ಉಪ್ಪಿನಂಗಡಿ: ಹಾಡುಹಗಲೇ ವಿಷ ಸೇವಿಸಿ ಆತ್ಮಹತ್ಯೆಗೈದ ಪ್ರಾಥಮಿಕ ಆರೋಗ್ಯ ಕೇಂದ್ರದ ಕ್ಲರ್ಕ್

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ.27. ಇಲ್ಲಿನ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕ್ಲರ್ಕ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರದಂದು ಉಪ್ಪಿನಂಗಡಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಬೆಳ್ತಂಗಡಿ ತಾಲೂಕಿನ ರೆಖ್ಯ ನಿವಾಸಿ ಜಾಯ್ ಥಾಮಸ್ (50) ಎಂದು ಗುರುತಿಸಲಾಗಿದೆ. ಅವರು ಮಂಗಳವಾರದಂದು ಉಪ್ಪಿನಂಗಡಿ ಪೇಟೆಯಿಂದ ವಿಷ ಪದಾರ್ಥ ಖರೀದಿಸಿ ಉಪ್ಪಿನಂಗಡಿಯ ಆದಿತ್ಯ ಹೋಟೆಲ್ ಸಮೀಪ ಸೇವಿಸಿ ಕುಸಿದು ಬಿದ್ದಿದ್ದಾರೆನ್ನಲಾಗಿದೆ. ತಕ್ಷಣವೇ ಸ್ಥಳೀಯರು ಆಸ್ಪತ್ರೆಗೆ ಸೇರಿಸಲು ಪ್ರಯತ್ನಿಸಿದರಾದರೂ ಅದಾಗಲೇ ಅವರು ಮೃತಪಟ್ಟಿದ್ದರು. ಆತ್ಮಹತ್ಯೆಗೆ ನಿಖರವಾದ ಕಾರಣ […]

ಉಪ್ಪಿನಂಗಡಿ: ಹಾಡುಹಗಲೇ ವಿಷ ಸೇವಿಸಿ ಆತ್ಮಹತ್ಯೆಗೈದ ಪ್ರಾಥಮಿಕ ಆರೋಗ್ಯ ಕೇಂದ್ರದ ಕ್ಲರ್ಕ್ Read More »

ಕರಾವಳಿ

ಬೆಳಂದೂರು ಅಬೀರ ಅಂಗನವಾಡಿ ಕೇಂದ್ರ ಬಾಲವಿಕಾಸ ಸಮಿತಿ ರಚನೆ

(ನ್ಯೂಸ್ ಕಡಬ) newskadaba.com ಸವಣೂರು, ಮಾ.27. ಬೆಳಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಬೀರ ಅಂಗನವಾಡಿ ಕೇಂದ್ರದಲ್ಲಿ ನೂತನ ಬಾಲವಿಕಾಸ ಸಮಿತಿಯನ್ನು ರಚನೆ ಮಾಡಲಾಯಿತು. ನೂತನ ಬಾಲವಿಕಾಸ ಸಮಿತಿಯ ಅಧ್ಯಕ್ಷರಾಗಿ ವಿಮಲ ಎನ್.ಎಮ್. ರವರು ಆಯ್ಕೆಯಾಗಿದ್ದಾರೆ. ಗ್ರಾಮ ಪಂಚಾಯತ್ ಪ್ರತಿನಿಧಿಯಾಗಿ ಪಂಚಾಯತ್ ಸದಸ್ಯರಾದ ಜಯಂತ ಅಬೀರ, ಶಾಲಾ ಮುಖ್ಯೋಪಾಧ್ಯಾಯರಾದ ಪುಂಡಲೀಕ ಪೂಜಾರ, ಆಶಾ ಕಾರ್ಯಕರ್ತೆ ಕುಸುಮ, ಅಂಗನವಾಡಿ ವ್ಯಾಪ್ತಿಗೆ ಬರುವ ಪ್ರಾಯಪೂರ್ವ ಬಾಲಕಿ ಮೋಹಿನಿ, ಮಕ್ಕಳ ತಾಯಂದಿರ ಪರವಾಗಿ ಜಯಶ್ರೀ ಮತ್ತು ಸೀತಾ, ಅಂಗನವಾಡಿ ಫಲಾನುಭವಿಯ ತಂದೆ ಗಿರಿಯಪ್ಪ ಮಾದೋಡಿ,

