ಕರಾಯ: ಭೀಕರ ರಸ್ತೆ ಅಪಘಾತ ► ಬಸ್ಸಿನ ಚಕ್ರ ಹರಿದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ.27. ಖಾಸಗಿ ಬಸ್ ಹಾಗೂ ಬೈಕ್‌ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಕರಾಯ ಎಂಬಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ. ಮೃತರನ್ನು ಕೊಲ್ಯ ನಿವಾಸಿ ಚಂದ್ರಶೇಖರ(34) ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿಯಿಂದ ಕಕ್ಕೆಪದವು ತೆರಳುತ್ತಿದ್ದ ಜೀವನ್ ಜ್ಯೋತಿ ಖಾಸಗಿ ಬಸ್ ಹಾಗೂ ಟಿವಿಎಸ್ ವೇಗೋ ಸ್ಕೂಟಿ ನಡುವೆ ಢಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ಸವಾರನ ಮೇಲೆ ಬಸ್ಸಿನ ಚಕ್ರ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕರಾಯ: ಭೀಕರ ರಸ್ತೆ ಅಪಘಾತ ► ಬಸ್ಸಿನ ಚಕ್ರ ಹರಿದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ರಾಜಕೀಯದ ಮೇಲಾಟವೋ…? ಸರಕಾರದ ಇಚ್ಚಾಶಕ್ತಿಯ ಕೊರತೆಯೋ..? ► ಅಂತೂ ಕಡಬ ತಾಲೂಕು ಉದ್ಘಾಟನೆಗೆ ಬಿತ್ತು ಬ್ರೇಕ್….!!

(ನ್ಯೂಸ್ ಕಡಬ) newskadaba.com ಕಡಬ, ಮಾ.27. ಕಳೆದ ಹಲವು ದಶಕಗಳ ಬೇಡಿಕೆಯಾಗಿದ್ದ ನೂತನ ಕಡಬ ತಾಲೂಕು ರಚನೆಯ ಕನಸು ನನಸಾಗುವ ಹಂತಕ್ಕೆ ತಲುಪಿದ್ದರೂ ಇದೀಗ ರಾಜಕೀಯದ ಮೇಲಾಟದಿಂದಲೋ..? ಸರಕಾರದ ಇಚ್ಚಾಶಕ್ತಿಯ ಕೊರತೆಯಿಂದಲೋ..? ಕಡಬ ತಾಲೂಕು ಉದ್ಘಾಟನೆಗೆ ಬ್ರೇಕ್ ಬಿದ್ದಿದೆ. ಎರಡೆರಡು ಬಾರಿ ದಿನಾಂಕ ನಿಗದಿಯಾಗಿ ಕಾರಣಾಂತರಗಳಿಂದಾಗಿ ಮುಂದೂಡಲಾಗಿದ್ದ ಕಡಬ ತಾಲೂಕು ಉದ್ಘಾಟನೆಯು ಮಾರ್ಚ್ 27 ರಂದು ನಡೆಯಲಿದೆ ಎಂದು ಜಿಲ್ಲಾಡಳಿತದ ವತಿಯಿಂದ ಅಧಿಕೃತ ದಿನಾಂಕ ಘೋಷಣೆಯಾದ ನಂತರ ಕಡಬದಲ್ಲಿ ಸಮಾಧಾನಕರ ವಾತಾವರಣ ಸೃಷ್ಟಿಯಾಗಿತ್ತು. ಆದರೆ ಕೊನೆಯ ಕ್ಷಣದಲ್ಲಿ

ರಾಜಕೀಯದ ಮೇಲಾಟವೋ…? ಸರಕಾರದ ಇಚ್ಚಾಶಕ್ತಿಯ ಕೊರತೆಯೋ..? ► ಅಂತೂ ಕಡಬ ತಾಲೂಕು ಉದ್ಘಾಟನೆಗೆ ಬಿತ್ತು ಬ್ರೇಕ್….!! Read More »

