ಮರ್ದಾಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೀಣೋದ್ದಾರದ ಬಗ್ಗೆ ಪೂರ್ವಭಾವಿ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಸೆ.27. ಮರ್ದಾಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೀಣೋದ್ದಾರ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆಯು ದೇವಳದ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಸಭೆಯಲ್ಲಿ ಮಾತನಾಡಿದ ಶ್ರೀ ಕ್ಷೇತ್ರ ದರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ನಿರ್ದೇಶಕ ಜಯರಾಮ ನೆಲ್ಲಿತಾಯ ಮಾತನಾಡಿ, ಶಿಕ್ಷಣ ಕೇಂದ್ರ, ದೇವಾಲಯದ ಅಭಿವೃದ್ದಿಯಾದಲ್ಲಿ ಆ ಊರಿನಲ್ಲಿ ಶಾಂತಿ ನೆಮ್ಮದಿ ಸುಖ ನೆಲೆಸುತ್ತದೆ. ದೇವಸ್ಥಾನದ ಜೀಣೋದ್ದಾರ ಪಾಲ್ಗೊಂಡಲ್ಲಿ ನಮ್ಮ ಪಾಪ ಕರ್ಮಗಳಿಗೆ ಮುಕ್ತಿ ದೊರೆಯುತ್ತದೆ. ಶ್ರೀ ಮಹಾಲಿಂಗೇಶ್ವರ ದೇವಳದ ಜೀರ್ಣೋದ್ದಾರ ಕಾರ್ಯದಲ್ಲಿ ಭಕ್ತ ಸಮೂಹ ಸ್ವ್ವಚ್ಚೆಯಿಂದ ಪಾಲ್ಗೊಂಡು […]

ಮರ್ದಾಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೀಣೋದ್ದಾರದ ಬಗ್ಗೆ ಪೂರ್ವಭಾವಿ ಸಭೆ Read More »

ಕರಾವಳಿ

ಸುಬ್ರಹ್ಮಣ್ಯ: ಬಸ್ ನಿಲ್ದಾಣದ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ

ಸಾಂದರ್ಭಿಕ ಚಿತ್ರ (ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ.27. ದಕ್ಷಿಣ ಭಾರತದ ಪ್ರಮುಖ ಧಾರ್ಮಿಕ ಕ್ಷೇತ್ರವಾದ ಕುಕ್ಕೇ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದ ಭಕ್ತಾದಿ ಮಹಿಳೆಯೋರ್ವರು ಇಲ್ಲಿನ ಸಾರ್ವಜನಿಕ ಬಸ್‌ ನಿಲ್ದಾಣದ ಶೌಚಾಲಯದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಬುಧವಾರದಂದು ನಡೆದಿದೆ. ಮೂಲತಃ ಚಿಕ್ಕಮಗಳೂರಿನವರಾದ ತುಂಬು ಗರ್ಭಿಣಿ ಆಶಾ ಎಂಬಾಕೆ ಕುಕ್ಕೇ ಸುಬ್ರಹ್ಮಣ್ಯಕ್ಕೆ ಬಂದಿದ್ದು, ಮಂಗಳವಾರ ರಾತ್ರಿ ಬಸ್‌ ನಿಲ್ದಾಣದಲ್ಲಿ ತಂಗಿದ್ದರು. ಬುಧವಾರ ಬೆಳಗ್ಗೆ ಸಾರ್ವಜನಿಕ ಶೌಚಾಲಯಕ್ಕೆ ತೆರಳಿದ್ದು, ಆಕೆ ಅಲ್ಲಿ ಗಂಡು‌ ಮಗುವಿಗೆ ಜನ್ಮ ನೀಡಿದ್ದಾರೆ. ಬಳಿಕ

ಸುಬ್ರಹ್ಮಣ್ಯ: ಬಸ್ ನಿಲ್ದಾಣದ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ Read More »

