ಇಂದು ಕಡಬ ತಾಲೂಕು ಪತ್ರಕರ್ತರ ಸಂಘದಿಂದ ಸವಣೂರಿನಲ್ಲಿ ಪತ್ರಿಕಾ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಜು.24. ಇಲ್ಲಿನ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಸವಣೂರು ವಿದ್ಯಾರಶ್ಮಿ ಪದವಿ ಕಾಲೇಜಿನಲ್ಲಿ ಮಂಗಳವಾರದಂದು ನಡೆಯಲಿದೆ. ಪುತ್ತೂರು ಸಹಾಯಕ ಆಯುಕ್ತ ಕೃಷ್ಣ ಮೂರ್ತಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಸಭೆಯ ಅಧ್ಯಕ್ಷತೆಯನ್ನು ವಿದ್ಯಾರಶ್ಮಿ ಸಮೂಹ ವಿದ್ಯಾಸಂಸ್ಥೆಗಳ ಸಂಚಾಲಕ ಕೆ. ಸೀತಾರಾಮ ರೈ ಸವಣೂರು ವಹಿಸಲಿದ್ದಾರೆ. ಮಂಗಳೂರು ಉದಯವಾಣಿ ದಿನಪತ್ರಿಕೆಯ ಬ್ಯೂರೋ ಚೀಪ್ ಮನೋಹರ ಪ್ರಸಾದ್ ಪ್ರಧಾನ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸವಣೂರು ಗ್ರಾ.ಪಂ. ಅಧ್ಯಕ್ಷೆ ಇಂದಿರಾ, ವಿದ್ಯಾರಶ್ಮಿ ಸಮೂಹ ಸಂಸ್ಥೆಗಳ ಆಡಳಿತಾಧಿಕಾರಿ […]

ಇಂದು ಕಡಬ ತಾಲೂಕು ಪತ್ರಕರ್ತರ ಸಂಘದಿಂದ ಸವಣೂರಿನಲ್ಲಿ ಪತ್ರಿಕಾ ದಿನಾಚರಣೆ Read More »

ಕರಾವಳಿ

ಕೋಡಿಂಬಾಳದ ವ್ಯಕ್ತಿ ಮಂಗಳೂರಿನಲ್ಲಿ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜು.24. ಕೋಡಿಂಬಾಳ ಗ್ರಾಮದ ಗುಂಡಿಮಜಲು ಎಂಬಲ್ಲಿ ವಾಸ್ತವ್ಯವಿರುವ ಪುರುಷೋತ್ತಮ(48ವ) ಮಂಗಳೂರಿನ ದಕ್ಕೆಯಲ್ಲಿ ಮೃತಪಟ್ಟಿದ್ದು ಜು.21ರಂದು ಮೃತದೇಹದ ಪತ್ತೆಯಾಗಿ ಕೋಡಿಂಬಾಳದ ಸ್ವಗೃಹದಲ್ಲಿ ಅಂತ್ಯಸಂಸ್ಕಾರ ನಡೆಸಲಾಯಿತು. ಮೃತರು ಸುಳ್ಯ ತಾಲೂಕಿನ ಪೈಚಾರ್ ಬಳಿ ಕಾಟೂರು ಎಂಬಲ್ಲಿರುವ ಮಾಯಿಲಪ್ಪ ಗೌಡರ ಪುತ್ರರಾಗಿದ್ದು ಕಳೆದ ಹತ್ತೊಂಬತ್ತು ವರ್ಷಗಳಿಂದ ಕೋಡಿಂಬಾಳದ ಗುಂಡಿಮಜಲಿನಲ್ಲಿ ವಾಸ್ತವ್ಯವಿದ್ದು, ಚಾಲಕ ವೃತ್ತಿಯವರಾಗಿದ್ದು ಕಳೆದ ಕೆಲವು ವರ್ಷಗಳ ಹಿಂದೆ ಮಂಗಳೂರಿನ ಬಂದರು ದಕ್ಕೆಯಲ್ಲಿ ಕಾವೇರಿ ಕಂಪೆನಿಯಲ್ಲಿ ಭರತ್ ಭೂಷನ್ ಎಂಬವರ ಮಾಲಕತ್ವದ ಮೀನಿನ ಲಾರಿಯಲ್ಲಿ ಚಾಲಕನಾಗಿ

