ಚಾರ್ಮಾಡಿ ಘಾಟ್ ನಲ್ಲಿ ಮಣ್ಣು ಕುಸಿದು ಸಂಚಾರಕ್ಕೆ ಸಂಚಕಾರ ► ಬೆಂಗಳೂರು ಪ್ರಯಾಣಿಸುವವರಿಗೆ ಸಂಪಾಜೆಯೇ ಉಪಕಾರ

(ನ್ಯೂಸ್ ಕಡಬ) newskadaba.com ಕಡಬ, ಜೂ.12. ಮಳೆಯ ಪ್ರಮಾಣ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಚಾರ್ಮಾಡಿ ಘಾಟ್ ರಸ್ತೆಯ ವಿವಿಧೆಡೆ ಗುಡ್ಡ ಕುಸಿದ ಪರಿಣಾಮ ಸಂಚಾರಕ್ಕೆ ತೊಡಕುಂಟಾಗಿದೆ. ಸೋಮವಾರದಂದು ಘಾಟ್ ರಸ್ತೆಯ ಎರಡನೇ ಹಾಗೂ ಮೂರನೇ ತಿರುವಿನ ಮಧ್ಯೆ ಮಣ್ಣು ಕುಸಿದು ಬಿದ್ದುದರಿಂದ ರಸ್ತೆ ತಡೆಯುಂಟಾಗಿ ಹಸನಬ್ಬ ಚಾರ್ಮಾಡಿ ಹಾಗೂ ಅವರ ತಂಡವು ಶ್ರಮವಹಿಸಿ ಒಂದು ಹಂತದ ತಡೆಯನ್ನು ತೆರವುಗೊಳಿಸಿದ ಪರಿಣಾಮ ಏಕಮುಖ ವಾಹನ ಸಂಚಾರಕ್ಕೆ ಅನುವು ಮಾಡಿ ಕೊಡಲಾಗಿತ್ತು. ಆದರೆ ಘಾಟಿ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಮಂಗಳವಾರದಂದು ಮತ್ತೆ […]

ಚಾರ್ಮಾಡಿ ಘಾಟ್ ನಲ್ಲಿ ಮಣ್ಣು ಕುಸಿದು ಸಂಚಾರಕ್ಕೆ ಸಂಚಕಾರ ► ಬೆಂಗಳೂರು ಪ್ರಯಾಣಿಸುವವರಿಗೆ ಸಂಪಾಜೆಯೇ ಉಪಕಾರ Read More »

ಕರಾವಳಿ

ಕುಂತೂರು: ಕಳ್ಳರ ಕೈಚಳಕ ► ಮೂರು ಅಂಗಡಿಗಳ ಒಳ ನುಗ್ಗಿದ ಕಳ್ಳರು

(ನ್ಯೂಸ್ ಕಡಬ) newskadaba.com ಕಡಬ, ಜೂ.12. ಅಂಗಡಿಗಳ ಬೀಗ ಒಡೆದು ಒಳನುಗ್ಗಿರುವ ಕಳ್ಳರು ಚಿಲ್ಲರೆ ಹಣವನ್ನು ದೋಚಿದ ಘಟನೆ ಠಾಣಾ ವ್ಯಾಪ್ತಿಯ ಕುಂತೂರಿನಲ್ಲಿ ಸೋಮವಾರ ರಾತ್ರಿ ನಡೆದಿದೆ. ಪೆರಾಬೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜನಾರ್ದನ ಶೆಟ್ಟಿ ಎಂಬವರಿಗೆ ಸೇರಿದ ದಿನಸಿ ಅಂಗಡಿಯ ಒಳ ನುಗ್ಗಿರುವ ಕಳ್ಳರು ಒಂದು ಮೊಬೈಲ್ ಹಾಗೂ ಹಣವನ್ನು ಕದ್ದೊಯ್ದಿದ್ದಾರೆ. ಪಕ್ಕದಲ್ಲೇ ಇದ್ದ ಮೇಘನಾಥ ಎಂಬವರಿಗೆ ಸೇರಿದ ಮೊಬೈಲ್ ಸೆಂಟರ್ ನಿಂದ ಹಣವನ್ನು ದೋಚಿದ್ದಾರೆ. ದಯಾನಂದ ಎಂಬವರ ಗೂಡಂಗಡಿಯಿಂದಲೂ ಕಳ್ಳತನವಾಗಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ

ಕುಂತೂರು: ಕಳ್ಳರ ಕೈಚಳಕ ► ಮೂರು ಅಂಗಡಿಗಳ ಒಳ ನುಗ್ಗಿದ ಕಳ್ಳರು Read More »

ಕರಾವಳಿ

ಬಂಟ್ವಾಳ: ಹಾಡುಹಗಲೇ ತಲವಾರು ದಾಳಿ ► ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ.11. ಪೂರ್ವ ದ್ವೇಷದ ಹಿನ್ನೆಲೆಯಲ್ಲಿ ಬಿಜೆಪಿ – ಕಾಂಗ್ರೆಸ್ ಕಾರ್ಯಕರ್ತರು ಹಾಡುಹಗಲೇ ಪರಸ್ಪರ ಹಲ್ಲೆ ನಡೆಸಿದ ಘಟನೆ ಬಿ.ಸಿ.ರೋಡ್ ನಲ್ಲಿ ಸೋಮವಾರದಂದು ನಡೆದಿದೆ. ತುಳು ಚಿತ್ರನಟ, ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಸುರೇಂದ್ರ ಬಂಟ್ವಾಳರ ತಂಡದಲ್ಲಿ ಗುರುತಿಕೊಂಡಿದ್ದ ಯುವಕನೋರ್ವನಿಗೆ ಬಿಜೆಪಿ ಕಾರ್ಯಕರ್ತರ ತಂಡವೊಂದು ಫೇಸ್‍ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಕಾರಣಕ್ಕೆ ಭಾನುವಾರದಂದು ಸೆಲೂನ್ ಗೆ ನುಗ್ಗಿ ಹಲ್ಲೆ ನಡೆಸಿತ್ತೆನ್ನಲಾಗಿದೆ. ಇದೇ ವೈಷಮ್ಯದಲ್ಲಿ ಸೋಮವಾರದಂದು ಬಿ.ಸಿ.ರೋಡಿನ ಬಡ್ಡಕಟ್ಟೆಯ ಹೊಟೇಲೊಂದಕ್ಕೆ ಊಟಕ್ಕೆಂದು ತೆರಳಿದ್ದ ಬಿಜೆಪಿ

ಬಂಟ್ವಾಳ: ಹಾಡುಹಗಲೇ ತಲವಾರು ದಾಳಿ ► ಇಬ್ಬರಿಗೆ ಗಾಯ Read More »

ಕರಾವಳಿ

ನೆಟ್ಟಣ: ಸೇತುವೆ ಮುಳುಗಡೆ ► ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಸಂಚಾರ ಬಂದ್

(ನ್ಯೂಸ್ ಕಡಬ) newskadaba.com ಕಡಬ, ಜೂ.11. ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಬಿಳಿನೆಲೆ ಸಂಪರ್ಕ ಸೇತುವೆಯು ಮುಳುಗಡೆಗೊಂಡಿದ್ದು, ಹೆದ್ದಾರಿ ತಡೆ ಉಂಟಾಗಿದೆ. ಇದರಿಂದಾಗಿ ದೂರದೂರುಗಳ ಯಾತ್ರಿಕರಿಗೆ ತೊಂದರೆಯುಂಟಾಗಿದೆ. ಬಸ್ಸು, ಲಾರಿ ಸೇರಿದಂತೆ ಘನ ವಾಹನಗಳ ಚಾಲಕರು ನೀರಿನ ಹರಿವು ಕಡಿಮೆಯಾಗುವವರೆಗೆ ರಸ್ತೆ ಬದಿಯಲ್ಲಿ ಕಾಯುತ್ತಿದ್ದಾರೆ. ಕಾರು, ಟೆಂಪೋ ಮೊದಲಾದ ವಾಹನಗಳು ಸುಂಕದಕಟ್ಟೆ, ಕೊಂಬಾರು, ಕೆಂಜಾಳ, ಕೈಕಂಬ ಮಾರ್ಗವಾಗಿ ಸುಬ್ರಹ್ಮಣ್ಯ ತೆರಳುವಂತಾಗಿದೆ.

