ಆಲಂಕಾರು ಮೂರ್ತೆದಾರರ ಸಹಕಾರಿ ಸಂಘದಲ್ಲಿ ಇ-ಸ್ಟಾಂಪಿಂಗ್ ಉದ್ಘಾಟನೆ

(ನ್ಯೂಸ್ ಕಡಬ) newskadaba.com , ಆಲಂಕಾರು ಮಾ.23. ಮೂರ್ತೆದಾರರ ಸೇವಾ ಸಹಕಾರಿ ಸಂಘ ಆಲಂಕಾರು ಪ್ರಧಾನ ಕಚೇರಿ ಹಾಗೂ ಕಡಬ ಶಾಖೆಯಲ್ಲಿ ಏಕಕಾಲದಲ್ಲಿ ಇ-ಸ್ಟಾಂಪಿಂಗ್ ವ್ಯವಸ್ಥೆಯನ್ನು ಉದ್ಘಾಟಿಸಲಾಯಿತು. ಆಲಂಕಾರು ಪ್ರಧಾನ ಕಚೇರಿಯಲ್ಲಿ ಸ್ಥಳೀಯ ಉಧ್ಯಮಿ ಆಲಂಕಾರು ವರ್ತಕರ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ ಪ್ರಭು ಉದ್ಘಾಟಿಸಿದರು. ನಂತರ ಮಾತನಾಡಿ ಸಹಕಾರಿ ಸಂಸ್ಥೆಗಳು ಉನ್ನತ ಸೇವಾ ಮನೋಭಾವದ ಜೊತೆಗೆ ಇಂತಹ ಉನ್ನತ ಸೇವೆಗಳನ್ನು ಮಾಡುವುದರ ಮೂಲಕ ಗ್ರಾಹಕರನ್ನು ತೃಪ್ತಿಪಡಿಸುವ ಯೋಜನೆಗಳನ್ನು ಜಾರಿಗೊಳಿಸಿ ತಾಲೂಕಿಗೆ ಮಾದರಿ ಸಹಕಾರಿ ಸಂಘವಾಗಿ ಮೂಡಿ ಬರಲಿ ಎಂದು ಶುಭ […]

ಆಲಂಕಾರು ಮೂರ್ತೆದಾರರ ಸಹಕಾರಿ ಸಂಘದಲ್ಲಿ ಇ-ಸ್ಟಾಂಪಿಂಗ್ ಉದ್ಘಾಟನೆ Read More »

ಕರಾವಳಿ

ಮಂಗಳೂರು: ನಿವೃತ್ತ ಸರಕಾರಿ ಉದ್ಯೋಗಿಯ ಹನಿ ಟ್ರ್ಯಾಪ್ ಭೇದಿಸಿದ ಸಿಸಿಬಿ ಪೊಲೀಸರು ► ಮೂವರು ಯುವತಿಯರು ಸೇರಿ ಆರು ಮಂದಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.23. ನಿವೃತ್ತ ಸರಕಾರಿ ಉದ್ಯೋಗಿಯನ್ನು ಹನಿಟ್ರ್ಯಾಪ್‌ ನಡೆಸುವ ಮೂಲಕ ಮೂರು ಲಕ್ಷ ರೂ. ವಸೂಲಿ ಮಾಡಿರುವ ಘಟನೆಯು ಮಂಗಳೂರಿನಲ್ಲಿ ಬೆಳಕಿಗೆ ಬಂದಿದ್ದು ಘಟನೆಗೆ ಸಂಬಂಧಿಸಿದಂತೆ ಮಂಗಳೂರಿನ ಸಿಸಿಬಿ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಲ್ಲಿ ಮೂವರು ಯುವತಿಯರಾಗಿದ್ದು ಉಳಿದವರನ್ನು ಶಕ್ತಿನಗರದ ರಮೇಶ್‌ (35), ಕಳಸದ ರವಿ (35) ಮತ್ತು ಜೈಲು ರೋಡ್‌ನ‌ ಪ್ರೀತೇಶ್‌ (36) ಎಂದು ಗುರುತಿಸಲಾಗಿದೆ. ನಿವೃತ್ತ ಸರಕಾರಿ ಉದ್ಯೋಗಿಯೊಬ್ಬರನ್ನು ಯುವತಿಯರಿಂದ ಮಸಾಜ್‌ ಮಾಡಿಸುವುದಾಗಿ ಆರೋಪಿಗಳು ನಂಬಿಸಿ ಅವರಿಗೆ

