ಪುತ್ತೂರು: ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಮೃತಪಟ್ಟ ಪ್ರಕರಣ ► ಕಟ್ಟಡ ಮಾಲಕ, ಇಂಜಿನಿಯರ್, ಗುತ್ತಿಗೆದಾರರ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ಎ.27. ಮೂರು ದಿನಗಳ ಹಿಂದೆ ಪುತ್ತೂರಿನ ಅನಿತಾ ಆಯಿಲ್ ಮಿಲ್ ಸಮೀಪ ನೂತನ ಕಟ್ಟಡ ನಿರ್ಮಾಣದ ಸಂದರ್ಭದಲ್ಲಿ ಧರೆ‌ಕುಸಿದು ಉಂಟಾದ ದುರಂತದಲ್ಲಿ ಕಟ್ಟಡ ಮಾಲಕ, ಗುತ್ತಿಗೆದಾರ ಮತ್ತು ಇಂಜಿನಿಯರ್ ವಿರುದ್ಧ ಪ್ರಕರಣ ದಾಖಲಾಗಿದೆ. ವರ್ಷದ ಹಿಂದೆ ಕಟ್ಟಡ ಕಾಮಗಾರಿಗಾಗಿ ಪರವಾನಿಗೆ ಪಡೆದುಕೊಳ್ಳಲಾಗಿತ್ತು. ಇದರ ಅವಧಿ 2018 ರ ಎಪ್ರಿಲ್‌ 14ಕ್ಕೆ ಕೊನೆಗೊಂಡಿದ್ದು, ಎಪ್ರಿಲ್ 17 ರಂದು ಪರವಾನಿಗೆ ನವೀಕರಣಕ್ಕೆ ಅರ್ಜಿ ನೀಡಿದ್ದು, ಇನ್ನೂ ಪರವಾನಿಗೆ ನೀಡಿರಲಿಲ್ಲ. ಅವಧಿ ಮೀರುವ ದಿನಾಂಕದ ಒಂದು […]

ಪುತ್ತೂರು: ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಮೃತಪಟ್ಟ ಪ್ರಕರಣ ► ಕಟ್ಟಡ ಮಾಲಕ, ಇಂಜಿನಿಯರ್, ಗುತ್ತಿಗೆದಾರರ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ

ಶತಮಾನೋತ್ತರ ಬೆಳ್ಳಿಹಬ್ಬದ ಸಂಭ್ರಮದಲ್ಲಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಇಗರ್ಜಿ ► ಮೇ 02 ರಂದು ಸಂಭ್ರಮಾಚರಣೆ, ಧ್ಯಾನ ಗುಹೆ ಅನಾವರಣ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಎ.27. ಅಗ್ರಹಾರ ಧರ್ಮಕ್ಷೇತ್ರದಿಂದ ಬಿಡುಗಡೆಗೊಂಡು 1889 ರಲ್ಲಿ ಸ್ವತಂತ್ರ ಧರ್ಮಕ್ಷೇತ್ರವಾಗಿ ಅಸ್ತಿತ್ವಕ್ಕೆ ಬಂದ ಮಡಂತ್ಯಾರು ಸೇಕ್ರೆಡ್‌ ಹಾರ್ಟ್‌ ಇಗರ್ಜಿಯ ಶತಮಾನೋತ್ತರ ಬೆಳ್ಳಿಹಬ್ಬವು ಮೇ 02 ರಂದು ನಡೆಯಲಿದೆ. ಮೇ 01 ರಂದು ಸಂಜೆ 4 ಗಂಟೆಗೆ ಮಡಂತ್ಯಾರು ಪೇಟೆಯಿಂದ ಹೊರೆಕಾಣಿಕೆ ಮೆರವಣಿಗೆ ನಡೆಯಲಿದ್ದು, ಬಳಿಕ ವಿಶೇಷ ಬಲಿಪೂಜೆಯನ್ನು ಮಂಗಳೂರು ಧರ್ಮ ಪ್ರಾಂತ್ಯದ ಕಾನೂನು ಮತ್ತು ನ್ಯಾಯ ವಿಭಾಗದ ಮುಖ್ಯಸ್ಥ ವಂ| ವಾಲ್ಟರ್‌ ಡಿ’ಮೆಲ್ಲೊ ನೆರವೇರಿಸಲಿದ್ದಾರೆ‌. ಮೇ 2 ರಂದು ಬೆಳಗ್ಗೆ 9