ಕೋಡಿಂಬಾಳದ ವ್ಯಕ್ತಿ ಮಂಗಳೂರಿನಲ್ಲಿ ಮೃತ್ಯು Read More »

ಕರಾವಳಿ

ಕೋಡಿಂಬಾಳದ ಮೂರಾಜೆ ಕೊಪ್ಪ ಶಾಲೆಯ ಛಾವಣಿ ಬಿರುಕು ► ಆತಂಕದಲ್ಲಿ ವಿದ್ಯಾರ್ಥಿಗಳು

(ನ್ಯೂಸ್ ಕಡಬ) newskadaba.com ಕಡಬ, ಜು.23. ಕೋಡಿಂಬಾಳ ಗ್ರಾಮದ ಮೂರಾಜೆ ಕೊಪ್ಪ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡದ ಗೋಡೆ ಹಾಗೂ ಛಾವಣಿಯಲ್ಲಿ ಬಿರುಕು ಕಂಡುಬಂದಿರುವ ಕಾರಣದಿಂದಾಗಿ ಶಾಲಾ ವಿದ್ಯಾರ್ಥಿಗಳು ಆತಂಕದಿಂದಲೇ ತರಗತಿ ಕೊಠಡಿಯಲ್ಲಿ ಕುಳಿತು ಪಾಠ ಕೇಳುವಂತಹ ಅತಂತ್ರ ಸ್ಥಿತಿ ಅನುಭವಿಸುತ್ತಿದ್ದಾರೆ. ಸುಮಾರು 40 ವಿದ್ಯಾರ್ಥಿಗಳಿರುವ ಮೂರಾಜೆ ಕೊಪ್ಪ ಶಾಲೆ ಆರಂಭಗೊಂಡು ಕೇವಲ 15 ವರ್ಷಗಳಷ್ಟೇ ಆಗಿದೆ. ಸುಮಾರು 13 ವರ್ಷಗಳ ಹಿಂದೆ ಶಾಲೆಗೆ ಕಟ್ಟಡ ನಿರ್ಮಾಣಗೊಂಡಿದೆ. 2 ತರಗತಿ ಕೊಠಡಿಗಳು ಹಾಗೂ 1 ಕಚೇರಿ ಕೊಠಡಿ

ಕೋಡಿಂಬಾಳದ ಮೂರಾಜೆ ಕೊಪ್ಪ ಶಾಲೆಯ ಛಾವಣಿ ಬಿರುಕು ► ಆತಂಕದಲ್ಲಿ ವಿದ್ಯಾರ್ಥಿಗಳು Read More »

ಕರಾವಳಿ

ಕೈಕಂಬ: ನದಿ ತಟದಲ್ಲಿ ಬಿದ್ದಿದ್ದ ವೃದ್ಧ ಮಹಿಳೆ ► ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜು.24. ನದಿ ತಟದಲ್ಲಿ ಬಿದ್ದಿದ್ದ ವೃದ್ಧ ಮಹಿಳೆಯೋರ್ವರನ್ನು ಸ್ಥಳೀಯರು ರಕ್ಷಿಸಿದರಾದರೂ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟ ಘಟನೆ ಸೋಮವಾರ ಸಂಜೆ ಕೈಕಂಬದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಉಪ್ಪಿನಂಗಡಿ ಸಮೀಪದ ಕರಾಯ ಗ್ರಾಮದ ದೇವರಮಾರು ನಿವಾಸಿ ಪೆರ್ನು ಗೌಡ ಎಂಬವರ ಪತ್ನಿ ಸುಶೀಲ ಎಂದು ಗುರುತಿಸಲಾಗಿದೆ. ಸುಬ್ರಹ್ಮಣ್ಯದಲ್ಲಿರುವ ಈಕೆಯ ಪುತ್ರಿಗೆ ಹೆರಿಗೆಯಾಗಿದೆಯೆಂದು ತಿಳಿದು ಮನೆಯಲ್ಲಿ ಹೇಳದೆ ಬಂದಿದ್ದ ಇವರು ಸೋಮವಾರ ಸಂಜೆ ಕೈಕಂಬ ಸಮೀಪದ ನದಿ ತಟದಲ್ಲಿ ಬಿದ್ದಿದ್ದರೆನ್ನಲಾಗಿದೆ. ಇದನ್ನು ಕಂಡ