ಕರಾವಳಿ

ಕಡಬ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಮಾ.27. ಕಳೆದ ಐದು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಗೌಡಿಗೆ ನಿವಾಸಿ ತೇಜಕುಮಾರ ಯಾನೆ ತಾರಾನಾಥ(38ವ) ಎಂಬವರ ಮೃತ ದೇಹವು ನೇಣು ಬಿಗಿದ ಸ್ಥಿತಿಯಲ್ಲಿ ಸೋಮವಾರದಂದು ಪತ್ತೆಯಾಗಿದೆ. ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಅವರು ಮಾರ್ಚ್ 21 ರಂದು ತನ್ನ ಮನೆಯಿಂದ ಹೊರಟವರು ಮನೆಯ ಕಡೆ ಬಾರದೆ ನಾಪತ್ತೆಯಾಗಿದ್ದರು. ಬಳಿಕ ಮನೆಯವರು ಎಲ್ಲಾ ಕಡೆ ಹುಡುಕಾಡಿದ್ದರಾದರೂ ಎಲ್ಲೂ ಸುಳಿವು ದೊರೆತಿರಲಿಲ್ಲ. ಸೋಮವಾರದಂದು ತನ್ನ ಮನೆಯಿಂದ ಸುಮಾರು ಒಂದು ಕಿಲೋಮೀಟರ್

ಕಡಬ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ Read More »

ಕರಾವಳಿ

ಕಡಬ: ಬೈಕಿಗೆ ಪಿಕಪ್ ಢಿಕ್ಕಿ, ಸವಾರನಿಗೆ ಗಾಯ ► ಪೊಲೀಸ್ ಠಾಣೆಗೆ ಜಮಾಯಿಸಿದ ಸಂಘಟನೆಯ ಕಾರ್ಯಕರ್ತರು – ಕಡಬದಲ್ಲಿ ಉದ್ವಿಗ್ನ ಪರಿಸ್ಥಿತಿ

(ನ್ಯೂಸ್ ಕಡಬ) newskadaba.com ಕಡಬ, ಮಾ.26. ಪಿಕಪ್ ವಾಹನವೊಂದು ಬೈಕಿಗೆ ಢಿಕ್ಕಿ ಹೊಡೆದುದರ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ಕಡಬದಲ್ಲಿ ಸೋಮವಾರ ರಾತ್ರಿ ನಡೆದಿದೆ. ಗಾಯಾಳು ಬೈಕ್ ಸವಾರನನ್ನು ಕೋಡಿಂಬಾಳ‌ ನಿವಾಸಿ ನವೀನ್ ಎಂದು ಗುರುತಿಸಲಾಗಿದೆ. ಈತ ತನ್ನ ಬೈಕಿನಲ್ಲಿ ತೆರಳುತ್ತಿದ್ದಾಗ ಕಡಬ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಪಿಕಪ್ ಢಿಕ್ಕಿ ಹೊಡೆದಿದೆ. ಪಿಕಪ್ ಚಾಲಕ ರಾಜು ಎಂಬಾತ ಕೆಲದಿನಗಳ ಹಿಂದೆ ಅಕ್ರಮ ಗೋ ಸಾಗಾಟ ಪ್ರಕರಣದಲ್ಲಿ ಬಂಧಿತನಾಗಿದ್ದು, ಆ ಕಾರಣಕ್ಕಾಗಿ ಉದ್ದೇಶಪೂರ್ವಕವಾಗಿ ಅಪಘಾತ ಎಸಗಿದ್ದಾರೆ ಎಂದು

ಕಡಬ: ಬೈಕಿಗೆ ಪಿಕಪ್ ಢಿಕ್ಕಿ, ಸವಾರನಿಗೆ ಗಾಯ ► ಪೊಲೀಸ್ ಠಾಣೆಗೆ ಜಮಾಯಿಸಿದ ಸಂಘಟನೆಯ ಕಾರ್ಯಕರ್ತರು – ಕಡಬದಲ್ಲಿ ಉದ್ವಿಗ್ನ ಪರಿಸ್ಥಿತಿ Read More »

