ವಿಟ್ಲ ಪೊಲೀಸರ ಮೇಲೆ ದಾಂಧಲೆ ನಡೆಸಿದ್ದ ನಾಲ್ವರ ಬಂಧನ ► ಆರೋಪಿಗಳಿಗೆ ಉರುಳಾದ ತಾವೇ ತೆಗೆದ ಗೂಂಡಾ ಕೃತ್ಯದ ವೀಡಿಯೋ

(ನ್ಯೂಸ್ ಕಡಬ) newskadaba.com ವಿಟ್ಲ, ಎ.26. ಪೊಲೀಸ್ ಇಲಾಖೆಗೆ ಸೇರಿದ ಬೊಲೆರೋ ವಾಹನವನ್ನು ಅಡ್ಡಗಟ್ಟಿ ಸಿಬ್ಬಂದಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಾಲಾಪರಾಧಿ ಸಹಿತ ನಾಲ್ವರು ಆರೋಪಿಗಳನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಪೈವಳಿಕೆ ಗ್ರಾಮದ ಸುಂಕದಕಟ್ಟೆ ನಿವಾಸಿಗಳಾದ ಕುಂಞ ಅಹಮ್ಮದ್‌ ಎಂಬವರ ಪುತ್ರ ರಾಝಿಕ್ ಎ.ಕೆ.(20), ಮೊಹಮ್ಮದ್‌ ಎಂಬವರ ಪುತ್ರ ನೌಫಲ್(19), ಅಬ್ದುಲ್ಲ ಎಂಬವರ ಪುತ್ರ ಹೈದರಾಲಿ(36) ಹಾಗೂ 17ರ ಹರೆಯದ ಓರ್ವ ಅಪ್ರಾಪ್ತ ಬಾಲಕ ಎಂದು ಗುರುತಿಸಲಾಗಿದೆ. ಆರೋಪಿಗಳು ಇತ್ತೀಚೆಗೆ ಜಮ್ಮು ಕಾಶ್ಮೀರದ ಕಥುವಾದ ಬಾಲಕಿ […]

ವಿಟ್ಲ ಪೊಲೀಸರ ಮೇಲೆ ದಾಂಧಲೆ ನಡೆಸಿದ್ದ ನಾಲ್ವರ ಬಂಧನ ► ಆರೋಪಿಗಳಿಗೆ ಉರುಳಾದ ತಾವೇ ತೆಗೆದ ಗೂಂಡಾ ಕೃತ್ಯದ ವೀಡಿಯೋ Read More »

ಕರಾವಳಿ

ಎಪ್ರಿಲ್ 29 ರಂದು ಉಪರಾಷ್ಟ್ರಪತಿ ಮಂಗಳೂರಿಗೆ ► ಕರಾವಳಿಯಲ್ಲಿ ವಾಸ್ತವ್ಯ ಹೂಡಲಿರುವ ಎಂ. ವೆಂಕಯ್ಯ ನಾಯ್ಡು

(ನ್ಯೂಸ್ ಕಡಬ) newskadaba.com ಮಂಗಳೂರು, ಎ.26. ಭಾರತದ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡುರವರು ಎಪ್ರಿಲ್ 29 ರಂದು ಬೆಳಿಗ್ಗೆ 9.40ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಬಳಿಕ ಹೆಲಿಕಾಪ್ಟರ್ ನಲ್ಲಿ ಕಾಸರಗೋಡಿಗೆ ತೆರಳಲಿದ್ದಾರೆ. ಮಧ್ಯಾಹ್ನ 01 ಗಂಟೆಗೆ ಮಂಗಳೂರಿಗೆ ಹಿಂದಿರುಗುವ ಉಪರಾಷ್ಟ್ರಪತಿಗಳು ಅಂದು ರಾತ್ರಿ ನಗರದಲ್ಲಿ ವಾಸ್ತವ್ಯ ಹೂಡಲಿದ್ದು, ಎ.30 ರಂದು ಮಧ್ಯಾಹ್ನ 12.20 ಗಂಟೆಗೆ ವಿಶೇಷ ವಿಮಾನದ ಮೂಲಕ ಕೊಚ್ಚಿನ್‍ಗೆ ತೆರಳಲಿದ್ದಾರೆ. ಉಪರಾಷ್ಟ್ರಪತಿಗಳ ಪ್ರವಾಸ ನಿಮಿತ್ತ ಬುಧವಾರದಂದು ಜಿಲ್ಲಾಧಿಕಾರಿ ಡಾ. ಸಸಿಕಾಂತ್ ಸೆಂಥಿಲ್ ಅಧ್ಯಕ್ಷತೆಯಲ್ಲಿ ಉನ್ನತ ಅಧಿಕಾರಿಗಳ