ಕೈಕಂಬ: ನದಿ ತಟದಲ್ಲಿ ಬಿದ್ದಿದ್ದ ವೃದ್ಧ ಮಹಿಳೆ ► ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತ್ಯು Read More »

ಕರಾವಳಿ

ಮತ್ತೆ ಮುಳುಗಿದ ‘ಹೊಸ್ಮಠ ಸೇತುವೆ’

(ನ್ಯೂಸ್ ಕಡಬ)newskadaba.com ಕಡಬ, ಜು.24. ಪದೇ ಪದೇ ಮುಳುಗಡೆಗೊಂಡು ಸಂಚಾರಕ್ಕೆ ಅಡಚಣೆಯಾಗುತ್ತಿದ್ದ ಹೊಸ್ಮಠ ಮುಳುಗು ಸೇತುವೆಯು ಸೋಮವಾರ ಸಂಜೆ ಮತ್ತೆ ಮುಳುಗಡೆಗೊಂಡಿದ್ದು, ಸಂಚಾರ ಅಸ್ತವ್ಯಸ್ತಗೊಂಡಿದೆ. ಕಳೆದ ಕೆಲವು ದಿನಗಳಿಂದ ಪದೇ ಪದೇ ಮುಳುಗಡೆಗೊಳ್ಳುತ್ತಿದ್ದು, ಉಪ್ಪಿನಂಗಡಿ – ಕಡಬ ಸಂಚಾರದಲ್ಲಿ ತಡೆಯಾಗಿದ್ದು, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಸೇರಿದಂತೆ ಕೆಲಸ ನಿಮಿತ್ತ ತೆರಳಿರುವ ಸಾರ್ವಜನಿಕರು ತೊಂದರೆಗೊಳಗಾಗಿದ್ದಾರೆ.

ಮತ್ತೆ ಮುಳುಗಿದ ‘ಹೊಸ್ಮಠ ಸೇತುವೆ’ Read More »

ಕರಾವಳಿ

ಮಲಂಕರ ಕ್ಯಾಥೋಲಿಕ್ ಚರ್ಚ್ ಸ್ಥಾಪಕ ಮಾರ್ ಇವಾನಿಯೋಸ್ ರ 65 ನೇ ಪುಣ್ಯಸ್ಮರಣೆ ► ಕೆರ್ಮಾಯಿ ಸೈಂಟ್ ಮೇರೀಸ್ ಚರ್ಚ್‌ನಲ್ಲಿ ಅನುಸ್ಮರಣಾ ಪಾದಯಾತ್ರೆ

