ಅ. 25 ರಂದು ದುಬೈ ಗಡಿನಾಡ ಉತ್ಸವ , ಗಡಿನಾಡ ರತ್ನ ಪ್ರಶಸ್ತಿ ಪ್ರದಾನ

(ನ್ಯೂಸ್‌ ಕಡಬ) newskadaba.com,  ಅ.21 ದುಬೈ : ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ “ಗಡಿನಾಡ ಉತ್ಸವ -2025” ಕಾರ್ಯಕ್ರಮವು ನಗರದ ಊದು ಮೇಥಾದ ಗ್ಲೆಂಡೇಲ ಅಂತಾರಾಷ್ಟ್ರೀಯ ಶಾಲೆಯ ಸಭಾಂಗಣದಲ್ಲಿ ಅಕ್ಟೋಬರ್ 25 ರಂದು ಸಂಜೆ ನಾಲ್ಕರಿಂದ ರಾತ್ರಿ ಹನ್ನೊಂದರ ವರೆಗೆ ನಡೆಯಲಿದೆ. ಸಂಜೆ 4 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಸಾಧಕರಿಗೆ ಗೌರವ ಸನ್ಮಾನ ನಂತರ ಯುಎಇಯ ಪ್ರಸಿದ್ಧ ನೃತ್ಯ ತಂಡದವರಿಂದ ನೃತ್ಯ ವೈಭವ,ಗಾಯಕ ಗಾಯಕಿಯರಿಂದ ಸಂಗೀತ […]

ಅ. 25 ರಂದು ದುಬೈ ಗಡಿನಾಡ ಉತ್ಸವ , ಗಡಿನಾಡ ರತ್ನ ಪ್ರಶಸ್ತಿ ಪ್ರದಾನ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಹುಣಸೂರು: ಮನೆ ಸಾಲ ತೀರಿಸಲು ಆಗದೆ ಸೈನಿಕ ನೇಣುಬಿಗಿದು ದುರಂತ ಸಾವು

(ನ್ಯೂಸ್‌ ಕಡಬ) newskadaba.com,  ಅ.21 ಹುಣಸೂರು : ಮನೆ ಕಟ್ಟಲು ಮಾಡಿಕೊಂಡಿದ್ದ ಸಾಲದ ತೀರಿಸಲಾಗದೆ ಭಾರತೀಯ ಭೂಸೇನೆಯ ಸೈನಿಕರೊಬ್ಬರು ಆತ್ಮ೧ಹತ್ಯೆ ಮಾಡಿಕೊಂಡ ದಾರುಣ ಘಟನೆ ಮೈಸೂರು ಜಿಲ್ಲೆಯ ಹುಣಸೂರು ಪಟ್ಟಣದಲ್ಲಿ ನಡೆದಿದೆ. ಕನಸಿನ ಮನೆ ನಿರ್ಮಾಣಕ್ಕೆ ಮೈತುಂಬಾ ಸಾಲ: ಮೃತರನ್ನು ಎಂ. ಚಂದ್ರಶೇಖರ್‌ (35) ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನ ಪ್ಯಾರಾಚೂಟ್‌ ರೆಜಿಮೆಂಟ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಎರಡು ವರ್ಷಗಳ ಹಿಂದೆ ಹುಣಸೂರಿನ ಹೊಸ ಬಡಾವಣೆಯಲ್ಲಿ ಚಂದ್ರಶೇಖರ್‌ ಅವರು ಕನಸಿನ ಮನೆ ನಿರ್ಮಿಸಿದ್ದರು. ಈ ಯೋಜನೆಗಾಗಿ ಬ್ಯಾಂಕ್‌ ಮತ್ತು

ಹುಣಸೂರು: ಮನೆ ಸಾಲ ತೀರಿಸಲು ಆಗದೆ ಸೈನಿಕ ನೇಣುಬಿಗಿದು ದುರಂತ ಸಾವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಗಾರದ ಬೆಲೆಯಲ್ಲಿ ಭಾರೀ ಏರಿಕೆ

