ದ್ವಿತೀಯ ಪಿಯುಸಿ ಫಲಿತಾಂಶ ► ಕಡಬ ಸೈಂಟ್ ಜೋಕಿಮ್ಸ್‌ ಪದವಿ ಪೂರ್ವ ಕಾಲೇಜಿಗೆ ಶೇ. 94 ಫಲಿತಾಂಶ

(ನ್ಯೂಸ್ ಕಡಬ) newskadaba.com ಕಡಬ, ಎ.30. ಕಡಬ ತಾಲೂಕಿನ ಸೈಂಟ್ ಜೋಕಿಮ್ಸ್‌ ಪದವಿಪುರ್ವ ಕಾಲೇಜಿಗೆ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಶೇ. 94.20 ಲಭಿಸಿದೆ. ಕಲಾವಿಭಾಗ ಶೇ.91.66 ಕಲಾ ವಿಭಾಗದಿಂದ ಒಟ್ಟು 12 ವಿದ್ಯಾರ್ಥಿಗಳು ಪರೀಕ್ಷೆಗ ಹಾಜರಾಗಿದ್ದು, ಈ ಪೈಕಿ 3 ಪ್ರಥಮ, 3 ದ್ವಿತೀಯ, 5 ತೃತೀಯ ಸ್ಥಾನದೊಂದಿಗೆ ಒಟ್ಟು 11 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗ ವಾಣಿಜ್ಯ ವಿಭಾಗದಿಂದ ಪರೀಕ್ಷೆಗೆ ಹಾಜರಾದ 84 ವಿದ್ಯಾರ್ಥಿಗಳ ಪೈಕಿ 79 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಪೈಕಿ ಡಿಸ್ಟಿಂಕ್ಷನ್ 11, ಪ್ರಥಮ 52, […]

ದ್ವಿತೀಯ ಪಿಯುಸಿ ಫಲಿತಾಂಶ ► ಕಡಬ ಸೈಂಟ್ ಜೋಕಿಮ್ಸ್‌ ಪದವಿ ಪೂರ್ವ ಕಾಲೇಜಿಗೆ ಶೇ. 94 ಫಲಿತಾಂಶ Read More »

ಕರಾವಳಿ

ಸುಳ್ಯ ಕ್ಷೇತ್ರದಲ್ಲಿ ಬಿಜೆಪಿಗೆ ಸೋಲಿನ ಭೀತಿ- ಸೈಮನ್ ಸಿ.ಜೆ.

(ನ್ಯೂಸ್ ಕಡಬ) newskadaba.com ಕಡಬ, ಎ.30. ಡಾ| ರಘುರವರು ಮೂರು ಅವಧಿಯಲ್ಲಿ ಸ್ಪರ್ದಿಸಿ ಕಳೆದ ಚುನಾವಣೆಯಲ್ಲಿ ಅಲ್ಪಮತದಿಂದ ಸೋತರು. 15 ವರ್ಷಗಳಿಂದ ಕ್ಷೇತ್ರ ಬಿಡದೆ ಕ್ಷೇತ್ರದ ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಸುಳ್ಯ ಕ್ಷೇತ್ರದ ಅಭಿವೃದ್ಧಿಯ ದೃಷ್ಟಿಯಿಂದ ಸರಕಾರದಿಂದ ಹಲವು ಅಭಿವೃದ್ಧಿ ಕೆಲಸಮಾಡಿರುವುದೇ ಈ ಬಾರಿ ಡಾ| ರಘು ಅವರಿಗೆ ಶ್ರೀರಕ್ಷೆಯಾಗಲಿದೆ ನಮ್ಮ ಅಭ್ಯರ್ಥಿ ಅವರು ಒಬ್ಬ ಸರಳ ವ್ಯಕ್ತಿತ್ವದ ವಿದ್ಯಾವಂತ ಅಭ್ಯರ್ಥಿಯಾಗಿದ್ದು ಈ ಬಾರಿ ಸುಳ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಗೆಲುವಿನ ಪತಾಕೆ ಹಾಕುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಸೈಮನ್

ಸುಳ್ಯ ಕ್ಷೇತ್ರದಲ್ಲಿ ಬಿಜೆಪಿಗೆ ಸೋಲಿನ ಭೀತಿ- ಸೈಮನ್ ಸಿ.ಜೆ. Read More »

