►► ? ಕವರ್ ಸ್ಟೋರಿ ? ಮಂಗಳೂರು – ಸುಬ್ರಹ್ಮಣ್ಯ ರೋಡ್ – ಬೆಂಗಳೂರು ರೈಲು ಸಂಚಾರಕ್ಕೆ ಎದುರಾದ ವಿಘ್ನ ► ಕನಿಷ್ಠ ಆರು ತಿಂಗಳುಗಳ ಕಾಲ ಸ್ಥಗಿತಗೊಳ್ಳಲಿದೆ ಈ ರೈಲು ► ರಾಜ್ಯ ರಾಜಧಾನಿಯ ಸಂಪರ್ಕಕ್ಕೆ ರಸ್ತೆ ಮಾರ್ಗವೇ ಗತಿ

(ನ್ಯೂಸ್ ಕಡಬ) newskadaba.com ಕಡಬ, ಆ.25. ಪ್ರಕೃತಿ ಸೌಂದರ್ಯದ ಕಿರೀಟವಾಗಿರುವ ಸುಬ್ರಹ್ಮಣ್ಯ ರೋಡ್ ಹಾಗೂ ಎಡಕುಮೇರಿ ನಡುವೆ ಅಲ್ಲಲ್ಲಿ ಬೃಹತ್ ಗಾತ್ರದ ಗುಡ್ಡಗಳು ನಿರಂತರವಾಗಿ ಜರಿದು ಬೀಳುತ್ತಿರುವುದರಿಂದ ಮಂಗಳೂರು – ಬೆಂಗಳೂರು ರೈಲು ಸಂಚಾರಕ್ಕೆ ವಿಘ್ನವುಂಟಾಗಿದ್ದು, ಕನಿಷ್ಠ ಆರು ತಿಂಗಳುಗಳ ಕಾಲ ರೈಲು ಸಂಚಾರ ಸ್ಥಗಿತಗೊಳ್ಳುವ ಭೀತಿ ಎದುರಾಗಿದೆ. ಸುಬ್ರಹ್ಮಣ್ಯ ರೋಡ್ ರೈಲ್ವೇ ನಿಲ್ದಾಣದಿಂದ ಸುಮಾರು 11 ಕಿ.ಮೀ. ದೂರದ ಸಿರಿಬಾಗಿಲು ಸಮೀಪ ಬೃಹತ್ ಗಾತ್ರದ ಗುಡ್ಡವೊಂದು ಕುಸಿದು ಮಾರ್ಗದ ಮಧ್ಯೆ ಬಿದ್ದ ಪರಿಣಾಮ ಹಳಿಗಳು ಹಾನಿಗೀಡಾಗಿದ್ದು, […]

►► ? ಕವರ್ ಸ್ಟೋರಿ ? ಮಂಗಳೂರು – ಸುಬ್ರಹ್ಮಣ್ಯ ರೋಡ್ – ಬೆಂಗಳೂರು ರೈಲು ಸಂಚಾರಕ್ಕೆ ಎದುರಾದ ವಿಘ್ನ ► ಕನಿಷ್ಠ ಆರು ತಿಂಗಳುಗಳ ಕಾಲ ಸ್ಥಗಿತಗೊಳ್ಳಲಿದೆ ಈ ರೈಲು ► ರಾಜ್ಯ ರಾಜಧಾನಿಯ ಸಂಪರ್ಕಕ್ಕೆ ರಸ್ತೆ ಮಾರ್ಗವೇ ಗತಿ Read More »

ಕರಾವಳಿ

ಸುಬ್ರಹ್ಮಣ್ಯ: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ.25. ಮಾನಸಿಕ ಖಿನ್ನತೆಗೊಳಗಾದ ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರದಂದು ನಿಂತಿಕಲ್ ಸಮೀಪ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಕುಕ್ಕೇಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಕಾಲೇಜಿನ ದ್ವಿತೀಯ ಬಿಬಿಎ ವಿದ್ಯಾರ್ಥಿನಿ, ನಿಂತಿಕಲ್ಲು ಬಳಿಯ ಹೇಮಳ ನಿವಾಸಿ ಗಣೇಶ್ ಎಂಬವರ ಪುತ್ರಿ ಅನಿತಾ ಎಂದು ಗುರುತಿಸಲಾಗಿದೆ. ಮೂರ್ಛೆ ರೋಗದಿಂದ ಬಳಲುತ್ತಿದ್ದ ಈಕೆ ಶುಕ್ರವಾರದಂದು ಹಾಸ್ಟೆಲ್ ನಿಂದ ಮನೆಗೆ ಆಗಮಿಸಿದ್ದು, ಇಂದು ಬೆಳಿಗ್ಗೆ ಯಾರೂ ಇಲ್ಲದಿದ್ದ ಸಮಯದಲ್ಲಿ ಡೆತ್ ನೋಟ್ ಬರೆದಿಟ್ಟು