(ನ್ಯೂಸ್‌ ಕಡಬ) newskadaba.com,  ಅ.21 ದೀಪಾವಳಿ ಹಬ್ಬಕ್ಕೆಂದು ಚಿನ್ನ ಖರೀದಿಸಲು ಆಲೋಚಿಸಿದವರಿಗೆ ಇಂದು ಶಾಕ್‌ ಎದುರಾಗಿದೆ. ಕಳೆದೆರಡು ದಿನಗಳಿಂದ ಕೊಂಚ ಇಳಿಕೆ ಕಂಡಿದ್ದ ಚಿನ್ನದ ಬೆಲೆ ಎಂದು ಮತ್ತೆ ಏರಿಕೆ ಕಂಡಿದೆ. ಇಂದು 22ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 190 ರೂ. ಏರಿಕೆ ಕಂಡು ಬಂದಿದ್ದು, 12,170 ರೂ. ಗೆ ತಲುಪಿದೆ. 24 ಕ್ಯಾರಟ್‌ 1 (Gold Price) ಗ್ರಾಂ ಚಿನ್ನದ ದರದಲ್ಲಿ 208 ರೂ. ಏರಿಕೆಯಾಗಿ, 13,277 ರೂ ಆಗಿದೆ. 22 ಕ್ಯಾರಟ್‌ನ 8 ಗ್ರಾಂ

ಬಂಗಾರದ ಬೆಲೆಯಲ್ಲಿ ಭಾರೀ ಏರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಲಂಕಾರಿಕ ದೀಪಗಳನ್ನು ಸರಿಪಡಿಸುವಾಗ ವಿದ್ಯುತ್ ಅವಘಡ – ವ್ಯಕ್ತಿ ಮೃತ್ಯು

(ನ್ಯೂಸ್‌ ಕಡಬ) newskadaba.com,  ಅ.21 ಕಾಸರಗೋಡು: ಸೀತಾಂಗೋಳಿ ಬಳಿಯ ಪುತ್ತಿಗೆಯಲ್ಲಿ ಸೋಮವಾರ ರಾತ್ರಿ ವಿದ್ಯುತ್ ಅವಘಡದಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ಪುತ್ತಿಗೆಯ ಆಚಾರಿಮೂಲೆ ನಿವಾಸಿ ರಾಜೇಶ್ ಆಚಾರ್ಯ (37) ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ, ದೀಪಾವಳಿ ಆಚರಣೆಗಾಗಿ ರಾಜೇಶ್ ತಮ್ಮ ಮನೆಯ ಅಂಗಳದಲ್ಲಿ ಅಲಂಕಾರಿಕ ದೀಪಗಳನ್ನು ಅಳವಡಿಸುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಲ್ಪಟ್ಟರು. ಕುಟುಂಬ ಸದಸ್ಯರು ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಿದರು, ಆದರೆ ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ. ರಾಜೇಶ್ ವೃತ್ತಿಯಲ್ಲಿ ಬಡಗಿಯಾಗಿ ಕೆಲಸ ಮಾಡುತ್ತಿದ್ದರು. ಅವರ ಮೃತದೇಹವನ್ನು ಕಾಸರಗೋಡು

ಅಲಂಕಾರಿಕ ದೀಪಗಳನ್ನು ಸರಿಪಡಿಸುವಾಗ ವಿದ್ಯುತ್ ಅವಘಡ – ವ್ಯಕ್ತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೆಪಿಎಸ್ ಶಾಲೆಗಳ ಅಭಿವೃದ್ಧಿಯನ್ನು ಮೇಲ್ವಿಚಾರಣೆ ಮಾಡಲು ಆಡಳಿತ ಮಂಡಳಿ ರಚನೆ; ಮಧು ಬಂಗಾರಪ್ಪ