ಮಂಗಳೂರು: ನಿವೃತ್ತ ಸರಕಾರಿ ಉದ್ಯೋಗಿಯ ಹನಿ ಟ್ರ್ಯಾಪ್ ಭೇದಿಸಿದ ಸಿಸಿಬಿ ಪೊಲೀಸರು ► ಮೂವರು ಯುವತಿಯರು ಸೇರಿ ಆರು ಮಂದಿಯ ಬಂಧನ Read More »

ಕರಾವಳಿ

ಪುಣ್ಚಪ್ಪಾಡಿ: ಸಿಡಿಲಿಗೆ ಬಲಿಯಾದ ಯುವಕ ಮನೆಗೆ ಶಾಸಕರ ಬೇಟಿ

(ನ್ಯೂಸ್ ಕಡಬ) newskadaba.com ,ಸವಣೂರು,ಮಾ.23.  ಕಳೆದ ಸೋಮವಾರ  ಸಿಡಿಲಿಗೆ ಬಲಿಯಾದ ಪುಣ್ಚಪ್ಪಾಡಿ ಗ್ರಾಮದ ನೆಕ್ಕಿ ನಿವಾಸಿ ಧನಂಜಯ ಹಾಗೂ ಗಾಯಗೊಂಡ ಗೀತಾ, ಕುಂಡ ಅವರ ಮನೆಗೆ ಸುಳ್ಯ ಶಾಸಕ ಎಸ್.ಅಂಗಾರ ಅವರು ಮಂಗಳವಾರ ಸಂಜೆ ಬೇಟಿ ನೀಡಿ ಮನೆಯವರಿಗೆ ಸಾಂತ್ವಾನ ಹೇಳಿ ವೈಯುಕ್ತಿಕ ನೆಲೆಯಲ್ಲಿ 10,500 ಧನ ಸಹಾಯ ನೀಡಿದರು. ಈ ಸಂದರ್ಭ ಕಂದಾಯ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿ ಸರಕಾರದಿಂದ ಸಿಗುವ ಪರಿಹಾರವನ್ನು ಶೀಘ್ರ ಒದಗಿಸುವಂತೆ ಸೂಚನೆ ನೀಡಿದರು. ಈ ಸಂದರ್ಭ ದ.ಕ. ಜಿಲ್ಲಾ ಬಿಜೆಪಿ ಸದಸ್ಯ

ಪುಣ್ಚಪ್ಪಾಡಿ: ಸಿಡಿಲಿಗೆ ಬಲಿಯಾದ ಯುವಕ ಮನೆಗೆ ಶಾಸಕರ ಬೇಟಿ Read More »

ಕರಾವಳಿ

ಸಿಡಿಲು ಬಡಿದು ಸಾವು ►ಸವಣೂರು ಗ್ರಾ.ಪಂ.ನಿಂದ ತುರ್ತು ಪರಿಹಾರ

(ನ್ಯೂಸ್ ಕಡಬ) newskadaba.com ಸವಣೂರು, ಮಾ.23:ಪುಣ್ಚಪ್ಪಾಡಿ ನೆಕ್ಕಿ ನಿವಾಸಿ ಧನಂಜಯ ಇವರು  ದಿನಾಂಕ ಮಾರ್ಚ್ 19 ರಂದು ಸಿಡಿಲು ಬಡಿದು ಮೃತರಾಗಿದ್ದ ಕಾರಣ ಅವರ ತಂದೆಯವರಿಗೆ ಸವಣೂರು ಗ್ರಾಮ ಪಂಚಾಯತ್ ವತಿಯಿಂದ ರೂ.5000/- ತುರ್ತು ಪರಿಹಾರವನ್ನು ಇವರ ಮನೆಯಲ್ಲಿ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಇಂದಿರಾ ಬಿ.ಕೆ. ಜಿಲ್ಲಾ ಪಂಚಾಯತ್ ಸದಸ್ಯರಾದ ಪ್ರಮೀಳಾ ಜನಾರ್ಧನ,  ತಾಲೂಕು ಉಪಾಧ್ಯಕ್ಷರಾದ ಕು.ರಾಜೇಶ್ವರಿ,  ಗ್ರಾಮ ಪಂಚಾಯತ್ ಸದಸ್ಯರಾದ ಗಿರಿಶಂಕರ್ ಸುಲಾಯ,ವೇದಾವತಿ ಸಂಜಯ, ಸತೀಶ್ ಬಲ್ಯಾಯ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೇವಪ್ಪ