ಬೆಳಂದೂರು ಅಬೀರ ಅಂಗನವಾಡಿ ಕೇಂದ್ರ ಬಾಲವಿಕಾಸ ಸಮಿತಿ ರಚನೆ Read More »

ಕರಾವಳಿ

ಬೆಳಂದೂರು ಗ್ರಾಮದ ಬೂತ್ 2ರ ಬಿಜೆಪಿ ಸಮಿತಿ ಸಭೆ

(ನ್ಯೂಸ್ ಕಡಬ) newskadaba.com ಸವಣೂರು, ಮಾ.27. ಬೆಳಂದೂರು ಗ್ರಾಮದ ಬೂತ್ 2ರ ಬಿಜೆಪಿ  ಸಮಿತಿಯ ಸಭೆಯು ಪ್ರತಿ 10 ದಿನಗಳಿಗೊಮ್ಮೆ ಪಕ್ಷದ ಕಾರ್ಯಕರ್ತರ ಮನೆಗಳಲ್ಲಿ ನಡೆಯುತ್ತಿದ್ದು ಈ ಬಾರಿಯ ಸಭೆಯು ಬಿಜೆಪಿ ಪಂಚಾಯತ್ ಸಮಿತಿಯ ಮಹಿಳಾ ಮೊರ್ಛದ ಕಾರ್ಯದರ್ಶಿಯಾದ ಚಂಪಾ ಕುಶಾಲಪ್ಪ ಗೌಡರ ಮನೆಯಲ್ಲಿ ಬೂತ್ ಸಮಿತಿಯ ಅಧ್ಯಕ್ಷರಾದ ಪ್ರಮೋದ್ ನೀರಜರಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಪಕ್ಷದ ಸಂಘಟನೆಯ ಬಗ್ಗೆ ಚರ್ಚೆ ನಡೆಸಿ ಪೇಜ್ ಪ್ರಮುಖರ ನೇಮಕ ಮಾಡಲಾಯಿತು. ಚುನಾವಣಾ ಪೂರ್ವ ಚಟುವಟಿಕೆಯ ಬಗ್ಗೆ ಚರ್ಚೆ ಮಾಡಲಾಯಿತು. ಸಭೆಯಲ್ಲಿ ದಕ್ಷಿಣ

ಬೆಳಂದೂರು ಗ್ರಾಮದ ಬೂತ್ 2ರ ಬಿಜೆಪಿ ಸಮಿತಿ ಸಭೆ Read More »

ಕರಾವಳಿ

ಪ್ರಧಾನಮಂತ್ರಿ ಜೀವನ್ ಸುರಕ್ಷಾ ಯೋಜನೆಯಲ್ಲಿ 2 ಲಕ್ಷ ಮಂಜೂರು

(ನ್ಯೂಸ್ ಕಡಬ) newskadaba.com ಸವಣೂರು, ಮಾ.23. ಪ್ರಧಾನಮಂತ್ರಿ ಜೀವನ್ ಸುರಕ್ಷಾ ಯೋಜನೆಯಲ್ಲಿ ದಿ.ಶೀನಪ್ಪ ಗೌಡ ಗಾಳಿಬೆಟ್ಟು ಇವರ ಪತ್ನಿಗೆ 2 ಲಕ್ಷ ಮೊತ್ತದ ಚೆಕ್ ನ್ನು ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನ ಜನರಲ್ ಮೆನೇಜರ್ ಎಸ್.ಎಂ. ಗೋರ್ಬಲ್ ಅವರು ಕಾಣಿಯೂರು ಗ್ರಾಮ ಪಂಚಾಯತ್ ಕಚೇರಿಯಲ್ಲಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಎಸ್.ಎಂ. ಗೋರ್ಬಲ್ ಬ್ಯಾಂಕಿನ ಪ್ರತಿಯೊಬ್ಬ ಗ್ರಾಹಕರು ವರ್ಷಕ್ಕೆ ರೂ.330 ಮತ್ತು ರೂ.12 ರ ಪ್ರಧಾನಮಂತ್ರಿ ಜೀವನ್ ಸುರಕ್ಷಾ ಯೋಜನೆಯನ್ನು ಮಾಡಿಸಿಕೊಳ್ಳಬೇಕು ಎಂದು ಹೇಳಿದರು. ವೇದಿಕೆಯಲ್ಲಿ ಪ್ರಾದೇಶಿಕ ಪ್ರಬಂಧಕರಾದ