ಸುಬ್ರಹ್ಮಣ್ಯ: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ Read More »

ಕರಾವಳಿ

ರೈತಾಪಿ ವರ್ಗಕ್ಕೆ ಗಾಯದ ಮೇಲೆ ಬರೆ ಎಳೆದ ಮಹಾ ಮಳೆ ► ನೆರೆ ನೀರು ಇಳಿದರೂ ಸಾಂಕ್ರಾಮಿಕ ರೋಗದ ಭೀತಿಯಲ್ಲಿ ನದಿಪಾತ್ರದ ಜನತೆ

(ನ್ಯೂಸ್ ಕಡಬ) newskadaba.com ಕಡಬ, ಆ.25. ಕಳೆದ ವಾರ ಧಾರಕಾರವಾಗಿ ಸುರಿದ ಮಳೆಯಿಂದಾಗಿ ನೆರೆ ನೀರಿನಿಂದ ತತ್ತರಿಸಿದ್ದ ಕುಮಾರಧಾರ ನದಿ ಪಾತ್ರದ ಜನತೆ ಕಿಂಚಿತ್ತು ನಿಟ್ಟುಸಿರು ಬಿಡುವಂತಾದರೂ ಇದೀಗ ಸಾಂಕ್ರಾಮಿಕ ರೋಗದ ಭೀತಿಯನ್ನು ಎದುರಿಸುತ್ತಿದ್ದಾರೆ.   ಮಳೆ ಸ್ವಲ್ಪ ಬಿಡುವನ್ನು ನೀಡಿದ್ದು, ನೆರೆ ನೀರು ಇಳಿಮುಖ ಕಂಡಿದೆಯಾದರೂ ಈ ಪ್ರದೇಶ ಜನತೆಯಲ್ಲಿ ನೆರೆಯೊಂದಿಗೆ ಆರೋಗ್ಯವನ್ನು ಕಾಪಾಡಿಕೊಳ್ಳುವ ಭೀತಿ ಕಾಡುತ್ತಿದೆ. ಮೇ 27 ರಂದು ಪ್ರಾರಂಭವಾದ ಮಳೆ ಬರೋಬ್ಬರಿ ಎರಡು ತಿಂಗಳಿಗೂ ಅಧಿಕ ಕಾಲ ಬಿಡುವಿಲ್ಲದೆ ಹಗಲು ರಾತ್ರಿ

ರೈತಾಪಿ ವರ್ಗಕ್ಕೆ ಗಾಯದ ಮೇಲೆ ಬರೆ ಎಳೆದ ಮಹಾ ಮಳೆ ► ನೆರೆ ನೀರು ಇಳಿದರೂ ಸಾಂಕ್ರಾಮಿಕ ರೋಗದ ಭೀತಿಯಲ್ಲಿ ನದಿಪಾತ್ರದ ಜನತೆ Read More »