(ನ್ಯೂಸ್‌ ಕಡಬ) newskadaba.com,  ಅ.21 ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯು ಕರ್ನಾಟಕ ಸಾರ್ವಜನಿಕ ಶಾಲೆಗಳ (ಕೆಪಿಎಸ್) ಶೈಕ್ಷಣಿಕ, ಮೂಲಸೌಕರ್ಯ ಮತ್ತು ಹಣಕಾಸಿನ ವಿಷಯದಲ್ಲಿ ಅವುಗಳ ಅಭಿವೃದ್ಧಿಯನ್ನು ಮೇಲ್ವಿಚಾರಣೆ ಮಾಡಲು ಆಡಳಿತ ಮಂಡಳಿಯನ್ನು ಶೀಘ್ರವೇ ರಚಿಸಲಿದೆ. ಬೆಂಗಳೂರಿನಲ್ಲಿ ಮಾತನಾಡಿಗ ಅವರು, ಶಾಲೆಗಳು, ಅವುಗಳ ಆಡಳಿತ ಮತ್ತು ಶಿಕ್ಷಕರ ವರ್ಗಾವಣೆ ಮೇಲ್ವಿಚಾರಣೆ ಮಾಡಲು ಯಾವುದೇ ಆಡಳಿತ ಮಂಡಳಿಗಳಿಲ್ಲ ಎಂದು ತಿಳಿಸಿದ್ದಾರೆ. ಕೆಪಿಎಸ್ ಶಾಲೆಗಳ ಅಭಿವೃದ್ಧಿಯನ್ನು ಮೇಲ್ವಿಚಾರಣೆ ಮಾಡಲು ಆಡಳಿತ ಮಂಡಳಿಯು ಅಗತ್ಯವಿದೆ. ಇಷ್ಟು ವರ್ಷಗಳಲ್ಲಿ, ಕೆಪಿಎಸ್ ಶಾಲೆಗಳಿಗೆ ಯಾವುದೇ ಆಡಳಿತ ಮಂಡಳಿ

ಕೆಪಿಎಸ್ ಶಾಲೆಗಳ ಅಭಿವೃದ್ಧಿಯನ್ನು ಮೇಲ್ವಿಚಾರಣೆ ಮಾಡಲು ಆಡಳಿತ ಮಂಡಳಿ ರಚನೆ; ಮಧು ಬಂಗಾರಪ್ಪ Read More »

ಕರಾವಳಿ

ನಂದಿ ಬೆಟ್ಟದಲ್ಲಿ 2 ಭಾರತೀಯ ಮೀಸಲು ಪಡೆ ಆರಂಭಕ್ಕೆ ಒಪ್ಪಿಗೆ: ಸಿಎಂ

(ನ್ಯೂಸ್‌ ಕಡಬ) newskadaba.com,  ಅ.21 ಬೆಂಗಳೂರು : ನಂದಿ ಬೆಟ್ಟದಲ್ಲಿ 2 ಭಾರತೀಯ ಮೀಸಲು ಪಡೆ ಆರಂಭಿಸಲು ಒಪ್ಪಿಗೆ ನೀಡಲಾಗಿದೆ. ರಾಜ್ಯದ ಶಾಂತಿ ಸುವ್ಯವಸ್ಥೆ ಕಾಡುವುದು ಪೊಲೀಸರ ಕರ್ತವ್ಯವಾಗಿದೆ ಎಂದು ಪೊಲೀಸ್ ಸಂಸ್ಮರಣ ದಿನಾಚರಣೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯಹೇಳಿಕೆ ನೀಡಿದರು. ಬೆಂಗಳೂರು ಮೈಸೂರು ರಸ್ತೆಯ ಸಿಇಆರ್ ಕೇಂದ್ರದಲ್ಲಿ ಈ ಕಾರ್ಯಕ್ರಮ ನಡೆಯಿತು. ಕರ್ತವ್ಯದ ವೇಳೆ ಅನೇಕ ಪೊಲೀಸರು ಗಾಯಗೊಂಡಿದ್ದಾರೆ. ಗಾಯಗೊಂಡ ಪೊಲೀಸರಿಗೆ ರಾಜ್ಯ ಸರ್ಕಾರ ನೆರವು ನೀಡಲಿದೆ. ಹಿಂಸಾಚಾರ, ನೈತಿಕ ಪೊಲೀಸ್ ಗಿರಿ ತಡೆಗೆ ಸ್ಪೆಷಲ್ ಆಕ್ಷನ್ ಫೋರ್ಸ್

ನಂದಿ ಬೆಟ್ಟದಲ್ಲಿ 2 ಭಾರತೀಯ ಮೀಸಲು ಪಡೆ ಆರಂಭಕ್ಕೆ ಒಪ್ಪಿಗೆ: ಸಿಎಂ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅನ್ನ ಭಾಗ್ಯ ಯೋಜನೆಯಡಿ ಇಂದಿರಾ ಕಿಟ್‌ ಬದಲು ಇ-ವೋಚರ್‌

