ಕರಾವಳಿಯಲ್ಲಿ ಮುಂದುವರಿದ ಮಳೆಯ ಅಬ್ಬರ ► ನಾಳೆ ಶಾಲಾ ಕಾಲೇಜುಗಳಿಗೆ ಮತ್ತೆ ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.13. ಕರಾವಳಿಯಲ್ಲಿ ಮಳೆಯ ಅಬ್ಬರ ಜೋರಾಗಿರುವ ಹಿನ್ನೆಲೆಯಲ್ಲಿ ಆಗಸ್ಟ್ 14ರಂದು ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಡಾ.ಸಸಿಕಾಂತ್ ಸೆಂಥಿಲ್ ರಜೆ ಘೋಷಿಸಿ ಆದೇಶಿಸಿದ್ದಾರೆ. ಮಳೆಯ ಅಬ್ಬರ ಜೋರಾಗಿದ್ದು, ನದಿ ತೊರೆಗಳು ತುಂಬಿ ತುಳುಕುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಮಂಗಳವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟನೆ ತಿಳಿಸಿದೆ.

ಕರಾವಳಿಯಲ್ಲಿ ಮುಂದುವರಿದ ಮಳೆಯ ಅಬ್ಬರ ► ನಾಳೆ ಶಾಲಾ ಕಾಲೇಜುಗಳಿಗೆ ಮತ್ತೆ ರಜೆ Read More »

ಕರಾವಳಿ

ಇಂದು ಧರ್ಮಸ್ಥಳ, ಸುಬ್ರಹ್ಮಣ್ಯಕ್ಕೆ ಆಗಮಿಸಲಿರುವ ಮುಖ್ಯಮಂತ್ರಿ ಕುಮಾರಸ್ವಾಮಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.13. ರಾಜ್ಯದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ಇಂದು ಧರ್ಮಸ್ಥಳ ಹಾಗೂ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಆ.13 ರಂದು ಮಧ್ಯಾಹ್ನ 1:30ಕ್ಕೆ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯಿಂದ ಹೊರಟು ರಸ್ತೆಯ ಮೂಲಕ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳಕ್ಕೆ ಸಂಜೆ 4:30ಕ್ಕೆ ಮುಖ್ಯಮಂತ್ರಿ ಆಗಮಿಸಲಿದ್ದಾರೆ. ಮಂಜುನಾಥ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆಯಲಿದ್ದಾರೆ. ಸಂಜೆ 6 ಗಂಟೆಗೆ ಧರ್ಮಸ್ಥಳದಿಂದ ಹೊರಟು ರಾತ್ರಿ 7 ಗಂಟೆಗೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ. ಆ.14 ರಂದು

ಇಂದು ಧರ್ಮಸ್ಥಳ, ಸುಬ್ರಹ್ಮಣ್ಯಕ್ಕೆ ಆಗಮಿಸಲಿರುವ ಮುಖ್ಯಮಂತ್ರಿ ಕುಮಾರಸ್ವಾಮಿ Read More »

ಕರ್ನಾಟಕ

ಹೊಸ್ಮಠ ಸೇತುವೆಯ ಮೇಲೆ ನೆರೆ ನೀರು ಇರುವಾಗಲೇ ವಾಹನ ದಾಟಿಸಿದ ಸರ್ಕಲ್ ಇನ್ಸ್‌ಪೆಕ್ಟರ್ ► ಪೊಲೀಸರಿಗೊಂದು ನ್ಯಾಯ, ನಮಗೊಂದು ನ್ಯಾಯವೇ..?ಸಾರ್ವಜನಿಕರ ಆಕ್ರೋಶ..!!

ಕಡಬ: ಹೊಸಮಠ ಸೇತುವೆಯ ಮೇಲೆ ನೆರೆ ನೀರು ಹರಿಯುತ್ತಿದ್ದ ಸಂದರ್ಭದಲ್ಲಿ ಸೇತುವೆ ಬಳಿ ಕಾವಲು ನಿರತರಾಗಿದ್ದ ಗೃಹ ರಕ್ಷಕ ಸಿಬ್ಬಂದಿಗಳನ್ನು ದಬಾಯಿಸಿ, ಮುಚ್ಚಲಾಗಿದ್ದ ರಕ್ಷಣಾ ಗೇಟುಗಳನ್ನು ತೆರೆದು ಪುತ್ತೂರು ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕರು ಅಪಾಯಕಾರಿ ರೀತಿಯಲ್ಲಿ ತನ್ನ ಇಲಾಖಾ ವಾಹನವನ್ನು ಸೇತುವೆಯ ಮೇಲಿನ ನೆರೆ ನೀರಿನಲ್ಲಿ ದಾಟಿಸಿದ ಘಟನೆ ಆ.12ರಂದು ಸಂಜೆ 6.30ರ ಸುಮಾರಿಗೆ ಸಂಭವಿಸಿದೆ. ರವಿವಾರ ಮಧ್ಯಾಹ್ನದಿಂದಲೇ ಸೇತುವೆಯ ಮೇಲೆ ನೆರೆ ನೀರು ಹರಿಯುತ್ತಿದ್ದುದರಿಂದ ಯಾವುದೇ ವಾಹನಗಳು ಸೇತುವೆ ಮೇಲೆ ಸಂಚರಿಸಿ ಅವಘಡ ಸಂಭವಿಸಬಾರದೆಂಬ