ಪ್ರಧಾನಮಂತ್ರಿ ಜೀವನ್ ಸುರಕ್ಷಾ ಯೋಜನೆಯಲ್ಲಿ 2 ಲಕ್ಷ ಮಂಜೂರು Read More »

ಕರಾವಳಿ

ಮಾ.31: ಸವಣೂರಲ್ಲಿ ಎಸ್‍ಪಿ ರವಿಕಾಂತೇ ಗೌಡ ಉಪಸ್ಥಿತಿಯಲ್ಲಿ ಪೊಲೀಸ್ ಬೀಟ್ ಸಭೆ

(ನ್ಯೂಸ್ ಕಡಬ) newskadaba.com ಸವಣೂರು, ಮಾ.27. ಬೆಳಂದೂರು ಹಾಗೂ ಸವಣೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೊಲೀಸ್ ಬೀಟ್ ಸಭೆಯು ಮಾ.31ರ ಶನಿವಾರ ಸಂಜೆ 3 ಗಂಟೆಗೆ ಸವಣೂರಿನ ಪ್ರಿಯಕಾರಿಣಿ ಸಭಾಭವನದಲ್ಲಿ ನಡೆಯಲಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಆರ್. ರವಿಕಾಂತೇ ಗೌಡ ಜನಸಂಪರ್ಕ ಸಭೆಯಲ್ಲಿ ಭಾಗವಹಿಸುತ್ತಿದ್ದು, ಪೊಲೀಸ್ ಇಲಾಖೆಗೆ ಸಂಬಂಧಪಟ್ಟಂತಹ ಸಮಸ್ಯೆ, ದೂರುಗಳಿದ್ದಲ್ಲಿ ಸಾರ್ವಜನಿಕರು ಸಭೆಯಲ್ಲಿ ತಿಳಿಸಬಹುದು ಎಂದು ಬೆಳ್ಳಾರೆ ಪೊಲೀಸ್ ಠಾಣೆ ಪ್ರಕಟಣೆಯಲ್ಲಿ ತಿಳಿಸಿದೆ.

ಮಾ.31: ಸವಣೂರಲ್ಲಿ ಎಸ್‍ಪಿ ರವಿಕಾಂತೇ ಗೌಡ ಉಪಸ್ಥಿತಿಯಲ್ಲಿ ಪೊಲೀಸ್ ಬೀಟ್ ಸಭೆ Read More »

ಕರಾವಳಿ

ಪಾಲ್ತಾಡು: ವಿಷ್ಣುಮೂರ್ತಿ ದೈವದ ಒತ್ತೆಕೋಲ

(ನ್ಯೂಸ್ ಕಡಬ) newskadaba.com ಸವಣೂರು, ಮಾ.27. ಕೊಳ್ತಿಗೆ ಗ್ರಾಮದ ಪಾಲ್ತಾಡು ನಡುಮನೆ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ವರ್ಷಾವಧಿ ಒತ್ತೆಕೋಲವು ನಡೆಯಿತು. ಕಾರ್ಯಕ್ರಮದಲ್ಲಿ ಬೆಳಿಗ್ಗೆ ದೈವಸ್ಥಾನದಲ್ಲಿ ಗಣಹೋಮ, ಶುದ್ದಿ ಕಲಶ, ಮಧ್ಯಾಹ್ನ ಕಲಶ ಪೂಜೆ ನಡೆಯಿತು.ಸಂಜೆ ನಡುಮನೆ ದೈವಸ್ಥಾನದಿಂದ ಭಂಡಾರ ತೆಗೆದು ರಾತ್ರಿ ಮೇಲೇರಿಗೆ ಅಗ್ನಿ ಸ್ಪರ್ಶ ಮಾಡಲಾಯಿತು. ನಂತರ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಸುಮಾರು 5000 ಕ್ಕೂ ಮಿಕ್ಕಿ ಜನರು ಅನ್ನಪ್ರಸಾದ ಸ್ವೀಕರಿಸಿದರು.ಅನ್ನಸಂತರ್ಪಣೆಯ ಬಳಿಕ ಕುಳಿಚಟ್ಟು ನಡೆಯಿತು. ನಂತರ ಜಿಲ್ಲೆಯ ಪ್ರಸಿದ್ದ ಕಲಾವಿದರ ಕೂಡುವಿಕೆಯಲ್ಲಿ ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತು. ಪ್ರಾತಃಕಾಲ

