ಗಂಡಿಬಾಗಿಲಿನಲ್ಲಿ ಭೂಕುಸಿತ ► ನೀರಿನಲ್ಲಿ ಕೊಚ್ಚಿ ಹೋದ ರಬ್ಬರ್ ಮರಗಳು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ.09. ಭೂಕುಸಿತದಿಂದಾಗಿ ಬೆಟ್ಟ ಜರಿದು, ನೀರು ಉಕ್ಕಿ ಹರಿದ ಪರಿಣಾಮ ನೂರಾರು ರಬ್ಬರ್ ಮರಗಳು ನೀರಿನಲ್ಲಿ ಕೊಚ್ಚಿ ಹೋಗಿದ್ದು, ಎರಡು ಮನೆಗಳಿಗೆ ಹಾನಿಯಾದ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಗಂಡಿಬಾಗಿಲಿನಲ್ಲಿ ಗುರುವಾರದಂದು ಸಂಭವಿಸಿದೆ. ಗಂಡಿಬಾಗಿಲು ನಿವಾಸಿ ರೆನ್ನಿ ಎಂಬವರು ತನ್ನ ಕುಟುಂಬ ಸಮೇತರಾಗಿ ಗುರುವಾರ ಬೆಳಿಗ್ಗೆ ಮನೆಯಲ್ಲಿದ್ದ ವೇಳೆ ಭಾರೀ ಶಬ್ದ ಕೇಳಿ ಬಂದ ಹಿನ್ನೆಲೆಯಲ್ಲಿ ಹೊರಗೋಡಿ ಬಂದು ನೋಡಿದಾಗ ಇಡೀ ಗುಡ್ಡವೇ ಕುಸಿದು ನೀರು ಹರಿಯುವುದನ್ನು ಕಂಡು ಅಪಾಯದ […]

ಗಂಡಿಬಾಗಿಲಿನಲ್ಲಿ ಭೂಕುಸಿತ ► ನೀರಿನಲ್ಲಿ ಕೊಚ್ಚಿ ಹೋದ ರಬ್ಬರ್ ಮರಗಳು Read More »

ಕರಾವಳಿ

ಕಲ್ಲಾಜೆ: 407 ಟೆಂಪೋ ಪಲ್ಟಿ ► ಇಬ್ಬರು ಮೃತ್ಯು, ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಆ.09. ಗೂಡ್ಸ್ ಟೆಂಪೋವೊಂದು ಪಲ್ಟಿಯಾದ ಪರಿಣಾಮ ಇಬ್ಬರು ಮೃತಪಟ್ಟು ಹಲವರು ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಲ್ಲಾಜೆ ಎಂಬಲ್ಲಿ ಗುರುವಾರದಂದು ನಡೆದಿದೆ. ಮರ್ಧಾಳದಿಂದ ಸುಬ್ರಹ್ಮಣ್ಯ ಕಡೆಗೆ ಕಾಂಕ್ರೀಟ್ ಮಿಲ್ಲರ್ ಸಾಗಿಸುತ್ತಿದ್ದ 407 ಟೆಂಪೋ ಕಲ್ಲಾಜೆ ಸೇತುವೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಎಡಬದಿಗೆ ಮಗುಚಿ ಬಿದ್ದಿದೆ. ಘಟನೆಯಲ್ಲಿ ಟೆಂಪೋದ ಒಳಗಿದ್ದ ಓರ್ವ ಮಹಿಳೆ ಹಾಗೂ ಓರ್ವ ಪುರುಷ ಸೇರಿದಂತೆ ಇಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು

ಕಲ್ಲಾಜೆ: 407 ಟೆಂಪೋ ಪಲ್ಟಿ ► ಇಬ್ಬರು ಮೃತ್ಯು, ಹಲವರಿಗೆ ಗಾಯ Read More »

ಕರಾವಳಿ

ಮಹಾಮಳೆಗೆ ಮುಳುಗಿದ ಉದನೆ ತೂಗು ಸೇತುವೆ ► ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಜನಸಾಮಾನ್ಯರ ಪರದಾಟ