ಎಪ್ರಿಲ್ 29 ರಂದು ಉಪರಾಷ್ಟ್ರಪತಿ ಮಂಗಳೂರಿಗೆ ► ಕರಾವಳಿಯಲ್ಲಿ ವಾಸ್ತವ್ಯ ಹೂಡಲಿರುವ ಎಂ. ವೆಂಕಯ್ಯ ನಾಯ್ಡು Read More »

ಕರಾವಳಿ

ಜಿಲ್ಲೆಯಲ್ಲಿ ಸಲ್ಲಿಕೆಯಾದ ಒಟ್ಟು 98 ನಾಮಪತ್ರಗಳ ಪೈಕಿ 66 ಕ್ರಮಬದ್ಧ ► ಯಾವೆಲ್ಲಾ ನಾಮಪತ್ರಗಳು ಕ್ರಮಬದ್ಧ ಎಂದು ತಿಳಿಯಬೇಕೇ…?

(ನ್ಯೂಸ್ ಕಡಬ) newskadaba.com ಮಂಗಳೂರು, ಎ.25. ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಜಿಲ್ಲೆಯಲ್ಲಿ ಸಲ್ಲಿಕೆಯಾದ ನಾಮಪತ್ರಗಳ ಪರಿಶೀಲನೆ ಬುಧವಾರ ನಡೆದಿದ್ದು, ಜಿಲ್ಲೆಯಲ್ಲಿ ಸಲ್ಲಿಕೆಯಾದ 98 ನಾಮಪತ್ರಗಳ ಪೈಕಿ 66 ನಾಮಪತ್ರಗಳು ಕ್ರಮಬದ್ಧವಾಗಿವೆ. ನಾಮಪತ್ರ ಹಿಂದೆಗೆಯಲು ಎಪ್ರಿಲ್ 27 ಅಂತಿಮ ದಿನವಾಗಿದ್ದು, ಕ್ರಮಬದ್ಧ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ವಿವರ ಇಂತಿವೆ. ಬೆಳ್ತಂಗಡಿ ಕ್ಷೇತ್ರ – ಕೆ. ವಸಂತ ಬಂಗೇರ(ಕಾಂಗ್ರೆಸ್), ಸುಮತಿ ಎಸ್. ಹೆಗ್ಡೆ(ಜೆ.ಡಿ.ಎಸ್), ಹರೀಶ್ ಪೂಂಜಾ (ಬಿ.ಜೆ.ಪಿ), ವೆಂಕಟೇಶ್ ಬೆಂಡೆ (ಪಕ್ಷೇತರ), ಜಗನ್ನಾಥ(ಎಂಇಪಿ), ಪ್ರಸಾದ್ ಕುಮಾರ್(ಶಿವಸೇನೆ), ಸೈಯದ್ ಹಸನ್(ಪಕ್ಷೇತರ) ಮೂಡುಬಿದಿರೆ ಕ್ಷೇತ್ರ –

ಜಿಲ್ಲೆಯಲ್ಲಿ ಸಲ್ಲಿಕೆಯಾದ ಒಟ್ಟು 98 ನಾಮಪತ್ರಗಳ ಪೈಕಿ 66 ಕ್ರಮಬದ್ಧ ► ಯಾವೆಲ್ಲಾ ನಾಮಪತ್ರಗಳು ಕ್ರಮಬದ್ಧ ಎಂದು ತಿಳಿಯಬೇಕೇ…? Read More »

ಕರಾವಳಿ

ಪುತ್ತೂರು ಕಟ್ಟಡ ದುರಂತದಲ್ಲಿ ಮೃತದೇಹದ ಮುಂದೆ ತೆಗೆದ ಸೆಲ್ಫಿ ಇದೀಗ ವೈರಲ್ ► ಯುವಕನ ನಡೆಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ

(ನ್ಯೂಸ್ ಕಡಬ) newskadaba.com ಪುತ್ತೂರು, ಎ.25. ಮಂಗಳವಾರದಂದು ಪುತ್ತೂರಿನಲ್ಲಿ ಕಟ್ಟಡ ನಿರ್ಮಾಣ ವೇಳೆ ನಡೆದ ದುರಂತದ ಸಂದರ್ಭದಲ್ಲಿ ಯುವಕನೋರ್ವ ಮೃತದೇಹದ ಮುಂದೆ ನಿಂತು ಸೆಲ್ಫಿ ತೆಗೆದಿರುವುದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ‌. ಎಲ್ಲರೂ ರಕ್ಷಣಾ ಕಾರ್ಯಚರಣೆಯಲ್ಲಿ ನಿರತರಾಗಿದ್ದಾಗ ಕಾರ್ಯಚರಣೆಗೆ ಬಂದ ವ್ಯಕ್ತಿಯೋರ್ವ ಮೃತದೇಹದ ಮುಂಭಾಗದಲ್ಲಿ ಸೆಲ್ಫಿ ತೆಗೆಯುತ್ತಿರುವ ದೃಶ್ಯವನ್ನು ಯಾರೋ ಕ್ಲಿಕ್ಕಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದು, ಯುವಕನ ಕೃತ್ಯಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ದುರಂತದ ಸಂದರ್ಭದಲ್ಲಿ ರಕ್ಷಣಾ ಕಾರ್ಯಾಚರಣೆ ಮಾಡುವುದನ್ನು ಬಿಟ್ಟು ಸೆಲ್ಫಿ ತೆಗೆದುಕೊಂಡು ಹರ್ಷ

ಪುತ್ತೂರು ಕಟ್ಟಡ ದುರಂತದಲ್ಲಿ ಮೃತದೇಹದ ಮುಂದೆ ತೆಗೆದ ಸೆಲ್ಫಿ ಇದೀಗ ವೈರಲ್ ► ಯುವಕನ ನಡೆಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ Read More »

ಕರಾವಳಿ

ಬುಡೋಳಿ: ಸರಣಿ ಅಪಘಾತ ► ದ್ವಿಚಕ್ರ ವಾಹನ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ಎ.25. ಮಾರುತಿ ಇಕೋ ಕಾರೊಂದು ಎರಡು ಅಕ್ಟಿವಾಗಳಿಗೆ ಢಿಕ್ಕಿ ಹಿಡೆದ ಪರಿಣಾಮ ಸವಾರನೋರ್ವ ಗಂಭೀರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಬುಧವಾರ ಸಂಜೆ ಸಂಭವಿಸಿದೆ. ಉಪ್ಪಿನಂಗಡಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಮಾರುತಿ ಈಕೋ ಕಾರು ಚಾಲಕನ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನಲ್ಲಿ ಸಾಗುತ್ತಿದ್ದ ಎರಡು ದ್ವಿಚಕ್ರ ವಾಹನಗಳಿಗೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಆಕ್ಟಿವಾ ಸವಾರ ಬುಡೋಳಿ ನಿವಾಸಿ ಸುಂದರ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಇಂಡಿಯಾನಾ

ಬುಡೋಳಿ: ಸರಣಿ ಅಪಘಾತ ► ದ್ವಿಚಕ್ರ ವಾಹನ ಸವಾರ ಗಂಭೀರ Read More »

ಕರಾವಳಿ

ಸ್ವಯಂಘೋಷಿತ ದೇವಮಾನವ ಅಸಾರಾಂಗೆ ಜೀವಾವಧಿ ಶಿಕ್ಷೆ!

(ನ್ಯೂಸ್ ಕಡಬ) newskadaba.com ಜೋಧ್‍ಪುರ, ಎ.25. 2013ರಲ್ಲಿ 16 ವರ್ಷದ ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣದ ಮೂಲ ಆರೋಪಿಯಾಗಿರುವ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪುಗೆ ಜೀವಾವಧಿ ಶಿಕ್ಷೆ ದೊರಕಿದೆ. ಈ ಮೂಲಕ ದೇಶಾದ್ಯಂತ ಬಹಳ ಜನರ ಆಕ್ರೋಶಕ್ಕೆ ಗುರಿಯಾಗಿದ್ದ, 5 ವರ್ಷ ಹಳೆಯದಾದ ಈ ಪ್ರಕರಣದಲ್ಲಿ ಆರೋಪಿಗಳಿಗೆ ತಕ್ಕ ಶಾಸ್ತಿಯಾಗಿದೆ. 2013ರಲ್ಲಿ ಮಧ್ಯಪ್ರದೇಶದ ಛಿಂದ್‌ವಾರಾದ ತನ್ನ ಆಶ್ರಮದಲ್ಲಿ ವ್ಯಾಸಾಂಗ ಮಾಡುತ್ತಿದ್ದ ಅಪ್ರಾಪ್ತೆಯ ಮೇಲೆ 77ರ ಹರೆಯದ ಅಸಾರಾಂ ಬಾಪುವು ಅತ್ಯಾಚಾರವೆಸಗಿದ್ದನು. ಈ ಕುರಿತು ಬಾಲಕಿಯು ಪೋಲೀಸರಿಗೆ ದೂರು ನೀಡಿದ್ದಳು. ಆದರೆ

