ಶಿರಾಡಿ ಪೇರಮಜಲು ಎಎನ್ಎಫ್ ಹಾಗೂ ದಲಿತ ಸಂವಾದ ಸಭೆ ► ಬೇಡಿಕೆಗೆ ಸ್ಪಂದಿಸಲು ಆಗ್ರಹ

(ನ್ಯೂಸ್ ಕಡಬ) newskadaba.com ಕಡಬ, ಎ.3. ಚುನಾವಣಾ ಹಿನ್ನಲೆಯಲ್ಲಿ ಶಿರಾಡಿ ಗ್ರಾಮದ ಪೆರಮಜಲು ಎಂಬಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಶಿರಾಡಿ ಗ್ರಾಮ ಶಾಖಾ ವತಿಯಿಂದ ಜನಸ್ನೇಹಿ ಪೊಲೀಸ್ ಮತ್ತು ದಲಿತರ ಕುಂದುಕೊರತೆ ಸಭೆಯನ್ನು ಪೇರಮಜಲು ಎಂಬಲ್ಲಿ ಮಾ.29ರಂದು ಗ್ರಾಮ ಸಮಿತಿಯ ಸಂಘಟನಾ ಸಂಚಾಲಕರಾದ ಅಣ್ಣು ಎಂ. ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಸಭೆಯಲ್ಲಿ ದಲಿತರ ಕುಂದುಕೊರತೆಗಳ ಸಮಸ್ಯೆಗಳನ್ನು ಆಲಿಸಿ, ಮಾಹಿತಿ ನೀಡಿದ ಎಎನ್ಎಫ್ನ ಸಬ್ಇನ್ಸ್‌ಪೆಕ್ಟರ್ ಅನಿಲ್ ರಾಥೋಡ್ ಪೊಲೀಸ್ ಹಾಗೂ ಜನರಿಗೆ ನೇರ ಸಂಪರ್ಕ ಇರಬೇಕಾದ ಜನಸಂಪರ್ಕ ಸಭೆ ಇದಾಗಿದ್ದು […]

ಶಿರಾಡಿ ಪೇರಮಜಲು ಎಎನ್ಎಫ್ ಹಾಗೂ ದಲಿತ ಸಂವಾದ ಸಭೆ ► ಬೇಡಿಕೆಗೆ ಸ್ಪಂದಿಸಲು ಆಗ್ರಹ Read More »

ಕರಾವಳಿ

ಬಹು ನಿರೀಕ್ಷಿತ ಮರ್ಧಾಳ ಝರಿ ನೀರು ಕುಡಿಯುವ ನೀರಿನ ಯೋಜನೆ ನೇಪಥ್ಯಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಎ.3. ಸುಬ್ರಹ್ಮಣ್ಯ ಸಮೀಪದ ಬಿಸಿಲೆಘಾಟ್ನ ಅಡ್ಡಹೊಳೆಯಿಂದ ಕೊಳವೆ ಮುಖಾಂತರ ಕಡಬ ಭಾಗಕ್ಕೆ ಕುಡಿಯುವ ನೀರು ತರುವ ಸುಮಾರು 25 ಲಕ್ಷ ರೂ ವೆಚ್ಚದ ಬಹುನಿರೀಕ್ಷಿತ ಮರ್ಧಾಳ ಝರಿ ನೀರು ಕುಡಿಯುವ ನೀರಿನ ಯೋಜನೆ ನೇಪಥ್ಯಕ್ಕೆ ಸರಿದಿದೆ. ರಾಜ್ಯ ಹೆದ್ದಾರಿ 85 ರ ಬಳಿಯ ಬಿಸಿಲೆಘಾಟ್ನಿಂದ ನೀರು ತಂದು ಕಡಬ ಭಾಗದ ಶೇ 60 ಗ್ರಾಮಗಳಿಗೆ ಭರಪುರ ನೀರುಣಿಸಬಹುದಾದ ಬೃಹತ್ ಯೋಜನೆ ಅನುಷ್ಟಾನಕ್ಕೆ ಕಳೆದ ಎಂಟು ವರ್ಷಗಳಿಂದ ಪಟ್ಟ ಪ್ರಯತ್ನಗಳೆಲ್ಲವೂ ನೀರಿನಲ್ಲಿ ಇಟ್ಟ ಹೋಮದಂತಾಗಿದೆ. ಉದ್ದೇಶಿತ

