ಕಡಬ ಪೇಟೆಯಲ್ಲೇ ತೂಫಾನ್ ಚಾಲಕರಿಬ್ಬರ ನಡುವೆ ಹೊಡೆದಾಟ ► ಓರ್ವ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಸೆ.11. ತೂಫಾನ್ ಚಾಲಕರಿಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕಾಗಿ ಜಗಳ ನಡೆದು ಓರ್ವ ಗಾಯಗೊಂಡ ಘಟನೆ ಕಡಬದಲ್ಲಿ ಮಂಗಳವಾರದಂದು ನಡೆದಿದೆ. ಗಾಯಗೊಂಡ ಚಾಲಕನನ್ನು ಜಬ್ಬಾರ್ ಎಂದು ಗುರುತಿಸಲಾಗಿದೆ. ಜಬ್ಬಾರ್ ಹಾಗೂ ಅಬ್ದುಲ್ ರಹಿಮಾನ್ ನಡುವೆ ಕಡಬ – ಉಪ್ಪಿನಂಗಡಿ ಕ್ಯೂ ವಿಚಾರದಲ್ಲಿ ಉಂಟಾದ ಮಾತು ಕೈ – ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದು, ಆ ಕ್ಷಣದಲ್ಲಿ ಜಬ್ಬಾರ್ ತನ್ನ ವಾಹನದಿಂದ ಚೈನನ್ನು ತೆಗೆದುಕೊಂಡು ಬಂದು ಪರಸ್ಪರ ಹಲ್ಲೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಹಲ್ಲೆಯ ದೃಶ್ಯವನ್ನು […]

ಕಡಬ ಪೇಟೆಯಲ್ಲೇ ತೂಫಾನ್ ಚಾಲಕರಿಬ್ಬರ ನಡುವೆ ಹೊಡೆದಾಟ ► ಓರ್ವ ಆಸ್ಪತ್ರೆಗೆ ದಾಖಲು Read More »

ಕರಾವಳಿ

ಮಂಗಳೂರು: ರಸ್ತೆಗುರುಳಿದ ಖಾಸಗಿ ಬಸ್ ► ಮೂವತ್ತಕ್ಕೂ ಅಧಿಕ ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.11. ಖಾಸಗಿ ಬಸ್ಸೊಂದು ರಸ್ತೆಗುರುಳಿದ ಪರಿಣಾಮ ವಿದ್ಯಾರ್ಥಿಗಳ ಸಹಿತ ಹಲವರು ಗಾಯಗೊಂಡ ಘಟನೆ ಮಂಗಳವಾರ ಬೆಳಿಗ್ಗೆ ಬೈಕಂಪಾಡಿಯಲ್ಲಿ ನಡೆದಿದೆ. ಕಾಟಿಪಳ್ಳದಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸಿಟಿ ಬಸ್ ಎದುರಿನಿಂದ ಬರುತ್ತಿದ್ದ ವಾಹನವನ್ನು ತಪ್ಪಿಸುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗುರುಳಿ ಬಿದ್ದಿದೆ. ಬಸ್ ನಲ್ಲಿದ್ದ ವಿದ್ಯಾರ್ಥಿಗಳು ಸೇರಿದಂತೆ ಸುಮಾರು ಮೂವತ್ತಕ್ಕೂ ಹೆಚ್ಚು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಮಂಗಳೂರು ಉತ್ತರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,

ಮಂಗಳೂರು: ರಸ್ತೆಗುರುಳಿದ ಖಾಸಗಿ ಬಸ್ ► ಮೂವತ್ತಕ್ಕೂ ಅಧಿಕ ಮಂದಿಗೆ ಗಾಯ Read More »

ಕರಾವಳಿ

ಪಂಬೆತ್ತಾಡಿ ಕೃಷಿಕನ ಕೊಲೆ‌ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳ ಬಂಧನ..?? ► ಮನೆಯ ಮುಂಭಾಗದ ಪ್ಲಾಸ್ಟಿಕ್ ಟರ್ಪಾಲ್ ನೀಡಿತು ಮಹತ್ವದ ಸುಳಿವು..!!