(ನ್ಯೂಸ್ ಕಡಬ) newskadaba.com ಕಡಬ, ಆ.09. ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಉದನೆ ತೂಗು ಸೇತುವೆಯು ಗುಂಡ್ಯ ಕೆಂಪುಹೊಳೆಯ ನೆರೆ ನೀರಿನಿಂದ ಆವೃತವಾಗಿದ್ದು, ಜನ ಸಂಚಾರ ಸ್ಥಗಿತಗೊಂಡಿದೆ. ನೆರೆ ನೀರಿನ ಮಟ್ಟ ಏರಿಕೆಯಾಗಿದ್ದು, ಉದನೆ ಪೇಟೆಗೆ ನೀರು ನುಗ್ಗಿರುವುದರಿಂದ ಜನಜೀವನ ಅಸ್ತವ್ಯಸ್ತ ಗೊಂಡಿದೆ. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ, ನೇಲ್ಯಡ್ಕ ಹಾಗೂ ಶಿರಾಡಿಯಲ್ಲಿ ನೆರೆ ನೀರು ರಸ್ತೆಗೆ ಬಂದುದರಿಂದ ಹೆದ್ದಾರಿ ತಡೆಯುಂಟಾಗಿದೆ. ತೂಗು ಸೇತುವೆ ಮುಳುಗಡೆಯಿಂದಾಗಿ ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಜನಸಾಮಾನ್ಯರು ಪರದಾಡುವಂತಾಗಿದೆ.

ಮಹಾಮಳೆಗೆ ಮುಳುಗಿದ ಉದನೆ ತೂಗು ಸೇತುವೆ ► ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಜನಸಾಮಾನ್ಯರ ಪರದಾಟ Read More »

ಕರಾವಳಿ

ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಗೆ ನುಗ್ಗಿದ ನೆರೆನೀರು ► ರಸ್ತೆ ತಡೆಯಿಂದಾಗಿ ಕಿ.ಮೀ. ಗಟ್ಟಲೆ ಸಾಲುಗಟ್ಟಿ‌ ನಿಂತ ವಾಹನಗಳು ► ಉದನೆ ಪೇಟೆ, ಅಡ್ಡಹೊಳೆ ಕಾಲನಿ ಜಲಾವೃತ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ.09. ನಿನ್ನೆಯಿಂದ‌ ಸುರಿಯುತ್ತಿರುವ ಭಾರೀ ಮಳೆಗೆ ನೆರೆ ನೀರಿನ ಪ್ರವಾಹ ಹೆಚ್ಚಾಗಿದ್ದು, ನೆರೆ‌ ನೀರು ರಾಷ್ಟ್ರೀಯ ಹೆದ್ದಾರಿಗೆ ಬಂದು ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ತಡೆ ಉಂಟಾಗಿದೆ. ಕೆಂಪುಹೊಳೆಯಲ್ಲಿ ನೀರಿನ ಹರಿವು ಹೆಚ್ಚಾಗಿರುವುದರಿಂದ ಉದನೆ ಪೇಟೆ, ಶಿರಾಡಿ ಹಾಗೂ ನೇಲ್ಯಡ್ಕ ಪರಿಸರದಲ್ಲಿ ರಾಷ್ಟ್ರೀಯ ಹೆದ್ದಾರಿಗೆ ನೆರೆ ನೀರು ನುಗ್ಗಿದೆ. ಪರಿಣಾಮ ವಾಹನಗಳು ಮುಂದೆ ಸಾಗಲಾರದೆ ಅಲ್ಲಲ್ಲಿ ಕಿ.ಮೀ. ಗಟ್ಟಲೆ ಸಾಲು ನಿಂತಿವೆ. ಅಡ್ಡಹೊಳೆ ಬಳಿ ದಲಿತ ಕಾಲೋನಿಗೆ ನೆರೆ

ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಗೆ ನುಗ್ಗಿದ ನೆರೆನೀರು ► ರಸ್ತೆ ತಡೆಯಿಂದಾಗಿ ಕಿ.ಮೀ. ಗಟ್ಟಲೆ ಸಾಲುಗಟ್ಟಿ‌ ನಿಂತ ವಾಹನಗಳು ► ಉದನೆ ಪೇಟೆ, ಅಡ್ಡಹೊಳೆ ಕಾಲನಿ ಜಲಾವೃತ Read More »