ಕರಾವಳಿ

ಪುತ್ತೂರು: ಬೈಕಿನಿಂದ ರಸ್ತೆಗೆ ಬಿದ್ದು ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಆ.24. ಬೈಕಿನಿಂದ ಬಿದ್ದು ಮಹಿಳೆಯೋರ್ವರು ಮೃತಪಟ್ಟ ದಾರುಣ ಘಟನೆ ಇಲ್ಲಿಗೆ ಕಬಕ ಸಮೀಪದ ಅಳಕೆ ಮಜಲಿನಲ್ಲಿ ಶುಕ್ರವಾರದಂದು ಸಂಭವಿಸಿದೆ. ಮೃತ ಮಹಿಳೆಯನ್ನು ಉಪ್ಪಿನಂಗಡಿ ಸಮೀಪದ ಕರಾಯ ನಿವಾಸಿ ಅಶ್ರಫ್ ಎಂ.ಕೆ. ಎಂಬವರ ಪತ್ನಿ ಮುಮ್ತಾಝ್ ಪೊಯ್ಯ(33) ಎಂದು ಗುರುತಿಸಲಾಗಿದೆ. ಈಕೆ ಶುಕ್ರವಾರ ಅಪರಾಹ್ನ ಬೈಕಿನಲ್ಲಿ ತನ್ನ ಪತಿಯ ಜೊತೆಗೆ ಸಹ ಸವಾರೆಯಾಗಿ ತೆರಳುತ್ತಿದ್ದ ವೇಳೆ ಕಬಕ ಸಮೀಪ ಸವಾರ ಅಶ್ರಫ್ ರಸ್ತೆಯಲ್ಲಿನ ಗುಂಡಿಯನ್ನು ತಪ್ಪಿಸುವಾಗ ಬೈಕಿನಿಂದ ರಸ್ತೆಗೆಸೆಯಲ್ಪಟ್ಟಿದ್ದು, ಗಂಭೀರ ಗಾಯಗೊಂಡ ಈಕೆಯನ್ನು ಸ್ಥಳೀಯ

ಪುತ್ತೂರು: ಬೈಕಿನಿಂದ ರಸ್ತೆಗೆ ಬಿದ್ದು ಮಹಿಳೆ ಮೃತ್ಯು Read More »

ಕರಾವಳಿ

ನಾಳೆಯಿಂದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಬರುವ ಸಾಧ್ಯತೆ ► ಮುಂಜಾಗ್ರತಾ ಕ್ರಮ ಕೈಗೊಳ್ಳಲು ಹವಾಮಾನ ಇಲಾಖೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.24. ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಆ.25 ಶನಿವಾರದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಮುಂಜಾಗ್ರತಾ ಕ್ರಮ ಕೈಗೊಳ್ಳಲು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಪ್ರದೇಶಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಆ.28 ರವರೆಗೆ ಭಾರೀ ಮಳೆಯಾಗಲಿದ್ದು, ಬೆಳಗಾವಿ, ಬೀದರ್‌, ಗುಲ್ಬರ್ಗಾ, ಸೇರಿದಂತೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳ ಹಲವೆಡೆ ಈಗಾಗಲೇ ಸುರಿದಿರುವ

ನಾಳೆಯಿಂದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಬರುವ ಸಾಧ್ಯತೆ ► ಮುಂಜಾಗ್ರತಾ ಕ್ರಮ ಕೈಗೊಳ್ಳಲು ಹವಾಮಾನ ಇಲಾಖೆ ಎಚ್ಚರಿಕೆ Read More »

ಕರ್ನಾಟಕ

ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ 6 ಜೊತೆ ಅವಳಿ-ಜವಳಿ ವಿದ್ಯಾರ್ಥಿಗಳು ► ವಿದ್ಯಾಸಂಸ್ಥೆಯ ಇತಿಹಾಸದಲ್ಲಿ ಪ್ರಥಮ

(ನ್ಯೂಸ್ ಕಡಬ) newskadaba.com ಕಾಣಿಯೂರು, ಆ.23. ಬೆಳ್ಳಿಹಬ್ಬದ ಸಂಭ್ರಮದಲ್ಲಿರುವ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಆರು ಜೋಡಿ ಅವಳಿ-ಜವಳಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಎರಡನೇ ತರಗತಿಯಲ್ಲಿ ನೀತು-ನಿಧಿ ಹಾಗೂ ಶ್ರೀನಿಧಿ ಭಟ್-ಶ್ರೀಕಾಂತ್ ಭಟ್, ಮೂರನೇ ತರಗತಿಯಲ್ಲಿ ಅನಿಷ್ಕಾ-ಅನುಷ್ಕಾ, ಆರನೇ ತರಗತಿಯಲ್ಲಿ ಕ್ಷಮ-ಕ್ಷೇಮ, ಏಳನೇ ತರಗತಿಯಲ್ಲಿ ಮಹಮ್ಮದ್ ರೈಸ್-ಮಹಮ್ಮದ್ ರಿಜಾಸ್, ಹತ್ತನೇ ತರಗತಿಯಲ್ಲಿ ಗಗನ್-ಗೌತಮ್ ಸಹೋದರ ಸಹೋದರಿ ಜೋಡಿಗಳು ವಿದ್ಯಾಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಅವಳಿ – ಜವಳಿ ವಿದ್ಯಾರ್ಥಿಗಳು. ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಲಾ ಅಧ್ಯಾಪಕರು,

ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ 6 ಜೊತೆ ಅವಳಿ-ಜವಳಿ ವಿದ್ಯಾರ್ಥಿಗಳು ► ವಿದ್ಯಾಸಂಸ್ಥೆಯ ಇತಿಹಾಸದಲ್ಲಿ ಪ್ರಥಮ Read More »

ಕರಾವಳಿ

ರಾಮಕುಂಜ: ವ್ಯಕ್ತಿ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಆ.23. ಮಾನಸಿಕ ಅಸ್ವಸ್ಥ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಕಡಬ ಠಾಣಾ ವ್ಯಾಪ್ತಿಯ ರಾಮಕುಂಜ ಗ್ರಾಮದ ಮಾರಂಗ ಎಂಬಲ್ಲಿ ಮಂಗಳವಾರದಂದು ನಡೆದಿದೆ. ನಾಪತ್ತೆಯಾಗಿರುವ ವ್ಯಕ್ತಿಯನ್ನು ರಾಮಕುಂಜ ಗ್ರಾಮದ ಮಾರಂಗ ನಿವಾಸಿ ಪದ್ಮನಾಭ ಶೆಟ್ಟಿ (58) ಎಂದು ಗುರುತಿಸಲಾಗಿದೆ. ಇವರು ಮಂಗಳವಾರ ಸಂಜೆ ಮನೆಯಿಂದ ಹೊರ ಹೋದವರು ಹಿಂತಿರುಗಿ ಬಾರದೆ ನಾಪತ್ತೆಯಾಗಿದ್ದಾರೆ. ಅಕ್ಕಪಕ್ಕದಲ್ಲಿ ಹಾಗೂ ಸಂಬಂಧಿಕರ ಮನೆಯಲ್ಲೆಲ್ಲಾ ಹುಡುಕಾಡಿ ಪತ್ತೆಯಾಗದೆ ಇದ್ದುದರಿಂದ ಅವರ ಪತ್ನಿ ನೀಡಿರುವ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಮಕುಂಜ: ವ್ಯಕ್ತಿ ನಾಪತ್ತೆ Read More »

ಕರಾವಳಿ

ಉಪ್ಪಿನಂಗಡಿ: ಅಕ್ರಮ ಜಿಂಕೆ ಚರ್ಮ ಸಾಗಾಟ ಪತ್ತೆ ► ಕಡಬದ ಮೂವರು ಸೇರಿದಂತೆ ನಾಲ್ವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ.22. ಕಾರಿನಲ್ಲಿ ಅಕ್ರಮವಾಗಿ ಜಿಂಕೆ ಕೊಂಬುಗಳನ್ನು ಸಾಗಿಸುತ್ತಿದ್ದ ಪ್ರಕರಣವನ್ನು ಭೇದಿಸಿರುವ ಪುತ್ತೂರು ನಗರ ಹಾಗೂ ಉಪ್ಪಿನಂಗಡಿ ಠಾಣಾ ಪೊಲೀಸರು ನಾಲ್ವರನ್ನು ಬಂಧಿಸಿ, ಜಿಂಕೆ ಕೊಂಬುಗಳನ್ನು ವಶಪಡಿಸಿಕೊಂಡ ಘಟನೆ ಮಂಗಳವಾರದಂದು ನಡೆದಿದೆ. ಬಂಧಿತ ಆರೋಪಿಗಳನ್ನು ಕಡಬ ತಾಲೂಕು ಕೊಡಿಂಬಾಳ ಗ್ರಾಮದ ಕಜೆಮೂಲೆ ನಿವಾಸಿ ಪಿ.ಜೆ. ಮ್ಯಾಥ್ಯೂ ಎಂಬವರ ಪುತ್ರ ಶೈಜು(26), ಕುಟ್ರುಪ್ಪಾಡಿ ಗ್ರಾಮದ ಅಲಾರ್ಮೆ‌ ನಿವಾಸಿ ಕೆ.ಜೆ.ಅಬ್ರಹಾಂ ಎಂಬವರ ಪುತ್ರ ಸಜಿ ಎ.ಕೆ.(40), ಕುಟ್ರುಪ್ಪಾಡಿ ಗ್ರಾಮದ ಮೀನಾಡಿ ನಿವಾಸಿ ಕುಂಞಿಮೋನು‌ ಎಂಬವರ ಪುತ್ರ