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ.11. ಎರಡು ದಿನಗಳ ಹಿಂದೆ ತನ್ನ ಮನೆಯಲ್ಲೇ ಕೊಲೆಗೈಯಲ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಪಂಬೆತ್ತಾಡಿ ಗ್ರಾಮದ ಕಲ್ಚಾರು ಸುಬ್ರಹ್ಮಣ್ಯ ಭಟ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಕಾಣಿಯೂರಿನ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಸೆಪ್ಟೆಂಬರ್ 08 ರಂದು ಸುಬ್ರಹ್ಮಣ್ಯ ಭಟ್ ರವರ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಅವರ ಮನೆಯಲ್ಲಿ ಪತ್ತೆಯಾಗಿತ್ತು. ಒಬ್ಬಂಟಿಯಾಗಿ ಬದುಕುತ್ತಿದ್ದ ಅವರು ಕೃಷಿ ಮೂಲದಿಂದ ಬದುಕುತ್ತಿದ್ದರೆನ್ನಲಾಗಿದೆ. ಪ್ರಕರಣದ ಜಾಡು ಹಿಡಿದು ಹೊರಟ ಪೊಲೀಸ್ ತಂಡಕ್ಕೆ ಮನೆಯ

ಪಂಬೆತ್ತಾಡಿ ಕೃಷಿಕನ ಕೊಲೆ‌ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳ ಬಂಧನ..?? ► ಮನೆಯ ಮುಂಭಾಗದ ಪ್ಲಾಸ್ಟಿಕ್ ಟರ್ಪಾಲ್ ನೀಡಿತು ಮಹತ್ವದ ಸುಳಿವು..!! Read More »

ಕರಾವಳಿ

ಕಡಬ ಪೊಲೀಸ್ ಠಾಣೆಯಲ್ಲಿ ಗಣೇಶೋತ್ಸವ ಸಮಿತಿಗಳ ಪ್ರಮುಖರ ಸಭೆ ► ಕಾನೂನಿನ ಚೌಕಟ್ಟಿನೊಳಗೆ ಹಬ್ಬ ಆಚರಿಸಿ: ಪಿಎಸ್‍ಐ ಪ್ರಕಾಶ್ ದೇವಾಡಿಗ

(ನ್ಯೂಸ್ ಕಡಬ) newskadaba.com ಕಡಬ, ಸೆ.10. ಕಾನೂನಿನ ಚೌಕಟ್ಟಿನೊಳಗೆ ಯಾರಿಗೂ ತೊಂದರೆಯಾಗದ ರೀತಿಯಲ್ಲಿ ಶಾಂತಿಯುತವಾಗಿ ಗಣೇಶೋತ್ಸವವನ್ನು ಆಚರಿಸುವುದರೊಂದಿಗೆ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರೊಂದಿಗೆ ಸಹಕರಿಸುವಂತೆ ಕಡಬ ಪೊಲೀಸ್ ಠಾಣಾ ಉಪ ನಿರೀಕ್ಷಕ ಪ್ರಕಾಶ್ ದೇವಾಡಿಗ ಅವರು ಠಾಣಾ ವ್ಯಾಪ್ತಿಯ ಗಣೇಶೋತ್ಸವ ಸಮಿತಿಗಳ ಪ್ರಮುಖರಲ್ಲಿ ಮನವಿ ಮಾಡಿದರು. ಅವರು ಕಡಬ ಪೊಲೀಸ್ ಠಾಣೆಯಲ್ಲಿ ರವಿವಾರ ಜರಗಿದ ಕಡಬ ಠಾಣಾ ವ್ಯಾಪ್ತಿಯ ವಿವಿಧ ಗಣೇಶೋತ್ಸವ ಸಮಿತಿಗಳ ಪ್ರಮುಖರ ಸಭೆಯಲ್ಲಿ ಮಾತನಾಡಿದರು. ಗಣೇಶ ಚೌತಿ ಹಬ್ಬದ ಆಚರಣೆಯ ವೇಳೆ ಸಂಘಟಕರು ಅನುಸರಿಸಬೇಕಾದ

ಕಡಬ ಪೊಲೀಸ್ ಠಾಣೆಯಲ್ಲಿ ಗಣೇಶೋತ್ಸವ ಸಮಿತಿಗಳ ಪ್ರಮುಖರ ಸಭೆ ► ಕಾನೂನಿನ ಚೌಕಟ್ಟಿನೊಳಗೆ ಹಬ್ಬ ಆಚರಿಸಿ: ಪಿಎಸ್‍ಐ ಪ್ರಕಾಶ್ ದೇವಾಡಿಗ Read More »

