ರಾಮಕುಂಜಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಮಂತ್ರಿಮಂಡಲ ರಚನೆ

(ನ್ಯೂಸ್ ಕಡಬ) newskadaba.com ಕಡಬ,ಜೂ.27 ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ಶಾಲಾ ನಾಯಕನಾಗಿ ಹರ್ಷಿತ್. ಟಿ.ಜಿ,ಉಪನಾಯಕನಾಗಿ ಆಕಾಶ್.ಕೆ.ಸಿ ಹಾಗೂ ಕಾರ್ಯದರ್ಶಿ ಮತ್ತು ಸಾಂಸ್ಕೃತಿಕ ಮಂತ್ರಿಯಾಗಿ ಬಿಂದ್ಯಶ್ರೀ ಆಯ್ಕೆಗೊಂಡರು. 2018-19ನೇ ಶೈಕ್ಷಣಿಕ ವರ್ಷದ ಮಂತ್ರಿಮಂಡಲವು ಚುನಾವಣೆಯ ಮೂಲಕ ರಚನೆಯಾಯಿತು. ಶಿಕ್ಷಣ ಮಂತ್ರಿಯಾಗಿ ಪ್ರತೀಕ್ಷ, ಆರೋಗ್ಯ ಮಂತ್ರಿಯಾಗಿ ದೀಕ್ಷಾ,ವಾರ್ತಾ ಮಂತ್ರಿಯಾಗಿ ಅಪೂರ್ವ ಲಕ್ಷ್ಮೀ, ಶಿಸ್ತು ಮಂತ್ರಿಯಾಗಿ ಅಭಿಷೇಕ್ ಕಾಮತ್ ಮತ್ತು ಸನಾತನ್, ಕ್ರೀಡಾ ಮಂತ್ರಿಯಾರಗಿ ವಿಜೇತ ಟಿ, ಕೃಷಿ ಮಂತ್ರಿಯಾಗಿ ಅಂಕುಶ್ ಕೆ, ನೀರಾವರಿ ಮಂತ್ರಿಯಾಗಿ ವಿಶ್ವ ಪ್ರಕಾಶ್, […]

ರಾಮಕುಂಜಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಮಂತ್ರಿಮಂಡಲ ರಚನೆ Read More »

ಕರಾವಳಿ

ಮರ್ದಾಳ: ವಿಶೇಷ ಶಾಲೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba ,ಕಡಬ.ಜೂ.27. ಕಡಬ ಸಮುದಾಯ ಆರೋಗ್ಯ ಕೇಂದ್ರ ಕಡಬ, ಪುತ್ತೂರು ಧರ್ಮಪ್ರಾಂತ್ಯದ ಅಧೀನದಲ್ಲಿರುವ ಕರ್ನಾಟಕ ಇಂಟಗ್ರೇಟೆಡ್ ಡೆವಲಪ್ಮೆಂಟ್ ಸೊಸೈಟಿ ಮರ್ದಾಳದ ಬೆಥನಿ ಜೀವನ್ ಜ್ಯೋತಿ ವಿಶೇಷ ಶಾಲೆ ಹಾಗೂ ಮರ್ದಾಳದ ಸೈಂಟ್ ಮೇರಿಸ್ ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಆರೋಗ್ಯ ಮಾಹಿತಿ ಕಾರ್ಯಕ್ರಮವು ಮರ್ದಾಳದ ಬೆಥನಿ ಜೀವನ್ ಜ್ಯೋತಿ ವಿಶೇಷ ಶಾಲೆಯ ಸಭಾಂಗಣದಲ್ಲಿ ನಡೆಯಿತು. ಮರ್ದಾಳದ ಗ್ರಾಮ ಪಂಚಾಯತ್ ಅಧ್ಯಕ್ಷತೆ ಲಲಿತಾ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರರೈಸಿದರು. ಜಿಲ್ಲಾ ಮಲೇರಿಯಾ ಅಧಿಕಾರಿ ಡಾ|ಅರಣ್

ಮರ್ದಾಳ: ವಿಶೇಷ ಶಾಲೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ Read More »

