ಕಡಬ: ಹೃದಯಾಘಾತಕ್ಕೊಳಗಾದ ಮೆಸ್ಕಾಂ ಉದ್ಯೋಗಿ ► ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಎ.01. ಮೆಸ್ಕಾಂ ಉದ್ಯೋಗಿಯೊಬ್ಬರು ಕರ್ತವ್ಯದಲ್ಲಿರುವಾಗಲೇ ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಘಟನೆ ಭಾನುವಾರದಂದು ಸುಬ್ರಹ್ಮಣ್ಯದಲ್ಲಿ ನಡೆದಿದೆ. ಸುಬ್ರಹ್ಮಣ್ಯ ಮೆಸ್ಕಾಂ ಕಛೇರಿಯಲ್ಲಿ ಹಿರಿಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕಡಬ ಸಮೀಪದ ಕೋಡಿಂಬಾಳ ಗ್ರಾಮದ ಕೊಡೆಂಕೀರಿ ನಿವಾಸಿ ದಿ| ಸಾಂತಪ್ಪ ಗೌಡ ಎಂಬವರ ಪುತ್ರ ಚಂದ್ರಶೇಖರ್(52) ಭಾನುವಾರದಂದು ಕರ್ತವ್ಯದಲ್ಲಿರುವಾಗಲೇ ಹೃದಯಾಘಾತಕ್ಕೊಳಗಾಗಿದ್ದು, ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಕಡಬ: ಹೃದಯಾಘಾತಕ್ಕೊಳಗಾದ ಮೆಸ್ಕಾಂ ಉದ್ಯೋಗಿ ► ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತ್ಯು Read More »

ಕರಾವಳಿ

ಪದವು: ಶಾರ್ಟ್ ಸರ್ಕ್ಯೂಟ್ ನಿಂದಾಗಿ ವಾಹನಕ್ಕೆ ಬೆಂಕಿ

(ನ್ಯೂಸ್ ಕಡಬ) newskadaba.com ಕಡಬ, ಎ.01. ಶಾರ್ಟ್ ಸರ್ಕ್ಯೂಟ್ ಕಾರಣದಿಂದಾಗಿ ವಾಹನದಲ್ಲಿ ಬೆಂಕಿಯುಂಟಾಗಿದ್ದು, ಊರವರು ಬೆಂಕಿಯನ್ನು ನಂದಿಸಿದ್ದರಿಂದಾಗಿ ಹೆಚ್ಚಿನ ಅನಾಹುತ ತಪ್ಪಿದ ಘಟನೆ ಉಪ್ಪಿನಂಗಡಿ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕುಂತೂರು ಸಮೀಪದ ಪದವು ಎಂಬಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ. ಕ್ಯಾಟರಿಂಗ್ ಸಂಸ್ಥೆಗೆ ಸೇರಿದ ಟಾಟಾ ಏಸ್ ವಾಹನವು ಆಹಾರಗಳನ್ನು ತುಂಬಿಸಿಕೊಂಡು ಕಡಬ ಕಡೆಗೆ ತೆರಳುತ್ತಿದ್ದಾಗ ಪದವು ಸಮೀಪ ತಲುಪಿದಾಗ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ‌ ಕಾಣಿಸಿಕೊಂಡಿದೆ. ತಕ್ಷಣವೇ ನೀರು ಸುರಿದು ಬೆಂಕಿ ನಂದಿಸಲು ಸಹಕರಿಸಿದ್ದರಿಂದಾಗಿ ಹೆಚ್ಚಿನ ಅನಾಹುತ

ಪದವು: ಶಾರ್ಟ್ ಸರ್ಕ್ಯೂಟ್ ನಿಂದಾಗಿ ವಾಹನಕ್ಕೆ ಬೆಂಕಿ Read More »