ನೆಟ್ಟಣ: ಸೇತುವೆ ಮುಳುಗಡೆ ► ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಸಂಚಾರ ಬಂದ್ Read More »

ಕರಾವಳಿ

ಹೊಸ್ಮಠ ಸೇತುವೆ ಮುಳುಗಡೆ ► ಉಪ್ಪಿನಂಗಡಿ – ಸುಬ್ರಹ್ಮಣ್ಯ ಸಂಚಾರ ಅಸ್ತವ್ಯಸ್ತ

(ನ್ಯೂಸ್ ಕಡಬ) newskadaba.com ಕಡಬ, ಜೂ.11. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಮುಳುಗು ಸೇತುವೆಯೆಂದೇ ಖ್ಯಾತಿ ಪಡೆದಿರುವ ಹೊಸ್ಮಠ ಸೇತುವೆಯು ಮುಳುಗಡೆಗೊಂಡು ಸಂಚಾರಕ್ಕೆ ತಡೆಯುಂಟಾಗಿದೆ. ಹಲವು ದಶಕಗಳಿಂದ ಮಳೆಗೆ ಮುಳುಗಡೆಗೊಂಡು ಸಂಚಾರಕ್ಕೆ ಅಡಚಣೆಯುಂಟಾಗುವ ಹಿನ್ನೆಲೆಯಲ್ಲಿ ನೂತನ ಸೇತುವೆಯು ನಿರ್ಮಾಣ ಹಂತದಲ್ಲಿದ್ದು, ಇನ್ನೂ ಬಿಡುಗಡೆ ಭಾಗ್ಯ ಸಿಕ್ಕಿಲ್ಲ. ಸೇತುವೆ ಮುಳುಗಡೆಯಿಂದಾಗಿ ಉಪ್ಪಿನಂಗಡಿ – ಸುಬ್ರಹ್ಮಣ್ಯ ಕಡೆಗೆ ಪ್ರಯಾಣಿಸುವ ಶಾಲಾ – ಕಾಲೇಜುಗಳ ವಿದ್ಯಾರ್ಥಿಗಳು, ಉದ್ಯೋಗಿಗಳು ಸೇರಿ ಹಲವರು ತೊಂದರೆ ಅನುಭವಿಸುವಂತಾಯಿತು.

ಹೊಸ್ಮಠ ಸೇತುವೆ ಮುಳುಗಡೆ ► ಉಪ್ಪಿನಂಗಡಿ – ಸುಬ್ರಹ್ಮಣ್ಯ ಸಂಚಾರ ಅಸ್ತವ್ಯಸ್ತ Read More »

ಕರಾವಳಿ

ಉಪ್ಪಿನಂಗಡಿ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ನದಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂನ್.11. ಹತ್ತು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರ ಮೃತದೇಹವು ಭಾನುವಾರದಂದು ಬಂಟ್ವಾಳದ ಶಂಭೂರು ಸಮೀಪ ನದಿಯಲ್ಲಿ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಬೆಳ್ತಂಗಡಿ ತಾಲೂಕಿನ ಬಾರ್ಯ ಸಮೀಪದ ಪಿಲಿಗೂಡು ನಿವಾಸಿ ರಮೇಶ್ ಗೌಡ (45) ಎಂದು ಗುರುತಿಸಲಾಗಿದೆ. ಟೈಲರಿಂಗ್ ವೃತ್ತಿ ನಿರ್ವಹಿಸುತ್ತಿದ್ದ ರಮೇಶ್ ಹತ್ತು ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಭಾನುವಾರದಂದು ಬಂಟ್ವಾಳ ತಾಲೂಕಿನ ಶಂಭೂರು ಡ್ಯಾಂ ಸಮೀಪ ಮೃತದೇಹಚು ದೊರೆತಿದ್ದು, ವಿಷಯ ತಿಳಿದ ಬಂಟ್ವಾಳ ಪೋಲಿಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಉಪ್ಪಿನಂಗಡಿ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ನದಿಯಲ್ಲಿ ಪತ್ತೆ Read More »