ಶತಮಾನೋತ್ತರ ಬೆಳ್ಳಿಹಬ್ಬದ ಸಂಭ್ರಮದಲ್ಲಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಇಗರ್ಜಿ ► ಮೇ 02 ರಂದು ಸಂಭ್ರಮಾಚರಣೆ, ಧ್ಯಾನ ಗುಹೆ ಅನಾವರಣ Read More »

ಕರಾವಳಿ

ಗೂಗಲ್‌ನಲ್ಲಿ ಭಾರತದ ಮೊದಲ ಪ್ರಧಾನಿಯಾಗಿ ನರೇಂದ್ರ ಮೋದಿಯ ಫೋಟೋ ► ಹೊಸತೊಂದು ಪ್ರಮಾದ ಕಂಡುಹಿಡಿದ ಕಾಂಗ್ರೆಸ್ ಐಟಿ ಸೆಲ್ ಮುಖ್ಯಸ್ಥೆ ರಮ್ಯಾ

(ನ್ಯೂಸ್ ಕಡಬ) newskadaba.com ನವದೆಹಲಿ, ಎ.27. ಭಾರತದ ಮೊದಲ ಪ್ರಧಾನಿ ಎಂದು ಗೂಗಲ್‌ನಲ್ಲಿ ಸರ್ಚ್‌ ಮಾಡಿದಾಗ ಜವಾಹರಲಾಲ್‌ ನೆಹರೂ ಬದಲು ಪ್ರಧಾನಿ ನರೇಂದ್ರ ಮೋದಿಯವರ ಫೋಟೋ ಕಂಡು ಬಂದಿದ್ದು, ಗೂಗಲ್‌ನ ಹೊಸ ಪ್ರಮಾದವೊಂದನ್ನು ಕಾಂಗ್ರೆಸ್ ನ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ಕಂಡು ಹಿಡಿದಿದ್ದಾರೆ. ಗೂಗಲ್‌ ಸರ್ಚ್‌ ಇಂಜಿನ್‌‌ನಲ್ಲಿ ‘India first pm’ ಎಂದು ಟೈಪ್‌ ಮಾಡಿದಾಗ ಜವಾಹರಲಾಲ್‌ ನೆಹರೂ ಅವರ ಹೆಸರು ಲಿಂಕ್‌ ನಲ್ಲಿ ಕಾಣಿಸಿಕೊಂಡಿದ್ದು, ಫೋಟೋ ಮಾತ್ರ ಪ್ರಧಾನಿ ನರೇಂದ್ರ ಮೋದಿ ಅವರ ಚಿತ್ರ ಕಾಣಿಸಿಕೊಂಡಿದೆ. ಈ

ಗೂಗಲ್‌ನಲ್ಲಿ ಭಾರತದ ಮೊದಲ ಪ್ರಧಾನಿಯಾಗಿ ನರೇಂದ್ರ ಮೋದಿಯ ಫೋಟೋ ► ಹೊಸತೊಂದು ಪ್ರಮಾದ ಕಂಡುಹಿಡಿದ ಕಾಂಗ್ರೆಸ್ ಐಟಿ ಸೆಲ್ ಮುಖ್ಯಸ್ಥೆ ರಮ್ಯಾ Read More »