ಕರಾವಳಿ

ಕಡಬ: ಕಿಡ್ಸ್ ಘಟಕ ಪ್ರತಿನಿಧಿಗಳಿಗೆ ನಾಯಕತ್ವ ತರಬೇತಿ ಶಿಬಿರ

(ನ್ಯೂಸ್ ಕಡಬ) newskadaba ,ಕಡಬ.ಜೂ.27.  ಕರ್ನಾಟಕ ಇಂಟಗ್ರೇಟೆಟ್ ಡೆವಲಪ್ಮೆಂಟ್ ಸೊಸೈಟಿ (ಕಿಡ್ಸ್) ಯ ಘಟಕ ಪ್ರತಿನಿಧಿಗಳಿಂದ ನಾಯಕತ್ವ ತರಬೇತಿ ಕಾರ್ಯಕ್ರಮ ಮತ್ತು ಕಾರಿತಾಸ್ ಇಂಡಿಯಾ ಸಂಸ್ಥೆಯ ಸಹಯೋಗದೊಂದಿಗೆ ನಡೆಸಲ್ಪಡುವ ಆರೋಗ್ಯ ನೈರ್ಮಲೀಕರಣ ಯೊಜನೆಯ ಸುರಕ್ಷಾ ಕಾರ್ಯಕ್ರಮದ ಉದ್ಘಾಟನೆಯು ಕಡಬದ ಬೆಥನಿ ಆಶ್ರಮದ ಸಭಾಂಗಣದಲ್ಲಿ ನಡೆಯಿತು. ಕಾರಿತಾಸ್ ಇಂಡಿಯಾ ಸಂಸ್ಥೆಯ ರಾಜ್ಯ ಅಧಿಕಾರಿ ರಾಬರ್ಟ್ ಅವರು ಉದ್ಘಾಟನೆ ನೆರವೇರಿಸಿ ಮಾತನಾಡಿ , 2018 -19ನೇ ಸಾಲಿನಲ್ಲಿ ಸಂಸ್ಥೆಯು ಆರೋಗ್ಯ ನೈರ್ಮಲೀಕರಣಕ್ಕೆ ಪ್ರಾಧ್ಯನತೆ ನೀಡಿ ಯೋಜನೆಯನ್ನು ರೂಪಿಸಲಾಗಿದ್ದು, ಯೋಜನೆಯ ಉದ್ದೇಶ,

ಕಡಬ: ಕಿಡ್ಸ್ ಘಟಕ ಪ್ರತಿನಿಧಿಗಳಿಗೆ ನಾಯಕತ್ವ ತರಬೇತಿ ಶಿಬಿರ Read More »

ಕರಾವಳಿ

ವೇಣೂರು: ಫ್ಯಾನ್ ಗೆ ಬೆಡ್ ಶೀಟ್ ನಿಂದ ನೇಣುಬಿಗಿದುಕೊಂಡು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ವೇಣೂರು,ಜೂ. 27. ಯುವಕನೋರ್ವನು ತನ್ನ ಮನೆಯ ಫ್ಯಾನ್ ಗೆ ಬೆಡ್ ಶೀಟ್ ನಿಂದ ನೇಣು ಬಿಗಿದು ಕೊಂಡು ಆತ್ಮ ಹತ್ಯೆ ಮಾಡಿಕೊಂಡ ಘಟನೆ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ದಂದು ನಡೆದಿದೆ.  ತನ್ನ ತಂಗಿಗೆ ಜೂ 20 ರಂದು ಹೆರಿಗೆಯಾಗಿದ್ದು, ಉಸಿರಾಟದ ತೊಂದರೆಯಿಂದ ಮಗು ಜೂ 22 ರಂದು ಮೃತಪಟ್ಟಿತ್ತು. ಇದರಿಂದ ಮಾನಸಿಕವಾಗಿ ಮನನೊಂದ ದಿನೇಶ್(30) ಮನೆಯವರು ದನದ ಕರುವನ್ನು ತೋಟಕ್ಕೆ ಬಿಡಲು ಹೋಗಿದ್ದ ಸಮಯದಲ್ಲಿ ಬೆಳಗ್ಗೆ 9.50 ಗಂಟೆಯಿಂದ 10.10

ವೇಣೂರು: ಫ್ಯಾನ್ ಗೆ ಬೆಡ್ ಶೀಟ್ ನಿಂದ ನೇಣುಬಿಗಿದುಕೊಂಡು ಆತ್ಮಹತ್ಯೆ Read More »

