ಮಳೆಯ ಪ್ರಮಾಣ ತಗ್ಗಿದ ಹಿನ್ನೆಲೆ ► ಚಾರ್ಮಾಡಿ ಘಾಟ್ ನಲ್ಲಿ ಸಂಚಾರ ಪುನರಾರಂಭ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಜೂ.16. ಚಾರ್ಮಾಡಿ ಘಾಟ್ ನಲ್ಲಿ ಭೂಕುಸಿತದಿಂದಾಗಿ ಸ್ಥಗೊತಗೊಂಡಿದ್ದ ವಾಹನ ಸಂಚಾರವು ಶುಕ್ರವಾರದಿಂದ ಸರಾಗವಾಗಿ ಆರಂಭಗೊಂಡಿದೆ. ಚಾರ್ಮಾಡಿ ಘಾಟಿಯಲ್ಲಿ ಉಂಟಾಗಿದ್ದ ಭೂ ಕುಸಿತದ ಮಣ್ಣು ಹಾಗೂ ಮರಗಳ ತೆರವು ಕಾರ್ಯವು ಗುರುವಾರ ಸಂಜೆಯ ವೇಳೆಗೆ ಮುಕ್ತಾಯಗೊಂಡಿದ್ದು, ಗುರುವಾರ ರಾತ್ರಿಯಿಂದಲೇ ಚಾರ್ಮಾಡಿ ಘಾಟಿಯಲ್ಲಿ ಕಾರು, ಜೀಪು ಸೇರಿದಂತೆ ಲಘು ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ಅವಕಾಶ ಕಲ್ಪಿಸಿತ್ತು. ಶುಕ್ರವಾರ ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿ ಸಕಲೇಶಪುರ ಉಪ ವಿಭಾಗದ ಎಂಜಿನಿಯರ್‌ಗಳು ಘಾಟಿಯಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿದ್ದು, ವಾಹನ ಸಂಚಾರಕ್ಕೆ […]

ಮಳೆಯ ಪ್ರಮಾಣ ತಗ್ಗಿದ ಹಿನ್ನೆಲೆ ► ಚಾರ್ಮಾಡಿ ಘಾಟ್ ನಲ್ಲಿ ಸಂಚಾರ ಪುನರಾರಂಭ Read More »

ಕರ್ನಾಟಕ

ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಧರ್ಮಸ್ಥಳಕ್ಕೆ ► ಎರಡು ವಾರಗಳ ಕಾಲ ಇಲ್ಲೇ ಉಳಿದುಕೊಳ್ಳಲಿರುವ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಜೂ.16. ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಕೂಟದ ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದು, ಎರಡು ವಾರಗಳ ಕಾಲ ಇಲ್ಲೇ ಉಳಿದುಕೊಳ್ಳಲಿದ್ದಾರೆ. ಬೆಂಗಳೂರಿನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಅಗಮಿಸುವ ಅವರು ಅಲ್ಲಿಂದ ರಸ್ತೆ ಮಾರ್ಗವಾಗಿ ಧರ್ಮಸ್ಥಳಕ್ಕೆ ಪ್ರಯಾಣಿಸಲಿದ್ದಾರೆ. ಧರ್ಮಸ್ಥಳದಲ್ಲಿರುವ ನ್ಯಾಚುರೋಪತಿ ಚಿಕಿತ್ಸಾ ಕೇಂದ್ರದಲ್ಲಿ ಮುಂದಿನ ಎರಡು ವಾರಗಳ ಕಾಲ ವಿರಾಮ ಹಾಗು ಚಿಕಿತ್ಸೆ ಪಡೆಯಲಿದ್ದಾರೆ. ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಒತ್ತಡ ನಿವಾರಣೆಗಾಗಿ

ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಧರ್ಮಸ್ಥಳಕ್ಕೆ ► ಎರಡು ವಾರಗಳ ಕಾಲ ಇಲ್ಲೇ ಉಳಿದುಕೊಳ್ಳಲಿರುವ ಸಿದ್ದರಾಮಯ್ಯ Read More »