ಪಾಲ್ತಾಡು: ವಿಷ್ಣುಮೂರ್ತಿ ದೈವದ ಒತ್ತೆಕೋಲ Read More »

ಕರಾವಳಿ

ಸವಣೂರು: ಮುಗೇರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ ಜಾತ್ರೋತ್ಸವ

(ನ್ಯೂಸ್ ಕಡಬ) newskadaba.com ಸವಣೂರು, ಮಾ.27. ಸವಣೂರು ಗ್ರಾಮದ ಮುಗೇರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ 4ನೇ ವಾರ್ಷಿಕ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಜಾತ್ರೋತ್ಸವವು ಬ್ರಹ್ಮಶ್ರೀ ನೀಲೇಶ್ವರ ದಾಮೋದರ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು. ಮಾ.25 ರಂದು ಬೆಳಿಗ್ಗೆ ಭಕ್ತಾಧಿಗಳಿಂದ ಹೊರೆಕಾಣಿಕೆ ಸಮರ್ಪಣೆ ಬಳಿಕ ಭಕ್ತಾಧಿಗಳಿಂದ ಕ್ಷೇತ್ರ ಸ್ವಚ್ಚತೆ, ಅಲಂಕಾರ ಸೇವೆ, ಸಂಜೆ ತಂತ್ರಿಗಳ ಆಗಮನ, ಪೂರ್ಣಕುಂಭ ಸ್ವಾಗತ, ಸಾಮೂಹಿಕ ಪ್ರಾರ್ಥನೆ ,ಪುಣ್ಯಾಹ, ಪ್ರಸಾದ ಶುದ್ದಿ, ರಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಬಲಿ, ರಾತ್ರಿ ಪೂಜೆ ನಡೆಯಿತು. ಮಾ.26

ಸವಣೂರು: ಮುಗೇರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ ಜಾತ್ರೋತ್ಸವ Read More »

ಕರಾವಳಿ

ಕುದ್ಮಾರು: ತಿರಂಗಾ ವಾರಿಯರ್ಸ್ ವತಿಯಿಂದ ಸ್ಚಚ್ಛತಾ ಕಾರ್ಯ

(ನ್ಯೂಸ್ ಕಡಬ) newskadaba.com ಬೆಳಂದೂರು, ಮಾ.27. ದ.ಕ. ಜಿಲ್ಲಾ ಪಂಚಾಯತ್, ಗ್ರಾಮ ಪಂಚಾಯತ್ ಬೆಳಂದೂರು, ತಿರಂಗಾ ವಾರಿಯರ್ಸ್ ಕುದ್ಮಾರು ಇವುಗಳ ಸಹಯೋಗದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಕುದ್ಮಾರು ಗ್ರಾಮದಲ್ಲಿ ಸ್ಚಚ್ಛತಾ ಕಾರ್ಯ ನಡೆಯಿತು. ಬೆಳಂದೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಉಮೇಶ್ವರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ನಮ್ಮ ಮನೆ, ಪರಿಸರ, ಗ್ರಾಮವನ್ನು ಸ್ಚಚ್ಛವಾಗಿಟ್ಟುಕೊಳ್ಳುವ ಕಾರ್ಯವಾಗಬೇಕು. ಎಲ್ಲೆಂದರಲ್ಲಿ ಕಸ ಬಿಸಾಡುವ ರೂಢಿಗೆ ಸ್ವಪ್ರೇರಣೆಯಿಂದ ಕಡಿವಾಣ ಹಾಕುವಂತಾಗಬೇಕೆಂದರು. ಪಿಡಿಒ ನವೀನ್, ಕುದ್ಮಾರು ಶಾಲಾ ಎಸ್‍ಡಿಎಂಸಿ ಅಧ್ಯಕ್ಷೆ ಪುಷ್ಪಾಲತಾ ಪಿ. ಗೌಡ, ತಿರಂಗಾ ವಾರಿಯರ್ಸ್ ಕುದ್ಮಾರು

ಕುದ್ಮಾರು: ತಿರಂಗಾ ವಾರಿಯರ್ಸ್ ವತಿಯಿಂದ ಸ್ಚಚ್ಛತಾ ಕಾರ್ಯ Read More »