ಬಹು ನಿರೀಕ್ಷಿತ ಮರ್ಧಾಳ ಝರಿ ನೀರು ಕುಡಿಯುವ ನೀರಿನ ಯೋಜನೆ ನೇಪಥ್ಯಕ್ಕೆ Read More »

ಕರಾವಳಿ

ಬುಡೋಳಿ: ರಸ್ತೆ ಅಪಘಾತ ► ಬೈಕ್ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ಎ.02. ಬೈಕೊಂದು ಸ್ಕಿಡ್ ಆಗಿ ಮಗುಚಿ ಬಿದ್ದ ಪರಿಣಾಮ ಸವಾರ ಗಂಭೀರ ಗಾಯಗೊಂಡ ಘಟನೆ ಮಾಣಿ ಸಮೀಪದ ಬುಡೋಳಿ ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಬೈಕ್‌ ಸವಾರ ಪೆರ್ನೆ ನಿವಾಸಿ ಲಾರೆನ್ಸ್ ಎಂಬವರು ಗಂಭೀರ ಗಾಯಗೊಂಡಿದ್ದಾರೆ. ತಕ್ಷಣವೇ ಲಾರೆನ್ಸ್ ರನ್ನು ರಿಕ್ಷಾ ಮೂಲಕ ಮಾಣಿಗೆ ಕರೆದುಕೊಂಡು ಹೋಗಿ ಬಳಿಕ ಮಾಣಿಯ 108 ಆಂಬ್ಯುಲೆನ್ಸ್ ಮೂಲಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಬುಡೋಳಿ: ರಸ್ತೆ ಅಪಘಾತ ► ಬೈಕ್ ಸವಾರ ಗಂಭೀರ Read More »

ಕರಾವಳಿ

ನೀತಿ ಸಂಹಿತೆ ಜಾರಿಯಲ್ಲಿದ್ದರೂ ಖಾಸಗಿ ಕಾರ್ಯಕ್ರಮಗಳಿಗೆ ಅನುಮತಿ ಪಡೆಯುವ ಅಗತ್ಯವಿಲ್ಲ ► ಜಿಲ್ಲಾಧಿಕಾರಿ ಡಾ| ಸಸಿಕಾಂತ್ ಸೆಂಥಿಲ್ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.02. ವಿಧಾನಸಭಾ  ಚುನಾವಣಾ ನೀತಿ ಸಂಹಿತಿ ಜಾರಿಯಲ್ಲಿದ್ದರೂ, ಖಾಸಗಿ ಸ್ಥಳಗಳಲ್ಲಿ ನಡೆಯುವ ಖಾಸಗಿ ಕಾರ್ಯಕ್ರಮಗಳಿಗೆ ಅನುಮತಿ ಪಡೆಯಲು ಸಾರ್ವಜನಿಕರು ಅರ್ಜಿ ಸಲ್ಲಿಸಬೇಕಾದ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ. ಅವರು ಸೋಮವಾರದಂದು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಚುನಾವಣಾಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮದುವೆ, ಹುಟ್ಟುಹಬ್ಬ ಆಚರಣೆ ಸೇರಿದಂತೆ ರಾಜಕೀಯ ಉದ್ದೇಶವಿಲ್ಲದ ಖಾಸಗಿ ಕಾರ್ಯಕ್ರಮಗಳಿಗೆ ಚುನಾವಣಾಧಿಕಾರಿಗಳ ಅನುಮತಿ ಪಡೆಯಬೇಕಾಗಿಲ್ಲ. ಆದರೆ ಸಾರ್ವಜನಿಕ