ಕರ್ನಾಟಕ

ಮೂರು ವರ್ಷಗಳ ಹಿಂದಿನ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ► ಅಂತಿಮ ವರದಿ ಸಲ್ಲಿಸಲಾಗಿದ್ದ ಪ್ರಕರಣಕ್ಕೆ ಮರುಜೀವ ನೀಡಿದ ಉಪ್ಪಿನಂಗಡಿ ಪೊಲೀಸರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ.08. ಇಬ್ಬರು ಆರೋಪಿಗಳನ್ನು ಬಂಧಿಸಿ ಮೂರು ವರ್ಷಗಳ ಹಿಂದೆ ನಡೆದ ಕಳ್ಳತನ ಪ್ರಕರಣವನ್ನು ಬೇಧಿಸುವ ಮೂಲಕ ನ್ಯಾಯಾಲಯದಲ್ಲಿ `ಸಿ’ ಅಂತಿಮ ವರದಿ ಸಲ್ಲಿಸಲಾಗಿದ್ದ ಪ್ರಕರಣವೊಂದಕ್ಕೆ ಮರುಜೀವ ನೀಡುವುದರೊಂದಿಗೆ ಪೊಲೀಸ್ ಇಲಾಖೆಯ ಕಾರ್ಯವೈಖರಿಯನ್ನು ಉಪ್ಪಿನಂಗಡಿ ಪೊಲೀಸರು ಸಾಬೀತುಪಡಿಸಿದ್ದಾರೆ. ನೆಲ್ಯಾಡಿ ಸಮೀಪದ ಗೋಳಿತೊಟ್ಟು ಗ್ರಾಮದ ಹೊಸಮನೆ ನಿವಾಸಿ ಕುಂಞಲಿ ಅಬ್ದುಲ್ ನಾಸೀರ್ ಎಂಬವರ ಮನೆಯಲ್ಲಿ 2015 ಡಿಸೆಂಬರ್ 03 ರಂದು ಲಕ್ಷಾಂತರ ರೂಪಾಯಿ ನಗ- ನಗದು ಕಳ್ಳತನ ನಡೆದಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ಉಪ್ಪಿನಂಗಡಿ ಪೊಲೀಸರು

ಮೂರು ವರ್ಷಗಳ ಹಿಂದಿನ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ► ಅಂತಿಮ ವರದಿ ಸಲ್ಲಿಸಲಾಗಿದ್ದ ಪ್ರಕರಣಕ್ಕೆ ಮರುಜೀವ ನೀಡಿದ ಉಪ್ಪಿನಂಗಡಿ ಪೊಲೀಸರು Read More »

ಕರ್ನಾಟಕ

ನೇರಳಕಟ್ಟೆ: ಚಲಿಸುತ್ತಿದ್ದ ಬಸ್ ಗೆ ಹಿಂದಿನಿಂದ ಕಾರು ಢಿಕ್ಕಿ ► ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಆ.08. ಚಲಿಸುತ್ತಿದ್ದ ಬಸ್ಸಿಗೆ ಹಿಂದಿನಿಂದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಬುಧವಾರ ರಾತ್ರಿ ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ನೇರಳಕಟ್ಟೆ ಸಮೀಪ ಸಂಭವಿಸಿದೆ. ಮಂಗಳೂರಿನಿಂದ ಪುತ್ತೂರಿಗೆ ತೆರಳುತ್ತಿದ್ದ ಮಹೇಶ್ ಸಂಸ್ಥೆಯ ಖಾಸಗಿ ಬಸ್ ನೇರಳಕಟ್ಟೆ ಸಮೀಪದ ಗಣೇಶ ನಗರ ಎಂಬಲ್ಲಿ ತಲುಪಿದಾಗ ಮಾರುತಿ ಆಲ್ಟೋ ಕಾರು ಹಿಂದಿನಿಂದ ಢಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಗಾಯಗೊಂಡಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಕಾರು ಸಂಪೂರ್ಣ

ನೇರಳಕಟ್ಟೆ: ಚಲಿಸುತ್ತಿದ್ದ ಬಸ್ ಗೆ ಹಿಂದಿನಿಂದ ಕಾರು ಢಿಕ್ಕಿ ► ಇಬ್ಬರಿಗೆ ಗಾಯ Read More »

ಕರಾವಳಿ

ಸುಳ್ಯ: ಹೆದ್ದಾರಿ ಮಧ್ಯದ ಬೃಹತ್ ಗುಂಡಿ ಮುಚ್ಚಿದ ಪೊಲೀಸ್ ಅಧಿಕಾರಿ ► ಲಾಠಿ ಹಿಡಿಯುವ ಕೈ ಹಾರೆ ಹಿಡಿದಾಗ ಹರಿದು ಬಂತು ಪ್ರಶಂಸೆಯ ಸುರಿಮಳೆ

