ಮಂಗಳೂರು: ಲಕ್ಷ್ಮಣ ಮಲ್ಲೂರುರವರಿಗೆ ತುಳು ಅಕಾಡೆಮಿಯಿಂದ ಸನ್ಮಾನ

(ನ್ಯೂಸ್ ಕಡಬ) newskadaba.com ಮ0ಗಳೂರು, ಜೂನ್. 20. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ತುಳುನಾಡಿನ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಸಾಧಕರನ್ನು ಗುರುತಿಸಿ ಪ್ರತಿ ತಿಂಗಳ ಚಾವಡಿ ಕಾರ್ಯಕ್ರಮದಲ್ಲಿ ಒಬ್ಬ ಸಾಧಕರನ್ನು ಸನ್ಮಾನಿಸಲು ಉದ್ದೇಶಿಸಿದೆ.ಪ್ರಥಮ ಚಾವಡಿ ಸನ್ಮಾನ ಜೂನ್ 23 ರಂದು ನಡೆಯಲಿದ್ದು ತುಳು ರಂಗಭೂಮಿ ಹಾಗೂ ಚಲನಚಿತ್ರ ಕ್ಷೇತ್ರದ ಮೇರು ಕಲಾವಿದ ಶ್ರೀ ಲಕ್ಷ್ಮಣ ಕುಮಾರ್ ಮಲ್ಲೂರುರವರನ್ನು ಸನ್ಮಾನಿಸಲಾಗುವುದು. ಕಳೆದ 4 ದಶಕಗಳಿಂದ ತುಳುರಂಗಭೂಮಿಯಲ್ಲಿ ನಟರಾಗಿ, ನಾಟಕ ರಚನೆಕಾರರಾಗಿ, ನಿರ್ದೇಶಕರಾಗಿ ಸೇವೆ ಸಲ್ಲಿಸಿರುವ […]

ಮಂಗಳೂರು: ಲಕ್ಷ್ಮಣ ಮಲ್ಲೂರುರವರಿಗೆ ತುಳು ಅಕಾಡೆಮಿಯಿಂದ ಸನ್ಮಾನ Read More »

ಕರಾವಳಿ

ಗೋಶಾಲೆಗಳಿಗೆ ಸಹಾಯಧನ: ಅರ್ಜಿ ಆಹ್ವಾನ

(ನ್ಯೂಸ್ ಕಡಬ)newskadaba.com ಮ0ಗಳೂರು, ಜೂನ್. 20. 2018-19 ನೇ ಸಾಲಿನ ಮೈಸೂರಿನ ಪಿಂಜರಪೋಲ್ ಮತ್ತು ಇತರೆ ಗೋಶಾಲೆಗಳಿಗೆ ಬೆಂಬಲ ನೀಡುವ ಕಾರ್ಯಕ್ರಮದಡಿ ಸಹಾಯಧನ ಮಂಜೂರಾತಿಗಾಗಿ 50 ಕ್ಕೂ ಹೆಚ್ಚು ಜಾನುವಾರುಗಳನ್ನು ಸಾಕಾಣಿಕೆ ಮಾಡುತ್ತಿರುವ ಗೋಶಾಲೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತಿ ಹೊಂದಿರುವ ಗೋಶಾಲೆಯವರು ಉಪ ನಿರ್ದೇಶಕರು (ಆಡಳಿತ), ಪಶುಪಾಲನಾ ಇಲಾಖೆ, ಮಂಗಳೂರು ಕಛೇರಿಯಲ್ಲಿ ಅರ್ಜಿ ಫಾರಂಗಳನ್ನು ಪಡೆದುಕೊಂಡು ಅಗತ್ಯ ದಾಖಲಾತಿಗಳೊಂದಿಗೆ ಜುಲೈ 20 ರೊಳಗೆ ಪ್ರಸ್ತಾವನೆಯನ್ನು ಖುದ್ದಾಗಿ ಸಲ್ಲಿಸಬೇಕು.   ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು (ಆಡಳಿತ), ಪಶುಪಾಲನಾ

ಗೋಶಾಲೆಗಳಿಗೆ ಸಹಾಯಧನ: ಅರ್ಜಿ ಆಹ್ವಾನ Read More »

