ಉಪ್ಪಿನಂಗಡಿ: ದಂಪತಿ ಆತ್ಮಹತ್ಯೆ
(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜು.17. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ದಂಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರದಂದು ಉಪ್ಪಿನಂಗಡಿಯಲ್ಲಿ ನಡೆದಿದೆ. ಮೃತ ದಂಪತಿಯನ್ನು ಬಾರ್ಯ ಗ್ರಾಮದ ಪಿಳಿಗೂಡು ನಿವಾಸಿ ಸಂಜೀವ ಪೂಜಾರಿ (60) ಹಾಗೂ ಸೀತಾ (59) ಎಂದು ಗುರುತಿಸಲಾಗಿದೆ. ಸಂಜೀವ ಪೂಜಾರಿಯವರು ಹೃದಯ ಸಂಬಂಧಿ ಕಾಯಿಲೆಗೆ ಒಳಗಾಗಿ ಕೆಲಸಕ್ಕೆ ಹೋಗಲು ಅಸಮರ್ಥರಾಗಿದ್ದರೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮನನೊಂದ ದಂಪತಿ ಸೋಮವಾರದಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಉಪ್ಪಿನಂಗಡಿ: ದಂಪತಿ ಆತ್ಮಹತ್ಯೆ Read More »
ಕರಾವಳಿ