ರಾಷ್ಟ್ರೀಯ ನ್ಯೂಸ್

ಮರಣದ ವೇಳೆಯಲ್ಲೂ ಕರ್ತವ್ಯ ಪ್ರಜ್ಞೆ ಮೆರೆದ ಐರಾವತ ಚಾಲಕ ► 40 ಪ್ರಯಾಣಿಕರ ಪ್ರಾಣವುಳಿಸಿದ ಚಾಲಕನಿಗೊಂದು ಹ್ಯಾಟ್ಸಪ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ.27. ಐರಾವತ ಚಾಲಕನೋರ್ವ ತಾನು ಹೃದಯಾಘಾತಕ್ಕೊಳಗಾಗಿ ಪ್ರಾಣ ಬಿಡುವ ಸಂದರ್ಭದಲ್ಲೂ ಕರ್ತವ್ಯ ಪ್ರಜ್ಞೆ ಮೆರೆದು 40 ಪ್ರಯಾಣಿಕರ ಪ್ರಾಣವುಳಿಸಿದ ಘಟನೆ ಕೋಲಾರದಲ್ಲಿ ನಡೆದಿದೆ. ಬೆಂಗಳೂರಿನಿಂದ ಚೆನ್ನೈಗೆ ಹೊರಟಿದ್ದ ಐರಾವತ ಕ್ಲಬ್ ಕ್ಲಾಸ್ ಬಸ್‌ ಚಾಲಕ ಜಯಶೀಲನ್‌ ರವರಿಗೆ ಕೋಲಾರದ ನರಸಾಪುರದ ಬಳಿ ಹೃದಯಾಘಾತವುಂಟಾಗಿದ್ದು, ತಕ್ಷಣವೇ ಬಸ್ಸನ್ನು ನಿಲ್ಲಿಸಿದ ಜಯಶೀಲನ್‌ ಪ್ರಾಣ ಬಿಟ್ಟಿದ್ದಾರೆ. ಮರಣದ ವೇಳೆಯಲ್ಲೂ ಬಸ್ ಚಾಲಕನ ಕರ್ತವ್ಯ ಪ್ರಜ್ಞೆಯಿಂದಾಗಿ ಬಸ್ ನಲ್ಲಿದ್ದ 40 ಪ್ರಯಾಣಿಕರ ಜೀವ ಉಳಿದಿದ್ದು,, ಕರ್ತವ್ಯ ನಿಷ್ಠೆ ಮೆರೆದ

ಮರಣದ ವೇಳೆಯಲ್ಲೂ ಕರ್ತವ್ಯ ಪ್ರಜ್ಞೆ ಮೆರೆದ ಐರಾವತ ಚಾಲಕ ► 40 ಪ್ರಯಾಣಿಕರ ಪ್ರಾಣವುಳಿಸಿದ ಚಾಲಕನಿಗೊಂದು ಹ್ಯಾಟ್ಸಪ್ Read More »

ಕರ್ನಾಟಕ

ಬಿಡುಗಡೆಗೆ ಸಿದ್ದವಾಗಿದೆ ಧರ್ಮಸ್ಥಳದ ಕಥೆಯಾಧಾರಿತ ‘ಕಾನೂರಾಯಣ’ ಚಲನಚಿತ್ರ ► ಕನ್ನಡ ಚಿತ್ರರಂಗದ ಇತಿಹಾಸದಲ್ಲೇ 20 ಲಕ್ಷ ಮಂದಿ ಹಣ ಹಾಕಿರುವ ಏಕೈಕ ಚಿತ್ರ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.26. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧ್ಯಕ್ಷರಾದ ಡಾ| ಡಿ. ವೀರೇಂದ್ರ ಹೆಗ್ಡೆಯವರ 50 ನೇ ಪಟ್ಟಾಭಿಷೇಕದ ಸವಿನೆನಪಿಗಾಗಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳು ಸೇರಿ ನಿರ್ಮಾಣ ಮಾಡಿರುವ ಚಲನಚಿತ್ರ ‘ಕಾನೂರಾಯಣ’ ಬಿಡುಗಡೆಗೆ ಸಿದ್ಧವಾಗಿದೆ. ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ 20 ಲಕ್ಷ ಮಂದಿ ಹಣ ಹಾಕಿ ನಿರ್ಮಿಸುತ್ತಿರುವ ಚಿತ್ರ ಇದಾಗಿದ್ದು ದಾಖಲೆ ನಿರ್ಮಿಸಲು ಸಜ್ಜಾಗಿದೆ. ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ 20 ಲಕ್ಷ