ಹೊಸ್ಮಠ ಸೇತುವೆಯ ಮೇಲೆ ನೆರೆ ನೀರು ಇರುವಾಗಲೇ ವಾಹನ ದಾಟಿಸಿದ ಸರ್ಕಲ್ ಇನ್ಸ್‌ಪೆಕ್ಟರ್ ► ಪೊಲೀಸರಿಗೊಂದು ನ್ಯಾಯ, ನಮಗೊಂದು ನ್ಯಾಯವೇ..?ಸಾರ್ವಜನಿಕರ ಆಕ್ರೋಶ..!! Read More »

ಕರ್ನಾಟಕ

ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ ► ನಾಳೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.12. ಕಳೆದೆರಡು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 13ರಂದು ದ.ಕ. ಜಿಲ್ಲೆಯ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಡಾ.ಸಸಿಕಾಂತ್ ಸೆಂಥಿಲ್ ರಜೆ ಘೋಷಿಸಿ ಆದೇಶಿಸಿದ್ದಾರೆ. ಮಳೆಯ ಅಬ್ಬರ ಜೋರಾಗಿದ್ದು, ನದಿ ತೊರೆಗಳು ತುಂಬಿ ತುಳುಕುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟನೆ ತಿಳಿಸಿದೆ.

ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ ► ನಾಳೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ Read More »

ಕರಾವಳಿ

ಮಂಡೆಕರ: ರಬ್ಬರ್ ನಿಗಮದಿಂದ ರಸ್ತೆಗೆ ಅಡ್ಡಿ – ನ್ಯಾಯಾಲಯ ತಡೆಯಾಜ್ಞೆ ► ತಡೆಯಾಜ್ಞೆಯ ನಡುವೆಯೂ ರಸ್ತೆಗೆ ಅಡ್ಡಿಪಡಿಸಿ ಬೇಲಿ ನಿರ್ಮಾಣದ ಆರೋಪ

(ನ್ಯೂಸ್ ಕಡಬ) newskadaba.com ಕಡಬ, ಆ.12. ಐತ್ತೂರು ಗ್ರಾಮದ ಮಂಡೆಕರ ಎಂಬಲ್ಲಿ ಕರ್ನಾಟಕ ಅರಣ್ಯ ಅಭಿವೃದ್ದಿ ನಿಗಮದ ವತಿಯಿಂದ ರಸ್ತೆ ಬಂದ್ ಮಾಡಿ, ವಿದ್ಯುತ್ ಬೇಲಿ ಅಳವಡಿಕೆಗೆ ಪುತ್ತೂರು ಜೆ.ಎಂ.ಎಫ್.ಸಿ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ತಡೆಯಾಜ್ಞೆ ಇದ್ದರೂ ಬೇಲಿ ನಿರ್ಮಾಣ ಕಾಮಗಾರಿಯನ್ನು ನಿಗಮ ಮಾಡುತ್ತಿದೆ, ಅಲ್ಲದೆ ಸರಕಾರಿ ಜಾಗದಲ್ಲಿರುವ ರಸ್ತೆಯನ್ನು ಬಂದ್ ಮಾಡಿ ನೆಡುತೋಪು ನಿರ್ಮಾಣ ಮಾಡಲಾಗುತ್ತಿದೆ, ಇದನ್ನು ಆಕ್ಷೇಪಿಸಿರುವುದಕ್ಕೆ ನಿಗಮದ ಅಧಿಕಾರಿಗಳು ತನ್ನ ಮೇಲೆ ವೃಥಾ ದೂರು ದಾಖಲು ಮಾಡುತ್ತಿದ್ದಾರೆ ಎಂದು ಮಂಡೆಕರ ನಾಗಪ್ಪ ಎಂಬವರು

ಮಂಡೆಕರ: ರಬ್ಬರ್ ನಿಗಮದಿಂದ ರಸ್ತೆಗೆ ಅಡ್ಡಿ – ನ್ಯಾಯಾಲಯ ತಡೆಯಾಜ್ಞೆ ► ತಡೆಯಾಜ್ಞೆಯ ನಡುವೆಯೂ ರಸ್ತೆಗೆ ಅಡ್ಡಿಪಡಿಸಿ ಬೇಲಿ ನಿರ್ಮಾಣದ ಆರೋಪ Read More »

