ಸವಣೂರು : ಈಡೇರದ ಹೋಬಳಿ ಕೇಂದ್ರ ಬೇಡಿಕೆ

ಸವಣೂರು :ವೇಗವಾಗಿ ಬೆಳೆಯುತ್ತಿರುವ ಪುತ್ತೂರು ತಾಲೂಕಿನ ಸವಣೂರನ್ನು ಹೋಬಳಿ ಕೇಂದ್ರವನ್ನಾಗಿ ಮಾಡಬೇಕೆಂಬ ಕೂಗು ಕಳೆದ ಹಲವು ವರ್ಷಗಳಿಂದ ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದೆ.ಇಲ್ಲಿನ ವಿಶೇಷತೆ ಎಂದರೆ ತಾಲೂಕು ಪುತ್ತೂರು ,ವಿಧಾನ ಸಭೆ ಸುಳ್ಯ ,ಕಂದಾಯ ಹೋಬಳಿ ಕಡಬ,ಪೊಲೀಸ್ ಠಾಣೆ ಬೆಳ್ಳಾರೆ ಹೀಗೆ ಸವಣೂರಿಗೆ ವಿವಿಧ ರೀತಿಯ ಸಂಪರ್ಕಗಳಿವೆ. ಸುಮಾರು ಮೂರು ದಶಕಗಳಿಂದ ಶ್ರವಣರ ಊರು ಸವಣೂರು ಎಂಬ ಪುಟ್ಟಹಳ್ಳಿ ವಿವಿಧ ಕಾರಣಗಳಿಂದ ಸವಣೂರು ವೇಗವಾಗಿ ಬೆಳೆಯುತ್ತಿದೆ.ಸರಕಾರಿ, ಖಾಸಗಿ ಶಿಕ್ಷಣ ಸಂಸ್ಥೆಗಳು,ಕಂದಾಯ ಕಛೇರಿ,ಗ್ರಾ.ಪಂ., ವಸತಿ ಸಮುಚ್ಚಯ ,ಗ್ರಾ.ಪಂ ,ಪೆಟ್ರೋಲ್ […]

ಸವಣೂರು : ಈಡೇರದ ಹೋಬಳಿ ಕೇಂದ್ರ ಬೇಡಿಕೆ Read More »

ಕರಾವಳಿ

ಸವಣೂರು : ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ರಕ್ಷಕ – ಶಿಕ್ಷಕ ಸಂಘದ ಮಹಾಸಭೆ

ಸವಣೂರು : ಇಲ್ಲಿನ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ಷಕ – ಶಿಕ್ಷಕ ಸಂಘದ  ಮಹಾಸಭೆ  ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ. ಸೀತಾರಾಮ ರೈ ಸವಣೂರು ಮಾತನಾಡಿ,ಕಾಲೇಜಿನ ಬೆಳವಣಿಗೆಯಲ್ಲಿ ಆಡಳಿತ ಮಂಡಳಿ ಹಾಗೂ ಶಿಕ್ಷಕರ ಜೊತೆಗೆ ಪೋಷಕರ ಪಾತ್ರ ಮುಖ್ಯ ಎಂದರು. ಮುಖ್ಯ ಅತಿಥಿ ಮಂಗಳೂರು ಕೆ.ಎಸ್ ಹೆಗ್ಡೆ ಮೆಡಿಕಲ್ ಅಕಾಡೆಮಿಯ ಮನೋವೈದ್ಯ ಶಾಸ್ತ್ರ ವಿಭಾಗದ ಡಾ. ಶಿಶಿರ್ ಕುಮಾರ್,ವಿದ್ಯಾರ್ಥಿಗಳಿಗೆ ಸರಿಯಾದ ಮಾರ್ಗದರ್ಶನದಿಂದ ಅವರ ಮಾನಸಿಕ ಸ್ಥೈರ್ಯ ಬೆಳೆಸಿ

ಸವಣೂರು : ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ರಕ್ಷಕ – ಶಿಕ್ಷಕ ಸಂಘದ ಮಹಾಸಭೆ Read More »