ಕರಾವಳಿ

ಕೊಯಿಲ: ಡೆಂಗ್ಯೂ ಜ್ವರಕ್ಕೆ ಮಹಿಳೆ ಬಲಿ

(ನ್ಯೂಸ್ ಕಡಬ) newskadaba.com ಕಡಬ, ಜೂ.10. ಡೆಂಗ್ಯೂ ಜ್ವರಕ್ಕೆ ಮಹಿಳೆಯೋರ್ವರು ಬಲಿಯಾಗಿರುವ ಘಟನೆ ಇಲ್ಲಿನ ಕೊಯಿಲದಲ್ಲಿ ಶನಿವಾರದಂದು ನಡೆದಿದೆ. ಮೃತ ಮಹಿಳೆಯನ್ನು ಕೊಯಿಲ ಗ್ರಾಮದ ಏಣಿತಡ್ಕ ನಿವಾಸಿ ಶಿವರಾಮ ನಾಯ್ಕ ಎಂಬವರ ಪತ್ನಿ ಅಶ್ವಿತಾ(27) ಎಂದು ಗುರುತಿಸಲಾಗಿದೆ. ಇವರಿಗೆ ಬುಧವಾರದಂದು ಜ್ವರ ಕಾಣಿಸಿಕೊಂಡಿದ್ದು, ಸ್ಥಳೀಯವಾಗಿ ಚಿಕಿತ್ಸೆ ಪಡೆದು ಗುಣಮುಖರಾಗದ ಕಾರಣ ಉಪ್ಪಿನಂಗಡಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ಅಲ್ಲಿ ಡೆಂಗ್ಯೂ ಜ್ವರ ಪತ್ತೆಯಾಗಿರುವುದಲ್ಲದೆ, ಜ್ವರದ ತೀವ್ರತೆ ಹೆಚ್ಚಾಯಿತು. ಬಳಿಕ ಅವರನ್ನು ಶುಕ್ರವಾರ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ

ಕೊಯಿಲ: ಡೆಂಗ್ಯೂ ಜ್ವರಕ್ಕೆ ಮಹಿಳೆ ಬಲಿ Read More »

ಕರಾವಳಿ

ಇಚಿಲಂಪಾಡಿ: ರಸ್ತೆ ಬದಿಯ ತೋಡಿಗೆ ಇಳಿದ ಲಾರಿ

(ನ್ಯೂಸ್ ಕಡಬ) newskadaba.com ಕಡಬ, ಜೂ.10. ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ಬದಿಯ ತೋಡಿಗೆ ಬಿದ್ದ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಾಯರಡ್ಕ ಕ್ರಾಸ್ ಬಳಿ ಭಾನುವಾರದಂದು ನಡೆದಿದೆ. ನೆಲ್ಯಾಡಿಯಿಂದ ಇಚಿಲಂಪಾಡಿ ಕಡೆಗೆ ತೆರಳುತ್ತಿದ್ದ 709 ಲಾರಿ ಚಾಲಕನ ನಿಯಂತ್ರಣ ತಪ್ಪಿ ತೋಡಿಗಿಳಿದಿದ್ದು, ಲಾರಿಯಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ತೋಡಿಗೆ ನಿರ್ಮಿಸಲಾಗಿದ್ದ ತಡೆಗೋಡೆಯು ಕಳಪೆಯಾಗಿದ್ದು, ನಾಲ್ಕು ದಿನಗಳ ಹಿಂದೆ ಕಾರೊಂದು ಢಿಕ್ಕಿ ಹೊಡೆದುದರಿಂದಾಗಿ ತಡೆಗೋಡೆ ಕುಸಿದಿತ್ತು ಎನ್ನಲಾಗಿದೆ. ಇಚಿಲಂಪಾಡಿ ರಸ್ತೆಯಲ್ಲಿನ ಕಾಮಗಾರಿಯು

