ಕಾಣಿಯೂರು ಗ್ರಾಮ ಡಿಜಿಟಲ್ ಗ್ರಾಮವಾಗಿ ಆಯ್ಕೆ

(ನ್ಯೂಸ್ ಕಡಬ) newskadaba.com  ಸವಣೂರು, ಮಾ.24. ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಡಿಜಿಟಲ್‌ ಇಂಡಿಯಾ ಪರಿಕಲ್ಪನೆಗೆ ಪೂರಕವಾಗಿ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್, ಕಾಣಿಯೂರು ಗ್ರಾಮದಲ್ಲಿ ಅತೀಹೆಚ್ಚು ರೂಪೇ ಕಾರ್ಡ್ ವಿತರಣೆ ಮಾಡಿ, ಅಂತರ್ಜಾಲ ಬ್ಯಾಂಕಿಂಗ್ , ಎಟಿಎಂ ವ್ಯವಹಾರ ಉತ್ತೇಜನ, ಗ್ರಾಮದ ಪ್ರತಿಯೊಬ್ಬರಿಗೂ ಉಳಿತಾಯ ಖಾತೆಗಳನ್ನು ಹೊಂದುವಂತೆ ಮಾಡಿ ಡಿಜಿಟಲ್ ಗ್ರಾಮ ಪುರಸ್ಕಾರಕ್ಕೆ ಆಯ್ಕೆಗೊಂಡಿದೆ ಎಂದು ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನ ಜನರಲ್ ಮೇನೆಜರ್ ಎಸ್.ಎಂ. ಗೋರ್ಬಲ್ ಹೇಳಿದರು. ಅವರು ಕಾಣಿಯೂರು ಗ್ರಾ.ಪಂ. ಕಚೇರಿಯಲ್ಲಿ ಕರ್ನಾಟಕ […]

ಕಾಣಿಯೂರು ಗ್ರಾಮ ಡಿಜಿಟಲ್ ಗ್ರಾಮವಾಗಿ ಆಯ್ಕೆ Read More »

ಕರಾವಳಿ

ಸವಣೂರು ವಿಷ್ಣುಪುರ ಆರಿಗಮಜಲಿನಲ್ಲಿ ಬಸ್ ತಂಗುದಾಣ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಸವಣೂರು, ಮಾ.24. ಇಲ್ಲಿನ ವಿಷ್ಣುಪುರ ಆರಿಗಮಜಲಿನಲ್ಲಿ ಸವಣೂರು ಗ್ರಾಮ ಪಂಚಾಯತ್‍ನ ಅನುದಾನದಲ್ಲಿ ನಿರ್ಮಾಣಗೊಂಡ ನೂತನ ಬಸ್ ತಂಗುದಾಣವನ್ನು ಉದ್ಘಾಟಿಸಲಾಯಿತು. ಈ ಸಂದರ್ಭ ತಾ.ಪಂ. ಉಪಾಧ್ಯಕ್ಷೆ  ರಾಜೇಶ್ವರಿ ಕೆ, ಎಪಿಎಂಸಿ ನಿರ್ದೇಶಕ ದಿನೇಶ್ ಮೆದು, ಸವಣೂರು ಗ್ರಾ.ಪಂ. ಅಧ್ಯಕ್ಷೆ ಇಂದಿರಾ ಬಿ.ಕೆ, ಉಪಾಧ್ಯಕ್ಷರಾದ ರವಿಕುಮಾರ್ ಬಿ.ಕೆ, ಲೆಕ್ಕ ಸಹಾಯಕ ಎ.ಮನ್ಮಥ, ಸದಸ್ಯರಾದ ಸತೀಶ್ ಬಲ್ಯಾಯ, ಪ್ರಕಾಶ್ ಕುದ್ಮನಮಜಲು, ಗಾಯತ್ರಿ ಬರೆಮೇಲು, ವೇದಾವತಿ ಬಾಲಕೃಷ್ಣ ಅಂಜಯ, ರಾಜೀವಿ ವಿಠಲ ಶೆಟ್ಟಿ ಕೆಡೆಂಜಿ, ಸಿಬ್ಬಂಧಿ ಪ್ರಮೋದ್ ಕುಮಾರ್ ರೈ, ದಯಾನಂದ