(ನ್ಯೂಸ್ ಕಡಬ) newskadaba.com ಸುಳ್ಯ, ಆ.08. ಲಾಠಿ ಹಿಡಿಯುವ ಕೈ ಹಾರೆ ಹಿಡಿದು ರಸ್ತೆಯಲ್ಲಿನ ಬೃಹತ್ ಹೊಂಡವೊಂದನ್ನು ಮುಚ್ಚಿದ ಘಟನೆ ಸುಳ್ಯದಲ್ಲಿ ಬುಧವಾರದಂದು ನಡೆದಿದೆ. ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ಸುಳ್ಯದಿಂದ ಸಂಪಾಜೆಯ ಮಧ್ಯೆ ಬರುವ ಪೆರಾಜೆಯಲ್ಲಿ ಅನೇಕ ದಿನಗಳಿಂದ ಮರಣಗುಂಡಿಯೊಂದು ಬಾಯ್ದೆರೆದಿತ್ತು. ಸ್ಪಂದಿಸಬೇಕಾಗಿದ್ದವರು ಸುಮ್ಮನಿದ್ದುದರಿಂದ ಪ್ರಯಾಣಿಕರು ಕಷ್ಟ ಪಡುತ್ತಿದ್ದರು. ಸಂಚಾರದಲ್ಲಿ ಸಂಚಕಾರ ಎದುರಾಗಿರುವುದನ್ನರಿತ ಸುಳ್ಯ ಠಾಣಾ ಸಬ್ ಇನ್ಸ್‌ಪೆಕ್ಟರ್ ಮಂಜುನಾಥ್ ಸ್ವತಃ ಕೈಯಲ್ಲಿ ಹಾರೆ ಹಿಡಿದು ಕಾರ್ಯಾಚರಣೆಗೆ ಇಳಿದಿದ್ದಾರೆ. ಲಾಠಿ ಹಿಡಿಯುವ ಕೈ ಹಾರೆ

ಸುಳ್ಯ: ಹೆದ್ದಾರಿ ಮಧ್ಯದ ಬೃಹತ್ ಗುಂಡಿ ಮುಚ್ಚಿದ ಪೊಲೀಸ್ ಅಧಿಕಾರಿ ► ಲಾಠಿ ಹಿಡಿಯುವ ಕೈ ಹಾರೆ ಹಿಡಿದಾಗ ಹರಿದು ಬಂತು ಪ್ರಶಂಸೆಯ ಸುರಿಮಳೆ Read More »

ಕರಾವಳಿ

ಕಡಬ ನೂತನ ತಾಲೂಕು ಉದ್ಘಾಟನೆ ಮುಂದೂಡಿಕೆ ► ಕಾರಣವೇನು ಗೊತ್ತೇ..?

(ನ್ಯೂಸ್ ಕಡಬ) newskadaba.com ಕಡಬ, ಆ.08. ಹಲವು ಬಾರಿ ಉದ್ಘಾಟನೆಗೆ ದಿನಾಂಕ ನಿಗದಿಗೊಂಡು ಕೊನೆಯ ಕ್ಷಣದಲ್ಲಿ ರದ್ದಾಗುತ್ತಿದ್ದ ಕಡಬ ತಾಲೂಕು ಉದ್ಘಾಟನಾ ದಿನಾಂಕವು ಈ ಬಾರಿಯೂ ರದ್ದಾಗಿದ್ದು, ತಾಲೂಕಿನ ಬಗ್ಗೆ ಹಲವು ಕನಸನ್ನಿಟ್ಟುಕೊಂಡಿದ್ದ ಜನರನ್ನು ನಿರಾಸೆಗೊಳಿಸಿದೆ. ಆಗಸ್ಟ್ 15 ಸ್ವಾತಂತ್ರ್ಯೋತ್ಸವದಂದು ನೂತನ ಕಡಬ ತಾಲೂಕು ಉದ್ಘಾಟನೆಗೊಳ್ಳಲಿದ್ದು, ಕೊನೆಗೂ ಕಡಬ ಪರಿಸರದ ಜನರ ಕನಸು ನನಸಾಗುವ ಕ್ಷಣ ಹತ್ತಿರವಾಗಿದೆ ಎನ್ನಲಾಗಿತ್ತು. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಯವರು ಜಂಟಿಯಾಗಿ ಹೇಳಿಕೆ ನೀಡಿದ್ದರು. ಆದರೆ ಕಡಬ ತಾಲೂಕು

ಕಡಬ ನೂತನ ತಾಲೂಕು ಉದ್ಘಾಟನೆ ಮುಂದೂಡಿಕೆ ► ಕಾರಣವೇನು ಗೊತ್ತೇ..? Read More »