ಕರಾವಳಿ

ಸಿ’ ಫೋರ್ ಚುನಾವಣಾ ಪೂರ್ವ ಸಮೀಕ್ಷೆ ► ಮುಂಬರುವ ಚುನಾವಣೆಯಲ್ಲಿ ಈ ಪಕ್ಷ ಬಹುಮತದಿಂದ ಅಧಿಕಾರ ಹಿಡಿಯಲಿದೆಯಂತೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ.26. ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯ ಬಗ್ಗೆ ಸಿ-ಫೋರ್ ಸಂಸ್ಥೆಯು ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಕಾಂಗ್ರೆಸ್ ಪಕ್ಷವು ಕಳೆದ ಬಾರಿಗಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರಕ್ಕೇರಲಿದೆ ಎಂದು ತಿಳಿದುಬಂದಿದೆ. ಕಳೆದ ಬಾರಿ 122 ಸೀಟುಗಳನ್ನು ಗೆದ್ದಿದ್ದ ಕಾಂಗ್ರೆಸ್ ಪಕ್ಷವು ಈ ಬಾರಿ 126 ಸೀಟುಗಳನ್ನು ಗೆಲ್ಲಲಿದ್ದು, ಬಿಜೆಪಿಯ ಸ್ಥಾನಗಳೂ ಕೂಡ ಹೆಚ್ಚಲಿವೆ. ಈ ಬಾರಿ ಬಿಜೆಪಿ 70 ಸೀಟುಗಳನ್ನು ಗೆಲ್ಲಲಿದೆ. 2013ರಲ್ಲಿ ಬಿಜೆಪಿ 40 ಸೀಟುಗಳನ್ನು ಗೆದ್ದಿತ್ತು. ಜೆಡಿಎಸ್

ಸಿ’ ಫೋರ್ ಚುನಾವಣಾ ಪೂರ್ವ ಸಮೀಕ್ಷೆ ► ಮುಂಬರುವ ಚುನಾವಣೆಯಲ್ಲಿ ಈ ಪಕ್ಷ ಬಹುಮತದಿಂದ ಅಧಿಕಾರ ಹಿಡಿಯಲಿದೆಯಂತೆ Read More »

ಕರ್ನಾಟಕ

ಶಾಸಕರ ಅನುದಾನದ ಆನೆಗುಂಡಿ ಕುಡಿಯುವ ನೀರಿನ ಯೋಜನೆಗೆ ಚಾಲನೆ

(ನ್ಯೂಸ್ ಕಡಬ) newskadaba.com ಕೊೖಲ, ಮಾ.26.  ಕಡಬ ತಾಲೂಕಿನ ಕೊೖಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆನೆಗುಂಡಿ ದಲಿತ ಕಾಲೋನಿಗೆ ಕುಡಿಯುವ ನೀರಿನ ಯೋಜನೆ ಅನುಷ್ಟಾನಕ್ಕಾಗಿ ಸುಳ್ಯ ಶಾಸಕ ಎಸ್.ಅಂಗಾರ 3.5 ಲಕ್ಷ ರೂ ಅನುದಾನ ಮಂಜೂರುಗೊಳಿಸಿದ್ದು, ಭಾನುವಾರ ಕೊಳವೆ ಬಾವಿ ಕೊರೆಯಲು ಪ್ರಾರಂಭಿಸುವ ಮೂಲಕ ಯೋಜನೆಗೆ ಚಾಲನೆ ದೊರೆಯಿತು. ಶಾಸಕರ ಅನುದಾನದಲ್ಲಿ ನಡೆಯುವ ಕಾಮಗಾರಿಗೆ ಕೊೖಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹೇಮಮೋಹನ್ದಾಸ್ ಶೆಟ್ಟಿ ಬೆಳಿಗ್ಗೆ ಕಾಮಗಾರಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೊೖಲ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ

ಶಾಸಕರ ಅನುದಾನದ ಆನೆಗುಂಡಿ ಕುಡಿಯುವ ನೀರಿನ ಯೋಜನೆಗೆ ಚಾಲನೆ Read More »

ಕರಾವಳಿ

ಮಾರ್ಚ್ 26 – ವಿಶ್ವ ಅಪಸ್ಮಾರ ಜಾಗೃತಿ ದಿನ

(ನ್ಯೂಸ್ ಕಡಬ) newskadaba.com ಮಾ.26.  ಪ್ರತಿ ವರ್ಷ ವಿಶ್ವದಾದ್ಯಂತ ಮಾರ್ಚ್ 26ರಂದು “ಅಂತರಾಷ್ಟ್ರೀಯ ಅಪಸ್ಮಾರ ಜಾಗೃತಿ ದಿನ” ಅಥವಾ ಪರ್ಪಲ್ ಡೇ ಆಚರಿಸುತ್ತಾರೆ ಮತ್ತು ಅಪಸ್ಮಾರ ರೋಗದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಸಲಾಗುತ್ತದೆ. ಜಗತಿನಾದ್ಯಂತ ಸರಿಸುಮಾರು 65 ಮಿಲಿಯನ್ ಮಂದಿ ಈ ಅಪಸ್ಮಾರ ಖಾಯಿಲೆಯಿಂದ ಬಳಲುತ್ತಿದ್ದು, ಈ ಖಾಯಿಲೆ ಯಾವುದೇ ಜಾತಿ, ಧರ್ಮ, ಭಾಷೆಯ ಜನರಿಗೆ ಸಿಮೀತವಾಗದೆ ಎಲ್ಲರನ್ನು ಕಾಡುತ್ತಿದ್ದು, ಒಂದು ಜಾಗತಿಕ ಆರೋಗ್ಯ ಸಮಸ್ಯೆ ಎಂದರೂ ತಪ್ಪಲ್ಲ. ಪ್ರತಿ ವರ್ಷ ಫೆಬ್ರವರಿ 9ರಂದು “ವಿಶ್ವ

ಮಾರ್ಚ್ 26 – ವಿಶ್ವ ಅಪಸ್ಮಾರ ಜಾಗೃತಿ ದಿನ Read More »

ಆರೋಗ್ಯ ಮಾಹಿತಿ

ಕರಾವಳಿಯ ಯುವಕ ದುಬೈನಲ್ಲಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.25. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಯುವಕನೋರ್ವ ದುಬೈನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ರಾತ್ರಿ ನಡೆದಿದೆ. ಮೃತ ಯುವಕನನ್ನು ಉಡುಪಿಯ ಕೊಳಂಬೆ ನಿವಾಸಿ ರಾಘವೇಂದ್ರ ಭಂಡಾರಿ (35) ಎಂದು ಗುರುತಿಸಲಾಗಿದೆ. ಕಳೆದ ಹಲವು ವರ್ಷಗಳಿಂದ ದುಬೈನಲ್ಲಿ ದುಡಿಯುತ್ತಿದ್ದ ಅವರು ಇತ್ತೀಚೆಗಷ್ಟೆ ಮದುವೆಯಾಗಿದ್ದರು. ಶನಿವಾರದಂದು ರಾತ್ರಿ ದುಬೈನ ಹೋಟೆಲೊಂದರಲ್ಲಿ ತಂಗಿದ್ದ ರಾಘವೇಂದ್ರ ಊರಿನಲ್ಲಿರುವ ಸಹೋದರರಿಗೆ ಕರೆ ಮಾಡಿ ಬಳಿಕ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದು, ವೈಯಕ್ತಿಕ ಕಾರಣದಿಂದ ಮನನೊಂದು ಕಟ್ಟಡದಿಂದ ಹಾರಿ

ಕರಾವಳಿಯ ಯುವಕ ದುಬೈನಲ್ಲಿ ಆತ್ಮಹತ್ಯೆ Read More »