ಕರಾವಳಿ

ಹುಟ್ಟೂರಿಗೆ ಆಗಮಿಸಿದ ಲಷ್ಕರ್ – ಎ – ತೋಯ್ಬಾ ಉಗ್ರರನ್ನು ಸದೆಬಡಿದಿದ್ದ ತುಳುನಾಡಿನ ವೀರ ಯೋಧ ► ಕಡಬ ತಾಲೂಕಿಗೆ ಹೆಮ್ಮೆಯ ಗರಿಯನ್ನು ತಂದಿತ್ತ ಝುಬೈರ್ ನೇರೆಂಕಿಗೆ ಹುಟ್ಟೂರ ಸನ್ಮಾನ

(ನ್ಯೂಸ್ ಕಡಬ) newskadaba.com ಕಡಬ, ಎ.01. ಕಳೆದ ಫೆಬ್ರವರಿ ತಿಂಗಳಲ್ಲಿ ಜಮ್ಮು ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಉಗ್ರರನ್ನು ಸದೆಬಡಿಯುವಲ್ಲಿ ಯಶಸ್ವಿಯಾಗಿ ಊರಿಗೆ ಆಗಮಿಸಿದ ತುಳುನಾಡಿನ ವೀರ ಯೋಧನಿಗೆ ಹುಟ್ಟೂರ ಸನ್ಮಾನ ಭಾನುವಾರದಂದು ಆತೂರಿನಲ್ಲಿ ನಡೆಯಿತು. ಫೆಬ್ರವರಿ ತಿಂಗಳ ಎರಡನೇ ವಾರದಲ್ಲಿ ಜಮ್ಮು ಕಾಶ್ಮೀರದ ಕರಣ್ ನಗರಕ್ಕೆ ರಣ ಹೇಡಿಗಳಂತೆ ನುಗ್ಗಿದ ಲಷ್ಕರ್-ಎ-ತೋಯ್ಬಾ ಭಯೋತ್ಪಾದಕರನ್ನು ಅಟ್ಟಾಡಿಸಿ ಮುಲಾಜಿಲ್ಲದೇ ಹೊಡೆದುರುಳಿಸಿ ತನ್ನ ಹುದ್ದೆಗೆ ಗೌರವ ಸಲ್ಲಿಸಿದ್ದ ತಂಡದಲ್ಲಿದ್ದ ಕಡಬ ತಾಲೂಕಿನ ಆತೂರು ಸಮೀಪದ ಬಜತ್ತೂರು ಗ್ರಾಮದ ನೇರೆಂಕಿಯ ಮೇಲೂರು

ಹುಟ್ಟೂರಿಗೆ ಆಗಮಿಸಿದ ಲಷ್ಕರ್ – ಎ – ತೋಯ್ಬಾ ಉಗ್ರರನ್ನು ಸದೆಬಡಿದಿದ್ದ ತುಳುನಾಡಿನ ವೀರ ಯೋಧ ► ಕಡಬ ತಾಲೂಕಿಗೆ ಹೆಮ್ಮೆಯ ಗರಿಯನ್ನು ತಂದಿತ್ತ ಝುಬೈರ್ ನೇರೆಂಕಿಗೆ ಹುಟ್ಟೂರ ಸನ್ಮಾನ Read More »