ಕರ್ನಾಟಕ

ಮರ್ದಾಳ ಶಾಲೆಯಲ್ಲಿ ಮಳೆ ನೀರು ಕೊಯ್ಲು ಹಾಗೂ ಜಲ ಮರುಪೂರಣ ಘಟಕದ ಉದ್ಘಾಟನೆ

ಕಡಬ: ಮಂಗಳೂರು ವಿಜಯ ಗ್ರಾಮೀಣ ಪ್ರತಿಷ್ಠಾನ, ಮರ್ದಾಳ ವಿಜಯ ಗ್ರಾಮೀಣ ಪ್ರತಿಷ್ಠಾನ ವತಿಯಿಂದ ಬಂಟ್ರ ಮರ್ದಾಳ ಶಾಲೆಯಲ್ಲಿ ಮಳೆ ನೀರು ಕೊಯ್ಲು ಹಾಗೂ ಜಲ ಮರುಪೂರಣ ಘಟಕವನ್ನು ದ್ಘಾಟಿಸಲಾಯಿತು. ಪ್ರಗತಿಪರ ಕೃಷಿಕ ಸುಭಾಷ್ ರೈ ಉದ್ಘಾಟಿಸಿ ಮಾತನಾಡಿ, ಜಲ ಜೀವನಕ್ಕೆ ಮೂಲಾಧಾರ. ಜಲ ಸಂರಕ್ಷಣೆ ಮಾಡುವುದು ನಮ್ಮ ಪೀಳಿಗೆಗೆ ನೀಡುವ ಮಹತ್ತರ ಕೊಡುಗೆಯಾಗಿದೆ. ಈ ನಿಟ್ಟನಲ್ಲಿ ಜಲಮರುಪೂರಣದ ಬಗ್ಗೆ ಹೆಚ್ಚಿ ಕಾಳಜಿ ವಹಿಸಬೇಕು ಎಂದರು. ಮಂಗಳೂರು ವಿಜಯ ಪ್ರತಿಷ್ಠಾನದ ಕಾರ್ಯನಿರ್ವಹಣಾಧಿಕಾರಿ ಸದಾಶಿವ ಮಾತನಾಡಿ, 1990ರಲ್ಲಿ ವಿಜಯ ಗ್ರಾಮೀಣ

ಮರ್ದಾಳ ಶಾಲೆಯಲ್ಲಿ ಮಳೆ ನೀರು ಕೊಯ್ಲು ಹಾಗೂ ಜಲ ಮರುಪೂರಣ ಘಟಕದ ಉದ್ಘಾಟನೆ Read More »

ಕರಾವಳಿ

ಮುಕ್ಕೂರು ಕುಂಡಡ್ಕ ;ಸೆ. 2 ರಂದು ವಿದ್ಯಾರ್ಥಿಗಳಿಗೆ ಸ್ಪರ್ಧೆ

Newskadaba.comಬೆಳ್ಳಾರೆ : ಮುಕ್ಕೂರು ಕುಂಡಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವದ 9 ನೇ ವರ್ಷದ ಕ್ರೀಡಾಕೂಟದ ಪ್ರಯುಕ್ತಸೆ.2 ರಂದು ಮುಕ್ಕೂರು, ಕುಂಡಡ್ಕ, ಕಾನಾವು ಹಾಗೂ ಆಸುಪಾಸಿನ ಪರಿಸರದಿಂದ ಸುಳ್ಯ, ಪುತ್ತೂರು ಹಾಗೂ ಇತರೆ ತಾಲೂಕಿನ ಖಾಸಗಿ-ಸರಕಾರಿ ಶಾಲೆಗೆ ತೆರಳುವ ಪ್ರಾಥಮಿಕ, ಪ್ರೌಢಶಾಲಾ, ಪದವಿ ಪೂರ್ವ, ಪದವಿ ವಿದ್ಯಾರ್ಥಿಗಳಿಗೆ ಸೆ.2 ರಂದು ಮುಕ್ಕೂರು ಶಾಲೆಯಲ್ಲಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. 1 ರಿಂದ 2 ನೇ ತರಗತಿ : ಕಾಳು ಹೆಕ್ಕುವುದು, ಕಪ್ಪೆ ಜಿಗಿತ, 3 ರಿಂದ 5 ನೇ ತರಗತಿ

ಮುಕ್ಕೂರು ಕುಂಡಡ್ಕ ;ಸೆ. 2 ರಂದು ವಿದ್ಯಾರ್ಥಿಗಳಿಗೆ ಸ್ಪರ್ಧೆ Read More »

ಕರಾವಳಿ
Scroll to Top