ಕರಾವಳಿ

ಬಂಟ್ವಾಳ: ಅನ್ನಭಾಗ್ಯ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ► ಸ್ವತ್ತುಗಳೊಂದಿಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಆರೋಪಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ.27. ಸರಕಾರದಿಂದ ಪಡಿತರ ಕಾರ್ಡ್ ದಾರರಿಗೆ ವಿತರಣೆ ಆಗುವ ಅಕ್ಕಿಯನ್ನು ಕಾಳಸಂತೆಯಲ್ಲಿ ಹೆಚ್ಚಿನ ದರಕ್ಕೆ ಮಾರಾಟ ಮಾಡುವುದನ್ನು ಪತ್ತೆ ಹಚ್ಚಿರುವ ಬಂಟ್ವಾಳ ಗ್ರಾಮಾಂತರ ಪೊಲೀಸರು ಓರ್ವನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕಿನ ‘ಬಿ’ ಮೂಡ ಗ್ರಾಮದ ಪರ್ಲಿಯಾ ನಿವಾಸಿ ಅಬ್ದುಲ್ ರಜಾಕ್ ಎಂಬವರ ಪುತ್ರ ನಿಯಾಜ್ ಹಸನ್ (36) ಎಂದು ಗುರುತಿಸಲಾಗಿದೆ. ಬಂಟ್ವಾಳ ಗ್ರಾಮಾಂತರ ಠಾಣಾ ಸಬ್ ಇನ್ಸ್ ಪೆಕ್ಟರ್ ಪ್ರಸನ್ನ ಎಂ,ಎಸ್ ಮತ್ತು ಸಿಬಂದಿಯವರು ರಾಮಲ್ ಕಟ್ಟೆ

ಬಂಟ್ವಾಳ: ಅನ್ನಭಾಗ್ಯ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ► ಸ್ವತ್ತುಗಳೊಂದಿಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಆರೋಪಿ Read More »

ಕರ್ನಾಟಕ

ಕಡಬ: ಜ್ವರ ಉಲ್ಬಣಗೊಂಡು ಯುವಕ ಮೃತ್ಯು ► ಇಲಿಜ್ವರಕ್ಕೆ ಬಲಿಯಾದರೇ ಹರೀಶ್..??

(ನ್ಯೂಸ್ ಕಡಬ) newskadaba.com ಕಡಬ, ಸೆ.27. ತೀವ್ರ ಜ್ವರದಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ ಯುವಕನೋರ್ವ ಮೃತಪಟ್ಟ ಘಟನೆ ಗುರುವಾರ ಬೆಳಗಿನ ಜಾವ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಮೃತ ಯುವಕನನ್ನು ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಮಜ್ಜಾರು ನಿವಾಸಿ ಜತ್ತಪ್ಪ ಗೌಡ ಎಂಬವರ ಪುತ್ರ ಹರೀಶ್(26) ಎಂದು ಗುರುತಿಸಲಾಗಿದೆ. ವಾರದ ಹಿಂದೆ ಜ್ವರದಿಂದಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಇವರು ಗುಣಮುಖನಾಗಿ ಮನೆಗೆ ಆಗಮಿಸಿದ್ದು, ಜ್ವರ ಉಲ್ಬಣಗೊಂಡ ಕಾರಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರದಂದು ಚಿಕಿತ್ಸೆ ಫಲಕಾರಿಯಾಗದೆ

ಕಡಬ: ಜ್ವರ ಉಲ್ಬಣಗೊಂಡು ಯುವಕ ಮೃತ್ಯು ► ಇಲಿಜ್ವರಕ್ಕೆ ಬಲಿಯಾದರೇ ಹರೀಶ್..?? Read More »