ಸವಣೂರು ವಿಷ್ಣುಪುರ ಆರಿಗಮಜಲಿನಲ್ಲಿ ಬಸ್ ತಂಗುದಾಣ ಉದ್ಘಾಟನೆ Read More »

ಕರಾವಳಿ

ಐತಿಹಾಸಿಕ 250ನೇ ಪಾಲ್ತಾಡು ಒತ್ತೆಕೋಲಕ್ಕೆ ಕ್ಷಣಗಣನೆ

(ನ್ಯೂಸ್ ಕಡಬ) newskadaba.com ಸವಣೂರು, ಮಾ.24. ಕೊಳ್ತಿಗೆ ಗ್ರಾಮದ ಪಾಲ್ತಾಡು ವಿಷ್ಣುನಗರದಲ್ಲಿ ಐತಿಹಾಸಿಕ 250ನೇ ವರ್ಷದ ವಿಷ್ಣುಮೂರ್ತಿ ದೈವದ ಒತ್ತೆಕೋಲಕ್ಕೆ ಕ್ಷಣಗಣನೆ ಆರಂಭವಾಗಿದೆ. ಒತ್ತೆಕೋಲವು ಮಾ.24ರಂದು ರಾತ್ರಿ ಆರಂಭಗೊಂಡು ಮಾ.25ರ ಮದ್ಯಾಹ್ನದವರೆಗೆ ನಡೆಯಲಿದೆ.ಮಾ.24ರಂದು ಬೆಳಿಗ್ಗೆ ದೈವಸ್ಥಾನದಲ್ಲಿ ಗಣಹೋಮ, ಶುದ್ಧಿ ಕಲಶ, ಮಧ್ಯಾಹ್ನ ಕಲಶ ಪೂಜೆ ನಡೆದು, ಸಂಜೆ ನಡುಮನೆ ದೈವಸ್ಥಾನದಿಂದ ಭಂಡಾರ ತೆಗೆದು ರಾತ್ರಿ ಮೇಲೇರಿಗೆ ಅಗ್ನಿ ಸ್ಪರ್ಶ,ನಂತರ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.ಅನ್ನಸಂತರ್ಪಣೆಯ ಬಳಿಕ ಕುಳಿಚಟ್ಟು ನಡೆಯಲಿದೆ. ನಂತರ  ಜಿಲ್ಲೆಯ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ಯಕ್ಷಗಾನ ಬಯಲಾಟ ನಡೆಯಲಿದೆ.ಮಾ.25ರಂದು ಬೆಳಿಗ್ಗೆ ವಿಷ್ಣುಮೂರ್ತಿ

ಐತಿಹಾಸಿಕ 250ನೇ ಪಾಲ್ತಾಡು ಒತ್ತೆಕೋಲಕ್ಕೆ ಕ್ಷಣಗಣನೆ Read More »

ಕರಾವಳಿ

 ಸವಣೂರು, ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಸವಣೂರು, ಮಾ.24. ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ಕ್ರೀಡೋತ್ಸವವು ಮಾ.24 ರಂದು ನಡೆಯಿತು.  ಕ್ರೀಡಾಕೂಟವನ್ನು ಉದ್ಘಾಟಿಸಿದ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ  ಶ್ರೀ. ಕೆ. ಸೀತಾರಾಮ ರೈ ಸವಣೂರು ಇವರು,  “ಇತ್ತೀಚಿನ ದಿನಗಳಲ್ಲಿ ಉನ್ನತ ಶಿಕ್ಷಣವನ್ನು ಪಡೆಯುವಂತಹ ಸಂದರ್ಭದಲ್ಲಿ ಪೋಷಕರ ಹಾಗೂ ವಿದ್ಯಾರ್ಥಿಗಳ ಒಲವು ಓದಿನ ಕಡೆಗೆ ಮಾತ್ರವಿದ್ದು, ಕ್ರೀಡೆಯ ಕಡೆಗೆ ಕಡಿಮೆಯಾಗುತ್ತಿದೆ.  ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳು ಒಂದೇ ನಾಣ್ಯದ ಎರಡು ಮುಖಗಳಾಗಿದ್ದು ಜೊತೆ ಜೊತೆಯಲ್ಲಿ ಸಾಗಬೇಕು,  ಕ್ರೀಡೆಯಲ್ಲಿ ಮುಂದಿರುವ ವಿದ್ಯಾರ್ಥಿಗಳೇ ಇಂದು

