ಬೆಳ್ತಂಗಡಿ: ಖಾಸಗಿ ಬಸ್ಸಿನ ಚಾಲಕ – ನಿರ್ವಾಹಕರ ಅಜಾಗರೂಕತೆಯ ಪರಿಣಾಮ ► ಬಸ್ಸಿನ ಚಕ್ರದಡಿಗೆ ಬಿದ್ದು ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ.18. ಖಾಸಗಿ ಬಸ್ಸಿನ ಚಕ್ರದಡಿಗೆ ಸಿಲುಕಿ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ತಾಲೂಕಿನ ಕರಂಬಾರಿನ ದರ್ಬೆಪಲ್ಕೆ ಭಜನಾ ಮಂದಿರದ ಬಳಿ ಸೋಮವಾರ ಸಂಜೆ‌ ನಡೆದಿದೆ. ಮೃತ ಬಾಲಕನನ್ನು ಕರಂಬಾರು ಸಮೀಪದ ದರ್ಬೆಪಲ್ಕೆ ನಿವಾಸಿ ಉಮೇಶ್ ಸಫಲ್ಯ ಎಂಬವರ ಪುತ್ರ ಚಿಂತನ್ (8) ಎಂದು ಗುರುತಿಸಲಾಗಿದೆ. ಈತ ತನ್ನ ತಾಯಿಯೊಂದಿಗೆ ಮದುವೆಗೆಂದು ತೆರಳಿದ್ದು, ಗೋಪಾಲಕೃಷ್ಣ ಎಂಬ ಖಾಸಗಿ ಬಸ್ಸಿನಲ್ಲಿ ಹಿಂತಿರುಗಿ ಇಳಿಯುತ್ತಿದ್ದ ವೇಳೆ ಚಾಲಕ ಅಜಾಗರೂಕತೆಯಿಂದ ಬಸ್ ಚಲಾಯಿಸಿದ ಪರಿಣಾಮ ಬಸ್ಸಿನಿಂದ […]

ಬೆಳ್ತಂಗಡಿ: ಖಾಸಗಿ ಬಸ್ಸಿನ ಚಾಲಕ – ನಿರ್ವಾಹಕರ ಅಜಾಗರೂಕತೆಯ ಪರಿಣಾಮ ► ಬಸ್ಸಿನ ಚಕ್ರದಡಿಗೆ ಬಿದ್ದು ಬಾಲಕ ಮೃತ್ಯು Read More »

ಕರಾವಳಿ

ಕತ್ತಲಲ್ಲಿ ಇದ್ದವರಿಗೆ ‘ಬೆಳಕಿನ ಭಾಗ್ಯ’ ► ನೀತಿ ತಂಡದಿಂದ ವಿನೂತನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜೂ.18. ವಿದ್ಯುತ್ ಸಂಪರ್ಕ ಇಲ್ಲದ ಮನೆಗಳನ್ನು ಗುರುತಿಸಿ, ವಿದ್ಯುತ್ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿ ಆ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ವಿನೂತನ ಕಾರ್ಯಕ್ರಮಕ್ಕೆ ನೀತಿ ತಂಡದಿಂದ ಚಾಲನೆ ನೀಡಲಾಯಿತು. ನೆಲ್ಯಾಡಿ ಕೊಣಾಲು ಪಾಂಡಿಬೆಟ್ಟು ಶಾಖೆಯ ನೇತೃತ್ವದಲ್ಲಿ ಮೆಸ್ಕಾಂ ಇಲಾಖೆಯ ಸಹಕಾರದೊಂದಿಗೆ ಇಲ್ಲಿನ ಒಕ್ಕೆಜಾಲು ನಿವಾಸಿ ಸುಕುಮಾರನ್ ಅವರಿಗೆ ಮತ್ತು ಇಲ್ಲಿನ ದರ್ಖಾಸು ಎಂಬಲ್ಲಿನ ಮೂರು ಮನೆಗಳಿಗೆ ಭಾಗ್ಯಜ್ಯೋತಿ ಯೋಜನೆಯ ಮೂಲಕ ವಿದ್ಯುತ್ ಸಂಪರ್ಕ ನೀಡಲಾಗಿದೆ. ಹಲವಾರು ವರ್ಷಗಳಿಂದ ಈ ಮನೆಯವರು ವಿದ್ಯುತ್