ಕರಾವಳಿ

ಕಡಬ: ಬಿಜೆಪಿ ಚುನಾವಣಾ ಕಛೇರಿ ಉದ್ಘಾಟಿಸಿದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ► ದಕ್ಷಿಣ ಭಾರತದ ಪ್ರಮುಖ ಹೆಬ್ಬಾಗಿಲು ಕರ್ನಾಟಕದ ಮೂಲಕ ಬಿಜೆಪಿ ಅಧಿಕಾರಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಎ.30. ಮುಂದಿನ ವಿಧಾನಸಭಾ ಚುನಾವಣೆಯು ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಮಹತ್ವದ್ದಾಗಿದ್ದು, ಬಿಜೆಪಿಗೆ ದಕ್ಷಿಣ ಭಾರತದ ಪ್ರಮುಖ ಹೆಬ್ಬಾಗಿಲಾದ ಕರ್ನಾಟಕದಲ್ಲಿ ಪ್ರವೇಶಿಸಲು ಪ್ರಮುಖವಾದರೆ, ಕಾಂಗ್ರೆಸ್ ಗೆ ಹೆಬ್ಬಾಗಿಲು ಮುಚ್ಚುವಲ್ಲಿ ಮಹತ್ವದ್ದಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದರು. ಅವರು ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಡಬ ಮಹಾ ಶಕ್ತಿ ಕೇಂದ್ರದ ನೂತನ ಚುನಾವಣಾ ಕಛೇರಿಯನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ರಾಜ್ಯದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷವು

ಕಡಬ: ಬಿಜೆಪಿ ಚುನಾವಣಾ ಕಛೇರಿ ಉದ್ಘಾಟಿಸಿದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ► ದಕ್ಷಿಣ ಭಾರತದ ಪ್ರಮುಖ ಹೆಬ್ಬಾಗಿಲು ಕರ್ನಾಟಕದ ಮೂಲಕ ಬಿಜೆಪಿ ಅಧಿಕಾರಕ್ಕೆ Read More »

ಕರಾವಳಿ

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮಂಗಳೂರಿನ ಅಂಕಿತಾ ರಾಜ್ಯಕ್ಕೆ ದ್ವಿತೀಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ.30. ದ್ವಿತೀಯ ಪಿಯುಸಿ ಪರೀಕ್ಷೆಯ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿನಿಯೋರ್ವಳು ರಾಜ್ಯಕ್ಕೆ ದ್ವಿತೀಯ ಹಾಗೂ ಜಿಲ್ಲೆಗೆ ಪ್ರಥಮ ಸ್ಥಾನವನ್ನು ಪಡೆದಿದ್ದಾಳೆ. ಇಲ್ಲಿನ ಸುರತ್ಕಲ್ ಗೋವಿಂದ ದಾಸ್ ಪಿ.ಯು ಕಾಲೇಜಿನ ಸುರತ್ಕಲ್ ಹಳೆಯ ಅಂಚೆ ಕಛೇರಿ ರಸ್ತೆಯ ಶ್ರೀಧಾಮ ನಿವಾಸಿ ಪ್ರಸಾದ್ ಹಾಗೂ ಭಾರತಿ ದಂಪತಿಯ ಪುತ್ರಿ ಅಂಕಿತಾ 600 ಅಂಕಗಳಲ್ಲಿ 595 ಅಂಕಗಳನ್ನು ಗಳಿಸಿ ರಾಜ್ಯದಲ್ಲಿ ದ್ವಿತೀಯ ಸ್ಥಾನ ಹಾಗೂ ಜಿಲ್ಲೆಯಲ್ಲಿ ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಂಡಿದ್ದಾಳೆ. ಈಕೆ ಮಂಗಳೂರಿನ ಎಕ್ಸ್

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮಂಗಳೂರಿನ ಅಂಕಿತಾ ರಾಜ್ಯಕ್ಕೆ ದ್ವಿತೀಯ Read More »

ಕರಾವಳಿ

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆದ ದಕ್ಷಿಣ ಕನ್ನಡ ► ಕೊನೆಯ ಸ್ಥಾನ ಯಾವ ಜಿಲ್ಲೆಗೆ ಗೊತ್ತೇ…?

