ಮೇ 07 ರಂದು ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ► ಎಪ್ರಿಲ್ ಅಂತ್ಯಕ್ಕೆ ದ್ವಿತೀಯ ಪಿಯು ಫಲಿತಾಂಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ.07. ಎಸ್ಸೆಸ್ಸೆಲ್ಸಿ ಪರೀಕ್ಷೆಯು ಮುಕ್ತಾಯಗೊಂಡಿದ್ದು, ಮೇ 07 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರೌಢ ಮತ್ತು ಪ್ರಾಥಮಿಕ ಶಿಕ್ಷಣ ಸಚಿವ ತನ್ವೀರ್ ಸೇಠ್ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಸಚಿವರು, ಮೇ 08 ರಂದು ಆಯಾ ಶಾಲೆಗಳಲ್ಲಿ ಫಲಿತಾಂಶಗಳನ್ನು ಪ್ರಕಟಿಸಲಾಗುವುದು. ಈ ಬಾರಿಯ ಪರೀಕ್ಷಾ ಸುಧಾರಣಾ ಕ್ರಮಗಳು ತೃಪ್ತಿ ತಂದಿದ್ದು, ಮೇ 07 ರಂದು ವಿದ್ಯಾರ್ಥಿಗಳು ಫಲಿತಾಂಶ ನಿರೀಕ್ಷಿಸಬಹುದು ಎಂದರು. ಏಪ್ರಿಲ್ ಕೊನೆಯ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶವೂ ಪ್ರಕಟ ಪಡಿಸಲಾಗುವುದೆಂದು […]

ಮೇ 07 ರಂದು ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ► ಎಪ್ರಿಲ್ ಅಂತ್ಯಕ್ಕೆ ದ್ವಿತೀಯ ಪಿಯು ಫಲಿತಾಂಶ Read More »

ಕರ್ನಾಟಕ

ಬಂಟ್ವಾಳ: ವಂಚಿಸಿ ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಎ.06. ವಂಚನೆ ಪ್ರಕರಣಕ್ಕೊಳಗಾಗಿ ಕಳೆದ ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ ಘಟನೆ ಶುಕ್ರವಾರದಂದು ನಡೆದಿದೆ.   ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವಳವೂರು ಉಮ್ಮರಗುಡ್ಡೆ ನಿವಾಸಿ ಶರೀಫ್ ಎಂಬವರ ಪುತ್ರ ಹನೀಫ್ ಎಂದು ಗುರುತಿಸಲಾಗಿದೆ. ಈತ ವಂಚನೆ ಪ್ರಕರಣದಲ್ಲಿ ಭಾಗಿಯಾಗಿ 2015 ರಿಂದ ತಲೆಮರೆಸಿಕೊಂಡಿದ್ದನೆನ್ನಲಾಗಿದ್ದು, ಶುಕ್ರವಾರದಂದು ತುಂಬೆ ಗ್ರಾಮದ ಮದಕ ಎಂಬಲ್ಲಿದ್ದಾನೆಂಬ ಖಚಿತ ಮಾಹಿತಿಯ ಮೇರೆಗೆ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು

ಬಂಟ್ವಾಳ: ವಂಚಿಸಿ ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ Read More »

ಕರಾವಳಿ

ಮರ್ಧಾಳ: ನೇಣುಬಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಎ.06. ಠಾಣಾ ವ್ಯಾಪ್ತಿಯ ಐತ್ತೂರು ಎಂಬಲ್ಲಿ ಅವಿವಾಹಿತ ವ್ಯಕ್ತಿಯೋರ್ವರು ತನ್ನ ಮನೆಯ ಸಮೀಪದ ಮರಕ್ಕೆ‌ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರದಂದು ನಡೆದಿದೆ.   ಆತ್ಮಹತ್ಯೆ ಮಾಡಿಕೊಂಡಾತನನ್ನು ಕಡಬ ತಾಲೂಕಿನ ಐತ್ತೂರು ಗ್ರಾಮದ ಅಂತಿಬೆಟ್ಟು ನಿವಾಸಿ ಚೆನ್ನಪ್ಪ ಗೌಡ ಎಂಬವರ ಪುತ್ರ ಮೋಹನ್ (30) ಎಂದು ಗುರುತಿಸಲಾಗಿದೆ. ಇತ್ತೀಚೆಗಷ್ಟೇ ಈತನಿಗೆ ಮದುವೆ ನಿಶ್ಚಯಿಸಲಾಗಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಶುಕ್ರವಾರದಂದು ಬೆಳಿಗ್ಗೆ ತನ್ನ ಮನೆ ಸಮೀಪದ ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿ ಕಂಡುಬಂದಿದೆ.