ಕತ್ತಲಲ್ಲಿ ಇದ್ದವರಿಗೆ ‘ಬೆಳಕಿನ ಭಾಗ್ಯ’ ► ನೀತಿ ತಂಡದಿಂದ ವಿನೂತನ ಕಾರ್ಯಕ್ರಮ Read More »

ಕರಾವಳಿ

ಕೈಕಂಬಕ್ಕೆ ಮತ್ತೆ ಕಾಲಿಟ್ಟರೇ ನಕ್ಸಲರು…? ► ಭಾಗೀಮಲೆ ರಕ್ಷಿತಾರಣ್ಯದಲ್ಲಿ ಸಂಚರಿಸಿದ ಗುಮಾನಿಯಿಂದ ಆತಂಕದಲ್ಲಿ ಗ್ರಾಮಸ್ಥರು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜೂ.17. ಇಲ್ಲಿಗೆ ಸಮೀಪದ ಭಾಗಿಮಲೆ ಮೀಸಲು ಅರಣ್ಯದ ಭಾಗ್ಯ ಎಂಬಲ್ಲಿ ಶನಿವಾರ ತಡರಾತ್ರಿ ಶಂಕಿತ ನಕ್ಸಲರು ಸಂಚಾರ ನಡೆಸಿದ್ದಾರೆ ಎಂಬ ಮಾಹಿತಿ ತಡವಾಗಿ ಬೆಳಕಿಗೆ ಬಂದಿದೆ. ಸ್ಥಳೀಯವಾಗಿ ಈ ಕುರಿತು ವದಂತಿ ಹಬ್ಬಿದ್ದು ಈ ಭಾಗದಲ್ಲಿ ಎಎನ್ಎಫ್ ತಂಡವು ರವಿವಾರ ಬೆಳಗ್ಗೆ ಕೂಂಬಿಂಗ್ ಆರಂಭಿಸಿದೆ ಎನ್ನಲಾಗಿದೆ. ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದಲ್ಲಿ ಮೂವರು ನಕ್ಸಲರು ಪ್ರತ್ಯಕ್ಷರಾಗಿದ್ದ ಹಿನ್ನೆಲೆಯಲ್ಲಿ ನಕ್ಸಲ್ ನಿಗ್ರಹ ದಳ ಹಾಗೂ ನಕ್ಸಲ್ ನಿಗ್ರಹ ಸ್ಕ್ವಾಡ್ ಜಂಟಿಯಾಗಿ ಕೂಂಬಿಂಗ್ ಕಾರ್ಯಾಚರಣೆ

ಕೈಕಂಬಕ್ಕೆ ಮತ್ತೆ ಕಾಲಿಟ್ಟರೇ ನಕ್ಸಲರು…? ► ಭಾಗೀಮಲೆ ರಕ್ಷಿತಾರಣ್ಯದಲ್ಲಿ ಸಂಚರಿಸಿದ ಗುಮಾನಿಯಿಂದ ಆತಂಕದಲ್ಲಿ ಗ್ರಾಮಸ್ಥರು Read More »

ಕರಾವಳಿ

ಹದಗೆಟ್ಟ ಕಲ್ಲಾಜೆ – ಅಂತಿಬೆಟ್ಟು ರಸ್ತೆಗೆ ಊರವರಿಂದಲೇ ಕಾಯಕಲ್ಪ ► ಸಡಕ್ ರಸ್ತೆಗೆ ಕಾದು ಸುಸ್ತಾಗಿ ಕೊನೆಗೆ ಶ್ರಮದಾನದ ಮೊರೆ ಹೋದ ಗ್ರಾಮಸ್ಥರು