ಕರಾವಳಿ

ಪುತ್ತೂರು: ಕೆಎಸ್ಸಾರ್ಟಿಸಿ ಬಸ್ – ಕಾರು ಢಿಕ್ಕಿ ► ಯುವ ವಕೀಲೆ ಮೃತ್ಯು, ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ಪುತ್ತೂರು, ಎ.01. ವ್ಯಾಗನರ್ ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಯುವ ವಕೀಲೆ ಮೃತಪಟ್ಟು, ಓರ್ವ ಗಂಭೀರ ಗಾಯಗೊಂಡ ಘಟನೆ ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ಸಂಪ್ಯದಲ್ಲಿ ಶನಿವಾರದಂದು ನಡೆದಿದೆ. ಮೃತರನ್ನು ಬೆಳ್ತಂಗಡಿ ತಾಲೂಕಿನ ಕಂಟ್ರಮಜಲು ನಿವಾಸಿ ಜಿನ್ನಪ್ಪ‌ ಗೌಡ ಎಂಬವರ ಪುತ್ರಿ ಮಂಗಳೂರಿನ ಯುವ ವಕೀಲೆ ಗಾಯತ್ರಿ (23) ಎಂದು ಗುರುತಿಸಲಾಗಿದೆ. ಇವರು ಪುತ್ತೂರಿನಿಂದ ಕುಂಬ್ರ ಕಡೆಗೆ ತೆರಳುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಬಂದ ಇವರಿದ್ದ

ಪುತ್ತೂರು: ಕೆಎಸ್ಸಾರ್ಟಿಸಿ ಬಸ್ – ಕಾರು ಢಿಕ್ಕಿ ► ಯುವ ವಕೀಲೆ ಮೃತ್ಯು, ಓರ್ವ ಗಂಭೀರ Read More »

ಕರಾವಳಿ

ಕಡಬ: ನೆಲ್ಯಾಡಿಗೆಂದು ತೆರಳಿದ್ದ ಯುವಕ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಮಾ.31. ಕೆಲಸಕ್ಕೆಂದು ತೆರಳಿದ ಯುವಕನೋರ್ವ ಮೂರು ದಿನಗಳಾದರೂ ಮನೆಗೆ ಬರದೆ ನಾಪತ್ತೆಯಾಗಿರುವ ಘಟನೆ ಕಡಬದಲ್ಲಿ ನಡೆದಿದೆ. ನಾಪತ್ತೆಯಾಗಿರುವ ಯುವಕನನ್ನು ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ಕಾರ್ಕಳ ನಿವಾಸಿ ಮಣಿ ಎಂಬವರ ಪುತ್ರ ಶ್ರೀಜಿತ್(24) ಎಂದು ಗುರುತಿಸಲಾಗಿದೆ. ಈತ ಬುಧವಾರದಂದು ನೆಲ್ಯಾಡಿಗೆಂದು ಕೆಲಸಕ್ಕೆ ತೆರಳಿದ್ದು, ಮನೆಗೆ ಹಿಂತಿರುಗದೆ ನಾಪತ್ತೆಯಾಗಿದ್ದಾರೆ ಎಂದು ಮಣಿ ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಡಬ: ನೆಲ್ಯಾಡಿಗೆಂದು ತೆರಳಿದ್ದ ಯುವಕ ನಾಪತ್ತೆ Read More »

ಕರಾವಳಿ

ಸವಣೂರು: ಮತದಾನದ ಮಹತ್ವ ಮತ್ತು ಜಾಗೃತಿ ಕಾರ್ಯಕ್ರಮ ► ವಿಧಾನಸಭಾ ಚುನಾವಣೆಗೆ ಪೊಲೀಸ್ ಇಲಾಖೆ ಸರ್ವ ಸನ್ನದ್ಧ: ಎಸ್ಪಿ ಡಾ. ರವಿಕಾಂತೇ ಗೌಡ