 ಸವಣೂರು, ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ Read More »

ಕರಾವಳಿ

ನಂದಾವರ: ನೇತ್ರಾವತಿ ನದಿಯಲ್ಲಿ ಮುಳುಗಿ ರೈತ ಮುಖಂಡ ಮೃತ್ಯು ► ಈ ಹಿಂದೆ ಕಡಬದ ಪ್ರತಿಭಟನೆಯಲ್ಲೂ ಭಾಗಿಯಾಗಿದ್ದ ಶರತ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ.24. ರೈತ ಹಸಿರು ಸೇನೆಯ ಸದಸ್ಯ, ಆರ್ ಟಿ ಐ ಕಾರ್ಯಕರ್ತರೋರ್ವರು ನೇತ್ರಾವತಿ ನದಿಯಲ್ಲಿ ಮುಳುಗಿದ ಘಟನೆ ಬಂಟ್ವಾಳ ತಾಲೂಕಿನ ನಂದಾವರದಲ್ಲಿ ಶನಿವಾರದಂದು ನಡೆದಿದೆ. ಮೃತರನ್ನು ಹಲವರು ರೈತ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ ಮಾರ್ನಬೈಲು ನಿವಾಸಿ ಶರತ್( 48) ಎಂದು ಗುರುತಿಸಲಾಗಿದೆ. ಶರತ್ ಶನಿವಾರ ಬೆಳಗ್ಗೆ ತನ್ನ ಮನೆಯಿಂದ ನಂದಾವರ ದೇವಸ್ಥಾನಕ್ಕೆ ಹೋಗಿ, ನಂತರ ಸ್ನಾನ ಮಾಡಲು ನದಿಗೆ ತೆರಳಿದ ಸಂದರ್ಭದಲ್ಲಿ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟಿರಬೇಕು ಎಂದು ಶಂಕಿಸಲಾಗಿದೆ. ಮೃತದೇಹವನ್ನು

ನಂದಾವರ: ನೇತ್ರಾವತಿ ನದಿಯಲ್ಲಿ ಮುಳುಗಿ ರೈತ ಮುಖಂಡ ಮೃತ್ಯು ► ಈ ಹಿಂದೆ ಕಡಬದ ಪ್ರತಿಭಟನೆಯಲ್ಲೂ ಭಾಗಿಯಾಗಿದ್ದ ಶರತ್ Read More »

ಕರಾವಳಿ

ಶಾಂತಿಮೊಗರು: ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಶಿಲಾನ್ಯಾಸ

(ನ್ಯೂಸ್ ಕಡಬ) newskadaba.com ಸವಣೂರು, ಮಾ.24. ಬೆಳಂದೂರು, ಕಾಣಿಯೂರು, ಸವಣೂರು, ಆಲಂಕಾರು ಗ್ರಾಮ ಪಂಚಾಯಿತಿಯ ಬಹುತೇಕ ಎಲ್ಲ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವ ನಿಟ್ಟಿನಲ್ಲಿ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಶಾಂತಿಮೊಗರು ಘಟಕಕ್ಕೆ ಶನಿವಾರ ಸುಳ್ಯ ಶಾಸಕ ಎಸ್. ಅಂಗಾರ ಶಿಲಾನ್ಯಾಸಗೈದರು. ಸುಮಾರು 7.5 ಕೋಟಿ ರೂ. ವೆಚ್ಚದ ಈ ಯೋಜನೆಗೆ ಶಿಲಾನ್ಯಾಸಗೈದು ಬಳಿಕ ಶಾಸಕರು ಮಾತನಾಡಿದರು. ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಅರ್ಚಕ ರಮಾನಂದ ಭಟ್ ಪೂಜಾ ವಿದಿವಿಧಾನ ನೆರವೇರಿಸಿದರು. ಜಿಲ್ಲಾ ಪಂಚಾಯಿತಿ ಸದಸ್ಯರಾದ

ಶಾಂತಿಮೊಗರು: ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಶಿಲಾನ್ಯಾಸ Read More »