ಬಿಡುಗಡೆಗೆ ಸಿದ್ದವಾಗಿದೆ ಧರ್ಮಸ್ಥಳದ ಕಥೆಯಾಧಾರಿತ ‘ಕಾನೂರಾಯಣ’ ಚಲನಚಿತ್ರ ► ಕನ್ನಡ ಚಿತ್ರರಂಗದ ಇತಿಹಾಸದಲ್ಲೇ 20 ಲಕ್ಷ ಮಂದಿ ಹಣ ಹಾಕಿರುವ ಏಕೈಕ ಚಿತ್ರ Read More »

ಕರಾವಳಿ

ದಕ್ಷಿಣ ಕನ್ನಡದಲ್ಲಿ ನಾಮಪತ್ರ ಹಿಂತೆಗೆದ ಇಬ್ಬರು ಅಭ್ಯರ್ಥಿಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಎ.26. ರಾಜ್ಯ ವಿಧಾನಸಭಾ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಲ್ಲಿಸಲಾಗಿದ್ದ ನಾಮಪತ್ರಗಳ ಪೈಕಿ ಇಬ್ಬರು ಅಭ್ಯರ್ಥಿಗಳು ಗುರುವಾರದಂದು ನಾಮಪತ್ರಗಳನ್ನು ವಾಪಸ್ ಪಡೆದಿದ್ದಾರೆ. ಮಂಗಳೂರು ದಕ್ಷಿಣ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಪ್ಯಾಟ್ರಿಕ್ ಲೋಬೊ ಹಾಗೂ ಬಂಟ್ವಾಳ ಕ್ಷೇತ್ರದಿಂದ ಎಸ್ಡಿಪಿಐ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಅಬ್ದುಲ್ ಮಜೀದ್ ಖಾನ್ ಅವರು ನಾಮಪತ್ರವನ್ನು ಹಿಂಪಡೆದಿದ್ದಾರೆ. ನಾಮಪತ್ರವನ್ನು ಹಿಂದೆಗೆಯಲು ಶುಕ್ರವಾರದಂದು ಕೊನೆಯ ದಿನವಾಗಿದ್ದು, ಇನ್ನೂ ಹಲವರು ಹಿಂತೆಗೆಯುವ ಸಂಭವವಿದೆ.

ದಕ್ಷಿಣ ಕನ್ನಡದಲ್ಲಿ ನಾಮಪತ್ರ ಹಿಂತೆಗೆದ ಇಬ್ಬರು ಅಭ್ಯರ್ಥಿಗಳು Read More »

ಕರಾವಳಿ

ಕೊಣಾಜೆಯ ವ್ಯಕ್ತಿಯ ಮೃತದೇಹ ಕುಮಾರಧಾರಾ ನದಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಎ.26. ಕಡಬ ತಾಲೂಕಿನ ಕೊಣಾಜೆ ನಿವಾಸಿಯ ಮೃತದೇಹವೊಂದು ಕುಮಾರಧಾರಾ ನದಿಯಲ್ಲಿ ಬುಧವಾರದಂದು ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಕಡಬ ತಾಲೂಕಿನ ಕೊಣಾಜೆ‌ ಗ್ರಾಮದ ಪಟ್ಟೆ ನಿವಾಸಿ ಡೀಕಯ್ಯ ಎಂದು ಗುರುತಿಸಲಾಗಿದೆ. ಒಬ್ಬಂಟಿಯಾಗಿ ವಾಸಿಸುತ್ತಿದ್ದ ಡೀಕಯ್ಯ ಎರಡು ವಾರಗಳಿಗೊಮ್ಮೆ ತನ್ನ ಪತ್ನಿಯ ಊರಾದ ಬಂಟ್ವಾಳ ತಾಲೂಕಿನ ಬಿಳಿಯೂರಿಗೆ ಹೋಗಿ ಬರುತ್ತಿದ್ದರೆನ್ನಲಾಗಿದೆ. ಸೋಮವಾರದಂದು ನೀರಿಗೆ ಬಿದ್ದು ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಮೃತರ ಪತ್ನಿ ಯಶೋಧ ನೀಡಿದ ದೂರಿನಂತೆ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,