ಕರ್ನಾಟಕ

ಸುಳ್ಯದ ಗ್ರಾಮವೊಂದರಲ್ಲಿ ಪ್ರತ್ಯಕ್ಷರಾದ ಶಂಕಿತ‌ ನಕ್ಸಲರು ► ಆತಂಕದಲ್ಲಿ ಗ್ರಾಮಸ್ಥರು

(ನ್ಯೂಸ್ ಕಡಬ) newskadaba.com ಸುಳ್ಯ, ಜೂ.15. ಮೂವರು ಶಂಕಿತ ನಕ್ಸಲರು ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದಲ್ಲಿ ಶುಕ್ರವಾರದಂದು ಬೆಳಿಗ್ಗೆ ಪ್ರತ್ಯಕ್ಷರಾಗಿದ್ದು, ಸ್ಥಳೀಯರನ್ನು ಆತಂಕಕ್ಕೀಡುಮಾಡಿದೆ. ಇಂದು ಬೆಳಗ್ಗೆ ಮಡಪ್ಪಾಡಿ ಗ್ರಾಮದ ಹಾಡಿಕಲ್ಲು ನಿವಾಸಿ ಜಯರಾಮ ಎಂಬವರ ತೋಟದ ಬಳಿ ಶಸ್ತ್ರಸಜ್ಜಿತ ಇಬ್ಬರು ಮಹಿಳೆಯರು ಹಾಗೂ ಓರ್ವ ಪುರುಷ ನಡೆದುಕೊಂಡು ಹೋಗಿದ್ದು, ಸ್ಥಳೀಯರು ಈ ಬಗ್ಗೆ ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಭೇಟಿ ನೀಡಿರುವ ಸುಳ್ಯ ಠಾಣಾ ಪೋಲಿಸರು ತನಿಖೆಯನ್ನು ಮುಂದುವರಿಸಿದ್ದಾರೆ‌.

ಸುಳ್ಯದ ಗ್ರಾಮವೊಂದರಲ್ಲಿ ಪ್ರತ್ಯಕ್ಷರಾದ ಶಂಕಿತ‌ ನಕ್ಸಲರು ► ಆತಂಕದಲ್ಲಿ ಗ್ರಾಮಸ್ಥರು Read More »

ಕರಾವಳಿ

ಪ್ರವಾಸೋದ್ಯಮ ಇಲಾಖೆಯಿಂದ ಟ್ಯಾಕ್ಸಿ ವಿತರಣೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.15. ಪ್ರವಾಸೋದ್ಯಮ ಇಲಾಖೆಯಿಂದ 2018-19ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ಮತ್ತು ಅಲ್ಪಸಂಖ್ಯಾತ ವರ್ಗಗಳ ಯೋಜನೆಯಡಿಯಲ್ಲಿ ಲಘುವಾಹನ ಚಾಲನಾ ಪರವಾನಗಿ ಹಾಗೂ ಚಾಲಕರ ಬ್ಯಾಡ್ಜ್ ಹೊಂದಿರುವ 20 ರಿಂದ 40 ವರ್ಷ ವಯೋಮಿತಿಯೊಳಗಿನ ನಿರುದ್ಯೋಗಿ ವಿದ್ಯಾವಂತ ಯುವಕ/ಯುವತಿಯರಿಗೆ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳುವ ಸಲುವಾಗಿ ಪ್ರವಾಸಿ ವಾಹನಗಳನ್ನು ಖರೀದಿಸಿ ವಿತರಿಸುವ ಸಲುವಾಗಿ ಅರ್ಹ ನಿರುದ್ಯೋಗಿ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರವಾಸಿ ಟ್ಯಾಕ್ಸಿಗಳಿಗೆ

ಪ್ರವಾಸೋದ್ಯಮ ಇಲಾಖೆಯಿಂದ ಟ್ಯಾಕ್ಸಿ ವಿತರಣೆಗೆ ಅರ್ಜಿ ಆಹ್ವಾನ Read More »