ಕರಾವಳಿ

ಮಾ.25ಮತ್ತು 26ರಂದು ಸವಣೂರು ಮುಗೇರು ಜಾತ್ರೋತ್ಸವ

(ನ್ಯೂಸ್ ಕಡಬ) newskadaba.com ಸವಣೂರು, ಮಾ.24. ಸವಣೂರು ಗ್ರಾಮದ ಮುಗೇರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ 4ನೇ ವಾರ್ಷಿಕ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಜಾತ್ರೋತ್ಸವವು ಬ್ರಹ್ಮಶ್ರೀ ನೀಲೇಶ್ವರ ದಾಮೋದರ ತಂತ್ರಿಗಳ  ನೇತೃತ್ವದಲ್ಲಿ ಮಾ.25 ಮತ್ತು 26ರಂದು ನಡೆಯಲಿದ್ದು  ಮಾ.25 ರಂದು  ಬೆಳಿಗ್ಗೆ ಭಕ್ತಾಧಿಗಳಿಂದ  ಹೊರೆಕಾಣಿಕೆ ಸಮರ್ಪಣೆ ಬಳಿಕ ಭಕ್ತಾಧಿಗಳಿಂದ ಕ್ಷೇತ್ರ ಸ್ವಚ್ಚತೆ, ಅಲಂಕಾರ ಸೇವೆ, ಸಂಜೆ ತಂತ್ರಿಗಳ ಆಗಮನ, ಪೂರ್ಣಕುಂಭ ಸ್ವಾಗತ, ಸಾಮೂಹಿಕ ಪ್ರಾರ್ಥನೆ, ಪುಣ್ಯಾಹ, ಪ್ರಸಾದ ಶುದ್ದಿ, ರಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಬಲಿ, ರಾತ್ರಿ ಪೂಜೆ

ಮಾ.25ಮತ್ತು 26ರಂದು ಸವಣೂರು ಮುಗೇರು ಜಾತ್ರೋತ್ಸವ Read More »

ಕರಾವಳಿ

ವಿಶ್ವ ಕ್ಷಯ ರೋಗ ದಿನ – ಮಾರ್ಚ್ 24

(ನ್ಯೂಸ್ ಕಡಬ) newskadaba.com ಆರೋಗ್ಯ ಮಾಹಿತಿ, ಮಾ.24. ವಿಶ್ವದಾದ್ಯಂತ ಮಾರ್ಚ್ 24 ರಂದು “ವಿಶ್ವ ಕ್ಷಯ ರೋಗ ದಿನ” ಎಂದು ಆಚರಿಸಲಾಗುತ್ತಿದೆ. ಕ್ಷಯ ರೋಗಿಗಳ ಸಂಖ್ಯೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಈ ಆಚರಣೆಯನ್ನು ವಿಶ್ವ ಸಂಸ್ಥೆ 1982ರಿಂದ ಜಾರಿಗೆ ತಂದಿತು. ಪ್ರತಿ ವರ್ಷ ಯಾವುದಾದರೊಂದು ಧ್ಯೇಯ ಇಟ್ಟುಕೊಂಡು ಈ ಆಚರಣೆ ಮಾಡಲಾಗುತ್ತಿದ್ದು, 2014ರಲ್ಲಿ ಮೂರು ಮಿಲಿಯನ್ ಕ್ಷಯ ರೋಗಿಗಳನ್ನು ತಲುಪುವ ಧ್ಯೇಯವನ್ನು ಹೊಂದಿತ್ತು ಪ್ರತಿ ವರ್ಷ ಸುಮಾರು 9 ಮಿಲಿಯನ್ ಮಂದಿ ವಿಶ್ವದಾದ್ಯಂತ ಈ ರೋಗಕ್ಕೆ ತುತ್ತಾಗುತ್ತಿದ್ದು,

ವಿಶ್ವ ಕ್ಷಯ ರೋಗ ದಿನ – ಮಾರ್ಚ್ 24 Read More »