ಸ್ವಯಂಘೋಷಿತ ದೇವಮಾನವ ಅಸಾರಾಂಗೆ ಜೀವಾವಧಿ ಶಿಕ್ಷೆ! Read More »

ರಾಷ್ಟ್ರೀಯ ನ್ಯೂಸ್

ಉಪ್ಪಿನಂಗಡಿ: ಬೈಕಿಗೆ ಲಾರಿ ಢಿಕ್ಕಿ ► ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಎ.25. ಲಾರಿಯೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ – ಗುರುವಾಯನಕೆರೆ ರಾಜ್ಯ ಹೆದ್ದಾರಿಯ ಪೆದಮಲೆ ಎಂಬಲ್ಲಿ ಬುಧವಾರದಂದು ನಡೆದಿದೆ. ಮೃತ ಬೈಕ್ ಸವಾರನನ್ನು ಉಪ್ಪಿನಂಗಡಿ ಪಿಲಿಗೂಡಿನ ಮೂಡಬೈಲ್‌ ನಿವಾಸಿ ಅಶೋಕ್ ಪೂಜಾರಿ(29) ಎಂದು ಗುರುತಿಸಲಾಗಿದೆ. ಇವರು ಉಪ್ಪಿನಂಗಡಿಯಿಂದ ಬೆಳ್ತಂಗಡಿ ಕಡೆಗೆ ತನ್ನ ಬೈಕ್‌ನಲ್ಲಿ ತೆರಳುತ್ತಿದ್ದ ಸಂದರ್ಭ ಎದುರುಗಡೆಯಿಂದ ಬಂದ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಅಶೋಕ್ ಪೂಜಾರಿಗೆ ಎಪ್ರಿಲ್

ಉಪ್ಪಿನಂಗಡಿ: ಬೈಕಿಗೆ ಲಾರಿ ಢಿಕ್ಕಿ ► ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಶೂನ್ಯ ನೆರಳಿನ ದಿನದ ಪ್ರಾತ್ಯಕ್ಷಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.25. ಪಿಲಿಕುಳ  ವಿಜ್ಞಾನ ಕೇಂದ್ರದಲ್ಲಿ ಏಪ್ರಿಲ್ 24 ರಂದು ಶೂನ್ಯ ನೆರಳಿನ ದಿನದ ವಿದ್ಯಮಾನದ ಬಗ್ಗೆ ವಿವರಣೆಯನ್ನು ಮತ್ತು ಅದಕ್ಕೆ ಸಂಬಂಧ ಪಟ್ಟ ಪ್ರಾತ್ಯಕ್ಷಿಕೆಗಳನ್ನು ಆಸಕ್ತ ಸಂದರ್ಶಕರಿಗೆ ಏರ್ಪಡಿಸಲಾಗಿತ್ತು. ಸಂದರ್ಶಕರು ಪ್ರಾತ್ಯಕ್ಷಿಕೆಗಳನ್ನು ವೀಕ್ಷಿಸಿ ಸಂದೇಹಗಳಿಗೆ ವಿವರಣೆಯನ್ನು ಪಡೆದುಕೊಂಡರು. ಶೈಕ್ಷಣಿಕ ಸಹಾಯಕ ಶರಣಯ್ಯ  ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. ವಿಜ್ಞಾನ ಕೇಂದ್ರದ ನಿರ್ದೇಶಕರಾದ ಡಾ ಕೆ.ವಿ ರಾವ್ ಉಪಸ್ಥಿತರಿದ್ದರು.

