ಸಮ್ಮಿಶ್ರ ಸರಕಾರ ಅಧಿಕಾರ ವಹಿಸಿಕೊಂಡ ನಡುವೆಯೇ ಕಾಂಗ್ರೆಸ್ನಲ್ಲಿ ಭಿನ್ನಮತ..? ► ಖಾತೆ ಹಂಚಿಕೆ ವಿಚಾರದಲ್ಲಿ ಅಸಮಾಧಾನ ಹೊರಹಾಕಿದ ಕಾಂಗ್ರೆಸ್ನ ಕಿಂಗ್ ಮೇಕರ್..!!
(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.24. ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರಕಾರದ ಪದಗ್ರಹಣ ಸಮಾರಂಭದ ಕೆಲವೇ ಕ್ಷಣಗಳಲ್ಲಿ ಕಾಂಗ್ರೆಸ್ ನಲ್ಲಿ ಅಸಮಾಧಾನದ ಹೊಗೆಯಾವರಿಸಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರಕಾರ ರಚನೆಯ ಸೂತ್ರಧಾರ, ಕಾಂಗ್ರೆಸ್ನ ಕಿಂಗ್ ಮೇಕರ್ ಮಾಜಿ ಸಚಿವ ಡಿ.ಕೆ.ಶಿವಕುಮಾರ್ಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡದಿರುವ ಹಿನ್ನೆಲೆಯಲ್ಲಿ ಪಕ್ಷದ ನಾಯಕರ ವಿರುದ್ಧ ಡಿ.ಕೆ. ಸಹೋದರರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಶಾಸಕರನ್ನು ಬಿಜೆಪಿಯ ಆಪರೇಷನ್ ಕಮಲಕ್ಕೆ ಬಲಿಯಾಗದಂತೆ ಹಗಲು ರಾತ್ರಿ ಬಕಪಕ್ಷಿಯಂತೆ ಕಾದು ಕಾಂಗ್ರೆಸ್ […]