ಕರಾವಳಿ

ಮಂಗಳೂರು: ಅಂತರರಾಷ್ಟ್ರೀಯ ಯೋಗ ದಿನಾಚರಣೆ

(ನ್ಯೂಸ್ ಕಡಬ) newskadaba.com ಮ0ಗಳೂರು, ಜೂನ್. 20. ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಆಯುಷ್ ಇಲಾಖೆ ವತಿಯಿಂದ ಜೂನ್ 21 ರಂದು ಮಂಗಳಾ ಒಳಾಂಗಣ ಕ್ರೀಡಾಂಗಣ, ಲೇಡಿಹಿಲ್, ಮಂಗಳೂರು ಇಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಗುವುದು. ಅಂದು ಬೆಳಿಗ್ಗೆ 8 ಗಂಟೆಗೆ ಕಾರ್ಯಕ್ರಮವನ್ನು ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ. ಖಾದರ್ ಉದ್ಘಾಟಿಸುವರು. ಮುಖ್ಯ ಕಾರ್ಯಕ್ರಮದಲ್ಲಿ ಸುಮಾರು 1000 ಜನರು ಭಾಗವಹಿಸುವ ನಿರೀಕ್ಷೆಯಿದ್ದು , ಈಗಾಗಲೇ ವಿವಿಧ ಸಂಸ್ಥೆಗಳು ಹಾಗೂ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜುಗಳ

ಮಂಗಳೂರು: ಅಂತರರಾಷ್ಟ್ರೀಯ ಯೋಗ ದಿನಾಚರಣೆ Read More »

ಕರಾವಳಿ

ಇಂದು ಮಂಗಳೂರು ಮಹಾನಗರ ಪಾಲಿಕೆಯಿಂದ ನೀರು ಸ್ಥಗಿತ

(ನ್ಯೂಸ್ ಕಡಬ)newskadaba.com ಮ0ಗಳೂರು, ಜೂನ್. 20. ಮಂಗಳೂರು ಮಹಾನಗರಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ ರೋಚಕ ಸ್ಥಾವರದ ಜಾಕ್‍ವೆಲ್‍ನಲ್ಲಿ ಮರಳು, ಕಸಕಡ್ಡಿಗಳು, ಮಡ್ಡಿ ಇತ್ಯಾದಿಗಳು ಶೇಖರಣೆಗೊಂಡಿದ್ದು, ನೀರೆತ್ತುವ ಪಂಪ್ ಚಾಲನೆಯಲ್ಲಿ ಅಡೆತಡೆ ಉಂಟಾಗುತ್ತಿರುವುದನ್ನು ಸರಿಪಡಿಸಲು, ಜಾಕ್‍ವೆಲ್‍ನ್ನು ಶುಚಿಗೊಳಿಸಲು ಜೂನ್ 20 ರಂದು ಪೂರ್ವಾಹ್ನ 6 ರಿಂದ ಸಂಜೆ 6 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ನಗರ ಭಾಗಶಃ ಪ್ರದೇಶ, ಮಂಗಳಾದೇವಿ, ಬಜಾಲ್, ಮೇರಿಹಿಲ್, ಪಚ್ಚನಾಡಿ, ಜಪ್ಪಿನಮೊಗರು, ವಾಮಂಜೂರು ನೀರುಮಾರ್ಗ, ಶಕ್ತಿನಗರ ಪ್ರದೇಶಗಳಲ್ಲಿ ನೀರು ವಿತರಣೆಯನ್ನು ಸಂಪೂರ್ಣ

ಇಂದು ಮಂಗಳೂರು ಮಹಾನಗರ ಪಾಲಿಕೆಯಿಂದ ನೀರು ಸ್ಥಗಿತ Read More »

