ಮದ್ಯಪಾನ ಮಾಡಲು ನೀರು ಹಾಗೂ ಲೋಟ ನೀಡಿ ಸಹಾಯ ► ಆರೋಪಿಯನ್ನು ಬಂಧಿಸಿದ ಉಪ್ಪಿನಂಗಡಿ ಪೊಲೀಸರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ.19. ಮದ್ಯಪಾನ ಮಾಡಲು ನೀರು ಹಾಗೂ ಗಾಜಿನ ಲೋಟವನ್ನು ಕೊಟ್ಟ ಆರೋಪಿಯೋರ್ವನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ ಘಟನೆ ಮಂಗಳವಾರದಂದು ಪೆರ್ನೆಯಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಗಿರಿಯಪ್ಪ ಪೂಜಾರಿ ಎಂದು ಗುರುತಿಸಲಾಗಿದ್ದು, ಈತ ಮಂಗಳವಾರದಂದು ಬಂಟ್ವಾಳ ತಾಲೂಕು ಪೆರ್ನೆ ಗ್ರಾಮದ ಪುರಿಯ ಎಂಬಲ್ಲಿ ರಸ್ತೆ ಬದಿಯಲ್ಲಿರುವ ಮೋರಿಯಲ್ಲಿ ಅಬಕಾರಿ ಇಲಾಖೆಯಿಂದ ಯಾವುದೇ ಪರವಾನಿಗೆ ಪಡೆಯದೆ ಅಮಲು ಪದಾರ್ಥಗಳನ್ನು ತಂದ ವ್ಯಕ್ತಿಗೆ ಕುಡಿಯಲು ನೀರು ಹಾಗೂ ಗಾಜಿನ ಲೋಟವನ್ನು ಕೊಟ್ಟು ಅಮಲು ಪದಾರ್ಥ ಸೇವಿಸಲು ಅನುವು ಮಾಡಿಕೊಡುತ್ತಿದ್ದಾಗ ದಾಳಿ ನಡೆಸಿದ ಉಪ್ಪಿನಂಗಡಿ […]

ಮದ್ಯಪಾನ ಮಾಡಲು ನೀರು ಹಾಗೂ ಲೋಟ ನೀಡಿ ಸಹಾಯ ► ಆರೋಪಿಯನ್ನು ಬಂಧಿಸಿದ ಉಪ್ಪಿನಂಗಡಿ ಪೊಲೀಸರು Read More »

ಕರಾವಳಿ

ಕೆನರಾ ಎಂಜಿನಿಯರಿಂಗ್ ಕಾಲೇಜಿನ ರವೀಂದ್ರ ಮಲ್ಯರಿಗೆ ಡಾಕ್ಟರೇಟ್ ಪದವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.19. ಕೆನರಾ ಎಂಜಿನಿಯರಿಂಗ್ ಕಾಲೇಜಿನ ಮೆಕ್ಯಾನಿಕಲ್ ವಿಭಾಗದ ಸಹ ಪ್ರಾಧ್ಯಾಪಕ ರವೀಂದ್ರ ಮಲ್ಯ ಅವರು ಮಾಹೆಯ ಡಾ.ರಘುವೀರ ಪೈ ಮತ್ತು ಡಾ.ಸತೀಶ್ ಶೆಣೈ ಅವರ ಮಾರ್ಗದರ್ಶನದಲ್ಲಿ ‘ಸ್ಟೆಬಿಲಿಟಿ ಆಫ್ ಮಲ್ಟಿಪಲ್ ಆಕ್ಸಿಲ್ ಗ್ರೂವ್ ವಾಟರ್ ಲೂಬ್ರಿಕೇಟೆಡ್ ಬೇರಿಂಗ್ ಇನ್‍ದ ಟರ್ಬುಲೆಂಟ್ ರೆಜಿಮ್’ ವಿಷಯದೊಂದಿಗೆ ಮಂಡಿಸಿದ ಮಂಡಿಸಿದ ಮಹಾಪ್ರಬಂಧಕ್ಕೆ ಮಾಹೆ ವಿವಿಯು ಪಿ.ಹೆಚ್.ಡಿ ಪದವಿ ನೀಡಿ ಗೌರವಿಸಿದೆ. ರವೀಂದ್ರ ಮಲ್ಯ ಅವರು ಮಂಗಳೂರಿನ ವಿಶ್ರಾಂತ ಶಿಕ್ಷಕ, ಸಾವಯವ ಕೃಷಿ, ಜಲ ಮರುಪೂರಣ ತಜ್ಞ ಎಸ್.