(ನ್ಯೂಸ್‌ ಕಡಬ) newskadaba.com,  ಅ.21 :”ಇಂದಿರಾ ಕಿಟ್ ಯೋಜನೆ” ಕರ್ನಾಟಕ ಸರ್ಕಾರದ ಇತ್ತೀಚಿನ ಉಪಕ್ರಮವಾಗಿದ್ದು, ಇದು ಅನ್ನ ಭಾಗ್ಯ ಯೋಜನೆಯಡಿ ಒದಗಿಸಲಾದ 5 ಕೆಜಿ ಹೆಚ್ಚುವರಿ ಅಕ್ಕಿಯ ಬದಲಾಗಿ ಪೌಷ್ಟಿಕಾಂಶಯುಕ್ತ ಇತರ ಆಹಾರ ಪದಾರ್ಥಗಳನ್ನು ನೀಡಲಾಗುತ್ತಿದೆ. ಈ ಕಿಟ್‌ನಲ್ಲಿ ಅರ್ಹ ಕುಟುಂಬಗಳಿಗೆ ತಲಾ ಒಂದು ಕೆಜಿ ತೊಗರಿ ಬೇಳೆ, ಹಸಿರು ಕಡಲೆ, ಸಕ್ಕರೆ, ಉಪ್ಪು ಮತ್ತು ಅಡುಗೆ ಎಣ್ಣೆ ಸೇರಿವೆ. ಹೆಚ್ಚು ಸಮತೋಲಿತ ಪೌಷ್ಟಿಕಾಂಶದ ಪ್ಯಾಕೇಜ್ ಅನ್ನು ಒದಗಿಸುವುದು ಮತ್ತು ಹೆಚ್ಚುವರಿ ಅಕ್ಕಿ ಕಾಳ ಸಂತೆಯಲ್ಲಿ ಮಾರಾಟವಾಗುವುದನ್ನು

ಅನ್ನ ಭಾಗ್ಯ ಯೋಜನೆಯಡಿ ಇಂದಿರಾ ಕಿಟ್‌ ಬದಲು ಇ-ವೋಚರ್‌ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪೋಷಕರಿಗೆ ಕರೆ ಮಾಡಿದ್ದಕ್ಕೆ ವಿದ್ಯಾರ್ಥಿ ಮೇಲೆ ಅಮಾನುಷ ಹಲ್ಲೆ ಮಾಡಿದ ಶಿಕ್ಷಕ

(ನ್ಯೂಸ್‌ ಕಡಬ) newskadaba.com,  ಅ.21 ಚಿತ್ರದುರ್ಗ: ಸಂಸ್ಕೃತ ಪಾಠಶಾಲೆಯ ಅಧ್ಯಾಪಕನೊಬ್ಬ ಅಸಂಸ್ಕೃತ ಕೆಲಸ ಮಾಡಿ ಪರಾರಿಯಾಗಿದ್ದಾನೆ. ವಿದ್ಯಾರ್ಥಿಯೊಬ್ಬ ದೂರದ ಊರಿನಲ್ಲಿರುವ ಅವರ ಪೋಷಕರಿಗೆ ಬೇರೊಬ್ಬರ ಮೊಬೈಲ್‌ನಿಂದ ಕರೆ ಮಾಡಿದ್ದಕ್ಕೆ ಆಕ್ರೋಶಗೊಂಡ ಮುಖ್ಯ ಶಿಕ್ಷಕ ಮನಸೋಇಚ್ಛೆ ವಿದ್ಯಾರ್ಥಿ ಮೇಲೆ ಹಲ್ಲೆ) ನಡೆಸಿ ಕ್ರೌರ್ಯ ಮೆರೆದಿರುವ ಪ್ರಕರಣ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದಲ್ಲಿ ನಡೆದಿದೆ. ಆ ವಿದ್ಯಾರ್ಥಿಗೆ ಕಾಲಲ್ಲಿ ಒದ್ದು ವಿಕೃತಿ ಮೆರೆದಿದ್ದು, ಆ ಶಿಕ್ಷಕನ ಕ್ರೌರ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ. ಆಕ್ರೋಶದಿಂದ ಪುಟ್ಟ ವಿದ್ಯಾರ್ಥಿ ಮೇಲೆ ಈ

ಪೋಷಕರಿಗೆ ಕರೆ ಮಾಡಿದ್ದಕ್ಕೆ ವಿದ್ಯಾರ್ಥಿ ಮೇಲೆ ಅಮಾನುಷ ಹಲ್ಲೆ ಮಾಡಿದ ಶಿಕ್ಷಕ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೇರಳ : ಎಸ್‌‍ಡಿಪಿಐ-ಸಿಪಿಐ ನಡುವೆ ಘರ್ಷಣೆ, ಆ್ಯಂಬುಲೆನ್ಸ್‌ಗೆ ಬೆಂಕಿ