ನೀತಿ ಸಂಹಿತೆ ಜಾರಿಯಲ್ಲಿದ್ದರೂ ಖಾಸಗಿ ಕಾರ್ಯಕ್ರಮಗಳಿಗೆ ಅನುಮತಿ ಪಡೆಯುವ ಅಗತ್ಯವಿಲ್ಲ ► ಜಿಲ್ಲಾಧಿಕಾರಿ ಡಾ| ಸಸಿಕಾಂತ್ ಸೆಂಥಿಲ್ ಸ್ಪಷ್ಟನೆ Read More »

ಕರಾವಳಿ

ದುಷ್ಕೃತ್ಯ ನಡೆಸುವ ಉದ್ದೇಶದಿಂದ ಮನೆಯೊಂದರಲ್ಲಿ ಆಯುಧ ಶೇಖರಣೆ ► ತಲವಾರು ಸಹಿತ ನಾಲ್ವರ ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.02. ದುಷ್ಕೃತ್ಯ ನಡೆಸುವ ಸಲುವಾಗಿ ಮನೆಯೊಂದರಲ್ಲಿ ತಲವಾರುಗಳನ್ನು ಬಚ್ಚಿಡಲಾಗಿದೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿರುವ ಪಣಂಬೂರು ಎಸಿಪಿ ರಾಜೇಂದ್ರ ಡಿ.ಎಸ್. ನೇತೃತ್ವದ ರೌಡಿ ನಿಗ್ರಹ ದಳದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ಮೂರು ತಲವಾರುಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಸೋಮವಾರದಂದು ನಡೆದಿದೆ. ಬಂಧಿತರನ್ನು ಪ್ರಮುಖ ಆರೋಪಿ ಸಂದೀಪ್, ಉಡುಪಿಯ ಆಕಾಶ್, ಫರಂಗಿಪೇಟೆಯ ಚರಣ್‌ರಾಜ್, ಧರ್ಮಸ್ಥಳದ ರಕ್ಷಿತ್ ಎಂದು ಗುರುತಿಸಲಾಗಿದೆ. ಬಂಧಿತರಿಂದ ಎರಡು ನಾಡ ಪಿಸ್ತೂಲ್ ಹಾಗು 10 ಮದ್ದುಗುಂಡುಗಳನ್ನು

ದುಷ್ಕೃತ್ಯ ನಡೆಸುವ ಉದ್ದೇಶದಿಂದ ಮನೆಯೊಂದರಲ್ಲಿ ಆಯುಧ ಶೇಖರಣೆ ► ತಲವಾರು ಸಹಿತ ನಾಲ್ವರ ಸೆರೆ Read More »

ಕರಾವಳಿ

ಕುಂಬಳೆ ಇಸ್ಲಾಮಿಕ್ ಅಕಾಡಮಿ ಸನದುದಾನ: ಆತೂರುನಲ್ಲಿ ಪ್ರಚಾರ, ಜಾಥಾ ಸಮಾರೋಪ ►ಯೋಧ ಜುಬೇರ್ ಹಳೆನೇರೆಂಕಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಎ.2. ಇಮಾಂ ಶಾಫಿ ಇಸ್ಲಾಮಿಕ್ ಅಕಾಡಮಿ ಕುಂಬಳೆ ಇದರ 10ನೇ ವಾರ್ಷಿಕ ಹಾಗೂ ಪ್ರಥಮ ವರ್ಷದ ಸನದುದಾನ ಸಮಾರಂಭ ಎಪ್ರಿಲ್ 10ರಿಂದ 15ರ ತನಕ ಕಂಬಳೆಯಲ್ಲಿ ನಡೆಯಲಿದ್ದು, ಇದರ ಪ್ರಚಾರಾರ್ಥ ಜಾಥಾ ಕಾರ್ಯಕ್ರಮ ಎ. 1ರಂದು ಆತೂರುನಲ್ಲಿ ಸಮಾಪನಗೊಂಡಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಗಂಡಿಬಾಗಿಲು ಕುತುಬಿಯಾ ಜುಮಾ ಮಸೀದಿ ಖತೀಬ್ ಹಾದಿ ಅನಸ್ ತಂಙಳ್ ಮಾತನಾಡಿ 2008ರಲ್ಲಿ ಮುಸ್ಲಿಂ ಸಮುದಾಯದ ಬಡ ವಿದ್ಯಾರ್ಥಿಗಳಿಗಾಗಿ ಧಾರ್ಮಿಕ ಮತ್ತು ಲೌಖಿಕ ವಿದ್ಯಾಭ್ಯಾಸ ನೀಡುವ ಪರಿಕಲ್ಪನೆಯೊಂದಿಗೆ ಸಮಸ್ತ