ಕರಾವಳಿ

►► Big Breaking ಆಲಂಕಾರು: ಮಗನಿಗೆ ಕತ್ತಿಯಿಂದ ಕಡಿದ ತಂದೆ ► ಬಳಿಕ ಮರ್ಮಾಂಗ ಕಡಿದು ಕುತ್ತಿಗೆ ಸೀಳಿ ತಾನೂ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಸೆ.12. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ತನ್ನ ಮಗನಿಗೆ ಕತ್ತಿಯನ್ನು ಕಡಿದು ಬಳಿಕ ತನ್ನ ಕುತ್ತಿಗೆ ಹಾಗೂ ಮರ್ಮಾಂಗಕ್ಕೆ ಚಾಕುವಿನಿಂದ ಸೀಳಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರದಂದು ಆಲಂಕಾರಿನಲ್ಲಿ ನಡೆದಿದೆ. ಆಲಂಕಾರು ಗ್ರಾಮದ ಪಟ್ಟೆಮಜಲು ನಿವಾಸಿ ಶೀನಪ್ಪ ಪೂಜಾರಿ ಎಂಬವರ ಪುತ್ರ ರಾಜೀವ್ ಪೂಜಾರಿ (45) ತನ್ನ ಪುತ್ರ ರತನ್ ಗೆ ಕತ್ತಿಯಿಂದ ಕಡಿದಿದ್ದು, ಬಳಿಕ ಕತ್ತಿಯಿಂದ ಸೀಳಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಾಯಾಳು ರತನ್ ನನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

►► Big Breaking ಆಲಂಕಾರು: ಮಗನಿಗೆ ಕತ್ತಿಯಿಂದ ಕಡಿದ ತಂದೆ ► ಬಳಿಕ ಮರ್ಮಾಂಗ ಕಡಿದು ಕುತ್ತಿಗೆ ಸೀಳಿ ತಾನೂ ಆತ್ಮಹತ್ಯೆ Read More »

ಕರಾವಳಿ

ಬೆಳಂದೂರು ಕಾಲೇಜಿಗೆ ಕಾಣಿಯೂರು ಶ್ರೀ ಭೇಟಿ

ಬೆಳಂದೂರು : ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭತೀರ್ಥ ಸ್ವಾಮೀಜಿ ಸೋಮವಾರ ಭೇಟಿ ನೀಡಿದರು. ಬಳಿಕ ಆಶೀರ್ವಚನ ನೀಡಿದ ಸ್ವಾಮೀಜಿ ಮನೆಯಿಂದಲೇ ಮಕ್ಕಳ ಸಂಸ್ಕಾರ ರೂಪುಗೊಳ್ಳುವುದು. ವಿದ್ಯಾರ್ಥಿಗಳು ತಮ್ಮ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದರೊಂದಿಗೆ ಗಿಡ ನೆಡುವ ಕಾರ್ಯವನ್ನೂ ಮಾಡಬೇಕು. ಈ ಮೂಲಕ ಉತ್ತಮ ವಾತಾವರಣವನ್ನು ನಿರ್ಮಿಸಬೇಕು. ಬೆಳಂದೂರು ಕಾಲೇಜಿನ ವಿದ್ಯಾರ್ಥಿಗಳು ಪಠ್ಯ ಹಾಗೂ ಇನ್ನಿತರ ವಿಚಾರಗಳಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡು ಉತ್ತಮ ಪ್ರಜೆಗಳಾಗಿ ಬೆಳಗಬೇಕೆಂದು ಸ್ವಾಮೀಜಿ ಆಶಿಸಿದರು. ಪೂರ್ಣಕುಂಭ ಸ್ವಾಗತ ಸ್ವಾಮೀಜಿಯವರನ್ನು ವಿದ್ಯಾರ್ಥಿಗಳು ಪೂರ್ಣಕುಂಭ

ಬೆಳಂದೂರು ಕಾಲೇಜಿಗೆ ಕಾಣಿಯೂರು ಶ್ರೀ ಭೇಟಿ Read More »