(ನ್ಯೂಸ್‌ ಕಡಬ) newskadaba.com,  ಅ.21 ತಿರುವನಂತಪುರಂ: ಕೇರಳದ ನೆಡುಮಂಗಾಡ್‌ನಲ್ಲಿ ಸೋಶಿಯಲ್‌ ಡೆಮಾಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾ ಮತ್ತು ಸಿಪಿಐಕಾರ್ಯಕರ್ತರ ನಡುವಿನ ಘರ್ಷಣೆ ನಡೆದು ಆ್ಯಂಬ್ಯು ಲೆನ್‌್ಸಗೆ ಬೆಂಕಿ ಹಚ್ಚಲಾಗಿದೆ.ನೆಡುಮಂಗಾಡ್‌ ಪೊಲೀಸರ ಪ್ರಕಾರ, ಸ್ಥಳೀಯ ಸಿಪಿಐ ನಾಯಕನ ಮೇಲೆ ನಿನ್ನೆ ಸಂಜೆ ಎಸ್‌‍ಡಿಪಿಐ ಕಾರ್ಯಕರ್ತರು ದಾಳಿ ನಡೆಸಿದ್ದರು. ಹೀಗಾಗಿ ಅಪರಿಚಿತ ವ್ಯಕ್ತಿಗಳು ಎಸ್‌‍ಡಿಪಿಐ ಕಾರ್ಯಕರ್ತರ ಮನೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಮುಖವಾಡ ಧರಿಸಿದ ವ್ಯಕ್ತಿಗಳು ತಡರಾತ್ರಿ ಆಂಬ್ಯುಲೆನ್ಸ್ ಮತ್ತು ಎಸ್‌‍ಡಿಪಿಐ ಕಾರ್ಯಕರ್ತನ ಒಡೆತನದ ಕಾರಿಗೆ ಹಾನಿ ಮಾಡಿರುವುದು

ಕೇರಳ : ಎಸ್‌‍ಡಿಪಿಐ-ಸಿಪಿಐ ನಡುವೆ ಘರ್ಷಣೆ, ಆ್ಯಂಬುಲೆನ್ಸ್‌ಗೆ ಬೆಂಕಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಮತ್ತಷ್ಟು ದಿನ ವಿಸ್ತರಣೆ;ಸರಕಾರಿ ನೌಕರರು ಅಸಮಾಧಾನ

(ನ್ಯೂಸ್‌ ಕಡಬ) newskadaba.com,  ಅ.21 ಬೆಂಗಳೂರು: ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಮತ್ತಷ್ಟು ದಿನ ವಿಸ್ತರಿಸಿರುವುದರ ಬಗ್ಗೆ ಸರ್ಕಾರಿ ನೌಕರರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಸಿಬ್ಬಂದಿ ಕೊರತೆಯಿಂದಾಗಿ ಈಗಾಗಲೇ ಕೆಲಸದ ಹೊರೆಯಿಂದ ಬಳಲುತ್ತಿರುವ ಅವರು, ಸಮೀಕ್ಷೆಯನ್ನು ಪೂರ್ಣಗೊಳಿಸಿದ ನಂತರ ತಮ್ಮ ಕಚೇರಿಗಳಿಗೆ ಹಿಂತಿರುಗಿದ ನಂತರ ಕೆಲಸದ ಹೊರೆಯನ್ನು ನೆನೆದು ಭಯ ಭೀತರಾಗಿದ್ದಾರೆ. ಸೆಪ್ಟೆಂಬರ್ 22 ರಂದು ಪ್ರಾರಂಭವಾದ ಸಮೀಕ್ಷೆಯು ಅಕ್ಟೋಬರ್ 7 ರಂದು ಕೊನೆಗೊಳ್ಳಬೇಕಿತ್ತು, ಆದರೆ ರಾಜ್ಯದ ಹಲವು ಭಾಗಗಳಲ್ಲಿ ಕೇವಲ ಶೇಕಡಾ 60 ರಷ್ಟು ಗಣತಿ ಪೂರ್ಣಗೊಂಡಿರುವುದರಿಂದ,

ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಮತ್ತಷ್ಟು ದಿನ ವಿಸ್ತರಣೆ;ಸರಕಾರಿ ನೌಕರರು ಅಸಮಾಧಾನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top