದಂದು ನಡೆದಿದೆ. ಬೆಳ್ತಂಗಡಿ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಏಕಮುಖವಾಗಿ ತೆರಳುತ್ತಿದ್ದ ಕಾರು, ಆಟೋರಿಕ್ಷಾ, ಪಿಕಪ್ ಹಾಗೂ ಬಸ್ಸುಗಳೆರಡರ ನಡುವೆ ಸರಣಿ ಅಪಘಾತ ಸಂಭವಿಸಿದೆ. ಪರಿಣಾಮ ವಾಹನಗಳಲ್ಲಿದ್ದ ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ

ಉಪ್ಪಿನಂಗಡಿ: ಐದು ವಾಹನಗಳ ನಡುವೆ ಸರಣಿ ಅಪಘಾತ ► ವಿದ್ಯಾರ್ಥಿಗಳು ಸೇರಿದಂತೆ ಹಲವರಿಗೆ ಗಾಯ Read More »

ಕರಾವಳಿ
Scroll to Top