ಕರಾವಳಿ

ಪುಂಜಾಲಕಟ್ಟೆ: ಅಟೋರಿಕ್ಷಾ – ಬೈಕ್ ಢಿಕ್ಕಿ ► ಸವಾರರಿಗೆ ಗಾಯ

(ನ್ಯೂಸ್ ಕಡಬ) newskadaba.com ಪುಂಜಾಲಕಟ್ಟೆ, ಮಾ.27. ಅಟೋರಿಕ್ಷಾವೊಂದು ಮೋಟಾರು ಸೈಕಲಿಗೆ ಡಿಕ್ಕಿ ಹೊಡೆದ ಪರಿಣಾಮ ಸವಾರರು ಗಾಯಗೊಂಡಿರುವ ಘಟನೆ ಪುಂಜಾಲಕಟ್ಟೆಯಲ್ಲಿ ನಡೆದಿದೆ. ಗಾಯಾಳುಗಳನ್ನು ಮೋಟಾರು ಸೈಕಲ್ ಸವಾರ ಉಮೇಶ್ ಹಾಗೂ ಸಹಸವಾರ ತೆಂಕಕಜೆಕಾರು ಗ್ರಾಮ ನಿವಾಸಿ  ಚಂದ್ರ ಎಂದು ಗುರುತಿಸಲಾಗಿದೆ. ಇವರು ಉಮೇಶ್ ಎಂಬವರ  ಮೋಟಾರು ಸೈಕಲ್ನಲ್ಲಿ ಮಡಂತ್ಯಾರು ಕಡೆಯಿಂದ ಪಾಂಡವರಕಲ್ಲಿಗೆ ಹೋಗುತ್ತಿರುವಾಗ,   ಬಂಟ್ವಾಳ ತಾಲೂಕು ಬಡಗಕಜೆಕಾರು ಗ್ರಾಮದ ಕೊಮಿನಡ್ಕ ಎಂಬಲ್ಲಿ ಈ ಘಟನೆಯು ಸಂಧವಿಸಿದೆ. ವಿರುದ್ದ ದಿಕ್ಕಿನಿಂದ ಅಟೋ ರಿಕ್ಷಾವನ್ನು ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿದ

ಪುಂಜಾಲಕಟ್ಟೆ: ಅಟೋರಿಕ್ಷಾ – ಬೈಕ್ ಢಿಕ್ಕಿ ► ಸವಾರರಿಗೆ ಗಾಯ Read More »

ಕರಾವಳಿ

ಮೇ 12 ರಂದು ಕರ್ನಾಟಕ ವಿಧಾನಸಭೆಗೆ ಏಕಹಂತದ ಚುನಾವಣೆ ► ಇಂದಿನಿಂದಲೇ ನೀತಿ ಸಂಹಿತೆ ಜಾರಿ

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ.27. ಮುಂಬರುವ ಮೇ ತಿಂಗಳ 12 ರಂದು ಕರ್ನಾಟಕ ವಿಧಾನಸಭೆ ಚುನಾವಣೆಯು ಏಕಹಂತದಲ್ಲಿ ನಡೆಯಲಿದೆ ಎಂದು ಮುಖ್ಯ ಚುನಾವಣಾಧಿಕಾರಿ ಓಂ ಪ್ರಕಾಶ್ ರಾವತ್ ತಿಳಿಸಿದ್ದಾರೆ. ಮಂಗಳವಾರದಂದು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ರಾಜ್ಯದ ಒಟ್ಟು 224 ವಿಧಾನಸಭಾ ಕ್ಷೇತ್ರಗಳಿಗೆ ಮೇ 12 ರಂದು ಏಕಹಂತದಲ್ಲಿ ಮತದಾನ ನಡೆಯಲಿದ್ದು, ಮೇ 18 ರಂದು ಮತ ಎಣಿಕೆ ನಡೆಯಲಿದೆ. 2 ಕೋಟಿ 51 ಲಕ್ಷ ಪುರುಷ ಮತದಾರರು ಹಾಗೂ 2 ಕೋಟಿ

ಮೇ 12 ರಂದು ಕರ್ನಾಟಕ ವಿಧಾನಸಭೆಗೆ ಏಕಹಂತದ ಚುನಾವಣೆ ► ಇಂದಿನಿಂದಲೇ ನೀತಿ ಸಂಹಿತೆ ಜಾರಿ Read More »

ಕರ್ನಾಟಕ
Scroll to Top