ಕರಾವಳಿಯಲ್ಲಿ ಮಹಾ’ಮಳೆ’ ► ಕಾರು ಚರಂಡಿಗಿಳಿದು ವೃದ್ಧೆ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.09. ಕಾರೊಂದು ಚರಂಡಿಗೆ ಬಿದ್ದುದರಿಂದಾಗಿ ವೃದ್ಧ ಮಹಿಳೆಯೋರ್ವರು ಮೃತಪಟ್ಟ ಘಟನೆ ಮುಲ್ಕಿ ಸಮೀಪದ ಕೊಲ್ನಾಡು ಎಂಬಲ್ಲಿ ಶನಿವಾರದಂದು ನಡೆದಿದೆ. ಕರಾವಳಿ ಪ್ರದೇಶದಲ್ಲಿ ತೀವ್ರ ಮಳೆ ಸುರಿಯುತ್ತಿರುವುದರಿಂದ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಬಪ್ಪನಾಡು ನಿವಾಸಿ ಅಪ್ಪಿ ಶೇರಿಗಾರ್ತಿ(83) ಮೃತಪಟ್ಟಿದ್ದು, ಚಾಲಕ ಸೇರಿದಂತೆ ಇಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಮಂಗಳೂರು ಉತ್ತರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕರಾವಳಿಯಲ್ಲಿ ಮಹಾ’ಮಳೆ’ ► ಕಾರು ಚರಂಡಿಗಿಳಿದು ವೃದ್ಧೆ ಮೃತ್ಯು Read More »

ಕರಾವಳಿ

ಬೆಳ್ತಂಗಡಿ: ನದಿಗೆ ಬಿದ್ದು ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ.09. ಮಹಿಳೆಯೋರ್ವರು ನದಿಗೆ ಬಿದ್ದು ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ಶನಿವಾರದಂದು ನಡೆದಿದೆ. ಮೃತ ಮಹಿಳೆಯನ್ನು ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದ ರೇವತಿ(50) ಎಂದು ಗುರುತಿಸಲಾಗಿದೆ. ಕಳೆದೆರಡು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ನದಿಗಳು ತುಂಬಿ ತುಳುಕುತ್ತಿದ್ದು, ಮಹಿಳೆಯು ನದಿಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಭೇಟಿ ನೀಡಿರುವ ವೇಣೂರು ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಬೆಳ್ತಂಗಡಿ: ನದಿಗೆ ಬಿದ್ದು ಮಹಿಳೆ ಮೃತ್ಯು Read More »

ಕರಾವಳಿ

ಮದುವೆಯಾಗುವುದಾಗಿ ನಂಬಿಸಿ ಇದೀಗ ವಂಚನೆ ► ಯುವತಿಯಿಂದ ಕಡಬ ಪೊಲೀಸರಿಗೆ ದೂರು

(ನ್ಯೂಸ್ ಕಡಬ) newskadaba.com ಕಡಬ, ಜೂ.08. ಮದುವೆಯಾಗುವುದಾಗಿ ಮಾತುಕತೆ ನಡೆಸಿ ಕೊನೆಗೆ ಮದುವೆಯಾಗುವುದಿಲ್ಲವೆಂದು ವಂಚಿಸಿದ ಬಗ್ಗೆ ಯುವತಿಯೋರ್ವರು ಕಡಬ ಠಾಣೆಗೆ ದೂರು ನೀಡಿದ್ದಾರೆ. ವಿದೇಶದಲ್ಲಿ ಉದ್ಯೋಗದಲ್ಲಿದ್ದ ಪುತ್ತೂರು ತಾಲೂಕಿನ ಮುಂಡೂರು ರಾಘವೇಂದ್ರ ನಿಲಯ ನಿವಾಸಿ ಶೀನ ನಾಯ್ಕ್ ಎಂಬವರ ಪುತ್ರ ದಿವಾಕರ ನಾಯ್ಕ್ ಎಂಬಾತನಿಗೆ 2017 ಮಾರ್ಚ್ ನಲ್ಲಿ ಕಡಬ ಠಾಣಾ ವ್ಯಾಪ್ತಿಯ ಯುವತಿಯೊಂದಿಗೆ ಮದುವೆಯಾಗುವುದಾಗಿ ಮಾತುಕತೆ ನಡೆದಿತ್ತೆನ್ನಲಾಗಿದೆ. 2018 ರ ಮೇ ತಿಂಗಳಲ್ಲಿ ವಿದೇಶದಿಂದ ಬಂದ ದಿವಾಕರ ನಾಯ್ಕ್ ಯುವತಿಯನ್ನು ಮದುವೆಯಾಗಲು ನಿರಾಕರಿಸಿದ್ದು, ಈ ಬಗ್ಗೆ