ಕೊಣಾಜೆಯ ವ್ಯಕ್ತಿಯ ಮೃತದೇಹ ಕುಮಾರಧಾರಾ ನದಿಯಲ್ಲಿ ಪತ್ತೆ Read More »

ಕರಾವಳಿ

ಕಡಬ: ಯುವತಿಯೊಂದಿಗೆ ಕಾಡಿನಲ್ಲಿ ಅನೈತಿಕ ಚಟುವಟಿಕೆ ► ಬೀದಿ ಕಾಮಣ್ಣನನ್ನು ಬಂಧಿಸುವಂತೆ ಆಗ್ರಹಿಸಿ ಪೊಲೀಸರಿಗೆ ದೂರು

(ನ್ಯೂಸ್ ಕಡಬ) newskadaba.com ಕಡಬ, ಎ.26. ಇಚ್ಲಂಪಾಡಿ ಗ್ರಾಮದ ಯುವಕನೋರ್ವ ಸಮೀಪದ ಪರಿಶಿಷ್ಟ ವರ್ಗಕ್ಕೆ ಸೇರಿದ ಯುವತಿಯೊಂದಿಗೆ ಅನೈತಿಕ ಚಟುವಟಿಕೆ ನಡೆಸುತ್ತಿದ್ದ ವೇಳೆ ಸ್ಥಳೀಯರಿಗೆ ಮಾಹಿತಿ ದೊರೆತು ಅವರು ಆಗಮಿಸುವ ವೇಳೆಗೆ ಯುವಕ ತನ್ನ ಬೈಕನ್ನು ಬಿಟ್ಟು ಪರಾರಿಯಾಗಿರುವ ಘಟನೆ ಕೆಲ ದಿನಗಳ ಹಿಂದೆ ನಡೆದಿದ್ದು ಈ ಪ್ರಕರಣಕ್ಕೆ ಸಂಬಂಧಿಸಿ ಅಲ್ಲಿನ ಸುಮಾರು 25ಕ್ಕೂ ಹೆಚ್ಚು ನೊಂದ ಗ್ರಾಮಸ್ಥರು ಎಂಬ ಹೆಸರಿನಲ್ಲಿ ಯುವಕನ ವಿರುದ್ದ ಗುರುವಾರದಂದು ಕಡಬ ಠಾಣೆಗೆ ದೂರು ನೀಡಿದ್ದಾರೆ. ಇಚ್ಲಂಪಾಡಿ-ದೇರಾಜೆ ರಸ್ತೆಯ ಕೊಕ್ಕೊ ಕಾಡಿನಲ್ಲಿ

ಕಡಬ: ಯುವತಿಯೊಂದಿಗೆ ಕಾಡಿನಲ್ಲಿ ಅನೈತಿಕ ಚಟುವಟಿಕೆ ► ಬೀದಿ ಕಾಮಣ್ಣನನ್ನು ಬಂಧಿಸುವಂತೆ ಆಗ್ರಹಿಸಿ ಪೊಲೀಸರಿಗೆ ದೂರು Read More »

ಕರಾವಳಿ

ನೇತ್ರಾವತಿ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ ► ಸಾರ್ವಜನಿಕರು ವಾಹನಗಳನ್ನು ಸೇತುವೆಯಲ್ಲೇ ನಿಲ್ಲಿಸಿದ್ದರಿಂದ ಹೈರಾಣಾದ ಪೊಲೀಸರು