ಉಪ್ಪಿನಂಗಡಿ: ಅಕ್ರಮ ಜಿಂಕೆ ಚರ್ಮ ಸಾಗಾಟ ಪತ್ತೆ ► ಕಡಬದ ಮೂವರು ಸೇರಿದಂತೆ ನಾಲ್ವರು ಆರೋಪಿಗಳ ಬಂಧನ Read More »

ಕರಾವಳಿ

ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ► ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಆ.22. ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿ ಹಲ್ಲೆ ನಡೆಸಿದ ಆರೋಪಿಯನ್ನು ಡಿಸಿಐಬಿ ಪೊಲೀಸರು ಮಂಗಳವಾರದಂದು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಬೀಟಿಕೆ ನಿವಾಸಿ ಅಬ್ದುಲ್ ರಝಾಕ್ ಎಂಬವರ ಪುತ್ರ ಮಹಮ್ಮದ್ ರಫೀಕ್(33) ಎಂದು ಗುರುತಿಸಲಾಗಿದೆ. ಆರೋಪಿಯು ಧರ್ಮಸ್ಥಳ ಠಾಣಾ ವ್ಯಾಪ್ತಿಯ ಚಾರ್ಮಾಡಿ ಎಂಬಲ್ಲಿ ಮೇ 29 ರಂದು ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿ ಹಲ್ಲೆ ನಡೆಸಿದ್ದನು. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ 108/18 u/s341,504,506,326 with 75 JB

ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ► ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ Read More »

ಕರಾವಳಿ

ಕೊಡಗು – ಕೇರಳ ಮಳೆಹಾನಿ ಸಂತ್ರಸ್ತರಿಗೆ ನೆರವು ► ಜೇಸಿಐ ಕಡಬ ಕದಂಬ ವತಿಯಿಂದ ಸಂಗ್ರಹಿಸಲಾದ ನಗದು, ವಸ್ತುಗಳ ಹಸ್ತಾಂತರ

(ನ್ಯೂಸ್ ಕಡಬ) newskadaba.com ಕಡಬ, ಆ.21. ಕೊಡಗು ಹಾಗೂ ಕೇರಳ ರಾಜ್ಯದಲ್ಲಿನ ಮಳೆಹಾನಿ ಸಂತ್ರಸ್ತರಿಗೆ ನೆರವಾಗುವ ಉದ್ದೇಶದಿಂದ ಜೇಸಿಐ ಕಡಬ ಕದಂಬ ಹಾಗೂ ಜೇಸಿಐ ಕಡಬ ಕದಂಬ ಚಾರಿಟೆಬಲ್ ಟ್ರಸ್ಟ್(ರಿ.) ವತಿಯಿಂದ ಸಂಗ್ರಹಿಸಲಾದ ನಗದು ಹಾಗೂ ದಿನ ಬಳಕೆಯ ವಸ್ತುಗಳನ್ನು ಸಂಪಾಜೆಯ ಸಂತ್ರಸ್ತರ ಪರಿಹಾರ ಕೇಂದ್ರಕ್ಕೆ ಹಸ್ತಾಂತರಿಸಲಾಯಿತು. ಜೇಸಿ ಸದಸ್ಯರು ಹಾಗೂ ದಾನಿಗಳಿಂದ ಸಂಗ್ರಹಿಸಿದ 50 ಸಾವಿರದ 1 ರೂ. ನಗದನ್ನು ಪರಿಹಾರ ನಿಧಿಗೆ ನೀಡುವುದರೊಂದಿಗೆ ಆಹಾರ ಹಾಗೂ ದಿನ ಬಳಕೆಯ ವಸ್ತುಗಳಾದ 25 ಚೀಲ ಅಕ್ಕಿ,

ಕೊಡಗು – ಕೇರಳ ಮಳೆಹಾನಿ ಸಂತ್ರಸ್ತರಿಗೆ ನೆರವು ► ಜೇಸಿಐ ಕಡಬ ಕದಂಬ ವತಿಯಿಂದ ಸಂಗ್ರಹಿಸಲಾದ ನಗದು, ವಸ್ತುಗಳ ಹಸ್ತಾಂತರ Read More »

ರಾಷ್ಟ್ರೀಯ ನ್ಯೂಸ್
Scroll to Top