ಮದುವೆಯಾಗುವುದಾಗಿ ನಂಬಿಸಿ ಇದೀಗ ವಂಚನೆ ► ಯುವತಿಯಿಂದ ಕಡಬ ಪೊಲೀಸರಿಗೆ ದೂರು Read More »

ಕರಾವಳಿ

ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಗ್ರಾಮ ಪಂಚಾಯತ್ ಸದಸ್ಯ ► ಆತ್ಮಹತ್ಯೆಗೆ ಮುನ್ನ ಸ್ನೇಹಿತರಿಗೆ ವಾಟ್ಸ್ಅಪ್ ನಲ್ಲಿ ಕಳುಹಿಸಿದ ಸಂದೇಶವೇನು ಗೊತ್ತೇ?

(ನ್ಯೂಸ್ ಕಡಬ) newskadaba.com ಉಡುಪಿ, ಜೂ.09. ವೈಯಕ್ತಿಕ ವಿಚಾರಕ್ಕೆ ಮನನೊಂದ ಗ್ರಾಮ ಪಂಚಾಯತ್ ಸದಸ್ಯರೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಮಲ್ಪೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕಡೆಕಾರ್ ಗ್ರಾಪಂ ಸದಸ್ಯ, ಮಲ್ಪೆ ಕೊಡವೂರು ಲಕ್ಷ್ಮೀನಗರ ನಿವಾಸಿ ರಾಕೇಶ್(31) ಎಂದು ಗುರುತಿಸಲಾಗಿದೆ. ಕೌಟುಂಬಿಕ ಸಮಸ್ಯೆಯಿಂದ ಮನನೊಂದಿದ್ದ ರಾಕೇಶ್ ‘ಜೀವನದಲ್ಲಿ ನೊಂದಿದ್ದು, ನನ್ನ ಸಾವಿಗೆ ನಾನೇ ಕಾರಣ’ ಎಂದು ಆತ್ಮಹತ್ಯೆಗೆ ಮುನ್ನ ವಾಟ್ಸ್ಅಪ್ ನಲ್ಲಿ ತನ್ನ ಸ್ನೇಹಿತರಿಗೆ ಸಂದೇಶ ಕಳುಹಿಸಿದ್ದರು. ಸ್ಥಳಕ್ಕೆ ಮಲ್ಪೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಗ್ರಾಮ ಪಂಚಾಯತ್ ಸದಸ್ಯ ► ಆತ್ಮಹತ್ಯೆಗೆ ಮುನ್ನ ಸ್ನೇಹಿತರಿಗೆ ವಾಟ್ಸ್ಅಪ್ ನಲ್ಲಿ ಕಳುಹಿಸಿದ ಸಂದೇಶವೇನು ಗೊತ್ತೇ? Read More »

ಕರಾವಳಿ

ಮಂಗಳೂರು ಮಂಗಳಾದೇವಿ ದೇವಸ್ಥಾನದಲ್ಲಿ ಧರೆಗುರುಳಿದ ಮರ ► ನಾಲ್ವರಿಗೆ ಗಾಯ – ತಪ್ಪಿದ ಭಾರೀ ಅನಾಹುತ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.09. ನಗರದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಮಂಗಳಾದೇವಿ ದೇವಸ್ಥಾನದ ಮುಂಭಾಗದ ಮರದ ರೆಂಬೆಯೊಂದು ಮುರಿದು ಬಿದ್ದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಶುಕ್ರವಾರ ಸಂಜೆ ನಡೆದಿದೆ. ಗಾಯಾಳುಗಳನ್ನು ಜೆಪ್ಪು ನಿವಾಸಿ ನವೀನ್(45), ಮಾರ್ನಮಿಕಟ್ಟೆ ನಿವಾಸಿಗಳಾದ ಸುರೇಖಾ ಶೆಟ್ಟಿ(53) ಹಾಗೂ ತೇಜಸ್ವಿನಿ(20), ನಂದಿಗುಡ್ಡೆ ನಿವಾಸಿ ಪ್ರಮೀಳಾ(49), ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ‌ ಶುಕ್ರವಾರ ಸಂಜೆ ಬೀಸಿದ ಭಾರೀ ಗಾಳಿಗೆ ದೇವಸ್ಥಾನದ ಎದುರಿನ ಅಶೋಕ ಮರದ ರೆಂಬೆಯೊಂದು ತುಂಡಾಗಿ ಬಿದ್ದು ಈ