(ನ್ಯೂಸ್ ಕಡಬ) newskadaba.com ಮಂಗಳೂರು, ಎ.26. ನೇತ್ರಾವತಿ ನದಿಯಲ್ಲಿ ಮೃತದೇಹವೊಂದು ತೇಳುತ್ತಿರುವುದನ್ನು ಕಂಡು ಕುತೂಹಲದಿಂದ ವಾಹನಗಳನ್ನು ಸೇತುವೆಯಲ್ಲೇ ನಿಲ್ಲಿಸಿ ಸಾರ್ವಜನಿಕರು ನದಿಗೆ ಇಣುಕಿ ನೋಡುತ್ತಿದ್ದುದರಿಂದಾಗಿ ಕೆಲಕಾಲ ಸಂಚಾರ ದಟ್ಟಣೆ ಉಂಟಾದ ಘಟನೆ ಗುರುವಾರದಂದು ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ. ನದಿಯಲ್ಲಿ ಮೃತದೇಹವೊಂದು ತೇಲುತ್ತಿರುವುದು ಸೇತುವೆಯಲ್ಲಿ ಸಂಚರಿಸುತ್ತಿದ್ದ ಸಾರ್ವಜನಿಕರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ನಡುವೆ ಮೃತದೇಹ ತೇಲುತ್ತಿರುವ ವಿಷಯ ತಿಳಿಯುತ್ತಿದ್ದಂತೆ ಕುತೂಹಲದಿಂದ ವಾಹನ ಪ್ರಯಾಣಿಕರು ಸೇತುವೆಯಲ್ಲಿ ವಾಹನಗಳನ್ನು ನಿಲ್ಲಿಸಿ ನದಿಗೆ ಇಣುಕಿ ನೋಡಲು ಆರಂಭಿಸಿದ್ದಾರೆ. ಇದರಿಂದಾಗಿ

ನೇತ್ರಾವತಿ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ ► ಸಾರ್ವಜನಿಕರು ವಾಹನಗಳನ್ನು ಸೇತುವೆಯಲ್ಲೇ ನಿಲ್ಲಿಸಿದ್ದರಿಂದ ಹೈರಾಣಾದ ಪೊಲೀಸರು Read More »

ಕರಾವಳಿ

ಪುತ್ತೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ ► ಠಾಣೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಆರೋಪಿ

(ನ್ಯೂಸ್ ಕಡಬ) newskadaba.com ಪುತ್ತೂರು, ಎ.26. ಅಪ್ರಾಪ್ತ ವಯಸ್ಸಿನ ಬಾಲಕಿಗೆ ಕಳೆದ ಒಂದು ವರ್ಷದಿಂದ ಸಂದರ್ಭ ಸಿಕ್ಕಿದಾಗಲೆಲ್ಲ ಲೈಂಗಿಕ ಕಿರುಕುಳ ನೀಡುತ್ತಿದ್ದುದಲ್ಲದೆ ಯಾರಲ್ಲಾದರೂ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕುತ್ತಿದ್ದ ಆರೋಪಿಯನ್ನು ಪುತ್ತೂರು ಪೊಲೀಸರು ಮಂಗಳವಾರದಂದು ಬಂಧಿಸಿದ್ದರು. ಬಂಧಿತ ಆರೋಪಿಯನ್ನು ಪುತ್ತೂರು ಕಸಬಾ ಗ್ರಾಮದ ನೆಹರೂ ನಗರ ಮುರ ನಿವಾಸಿ ಶಂಷೇರ್ ಖಾನ್(50) ಎಂದು ಗುರುತಿಸಲಾಗಿದೆ. ಆರೋಪಿಯು ಬಂಧನದ ನಂತರ ಲಾಕಪ್ ಸರಳಿಗೆ ತನ್ನ ತಲೆಯನ್ನು ಗುದ್ದಿಕೊಂಡು ಆತ್ಮಹತ್ಯೆಗೆ ಯತ್ನಿಸಿ ತಲೆಗೆ ಗಾಯಗಳಾಗಿದ್ದು, ಚಿಕಿತ್ಸೆ ಕೊಡಿಸಲಾಗಿದೆ. ಈತ ಕಳೆದ

ಪುತ್ತೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ ► ಠಾಣೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಆರೋಪಿ Read More »

ಕರಾವಳಿ
Scroll to Top