ಮರ್ಧಾಳ: ನೇಣುಬಿಗಿದು ಯುವಕ ಆತ್ಮಹತ್ಯೆ Read More »

ಕರಾವಳಿ

ಕುಂಬ್ರ: ಶ್ರೀಮಂತರ ಮನೆ ದರೋಡೆಗೆ ಪ್ಲ್ಯಾನ್ ► ಆಯುಧಗಳ ಸಹಿತ ಐವರ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಎ.06. ಶ್ರೀಮಂತರ ಮನೆ ದರೋಡೆಗೆ ಹೊಂಚು ಹಾಕಿ ಕುಳಿತಿದ್ದ ಐವರನ್ನು ಬಂಧಿಸಿರುವ ಡಿಸಿಐಬಿ ಪೊಲೀಸರು ಕೃತ್ಯಕ್ಕೆ ಬಳಸಲಾಗುವ ಆಯುಧಗಳನ್ನು ವಶಪಡಿಸಿಕೊಂಡ ಘಟನೆ ಗುರುವಾರ ರಾತ್ರಿ ಕುಂಬ್ರದಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಆರ್. ರವಿಕಾಂತೇಗೌಡರವರ ಮಾರ್ಗದರ್ಶನದಲ್ಲಿ ಡಿಸಿಐಬಿ ಪೊಲೀಸ್ ನಿರೀಕ್ಷಕರಾದ ಸುನಿಲ್ ವೈ. ನಾಯ್ಕ್ ರವರು ತಮ್ಮ ಸಿಬ್ಬಂದಿಗಳೊಂದಿಗೆ ರಾತ್ರಿ ರೌಂಡ್ಸ್ ಕರ್ತವ್ಯದಲ್ಲಿ ಮಾಣಿ, ಪುತ್ತೂರು, ಕುಂಬ್ರ ಕಡೆ ಸಂಚರಿಸಿ ಕೊಲ್ಲಾಜೆ ಬಸ್ ನಿಲ್ದಾಣದ ಬಳಿ ತಲುಪಿದಾಗ ಐವರು

ಕುಂಬ್ರ: ಶ್ರೀಮಂತರ ಮನೆ ದರೋಡೆಗೆ ಪ್ಲ್ಯಾನ್ ► ಆಯುಧಗಳ ಸಹಿತ ಐವರ ಬಂಧನ Read More »

ಕರಾವಳಿ

ಬೆಳಂದೂರು ಬಿಜೆಪಿ ವತಿಯಿಂದ ಮನೆ ಮನೆ ಭೇಟಿ ಕಾರ್ಯಕ್ರಮ 

(ನ್ಯೂಸ್ ಕಡಬ) newskadaba.com ಸವಣೂರು, ಎ.6.  ಭಾರತೀಯ ಜನತಾ ಪಕ್ಷದ  ಬೆಳಂದೂರು ವಾರ್ಡ್ 73ರಲ್ಲಿ ಬಿಜೆಪಿಯ ಮನೆ ಮನೆ ಭೇಟಿ ಕಾರ್ಯಕ್ರಮ ನಡೆಯಿತು ಜಿಲ್ಲಾ ಪಂಚಾಯಿತಿ ಸದಸ್ಯರಾದ ಪ್ರಮೀಳಾ ಜನಾರ್ದನರವರು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಜನತಾ ಬಜಾರ್ ಇದರ ಅಧ್ಯಕ್ಷರಾದ ಉದಯ ರೈ ಮಾದೋಡಿ, ಗ್ರಾಮ ಪಂಚಾಯತ್ ಸದಸ್ಯರಾದ ಜಯಂತ ಅಬೀರ, ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯದರ್ಶಿ ಚಂಪಾ ಕುಶಾಲಪ್ಪ ಅಬೀರ, ಬೂತ್ ಸಮಿತಿಯ ಅಧ್ಯಕ್ಷರಾದ ಪ್ರಮೋದ್ ನೀರಜರಿ, ಕಾರ್ಯದರ್ಶಿ ಯೋಗೀಶ್ ಕಾರ್ಯಕರ್ತರಾದ ಚಂದ್ರಯ್ಯ ಆಚಾರ್ಯ,