ಕರಾವಳಿ

ಅನ್ಯ ಪುರುಷನ ಜೊತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿ ► ಪತ್ನಿಯ ತಲೆಯನ್ನು ಕತ್ತರಿಸಿ ಠಾಣೆಗೆ ತಂದು ಪೊಲೀಸರಿಗೆ ಶರಣಾದ ಪತಿ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಸೆ.10. ತನ್ನ ಪತ್ನಿ ಬೇರೊಬ್ಬನ ಜೊತೆ ಬೆಡ್ ರೂಮ್ ನಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ಕೋಪಗೊಂಡ ಪತಿಯು ಪತ್ನಿಯನ್ನು ಕತ್ತಿಯಿಂದ ಕಡಿದು ತಲೆಯನ್ನು ತೆಗೆದುಕೊಂಡು ಸುಮಾರು 20 ಕಿ.ಮೀ. ದೂರದ ಪೊಲೀಸ್ ಠಾಣೆಗೆ ಶರಣಾದ ಘಟನೆ ಭಾನುವಾರದಂದು ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಅಜ್ಜಂಪುರ ಸಮೀಪದ ಶಿವನಿ ನಿವಾಸಿ ಸತೀಶ್ ಕೊಲೆ ಆರೋಪಿ. ಮಾಂಸದ ಅಂಗಡಿ ನಡೆಸುತ್ತಿದ್ದ ಆರೋಪಿ ಸತೀಶ್ ರೂಪಾಳನ್ನು ಪ್ರೀತಿಸಿ ಮದುವೆಯಾಗಿದ್ದನು. ಇತ್ತೀಚೆಗೆ ರೂಪಾ

ಅನ್ಯ ಪುರುಷನ ಜೊತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿ ► ಪತ್ನಿಯ ತಲೆಯನ್ನು ಕತ್ತರಿಸಿ ಠಾಣೆಗೆ ತಂದು ಪೊಲೀಸರಿಗೆ ಶರಣಾದ ಪತಿ Read More »

ಕರಾವಳಿ

ಭಾರತ್ ಬಂದ್ ಹಿನ್ನೆಲೆ ► ಬಂಟ್ವಾಳ ಶಾಸಕರ ಕಾರಿಗೆ ಕಲ್ಲೆಸೆತ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ.10. ಕಾಂಗ್ರೆಸ್ ಕರೆ ನೀಡಿದ್ದ ಭಾರತ್ ಬಂದ್ ಸಂದರ್ಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರವರ ಕಾರಿನ ಮೇಲೆ ಕಿಡಿಗೇಡಿಗಳು ಕಲ್ಲೆಸೆದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬೋಳಂಗಡಿಯಲ್ಲಿ ನಡೆದಿದೆ. ಬಂಟ್ವಾಳದಿಂದ ಕಲ್ಲಡ್ಕಕ್ಕೆ ತನ್ನ ಟೊಯೋಟಾ ಫಾರ್ಚುನರ್ ಕಾರಿನಲ್ಲಿ ತೆರಳುತ್ತಿದ್ದ ಶಾಸಕರ ಕಾರಿಗೆ ಬೋಳಂಗಡಿ ತಲುಪುತ್ತಿದ್ದಂತೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆನ್ನಲಾಗಿದೆ. ಇದರಿಂದಾಗಿ ಕಾರಿನ ಎಡಭಾಗಕ್ಕೆ ಸ್ವಲ್ಪ ಹಾನಿಯಾಗಿದೆ. ಕಲ್ಲೆಸೆತದ ವಿಚಾರ ತಿಳಿಯುತ್ತಿದ್ದಂತೆಯೇ ಬಿಜೆಪಿ ಕಾರ್ಯಕರ್ತರು ಜಮಾಯಿಸತೊಡಗಿದ್ದು, ಆರೋಪಿಗಳನ್ನು

ಭಾರತ್ ಬಂದ್ ಹಿನ್ನೆಲೆ ► ಬಂಟ್ವಾಳ ಶಾಸಕರ ಕಾರಿಗೆ ಕಲ್ಲೆಸೆತ Read More »

ಕರಾವಳಿ

ಆತೂರು: ಟಯರ್‌ ಉರಿಸಿ ರಸ್ತೆ ತಡೆ ಮಾಡುವ ವಿಚಾರ ► ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ವಾಗ್ವಾದ

(ನ್ಯೂಸ್ ಕಡಬ) newskadaba.com ಕಡಬ, ಸೆ.10. ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕರೆ ನೀಡಿರುವ ಭಾರತ್ ಬಂದ್ ಸಂದರ್ಭದಲ್ಲಿ ಟಯರ್ ಸುಡುವ ಮೂಲಕ ರಸ್ತೆ ತಡೆಯುವ ವಿಚಾರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದ ಘಟನೆ ಆತೂರಿನಲ್ಲಿ ನಡೆದಿದೆ. ಆತೂರಿನಲ್ಲಿ ಬಂದ್ ಗೆ ಬೆಂಬಲ ವ್ಯಕ್ತಪಡಿಸಿ ಕೆಲ ಯುವಕರು ಟಯರ್ ಗೆ ಬೆಂಕಿ ಹಚ್ಚಲು ಮುಂದಾಗುತ್ತಿದ್ದಂತೆ ಪೊಲೀಸರು ಆಗಮಿಸಿದ್ದು, ಪೊಲೀಸರು ಹಾಗೂ ಯುವಕರ ಮಧ್ಯೆ ವಾಗ್ವಾದ ಉಂಟಾಗಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಹೆಚ್ಚುವರಿ ಪೊಲೀಸರು