ಆರೋಗ್ಯ ಮಾಹಿತಿ

ಉಜಿರೆ: ಬೈಕಿಗೆ ಟ್ಯಾಂಕರ್ ಢಿಕ್ಕಿ ► ಸವಾರರಿಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ.24. ಟ್ಯಾಂಕರೊಂದು ಬೈಕಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಮೃತರನ್ನು ಉಜಿರೆ‌ ನಿವಾಸಿಗಳಾದ ಬೈಕ್ ಸವಾರ ಸುಧೀರ್ ಹಾಗೂ ಸಹಸವಾರ ಹರೀಶ್ ಎಂದು ಗುರುತಿಸಲಾಗಿದೆ. ಮೃತರನ್ನು ಪಲ್ಸರ್ ಬೈಕಿನಲ್ಲಿ ತಮ್ಮ‌ಮನೆ ಕಡೆಗೆ ತೆರಳುತ್ತಿದ್ದಾಗ ಉಜಿರೆ ಗ್ರಾಮದ ಅಳಿಕೆ ಎಂಬಲ್ಲಿ ರಾತ್ರಿ ಗುರಿಪಳ್ಳ ಕಡೆಯಿಂದ ಉಜಿರೆ ಕಡೆಗೆ ಅತೀ ವೇಗ ಮತ್ತು ಅಜಾಗರೂಕತೆಯಿಂದ ಬಂದ ಟ್ಯಾಂಕರ್ ಢಿಕ್ಕಿ ಹೊಡೆದಿದ್ದು, ಸುಧೀರ್ ಹಾಗೂ ಹರೀಶ್ ಎಂಬವರ

ಉಜಿರೆ: ಬೈಕಿಗೆ ಟ್ಯಾಂಕರ್ ಢಿಕ್ಕಿ ► ಸವಾರರಿಬ್ಬರು ಮೃತ್ಯು Read More »

ಕರಾವಳಿ

ವಿದ್ಯುತ್ ಪರಿವರ್ತಕದಿಂದ ಹಾರಿದ ಬೆಂಕಿ ಕಿಡಿ ► ಮರ್ಧಾಳದಲ್ಲಿ ಎರಡು ಮನೆಗಳು ಸಂಪೂರ್ಣ ಭಸ್ಮ

(ನ್ಯೂಸ್ ಕಡಬ) newskadaba.com ಕಡಬ, ಮಾ.23. ವಿದ್ಯುತ್ ಪರಿವರ್ತಕದಿಂದ ಬೆಂಕಿಯ ಕಿಡಿಯೊಂದು ಬಿದ್ದ ಪರಿಣಾಮ ಎರಡು ಮನೆಗಳು ಬೆಂಕಿಗಾಹುತಿಯಾದ ಘಟನೆ ಮರ್ಧಾಳ ಸಮೀಪದ 102 ನೇ ನೆಕ್ಕಿಲಾಡಿ ಗ್ರಾಮದ ಕೆರ್ಮಾಯಿ ಕಾಲೋನಿಯಲ್ಲಿ ಶುಕ್ರವಾರದಂದು ನಡೆದಿದೆ.   ಘಟನೆಯಲ್ಲಿ ಸೆಲ್ವಮಣಿ ಮತ್ತು ರವಿ ಮೇಸ್ತ್ರಿ ಎಂಬವರಿಗೆ ಸೇರಿದ ಎರಡು ಮನೆಗಳು ಬೆಂಕಿಗಾಹುತಿಯಾಗಿದ್ದು, ಮನೆಯೊಳಗಿದ್ದ ಟಿವಿ, ಪ್ರಿಡ್ಜ್, ಲ್ಯಾಪ್‌ಟಾಪ್ ಸೇರಿದಂತೆ ಇಲೆಕ್ಟ್ರಾನಿಕ್ ವಸ್ತುಗಳು ಹಾಗೂ ಗೃಹೋಪಯೋಗಿ ವಸ್ತುಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ. ಬೆಂಕಿ ಬಿದ್ದುದನ್ನು ಗಮನಿಸಿದ ಸ್ಥಳೀಯರು ಬೆಂಕಿ ಹರಡದಂತೆ ನೀರು

ವಿದ್ಯುತ್ ಪರಿವರ್ತಕದಿಂದ ಹಾರಿದ ಬೆಂಕಿ ಕಿಡಿ ► ಮರ್ಧಾಳದಲ್ಲಿ ಎರಡು ಮನೆಗಳು ಸಂಪೂರ್ಣ ಭಸ್ಮ Read More »

ಕರಾವಳಿ
Scroll to Top