ಕರಾವಳಿ

ನಾಳೆ ಈದುಲ್ ಫಿತರ್ ಆಚರಿಸಲು ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಕರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.14. ಶವ್ವಾಲ್‌ನ ಪ್ರಥಮ ಚಂದ್ರದರ್ಶನ ಆಗಿರುವುದರಿಂದ ಶುಕ್ರವಾರದಂದು ಈದುಲ್ ಫಿತ್ರ್ ಆಚರಿಸಲು ದ.ಕ. ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕ ಅಹ್ಮದ್ ಮುಸ್ಲಿಯಾರ್ ಕರೆ ನೀಡಿದ್ದಾರೆ. ಕೇರಳದ ಕ್ಯಾಲಿಕಟ್ ನಲ್ಲಿ ಗುರುವಾರ ಅಸ್ತಮಿಸಿದ ಶುಕ್ರವಾರ ರಾತ್ರಿ ಶವ್ವಾಲ್‌ನ ಪ್ರಥಮ ಚಂದ್ರದರ್ಶನ ಆಗಿರುವುದರಿಂದ ದಕ್ಷಿಣ ಕನ್ನಡದಲ್ಲೂ ಶುಕ್ರವಾರ ಈದುಲ್ ಫಿತ್ರ್ ಆಚರಿಸಲಾಗುವುದು ಎಂದಿದ್ದಾರೆ.

ನಾಳೆ ಈದುಲ್ ಫಿತರ್ ಆಚರಿಸಲು ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಕರೆ Read More »

ಕರಾವಳಿ

ಭಾರೀ ಮಳೆಯಿಂದಾಗಿ ಸುಬ್ರಹ್ಮಣ್ಯ – ಸಿರಿಬಾಗಿಲು ಮಧ್ಯೆ ಭೂಕುಸಿತ ► ಮಂಗಳೂರು – ಬೆಂಗಳೂರು ರೈಲು ಸಂಚಾರ ಸ್ಥಗಿತ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜೂ.14. ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯ – ಸಿರಿಬಾಗಿಲು ಮಧ್ಯದ ರೈಲ್ವೇ ಹಳಿಯ ಮೇಲೆ ಮಣ್ಣು ಬಿದ್ದ ಪರಿಣಾಮ ಬೆಂಗಳೂರು -ಮಂಗಳೂರು ರೈಲು ಸಂಚಾರ ಸ್ಥಗಿತಗೊಂಡಿದೆ. ಸುಬ್ರಹ್ಮಣ್ಯ-ಸಿರಿಬಾಗಿಲು ಮಧ್ಯಭಾಗದಲ್ಲಿ ಹಠಾತ್ ಭೂಕುಸಿತ ಉಂಟಾಗಿ ರೈಲ್ವೆ ಹಳಿಯ ಮೇಲೆ ಮಣ್ಣು ಬಿದ್ದಿದೆ. ಇದರಿಂದಾಗಿ 10.50ಕ್ಕೆ ಮಂಗಳೂರಿನಿಂದ ಹೊರಟಿದ್ದ ಕಾರವಾರ – ಬೆಂಗಳೂರು ಹಗಲು ರೈಲು ಸುಬ್ರಹ್ಮಣ್ಯ ರೋಡ್ ವರೆಗೆ ಸಂಚರಿಸಿ ಮುಂದಿನ ಪ್ರಯಾಣವನ್ನು ರದ್ದುಗೊಳಿಸಿದೆ. ಬೆಂಗಳೂರಿನಿಂದ ಮಂಗಳೂರಿನತ್ತ ಹೊರಟಿದ್ದ ರೈಲು ಸಕಲೇಶಪುರವರೆಗೆ

ಭಾರೀ ಮಳೆಯಿಂದಾಗಿ ಸುಬ್ರಹ್ಮಣ್ಯ – ಸಿರಿಬಾಗಿಲು ಮಧ್ಯೆ ಭೂಕುಸಿತ ► ಮಂಗಳೂರು – ಬೆಂಗಳೂರು ರೈಲು ಸಂಚಾರ ಸ್ಥಗಿತ Read More »