ಆತೂರು: ಟಯರ್‌ ಉರಿಸಿ ರಸ್ತೆ ತಡೆ ಮಾಡುವ ವಿಚಾರ ► ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ವಾಗ್ವಾದ Read More »

ಕರಾವಳಿ

ರಾಜಕೀಯ ಪಕ್ಷಗಳ ಬಂದ್ ಕರೆ ಸರಕಾರಿ ಕಛೇರಿಗಳಿಗೂ ಅನ್ವಯವೇ..? ► ಕಛೇರಿಗೆ ಬೀಗ ಜಡಿದ ಬಿಳಿನೆಲೆ ಮತ್ತು ನೂಜಿಬಾಳ್ತಿಲ ಗ್ರಾ.ಪಂ. ಗಳು

(ನ್ಯೂಸ್ ಕಡಬ) newskadaba.com ಕಡಬ, ಸೆ.10. ಭಾರತ್ ಬಂದ್ ಗೆ ಬಿಳಿನೆಲೆ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಕಛೇರಿಯನ್ನು ಬಂದ್ ಮಾಡಿ ಬೆಂಬಲ ವ್ಯಕ್ತಪಡಿಸಿದ್ದು, ವಿಚಾರ ತಿಳಿದ ಗ್ರಾಮಸ್ಥರು ಜಮಾವಣೆಗೊಳ್ಳುತ್ತಿದ್ದಂತೆ ವಾಪಾಸ್ ತೆರೆದ ಘಟನೆ ಸೋಮವಾರದಂದು ನಡೆದಿದೆ. ಕಾಂಗ್ರೆಸ್ ನಾಯಕರು ತಮ್ಮ ರಾಜಕೀಯ ಲಾಭಕ್ಕಾಗಿ ಪಂಚಾಯತ್ ಸಿಬ್ಬಂದಿಗಳ ಮೇಲೆ ಒತ್ತಡ ಹೇರಿ ಪಂಚಾಯತನ್ನು ಬಂದ್ ಮಾಡಿಸಿದ್ದಾರೆ. ಕೊಳೆ ರೋಗದ ಆರ್ಜಿ ನೀಡಲು ಬಂದ ಕೆಲ ಗ್ರಾಮಸ್ಥರು ವಾಪಾಸು ಹೋಗಿದ್ದು ಬಳಿಕ ಗ್ರಾಮಸ್ಥರು ಜಮಾವಣೆಗೊಳ್ಳುತ್ತಿದ್ದಂತೆ ಪಂಚಾಯತ್ ತೆರೆದುಕೊಂಡಿದೆ ಎಂದು ಬಿಜೆಪಿ

ರಾಜಕೀಯ ಪಕ್ಷಗಳ ಬಂದ್ ಕರೆ ಸರಕಾರಿ ಕಛೇರಿಗಳಿಗೂ ಅನ್ವಯವೇ..? ► ಕಛೇರಿಗೆ ಬೀಗ ಜಡಿದ ಬಿಳಿನೆಲೆ ಮತ್ತು ನೂಜಿಬಾಳ್ತಿಲ ಗ್ರಾ.ಪಂ. ಗಳು Read More »

ಕರಾವಳಿ

ದೇಶದಲ್ಲಿ ದಿನಬಳಕೆಯ ವಸ್ತುಗಳು, ಔಷಧಿಗಳು ಕೈಗೆಟುಕುವ ದರದಲ್ಲಿದೆ ► ಪೆಟ್ರೋಲ್ ಬೆಲೆಯೇರಿಕೆ ವಿರುದ್ಧ ‘ಭಾರತ ಬಂದ್’ ಹಾಸ್ಯಾಸ್ಪದ: ಕೃಷ್ಣ ಶೆಟ್ಟಿ ಕಡಬ