(ನ್ಯೂಸ್ ಕಡಬ) newskadaba.com ಕಡಬ, ಜು.23. ಮಲಂಕರ ಕ್ಯಾಥೋಲಿಕ್ ಚರ್ಚ್ನ ಸ್ಥಾಪಕ ದೇವದಾಸ ಮಾರ್ ಇವಾನಿಯೋಸ್ ಅವರ 65 ನೇ ಪುಣ್ಯಸ್ಮರಣೆ ಹಾಗೂ ಅನುಸ್ಮರಣಾ ಪಾದಯಾತ್ರೆಯು ಮಲಂಕರ ಕ್ಯಾಥೋಲಿಕ್ ಚರ್ಚ್ನ ಪುತ್ತೂರು ಧರ್ಮಪ್ರಾಂತ್ಯದ ದಕ್ಷಿಣ ಕನ್ನಡ ವಲಯದ ಕರ್ಮಾಯಿ ಸೈಂಟ್ ಮೇರೀಸ್ ಚರ್ಚ್ನ ಆತಿಥ್ಯದಲ್ಲಿ ರವಿವಾರ ಜರಗಿತು. ಮಲಂಕರ ಕ್ಯಾಥೋಲಿಕ್ ಚರ್ಚ್ನ ಪುತ್ತೂರು ಧರ್ಮಪ್ರಾಂತ್ಯದ ವಿಕಾರ್ ಜನರಲ್ ವಂ|ಡಾ| ಎಲ್ದೋ ಪುತ್ತನ್ಕಂಡತ್ತಿಲ್ ಅವರೊಂದಿಗೆ ಪುತ್ತೂರು ಧರ್ಮಪ್ರಾಂತ್ಯದ ಚಾನ್ಸಿಲರ್ ವಂ| ಫಿಲಿಪ್ ನೆಲ್ಲಿವಿಳ, ದಕ್ಷಿಣ ಕನ್ನಡ ವಲಯದ ಪೆÇ್ರೀಟೋ ವಿಕಾರ್

ಮಲಂಕರ ಕ್ಯಾಥೋಲಿಕ್ ಚರ್ಚ್ ಸ್ಥಾಪಕ ಮಾರ್ ಇವಾನಿಯೋಸ್ ರ 65 ನೇ ಪುಣ್ಯಸ್ಮರಣೆ ► ಕೆರ್ಮಾಯಿ ಸೈಂಟ್ ಮೇರೀಸ್ ಚರ್ಚ್‌ನಲ್ಲಿ ಅನುಸ್ಮರಣಾ ಪಾದಯಾತ್ರೆ Read More »

ಕರಾವಳಿ

ಗೊಂದಲದ ನಡುವೆ ನಡೆದ ಕೊಯಿಲ ಗ್ರಾಮ ಸಭೆ ► ಸಭೆಯಲ್ಲಿ ಚರ್ಚೆಗೀಡಾದ ಕಂದಾಯ ಇಲಾಖೆಯ ಲಂಚಾವತಾರ

(ನ್ಯೂಸ್ ಕಡಬ) newskadaba.com  ಕಡಬ, ಜು.23. ಕೊಲ ಪಶುಸಂಗೋಪನಾ ಇಲಾಖಾ ಜಾಗದಲ್ಲಿ ಹಾದು ಹೋಗಿರುವ ಸಾರ್ವಜನಿಕರು ಉಪಯೋಗಿಸುತ್ತಿರುವ ರಸ್ತೆ ಅಭಿವೃದ್ದಿಗೆ ಇಲಾಖೆ ಅಡ್ಡಿಪಡಿಸುತ್ತಿದೆ. ಹಾಗಾಗಿ ನಾದುರಸ್ತಿಯಲ್ಲಿರುವ ರಸ್ತೆಯನ್ನು ಅಭಿವೃದ್ದಿಪಡಿಸಬೇಕು. ಗ್ರಾಮ ಸಭೆಯನ್ನು ಮೊಟಕುಗೊಳಿಸಿ ಅದಿಕಾರಿಗಳು ಜನಪ್ರನಿದಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದಾಗ ಸಭೆಯಲ್ಲಿ ಗೊಂದಲವೇರ್ಪಟ್ಟು ಬಳಿಕ ಸಭೆಯಲ್ಲಿದ್ದ ಕೆಲ ಜನಪ್ರತಿನಿಧಿಗಳು, ಅಧಿಕಾರಗಳು ಸ್ಥಳಕ್ಕೆ ತೆರಳಿ ತಾತ್ಕಲಿಕ ಪರಿಹಾರ ನೀಡುವ ಭರವಸೆ ನೀಡಿದ ಘಟನೆ ಕೊೈಲ ಗ್ರಾಮ ಸಭೆಯಲ್ಲಿ ನಡೆದಿದೆ. ಶನಿವಾರ  ಗ್ರಾಮ ಪಂಚಾಯಿತಿ