ಇಚಿಲಂಪಾಡಿ: ರಸ್ತೆ ಬದಿಯ ತೋಡಿಗೆ ಇಳಿದ ಲಾರಿ Read More »

ಕರಾವಳಿ

ಬೊಳುವಾರು: ಕಾರು ಢಿಕ್ಕಿ ► ಪಾದಚಾರಿ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ.10. ಕಾರೊಂದು ಢಿಕ್ಕಿಯಾದ ಪರಿಣಾಮ ಪಾದಚಾರಿಯೋರ್ವರು ಮೃತಪಟ್ಟ ಘಟನೆ ಬೊಳುವಾರಿನಲ್ಲಿ ಶನಿವಾರ ರಾತ್ರಿ ನಡೆದಿದೆ. ಮೃತ ಪಾದಚಾರಿಯನ್ನು ಸುಬ್ರಹ್ಮಣ್ಯದ ಮಹಮ್ಮಾಯಿ ಹೊಟೇಲ್‌ನಲ್ಲಿ ಸೂಪರ್ ವೈಸರ್ ಆಗಿದ್ದ ಉರ್ಲಾಂಡಿ ನಿವಾಸಿ ದಿ.ವಾಸುದೇವ ಹೆಗ್ಡೆ ಎಂಬವರ ಪುತ್ರ ಪ್ರಶಾಂತ್ ಹೆಗ್ಡೆ ಎಂದು ಗುರುತಿಸಲಾಗಿದೆ. ಇವರು ಭಾನುವಾರದಂದು ರಜೆ ಇದ್ದ ಕಾರಣ ಶನಿವಾರ ರಾತ್ರಿ ನಡೆದುಕೊಂಡು ಮನೆಯ ಕಡೆಗೆ ತೆರಳುತ್ತಿದ್ದಾಗ ಬೊಳುವಾರಿನ ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಬಳಿ ಕಾರು ಢಿಕ್ಕಿಯಾಗಿ ಈ ದುರ್ಘಟನೆ

ಬೊಳುವಾರು: ಕಾರು ಢಿಕ್ಕಿ ► ಪಾದಚಾರಿ ಮೃತ್ಯು Read More »

ಕರಾವಳಿ

ಮಾಣಿ ಬಸ್ – ಬೈಕ್ ಢಿಕ್ಕಿ ► ಗಾಯಾಳು ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ವಿಟ್ಲ, ಜೂ.10. ಖಾಸಗಿ ಬಸ್ ಹಾಗೂ ಬೈಕ್‌ ನಡುವೆ ಢಿಕ್ಕಿ ಸಂಭವಿಸಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಶನಿವಾರದಂದು ನಡೆದಿದೆ. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ‌ ಮಾಣಿ ಜಂಕ್ಷನ್ ನಲ್ಲಿ ಶುಕ್ರವಾರ ಬೆಳಿಗ್ಗೆ ಮಹೇಶ್ ಸಂಸ್ಥೆಯ ಖಾಸಗಿ ಬಸ್ ಹಾಗೂ ಬೈಕ್‌ ನಡುವೆ ಅಪಘಾತವಾಗಿತ್ತು. ಈ ಸಂದರ್ಭದಲ್ಲಿ ಬೈಕ್ ಬಸ್ಸಿನ ಅಡಿಗೆ ಬಿದ್ದು ಜಖಂಗೊಂಡಿದ್ದು, ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಅನಂತಾಡಿ ನಿವಾಸಿ ಮೋಹನ್ ರನ್ನು ಮಂಗಳೂರಿನ

ಮಾಣಿ ಬಸ್ – ಬೈಕ್ ಢಿಕ್ಕಿ ► ಗಾಯಾಳು ಸವಾರ ಮೃತ್ಯು Read More »

ಕರಾವಳಿ
Scroll to Top