ಕರಾವಳಿ

ಪಾಲ್ತಾಡಿ ಮಂಜುನಾಥನಗರ ;ಶ್ರೀಕೃಷ್ಣ ಜನ್ಮಾಷ್ಟಮಿ

ಸವಣೂರು : ಪಾಲ್ತಾಡಿ ಗ್ರಾಮದ ಮಂಜುನಾಥನಗರ ಸಿದ್ದಿವಿನಾಯಕ ಸೇವಾ ಸಂಘ ಇದರ ಆಶ್ರಯದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯು  ಮಂಜುನಾಥನಗರ ಸಿದ್ದಿವಿನಾಯಕಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ  ಇಡ್ಯಡ್ಕ ಶಾಲಾ ಮುಖ್ಯಶಿಕ್ಷಕ ಜಯಂತ್ ವೈ ಅವರು ಧಾರ್ಮಿಕ ಉಪನ್ಯಾಸ ನೀಡಿ,ಪ್ರತೀ ಮನೆಮನೆಯಲ್ಲೂ  ಸಂಸ್ಕಾರ,ಸಂಸ್ಕೃತಿಯನ್ನು ಉಳಿಸುವ ಕಾರ್ಯವಾಗಬೇಕು.ಸಂಸ್ಕಾರ ಬೋಧನೆಯಲ್ಲಿ ಭಜನೆ ಉತ್ತಮ ಮಾಧ್ಯಮ.ಭಜನೆಯಿಂದ ವಿಭಜನೆ ದೂರವಾಗಲು ಸಾಧ್ಯ.ಮಕ್ಕಳಿಗೆ ಎಳವೆಯಲ್ಲೇ ಸದ್ವಿಚಾರಗಲನ್ನು ತಿಳಿಸುವ ಕಾರ್ಯವಾಗಬೇಕಿದೆ ಎಂದರು. ಅಧ್ಯಕ್ಷತೆಯನ್ನು ಸವಣೂರು ಗ್ರಾ.ಪಂ.ಸದಸ್ಯ ಸತೀಶ್ ಅಂಗಡಿಮೂಲೆ ವಹಿಸಿದ್ದರು.

ಪಾಲ್ತಾಡಿ ಮಂಜುನಾಥನಗರ ;ಶ್ರೀಕೃಷ್ಣ ಜನ್ಮಾಷ್ಟಮಿ Read More »

ಕರಾವಳಿ

ಸೆ.13:ಪುಣ್ಚಪ್ಪಾಡಿಯಲ್ಲಿ 30ನೇ ವರ್ಷದ ಗಣೇಶೋತ್ಸವ

ಪುಣ್ಚಪ್ಪಾಡಿ ; ಶ್ರೀ ಗೌರಿಗಣೇಶ ಸೇವಾ ಸಂಘಇದರ ವತಿಯಿಂದ ೩೦ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವವು ಸೆ.೧೩ರಂದು ಪುಣ್ಚಪ್ಪಾಡಿ ನೇರೋಳ್ತಡ್ಕ ವಿನಾಯಕನಗರದಲ್ಲಿ ನಡೆಯಲಿದೆ. ನಿವೃತ ಸೈನಿಕ ಪ್ರವೀಣ್ ಕುಮಾರ್ ರೈ ನೂಜಾಜೆ  ಧಜಾರೋಹಣ ನೆರವೇರಿಸುವರು. ಗಣಪತಿ ಮೂರ್ತಿ ಪ್ರತಿಷ್ಠಾಪನೆಯ ಬಳಿಕ ಸಾರ್ವಜನಿಕರಿಂದ ಭಜನ ಕಾರ್ಯಕ್ರಮದ ಬಳಿಕ ಗಣಹೋಮ,ಶ್ರೀದೇವರ ಮಹಾಪೂಜೆ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಶೋಭಾಯಾತ್ರೆ ಮೂಲಕ ಸಾಗಿ ಗೌರಿಹೊಳೆಯಲ್ಲಿ ವಿಗ್ರಹದ ಜಲಸ್ತಂಬನ ನಡೆಯಲಿದೆ. ಶ್ರೀಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ

ಸೆ.13:ಪುಣ್ಚಪ್ಪಾಡಿಯಲ್ಲಿ 30ನೇ ವರ್ಷದ ಗಣೇಶೋತ್ಸವ Read More »