ಕರ್ನಾಟಕ

ಕಡಬ: ಮೊಬೈಲ್ ಮೆಸೇಜ್ ನಂಬಿ ಮೋಸ ಹೋದ ಮಹಿಳೆಯಿಂದ ಪ್ರಧಾನಿಗೆ ದೂರು ► ಪ್ರಧಾನಿ ಕಾರ್ಯಾಲಯದಿಂದ ಕಡಬ ಠಾಣೆಗೆ ತನಿಖೆಗೆ ಸೂಚನೆ

(ನ್ಯೂಸ್ ಕಡಬ) newskadaba.com ಕಡಬ, ಆ.12. ಮೊಬೈಲ್ ಮೆಸೇಜ್ ನಂಬಿ ಕಾರು ಸಿಗುತ್ತದೆ ಎಂದು ಹಣ ತೆತ್ತು ಮೋಸ ಹೋದ ಮಹಿಳೆಯೊಬ್ಬರು ಪ್ರಧಾನಿ ನರೇಂದ್ರ ಮೋದಿಯವರಿಗೆ ದೂರು ನೀಡಿ, ಪ್ರಧಾನಿ ಕಾರ್ಯಾಲಯದಿಂದ ಕಡಬ ಠಾಣೆಗೆ ಸೂಚನೆ ಬಂದ ಮೇರೆಗೆ ಪೋಲೀಸರು ಪ್ರಕರಣ ದಾಖಲಿಸಿದ ಘಟನೆ ಶನಿವಾರದಂದು ನಡೆದಿದೆ. ಕಡಬ ಸಮೀಪದ ಕೋಡಿಂಬಾಳ ನಿವಾಸಿ ನಾಗರತ್ನ ಸುಮಾರು 25900 ಕಳಕೊಂಡು ಮೋಸ ಹೋಗಿರುವ ಅರಿವಾದ ಬಳಿಕ ಪ್ರಧಾನಮಂತ್ರಿಯವರಿಗೆ ದೂರು ನೀಡಿದ್ದಾರೆ. ಕಳೆದ ಎಪ್ರಿಲ್ ತಿಂಗಳಲ್ಲಿ ಆದ ಮೋಸಕ್ಕೆ ಇತ್ತೀಚೆಗೆ

ಕಡಬ: ಮೊಬೈಲ್ ಮೆಸೇಜ್ ನಂಬಿ ಮೋಸ ಹೋದ ಮಹಿಳೆಯಿಂದ ಪ್ರಧಾನಿಗೆ ದೂರು ► ಪ್ರಧಾನಿ ಕಾರ್ಯಾಲಯದಿಂದ ಕಡಬ ಠಾಣೆಗೆ ತನಿಖೆಗೆ ಸೂಚನೆ Read More »

ಕರಾವಳಿ

ತೀವ್ರ ಮಳೆಯ ಹಿನ್ನೆಲೆ ► ಹೊಸ್ಮಠ ಸೇತುವೆ ಮತ್ತೆ ಮುಳುಗಡೆ

(ನ್ಯೂಸ್ ಕಡಬ) newskadaba.com ಕಡಬ, ಆ.12. ಕಳೆದ ಕೆಲವು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹೊಸ್ಮಠ ಸೇತುವೆಯು ಭಾನುವಾರದಂದು ಮತ್ತೆ ಮುಳುಗಿದ್ದು, ಸಂಚಾರದಲ್ಲಿ ತಡೆಯುಂಟಾಗಿದೆ. ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದು, ಪ್ರಯಾಣಿಕರು ಇಚಿಲಂಪಾಡಿ – ಪೆರಿಯಶಾಂತಿ ರಸ್ತೆಯ ಮೂಲಕ ಸಂಚರಿಸುವಂತಾಗಿದೆ. ಸೇತುವೆಯ ಇಕ್ಕೆಡೆಗಳಲ್ಲೂ ಕಡಬ ಪೊಲೀಸರು ಹಾಗೂ ಗೃಹರಕ್ಷಕ ದಳದ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ‌. ತೀವ್ರ ಮಳೆಯ ಹಿನ್ನೆಲೆಯಲ್ಲಿ ಬುಧವಾರದಿಂದ ಗುರುವಾರ ರಾತ್ರಿಯ ವರೆಗೆ ಹೊಸ್ಮಠ ಸೇತುವೆಯು ಎರಡು ದಿನಗಳ ಕಾಲ ಮುಳುಗಡೆಗೊಂಡಿದ್ದು, ಇದೀಗ ಮತ್ತೆ ಮುಳುಗಿದೆ.