ಬೆಳಂದೂರು ಬಿಜೆಪಿ ವತಿಯಿಂದ ಮನೆ ಮನೆ ಭೇಟಿ ಕಾರ್ಯಕ್ರಮ  Read More »

ಕರಾವಳಿ

ಬೆಳಂದೂರು ಬಿಜೆಪಿ ವತಿಯಿಂದ ಪಕ್ಷ ಸಂಸ್ಥಾಪನಾ ದಿನಾಚರಣೆ

(ನ್ಯೂಸ್ ಕಡಬ) newskadaba.com ಸವಣೂರು, ಎ.6. ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನಾಚರಣೆಯನ್ನು ಬೆಳಂದೂರು ವಾರ್ಡ್ 73ರಲ್ಲಿ ಬಿಜೆಪಿಯ ಹಿರಿಯ ಕಾರ್ಯಕರ್ತರಾದ ಚಂದ್ರಯ್ಯ ಆಚಾರ್ಯ ಇವರ ಮನೆಯಲ್ಲಿ ಪಕ್ಷದ ಧ್ವಜ ಹಾರಿಸುವುದರೊಂದಿಗೆ ಆಚರಿಸಲಾಯಿತು. ಪಕ್ಷದ ಹಿರಿಯ ಕಾರ್ಯಕರ್ತರಾದ ಜನಾರ್ದನ ಅಚಾರ್ಯರವರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಬೂತ್ ಸಮಿತಿಯ ಅಧ್ಯಕ್ಷರಾದ ಪ್ರಮೋದ್ ನೀರಜರಿಯವರು ಸ್ವಾಗತಿಸಿ ಕಾರ್ಯದರ್ಶಿ ಯೋಗೀಶ್ ವಂದಿಸಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಜನಾತ ಬಜಾರ್ ಇದರ ಅಧ್ಯಕ್ಷರಾದ ಉದಯ ರೈ ಮಾದೋಡಿ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಪ್ರಮೀಳಾ

ಬೆಳಂದೂರು ಬಿಜೆಪಿ ವತಿಯಿಂದ ಪಕ್ಷ ಸಂಸ್ಥಾಪನಾ ದಿನಾಚರಣೆ Read More »

ಕರಾವಳಿ

ಗುಂಡುಕಲ್ಲು: ಅಪರಿಚಿತ ವಾಹನ ಬೈಕಿಗೆ ಢಿಕ್ಕಿ ► ಬೆಳ್ತಂಗಡಿ ನೀತಿ ಅಧ್ಯಕ್ಷ ಅನೀಶ್ ರಿಗೆ ಪಿತೃ ವಿಯೋಗ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಎ.07. ಅಪರಿಚಿತ ವಾಹನವೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಮೃತಪಟ್ಟ ಘಟನೆ ಮೂಡುಬಿದಿರೆ ಸಮೀಪದ ಗುಂಡುಕಲ್ಲು ಎಂಬಲ್ಲಿ ಗುರುವಾರದಂದು ನಡೆದಿದೆ. ಘಟನೆಯಲ್ಲಿ ನೀತಿ ತಂಡದ ಬೆಳ್ತಂಗಡಿ ಅಧ್ಯಕ್ಷರಾದ ಅನೀಶ್ ಎಂಬವರ ತಂದೆ ಮೃತಪಟ್ಟಿದ್ದು, ಇವರು ಚಲಾಯಿಸುತ್ತಿದ್ದ ಬೈಕಿಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಮೃತರ ಅಂತ್ಯಸಂಸ್ಕಾರ ಶುಕ್ರವಾರ ಸಂಜೆ 4:00 ಗಂಟೆಗೆ ಬೆಳ್ತಂಗಡಿ ತಾಲೂಕಿನ ಅಲದಂಗಡಿ ಸೈಂಟ್ ಪೀಟರ್ಸ್ ಕ್ಲೇವರ್ಸ್ ಚರ್ಚ್ ನಲ್ಲಿ ನಡೆಯಲಿದೆ