ಕುಂಬಳೆ ಇಸ್ಲಾಮಿಕ್ ಅಕಾಡಮಿ ಸನದುದಾನ: ಆತೂರುನಲ್ಲಿ ಪ್ರಚಾರ, ಜಾಥಾ ಸಮಾರೋಪ ►ಯೋಧ ಜುಬೇರ್ ಹಳೆನೇರೆಂಕಿಗೆ ಸನ್ಮಾನ Read More »

ಕರಾವಳಿ

ಯುವವಾಹಿನಿ ಕೇಂದ್ರ ಸಮಿತಿ: ಕಡಬ ಘಟಕಕ್ಕೆ ಪದಾಧಿಕಾರಿಗಳ ಆಯ್ಕೆ ► ಅಧ್ಯಕ್ಷ: ಯೋಗೀಶ್ ಕುಮಾರ್, ಕಾರ್ಯದರ್ಶಿ: ಮಿಥುನ್

(ನ್ಯೂಸ್ ಕಡಬ) newskadaba.com ಕಡಬ, ಎ.2. ಯುವಜನರಲ್ಲಿ ನಾಯಕತ್ವ ಗುಣ, ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶಪಾಲನೆ, ಯುವಜನಾಂಗವನ್ನು ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ, ರಾಜಕೀಯ ಮತ್ತು ಆರ್ಥಿಕ ಅಭಿವೃದ್ದಿಗಾಗಿ ಸಂಘಟಿಸುವುದು ಸಮಾಜದಲ್ಲಿ ವಿಶಿಷ್ಟ ಕ್ಷೇತ್ರದಲ್ಲಿ ಸಾಧನೆಗೈದ ಸಮಾಜ ಭಾಂದವರನ್ನು ಗುರುತಿಸುವುದು, ಯುವ ಜನರ ಪ್ರತಿಭಾವಿಕಾಸನಕ್ಕೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿವೇತನ ಹಾಗೂ ಉನ್ನತ ವ್ಯಾಸಂಗದ ಬಗ್ಗೆ ಮಾಹಿತಿ ನೀಡುವುದು, ಸಮಾಜದ ಪ್ರತಿಯೊಬ್ಬರಲ್ಲಿಯೂ ಏಕತೆ, ಸಮಗ್ರತೆ ಹಾಗೂ ಸಹೋದರತಾ ಭಾವನೆಯನ್ನು ಬೆಳೆಸುವುದು ಸಮಾಜದ ಯುವಜನತೆಗೆ ಉದ್ಯೋಗವಕಾಶಗಳ ಬಗ್ಗೆ ಮಾಹಿತಿ, ಸ್ಪರ್ಧಾತ್ಮಕ ಹಾಗೂ

ಯುವವಾಹಿನಿ ಕೇಂದ್ರ ಸಮಿತಿ: ಕಡಬ ಘಟಕಕ್ಕೆ ಪದಾಧಿಕಾರಿಗಳ ಆಯ್ಕೆ ► ಅಧ್ಯಕ್ಷ: ಯೋಗೀಶ್ ಕುಮಾರ್, ಕಾರ್ಯದರ್ಶಿ: ಮಿಥುನ್ Read More »