(ನ್ಯೂಸ್ ಕಡಬ) newskadaba.com ಸವಣೂರು, ಮಾ.23. ಪೊಲೀಸ್ ಠಾಣೆಯೆಂದರೆ ಅದು ಅಧಿಕಾರ ಚಲಾಯಿಸೋ ಕೇಂದ್ರವಲ್ಲ. ಬದಲಾಗಿ ಸಾರ್ವಜನಿಕರ ಸೇವೆ ಮಾಡೋ ಕೇಂದ್ರಗಳು. ವಿಧಾನ ಸಭಾ ಚುನಾವಣೆ ಸುಸೂತ್ರವಾಗಿ ನಡೆಯಲು ಚುನಾವಣಾ ಆಯೋಗದ ಸೂಚನೆಯಂತೆ ಪೊಲೀಸ್ ಇಲಾಖೆ ಸನ್ನಧವಾಗಿದೆ. ಚುನಾವಣೆ ಹಿನನೆಲೆಯಲ್ಲಿ ಕಾನೂನು ಬಾಹಿರ ಚಟುವಟಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲೆ 22 ಕಡೆ ಚೆಕ್ ಪೋಸ್ಟ್ ನಿರ್ಮಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರವಿಕಾಂತೇ ಗೌಡ ಹೇಳಿದರು. ಅವರು ಶನಿವಾರ ಸವಣೂರಿನ ವಿನಾಯಕ ಸಭಾಭವನದಲ್ಲಿ ದ.ಕ.ಜಿಲ್ಲಾ ಪೊಲೀಸ್, ಬೆಳ್ಳಾರೆ

ಸವಣೂರು: ಮತದಾನದ ಮಹತ್ವ ಮತ್ತು ಜಾಗೃತಿ ಕಾರ್ಯಕ್ರಮ ► ವಿಧಾನಸಭಾ ಚುನಾವಣೆಗೆ ಪೊಲೀಸ್ ಇಲಾಖೆ ಸರ್ವ ಸನ್ನದ್ಧ: ಎಸ್ಪಿ ಡಾ. ರವಿಕಾಂತೇ ಗೌಡ Read More »

ಕರಾವಳಿ

ಫ್ರೆಂಡ್ಸ್ ಬಲ್ಲಾಳ್ ಭಾಗ್ ಬಿರುವೆರ್ ಕುಡ್ಲ(ರಿ) ಪುತ್ತೂರು ಘಟಕ ಇದರ ಆರನೆ ಮಾಸಿಕ ಸಹಾಯಹಸ್ತ

(ನ್ಯೂಸ್ ಕಡಬ) newskadaba.com ಸವಣೂರು, ಮಾ.31. ಉದಯ ಪೂಜಾರಿ ಸಾರಥ್ಯದ ಫ್ರೆಂಡ್ಸ್ ಬಲ್ಲಾಳ್ ಭಾಗ್ ಬಿರುವೆರ್ ಕುಡ್ಲ(ರಿ) ಪುತ್ತೂರು ಘಟಕ ಇದರ ಆರನೆ ಮಾಸಿಕ ಸಹಾಯಹಸ್ತವನ್ನು ಮಾ.31 ರಂದು ಕಡಬ ನೂಜಿಬಾಳ್ತಿಲ ನಿವಾಸಿಯಾದ ಶ್ರೀಮತಿ ಜಯಂತಿಯವರ ಮಗಳ ಮದುವೆಗೆ ಧನ ಸಹಾಯವನ್ನು ನೀಡಲಾಯಿತು. ಬಡ ಕುಟುಂಬವಾದ ಇವರು ತಮ್ಮ ಆರ್ಥಿಕ ಮಗ್ಗಟ್ಟಿನ ಸಮಸ್ಯೆಯಿಂದ ಬಳಲುತ್ತಿದ್ದು ಬಿರುವೆರ್ ಕುಡ್ಲ ಪುತ್ತೂರು ಘಟಕಕ್ಕೆ ತಮ್ಮ ಪರಿಸ್ಥಿತಿಯನ್ನು ವಿವರಿಸಿ ಅರ್ಜಿಯನ್ನು ಸಲ್ಲಿಸದ ಪರಿಣಾಮವಾಗಿ ಪುತ್ತೂರು ಘಟಕ ಸಭೆಯಲ್ಲಿ ಸಹಾಯ ನೀಡುವುದೆಂದು ತೀರ್ಮಾನಿಸಿ