ಸಿಡಿಲು ಬಡಿದು ಸಾವು ►ಸವಣೂರು ಗ್ರಾ.ಪಂ.ನಿಂದ ತುರ್ತು ಪರಿಹಾರ Read More »

ಕರಾವಳಿ

ಪರಣೆ: ಸೋಲಾರ್ ದೀಪ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಸವಣೂರು, ಮಾ.23 .ಜಿ.ಪಂ.ಅನುದಾನದಲ್ಲಿ ಸವಣೂರು ಗ್ರಾ.ಪಂ.ವ್ಯಾಪ್ತಿಯ ಪರಣೆ ಎಂಬಲ್ಲಿ ಅಳವಡಿಸಲಾದ ಸೋಲಾರ್ ದೀಪವನ್ನು  ಜಿ.ಪಂ. ಸದಸ್ಯೆ ಪ್ರಮೀಳಾ ಜನಾರ್ಧನ್ ಉದ್ಘಾಟಿಸಿದರು. ಈ ಸಂದರ್ಭ ಸವಣೂರು ಗ್ರಾ.ಪಂ. ಅಧ್ಯಕ್ಷೆ ಇಂದಿರಾ ಬಿ.ಕೆ , ತಾ.ಪಂ. ಉಪಾಧ್ಯಕ್ಷೆ  ರಾಜೇಶ್ವರಿ ಕೆ, ಎಪಿಎಂಸಿ ನಿರ್ದೇಶಕ ದಿನೇಶ್ ಮೆದು, ಗ್ರಾ.ಪಂ.ಉಪಾಧ್ಯಕ್ಷ ರವಿಕುಮಾರ್, ಸದಸ್ಯರಾದ ಸತೀಶ್ ಅಂಗಡಿಮೂಲೆ, ಜಯಂತಿ ಮಡಿವಾಳ , ಗಾಯತ್ರಿ ಬರೆಮೇಲು, ಸತೀಶ್ ಬಲ್ಯಾಯ, ಪ್ರಕಾಶ್ ಕುದ್ಮನಮಜಲು, ಭಾರತಿ ಗ್ರಾಮ ವಿಕಾಸ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ  ಬಿ.ಕೆ. ರಮೇಶ್ ಕಲ್ಲೂರಾಯ, ದ.ಕ.

ಪರಣೆ: ಸೋಲಾರ್ ದೀಪ ಉದ್ಘಾಟನೆ Read More »

ಕರಾವಳಿ

ಚೆನ್ನಾವರ: ಜಿಲ್ಲಾ ಮಟ್ಟದ ಯುವ ಮಂಡಲಗಳ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ,ಸವಣೂರು, ಮಾ.23. ಯುವ ಸಮುದಾಯ ಬೆಳವಣಿಗೆಯಾದರೆ ದೇಶದಲ್ಲಿ ಎಲ್ಲಾ ಸಮಸ್ಯೆಗಳೂ ನಿವಾರಣೆಯಾಗುತ್ತದೆ.ಯುವಶಕ್ತಿಗೆ ದೇಶವನ್ನು ಮುನ್ನಡೆಸುವ ಶಕ್ತಿ ಇದೆ. ಸ್ಪರ್ಧಾತ್ಮಕ ಯುಗದಲ್ಲಿ ಯುವಜನತೆಯ ಶಕ್ತಿಯ ಸದ್ಬಳಕೆಯಾಗಬೇಕು ಎಂದು ಸುಳ್ಯ ಶಾಸಕ ಎಸ್.ಅಂಗಾರ ಹೇಳಿದರು. ಅವರು ಪಾಲ್ತಾಡಿ ಗ್ರಾಮದ ಚೆನ್ನಾವರ ಶಾಲಾ ಮೈದಾನದಲ್ಲಿ ಭಾರತ ಸರಕಾರ ಯುವಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು,ತಾಲೂಕು ಯುವಜನ ಒಕ್ಕೂಟ ಪುತ್ತೂರು, ಅಭ್ಯುದಯ ಯುವಕ ಮಂಡಲ ಚೆನ್ನಾವರ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಯುವ ಮಂಡಲಗಳ

ಚೆನ್ನಾವರ: ಜಿಲ್ಲಾ ಮಟ್ಟದ ಯುವ ಮಂಡಲಗಳ ಕ್ರೀಡಾಕೂಟ Read More »