ಕರಾವಳಿ

ಆತೂರು: ಶ್ರೀ ಸದಾಶಿವ ಶ್ರೀ ಮಹಾಗಣಪತಿ ದೇವಳದ ಜಾತ್ರೋತ್ಸವ ದರ್ಶನ ಬಲಿ

  (ನ್ಯೂಸ್ ಕಡಬ) newskadaba.com ಕಡಬ, ಎ.2.  ಕಡಬ ತಾಲೂಕಿನ ಕೊೖಲ ಗ್ರಾಮದ ಆತೂರು ಶ್ರೀ ಸದಾಶಿವ ಮತ್ತು ಶ್ರೀ ಮಹಾಗಣಪತಿ ದೇವಳದ ವಾರ್ಷಿಕ ಜಾತ್ರೋತ್ಸವ ಅಂಗವಾಗಿ ಶನಿವಾರ ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆಯಿತು. ಸಾಯಂಕಾಲ ಬಲಿಹೊರಟು ಉತ್ಸವ,  ಕೊೖಲ ಫಾರ್ಮ್ನಿಂದಾಗಿ ಆನೆಗುಂಡಿಯವರೆಗೆ ಸವಾರಿ, ಕೆರೆ ಉತ್ಸವ, ಕಟ್ಟೆ ಪುಜೆಗಳು, ದುಗಲಾಯಿ ದೈವದ ಭಂಡಾರ ತರುವುದು, ರಂಗಪುಜೆ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ನಾಗೇಶ್ ತಂತ್ರಿ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನೇರವೇರಿತು. ಕಾರ್ಯಕ್ರಮದಲ್ಲಿ ಪವಿತ್ರಪಾಣಿ ವೆಂಕಟ್ರಮಣ ಕುದ್ರೆತ್ತಾಯ, ಉತ್ಸವ

ಆತೂರು: ಶ್ರೀ ಸದಾಶಿವ ಶ್ರೀ ಮಹಾಗಣಪತಿ ದೇವಳದ ಜಾತ್ರೋತ್ಸವ ದರ್ಶನ ಬಲಿ Read More »

ಕರಾವಳಿ

‘ನಾನು ಪ್ರೀತಿಯಲ್ಲಿ ಬಿದ್ದಿರುವುದರಿಂದ ನನಗೆ ಓದಲು ಆಗಲಿಲ್ಲ. ದಯವಿಟ್ಟು ಪಾಸ್ ಮಾಡಿ’ ► ಉತ್ತರದ ಬದಲಿಗೆ ಲವ್ ಲೆಟರ್ ಬರೆದು ಮನವಿ ಮಾಡಿಕೊಂಡ ಕಾಲೇಜು ವಿದ್ಯಾರ್ಥಿ

(ನ್ಯೂಸ್ ಕಡಬ) newskadaba.com ಮುಜಾಫರ್‌ ನಗರ, ಎ.02. ಕಷ್ಟಪಟ್ಟು ಕಲಿತು ಪರೀಕ್ಷೆ ಎದುರಿಸಬೇಕಿದ್ದ ವಿದ್ಯಾರ್ಥಿಯೋರ್ವ ಉತ್ತರ ಪತ್ರಿಕೆಯಲ್ಲಿ ತನ್ನ ಪ್ರೇಮ ನಿವೇದನೆಯನ್ನು ಮಾಡಿಕೊಂಡ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಯುಪಿ ಬೋರ್ಡ್‌ನ ಮಧ್ಯಂತರ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ವಿವಿಧ ಬಗೆಯ ಉತ್ತರಗಳನ್ನು ಬರೆದಿದ್ದು, ವಿದ್ಯಾರ್ಥಿಗಳು ನೀಡಿರುವ ಉತ್ತರಗಳು ಹಾಸ್ಯಾಸ್ಪದ ಎನ್ನಿಸಿದರೂ, ಅವರ ಮುಂದಿನ ಭವಿಷ್ಯ ಎತ್ತ ಸಾಗುತ್ತಿದೆ ಎನ್ನುವುದು ಆತಂಕಕ್ಕೆ ಕಾರಣವಾಗಿದೆ. ರಾಸಾಯನಶಾಸ್ತ್ರ ಪರೀಕ್ಷೆಯಲ್ಲಿ‌ ವಿದ್ಯಾರ್ಥಿಯೋರ್ವ ತನ್ನ ಪ್ರೇಮ‌ ನಿವೇದನೆಯನ್ನೇ ಬರೆದಿದ್ದು, ಎಲ್ಲರನ್ನೂ ಹುಬ್ಬೇರುವಂತೆ ಮಾಡಿದೆ. ‘ನಾನು ಪೂಜಾ ಎಂಬ