ತೀವ್ರ ಮಳೆಯ ಹಿನ್ನೆಲೆ ► ಹೊಸ್ಮಠ ಸೇತುವೆ ಮತ್ತೆ ಮುಳುಗಡೆ Read More »

ಕರಾವಳಿ

ಶರವೂರು: ಅಕ್ರಮ ಜುಗಾರಿ ಅಡ್ಡೆಗೆ ದಾಳಿ ► ಆರು ಮಂದಿಯ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಆ.12. ತಾಲೂಕಿನ ಆಲಂಕಾರು ಗ್ರಾಮದ ಶರವೂರು ಎಂಬಲ್ಲಿನ ಗೇರು ತೋಪಿನಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಜುಗಾರಿ ಅಡ್ಡೆಗೆ ಶನಿವಾರ ಸಂಜೆ ದಾಳಿ ನಡೆಸಿರುವ ಕಡಬ ಪೋಲೀಸರು ಆರು ಜನರನ್ನು ಬಂಧಿಸಿದ್ದಾರೆ.   ಖಚಿತ ಮಾಹಿತಿ ಆಧಾರದಲ್ಲಿ ಕಡಬ ಎಸ್‍ಐ ಪ್ರಕಾಶ್ ದೇವಾಡಿಗ ಅವರ ನೇತೃತ್ವದಲ್ಲಿ ಪೋಲೀಸರು ದಾಳಿ ನಡೆಸಿ ಆಲಂಕಾರಿನ ರಘುನಾಥ(42), ವಸಂತ ಹಳೆನೇರೆಂಕಿ(30), ರವಿ ಕೊಂಡಾಡಿಕೊಪ್ಪ(35), ಮತ್ತಪ್ಪ ಶರವೂರು(57), ಜಿನ್ನಪ್ಪ ಕೊಂಡಾಡಿಕೊಪ್ಪ(62), ಲೋಲಾಕ್ಷ ಶರವೂರು(49) ಅವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಜುಗಾರಿ ಆಟಕ್ಕೆ

ಶರವೂರು: ಅಕ್ರಮ ಜುಗಾರಿ ಅಡ್ಡೆಗೆ ದಾಳಿ ► ಆರು ಮಂದಿಯ ಬಂಧನ Read More »

ಕರಾವಳಿ

ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ ► ನಾಳೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.10. ಕಳೆದೆರಡು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 11ರಂದು ದ.ಕ. ಜಿಲ್ಲೆಯ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಡಾ.ಸಸಿಕಾಂತ್ ಸೆಂಥಿಲ್ ರಜೆ ಘೋಷಿಸಿ ಆದೇಶಿಸಿದ್ದಾರೆ. ಮಳೆಯ ಅಬ್ಬರ ಜೋರಾಗಿದ್ದು, ನದಿ ತೊರೆಗಳು ತುಂಬಿ ತುಳುಕುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟನೆ ತಿಳಿಸಿದೆ.

ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ ► ನಾಳೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ Read More »

ಕರಾವಳಿ

ಹೊಸ್ಮಠ: ಇಳಿಕೆಯಾದ ನೆರೆ ನೀರಿನ ಮಟ್ಟ ► ಸೇತುವೆಯಲ್ಲಿ ಸಂಚಾರ ಪುನರಾರಂಭ

(ನ್ಯೂಸ್ ಕಡಬ) newskadaba.com ಕಡಬ, ಆ.10. ಕಳೆದೆರಡು‌ ದಿನಗಳಿಂದ ಮುಳುಗಡೆಗೊಂಡು ಸಂಚಾರಕ್ಕೆ ತಡೆಯಾಗಿದ್ದ ಹೊಸ್ಮಠ ಮುಳುಗು ಸೇತುವೆಯ ಮೇಲಿನ ನೆರೆ ನೀರು ಇಳಿಕೆಯಾಗಿದ್ದು, ಸಂಚಾರ ಪುನರಾರಂಭಗೊಂಡಿದೆ. ಶುಕ್ರವಾರ ಬೆಳಿಗ್ಗೆ ಸೇತುವೆಯ ಮೇಲೆ ನೀರಿನ ಮಟ್ಟ ಕಡಿಮೆಯಾಗಿದ್ದು, ಯಾವ ಕ್ಷಣದಲ್ಲಿ ಮತ್ತೆ ನೀರು ಏರಿಕೆಯಾಗಿ ಸಂಚಾರಕ್ಕೆ ತಡೆಯಾಗುವುದೋ ಎಂಭ ಭೀತಿ ಪ್ರಯಾಣಿಕರನ್ನು ಕಾಡುತ್ತಿದೆ.

ಹೊಸ್ಮಠ: ಇಳಿಕೆಯಾದ ನೆರೆ ನೀರಿನ ಮಟ್ಟ ► ಸೇತುವೆಯಲ್ಲಿ ಸಂಚಾರ ಪುನರಾರಂಭ Read More »

ಕರಾವಳಿ
Scroll to Top