ಕರಾವಳಿ

ಸವಣೂರು: ನವೋದಯ ಗು೦ಪಿನ ಸದಸ್ಯರಿಗೆ ಸಮವಸ್ತ್ರ ವಿತರಣಾ ಕಾಯ೯ಕ್ರಮ

(ನ್ಯೂಸ್ ಕಡಬ) newskadaba.com ಸವಣೂರು, ಮಾ.23. ಸಮಾಜದಲ್ಲಿ ಮಹಿಳೆಯರು ಆಥಿ೯ಕವಾಗಿ ಸದೃಢರಾಗಲು, ಸ್ವಾವಲ೦ಬಿ ಜೀವನ ನಡೆಸಲು ಮತ್ತು ಸಾಮರಸ್ಯದಿ೦ದ ಬದುಕಲು ನವೋದಯ ಸ್ವ ಸಹಾಯ ಗು೦ಪುಗಳು ಕಾರಣವಾಗಿದೆ. ಇವತ್ತು ಮಹಿಳಾ ಸದಸ್ಯರು ನೆಮ್ಮದಿ ಜೀವನವನ್ನು ನಡೆಸಲು ಕಾರಣರಾದ ಡಾ| ಎ೦.ಎನ್.ರಾಜೇ೦ದ್ರ ಕುಮಾರ್ ರವರ ಕನಸು ನನಸಾಗಿದೆ. ಇವರನ್ನು ಕೃತಜ್ನತೆಯಿ೦ದ ಸ್ಮರಿಸುತ್ತಿರುವುದನ್ನು ನಾವು ಕಾಣುತ್ತಿದ್ದೇವೆ, ಎ೦ದು ಡಿ.ಸಿ.ಸಿ ಬ್ಯಾ೦ಕಿನ ನಿದೇ೯ಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು ಹೇಳಿದರು. ಅವರು ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸ೦ಘ ಮತ್ತು ನವೋದಯ ಗ್ರಾಮ ವಿಕಾಸ

ಸವಣೂರು: ನವೋದಯ ಗು೦ಪಿನ ಸದಸ್ಯರಿಗೆ ಸಮವಸ್ತ್ರ ವಿತರಣಾ ಕಾಯ೯ಕ್ರಮ Read More »

ಕರಾವಳಿ

ಚೆನ್ನಾವರ: ಕಾಂಕ್ರೀಟಿಕೃತ  ರಸ್ತೆ  ಉದ್ಘಾಟನೆ

 (ನ್ಯೂಸ್ ಕಡಬ) newskadaba.com ಸವಣೂರು, ಮಾ.23. ಜನರ ಮೂಲಭೂತ ಅವಶ್ಯಕತೆ ಈಡೇರಿಸಲು ಮೊದಲ ಆದ್ಯತೆ ನೀಡುತ್ತಿದ್ದೇವೆ. ರಸ್ತೆ ಹಾಗೂ ನೀರಿನ ಸಮಸ್ಯೆ ನಿವಾರಣೆಯಾದರೆ ಬಹುತೇಕ ಸಮಸ್ಯೆ ನಿವಾರಣೆಯಾದಂತೆ. ಈ ನಿಟ್ಟಿನಲ್ಲಿ ಶಾಸಕರ ನೇತೃತ್ವದಲ್ಲಿ ಹಲವು ಅಭಿವೃದ್ದಿ ಕಾರ್ಯಗಳನ್ನು ನಡೆಸಲಾಗಿದೆ ಎಂದು ಜಿ.ಪಂ. ಸದಸ್ಯೆ ಪ್ರಮೀಳಾ ಜನಾರ್ಧನ್ ಹೇಳಿದರು. ಅವರು ಪಾಲ್ತಾಡಿ ಗ್ರಾಮದ ಚೆನ್ನಾವರದಲ್ಲಿ  ಕಾಂಕ್ರೀಟಿಕೃತ ರಸ್ತೆಯನ್ನು ಉದ್ಘಾಟಿಸಿ ಮಾತನಾಡಿದರು. ಜನಪ್ರತಿನಿಧಿಗಳೊಂದಿಗೆ ಸಾರ್ವಜನಿಕರೂ ಸಹಕಾರ ನೀಡಿದರೆ ಅಭಿವೃದ್ದಿಯ ವೇಗ ಹೆಚ್ಚಳವಾಗುತ್ತದೆ. ಇಲ್ಲಿನ ರಸ್ತೆಗೆ ಸಂಸದರು 5 ಲಕ್ಷ,ಶಾಸಕರು 10