ಗೊಂದಲದ ನಡುವೆ ನಡೆದ ಕೊಯಿಲ ಗ್ರಾಮ ಸಭೆ ► ಸಭೆಯಲ್ಲಿ ಚರ್ಚೆಗೀಡಾದ ಕಂದಾಯ ಇಲಾಖೆಯ ಲಂಚಾವತಾರ Read More »

ಕರಾವಳಿ

ಕಡಬ ಗೃಹರಕ್ಷಕ ದಳದವರಿಂದ ವನಮಹೋತ್ಸವ ಆಚರಣೆ

(ನ್ಯೂಸ್ ಕಡಬ) newskadaba.com ಕಡಬ, ಜು.23. ಇಲ್ಲಿನ ಗೃಹರಕ್ಷಕ ದಳದವರಿಂದ ವನಮಹೋತ್ಸವ ಆಚರಣೆ ಜು.22ರಂದು ಕಡಬ ಮಾದರಿ ಹಿ.ಪ್ರಾ.ಶಾಲೆಯಲ್ಲಿ ನಡೆಯಿತು. ಗೃಹರಕ್ಷಕದಳದ ಜಿಲ್ಲಾ ಕಮಾಡೆಂಟ್ ಡಾ| ಮುರಳಿಮೋಹನ್ ಚೂಂತಾರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿದ್ದ ಕಡಬ ಶ್ರೀ ದುರ್ಗಾಣಬಿಕಾ ಅಮ್ಮನವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ,ನಿವೃತ್ತ ಮುಖ್ಯ ಗುರು ಜನಾರ್ದನ ಗೌಡ ಪಣೆಮಜಲು ರವರು ಮಾತನಾಡಿ, ಮನುಷ್ಯ ಸಂಕುಲ ಮುಂದೆ ಉಳಿಯಬೇಕಾದರೆ ನಮಗೆ ಆಮ್ಲಜನಕ ಬೇಕು, ಈ ಆಮ್ಲಜನಕ ಮರ ಗಿಡಗಳಿಗೆ ಬಿಟ್ಟು ಯಾವುದೇ ಪ್ಯಾಕ್ಟರಿಯಿಂದ

ಕಡಬ ಗೃಹರಕ್ಷಕ ದಳದವರಿಂದ ವನಮಹೋತ್ಸವ ಆಚರಣೆ Read More »

ಕರಾವಳಿ

ಕೋಡಿಂಬಾಳ: ಅರ್ಪಾಜೆ ಕೆರೆ ಒತ್ತುವರಿ ಆರೋಪ ►ಸರ್ವೆ ನಡೆಸಿ ಗಡಿ ಗುರುತು ಮಾಡಿದ ಅಧಿಕಾರಿಗಳು

(ನ್ಯೂಸ್ ಕಡಬ) newskadaba.com ಕಡಬ, ಜು.22. ಕೋಡಿಂಬಾಳ ಗ್ರಾಮದ ಅರ್ಪಾಜೆ ಎಂಬಲ್ಲಿರುವ ಕೆರೆಯನ್ನು ಒತ್ತುವರಿ ಮಾಡಿ ಸ್ಥಳೀಯರು ರಸ್ತೆ ನಿರ್ಮಿಸಿದ್ದಾರೆ ಎಂಬ ಆರೋಪದ ಹಿನ್ನಲೆಯಲ್ಲಿ ಜು.21ರಂದು ಕಡಬ ಕಂದಾಯ ನಿರೀಕ್ಷಕ ಕೊರಗಪ್ಪ ಹೆಗ್ಡೆಯವರ ನೇತೃತ್ವದಲ್ಲಿ ಸರ್ವೆ ನಡೆಸಲಾಯಿತು. ಕೋಡಿಂಬಾಳ ಗ್ರಾಮದ ಅರ್ಪಾಜೆಯಲ್ಲಿ ಸರ್ವೆ ನಂ.33/3ರಲ್ಲಿ 0.62 ಎಕ್ರೆ ವಿಸ್ತೀರ್ಣದಲ್ಲಿರುವ ಸರಕಾರಿ ಕೆರೆಯನ್ನು ಒತ್ತುವರಿ ಮಾಡಿ ನೀರು ಸಂಗ್ರಹವಾಗದಂತೆ ಮಾಡಲಾಗಿದೆ ಎನ್ನುವ ಸ್ಥಳೀಯರ ದೂರಿನ ಹಿನ್ನಲೆಯಲ್ಲಿ ಗಡಿ ಗುರುತು ಮಾಡಿ ಕೆರೆಯನ್ನು ಸಂರಕ್ಷಿಸಲು ಮುಂದಾಗಿರುವ ಕಂದಾಯ ಇಲಾಖೆ, ಭೂಮಾಪನ