ಕರಾವಳಿ

ಬೈಕ್ ನ ಚಕ್ರಕ್ಕೆ ದುಪ್ಪಟ್ಟಾ ಸಿಲುಕಿ ಬಾಲಕಿ ಮೃತ್ಯು ► ಬೈಕಿನಲ್ಲಿ‌ ಸಂಚರಿಸುವಾಗ ಎಚ್ಚರ

(ನ್ಯೂಸ್ ಕಡಬ) newskadaba.com ಕಾಸರಗೋಡು, ಮಾ.25. ಪೋಷಕರ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಚೂಡಿದಾರ್ ನ ದುಪ್ಪಟ್ಟಾ ಬೈಕ್ ನ ಚಕ್ರಕ್ಕೆ ಸಿಲುಕಿದ ಪರಿಣಾಮ ಬಾಲಕಿ ರಸ್ತೆಗೆಸೆಲ್ಪಟ್ಟು ಮೃತಪಟ್ಟ ದಾರುಣ ಘಟನೆ ಭಾನುವಾರದಂದು ಕಾಸರಗೋಡಿನಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಕಾಸರಗೋಡಿನ ಬೀರಿಕುಳಂ ಪೆರಿಯಂಗೋನತ್ ನಿವಾಸಿ ಸಜಿ ಹಾಗೂ ಬಿಂದು ದಂಪತಿಯ ಪುತ್ರಿ, ಪರಪ್ಪ ಸರಕಾರಿ ಹಯರ್ ಸೆಕಂಡರಿ ಶಾಲಾ ಏಳನೇ ತರಗತಿ ವಿದ್ಯಾರ್ಥಿನಿ ಮರಿಯ(12) ಎಂದು ಗುರುತಿಸಲಾಗಿದೆ. ಮರಿಯ ಭಾನುವಾರದಂದು ‘ಪಾಮ್ ಸಂಡೆ’ ಅಂಗವಾಗಿ ತಂದೆ-ತಾಯಿ

ಬೈಕ್ ನ ಚಕ್ರಕ್ಕೆ ದುಪ್ಪಟ್ಟಾ ಸಿಲುಕಿ ಬಾಲಕಿ ಮೃತ್ಯು ► ಬೈಕಿನಲ್ಲಿ‌ ಸಂಚರಿಸುವಾಗ ಎಚ್ಚರ Read More »

ಕರಾವಳಿ

ಮುಂದಿನ ಚುನಾವಣೆಯಲ್ಲಿ ಸುಳ್ಯದಲ್ಲಿ ಕಾಂಗ್ರೆಸ್ ಗೆಲುವು ಗ್ಯಾರಂಟಿ: ರಮಾನಾಥ ರೈ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.25. 2018 ರ ವಿಧಾನಸಭಾ ಚುನಾವಣೆಯಲ್ಲಿ ಸುಳ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಲಿದ್ದು, ಬಿಜೆಪಿಯ ಶಾಸಕರು ಇದಕ್ಕೆ ಅವಕಾಶ ಮಾಡಿಕೊಡಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹೇಳಿದ್ದಾರೆ. ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಿಂದೆ ಬಿಜೆಪಿಯು ಸುಳ್ಯ ಕ್ಷೇತ್ರಕ್ಕೆ ಏನು ಮಾಡಿದೆ ಎಂಬುದು ಜನರಿಗೆ ತಿಳಿದಿದೆ. ಸುಳ್ಯದಲ್ಲಿ ಪಶು ವೈದ್ಯಕೀಯ ಕಾಲೇಜು, ಕಡಬ ಪ್ರತ್ಯೇಕ ತಾಲೂಕು ಆಗಿ ಘೋಷಣೆ ಹಾಗೂ ಇತರ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು

ಮುಂದಿನ ಚುನಾವಣೆಯಲ್ಲಿ ಸುಳ್ಯದಲ್ಲಿ ಕಾಂಗ್ರೆಸ್ ಗೆಲುವು ಗ್ಯಾರಂಟಿ: ರಮಾನಾಥ ರೈ Read More »

ಕರಾವಳಿ
Scroll to Top