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ.30. ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಪ್ರಥಮ ಸ್ಥಾನವನ್ನು ದಕ್ಷಿಣ ಕನ್ನಡ ಜಿಲ್ಲೆ ಹಾಗೂ ದ್ವಿತೀಯ ಸ್ಥಾನವನ್ನು ಉಡುಪಿ ಜಿಲ್ಲೆ ತನ್ನದಾಗಿಸಿಕೊಂಡಿದೆ. ಕೊಡಗು ಜಿಲ್ಲೆ ಮೂರನೇ ಸ್ಥಾನವನ್ನು ಪಡೆದಿದ್ದು, ಚಿಕ್ಕೋಡಿ ಕೊನೆಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಎಂದಿನಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದು, ಈ ಬಾರಿ ಒಟ್ಟು ಶೇ.59.56 ರಷ್ಟು ಫಲಿತಾಂಶದೊಂದಿಗೆ ಕಳೆದ ಬಾರಿಗಿಂತ ಫಲಿತಾಂಶದಲ್ಲಿ ಹೆಚ್ಚಳ ಕಂಡು ಬಂದಿದೆ. ವಿಜ್ಞಾನ ವಿಭಾಗದಲ್ಲಿ ಬೆಂಗಳೂರಿನ ವಿವಿ ಸರ್ದಾರ್ ಪಟೇಲ್ ಕಾಲೇಜಿನ ವಿಜ್ಞಾನ

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆದ ದಕ್ಷಿಣ ಕನ್ನಡ ► ಕೊನೆಯ ಸ್ಥಾನ ಯಾವ ಜಿಲ್ಲೆಗೆ ಗೊತ್ತೇ…? Read More »

ಕರಾವಳಿ

ದ್ವಿತೀಯ ಪಿಯುಸಿ ಫಲಿತಾಂಶಕ್ಕೆ ಕ್ಷಣಗಣನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ. 30. ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದ್ದು, 11.30 ಗಂಟೆಗೆ ಇಲಾಖಾ ವೆಬ್‌ಸೈಟ್ ಗಳಲ್ಲಿ ಪ್ರಕಟವಾಗಲಿದೆ. ನಾಳೆ (ಮೇ 01) ರಂದು ಕಾಲೇಜುಗಳಲ್ಲಿ ಫಲಿತಾಂಶದ ಸಂಪೂರ್ಣ ವಿವರ ದೊರೆಯಲಿದೆ. ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪದವಿ ಪೂರ್ವ ಕಾಲೇಜಿನ ಒಟ್ಟು 6.80 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆ ಬರೆದಿದ್ದು, ಉತ್ತರ ಪತ್ರಿಕೆ ಮೌಲ್ಯಮಾಪನ ಪೂರ್ಣಗೊಂಡಿದೆ. ಇದೀಗ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳು ಫಲಿತಾಂಶ

ದ್ವಿತೀಯ ಪಿಯುಸಿ ಫಲಿತಾಂಶಕ್ಕೆ ಕ್ಷಣಗಣನೆ Read More »

ಕರ್ನಾಟಕ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 47 ನೇ ವರ್ಷದ ಸಾಮೂಹಿಕ ವಿವಾಹ ಸಮಾರಂಭ ► ಪರಸ್ಪರ ನಂಬಿಕೆಯಿದ್ದಲ್ಲಿ ವಿಚ್ಚೇದನಕ್ಕೆ ಕಡಿವಾಣ ಹಾಕಬಹುದು: ವೀರೇಂದ್ರ ಹೆಗ್ಗಡೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಎ.29. ಸಂತೋಷ, ಸಂಭ್ರಮ, ಪ್ರೀತಿಯಿಂದ ಮಾಡುವ ಸಮಾರಂಭಗಳಲ್ಲಿ ವಿವಾಹವೂ ಒಂದಾಗಿದ್ದು, ಜೀವನದ ಪ್ರತೀಕ ಆದರ್ಶ ಎಂದು ಭಾವಿಸುತ್ತಿರುವ ನಾವು ದಾಂಪತ್ಯಕ್ಕೆ ವಿಶೇಷವಾದ ಗೌರವವನ್ನು ನೀಡಿದ್ದೇವೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಅವರು ಭಾನುವಾರದಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 47 ನೇ ವರ್ಷದ ಸಾಮೂಹಿಕ ಉಚಿತ ವಿವಾಹ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ಇಲ್ಲಿ 23 ಜೋಡಿಗಳು ಅಂತರ್ಜಾತಿಯ ವಿವಾಹವಾಗಿದ್ದು, ಅವರು

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 47 ನೇ ವರ್ಷದ ಸಾಮೂಹಿಕ ವಿವಾಹ ಸಮಾರಂಭ ► ಪರಸ್ಪರ ನಂಬಿಕೆಯಿದ್ದಲ್ಲಿ ವಿಚ್ಚೇದನಕ್ಕೆ ಕಡಿವಾಣ ಹಾಕಬಹುದು: ವೀರೇಂದ್ರ ಹೆಗ್ಗಡೆ Read More »