ಕರಾವಳಿ

ಸುಳ್ಯ: ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ.27. ಡೆಂಟಲ್ ಕಾಲೇಜಿನ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಸಂಜೆ ಸುಳ್ಯದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಾಕೆಯನ್ನು ಸುಳ್ಯ ಕೆವಿಜಿ ಡೆಂಟಲ್ ಕಾಲೇಜು ವಿದ್ಯಾರ್ಥಿನಿ, ಕೇರಳ ಮೂಲದ ನೇಹಾ ಎ. ಥಾಮ್ಸನ್ ಎಂದು ಗುರುತಿಸಲಾಗಿದೆ. ಸುಳ್ಯದಲ್ಲಿ ಬಾಡಿಗೆ ಕೊಠಡಿಯಲ್ಲಿ ವಾಸಿಸುತ್ತಿದ್ದ ಈಕೆ ಬುಧವಾರ ಸಂಜೆ ಕಾಲೇಜಿನಿಂದ ಹಿಂತಿರುಗಿದ್ದು, ಆ ಬಳಿಕ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ. ಸುಳ್ಯ ಪೊಲೀಸರು

ಸುಳ್ಯ: ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Read More »

ಕರಾವಳಿ

ಟಿವಿ ವರದಿಗಾರರ ಹೆಸರಲ್ಲಿ ಮರಳು ಸಾಗಾಟಗಾರರನ್ನು ಬೆದರಿಸಿ ಹಣ ಸುಲಿಗೆ ► ನೆಲ್ಯಾಡಿ ಮೂಲದ ನಕಲಿ ಪತ್ರಕರ್ತ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ.26. ಟಿವಿ ಮಾಧ್ಯಮ ವರದಿಗಾರರ ಹೆಸರಲ್ಲಿ ಸುಲಿಗೆ ನಡೆಸುತ್ತಿದ್ದ ನಕಲಿ ಪತ್ರಕರ್ತನೋರ್ವನನ್ನು ಪೊಲೀಸರ ವಶಕ್ಕೊಪ್ಪಿಸಿದ ಘಟನೆ ಬುಧವಾರದಂದು ಬೆಳ್ತಂಗಡಿಯಲ್ಲಿ ನಡೆದಿದೆ. ದ.ಕ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ಮರಳು ಇರುವ ಪ್ರದೇಶಕ್ಕೆ ತೆರಳಿ ಬಿಟಿವಿ ನ್ಯೂಸ್ ಚಾನಲ್ ಹೆಸರಿನಲ್ಲಿ ಮರಳು ಸಾಗಾಟಗಾರರನ್ನು ಬೆದರಿಸಿ 15 ಸಾವಿರ, 7 ಸಾವಿರ ಹಾಗೂ 30 ಸಾವಿರ ಹಣ ಸುಲಿಗೆ ಮಾಡಿದ್ದ ನಕಲಿ ಪತ್ರಕರ್ತ ಕೊಕ್ಕಡ ಗ್ರಾಮದ ಪಟ್ರಮೆ ನಿವಾಸಿ ಸತೀಶ್ ಬುಧವಾರ ಸಂಜೆ

ಟಿವಿ ವರದಿಗಾರರ ಹೆಸರಲ್ಲಿ ಮರಳು ಸಾಗಾಟಗಾರರನ್ನು ಬೆದರಿಸಿ ಹಣ ಸುಲಿಗೆ ► ನೆಲ್ಯಾಡಿ ಮೂಲದ ನಕಲಿ ಪತ್ರಕರ್ತ ಪೊಲೀಸ್ ವಶಕ್ಕೆ Read More »