ಗುಂಡುಕಲ್ಲು: ಅಪರಿಚಿತ ವಾಹನ ಬೈಕಿಗೆ ಢಿಕ್ಕಿ ► ಬೆಳ್ತಂಗಡಿ ನೀತಿ ಅಧ್ಯಕ್ಷ ಅನೀಶ್ ರಿಗೆ ಪಿತೃ ವಿಯೋಗ Read More »

ಕರಾವಳಿ

ಪುಣ್ಚಪ್ಪಾಡಿ ಬೂತ್ ಬಿಜೆಪಿ ಸ್ಥಾಪನ ದಿನಾಚರಣೆ

(ನ್ಯೂಸ್ ಕಡಬ) newskadaba.com ಸವಣೂರು, ಎ.6. ಬಿ.ಜೆ.ಪಿ. ಬೆಳಂದೂರು ಮಹಾಶಕ್ತಿ ಕೇಂದ್ರದ ಪುಣ್ಚಪ್ಪಾಡಿ ಬೂತ್ ಸಂಖ್ಯೆ 68ರಲ್ಲಿ ಬಿಜೆಪಿ ಸ್ಥಾಪನಾ ದಿನಾಚರಣೆ ಮತ್ತು ಮಹಿಳಾ ಅಭಿಯಾನ ಎ.6ರಂದು ಪುಣ್ಚಪ್ಪಾಡಿ ಓಡಂತರ್ಯ ದಲ್ಲಿ ನಡೆಯಿತು. ಸ್ಥಾಪನ ದಿನಾಚರಣೆಯ ಅಂಗವಾಗಿ ಪಕ್ಷದ ಧ್ವಜಾರೋಹಣ ಮಾಡಲಾಯಿತು. ಈ ಸಂದರ್ಭ ಪಕ್ಷದ ಬೂತ್ ಸಮಿತಿ ಅಧ್ಯಕ್ಷ ಪ್ರಕಾಶ್ ರೈ ಸಾರಕರೆ,ಬೆಳಂದೂರು ಶಕ್ತಿ ಕೇಂದ್ರದ ಮಾಜಿ ಅಧ್ಯಕ್ಷ ಮೋಹನ ದೇವಾಡಿಗ, ಸವಣೂರು ಗ್ರಾಮ ಪಂಚಾಯತ್ ಸದಸ್ಯ ನಾಗೇಶ್ ಓಡಂತರ್ಯ,ವಿಶಾಕ್ ರೈ ತೋಟದಡ್ಕ, ಧನರಾಜ್ ಓಡಂತರ್ಯ, ಶಶಿಧರ ,

ಪುಣ್ಚಪ್ಪಾಡಿ ಬೂತ್ ಬಿಜೆಪಿ ಸ್ಥಾಪನ ದಿನಾಚರಣೆ Read More »