ಕೆನರಾ ಎಂಜಿನಿಯರಿಂಗ್ ಕಾಲೇಜಿನ ರವೀಂದ್ರ ಮಲ್ಯರಿಗೆ ಡಾಕ್ಟರೇಟ್ ಪದವಿ Read More »

ಕರಾವಳಿ

ಮಂಗಳೂರು ಸ್ಮಾರ್ಟ್ ಸಿಟಿ ಕಾರ್ಯ ಯೋಜನೆಯ ಅನುಷ್ಠಾನದ ಹಿನ್ನೆಲೆ ► ತಾಂತ್ರಿಕ ಹಾಗೂ ಸಾಮಾನ್ಯ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಸಾಂದರ್ಭಿಕ ಚಿತ್ರ (ನ್ಯೂಸ್ ಕಡಬ) newskadaba.com ಮಂಗಳೂರು, ಸೆ.19. ಮಂಗಳೂರು ಸ್ಮಾರ್ಟ್ ಸಿಟಿ ಕಾರ್ಯ ಯೋಜನೆಯ ಅನುಷ್ಠಾನಕ್ಕಾಗಿ ಗುತ್ತಿಗೆ ಆಧಾರದ ಮೇಲೆ ತಾಂತ್ರಿಕ ಮತ್ತು ಸಾಮಾನ್ಯ ಹುದ್ದೆಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಅಕ್ಟೋಬರ್ 01 ಕೊನೆಯ ದಿನಾಂಕವಾಗಿದ್ದು, ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಯನ್ನು ವೆಬ್‍ಸೈಟ್ www.mangalorecity.mrc.gov.in ನಲ್ಲಿ ಪಡೆಯಬಹುದು. ಸೂಕ್ತ ಅರ್ಜಿ ನಮೂನೆಯೊಂದಿಗೆ ಸಂಬಂಧಿಸಿರುವ ದಾಖಲೆಗಳನ್ನು ಲಗತ್ತಿಸಿ, ಆಸಕ್ತರು smartcitymangaluru@gmail.com ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು ಎಂದು ವ್ಯವಸ್ಥಾಪಕ ನಿರ್ದೇಶಕರು, ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಇವರ ಪ್ರಕಟಣೆ ತಿಳಿಸಿದೆ.

ಮಂಗಳೂರು ಸ್ಮಾರ್ಟ್ ಸಿಟಿ ಕಾರ್ಯ ಯೋಜನೆಯ ಅನುಷ್ಠಾನದ ಹಿನ್ನೆಲೆ ► ತಾಂತ್ರಿಕ ಹಾಗೂ ಸಾಮಾನ್ಯ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ Read More »