ಕೋಡಿಂಬಾಳ: ಅರ್ಪಾಜೆ ಕೆರೆ ಒತ್ತುವರಿ ಆರೋಪ ►ಸರ್ವೆ ನಡೆಸಿ ಗಡಿ ಗುರುತು ಮಾಡಿದ ಅಧಿಕಾರಿಗಳು Read More »

ಕರಾವಳಿ

ಮೇಲ್ಛಾವಣಿ ಸಮೇತ ನೆಲಕ್ಕುರುಳಿದ ಕಡಬದ ಸರಕಾರಿ ಕಾಲೇಜು ಕಟ್ಟಡ ► ವಿದ್ಯಾರ್ಥಿಗಳು ಇಲ್ಲದಿದ್ದರಿಂದ ತಪ್ಪಿದ ಸಂಭಾವ್ಯ ಅನಾಹುತ

(ನ್ಯೂಸ್ ಕಡಬ) newskadaba.com ಕಡಬ, ಜು.22. ಇಲ್ಲಿನ ಸರಕಾರಿ ಪ.ಪೂ.ಕಾಲೇಜಿನ ಗೋಡೆಯು ಈ ಹಿಂದೆ ಬಿರುಕು ಬಿಟ್ಟಿದ್ದು, ಶನಿವಾರದಂದು ಮೇಲ್ಛಾವಣಿ ಸಮೇತ ಗೋಡೆಯು ನೆಲಕ್ಕುರುಳಿ ಅಪಾರ ನಷ್ಟ ಉಂಟಾಗಿದೆ. ಮಳೆಗಾಲ ಪ್ರಾರಂಭದಲ್ಲಿಯೇ ಕಟ್ಟಡ ಕುಸಿಯುವ ಹಂತದಲ್ಲಿ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಿದ್ದು ಬದಲಿ ವ್ಯವಸ್ಥೆ ಮಾಡಿ ಪಾಠ ಪ್ರವಚನ ನಡೆಯುತ್ತಿದೆ. ಜಿ.ಪಂ. ಇಂಜಿನಿಯರ್ ಭರತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೊದಲೇ ಕಟ್ಟಡ, ಕೊಠಡಿ ಸ್ಥಳವಕಾಶದ ಕೊರತೆಯಿರುವ ಈ ಕಾಲೇಜಿನಲ್ಲಿ ಈಗ ಕಟ್ಟಡ ಕುಸಿದಿರುವುದರಿಂದ ಮತ್ತಷ್ಟು ಸಮಸ್ಯೆ ಎದುರಾಗಿದೆ. ಕಡಬ

ಮೇಲ್ಛಾವಣಿ ಸಮೇತ ನೆಲಕ್ಕುರುಳಿದ ಕಡಬದ ಸರಕಾರಿ ಕಾಲೇಜು ಕಟ್ಟಡ ► ವಿದ್ಯಾರ್ಥಿಗಳು ಇಲ್ಲದಿದ್ದರಿಂದ ತಪ್ಪಿದ ಸಂಭಾವ್ಯ ಅನಾಹುತ Read More »

ಕರಾವಳಿ
Scroll to Top