(ನ್ಯೂಸ್ ಕಡಬ) newskadaba.com ಕಡಬ, ಜೂ.17. ಮರ್ದಾಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಲ್ಲಾಜೆ ಅಂತಿಬೆಟ್ಟು ಮಾರ್ಗವಾಗಿ ಕೋರಿಯಾರ್ ಮೂಲಕ ಕೋಡಿಂಬಾಳ ಸೇರಬೇಕಾದ ಗ್ರಾಮ ಸಡಕ್ ರಸ್ತೆಯು ಮಂಜೂರಾಗಿ ವರ್ಷಗಳೇ ಕಳೆದರೂ ರಸ್ತೆ ಅಭಿವೃದ್ಧಿಯಾಗದ ಹಿನ್ನೆಲೆಯಲ್ಲಿ ಈ ಭಾಗದ ಗ್ರಾಮಸ್ಥರೆಲ್ಲ ಸೇರಿಕೊಂಡು ಕೆಸರುಮಯ, ಹೊಂಡ, ಗುಂಡಿಗಳಿಂದ ಕೂಡಿದ ರಸ್ತೆಯನ್ನು ಶ್ರಮದಾನದ ಮೂಲಕ ದುರಸ್ತಿಗೊಳಿಸಿದ ಘಟನೆ ಭಾನುವಾರದಂದು ‌ನಡೆದಿದೆ. ಕಲ್ಲಾಜೆಯಿಂದ ಅಂತಿಬೆಟ್ಟುವರೆಗಿನ ಸುಮಾರು ೫೦ಕ್ಕೂ ಮೆಲ್ಪಟ್ಟ ಗ್ರಾಮಸ್ಥರು ಒಟ್ಟಾಗಿ ಬೆಳಿಗ್ಗೆಯಿಂದ ಸಂಜೆಯ ತನಕ ಶ್ರಮದಾನದ ಮೂಲಕ ರಸ್ತೆಯನ್ನು ದುರಸ್ಥಿಗೊಳಿಸಿದ್ದಾರೆ.

ಹದಗೆಟ್ಟ ಕಲ್ಲಾಜೆ – ಅಂತಿಬೆಟ್ಟು ರಸ್ತೆಗೆ ಊರವರಿಂದಲೇ ಕಾಯಕಲ್ಪ ► ಸಡಕ್ ರಸ್ತೆಗೆ ಕಾದು ಸುಸ್ತಾಗಿ ಕೊನೆಗೆ ಶ್ರಮದಾನದ ಮೊರೆ ಹೋದ ಗ್ರಾಮಸ್ಥರು Read More »

ಕರಾವಳಿ

ಕಡಬ ತಾಲೂಕು ಕಾರ್ಯಾರಂಭಕ್ಕೆ ಅಧಿಕಾರಿಗಳಿಂದ ಭರದ ಸಿದ್ಧತೆ ► ಕೋರ್ಟ್ ಸೇರಿದಂತೆ ಹೆಚ್ಚಿನ ಇಲಾಖೆಗಳು ಬಂಟ್ರ ಗ್ರಾಮದ ಮುಂಚಿಕಾಪಿಗೆ

(ನ್ಯೂಸ್ ಕಡಬ) newskadaba.com ಕಡಬ, ಜೂ.17. ನೂತನ ಕಡಬ ತಾಲೂಕು ಅನುಷ್ಠಾನಗೊಂಡು ಉದ್ಘಾಟನಾ ಭಾಗ್ಯಕ್ಕೆ ಕಾಲ ಸನ್ನಿಹಿತವಾಗಿದ್ದು, ಈ ಭಾಗದ ಜನರ ಬಹುದಿನಗಳ ಬೇಡಿಕೆ ಈಡೇರುವ ಸಮಯ ಬಂದಿದೆ. ಪುತ್ತೂರು ತಾಲೂಕಿನ 35 ಗ್ರಾಮಗಳು ಹಾಗೂ ಸುಳ್ಯ ತಾಲೂಕಿನ 7 ಗ್ರಾಮಗಳನ್ನು ಸೇರಿಸಿಕೊಂಡು ಒಟ್ಟು 42 ಗ್ರಾಮಗಳ ವ್ಯಾಪ್ತಿಯ ನೂತನ ಕಡಬ ತಾಲೂಕು ರೂಪುಗೊಂಡಿದ್ದು, ಹೊಸ ತಾಲೂಕಿನ ಒಟ್ಟು ಜನಸಂಖ್ಯೆ 1,20,086 (2011ರ ಜನಗಣತಿಯಂತೆ) ಇದ್ದು, ಒಟ್ಟು 149159.8 ಎಕರೆ ಭೌಗೋಳಿಕ ವಿಸ್ತೀರ್ಣವನ್ನು ಹೊಂದಿದೆ. ನೂತನ ತಾಲೂಕಿನಲ್ಲಿ

ಕಡಬ ತಾಲೂಕು ಕಾರ್ಯಾರಂಭಕ್ಕೆ ಅಧಿಕಾರಿಗಳಿಂದ ಭರದ ಸಿದ್ಧತೆ ► ಕೋರ್ಟ್ ಸೇರಿದಂತೆ ಹೆಚ್ಚಿನ ಇಲಾಖೆಗಳು ಬಂಟ್ರ ಗ್ರಾಮದ ಮುಂಚಿಕಾಪಿಗೆ Read More »