ಉದ್ಯೋಗ

ಆದರ್ಶ ಮಸೀದಿಯಾಗಿ ಆಯ್ಕೆಗೊಂಡ ಬೆಳ್ಳಾರೆ ಝಕರಿಯ ಜುಮಾ ಮಸೀದಿಯಲ್ಲಿ ಮಾಹಿತಿ ಕೇಂದ್ರ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಸೆ.19. ಆದರ್ಶ ಮಸೀದಿಯಾಗಿ ಆಯ್ಕೆಗೊಂಡ ಬೆಳ್ಳಾರೆ ಝಕರಿಯ ಜುಮಾ ಮಸೀದಿಯಲ್ಲಿ ಮಾಹಿತಿ ಕೇಂದ್ರವನ್ನು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮುಸ್ತಫಾ ಕಲ್ಲಪನೆ ಉದ್ಘಾಟಿಸಿದರು. ಕರ್ನಾಟಕ ರಾಜ್ಯ ವಕ್ಫ್ ಮಂಡಳಿ, ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಮಂಡಳಿಯು ಇತ್ತೀಚೆಗೆ ಮಂಗಳೂರಿನ ವಕ್ಫ್ ಕಛೇರಿಯಲ್ಲಿ ನಡೆದ ಸಮಾರಂಭದಲ್ಲಿ ಬೆಳ್ಳಾರೆ ಝಕರಿಯ ಜುಮಾ ಮಸೀದಿಯನ್ನು ಆದರ್ಶ ಮಸೀದಿ ಎಂದು ಘೋಷಣೆ ಮಾಡಿ, ಮಾಹಿತಿ ಕೇಂದ್ರ ತೆರೆಯಲು 80,000ರೂ ಚೆಕ್ ಅನ್ನು ಮಂಜೂರು ಮಾಡಲಾಗಿತ್ತು . ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ಳಾರೆ ಝಕರಿಯ ಜುಮಾ ಮಸೀದಿಯ ಅದ್ಯಕ್ಷರಾದ

ಆದರ್ಶ ಮಸೀದಿಯಾಗಿ ಆಯ್ಕೆಗೊಂಡ ಬೆಳ್ಳಾರೆ ಝಕರಿಯ ಜುಮಾ ಮಸೀದಿಯಲ್ಲಿ ಮಾಹಿತಿ ಕೇಂದ್ರ ಉದ್ಘಾಟನೆ Read More »

ಕರಾವಳಿ

ಧರ್ಮಸ್ಥಳ ದಿಂದ ಕಡಬಕ್ಕೆ ಇಚಿಲಂಪಾಡಿ ಮಾರ್ಗವಾಗಿ ಕೆಎಸ್ಸಾರ್ಟಿಸಿ ಬಸ್ ಆರಂಭ

(ನ್ಯೂಸ್ ಕಡಬ) newskadaba.com ಕಡಬ, ಸೆ.19. ತಾಲೂಕು ಕೇಂದ್ರವಾಗಿರುವ ಕಡಬಕ್ಕೆ ಧರ್ಮಸ್ಥಳ ಡಿಪೋದಿಂದ ನೆಲ್ಯಾಡಿ-ಇಚ್ಲಂಪಾಡಿ ಮಾರ್ಗವಾಗಿ ಕಡಬಕ್ಕೆ ಪ್ರಯಾಣ ಆರಂಭಿಸಿದ ಕೆಎಸ್ಸಾರ್ಟಿಸಿ ಬಸ್ಸನ್ನು ಇಚ್ಲಂಪಾಡಿಯಲ್ಲಿ ಸ್ವಾಗತಿಸಲಾಯಿತು. ಧರ್ಮಸ್ಥಳ – ಕಡಬಕ್ಕೆ ಬೆಳಿಗ್ಗೆ ಹಾಗೂ ಸಾಯಂಕಾಲ ಆರಂಭಗೊಂಡ ನೂತನ ಬಸ್ ಸಂಚಾರವನ್ನು ಕಡಬ ಜಿ.ಪಂ.ಸದಸ್ಯ ಪಿ.ಪಿ.ವರ್ಗಿಸ್ ಸ್ವಾಗತಿಸಿ, ಶುಭಹಾರೈಸಿದರು. ತಾ.ಪಂ.ಸದಸ್ಯೆ ಕೆ.ಟಿ.ವಲ್ಸಮ್ಮ, ಉಷಾ ಅಂಚಾನ್, ಗ್ರಾ.ಪಂ.ಸದಸ್ಯರಾದ ಮಾದವ, ಅಬ್ರಾಹಂ, ಡಿಸಿಸಿ ಸದಸ್ಯರಾದ ಜೋರ್ಜ್ ಕುಟ್ಟಿ, ಸೂಸಮ್ಮ, ಗ್ರಾ.ಪಂ.ಮಾಜಿ ಸದಸ್ಯರಾದ ಮಂಜು, ಯಮುನ, ಅಬ್ರಾಹಂ ವರ್ಗಿಸ್, ಗುತ್ತಿಗೆದಾರ ಪಾಪಚ್ಚನ್, ಡೇವಿಡ್ ಎಂ.ಪಿ.,