ಕರಾವಳಿ

ನಾಳೆ ಕಡಬ, ನೆಲ್ಯಾಡಿ, ಸುಬ್ರಹ್ಮಣ್ಯ, ಸವಣೂರು ಭಾಗಗಳಲ್ಲಿ ವಿದ್ಯುತ್ ನಿಲುಗಡೆ

(ನ್ಯೂಸ್ ಕಡಬ) newskadaba.com ಕಡಬ, ಜೂ.20. ತುರ್ತು ಕಾಮಗಾರಿ ನಿಮಿತ್ತ ಜೂನ್ 21 ಗುರುವಾರದಂದು ಕಡಬ ಮೆಸ್ಕಾಂ ವಿಭಾಗದಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ರ ತನಕ ವಿದ್ಯುತ್ ನಿಲುಗಡೆಗೊಳಿಸಲಾಗುವುದು ಎಂದು ಕಡಬ ಮೆಸ್ಕಾಂ ಎಇಇ ಸಜಿ ಕುಮಾರ್ ತಿಳಿಸಿದ್ದಾರೆ. ಎಚ್‌ಟಿ ಹಾಗೂ ಎಲ್‌ಟಿ ವಿದ್ಯುತ್ ಲೈನ್ ದುರಸ್ತಿ ಹಾಗೂ ಲೈನ್‌ನಡಿಯಲ್ಲಿ ಮರ ಕಟ್ಟಿಂಗ್, ಮರದ ಗೆಲ್ಲು ಕಟ್ಟಿಂಗ್ ಸೇರಿದಂತೆ ತುರ್ತು ದುರಸ್ತಿ ಕಾರ್ಯಕ್ರಮ ಇರುವುದರಿಂದ ಕಡಬ ಮೆಸ್ಕಾಂ ವಿಭಾಗದ ಕಡಬ ನೆಲ್ಯಾಡಿ, ಸುಬ್ರಹ್ಮಣ್ಯ, ಸವಣೂರು

ನಾಳೆ ಕಡಬ, ನೆಲ್ಯಾಡಿ, ಸುಬ್ರಹ್ಮಣ್ಯ, ಸವಣೂರು ಭಾಗಗಳಲ್ಲಿ ವಿದ್ಯುತ್ ನಿಲುಗಡೆ Read More »

ಕರಾವಳಿ

ಶ್ರೀನಗರದ ವಾಸ್ತವ ಸಂಗತಿಗಳು ಮತ್ತು ಮಾಧ್ಯಮದ ವರದಿಗಳು ✍? ಝುಬೈರ್ ಹಳೆನೇರಂಕಿ (CRPF ಯೋಧ)

(ನ್ಯೂಸ್ ಕಡಬ) newskadaba.com ಜಮ್ಮು ಕಾಶ್ಮೀರ, ಜೂ.20. ಜಮ್ಮು ಕಾಶ್ಮೀರ ಭಾರತದ ಸ್ವರ್ಗ ಅಂತಾನೇ ಹೇಳಬಹುದು. ಆದರೆ ಇವತ್ತಿನ ದಿನಗಳಲ್ಲಿ ಕಾಶ್ಮೀರವು ಅತ್ಯಂತ ಚರ್ಚಿತವಾದ ಒಂದು ರಾಜ್ಯವಾಗಿದೆ. ಏಕೆಂದರೆ ಎಲ್ಲರ ಮನಸ್ಸಲ್ಲೂ ಇಲ್ಲಿನ ಸರ್ಕಾರ ಹಾಗೂ ಸೈನಿಕರು ಕಾಶ್ಮೀರದಲ್ಲಿನ ಅಮಾಯಕರನ್ನು ಕೊಲ್ಲುತ್ತಿದ್ದಾರೆ. ಆದರೆ ಇಲ್ಲಿ ನಡೆಯುತ್ತಿರುವ ವಾಸ್ತವ ಸತ್ಯನೇ ಬೇರೆ. ಇಲ್ಲಿ ಸ್ವಾತಂತ್ರ್ಯಾ ನಂತರ ಗಲಭೆಗಳು, ದಂಗೆಗಳು ನಡೆಯುತ್ತಿದ್ದು, ಇದು ಭಾರತ ಪಾಕಿಸ್ತಾನ ಗಡಿ ಪ್ರದೇಶ ಆಗಿರುವುದರಿಂದ ಇಲ್ಲಿ ಗಲಭೆಗಳು ನಡೆಯುವುದು ಸಾಮಾನ್ಯ. ಕಾಶ್ಮೀರದ ವಿಷಯವನ್ನು ಅರಿತಷ್ಟರ

ಶ್ರೀನಗರದ ವಾಸ್ತವ ಸಂಗತಿಗಳು ಮತ್ತು ಮಾಧ್ಯಮದ ವರದಿಗಳು ✍? ಝುಬೈರ್ ಹಳೆನೇರಂಕಿ (CRPF ಯೋಧ) Read More »