ಕರಾವಳಿ

ಬಲ್ಯ ಗ್ರಾಮ ಬೀಟ್ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಜೂ.27. ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಬಲ್ಯ ಗ್ರಾಮ ಜನಸ್ನೇಹಿ ಪೊಲೀಸ್ ಬೀಟ್ ಸಭೆಯು ಜೂ.26ರಂದು ಕುಟ್ರುಪ್ಪಾಡಿ ಗ್ರಾ.ಪಂ.ಸಭಾಭವನದಲ್ಲಿ ಗ್ರಾ.ಪಂ.ಅಧ್ಯಕ್ಷೆ ಜಾನಕಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಡಬ ಠಾಣಾ ಪೊಲೀಸ್ ಸಹಾಯಕ ಉಪನಿರೀಕ್ಷಕ ಚೆಲುವಯ್ಯರವರು ಜನಸ್ನೇಹಿ ಪೊಲೀಸ್ ವ್ಯವಸ್ಥೆ ಬಗ್ಗೆ ಮಾಹಿತಿ ನೀಡಿ, ಬೀಟ್ ಪದ್ದತಿ ಬಗ್ಗೆ ವಿವರಿಸಿದ್ದಲ್ಲದೆ, ಗ್ರಾಮದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಗ್ರಾಮಸ್ಥರ ಸಹಕಾರ ಅತೀ ಅಗತ್ಯವಾಗಿದ್ದು ಯಾವುದೇ ಸಂದರ್ಭದಲ್ಲಿ ಗ್ರಾಮದಲ್ಲಿ ಕಾನೂನುಭಾಹಿರ ಚಟುವಟಿಕೆಗಳು ಯಾ ಅಪರಿಚಿತ ವ್ಯಕ್ತಿಗಳು ಗ್ರಾಮದಲ್ಲಿ

ಬಲ್ಯ ಗ್ರಾಮ ಬೀಟ್ ಸಭೆ Read More »

ಕರಾವಳಿ

ಅಡ್ಯಾರ್: ಭೀಕರ ಸರಣಿ ಅಪಘಾತ ► ಓರ್ವ ಮೃತ್ಯು, ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.27. ಎರಡು ಕಾರುಗಳು, ಬೈಕ್ ಹಾಗೂ ಆಟೋ ರಿಕ್ಷಾ ನಡುವೆ ನಡೆದ ಸರಣಿ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ನಗರದ ಹೊರವಲಯದ ಅಡ್ಯಾರಿನಲ್ಲಿ ಬುಧವಾರ ಮುಂಜಾನೆ ಸಂಭವಿಸಿದೆ. ಮೃತ ಯುವಕನನ್ನು ಇಲೆಕ್ಟ್ರೀಷಿಯನ್ ವೃತ್ತಿಯಲ್ಲಿದ್ದ ಫಾರೂಕ್(26) ಎಂದು ಗುರುತಿಸಲಾಗಿದೆ. ಬಿ.ಸಿ.ರೋಡ್ ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ವಾಹನಗಳು ಏಕಮುಖ ರಸ್ತೆಯಲ್ಲಿ ಸಂಚರಿಸುತ್ತಿದ್ದಾಗ ಕಣ್ಣೂರು ಮಸೀದಿ ಬಳಿ ತಲುಪಿದಾಗ ಹನೀಫ್ ಎಂಬವರು ಚಲಾಯಿಸುತ್ತಿದ್ದ ಕಾರು ಉಳಿದ ವಾಹನಗಳಿಗೆ ಢಿಕ್ಕಿ ಹೊಡೆದು ಮಗುಚಿ ಬಿದ್ದಿದೆ.

ಅಡ್ಯಾರ್: ಭೀಕರ ಸರಣಿ ಅಪಘಾತ ► ಓರ್ವ ಮೃತ್ಯು, ಮೂವರಿಗೆ ಗಾಯ Read More »