ಕರಾವಳಿ

ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ನಾಳೆ (ಮೇ.01) ಬೆಳ್ಳಾರೆಗೆ

(ನ್ಯೂಸ್ ಕಡಬ) newskadaba.com ಸುಳ್ಯ, ಎ.30. ಕೆಲವು ದಶಕಗಳ ಸೋಲಿನಿಂದ ಕಂಗಾಲಾಗಿ ಈ ಬಾರಿ ಸುಳ್ಯ ಕ್ಷೇತ್ರವನ್ನು ಹೇಗಾದರೂ ಮಾಡಿ ಗೆಲ್ಲಲೇಬೇಕೆಂದು ಕಾಂಗ್ರೆಸ್ ಪಣತೊಟ್ಟಿದ್ದು, ನಾಳೆ (ಮೇ 01) ರಂದು ಬೆಳ್ಳಾರೆಯಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ, ಪ್ರಣಾಳಿಕೆ ಸಮಿತಿ ಅಧ್ಯಕ್ಷ ಎಂ ವೀರಪ್ಪ ಮೊಯ್ಲಿ ಭಾಗವಹಿಸಲಿದ್ದಾರೆ. ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಇಪ್ಪತ್ತೈದು ವರ್ಷಗಳಿಂದ ಸತತ ಸೋಲುಣ್ಣುತ್ತಿರುವ ಕಾಂಗ್ರೆಸ್ ಈ ಬಾರಿ ಹೇಗಾದರೂ ಮಾಡಿ ಗೆಲ್ಲಲೇಬೇಕೆಂದು ಸಿದ್ಧತೆ ಮಾಡಿಕೊಂಡಿದ್ದು, ಅದರಂತೆ ಮಂಗಳವಾರದಂದು ಬೆಳ್ಳಾರೆಯ

ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ನಾಳೆ (ಮೇ.01) ಬೆಳ್ಳಾರೆಗೆ Read More »

ಕರಾವಳಿ

ಮರ್ಧಾಳ: ಬೈಕ್ – ಬೈಕ್ ಢಿಕ್ಕಿ ► ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಎ.29. ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕಿಗೆ ಹಿಂದಿನಿಂದ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಸವಾರ ಗಾಯಗೊಂಡ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪಾಲೆತ್ತಡ್ಕ ಎಂಬಲ್ಲಿ ಭಾನುವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರರಿಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಮರ್ಧಾಳದಿಂದ ಇಚಿಲಂಪಾಡಿ ಕಡೆಗೆ ತೆರಳುತ್ತಿದ್ದ ಬೈಕ್ ಹಿಂದಿನಿಂದ ಢಿಕ್ಕಿ ಹೊಡೆದುದರಿಂದಾಗಿ ಈ ಘಟನೆ ಸಂಭವಿಸಿದೆ.

ಮರ್ಧಾಳ: ಬೈಕ್ – ಬೈಕ್ ಢಿಕ್ಕಿ ► ಸವಾರನಿಗೆ ಗಾಯ Read More »

ಕರಾವಳಿ

ಕಡಬ: ಚಾಲಕಿಯ ನಿಯಂತ್ರಣ ತಪ್ಪಿದ ಆಲ್ಟೋ ಕಾರು ► ಮಹಿಳೆ ಹಾಗೂ ಮಗು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕಡಬ, ಎ.29. ಆಲ್ಟೋ ಕಾರೊಂದು ಚಾಲಕಿಯ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಇಳಿದ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಳಾರ ಬಳಿಯ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್‌ ಮುಂಭಾಗದಲ್ಲಿ ಭಾನುವಾರ ಅಪರಾಹ್ನ ನಡೆದಿದೆ. ಕಡಬದಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಆಲ್ಟೋ ಕಾರಿನ್ನು ಮಹಿಳೆ ಚಲಾಯಿಸುತ್ತಿದ್ದು, ಪಕ್ಕದಲ್ಲೇ ಮಗು ಇತ್ತೆನ್ನಲಾಗಿದೆ‌. ಅದೃಷ್ಟವಶಾತ್ ಸಣ್ಣಪುಟ್ಟ ಗಾಯಗಳೊಂದಿಗೆ ಮಹಿಳೆ ಹಾಗೂ ಮಗು ಅಪಾಯದಿಂದ ಪಾರಾಗಿದ್ದಾರೆ.

ಕಡಬ: ಚಾಲಕಿಯ ನಿಯಂತ್ರಣ ತಪ್ಪಿದ ಆಲ್ಟೋ ಕಾರು ► ಮಹಿಳೆ ಹಾಗೂ ಮಗು ಅಪಾಯದಿಂದ ಪಾರು Read More »

ಕರಾವಳಿ
Scroll to Top