ಕರಾವಳಿ

ಕುಸಿತದ ಭೀತಿಯಲ್ಲಿ ಕೆಮ್ಮಾರ ಸೇತುವೆಯ ಪಾರ್ಶ್ವ ► ಸಂಭಾವ್ಯ ಅಪಾಯವನ್ನು ತಪ್ಪಿಸುವರೇ ಸಂಬಂಧಪಟ್ಟ ಅಧಿಕಾರಿಗಳು..!!

(ನ್ಯೂಸ್ ಕಡಬ) newskadaba.com ಕಡಬ, ಜೂ.17. ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಮ್ಮಾರ ಸೇತುವೆಯ ಒಂದು ಪಾರ್ಶ್ವದ ಕಲ್ಲುಗಳು ನೀರಿನ ಹೊಡೆತಕ್ಕೆ ಸಿಲುಕಿದ್ದು, ಕುಸಿತದ ಭೀತಿಯನ್ನು ಎದುರಿಸುತ್ತಿದೆ. ಹಲವು ಅಪಘಾತಗಳು ನಡೆದು ಕೆಲವು ಪ್ರಾಣಹಾನಿ ಸಂಭವಿಸಿದ್ದ ಈ ಸೇತುವೆಯ ಸಂಪರ್ಕಕ್ಕಾಗಿ ಹಾಕಲಾಗಿದ್ದ ಕಲ್ಲುಗಳು ನೀರಿನ ಸೆಳೆತಕ್ಕೆ ಸಿಲುಕಿ ಕುಸಿಯುವ ಸ್ಥಿತಿಯಲ್ಲಿದೆ. ಕರಾವಳಿ ಪ್ರದೇಶದಲ್ಲಿ ಮಳೆಯ ಪ್ರಮಾಣವು ಹೆಚ್ಚಿದಂತೆ ನದಿಯಲ್ಲಿ ನೀರಿನ ಹರಿವು ಕೂಡಾ ಹೆಚ್ಚಿದೆ. ಅಪಾಯಕಾರಿ ಸ್ಥಿತಿಯಲ್ಲಿರುವ ಈ ಸೇತುವೆಯ ಫೋಟೊವನ್ನು ಸ್ಥಳೀಯರು ಸಾಮಾಜಿಕ ಜಾಲತಾಣಗಳಲ್ಲಿ

ಕುಸಿತದ ಭೀತಿಯಲ್ಲಿ ಕೆಮ್ಮಾರ ಸೇತುವೆಯ ಪಾರ್ಶ್ವ ► ಸಂಭಾವ್ಯ ಅಪಾಯವನ್ನು ತಪ್ಪಿಸುವರೇ ಸಂಬಂಧಪಟ್ಟ ಅಧಿಕಾರಿಗಳು..!! Read More »

ಕರಾವಳಿ

ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸದ್ದಕ್ಕೆ ಬೇಸತ್ತ ಮಹಿಳೆ ► ತನ್ನ ಮೂವರು ಮಕ್ಕಳನ್ನು ಕೆರೆಗೆ ದೂಡಿ ತಾನೂ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.17. ಮಕ್ಕಳನ್ನು ಕಾನ್ವೆಂಟ್ ಶಾಲೆಗೆ ಸೇರಿಸಲು ಆರ್ಥಿಕ ಸಂಕಷ್ಟ ಇರುವುದರಿಂದ ಸರಕಾರಿ ಶಾಲೆಗೆ ಕಳುಹಿಸೋಣ ಎಂದುದಕ್ಕೆ ಮಹಿಳೆಯೋರ್ವರು ತನ್ನ ಮೂವರು ಮಕ್ಕಳನ್ನು ಕೆರೆಗೆ ದೂಡಿ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಮಾಲೂರು ಮಾಸ್ತಿ ಠಾಣಾ ವ್ಯಾಪ್ತಿಯ ನಕ್ಕನಹಳ್ಳಿ ನಿವಾಸಿ ಪಾರ್ವತಮ್ಮ(25), ತನ್ನ ಮಕ್ಕಳಾದ ಜೀವನ್(7), ಚಂದನ(5) ಹಾಗೂ ಅಕ್ಷಯ್(3)ರನ್ನು ಕೆರೆಗೆ ದೂಡಿಹಾಕಿ ಬಳಿಕ ತಾನೂ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಖಾಸಗಿ ಶಾಲೆಗೆ ಮಕ್ಕಳನ್ನು ಸೇರಿಸಬೇಕೆನ್ನುವ ಹಠದಿಂದ ಮಂಜುನಾಥ್

ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸದ್ದಕ್ಕೆ ಬೇಸತ್ತ ಮಹಿಳೆ ► ತನ್ನ ಮೂವರು ಮಕ್ಕಳನ್ನು ಕೆರೆಗೆ ದೂಡಿ ತಾನೂ ಆತ್ಮಹತ್ಯೆ Read More »

ಕರ್ನಾಟಕ

ಸುಳ್ಯ: ನಕ್ಸಲ್ ನಿಗ್ರಹ ದಳದಿಂದ ಕೂಂಬಿಂಗ್ ► ಕಾರ್ಯಾಚರಣೆ ವೇಳೆ ಹೃದಯಾಘಾತದಿಂದ ಎಎನ್ಎಫ್ ಯೋಧ ಮೃತ್ಯು

ಸಾಂದರ್ಭಿಕ ಚಿತ್ರ (ನ್ಯೂಸ್ ಕಡಬ) newskadaba.com ಸುಳ್ಯ, ಜೂ.16. ತಾಲೂಕಿನ ಮಡಪ್ಪಾಡಿ ಗ್ರಾಮದಲ್ಲಿ ಮೂವರು ಶಂಕಿತ ನಕ್ಸಲರು ಪ್ರತ್ಯಕ್ಷರಾಗಿದ್ದ ಹಿನ್ನೆಲೆಯಲ್ಲಿ ಕೂಂಬಿಂಗ್ ಕಾರ್ಯಾಚರಣೆಗೆ ತೆರಳಿದ್ದ ನಕ್ಸಲ್ ನಿಗ್ರಹ ದಳದ ಯೋಧರೋರ್ವರು ಹೃದಯಾಘಾತದಿಂದಾಗಿ ಮೃತಪಟ್ಟ ಘಟನೆ ಶನಿವಾರದಂದು ನಡೆದಿದೆ. ಮೃತ ಯೋಧನನ್ನು ಕಾರ್ಕಳ ಮೂಲದ ರಂಗಸ್ವಾಮಿ (48) ಎಂದು ಗುರುತಿಸಲಾಗಿದೆ. ಇವರು ತನ್ನ ತಂಡದೊಂದಿಗೆ ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಕೋಟೆ ಕಾಡು ಅರಣ್ಯ ಪ್ರದೇಶದಲ್ಲಿ ಎಂಬಲ್ಲಿ ಕರ್ತವ್ಯ ನಿರತರಾಗಿದ್ದ ವೇಳೆ ಹೃದಯಾಘಾತಕ್ಕೊಳಗಾಗಿದ್ದು, ತಕ್ಷಣವೇ ತಮ್ಮ ತಂಡದ ಸದಸ್ಯರು

ಸುಳ್ಯ: ನಕ್ಸಲ್ ನಿಗ್ರಹ ದಳದಿಂದ ಕೂಂಬಿಂಗ್ ► ಕಾರ್ಯಾಚರಣೆ ವೇಳೆ ಹೃದಯಾಘಾತದಿಂದ ಎಎನ್ಎಫ್ ಯೋಧ ಮೃತ್ಯು Read More »

ಕರಾವಳಿ

ಶವ ರಾಜಕೀಯ ಮಾಡುವ ಕರಾವಳಿಯಲ್ಲಿ ನೆಲೆ‌ನಿಂತ ಮಾನವೀಯತೆ ► ಸಂಬಂಧಿಕರಿದ್ದೂ ಅನಾಥವಾದ ಹಿಂದೂ ಮಹಿಳೆಯ ಅಂತ್ಯಸಂಸ್ಕಾರಗೈದ ಮುಸ್ಲಿಮರು