ಧರ್ಮಸ್ಥಳ ದಿಂದ ಕಡಬಕ್ಕೆ ಇಚಿಲಂಪಾಡಿ ಮಾರ್ಗವಾಗಿ ಕೆಎಸ್ಸಾರ್ಟಿಸಿ ಬಸ್ ಆರಂಭ Read More »

ಕರಾವಳಿ

ಬೈಕಂಪಾಡಿ: ತಾಳೆ ಎಣ್ಣೆ ಸಾಗಾಟದ ಲಾರಿ ಚಾಲಕನ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ► ಚಾಲಕನನ್ನು ಕೊಂದು ಲಾರಿಯಲ್ಲಿದ್ದ ಸ್ವತ್ತು ದೋಚಿದ ದುಷ್ಕರ್ಮಿಗಳು..!!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.18. ಬೆಂಗಳೂರಿಗೆ ತಾಳೆ ಎಣ್ಣೆ ಸಾಗಿಸುತ್ತಿದ್ದ ಲಾರಿಯ ಚಾಲಕನನ್ನು ಅಪಹರಿಸಿ ಕೊಲೆಗೈದಿರುವ ಪ್ರಕರಣವನ್ನು ಭೇದಿಸಿರುವ ಮಂಗಳೂರು ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಆಗಸ್ಟ್ 28 ರಂದು ಬೈಕಂಪಾಡಿಯಲ್ಲಿರುವ ರುಚಿ ಸೋಯ ಇಂಡಸ್ಟ್ರೀಯಿಂದ ಸುಮಾರು 7‌ ಲಕ್ಷ 50 ಸಾವಿರ ರೂ. ಮೌಲ್ಯದ 1050 ಬಾಕ್ಸ್ ತಾಳೆ ಎಣ್ಣೆಯನ್ನು ಸುಗಮ ಕಂಪನಿಯ ಲಾರಿಯಲ್ಲಿ ಬೆಂಗಳೂರಿಗೆ ಕಳುಹಿಸಿಕೊಡಲಾಗಿದ್ದು, ತಲುಪಿಸಬೇಕಾದ ಸ್ಥಳಕ್ಕೆ ತಲುಪಿಸದೇ ಮೋಸ ಮಾಡಿರುವ ಬಗ್ಗೆ ಶಿವಗಣೇಶ್ ಟ್ರಾನ್ಸ್ ಪೋರ್ಟ್ ಮಾಲೀಕರು ಪಣಂಬೂರು ಠಾಣೆಗೆ

ಬೈಕಂಪಾಡಿ: ತಾಳೆ ಎಣ್ಣೆ ಸಾಗಾಟದ ಲಾರಿ ಚಾಲಕನ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ► ಚಾಲಕನನ್ನು ಕೊಂದು ಲಾರಿಯಲ್ಲಿದ್ದ ಸ್ವತ್ತು ದೋಚಿದ ದುಷ್ಕರ್ಮಿಗಳು..!! Read More »