ಫ್ರೆಂಡ್ಸ್ ಬಲ್ಲಾಳ್ ಭಾಗ್ ಬಿರುವೆರ್ ಕುಡ್ಲ(ರಿ) ಪುತ್ತೂರು ಘಟಕ ಇದರ ಆರನೆ ಮಾಸಿಕ ಸಹಾಯಹಸ್ತ Read More »

ಕರಾವಳಿ

ಉಪ್ಪಿನಂಗಡಿ ಪೊಲೀಸರ ಮಿಂಚಿನ ಕಾರ್ಯಾಚರಣೆಗೆ ಅಡಿಕೆ ಕಳ್ಳರು ಅಂದರ್ ► ಸುಮಾರು ನಾಲ್ಕು ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಅಡಿಕೆ ವಶ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ.31. ಕೆಲ ದಿನಗಳ ಹಿಂದೆ ನಡೆದ ಅಡಿಕೆ ಕಳವು ಪ್ರಕರಣವೊಂದನ್ನು ವಾರದೊಳಗೆ ಬೇಧಿಸಿರುವ ಉಪ್ಪಿನಂಗಡಿ ಪೊಲೀಸರು ಆರೋಪಿಯನ್ನು ಬಂಧಿಸುವ ಮೂಲಕ ಮತ್ತೊಮ್ಮೆ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಬಂಧಿತ ಆರೋಪಿಯನ್ನು ಕೌಕ್ರಾಡಿ ಗ್ರಾಮದ ನೆಲ್ಯಾಡಿ ಬಳಿಯ ಕುಂಡಡ್ಕ ನಿವಾಸಿ ಸರ್ಫ್‌ರಾಜ್ ಯಾನೆ ಹುಸೈನ್ ಸರ್ಫ್‌ರಾಜ್(30) ಎಂದು ಗುರುತಿಸಲಾಗಿದೆ. ಪ್ರಕರಣದ ಇನ್ನೋರ್ವ ಪ್ರಮುಖ ಆರೋಪಿ ಸರ್ಫ್‌ರಾಜ್‌ನ ನೆರೆಮನೆಯವನಾದ ಅಶ್ಫಾಕ್ ಎಂಬಾತ ಪೊಲೀಸರ ಕಾರ್ಯಾಚರಣೆ ವೇಳೆ ಓಡಿ ತಪ್ಪಿಸಿಕೊಂಡಿದ್ದಾನೆ. ಆರೋಪಿಗಳು ನೆಲ್ಯಾಡಿಯಲ್ಲಿರುವ ಎಚ್.ಎನ್. ಸುಪಾರಿ ಟ್ರೇಡರ್ಸ್

ಉಪ್ಪಿನಂಗಡಿ ಪೊಲೀಸರ ಮಿಂಚಿನ ಕಾರ್ಯಾಚರಣೆಗೆ ಅಡಿಕೆ ಕಳ್ಳರು ಅಂದರ್ ► ಸುಮಾರು ನಾಲ್ಕು ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಅಡಿಕೆ ವಶ Read More »

ಕರಾವಳಿ

ಅಕ್ರಮ ಮರಳು ಅಡ್ಡೆಗೆ ದಾಳಿ ► ಯಾಂತ್ರೀಕೃತ ದೋಣಿ ಸಹಿತ 10 ಲಕ್ಷ ರೂ. ಮೌಲ್ಯದ ಸ್ವತ್ತು ವಶ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ.30. ಅಕ್ರಮ ಮರಳುಗಾರಿಕೆ ಅಡ್ಡೆಯೊಂದಕ್ಕೆ ದಾಳಿ ನಡೆಸಿರುವ ಬಂಟ್ವಾಳ ಪೊಲೀಸರು ಯಾಂತ್ರೀಕೃತ ದೋಣಿ ಸಹಿತ ಲಕ್ಷಾಂತರ ರೂ. ಮೌಲ್ಯದ ಮರಳನ್ನು ವಶಪಡಿಸಿಕೊಂಡ ಘಟನೆ ಸಜೀಪ ಮುನ್ನೂರು ಗ್ರಾಮದ ಕೊಪ್ಪಳ ಎಂಬಲ್ಲಿ ಶುಕ್ರವಾರದಂದು ನಡೆದಿದೆ. ಸಜೀಪ ಮುನ್ನೂರು ಗ್ರಾಮದ ಕೊಪ್ಪಳ ಎಂಬಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು, ನದಿ ತೀರದಲ್ಲಿ ದಾಸ್ತಾನು ಇರಿಸಲಾಗಿದ್ದ ಮರಳು, ಯಾಂತ್ರೀಕೃತ ದೋಣಿ ಹಾಗೂ ಲಾರಿ ಸೇರಿದಂತೆ ಹಲವು ಸಾಮಗ್ರಿಗಳನ್ನು