(ನ್ಯೂಸ್ ಕಡಬ) newskadaba.com ಕಡಬ, ಸೆ.10. ರಾಷ್ಟ್ರದಲ್ಲಿ ದಿನ ಬಳಕೆಯ ವಸ್ತುಗಳ ಬೆಲೆಯು ಸಂಪೂರ್ಣ ಕಡಿಮೆಯಾಗಿದ್ದರೂ ಪೆಟ್ರೋಲ್ ಬೆಲೆ ಏರಿಕೆಯ ವಿರುದ್ಧ ಮಾತ್ರ ಕಾಂಗ್ರೆಸ್ ಭಾರತ ಬಂದ್ ಗೆ ಕರೆ ನೀಡಿರುವುದು ಹಾಸ್ಯಾಸ್ಪದ ಎಂದು ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ ಕೃಷ್ಣ ಶೆಟ್ಟಿ ವ್ಯಂಗ್ಯವಾಡಿದ್ದಾರೆ. ಪೆಟ್ರೋಲ್ ಬೆಲೆಯು ಈ ಹಿಂದೆ ಮನಮೋಹನ್ ಸಿಂಗ್ ನೇತೃತ್ವದ ಕಾಂಗ್ರೆಸ್ ಸರಕಾರ ಇದ್ದಾಗಲೂ 80 ರ ಗಡಿಯನ್ನು ದಾಟಿತ್ತು. ಆ ಸಂದರ್ಭದಲ್ಲಿ ದಿನಬಳಕೆಯ ವಸ್ತುಗಳ ಬೆಲೆಯು ಗಗನಕ್ಕೇರಿದ್ದವಾದರೂ ಇದೀಗ ಮೋದಿ ಸರಕಾರ

ದೇಶದಲ್ಲಿ ದಿನಬಳಕೆಯ ವಸ್ತುಗಳು, ಔಷಧಿಗಳು ಕೈಗೆಟುಕುವ ದರದಲ್ಲಿದೆ ► ಪೆಟ್ರೋಲ್ ಬೆಲೆಯೇರಿಕೆ ವಿರುದ್ಧ ‘ಭಾರತ ಬಂದ್’ ಹಾಸ್ಯಾಸ್ಪದ: ಕೃಷ್ಣ ಶೆಟ್ಟಿ ಕಡಬ Read More »

ಕರಾವಳಿ

ಪೆಟ್ರೋಲ್ ಬೆಲೆಯೇರಿಕೆ ಖಂಡಿಸಿ ಭಾರತ ಬಂದ್ ಹಿನ್ನೆಲೆ ► ಕಡಬ ಸಂಪೂರ್ಣ ಬಂದ್

(ನ್ಯೂಸ್ ಕಡಬ) newskadaba.com ಕಡಬ, ಸೆ.10. ಪೆಟ್ರೋಲ್ ಬೆಲೆಯೇರಿಕೆ ಖಂಡಿಸಿ ಕಾಂಗ್ರೆಸ್ ಕರೆನೀಡಿದ್ದ ಭಾರತ ಬಂದ್ ಗೆ ಕಡಬದಲ್ಲಿ ಸಂಪೂರ್ಣ ಬೆಂಬಲ ವ್ಯಕ್ತವಾಗಿದೆ. ಅಂಗಡಿ ಮಾಲಕರು ಸ್ವಯಂ ಪ್ರೇರಿತವಾಗಿ ಅಂಗಡಿ‌ ಮುಂಗಟ್ಟುಗಳನ್ನು ಮುಚ್ಚುವ ಮೂಲಕ ಬಂದ್ ಗೆ ಬೆಂಬಲ‌ ವ್ಯಕ್ತಪಡಿಸಿದ್ದಾರೆ. ಕೆಲವು ರಿಕ್ಷಾ, ಜೀಪು ಸೇರಿದಂತೆ ಟೂರಿಸ್ಟ್ ವಾಹನಗಳು ರಸ್ತೆಗಿಳಿದರೂ ಪ್ರಯಾಣಿಕರಿಲ್ಲದೆ ಪರದಾಡಿದರು. ಉಳಿದಂತೆ ಮೆಡಿಕಲ್ ಸ್ಟೋರ್, ಹಾಲು, ಪೇಪರ್ ಅಂಗಡಿಗಳು ತೆರೆದಿದ್ದವು. ಕಡಬ, ಹೊಸ್ಮಠ, ಕುಂತೂರು, ಮರ್ಧಾಳ ಸಂಪೂರ್ಣ ಬಂದ್ ಆದರೆ ನೆಟ್ಟಣ, ಆಲಂಕಾರು ಪೇಟೆಯಲ್ಲಿ

ಪೆಟ್ರೋಲ್ ಬೆಲೆಯೇರಿಕೆ ಖಂಡಿಸಿ ಭಾರತ ಬಂದ್ ಹಿನ್ನೆಲೆ ► ಕಡಬ ಸಂಪೂರ್ಣ ಬಂದ್ Read More »

ಕರಾವಳಿ
Scroll to Top