ಮಂಗಳೂರು ಮಂಗಳಾದೇವಿ ದೇವಸ್ಥಾನದಲ್ಲಿ ಧರೆಗುರುಳಿದ ಮರ ► ನಾಲ್ವರಿಗೆ ಗಾಯ – ತಪ್ಪಿದ ಭಾರೀ ಅನಾಹುತ Read More »

ಕರಾವಳಿ

ಕೊನೆಗೂ ಜೆಡಿಎಸ್ – ಕಾಂಗ್ರೆಸ್ ಸಮ್ಮಿಶ್ರ ಸರಕಾರದ ಸಚಿವರಿಗೆ ಖಾತೆ‌ ಹಂಚಿಕೆ ► ಯಾರ್ಯಾರಿಗೆ ಯಾವ್ಯಾವ ಖಾತೆ ಎಂದು ತಿಳಿಯಬೇಕೆ..?

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.08. ರಾಜ್ಯದ ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಎಲ್ಲರಿಗೂ ಖಾತೆಯನ್ನು ಅಂತಿಮಗೊಳಿಸಲಾಗಿದ್ದು, ಈ ಕೆಳಗಿನಂತೆ ಹಂಚಲಾಗಿದೆ. ಎಚ್‌.ಡಿ. ಕುಮಾರಸ್ವಾಮಿ – ಹಣಕಾಸು / ಇಂಧನ / ಗುಪ್ತವಾರ್ತೆ / ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಖಾತೆ ಪರಮೇಶ್ವರ್ – ಗೃಹ / ಬೆಂಗಳೂರು ನಗರಾಭಿವೃದ್ಧಿ ಎಚ್‌ಡಿ ರೇವಣ್ಣ – ಲೋಕೋಪಯೋಗಿ ಆರ್‌ವಿ ದೇಶಪಾಂಡೆ – ಕಂದಾಯ ಡಿಕೆ ಶಿವಕುಮಾರ್ – ಜಲಸಂಪನ್ಮೂಲ / ವೈದ್ಯಕೀಯ

ಕೊನೆಗೂ ಜೆಡಿಎಸ್ – ಕಾಂಗ್ರೆಸ್ ಸಮ್ಮಿಶ್ರ ಸರಕಾರದ ಸಚಿವರಿಗೆ ಖಾತೆ‌ ಹಂಚಿಕೆ ► ಯಾರ್ಯಾರಿಗೆ ಯಾವ್ಯಾವ ಖಾತೆ ಎಂದು ತಿಳಿಯಬೇಕೆ..? Read More »

ಕರ್ನಾಟಕ

ಬಲ್ಯ: ಜಾಗದ ವಿಚಾರದಲ್ಲಿ ಪರಸ್ಪರ ಹಲ್ಲೆ ► ದೂರು – ಪ್ರತಿ ದೂರು

(ನ್ಯೂಸ್ ಕಡಬ) newskadaba.com ಕಡಬ, ಜೂ.08. ಜಾಗದ ತಕರಾರಿನ ಹಿನ್ನೆಲೆಯಲ್ಲಿ ವ್ಯಕ್ತಿಗಳಿಬ್ಬರು ಪರಸ್ಪರ ಹಲ್ಲೆ‌ ಮಾಡಿಕೊಂಡ ಘಟನೆ ಠಾಣಾ ವ್ಯಾಪ್ತಿಯ ಬಲ್ಯ ಗ್ರಾಮದ ದೇರಾಜೆ ಕ್ರಾಸ್ ಎಂಬಲ್ಲಿ ಗುರುವಾರದಂದು ನಡೆದಿದೆ. ಬಲ್ಯ ಗ್ರಾಮದ ಸಂಪಡ್ಕ ನಿವಾಸಿ, ದೇರಾಜೆ ಕ್ರಾಸ್ ಬಳಿಯ ಅಂಗಡಿ ವ್ಯಾಪಾರಿ ಗೋಪಾಲಕೃಷ್ಣ ಎಂಬವರಿಗೆ ದೇರಾಜೆ ಕ್ರಾಸ್ ನಿವಾಸಿ ಗಿರೀಶ್ ಎಂಬವರು ಅವಾಚ್ಯ ಶಬ್ದಗಳಿಂದ ನಿಂದಿಸಿ ಅಂಗಡಿಯೊಳಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಇವರಿಬ್ಬರ ಜಾಗ ಅಕ್ಕಪಕ್ಕದಲ್ಲಿದ್ದು ಜಾಗದ ಒಂದು ಭಾಗದ ವಿಚಾರದಲ್ಲಿ ಕಳೆದ ಕೆಲವು