ಕರಾವಳಿ

ಕೊಡಂಗಾಯಿ: ಜೀಪು ಢಿಕ್ಕಿ ► ದ್ವಿಚಕ್ರ ವಾಹನ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ವಿಟ್ಲ, ಜೂ.19. ಜೀಪೊಂದು ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಮಂಗಳವಾರದಂದು ವಿಟ್ಲ ಸಮೀಪದ ಕೊಡಂಗಾಯಿಯಲ್ಲಿ ನಡೆದಿದೆ. ಮೃತ ಸವಾರನನ್ನು ಪಳಿಕೆ ನಿವಾಸಿ ಮಹಮ್ಮದ್ ಸಫ್ವಾನ್(18) ಎಂದು ಗುರುತಿಸಲಾಗಿದೆ. ಈತ ತನ್ನ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಕೊಡಂಗಾಯಿ ಎಂಬಲ್ಲಿ ಜೀಪು ಢಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡ ಸವಾರ ಸಫ್ವಾನ್ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿರುವ ವಿಟ್ಲ ಪೊಲೀಸರು ಪರಿಶೀಲನೆ ನಡೆಸಿದ್ದು, ಜೀಪು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೊಡಂಗಾಯಿ: ಜೀಪು ಢಿಕ್ಕಿ ► ದ್ವಿಚಕ್ರ ವಾಹನ ಸವಾರ ಮೃತ್ಯು Read More »

ಕರಾವಳಿ

ಕಡಬ ಗ್ರಾ.ಪಂ. ಮಾಜಿ ಸದಸ್ಯ ಶಬೀರ್ ಪಾಲೆಪ್ಪೆ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಜೂ.19. ಕಡಬ ಗ್ರಾಮ ಪಂಚಾಯತ್ ಮಾಜಿ ಸದಸ್ಯ, ಕೋಡಿಂಬಾಳ ಕೋಡಿಂಬಾಳ ರಹಮ್ಮಾನಿಯಾ ಜುಮ್ಮಾ ಮಸೀದಿಯ ಮಾಜಿ ಅಧ್ಯಕ್ಷ, ಹಿರಿಯ ಕಾಂಗ್ರೆಸ್ ಮುಖಂಡ ಶಬ್ಬೀರ್ ಮಡ್ಯಡ್ಕ ಇಂದು ನಿಧನ ಹೊಂದಿದರು. ಕಳೆದ ಹಲವು ಸಮಯಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿ ಚಿಕಿತ್ತೆ ಪಡೆದಿದ್ದ ಇವರು ಮಂಗಳವಾರ ಬೆಳಿಗ್ಗೆ ತನ್ನ ಸ್ವಗೃಹದಲ್ಲಿ ಕೊನೆಯುಸಿರೆಳೆದರು. ಮಡ್ಯಡ್ಕದಲ್ಲಿ ದಿನಸಿ ಅಂಗಡಿ ಹೊಂದಿದ್ದ ಇವರು ಎಲ್ಲರಿಗೂ ಚಿರಪರಿಚಿತರಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು

ಕಡಬ ಗ್ರಾ.ಪಂ. ಮಾಜಿ ಸದಸ್ಯ ಶಬೀರ್ ಪಾಲೆಪ್ಪೆ ನಿಧನ Read More »

ಕರಾವಳಿ

ಬದುಕು ಕಟ್ಟಿಕೊಟ್ಟ ಜೆಸಿಬಿಯಲ್ಲೇ ದಿಬ್ಬಣ ಹೊರಟ ಪುತ್ತೂರಿನ ನವದಂಪತಿ ► ‘ಜೆಸಿಬಿ’ ಮಣ್ಣು ಅಗೆಯಲು ಜೈ, ದಿಬ್ಬಣ ತೆರಳಲು ಸೈ ಎಂದ ಚೇತನ್