ಕರಾವಳಿ

ಬೆಳ್ಳಾರೆ: ಹಾಡುಹಗಲೇ ಬಲಾತ್ಕಾರವಾಗಿ ಸಾಮೂಹಿಕ ಅತ್ಯಾಚಾರ ► ರಿಕ್ಷಾ ಚಾಲಕರು ಸೇರಿದಂತೆ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜೂ.27. ಠಾಣಾ ವ್ಯಾಪ್ತಿಯ ಶೇಣಿಯಲ್ಲಿ ಯುವತಿಯೋರ್ವಳನ್ನು ಬಲವಂತದಿಂದ ಕರೆದೊಯ್ದು ಸರಣಿ ಅತ್ಯಾಚಾರಗೈದ ಪ್ರಕರಣದ ಮೂವರು ಆರೋಪಿಗಳನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಅಮರ ಮೂಡ್ನೂರು ಗ್ರಾಮದ ಕುಡುಂಬಿಲ ನಿವಾಸಿ ಕುಂಇಪ್ಪ ನಾಯ್ಕ ಎಂಬವರ ಪುತ್ರ ಜಯಪ್ರಕಾಶ್ (25), ಚೊಕ್ಕಾಡಿಯ ನೇಣಾರು ನಿವಾಸಿ ಕೂಸಪ್ಪ ನಾಯ್ಕ ಎಂಬವರ ಪುತ್ರ ರಂಜಿತ್ (20), ಕುಕ್ಕುಜಡ್ಕದ ನೇರ್ಲಡ್ಕ ನಿವಾಸಿ ಗುಡ್ಡಪ್ಪನಾಯ್ಕ ಎಂಬವರ ಪುತ್ರ ರವೀಂದ್ರ (35) ಎಂದು ಗುರುತಿಸಲಾಗಿದೆ. ಆರೋಪಿಗಳು ಸೋಮವಾರ ಸಂಜೆ ಹಾಲು

ಬೆಳ್ಳಾರೆ: ಹಾಡುಹಗಲೇ ಬಲಾತ್ಕಾರವಾಗಿ ಸಾಮೂಹಿಕ ಅತ್ಯಾಚಾರ ► ರಿಕ್ಷಾ ಚಾಲಕರು ಸೇರಿದಂತೆ ಮೂವರ ಬಂಧನ Read More »

ಕರಾವಳಿ

ಮಂಗಳೂರು: 48 ಮೊಬೈಲ್ ಟವರ್ ಗಳ ಬ್ಯಾಟರಿ ಕಳ್ಳತನ ► ಬಿಳಿನೆಲೆ ನಿವಾಸಿ ಸೇರಿದಂತೆ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಜೂ.27. ಮೊಬೈಲ್ ಟವರ್ ಗಳಲ್ಲಿನ ಬ್ಯಾಟರಿ ಕಳವು ಪ್ರಕರಣವನ್ನು ಭೇದಿಸಿರುವ ಉರ್ವ ಠಾಣಾ ಪೊಲೀಸರು ಕಡಬದ ಬಿಳಿನೆಲೆ ನಿವಾಸಿ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇಂಡಸ್ ಕಂಪೆನಿಗೆ ಸೇರಿದ 48 ಮೊಬೈಲ್ ಟವರ್‌ನ ಬ್ಯಾಟರಿಗಳು ಕಳವಾಗಿರುವ ಬಗ್ಗೆ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಜಾಡು ಹಿಡಿದ ಉರ್ವ ಠಾಣಾ ಪೊಲೀಸರು ಇಂಡಸ್ ಕಂಪೆನಿಯ ಬ್ಯಾಟರಿಗಳ ನಿರ್ವಹಣೆಯ ಗುತ್ತಿಗೆ ಪಡೆದಿದ್ದ ಸಂಸ್ಥೆಯೊಂದರ ಸಿಬ್ಬಂದಿಗಳಾದ ಕಡಬದ ಬಿಳಿನೆಲೆ ನಿವಾಸಿ ಆನಂದ್(28), ಕಡೂರಿನ ಸೋಮನಹಳ್ಳಿ

ಮಂಗಳೂರು: 48 ಮೊಬೈಲ್ ಟವರ್ ಗಳ ಬ್ಯಾಟರಿ ಕಳ್ಳತನ ► ಬಿಳಿನೆಲೆ ನಿವಾಸಿ ಸೇರಿದಂತೆ ಮೂವರ ಬಂಧನ Read More »