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ.16. ಶವವನ್ನಿಟ್ಟು ರಾಜಕೀಯ ಮಾಡುವಂತಹ ಕೋಮು ಸೂಕ್ಷ್ಮ ಪ್ರದೇಶವಾದ ಕರಾವಳಿಯಲ್ಲಿ ಅಂತ್ಯಸಂಸ್ಕಾರಕ್ಕೆ ಹಣವಿಲ್ಲದೆ ಪರದಾಡುತ್ತಿದ್ದ ಹಿಂದೂ ಮಹಿಳೆಯೋರ್ವರ ಮೃತದೇಹವನ್ನು ಮುಸ್ಲಿಂ ಬಾಂಧವರು ಹಣ ಸಂಗ್ರಹಿಸಿ ಅಂತ್ಯಸಂಸ್ಕಾರಗೈದ‌ ಅಪರೂಪದ ಘಟನೆ ಪುತ್ತೂರಿನಲ್ಲಿ ಶನಿವಾರದಂದು ನಡೆದಿದೆ. ಪುತ್ತೂರಿನ ಕಬಕ‌ ಗ್ರಾಮದ ವಿದ್ಯಾಪುರ ಕಾಲನಿ ನಿವಾಸಿ‌ ದಿ. ನಾರಾಯಣ ಸಿಂಗ್ ಎಂಬವರ ಪುತ್ರಿ ಭವಾನಿ (52 ವ.) ಶನಿವಾರದಂದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ. ತನ್ನ ಚಿಕ್ಕಪ್ಪನ ಮಗನ ಮನೆಯಲ್ಲಿ ವಾಸವಾಗಿದ್ದ ಭವಾನಿಯವರು ಮೃತಪಟ್ಟ ವಿಚಾರವನ್ನು ಅವರ

ಶವ ರಾಜಕೀಯ ಮಾಡುವ ಕರಾವಳಿಯಲ್ಲಿ ನೆಲೆ‌ನಿಂತ ಮಾನವೀಯತೆ ► ಸಂಬಂಧಿಕರಿದ್ದೂ ಅನಾಥವಾದ ಹಿಂದೂ ಮಹಿಳೆಯ ಅಂತ್ಯಸಂಸ್ಕಾರಗೈದ ಮುಸ್ಲಿಮರು Read More »

ಕರಾವಳಿ

ನಕ್ಸಲರು ಪ್ರತ್ಯಕ್ಷರಾಗಿದ್ದ ಹಿನ್ನೆಲೆ ► ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದಲ್ಲಿ ಕೂಂಬಿಂಗ್ ಆರಂಭ

ಸಾಂದರ್ಭಿಕ ಚಿತ್ರ (ನ್ಯೂಸ್ ಕಡಬ) newskadaba.com ಸುಳ್ಯ, ಜೂ.16. ತಾಲೂಕಿನ ಮಡಪ್ಪಾಡಿ ಗ್ರಾಮದಲ್ಲಿ ಮೂವರು ಶಂಕಿತ ನಕ್ಸಲರು ಪ್ರತ್ಯಕ್ಷರಾಗಿದ್ದ ಹಿನ್ನೆಲೆಯಲ್ಲಿ ಶನಿವಾರದಂದು ನಕ್ಸಲ್ ನಿಗ್ರಹ ದಳದಿಂದ ಕೂಂಬಿಂಗ್ ಆರಂಭಿಸಲಾಗಿದೆ. ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಹಾಡಿಕಲ್ಲು ನಿವಾಸಿ ಜಯರಾಮ್ ಎಂಬವರ ಮನೆಯ ರಬ್ಬರ್ ಟ್ಯಾಪಿಂಗ್ ಕೆಲಸಗಾರ ಕೇರಳ ಮೂಲದ ಥಾಮಸ್.ಎ.ಜೆ. ಎಂಬವರು ಗುರುವಾರ ರಾತ್ರಿ ಊಟಕ್ಕೆ ಕುಳಿತಿರುವಾಗ ಮೂವರು ಶಂಕಿತ ನಕ್ಸಲರು ಮನೆ ಒಳಗೆ ಬಂದು ಬಂದೂಕನ್ನು ತೋರಿಸಿ ತನಗೆಂದು ಮಾಡಿಟ್ಟಿದ್ದ ಅಡುಗೆಯನ್ನು ತೆಗೆದುಕೊಂಡು ಮನೆಯ ಹೊರಗೆ

ನಕ್ಸಲರು ಪ್ರತ್ಯಕ್ಷರಾಗಿದ್ದ ಹಿನ್ನೆಲೆ ► ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದಲ್ಲಿ ಕೂಂಬಿಂಗ್ ಆರಂಭ Read More »

ಕರಾವಳಿ
Scroll to Top