ಚೆನ್ನಾವರ: ಕಾಂಕ್ರೀಟಿಕೃತ  ರಸ್ತೆ  ಉದ್ಘಾಟನೆ Read More »

ಕರಾವಳಿ

ಸುಬ್ರಹ್ಮಣ್ಯ: ಅಪರಿಚಿತ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಮಾ.23. ದಕ್ಷಿಣ ಭಾರತದ ಪ್ರಸಿದ್ಧ ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನಕ್ಕೆಂದು ಬಂದಿದ್ದ ಅಪರಿಚಿತ ಯಾತ್ರಾರ್ಥಿಯೋರ್ವರು ಅನಾರೋಗ್ಯದಿಂದಾಗಿ ಮೃತಪಟ್ಟ ಘಟನೆ ಶುಕ್ರವಾರದಂದು ನಡೆದಿದೆ. ಮೃತರನ್ನು ಆಂಧ್ರಪ್ರದೇಶ ಮೂಲದವರೆಂದು ಗುರುತಿಸಲಾಗಿದ್ದು, ಇವರು ತೀವ್ರ ತರದ ಅನಾರೋಗ್ಯದಿಂದ ಬಳಲುತ್ತಿದ್ದರೆನ್ನಲಾಗಿದೆ. ಶುಕ್ರವಾರದಂದು ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ‌.

ಸುಬ್ರಹ್ಮಣ್ಯ: ಅಪರಿಚಿತ ವ್ಯಕ್ತಿ ಮೃತ್ಯು Read More »

ಕರಾವಳಿ

ಕೆಲವೇ ನಿಮಿಷಗಳಲ್ಲಿ ಕೋಟ್ಯಾಧಿಪತಿಯಾದ ಪಿಯುಸಿ ವಿದ್ಯಾರ್ಥಿ ► ಹೇಗೆ ಅಂತೀರಾ…?

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಮಾ.23. ಕೆಲವೇ ಸಮಯಗಳಲ್ಲಿ ಪಿಯುಸಿ ವಿದ್ಯಾರ್ಥಿಯೋರ್ವ ಕೋಟ್ಯಾಧಿಪತಿಯಾಗಿದ್ದು, ಅದಾದ ನಂತರ ನಿಮಿಷಗಳ ಅಂತರದಲ್ಲಿ ತನ್ನ ವಶದಲ್ಲಿದ್ದ ಎಲ್ಲಾ ಹಣವನ್ನು ಕಳೆದುಕೊಂಡ ಘಟನೆ ಉತ್ತರ ಪ್ರದೇಶದಿಂದ ವರದಿಯಾಗಿದೆ. ಉತ್ತರ ಪ್ರದೇಶದ ಬಾರಾಬಂಕಿ ಆವಾಸ್ ವಿಕಾಸ್ ಕಾಲನಿಯ ನಿವಾಸಿಯಾಗಿರುವ ಪಿ.ಯು.ಸಿ. ವಿದ್ಯಾರ್ಥಿ ಕೇಶವ್ ಶರ್ಮಾ ಎಂಬಾತನ ಭಾರತೀಯ ಸ್ಟೇಟ್ ಬ್ಯಾಂಕ್‌ನ ಉಳಿತಾಯ ಖಾತೆಗೆ ಬ್ಯಾಂಕಿನ ಸಿಬ್ಬಂದಿ ಆತನಿಗೆ ಗೊತ್ತಿಲ್ಲದಂತೆ 5,55,55,555 ರೂ. ಜಮಾ ಮಾಡಿದ್ದಾರೆ. ಆದರೆ ಬ್ಯಾಂಕ್ ಸಿಬ್ಬಂದಿ ಮಾಡಿದ್ದ ಯಡವಟ್ಟಿನಿಂದಾಗಿ ವಿದ್ಯಾರ್ಥಿ

ಕೆಲವೇ ನಿಮಿಷಗಳಲ್ಲಿ ಕೋಟ್ಯಾಧಿಪತಿಯಾದ ಪಿಯುಸಿ ವಿದ್ಯಾರ್ಥಿ ► ಹೇಗೆ ಅಂತೀರಾ…? Read More »

ರಾಷ್ಟ್ರೀಯ ನ್ಯೂಸ್
Scroll to Top