ಕರಾವಳಿ

ಬೆಳ್ಳಾರೆ: ಯುವತಿಯನ್ನು ಪುಸಲಾಯಿಸಿ ಮೂವರಿಂದ ಸರಣಿ ಅತ್ಯಾಚಾರ ► ಓರ್ವ ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜೂ.26. ಯುವತಿಯೋರ್ವಳನ್ನು ಬಲವಂತದಿಂದ ಕರೆದೊಯ್ದು ಮೂವರು ಸರಣಿ ಅತ್ಯಾಚಾರ ಎಸಗಿದ ಘಟನೆ ಸೋಮವಾರದಂದು ಠಾಣಾ ವ್ಯಾಪ್ತಿಯ ಚೊಕ್ಕಾಡಿಯಲ್ಲಿ ನಡೆದಿದೆ. ಹಾಲು ಉತ್ಪಾದಕರ ಸಂಘಕ್ಕೆ ಹಾಲು ಕೊಂಡೊಯ್ದು ಹಿಂದಿರುಗುತ್ತಿದ್ದ ಯುವತಿಯನ್ನು ಇಬ್ಬರು ಆಟೊ ರಿಕ್ಷಾ ಚಾಲಕರು ಸೇರಿದಂತೆ ಮೂವರು ಪುಸಲಾಯಿಸಿ ಬಲವಂತದಿಂದ ಕರೆದೊಯ್ದು ರಬ್ಬರ್ ತೋಟದಲ್ಲಿ ಅತ್ಯಾಚಾರ ಎಸಗಿದ್ದಾರೆ ಎಂದು ಮಂಗಳವಾರದಂದು ಬೆಳ್ಳಾರೆ ಠಾಣೆಗೆ‌ ಯುವತಿ ದೂರು ನೀಡಿದ್ದಾರೆ. ಯುವತಿಯ ದೂರಿನಂತೆ ಬೆಳ್ಳಾರೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, ಇನ್ನಿಬ್ಬರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ

ಬೆಳ್ಳಾರೆ: ಯುವತಿಯನ್ನು ಪುಸಲಾಯಿಸಿ ಮೂವರಿಂದ ಸರಣಿ ಅತ್ಯಾಚಾರ ► ಓರ್ವ ಆರೋಪಿ ವಶಕ್ಕೆ Read More »

ಕರಾವಳಿ

ಕಡಬ: ಎಡೆಬಿಡದ ಮಳೆಗೆ ಗುಡ್ಡ ಕುಸಿದು ಧರೆಗುರುಳಿದ ವಿದ್ಯುತ್ ಕಂಬ ► ಕೆಲವೇ ಕ್ಷಣಗಳ ಅಂತರದಲ್ಲಿ ಅಪಾಯದಿಂದ ಪಾರಾದ ವಿದ್ಯಾರ್ಥಿಗಳು

(ನ್ಯೂಸ್ ಕಡಬ) newskadaba.com ಕಡಬ, ಜೂ.26. ಎಡೆಬಿಡದೆ ಮಳೆ‌ ಸುರಿಯುತ್ತಿರುವುದರಿಂದಾಗಿ ವಿದ್ಯುತ್ ಕಂಬದ ಜೊತೆಗೆ ಗುಡ್ಡ ಕುಸಿದು ಬಿದ್ದ ಘಟನೆ ಕಡಬದ ಮುಖ್ಯ ಪೇಟೆಯಲ್ಲಿ ಮಂಗಳವಾರ ಸಂಜೆ‌ ನಡೆದಿದೆ. ಇಲ್ಲಿನ ಮೀನು ಮಾರುಕಟ್ಟೆಯ ಸಮೀಪದದಲ್ಲಿನ ಗುಡ್ಡೆ ಕುಸಿದಿದ್ದು, ತುದಿಯಲ್ಲಿದ್ದ ವಿದ್ಯುತ್ ಕಂಬ ಧರೆಗುರುಳಿದೆ. ಇದರಿಂದಾಗಿ ಮೀನು ಮಾರುಕಟ್ಟೆಯ ಶೆಡ್ ಗೆ ಹಾನಿಯಾಗಿದೆ. ಎಲ್ಲಾ ದಿನಗಳಲ್ಲಿ ಈ ಸ್ಥಳದಲ್ಲಿ ವಾಹನಗಳನ್ನು ನಿಲುಗಡೆಗೊಳಿಸಲಾಗುತ್ತಿತ್ತಾದರೂ ಇಂದು ಯಾವುದೇ ವಾಹನಗಳಿರಲಿಲ್ಲ. ಅಲ್ಲದೆ ಘಟನೆ ನಡೆಯುವುದಕ್ಕಿಂತ ಕೆಲವೇ ಕ್ಷಣಗಳ ಮೊದಲು ಶಾಲಾ ವಿದ್ಯಾರ್ಥಿಗಳು ಇದೇ

ಕಡಬ: ಎಡೆಬಿಡದ ಮಳೆಗೆ ಗುಡ್ಡ ಕುಸಿದು ಧರೆಗುರುಳಿದ ವಿದ್ಯುತ್ ಕಂಬ ► ಕೆಲವೇ ಕ್ಷಣಗಳ ಅಂತರದಲ್ಲಿ ಅಪಾಯದಿಂದ ಪಾರಾದ ವಿದ್ಯಾರ್ಥಿಗಳು Read More »

ಕರಾವಳಿ
Scroll to Top