ಶೂನ್ಯ ನೆರಳಿನ ದಿನದ ಪ್ರಾತ್ಯಕ್ಷಿಕೆ Read More »

ಕರಾವಳಿ

ಮತ ಖಾತ್ರಿಗೆ ವಿವಿಪ್ಯಾಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಎ.25. ಚುನಾವಣಾ ಪ್ರಕ್ರಿಯೆ ಕುರಿತಂತೆ ಮತದಾರರಲ್ಲಿ ಜಾಗೃತಿ ಮತ್ತು ಅರಿವಿನ ಕೊರತೆ ಇನ್ನೂ ಇದೆ ಎಂಬ ಅಂಶ ಚುನಾವಣಾ ಆಯೋಗ ಇತ್ತೀಚೆಗೆ ರಾಜ್ಯದ 4 ಕಂದಾಯ ವಿಭಾಗಗಳ 40 ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಸಿದ  ಮತದಾರರ ಅರಿವು, ಮನೋಭಾವ ಮತ್ತು ಅಭ್ಯಾಸಗಳ ಕುರಿತು ನಡೆಸಿದ ಸಮೀಕ್ಷೆಯಲ್ಲಿ ತಿಳಿದುಬಂದಿತು. ಸಮೀಕ್ಷೆಯಲ್ಲಿ  ಕಂಡು ಬಂದ ಅಂಶಗಳ ಆಧಾರದ ಮೇಲೆ ಅಗತ್ಯ ಸಂವಹನ ವಿಧಾನ ಮತ್ತು ಮಧ್ಯಸ್ಥಿಕೆಗಳನ್ನು  ಸ್ವೀಪ್ ಮುಖಾಂತರ ಚುನಾವಣಾ ಆಯೋಗ ಕೈಗೊಂಡಿದೆ. ಸಮೀಕ್ಷೆಯ ಪ್ರಕಾರ ರಾಜ್ಯದ ಶೇ.

ಮತ ಖಾತ್ರಿಗೆ ವಿವಿಪ್ಯಾಟ್ Read More »

ಕರಾವಳಿ

ಇಂದು( ಎಪ್ರಿಲ್ 25) -ವಿಶ್ವ ಮಲೇರಿಯಾ ದಿನ

(ನ್ಯೂಸ್ ಕಡಬ) newskadaba.com  ಎ.25. ಪ್ರತಿ ವರ್ಷ ಎಪ್ರೀಲ್ 25ರಂದು ವಿಶ್ವದಾದ್ಯಂತ “ವಿಶ್ವ ಮಲೇರಿಯಾ” ದಿನ ಎಂದು ಆಚರಿಸಲಾಗುತ್ತಿದೆ. ಮಲೇರಿಯಾ ರೋಗದಿಂದಾಗುವ ಜಾಗತಿಕ ತೊಂದರೆಗಳು ಮತ್ತು ಪರಿಣಾಮಗಳ ಬಗ್ಗೆ ಹೆಚ್ಚಿಸಿ ಅರಿವು ಮೂಡಿಸಿ ರೋಗದ ಬಗ್ಗೆ ಜಾಗ್ರತಿ ಮೂಡಿಸುವ ಸದುದ್ದೇಶದಿಂದ ಈ ಆಚರಣೆಯನ್ನು ಜಾರಿಗೆ ತರಲಾಯಿತು. ವಿಶ್ವದಾದ್ಯಂತ ಸರಿಸುಮಾರು 3.3 ಬಿಲಿಯನ್ ಮಂದಿ ಈ ರೋಗಕ್ಕೆವರ್ಷವೊಂದರಲ್ಲಿ ತುತ್ತಾಗುತ್ತಿದ್ದು, 2012ರಲ್ಲಿ 6.5 ಲಕ್ಷ ಮಂದಿ ಸಾವನ್ನಪ್ಪಿದ್ದಾರೆ. 2013ರಲ್ಲಿ 5.8 ಲಕ್ಷ ಮಂದಿ ಜೀವ ತೆತ್ತಿದ್ದಾರೆ ಎಂದು ಅಂಕಿ ಅಂಶಗಳಿದ ತಿಳಿದುಬಂದಿದೆ.

ಇಂದು( ಎಪ್ರಿಲ್ 25) -ವಿಶ್ವ ಮಲೇರಿಯಾ ದಿನ Read More »

ಆರೋಗ್ಯ ಮಾಹಿತಿ
Scroll to Top