ಕರಾವಳಿ

ಪಾಲ್ತಾಡಿ ಬೂತ್ ಬಿಜೆಪಿ ಸ್ಥಾಪನ ದಿನಾಚರಣೆ ►ಮಹಿಳಾ ಅಭಿಯಾನ

(ನ್ಯೂಸ್ ಕಡಬ) newskadaba.com ಸವಣೂರು, ಎ.6. ಬಿ.ಜೆ.ಪಿ. ಬೆಳಂದೂರು ಮಹಾಶಕ್ತಿ ಕೇಂದ್ರದ ಪಾಲ್ತಾಡಿ ಶಕ್ತಿಕೇಂದ್ರದ ಬೂತ್ ಸಂಖ್ಯೆ 70ರಲ್ಲಿ ಬಿಜೆಪಿ ಸ್ಥಾಪನಾ ದಿನಾಚರಣೆ ಮತ್ತು ಮಹಿಳಾ ಅಭಿಯಾನ ಎ.6ರಂದು ನಡೆಯಿತು. ಸ್ಥಾಪನ ದಿನಾಚರಣೆಯ ಅಂಗವಾಗಿ ಪಕ್ಷದ ಧ್ವಜಾರೋಹಣ ಮಾಡಲಾಯಿತು.ಬಳಿಕ ಮಹಿಳಾ ಅಭಿಯಾನ ನಡೆಸಲಾಯಿತು. ಈ ಸಂದರ್ಭ ಪಕ್ಷದ ಹಿರಿಯ ಮುಂದಾಳು ಬಿ.ಕೆ.ರಮೇಶ್ ಕಲ್ಲೂರಾಯ, ಸವಣೂರು ಗ್ರಾಮ ಪಂಚಾಯತ್ ಬಿಜೆಪಿ ಸಮಿತಿಯ ಅಧ್ಯಕ್ಷ ಗಣೇಶ್ ಶೆಟ್ಟಿ ಕುಂಜಾಡಿ, ಸವಣೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಇಂದಿರಾ ಬಿ.ಕೆ,ಬೂತ್ ಸಮಿತಿ ಅಧ್ಯಕ್ಷ ಅನ್ನಪೂರ್ಣ ಪ್ರಸಾದ್

ಪಾಲ್ತಾಡಿ ಬೂತ್ ಬಿಜೆಪಿ ಸ್ಥಾಪನ ದಿನಾಚರಣೆ ►ಮಹಿಳಾ ಅಭಿಯಾನ Read More »

ಕರಾವಳಿ

ಕೊಕ್ಕಡ: ಯುವಕರಿಬ್ಬರ ಸಮಯೋಚಿತ ಕಾರ್ಯ ► ಸಾವಿನ ದವಡೆಯಿಂದ ಮಹಿಳೆ ಮತ್ತು ಮಕ್ಕಳಿಬ್ಬರು ಪಾರು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಎ.06. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬಸ್ಸಿನಲ್ಲಿ ಆಗಮಿಸಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಬೆಂಗಳೂರಿನ ಮಹಿಳೆ ಹಾಗೂ ಮಕ್ಕಳನ್ನು ಕೊಕ್ಕಡದ ಯುವಕರಿಬ್ಬರು ತಮ್ಮ ಸಮಯೋಚಿತ ನಿರ್ಧಾರದಿಂದಾಗಿ ಸಾವಿನ ದವಡೆಯಿಂದ ಪಾರು ಮಾಡಿದ ಘಟನೆ ಬುಧವಾರ ಬೆಳಗ್ಗಿನ ಜಾವ ಧರ್ಮಸ್ಥಳದಲ್ಲಿ ನಡೆದಿದೆ. ಕೊಕ್ಕಡದ ರಫೀಕ್ ಬೋಳದಬೈಲು ಹಾಗೂ ಅಝೀಜ್ ರವರು ಕಾರ್ಯ ನಿಮಿತ್ತ ಬೆಂಗಳೂರಿಗೆ ತೆರಳಿ ಬಸ್ಸಿನಲ್ಲಿ ಧರ್ಮಸ್ಥಳಕ್ಕೆ ಹಿಂತಿರುಗುತ್ತಿದ್ದಾಗ ತಮ್ಮ ಪಕ್ಕದ ಸೀಟಿನಲ್ಲಿ ಕುಳಿತಿದ್ದ ಮಹಿಳೆ ಹಾಗೂ ಮಕ್ಕಳು ಅಳುತ್ತಾ ಇರುವುದನ್ನು ಸೂಕ್ಷ್ಮವಾಗಿ ಗಮನಿಸಿದ್ದರು. ಮಹಿಳೆ

ಕೊಕ್ಕಡ: ಯುವಕರಿಬ್ಬರ ಸಮಯೋಚಿತ ಕಾರ್ಯ ► ಸಾವಿನ ದವಡೆಯಿಂದ ಮಹಿಳೆ ಮತ್ತು ಮಕ್ಕಳಿಬ್ಬರು ಪಾರು Read More »

ಕರಾವಳಿ
Scroll to Top