ಅಕ್ರಮ ಮರಳು ಅಡ್ಡೆಗೆ ದಾಳಿ ► ಯಾಂತ್ರೀಕೃತ ದೋಣಿ ಸಹಿತ 10 ಲಕ್ಷ ರೂ. ಮೌಲ್ಯದ ಸ್ವತ್ತು ವಶ Read More »

ಕರಾವಳಿ

ಬೀರಂತಡ್ಕ ಬಲಮುರಿ ಶ್ರೀ ಮಹಾಗಣಪತಿ ದೇವಸ್ಥಾನ ಮತ್ತು ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠೆ ಹಾಗೂ ಕಲಶಾಭಿಷೇಕ

(ನ್ಯೂಸ್ ಕಡಬ) newskadaba.com ಕಡಬ,ಮಾ.31. ಕುಂತೂರು ಗ್ರಾಮದ ಪೆರಾಬೆ ಬೀರಂತಡ್ಕ ಬಲಮುರಿ ಶ್ರೀ ಮಹಾಗಣಪತಿ ದೇವಸ್ಥಾನ ಮತ್ತು ರಾಜನ್ ದೈವಸ್ಥಾನದಲ್ಲಿ ಎ.24ರಿಂದ ಎ.27ರವರೆಗೆ ಶ್ರೀ ಮಹಾಗಣಪತಿ ದೇವರ ಪ್ರತಿಷ್ಠೆ ಹಾಗೂ ರಾಜನ್ ದೈವ(ಶಿರಾಡಿ ದೈವ)ಪರಿವಾರ ದೈವಗಳ ಪ್ರತಿಷ್ಠೆ ಹಾಗೂ ಕಲಶಾಭಿಷೇಕ ಕಾರ್ಯಕ್ರಮಗಳು ವೇದಮೂರ್ತಿ ಶ್ರೀ ಸುಬ್ರಹ್ಮಣ್ಯ ಬೈಪಡಿತ್ತಾಯ ಮತ್ತು ಶ್ರೀ ಕೃಷ್ಣಪ್ರಸಾದ್ ಉಪಾಧ್ಯಾಯ ಅರ್ಬಿ ರವರ ನೇತೃತ್ವದಲ್ಲಿ ನವೀಕರಣ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಡೆಯಲಿದ್ದು ಜೀಣೋದ್ಧಾರ ಕೆಲಸ ಕಾರ್ಯಗಳು ಭರದಿಂದ ನಡೆಯುತ್ತಿದೆ. ಶ್ರೀಕ್ಷೇತ್ರದ ಪರಿಚಯ ‘ಬೀರಂತಡ್ಕ’ ಹೆಸರೇ ಸೂಚಿಸುವಂತೆ ವೀರರ ಬಯಲು

ಬೀರಂತಡ್ಕ ಬಲಮುರಿ ಶ್ರೀ ಮಹಾಗಣಪತಿ ದೇವಸ್ಥಾನ ಮತ್ತು ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠೆ ಹಾಗೂ ಕಲಶಾಭಿಷೇಕ Read More »

ಕರಾವಳಿ
Scroll to Top