ಕರಾವಳಿ

ಸೆ.13 :ಮಂಜುನಾಥ ನಗರದಲ್ಲಿ ೩೫ನೇ ವರ್ಷದ ಗಣೇಶೋತ್ಸವ

ಸವಣೂರು :ಪಾಲ್ತಾಡಿ ಗ್ರಾಮದ ಮಂಜುನಾಥನಗರ ಸಿದ್ದಿವಿನಾಯಕ ಸೇವಾ ಸಂಘ ಇದರ ವತಿಯಿಂದ 35ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ  ಸೆ.13ರಂದು ಸಿದ್ದಿವಿನಾಯಕ ಭಜನಾ ಮಂದಿರದಲ್ಲಿ ನಡೆಯಲಿದೆ. ಬೆಳಿಗ್ಗೆ ಗಣೇಶ ವಿಗ್ರಹದ ಪ್ರತಿಷ್ಟೆ ಯ ಬಳಿಕ ಭಜನ ಕಾರ್ಯಕ್ರಮ,ಮಹಾಪೂಜೆ ,ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಲಿದೆ. ಮದ್ಯಾಹ್ನ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಗತಿಪರ ಕೃಷಿಕ ಭಾಸ್ಕರ ರೈ ಕುಂಜಾಡಿ  ವಹಿಸುವರು.ಕೆಯ್ಯೂರು ಸ.ಪ್ರೌಢಶಾಲಾ ಮುಖ್ಯಗುರು ವಿನೋದ್ ಕುಮಾರ್ ಕೆ.ಎಸ್ ಧಾರ್ಮಿಕ ಉಪನ್ಯಾಸ ನೀಡುವರು. ನಂತರ ಮಂಜುನಾಥನಗರ ಅಂಗನವಾಡಿ ಹಾಗೂ ಶಾಲಾ ಮಕ್ಕಳಿಂದ

ಸೆ.13 :ಮಂಜುನಾಥ ನಗರದಲ್ಲಿ ೩೫ನೇ ವರ್ಷದ ಗಣೇಶೋತ್ಸವ Read More »

ಕರಾವಳಿ

ಪುರುಷರಕಟ್ಟೆ : ಪ್ರಯಾಣಿಕರ ತಂಗುದಾಣ ಉದ್ಘಾಟನೆ

ನರಿಮೊಗರು :ಸಂಘ ಸಂಸ್ಥೆಗಳು ಸಮಾಜಮುಖಿ ಚಟುವಟಿಕೆಯ ಮೂಲಕ ಸಮಾಜದಲ್ಲಿ ಗುರುತಿಸುತ್ತಿದೆ.ಸಂಘ ಸಂಸ್ಥೆಗಳ ಈ ಕಾರ್ಯ ಶ್ಲಾಘನೀಯ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದರು. ಅವರು  ಪುರುಷರಕಟ್ಟೆ ಯಲ್ಲಿ  ಯುವಕ ಮಂಡಲ ನರಿಮೊಗರು ಹಾಗೂ ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ದ ಜಂಟಿ ಆಶ್ರಯದಲ್ಲಿ ಸಾರ್ವಜನಿಕರ ಸಹಕಾರದೊಂದಿಗೆ ಸುಮಾರು ೬೦ ಸಾವಿರ ರೂ.ವೆಚ್ಚದಲ್ಲಿ ನಿರ್ಮಿಸಲಾದ ಪ್ರಯಾಣಿಕರ ತಂಗುದಾಣವನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭ ಜಿ.ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು,ನಗರ ಠಾಣಾ ವೃತ್ತ ನಿರೀಕ್ಷಕ ಮಹೇಶ್ ಪ್ರಸಾದ್,ನರಿಮೊಗರು

ಪುರುಷರಕಟ್ಟೆ : ಪ್ರಯಾಣಿಕರ ತಂಗುದಾಣ ಉದ್ಘಾಟನೆ Read More »