ಕರ್ನಾಟಕ

ಸವಣೂರು  ವಲಯ ಕರ್ನಾಟಕ ಟೈಲರ್ ಅಸೋಸಿಯೇಶನ್ ಸಭೆ

ಸವಣೂರು : ಸವಣೂರು ವಲಯ ಕರ್ನಾಟಕ ಟೈಲರ್ ಅಸೋಸಿಯೇಶನ್ ವಾರ್ಷಿಕ ಸಭೆ ಸವಣೂರು ಅಶ್ವಿನಿ ಕಾಂಪ್ಲೆಕ್ಸ್‌ನಲ್ಲಿ ಬುಧವಾರ ಸಂಜೆ ನಡೆಯಿತು. ಸಭೆಯಲ್ಲಿ ಕರ್ನಾಟಕ ಟೈಲರ್ ಅಸೋಸಿಯೇಶನ್‌ನ ನಿಕಟಪೂರ್ವ ರಾಜ್ಯ ಕಾರ್ಯದರ್ಶಿರಘುನಾಥ ಅವರು,ಟೈಲರ್‌ಗಳಿಗೆ ಸಿಗುವ ವಿವಿಧ ಸವಲತ್ತು ಹಾಗೂ ಸರಕಾರದ ಯೋಜನೆಗಳನ್ನು ಹೇಗೆ ಜೋಡಿಸಿಕೊಂಡು ಸಂಘದ ಸದಸ್ಯರ ಬೆಳವಣಿಗೆಗೆ ಪೂರಕವಾಗಿ ಮಾಡುವ ಕುರಿತು ಮಾಹಿತಿ ನೀಡಿದರು. ಕೊಡಗು ನೆರೆಯಿಂದ ಸಂತ್ರಸ್ತರಾದ ಅಲ್ಲಿನ ಟೈಲರ್‌ಗಳಿಗೆ ಇಲ್ಲಿನ ಸಮಿತಿಯ ಮೂಲಕ ನೆರವು ನೀಡುವ ಕುರಿತು ವಿವರಿಸಿದರು. ಟೈಲರ್ ಅಸೋಸಿಯೇಶನ್ ಕ್ಷೇತ್ರ ಸಮಿತಿ

ಸವಣೂರು  ವಲಯ ಕರ್ನಾಟಕ ಟೈಲರ್ ಅಸೋಸಿಯೇಶನ್ ಸಭೆ Read More »

ಕರಾವಳಿ

ಭರತನಾಟ್ಯ ಅಂತಿಮ ವಿದ್ವತ್ ಪರೀಕ್ಷೆ : ಶಾಶ್ವತಿ ಸಚಿನ್ ಜೈನ್ ಜಿಲ್ಲೆಯಲ್ಲಿ ಪ್ರಥಮ

ಸವಣೂರು : ಕರ್ನಾಟಕ ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಭರತನಾಟ್ಯ ಅಂತಿಮ ವಿದ್ವತ್ ಪರೀಕ್ಷೆಯಲ್ಲಿ  ಪುಣ್ಚಪ್ಪಾಡಿಯ ಶಾಶ್ವತಿ ಸಚಿನ್ ಜೈನ್ ಜಿಲ್ಲೆಯಲ್ಲಿಯೇ ಹೆಚ್ಚು ಅಂಕಪಡೆದು  ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಇವರು ಮಂಗಳೂರು ಸನಾತನ ನಾಟ್ಯಾಲಯದ ವಿದುಷಿ ಶಾರದಾ ಮಣಿ ಶೇಖರ್ ಮತ್ತು ವಿದುಷಿ ಶ್ರೀಲತಾ ನಾಗರಾಜ್ ಇವರಿಂದ ತರಬೇತು ಪಡೆದುಕೊಂಡಿದ್ದಾರೆ. ಎಂಎಸ್ಸಿ,ಮೆಥಮೆಟಿಕ್ಸ್,ಸಂಗೀತದಲ್ಲೂ ಸೀನಿಯರ್ ಪದವಿ ಪಡೆದುಕೊಂಡಿರುವ ಇವರು ಕೂಚುಪುಡಿ ನೃತ್ಯ ತರಬೇತಿಯನ್ನೂ ಪಡೆದುಕೊಂಡಿರುವ ಇವರು ಮಂಗಳೂರು ಸಂತ ಅಲೋಶಿಯಸ್ ಕಾಲೇಜಿನಲ್ಲಿ ಗಣಿತ ಉಪನ್ಯಾಸಕಿಯಾಗಿದ್ದಾರೆ. ಇವರು ಪುಣ್ಚಪ್ಪಾಡಿ