ಬಲ್ಯ: ಜಾಗದ ವಿಚಾರದಲ್ಲಿ ಪರಸ್ಪರ ಹಲ್ಲೆ ► ದೂರು – ಪ್ರತಿ ದೂರು Read More »

ಕರಾವಳಿ

ಮಾಣಿ: ಖಾಸಗಿ ಬಸ್ಸಿನಡಿಗೆ ಬಿದ್ದ ಬೈಕ್ ► ಪವಾಡ ಸದೃಶ ಪಾರಾದ ಸವಾರ

(ನ್ಯೂಸ್ ಕಡಬ) newskadaba.com ವಿಟ್ಲ, ಜೂ.08. ಖಾಸಗಿ ಬಸ್ ಹಾಗೂ ಬೈಕ್‌ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ಪವಾಡ ಸದೃಶ ಪಾರಾದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ‌ ಮಾಣಿ ಜಂಕ್ಷನ್ ನಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ಮಂಗಳೂರಿನಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ ಮಹೇಶ್ ಸಂಸ್ಥೆಯ ಖಾಸಗಿ ಬಸ್ ಹಾಗೂ ಬೈಕ್‌ ನಡುವೆ ಮಾಣಿಯಲ್ಲಿ ಅಪಘಾತವಾಗಿದ್ದು, ಬೈಕ್ ಬಸ್ಸಿನ ಅಡಿಗೆ ಬಿದ್ದು ಜಖಂಗೊಂಡಿದೆ. ಬೈಕ್ ಸವಾರ ಅನಂತಾಡಿ ನಿವಾಸಿ ಮೋಹನ್ ಪವಾಡ ಸದೃಶವಾಗಿ ಅಪಾಯದಿಂದ ಪಾರಾಗಿದ್ದಾರೆ.

ಮಾಣಿ: ಖಾಸಗಿ ಬಸ್ಸಿನಡಿಗೆ ಬಿದ್ದ ಬೈಕ್ ► ಪವಾಡ ಸದೃಶ ಪಾರಾದ ಸವಾರ Read More »

ಕರಾವಳಿ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ ► ಎರಡು ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.08. ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಶುಕ್ರವಾರ ಹಾಗೂ ಶನಿವಾರದಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಗುರುವಾರದಿಂದ ಎಡೆಬಿಡದೆ ಮಳೆ ಸುರಿಯುತ್ತಿರುವುದರಿಂದ ಉಭಯ ಜಿಲ್ಲಾಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಎರಡು ದಿನಗಳ ರಜೆ‌ ನೀಡಿ ಆದೇಶಿಸಿದ್ದಾರೆ. ಭಾನುವಾರದ ವರೆಗೆ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯ‌ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು.

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ ► ಎರಡು ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ

ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಕಾರು ಅಪಘಾತ ► ಅಪಾಯದಿಂದ ಪಾರಾದ ಅಪ್ಪು

(ನ್ಯೂಸ್ ಕಡಬ) newskadaba.com ಆಂಧ್ರಪ್ರದೇಶ, ಜೂ.08. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾದ ಪರಿಣಾಮ ಅಪ್ಪು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ಗುರುವಾರ ರಾತ್ರಿ ಆಂಧ್ರ ಪ್ರದೇಶದ ಅನಂತಪುರದಲ್ಲಿ ಸಂಭವಿಸಿದೆ. ಬಳ್ಳಾರಿಯಲ್ಲಿ ಪವನ್ ಒಡೆಯರ್ ನಿರ್ದೇಶನದ ‘ನಟ ಸಾರ್ವಭೌಮ’ ಚಿತ್ರದ ಚಿತ್ರೀಕರಣ ಮುಗಿಸಿಕೊಂಡು ತುಮಕೂರು ಮಾರ್ಗದಲ್ಲಿ ಟ್ರಾಫಿಕ್ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶದ ಅನಂತಪುರ ಮಾರ್ಗವಾಗಿ ತನ್ನ ರೇಂಜ್ ರೋವರ್ ಕಾರಿನಲ್ಲಿ ಬೆಂಗಳೂರಿಗೆ ವಾಪಸಾಗುತ್ತಿದ್ದಾಗ ಅನಂತಪುರ ಸಮೀಪ ಮೂರು ರಸ್ತೆ ಸೇರುವಲ್ಲಿ

ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಕಾರು ಅಪಘಾತ ► ಅಪಾಯದಿಂದ ಪಾರಾದ ಅಪ್ಪು Read More »

ರಾಷ್ಟ್ರೀಯ ನ್ಯೂಸ್
Scroll to Top