ಕರಾವಳಿ

ಜೂ.14: ಇಂದು “ವಿಶ್ವ ರಕ್ತದಾನಿಗಳ ದಿನ” ► ಡಾ| ಮುರಲೀ ಮೋಹನ್ ಚೂಂತಾರುರವರ ವಿಶೇಷ ಲೇಖನ

(ನ್ಯೂಸ್ ಕಡಬ) newskadaba.com ಆರೋಗ್ಯ ಮಾಹಿತಿ, ಜೂ.14. “ರಕ್ತದಾನ ಜೀವದಾನ” ಪ್ರತಿ ವರ್ಷ ಜೂನ್ 14 ರಂದು “ವಿಶ್ವ ರಕ್ತದಾನಿಗಳ ದಿನ” ಎಂದು ಆಚರಿಸಲಾಗುತ್ತದೆ. ಈ ಆಚರಣೆಯ ಉದ್ದೇಶ ಏನೆಂದರೆ ಪ್ರತಿಯೊಬ್ಬರೂ ಇದರಿಂದ ಪ್ರೇರಿತರಾಗಿ ಹೆಚ್ಚು ಹೆಚ್ಚು ಜನರು ರಕ್ತದಾನಕ್ಕೆ ಪ್ರೇರಣೆಗೊಳ್ಳಬೇಕೆಂಬುದು ನಮ್ಮೆಲ್ಲರ ಆಶಯ. ಜಗತ್ತಿನ ಅತೀ ದೊಡ್ಡ ಸಂಶೋಧನೆ ಎಂದರೆ, ಒಬ್ಬ ಮನುಷ್ಯನ ರಕ್ತವನ್ನು ಇನ್ನೊಬ್ಬನ ಜೀವ ಉಳಿಸಲು ಉಪಯೋಗಿಸುವುದು. ಯಾವುದೇ ವ್ಯಕ್ತಿ ಇನ್ನೊಬ್ಬರ ಜೀವ ಉಳಿಸಲು ತನ್ನ ರಕ್ತವನ್ನು ಸ್ವಯಂ ಪ್ರೇರಿತವಾಗಿ ಯಾವುದೇ ಪ್ರತಿಢೂದೇಕ್ಷೆಯಿಲ್ಲದೆ

ಜೂ.14: ಇಂದು “ವಿಶ್ವ ರಕ್ತದಾನಿಗಳ ದಿನ” ► ಡಾ| ಮುರಲೀ ಮೋಹನ್ ಚೂಂತಾರುರವರ ವಿಶೇಷ ಲೇಖನ Read More »

ಕರಾವಳಿ

ವಿಟ್ಲ: ಅಕ್ರಮ ಮರ ಸಾಗಾಟ ► ಪಿಕಪ್ ಸಹಿತ‌ ಮರದ ದಿಮ್ಮಿಗಳು ವಶಕ್ಕೆ

(ನ್ಯೂಸ್ ಕಡಬ) newskadaba.com ವಿಟ್ಲ, ಜೂ.14. ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದುದನ್ನು ಪತ್ತೆಹಚ್ಚಿರುವ ಅರಣ್ಯಾಧಿಕಾರಿಗಳು ಪಿಕಪ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಕಲ್ಲಡ್ಕ – ವಿಟ್ಲ ಹೆದ್ದಾರಿಯಲ್ಲಿ ಅಕ್ರಮ ಮರ ಸಾಗಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ವಿಟ್ಲ ಕಸಬಾ ಗ್ರಾಮದ ಮಂಗಿಲ ಪದವು ಎಂಬಲ್ಲಿ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ನಡೆಸಿ ಪಿಕಪ್ ವಾಹನವನ್ನು ವಶಪಡಿಸಿಕೊಂಡಿದ್ದು, ಚಾಲಕ ವಾಹನವನ್ನು ಬಿಟ್ಟು ಓಡಿ ತಪ್ಪಿಸಿಕೊಂಡಿದ್ದಾನೆ ಎನ್ನಲಾಗಿದೆ. ಮಂಗಳೂರು ವಿಭಾಗ ಉಪ ವಲಯ ಅರಣ್ಯ ಸಂರಕ್ಷಣಾಧಿಕಾರಿ ಕರಿಕಾಳನ್ ರವರ ನಿರ್ದೇಶನದಲ್ಲಿ ಸಹಾಯಕ ಅರಣ್ಯ