ಭರತನಾಟ್ಯ ಅಂತಿಮ ವಿದ್ವತ್ ಪರೀಕ್ಷೆ : ಶಾಶ್ವತಿ ಸಚಿನ್ ಜೈನ್ ಜಿಲ್ಲೆಯಲ್ಲಿ ಪ್ರಥಮ Read More »

ಕರಾವಳಿ, ಕರ್ನಾಟಕ

ಚಾರ್ವಾಕ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

ಕಾಣಿಯೂರು: ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದ ೨೦೧೭-೧೮ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಸಂಘದ ವಠಾರದಲ್ಲಿ ನಡೆಯಿತು. ಸಂಘವು ೨೦೧೭-೧೮ನೇ ಸಾಲಿನಲ್ಲಿ ೧೩,೧೦,೮೧೫.೭೧ ಲಕ್ಷ ರೂ ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ ೨೦ ಡಿವಿಡೆಂಡ್ ನೀಡಲು ಸಂಘ ನಿರ್ಧರಿಸಿದೆ.  ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಧನಂಜಯ ಕೇನಾಜೆ ಸಂಘವು ಕಾರ್ಯವ್ಯಾಪ್ತಿಯಲ್ಲಿ ಉತ್ತಮ ಸಾಧನೆಯನ್ನು ಮಾಡುತ್ತಿದ್ದು, ನಮ್ಮ ಆಡಳಿತ ಮಂಡಳಿಯು ಪ್ರಾಮಾಣಿಕವಾಗಿ ಸಂಘವನ್ನು ಮುನ್ನಡೆಸಿದ್ದೇವೆ ಎಂಬ ತೃಪ್ತಿ

ಚಾರ್ವಾಕ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ Read More »

ಕರಾವಳಿ

ಅ.1 : ಕೃಷಿಕರಿಗೆ ಬ್ಯಾಂಕ್ ನೊಟೀಸ್ ವಿರೋಽಸಿ ಸವಣೂರಿನಲ್ಲಿ  ಪ್ರತಿಭಟನೆ

ಸವಣೂರು: ರಾಜ್ಯ ಸರಕಾರ ಸಾಲಮನ್ನಾ ಮಾಡಿ ರೈತರನ್ನು ಸಾಲಮುಕ್ತರನ್ನಾಗಿಸುವ ಪ್ರಕ್ರಿಯೆಯಲ್ಲಿರುವಾಗ ಜಿಲ್ಲೆಯಾದ್ಯಂತ ರಾಷ್ಟ್ರೀಕೃತ ಬ್ಯಾಂಕಿನ ಸಾಲ ಮರುಪಾವತಿಸಲು ಅಡಕೆ ಬೆಳೆಗಾರರಿಗೆ ಲೀಗಲ್ ನೊಟೀಸ್ ಕಳುಹಿಸಲಾಗುತ್ತಿದ್ದು ಇದನ್ನು ಖಂಡಿಸಿ  ಅ.1ರಂದು  ಸವಣೂರಿನಲ್ಲಿರುವ ರಾಷ್ಟ್ರೀಕೃತ ಬ್ಯಾಂಕಿಗೆ ಬೀಗ ಜಡಿದು ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಶ್ರೀಧರ್ ಶೆಟ್ಟಿ   ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನೊಟೀಸ್ ಮೂಲಕ ರೈತರನ್ನು  ಬೆದರಿಸುವ ತಂತ್ರ ಅನುಸರಿಸಲಾಗುತ್ತಿದೆ.ಎಚ್ಚರಿಕೆ ನೀಡುವ ಸಲುವಾಗಿ ಸವಣೂರಿನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಅ.1 : ಕೃಷಿಕರಿಗೆ ಬ್ಯಾಂಕ್ ನೊಟೀಸ್ ವಿರೋಽಸಿ ಸವಣೂರಿನಲ್ಲಿ  ಪ್ರತಿಭಟನೆ Read More »

ಕರಾವಳಿ, ಕರ್ನಾಟಕ
Scroll to Top