ಕರ್ನಾಟಕ

ಮಂಗಳೂರು: ರೈಲ್ವೇ ಕಾಮಗಾರಿಯ ವಿದ್ಯುತ್ ಕೇಬಲ್‌ ಕಳ್ಳತನ ► ಐವರು ಕುಖ್ಯಾತ ಡಕಾಯಿತರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.18. ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು ಗ್ರಾಮದಲ್ಲಿ ವಿದ್ಯುತ್ ಚಾಲಿತ ರೈಲ್ವೆ ಕಾಮಗಾರಿಗೆಂದು ತ್ರಿಮೂರ್ತಿ ಕಂಪೆನಿಯವರು ಕೆಂಜಾರು ಮೂಡಾಯಿ ಮಠ ಎಂಬಲ್ಲಿ ಶೇಖರಿಸಿಟ್ಟಿದ್ದಂತಹ ವಿದ್ಯುತ್ ಕೇಬಲ್ ನ್ನು ಕಳವುಗೈದ ಪ್ರಕರಣವನ್ನು ಭೇದಿಸಿರುವ ಪೊಲೀಸರು ಐವರು ಕುಖ್ಯಾತ ಚೋರರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಳವಾರು ನಿವಾಸಿ ಅಹಮ್ಮದ್ ಬಾವ ಎಂಬವರ ಪುತ್ರ ಆರೀಫ್ ಯಾನೆ ಮುನ್ನ(28), ಕಿನ್ನಿಪದವು‌ ನಿವಾಸಿ ಶೌಕತ್ ಅಲಿ‌ ಎಂಬವರ ಪುತ್ರ ರಮ್ಲಾನ್ ಇದ್ದಿನ್ ಯಾನೆ ಕಮಲ್(20), ಕಳವಾರು

ಮಂಗಳೂರು: ರೈಲ್ವೇ ಕಾಮಗಾರಿಯ ವಿದ್ಯುತ್ ಕೇಬಲ್‌ ಕಳ್ಳತನ ► ಐವರು ಕುಖ್ಯಾತ ಡಕಾಯಿತರ ಬಂಧನ Read More »

ಕರಾವಳಿ

ಕೇನ್ಯ ಕಯಂಬಾಡಿ ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನ ► ಜೀರ್ಣೋದ್ಧಾರ ಬಗ್ಗೆ ಪೂರ್ವಭಾವಿ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಸೆ.17. ಸುಬ್ರಹ್ಮಣ್ಯ ಸಂಪುಟ ಶ್ರೀ ಲಕ್ಷ್ಮೀ ನರಸಿಂಹ ಮಠದ 16ನೇ ಮಠಾಧಿಪತಿ ಪೂಜ್ಯ ಶ್ರೀ ವೇದ ಪೂಜ್ಯ ತೀರ್ಥಶ್ರೀ ಆರಾಧಿಸಿಕೊಂಡು ಬಂದಿರುವ ಕಯಂಬಾಡಿ ಶ್ರೀ ಲಕ್ಷ್ಮೀ ನರಸಿಂಹ ದೇವರ ಹಾಗೂ ಕ್ಷೇತ್ರದ ದೈವಗಳ ಜೀರ್ಣೋದ್ಧಾರದ ಬಗ್ಗೆ ಕಯಂಬಾಡಿ ಬನ್ನಿಂತ್ತಾಯ ಕುಟುಂಸ್ಥರು ಹಾಗೂ ಕ್ಷೇತ್ರದ ಭಕ್ತಾದಿಗಳ ಸಭೆಯು ಕಡಬ ತಾಲೂಕಿನ ಕೇನ್ಯ ಗ್ರಾಮದ ಕಯಂಬಾಡಿ ಕ್ಷೇತ್ರದಲ್ಲಿ ನಡೆಯಿತು. ಸುಬ್ರಹ್ಮಣ್ಯ ಮಠಾಧೀಶರಾದ ಶ್ರೀ ವಿದ್ಯಾಪ್ರಸನ್ನ ತೀರ್ಥರ ಗೌರವ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜೀರ್ಣೋದ್ದಾರ ಸಮಿತಿಯನ್ನು