ವಿಟ್ಲ: ಅಕ್ರಮ ಮರ ಸಾಗಾಟ ► ಪಿಕಪ್ ಸಹಿತ‌ ಮರದ ದಿಮ್ಮಿಗಳು ವಶಕ್ಕೆ Read More »

ಕರಾವಳಿ

ಮಹಾ ಮಳೆಗೆ ಮತ್ತೊಮ್ಮೆ ತತ್ತರಿಸಿದ ಕರಾವಳಿ ► ಚಿಕ್ಕಮಗಳೂರು – ಮಂಗಳೂರು ಬದಲಿ ಮಾರ್ಗವೂ ಬಂದ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.14. ಕರಾವಳಿಯಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ಕರಾವಳಿಯು ಮತ್ತೊಮ್ಮೆ ತತ್ತರಿಸಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕರಾವಳಿಯ ಪುತ್ತೂರು, ಬೆಳ್ತಂಗಡಿ ಹಾಗೂ ಸುಳ್ಯ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ನದಿ, ಹಳ್ಳಗಳು ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ವಹಿಸಲಾಗಿದೆ. ಪದೇ ಪದೇ ಭೂಕುಸಿತ ಉಂಟಾಗುತ್ತಿರುವುದರಿಂದ ಚಿಕ್ಕಮಗಳೂರು ಮಂಗಳೂರು ರಸ್ತೆಯ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸಂಚಾರ ನಿಷೇಧಿಸಲಾದ ನಂತರ ಬದಲಿ‌ ಮಾರ್ಗವಾಗಿದ್ದ ಕುದುರೆಮುಖದಲ್ಲೂ ಸೇತುವೆಯೊಂದು ಮುಳುಗಿದ್ದು,

ಮಹಾ ಮಳೆಗೆ ಮತ್ತೊಮ್ಮೆ ತತ್ತರಿಸಿದ ಕರಾವಳಿ ► ಚಿಕ್ಕಮಗಳೂರು – ಮಂಗಳೂರು ಬದಲಿ ಮಾರ್ಗವೂ ಬಂದ್ Read More »

ಕರ್ನಾಟಕ

ಮಳೆಯ ಪ್ರಮಾಣ ತೀವ್ರಗೊಂಡ ಹಿನ್ನೆಲೆ ► ಪುತ್ತೂರು, ಸುಳ್ಯ ತಾಲೂಕಿನ ಎಲ್ಲಾ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಪುತ್ತೂರು/ಸುಳ್ಯ, ಜೂ.14. ಭಾರೀ ಮಳೆ ಸುರಿಯುತ್ತಿರುವುದರಿಂದ ಪುತ್ತೂರು ಹಾಗೂ ಸುಳ್ಯ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉಭಯ ತಾಲೂಕುಗಳಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ನದಿ, ಹಳ್ಳಗಳು ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಪುತ್ತೂರು ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಎಸಿ ಕೃಷ್ಣಮೂರ್ತಿ ಆದೇಶಿಸಿದ್ದಾರೆ. ಸುಳ್ಯ ತಹಶಿಲ್ದಾರ್ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.

ಮಳೆಯ ಪ್ರಮಾಣ ತೀವ್ರಗೊಂಡ ಹಿನ್ನೆಲೆ ► ಪುತ್ತೂರು, ಸುಳ್ಯ ತಾಲೂಕಿನ ಎಲ್ಲಾ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ
Scroll to Top