ಕರಾವಳಿ

ಗ್ರಾಮಾಭಿವೃದ್ದಿ ಚಿಂತನೆಯ ಮಂಜುನಾಥನಗರ ಸಿದ್ದಿವಿನಾಯಕ ಸೇವಾ ಸಂಘಕ್ಕೆ 35ರ ಸಂಭ್ರಮ

ಸವಣೂರು: ಗ್ರಾಮಾಭಿವೃದ್ದಿಯ ಚಿಂತನೆಯೊಂದಿಗೆ ಆರಂಭಗೊಂಡ ಪಾಲ್ತಾಡಿಯ ಮಂಜುನಾಥನಗರ ಶ್ರೀಸಿದ್ದಿವಿನಾಯಕ ಸೇವಾ ಸಂಘಕ್ಕೆ ಈಗ ೩೫ರ ಸಂಭ್ರಮ.ಅತೀ ಹಿಂದುಳಿದ ಗ್ರಾಮವಾಗಿದ್ದ ಪಾಲ್ತಾಡಿ ಗ್ರಾಮದ ಸರ್ವತೋಮುಖ ಅಭಿವೃದ್ದಿಗಾಗಿ  ಧಾರ್ಮಿಕ ಸಾಮಾಜಿಕ,ಸಾಂಸ್ಕೃತಿಕ ಕಾರ್ಯಗಳ ಮೂಲಕ ಜನರಿಗೆ ತಿಳುವಳಿಕೆಯನ್ನು ನೀಡಿ ಕರ್ತವ್ಯ ಹಾಗೂ ಬೇಡಿಕೆಗಳ ಕುರಿತು ಹೋರಾಟ ಮಾಡುವ ದೃಷ್ಟಿಯಿಂದ ಊರಿನ ಹಿರಿಯರಾದ ನ್ಯಾಯವಾದಿ ದಿ.ಕುಂಜಾಡಿ ರಘುನಾಥ ರೈ ಅವರ ನೇತೃತ್ವದಲ್ಲಿ 1983ರ ಗಣೇಶ ಚತುರ್ಥಿಯಂದು ಈ ಸೇವಾ ಸಂಘ ಆರಂಭಗೊಂಡಿತು. ಅಂದು ಇದರ ಸ್ಥಾಪಕಾಧ್ಯಕ್ಷರಾಗಿ ಬಿ.ಕೆ.ರಮೇಶ್ ಹಾಗೂ ಕಾರ್ಯದರ್ಶಿಯಾಗಿ ಪುರಂದರ ಗೌಡ

ಗ್ರಾಮಾಭಿವೃದ್ದಿ ಚಿಂತನೆಯ ಮಂಜುನಾಥನಗರ ಸಿದ್ದಿವಿನಾಯಕ ಸೇವಾ ಸಂಘಕ್ಕೆ 35ರ ಸಂಭ್ರಮ Read More »

ಕರಾವಳಿ

ಕಡಬ: ಕಾರು – ಬೈಕ್ ಢಿಕ್ಕಿ ► ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಸೆ.11. ಬೈಕ್ ಹಾಗೂ ಕಾರು ನಡುವೆ ಢಿಕ್ಕಿಯುಂಟಾದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಳಾರ ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಮಾರುತಿ ಆಲ್ಟೋ ಕಾರೊಂದನ್ನು ಅದರ ಚಾಲಕ ಕಾರ್ಕಳ-ಕನ್ವರೆ ರಸ್ತೆಯ ಕಡೆಯಿಂದ ಕಡಬ-ಉಪ್ಪಿನಂಗಡಿ ಮುಖ್ಯ ರಸ್ತೆಗೆ ಯಾವುದೇ ಸೂಚನೆ ನೀಡದೇ ಒಮ್ಮೆಲೇ ಬಲಬದಿಗೆ ಅತೀ ವೇಗ ಹಾಗೂ  ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದ ಪರಿಣಾಮ ಟಿವಿಎಸ್ ಅಪಾಚಿ ಬೈಕ್ ಹಿಂದಿನಿಂದ ಢಿಕ್ಕಿ ಹೊಡೆದಿದೆ. ಪರಿಣಾಮ

ಕಡಬ: ಕಾರು – ಬೈಕ್ ಢಿಕ್ಕಿ ► ಸವಾರ ಗಂಭೀರ Read More »

ಕರಾವಳಿ
Scroll to Top