‘ನಾನು ಪ್ರೀತಿಯಲ್ಲಿ ಬಿದ್ದಿರುವುದರಿಂದ ನನಗೆ ಓದಲು ಆಗಲಿಲ್ಲ. ದಯವಿಟ್ಟು ಪಾಸ್ ಮಾಡಿ’ ► ಉತ್ತರದ ಬದಲಿಗೆ ಲವ್ ಲೆಟರ್ ಬರೆದು ಮನವಿ ಮಾಡಿಕೊಂಡ ಕಾಲೇಜು ವಿದ್ಯಾರ್ಥಿ Read More »

ರಾಷ್ಟ್ರೀಯ ನ್ಯೂಸ್

ವಿಟ್ಲ: ಆಟವಾಡಲೆಂದು ಬಾವಿಗೆ ಇಳಿದ ವಿದ್ಯಾರ್ಥಿಗಳು ► ನೀರಿನಲ್ಲಿ ಮುಳುಗಿ‌ ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ವಿಟ್ಲ, ಎ.01. ಈಜಾಡಲೆಂದು ಬಾವಿಗೆ ಇಳಿದ ಮೂವರು ಬಾಲಕರ ಪೈಕಿ ಓರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ವಿಟ್ಲದ ಮುಡ್ನೂರು ಎಂಬಲ್ಲಿ ಭಾನುವಾರದಂದು ನಡೆದಿದೆ. ಮೃತ ಬಾಲಕನನ್ನು ವಿಟ್ಲ ಮುಡ್ನೂರು ಗ್ರಾಮದ ಕುಂಡಡ್ಕ ಪಿಲಿಂಜ ನಿವಾಸಿ, ಪುಣಚ ಶಾಲೆಯ 8 ನೇ ತರಗತಿ ವಿದ್ಯಾರ್ಥಿ ದಕ್ಷಣ್ ಎಂದು ಗುರುತಿಸಲಾಗಿದೆ. ಈತ ಭಾನುವಾರದಂದು ಶಾಲೆಗೆ ರಜೆ ಇದ್ದ ಹಿನ್ನೆಲೆಯಲ್ಲಿ ತನ್ನ ಸ್ನೇಹಿತರ ಜೊತೆ ಆಟವಾಡಲೆಂದು ಬಾವಿಯ ಬಳಿಗೆ ತೆರಳಿದ್ದು, ಬಳಿಕ ನೀರಿನಲ್ಲಿ ಆಟವಾಡಲೆಂದು ಇಳಿದಿದ್ದಾನೆ.

ವಿಟ್ಲ: ಆಟವಾಡಲೆಂದು ಬಾವಿಗೆ ಇಳಿದ ವಿದ್ಯಾರ್ಥಿಗಳು ► ನೀರಿನಲ್ಲಿ ಮುಳುಗಿ‌ ಓರ್ವ ಮೃತ್ಯು Read More »

ಕರಾವಳಿ
Scroll to Top