ಕೇನ್ಯ ಕಯಂಬಾಡಿ ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನ ► ಜೀರ್ಣೋದ್ಧಾರ ಬಗ್ಗೆ ಪೂರ್ವಭಾವಿ ಸಭೆ Read More »

ಕರಾವಳಿ

ಮಂಗಳೂರು: ವೇಶ್ಯಾವಾಟಿಕೆ ನಡೆಯುತ್ತಿದ್ದ ಲಾಡ್ಜ್ ಗೆ ದಾಳಿ ► ಓರ್ವ ದಳ್ಳಾಳಿಯ ಬಂಧನ, ಮೂವರು ಯುವತಿಯರ ರಕ್ಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.17. ಲಾಡ್ಜ್ ವೊಂದರಲ್ಲಿ ಯುವತಿಯರನ್ನು ವೇಶ್ಯಾವಾಟಿಕೆಗೆ ಗ್ರಾಹಕರಿಗೆ ಒದಗಿಸುತ್ತಿದ್ದ ದಲ್ಲಾಳಿ(ಪಿಂಪ್) ಓರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ನೊಂದ ಯುವತಿಯರನ್ನು ರಕ್ಷಿಸಿದ ಘಟನೆ ಭಾನುವಾರದಂದು ನಡೆದಿದೆ. ನಗರದ ಕೆ.ಎಸ್ ರಾವ್ ರಸ್ತೆಯಲ್ಲಿರುವ ಸಿಟಿ ಕಂಫರ್ಟ್ ಲಾಡ್ಜ್ ನಲ್ಲಿ ಯುವತಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದಾರೆಂಬ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ವೇಶ್ಯಾವಾಟಿಕೆಗೆ ಯುವತಿಯರನ್ನು ಒದಗಿಸುತ್ತಿದ್ದ ದಲ್ಲಾಳಿ (ಪಿಂಪ್) ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ

ಮಂಗಳೂರು: ವೇಶ್ಯಾವಾಟಿಕೆ ನಡೆಯುತ್ತಿದ್ದ ಲಾಡ್ಜ್ ಗೆ ದಾಳಿ ► ಓರ್ವ ದಳ್ಳಾಳಿಯ ಬಂಧನ, ಮೂವರು ಯುವತಿಯರ ರಕ್ಷಣೆ Read More »

ಕರಾವಳಿ

ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಇಳಿಕೆ – ಲೀಟರಿಗೆ 2 ರೂ.ನಷ್ಟು ಕಡಿತ ► ಮುಖ್ಯಮಂತ್ರಿ ಕುಮಾರಸ್ವಾಮಿ ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.17. ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯು ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ ಜನಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಡೀಸೆಲ್ ಮತ್ತು ಪೆಟ್ರೋಲ್ ಮೇಲಿನ ತೆರಿಗೆಯನ್ನು ಇಳಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ. ಪೆಟ್ರೋಲ್ ಮೇಲಿನ ತೆರಿಗೆ ಇಳಿಸುವುದರಿಂದಾಗಿ ಪ್ರತೀ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್‌ನ ಬೆಲೆಯಲ್ಲಿ 2 ರೂ. ಕಡಿತಗೊಳ್ಳಲಿದೆ. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಸುವಂತೆ ಸೆಪ್ಟೆಂಬರ್ 10 ರಂದು ಕಾಂಗ್ರೆಸ್ ಪಕ್ಷವು ಭಾರತ ಬಂದ್

ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಇಳಿಕೆ – ಲೀಟರಿಗೆ 2 ರೂ.ನಷ್ಟು ಕಡಿತ ► ಮುಖ್ಯಮಂತ್ರಿ ಕುಮಾರಸ್ವಾಮಿ ಘೋಷಣೆ Read More »

ಕರ್ನಾಟಕ
Scroll to Top