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ.19. ಮದುವೆಯ ಸಂದರ್ಭದಲ್ಲಿ ಮರೆಯಲಾಗದ ರೀತಿಯಲ್ಲಿ ವಿಭಿನ್ನವಾಗಿ ಏನಾದರೂ ಮಾಡುವುದನ್ನು ಹೆಚ್ಚಾಗಿ ನಾವು ಕಾಣುತ್ತೇವೆ. ಆದರೆ ಜೀವನ ಕಟ್ಟಿಕೊಟ್ಟ ಜೆಸಿಬಿಯಲ್ಲಿಯೇ ನವಜೋಡಿಯೊಂದು ಮದುವೆ ದಿಬ್ಬಣ ಹೊರಟ ಚಿತ್ರವು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜೆಸಿಬಿ ಆಪರೇಟರ್ ವೃತ್ತಿಯಲ್ಲಿರುವ ಪುತ್ತೂರಿನ ಸಂಟ್ಯಾರು ನಿವಾಸಿ ಚೇತನ್ ತಿಂಗಳಾಡಿಯ ಮಮತಾರೊಂದಿಗೆ ಹಸಮಣೆಗೆ ಕಾಲಿಟ್ಟಿದ್ದು, ಕಾರ್ಯಕ್ರಮಗಳೆಲ್ಲಾ ಮುಗಿದ ಕೂಡಲೇ ತನಗೆ ಬದುಕು ಕಟ್ಟಿಕೊಟ್ಟ ಜೆಸಿಬಿಯಲ್ಲೇ ದಿಬ್ಬಣ ಹೊರಟು ಜೆಸಿಬಿ ವಾಹನವು ಮಣ್ಣು ಅಗೆಯಲು ಮಾತ್ರವಲ್ಲ, ದಿಬ್ಬಣಕ್ಕೂ

ಬದುಕು ಕಟ್ಟಿಕೊಟ್ಟ ಜೆಸಿಬಿಯಲ್ಲೇ ದಿಬ್ಬಣ ಹೊರಟ ಪುತ್ತೂರಿನ ನವದಂಪತಿ ► ‘ಜೆಸಿಬಿ’ ಮಣ್ಣು ಅಗೆಯಲು ಜೈ, ದಿಬ್ಬಣ ತೆರಳಲು ಸೈ ಎಂದ ಚೇತನ್ Read More »

ಕರಾವಳಿ

ಪುತ್ತೂರು: ಸ್ಕಿಲ್ ಗೇಮ್ ಹೆಸರಿನಲ್ಲಿ ನಡೆಯುತ್ತಿದ್ದ ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ ► ಮೂವತ್ತಕ್ಕೂ ಹೆಚ್ಚು ಜನರ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ.19. ಸ್ಕಿಲ್ ಗೇಮ್ ನೆಪದಲ್ಲಿ ಅಕ್ರಮವಾಗಿ ಜುಗಾರಿ ನಡೆಸುತ್ತಿದ್ದ ಹೈಟೆಕ್ ಕೇಂದ್ರವೊಂದಕ್ಕೆ ದಾಳಿ ನಡೆಸಿರುವ ಪೊಲೀಸರು ಸಿಬ್ಬಂದಿ ಸೇರಿದಂತೆ ಮೂವತ್ತಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದ ಘಟನೆ ಸೋಮವಾರ ತಡರಾತ್ರಿ ಪುತ್ತೂರಿನಲ್ಲಿ ನಡೆದಿದೆ. ಕಳೆದ ಕೆಲವು ತಿಂಗಳಿನಿಂದ ಪುತ್ತೂರಿನ ಬೊಳುವಾರು ಶಾಲೆಯ ಮುಂಭಾಗದ ಪ್ರತಿಷ್ಠಿತ ಕಟ್ಟಡದಲ್ಲಿ ಹೈಕೋರ್ಟ್ ನ ಆದೇಶವಿದೆ ಎನ್ನುವ ದಾಖಲೆಯನ್ನು ತೋರಿಸಿ ರಾಜಾರೋಷವಾಗಿ ಸ್ಕಿಲ್ ಗೇಮ್ ನಡೆಯುತ್ತಿತ್ತೆನ್ನಲಾಗಿದ್ದು, ಈ ಬಗ್ಗೆ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಜಿಲ್ಲಾ ಎಸ್ಪಿ ಡಾ.ರವಿಕಾಂತೇಗೌಡ

ಪುತ್ತೂರು: ಸ್ಕಿಲ್ ಗೇಮ್ ಹೆಸರಿನಲ್ಲಿ ನಡೆಯುತ್ತಿದ್ದ ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ ► ಮೂವತ್ತಕ್ಕೂ ಹೆಚ್ಚು ಜನರ ಬಂಧನ Read More »

ಕರಾವಳಿ
Scroll to Top